ಅಥವಾ

ಒಟ್ಟು 166 ಕಡೆಗಳಲ್ಲಿ , 53 ವಚನಕಾರರು , 143 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಥಮಪಾದದಲ್ಲಿ ಒಂಕಾರಕ್ಕೆ ನಕಾರ ಬೀಜಾಕ್ಷರ. ಆ ನಕಾರ ಉಭಯ ಕೂಡಿದ ಮತ್ತೆ ಮಕಾರ ಬೀಜಾಕ್ಷರ. ಇಂತೀ ತ್ರಿವಿಧಾಕ್ಷರ ಒಡಗೂಡಿ ಒಡಲಾದ ಮತ್ತೆ ಶಿಕಾರ ಬೀಜಾಕ್ಷರ. ಇಂತೀ ಶಿಕಾರ ಮೂರನೊಡಗೂಡಿ ನಾಲ್ಕೆಂಬಲ್ಲಿಗೆ ಯಕಾರ ಬೀಜಾಕ್ಷರ. ಇಂತೀ ಪಂಚಾಕ್ಷರಿಯ ಮೂಲಮಂತ್ರ ಸಂಬಂಧವಾಗಲಾಗಿ ಪ್ರಣಮದ ಬೀಜ. ಆ ಪ್ರಣಮವು `ಒಂ ಭರ್ಗೋ ದೇವಃ' ಜಗಕ್ಕೆ ಕರ್ತೃ ನೀನಲಾ ಎಂದು. ಸಾಮ ಅರ್ಥವಣ ಯಜಸ್ಸು ಋಕ್ಕು ಉತ್ತರ ಖಂಡನ. ಇಂತೀ ಪಂಚವೇದಂಗಳಲ್ಲಿ ಚತುರ್ವೇದಿಗಳಪ್ಪರಲ್ಲದೆ, ಐಕ್ಯೋತ್ತರ ಚಿಂತನೆಯನೀ ವಿಪ್ರಕುಲ ಮಿಥ್ಯವಂತರು ಬಲ್ಲರೆ ? ಕಣ್ಣಿನಲ್ಲಿ ನೋಡುತ್ತ ಕಣ್ಗಾಣೆನೆಂಬವನಂತೆ ಶಾಪಹತರಿಗೆಲ್ಲಕ್ಕೂ ಲಲಾಮಬ್ಥೀಮಸಂಗಮೇಶ್ವರಲಿಂಗವು ಅಸಾಧ್ಯ ನೋಡಾ.
--------------
ವೇದಮೂರ್ತಿ ಸಂಗಣ್ಣ
ಪರಮಗುರು ಲಿಂಗಜಂಗಮವ ನಿಜವಿಶ್ವಾಸ ನೈಷ್ಠೆಯೊಳ್ ಮೂರ್ತಿಗೊಳಿಸಿ ಅರ್ಚಿಸುವ ಸುಚಿತ್ತಕಮಲದಳಂಗಳೆಲ್ಲ ಒಂದೊಡಲಾಗಿ, ಭಕ್ತನ ಕರಕಮಲ, ಜಂಗಮದ ಚರಣಕಮಲ, ಈ ನಾಲ್ಕರಲ್ಲಿ ಸಂಬಂಧವಾದ ಪ್ರಣಮದೊಳ್ ಕೂಡಿದ ನೇತ್ರಕಮಲ ಒಂದಾದ, ಸಮರಸೈಕ್ಯವಾಗಿ ಕೂಡಿದ ತ್ರಿಕೂಟಸಂಗಮಸ್ಥಾನವಿದೆ. ಅಷ್ಟಾಷಷ್ಟಿವರಕೋಟಿ ತೀರ್ಥಸ್ಥಾನವಿದೆ. ದೇವಗಂಗೆ ನೀಲಗಂಗೆ ಶಿವಗಂಗಾ ಸರಸ್ವತಿ ಯಮುನಾಸ್ಥಾನವಿದೆ. ಚಿತ್ಸೂರ್ಯ ಚಂದ್ರಾಗ್ನಿಮಂಡಲವಿದೆ. ಜ್ಯೋತಿರ್ಮಂಡಲ ಅಖಂಡಜ್ಯೋತಿರ್ಮಂಡಲ ಅಖಂಡಮಹಾಪರಿಪೂರ್ಣಜ್ಯೋತಿರ್ಮಂಡಲ ಸ್ಥಾನವಿದೆ. ರೋಷವೆಂಬ ಕಾಲರತಿಕ್ರೀಡಾಭ್ರಾಂತೆಂಬ ಕಾಮ ಆಸೆ ಆಮಿಷ ಲೋಭ ಮೋಹ ಮದ ಮತ್ಸರವೆಂಬ ಮಾಯಾ ಸಂಸಾರಸಂಕಲ್ಪ ವಿಕಲ್ಪಂಗಳ ಹಿಂದುಳಿದು, ಆದ್ಯರು ಭೇದ್ಯರು ವೇದ್ಯರು ಸಾಧ್ಯರುಯೆಂದವತರಿಸಿ, ಜಿಹ್ವಾತುರ ಗುಹ್ಯಾತುರ ಅರ್ಥಾತುರ ತ್ಯಾಗಾತುರ ಭೋಗಾತುರ ಯೋಗಾತುರ ಕಡೆಯಾದ ಅನಂತ ಆತುರಗಳೆಂಬ ಷಡಿಂದ್ರೀಕರಣ ವಿಷಯವ್ಯಾಪಾರಂಗಳ ಜೊಳ್ಳುಮಾಡಿ ತೂರಿ, ಜಗದಾದಿ ಗಟ್ಟಿಬೀಜವಾಗಿ, ನಿಂದ ನಿಲುಕಡೆಯ ಉಳಿದ ಉಳುವೆಯ ಮಹಾಘನದುನ್ಮನಿಸ್ಥಾನವಿದೆ. ಎನ್ನ ಭಕ್ತಿ-ಜಾÕನ-ವೈರಾಗ್ಯ-ಕ್ರಿಯಾಚಾರ ಸತ್ಯಶುದ್ಧ ನಿಜನಡೆನುಡಿಗಳ ಕರುಣಿಸಿ, ಅಂಗ-ಮನ-ಪ್ರಾಣ-ಭಾವ-ಕರಣೇಂದ್ರಿಗಳ ಪಾವನವೆನಿಸಿ ಸಲಹಿದ ಪರಮಾಮೃತಸುಧೆಯಿದೆ. ಭಕ್ತಸ್ಥಲ ವಿರಕ್ತಸ್ಥಲ ಪ್ರಸಾದಿಸ್ಥಲ ಪ್ರಾಣಲಿಂಗಿಸ್ಥಲ ಶರಣಸ್ಥಲ ಐಕ್ಯಸ್ಥಲ ನಿಃಕಳಂಕಸ್ಥಲ ನಿರ್ಮಾಯಸ್ಥಲ ನಿರಾಲಂಬಸ್ಥಲ ನಿಃಪ್ರಪಂಚಸ್ಥಲ ನಿಜಾನಂದಸ್ಥಲ ನಿರೂಪಾದ್ಥಿಕಸ್ಥಲ ನಿರ್ನಾಮಕಸ್ಥಲ ನಿರ್ಗುಣಸ್ಥಲ ಸಗುಣಸ್ಥಲ ನಿತ್ಯತೃಪ್ತಸ್ಥಲ ಕಾಯಾರ್ಪಣಸ್ಥಲ ಕರಣಾರ್ಪಣಸ್ಥಲ ಭಾವಾರ್ಪಣಸ್ಥಲ ಪರಿಪೂರ್ಣಾರ್ಪಣಸ್ಥಲ ನಿರವಯಸ್ಥಲವೆ ಕಡೆಯಾದ ಏಕವಿಂಶತಿ ದೀಕ್ಷಾನುಭಾವ ಏಕವಿಂಶತಿ ಯುಗಂಗಳನೊಳಗೊಂಡು ಅಣುವಿಂಗೆ ಪರಮಾಣುವಾಗಿ, ಮಹತ್ತಿಂಗೆ ಘನಮಹತ್ತಾಗಿ, ಸೃಷ್ಟಿ ಸ್ಥಿತಿಲಯಂಗಳಿಗೆ ಕಾರಣಾರ್ಥ ಕಾಮಧೇನು ಕಲ್ಪವೃಕ್ಷ ಚಿಂತಾಮಣಿ ಪರಮಾನಂದ ಪಂಚಪರುಷದ ಖಣಿಯಿದೆಯೆಂದು ಪೂರ್ಣಾನುಭಾವಭರಿತವಾದ ನಿರ್ದೇಹಿಗಳೆ ನಿರವಯಪ್ರಭು ಮಹಾಂತಘನವೆಂಬೆ ಕಾಣಾ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಮಾಡಿದ ಮಾಟವನರಿಯದ ಭಕ್ತ. ಕೂಡಿದ ಕೂಟವನರಿಯದ ಭಕ್ತ. ಮಾಟ ಕೂಟವೆಂಬ ಕೋಟಲೆಯನುಳಿದ ನಿಸ್ಸಂಗತ್ವ ನಿರಾಭಾರಿ ನಿಸ್ಸೀಮ ನಿರ್ದೇಹಿ ನಿಜದಲ್ಲಿ ಅಡಗಿದ ನಿತ್ಯ ಮುಕ್ತನಯ್ಯಾ ಭಕ್ತನು, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಸರ್ವಮಯ ಲಿಂಗಾಂಕಿತಸೀಮೆಯಾಗಬೇಕೆಂಬಲ್ಲಿ ಆ ಘನವ ತಿಳಿದು ತನ್ನ ತಾನೆ ವಿಚಾರಿಸಿಕೊಂಬಲ್ಲಿ ಸ್ಥೂಲತನುವಿನಲ್ಲಿ ಕಾಬ ಕಾಣಿಕೆ ದೃಷ್ಟವಾಗಿ ಲಿಂಗಾಂಕಿತ. ಸೂಕ್ಷ್ಮತನುವಿನಲ್ಲಿ ಕಾಬ ಕಾಣಿಕೆ ಎಚ್ಚತ್ತಲ್ಲಿ ಬಯಲಾಯಿತ್ತು ಲಿಂಗಾಂಕಿತ. ಕಾರಣದಲ್ಲಿ ಪ್ರಮಾಣಿಸುವುದಕ್ಕೆ ಲಿಂಗಾಂಕಿತಕ್ಕೆ ಒಡಲಾವುದು ? ಇದ ನಾನರಿಯೆ, ನೀವೆ ಬಲ್ಲಿರಿ. ಜಾಗ್ರ, ಸ್ವಪ್ನ, ಸುಷುಪ್ತಿಗಳಲ್ಲಿ ಕಾಬ ಲಿಂಗಾಂಕಿತದ ಭೇದ ನೇಮವಾವುದು ? ಜಾಗ್ರದಲ್ಲಿ ತೋರುವ ನಿಜ ಸ್ವಪ್ನಕ್ಕೊಡಲಾಗಿ, ಸ್ವಪ್ನದಲ್ಲಿ ತೋರುವ ನಿಜ ಸುಷುಪ್ತಿಗೊಡಲಾಗಿ, ಉಭಯದಲ್ಲಿ ಕೂಡಿದ ಕೂಟ ತನ್ಮಯಲಿಂಗಾಂಕಿತವಾಯಿತ್ತು. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದಲ್ಲಿ ಲೇಪವಾಗಿ.
--------------
ಅಕ್ಕಮ್ಮ
ಅರಿದು ಲಿಂಗಸಂಗವಾದಲ್ಲಿ ಕಾಯವಳಿದರೇನು ? ಕಾಯವುಳಿದು ಕೈಲಾಸಕ್ಕೆ ಹೋಗಬೇಕೆಂಬುದು, ಜೀವನ ಉಪಾದ್ಥಿಕೆ. ಘಟಮಟಪಟನ್ಯಾಯ ಇವೆಲ್ಲವು ಬಯಲೊಳಗು. ಅರ್ಕೇಶ್ವರಲಿಂಗವನರಿದು ಕೂಡಿದ ಮತ್ತೆ, ಅಂಗ ಸಿಕ್ಕುವುದಕ್ಕೆ ಠಾವಿಲ್ಲ.
