ಗುರು ತೋರಿದನು ಲಿಂಗ- ಜಂಗಮವ.
ಪಾದೋದಕ-ಪ್ರಸಾದವ ಕೊಳಹೇಳಿದನಲ್ಲದೆ
ಇವ ತೊರೆಯ ಹೇಳಿದನೆ?
ಅಹಮ್ಮೆಂದು ಪ್ರಸಾದದ್ರೋಹಿಗಳಾಗಿ,
ನಾನೆ ಎಂದು ಲಿಂಗದ್ರೋಹಿಗಳಾಗಿ,
ವಿಭೂತಿ-ರುದ್ರಾಕ್ಷಿ ಸಾಕ್ಷಾತ್ ಶಿವನೆಂದರಿಯದೆ,
ಅವರಾಚರಣೆಯ ನೋಡಿ ನಿಂದಿಸಿ
ಜಂಗಮದ್ರೋಹಿಗಳಾಗ ಹೇಳಿದನೆ?
ಜಂಗಮದಲ್ಲಿ ಜಾತಿಯ, ಪ್ರಸಾದದಲ್ಲಿ ರುಚಿಯ,
ಂಗದ್ಲ ಮೃದುವನರಸುವ, ಸಮಯದ್ಲ ವಿಶ್ವಾಸವಿಲ್ಲದ
ಮಿಟ್ಟಿಯ ಭಂಡರ ತೋರರಯ್ಯಾ ಎನಗೆ
ಕಪಿಲಸಿದ್ಧಮಲ್ಲಿಕಾರ್ಜುನ.