--------------
ಮಧುವಯ್ಯ
ಇನ್ನು ಸಮಾದ್ಥಿಯೋಗವೆಂತೆಂದೊಡೆ : ಸುಖದುಃಖ ಪುಣ್ಯಪಾಪ ಪೂಜಾಪೂಜಂಗಳು ಸಂಕಲ್ಪವಿಕಲ್ಪಂಗಳೇನೂ ತೋರದೆ, ತಾನೆಂಬ ಅಹಂಭಾವವಳಿದು ಅಖಂಡಪರಿಪೂರ್ಣಮಾದ ಪರಬ್ರಹ್ಮದಲ್ಲಿ ಕೂಡಿದ ಸಮರಸಭಾವವೇ ಸಮಾದ್ಥಿಯಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಘಟದೊಳಗೆ ರಸವಿದ್ದು, ರಸದೊಳಗೆ ಘಟವಿದ್ದು, ಸಂಗಗುಣದಿಂದ ನೀರಾಗಿ. ಸಂಗ ಹಿಂಗಲಿಕೆ ಉಭಯದಂಗ ಒಂದಾದ ತೆರನಂತೆ, ಈ ಗುಣ ಲಿಂಗಾಂಗಿಯ ಸಂಗದ ವಿವರ, ನಿಃಕಳಂಕ ಮಲ್ಲಿಕಾರ್ಜುನಲಿಂಗವ ಕೂಡಿದ ಪರಮಸುಖಿಯಂಗ.
--------------
ಮೋಳಿಗೆ ಮಾರಯ್ಯ
ಜಂಗಮಫಲವೆಲ್ಲವೂ ದೇವತೆಗಳಾಹಾರವು; ಸ್ಥಾವರಫಲವೆಲ್ಲವೂ ಮನುಷ್ಯರಾಹಾರವು. ಅದೆಂತೆಂದೊಡೆ : ದೇವತಾಬಿಂದುವಿನಲ್ಲಿ ಮನುಷ್ಯಕೃತ್ಯದಿಂದುದ್ಭವಿಸುವುದೆಲ್ಲ ಸ್ಥಾವರವು; ಮನುಷ್ಯ ಬಿಂದುವಿನಲ್ಲಿ ದೇವತಾ ಕೃತ್ಯದಿಂದುದ್ಭವಿಸುವುದೆಲ್ಲ ಜಂಗಮವು. ಮನುಷ್ಯರು ಶೂದ್ರಮುಖದಿಂ ಕೊಂಬುತಿರ್ಪರು. ದೇವತೆಗಳು ಬ್ರಾಹ್ಮಣಮುಖದಿಂ ಕೊಂಬುತಿರ್ಪರು. ಪೃಥ್ವಿಯಲ್ಲಿ ಎಂಬತ್ತುನಾಲ್ಕುಲಕ್ಷವಿಧ ಜಂಗಮಗಳು ಹೇಗೋ ದೇವತೆಗಳಲ್ಲಿಯೂ ಹಾಗೆ. ದೇವತೆಗಳು ತಮ್ಮ ಕರ್ಮಫಲವು ತೀರಿದೊಡೆ, ತದ್ಧೋಷ ಕರ್ಮಾನುಸಾರಮಾಗಿ ಪಂಚಾಶಲ್ಲಕ್ಷ ದೇಹಗಳೊಂದಂ ಹೊಂದಿ ಆಯಾ ಆಹಾರಂಗಳಂ ಭುಂಜಿಸುತ್ತಾ. ತದಾನುಗುಣ್ಯಮಾಗಿ ಕ್ರೀಡಿಸುತ್ತರ್ಪಂದದಿ, ಮನುಷ್ಯನು ಇಹಲೋಕಕರ್ಮವು ತೀರಿದಲ್ಲಿ ಆ ಕರ್ಮಫಲಕ್ಕೆ ತಕ್ಕ ಮರಣವಂ ಹೊಂದಿ, ದೇವತಾ ಪಿಶಾಚಾಂತಮಾದ ದೇಹಗಳೊಳೊಂದು ದೇಹವನ್ನೆತ್ತಿ, ಸುಖದುಃಖಗಳನನುಭವಿಸುತ್ತಾ ತನ್ನ ಅದ್ಥಿಕಾರಕ್ಕೆ ದೇವತೆಯನ್ನು ಗ್ರಹಿಸಿ, ಆ ದೇವತಾಮುಖದಿಂ ಆಹಾರಂಗಳಂ ಗ್ರಹಿಸುವಂತೆ, ಆ ದೇವತೆಗಳು ತಮ್ಮ ಅದ್ಥಿಕಾರಕ್ಕನುಗುಣವಾಗಿ ಮನುಷ್ಯರಂ ಗ್ರಹಿಸಿ, ಆ ಮನುಷ್ಯಮುಖದಿಂ ಆಹಾರಂಗಳಂ ಕೊಂಬುತಿರ್ಪರು. ದೇವೆತಗಳಿಗೆ ಮಂತ್ರದಿಂದಾವಾಹನೋಚ್ಚಾಟನೆಗಳು, ಮನುಷ್ಯರಿಗೆ ತಂತ್ರದಿಂದಾವಾಹನೋಚ್ಚಾಟನೆಗಳು. ಮನುಷ್ಯರಿಗೆ ತಂತ್ರದಿಂ ಕೂಡಿದ ಮಂತ್ರವು, ದೇವತೆಗಳಿಗೆ ಮಂತ್ರದಿಂ ಕೂಡಿದ ತಂತ್ರವು, ಇಂತು ಮನುಷ್ಯರೂಪದಿಂದ ಸತ್ತು. ದೇವತಾರೂಪದಿಂ ಹುಟ್ಟುತ್ತಿರ್ಪ ದಂದುಗವಂ ಬಿಡಿಸಿ, ನಿನ್ನಲ್ಲಿ ಸತ್ತು ಹುಟ್ಟುತ್ತಿರ್ಪ ನಿಜಸುಖವಂ ಕೊಟ್ಟು ಸಲಹಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಇಷ್ಟಲಿಂಗದ ಕೂಟ, ಪ್ರಾಣಲಿಂಗದ ಸಂಗ, ಭಾವಲಿಂಗದ ಸಮರಸವ ಬಲ್ಲವರಾರೊ ಅವರನೆನ್ನ ಸದ್ಗುರು ಅನುಮಿಷೇಶ್ವರನೆಂಬೆ. ಆ ನಿಜಶಿವಯೋಗವ ಮರೆಯದವರಿಗೆ ಅಣಿಮಾದಿ ಅಷ್ಟೈಶ್ವರ್ಯದೊಡನೆ ಕೂಡಿದ ಸಕಲ ಲಕ್ಷಣ ಸಂಪನ್ನರು ಸರಿಯಲ್ಲ. 66 ಸಿದ್ಧಿಗಳೊಡನೆ ಕೂಡಿದ ಸಿದ್ಧ ಪುರುಷರೂ ಸರಿಯಲ್ಲ. ಲಾವಣ್ಯದೊಡನೆ ಕೂಡಿದ ಜಯಂತ ಮನ್ಮಥ ವಸಂತರೂ ಸರಿಯಲ್ಲ. ಕಲ್ಪವೃಕ್ಷ ಕಾಮಧೇನು ಚಿಂತಾಮಣಿ ಭದ್ರಪೀಠ ಮೊದಲಾದ ಮಹದೈಶ್ವರ್ಯವುಳ್ಳ ದೇವೇಂದ್ರನೂ ಸರಿಯಲ್ಲ. ದೇವೇಂದ್ರನ ಮೇಲೆ ಕೋಟ್ಯನುಕೋಟಿ ಮೊದಲಾದ ಹರಿ ವಿರಿಂಚ್ಯಾದಿಗಳ ಸಂಪದವೂ ಸರಿಯಲ್ಲ. ಶ್ರುತಿ ವಿದ್ಯದೊಡನೆ ಕೂಡಿದ ವ್ಯಾಸ ದಕ್ಷಾದಿಗಳೂ ಸರಿಯಲ್ಲ. ಸಪ್ತಕೋಟಿ ಮಹಾಮಂತ್ರಂಗಳ ಬಲ್ಲಂತಹ ಮಹಾಮುನಿಗಳೂ ಸರಿಯಲ್ಲ. ಮಹಾರಾಜಯೋಗದೊಡನೆ ಕೂಡಿದ ಮನುಮಾಂಧಾತರೂ ಸರಿಯಲ್ಲ. ಮಹಾಲಿಂಗದೊಡನೆ ಕೂಡಿದ ಶಾಂಭವಯೋಗಕ್ಕೆ ಆವಾವ ಪದವೂ ಸರಿಯಲ್ಲ. ಈ ಶಾಂಭವಯೋಗವಾರಲ್ಲಿ ಸ್ಥಾವರವಾಗಿದ್ದಿತ್ತು, ಅವರಲ್ಲಿ ಸರ್ವಲಕ್ಷಣಂಗಳು, ಸರ್ವ ವಿಚಿತ್ರಂಗಳು, ಸರ್ವ ಸುಖಂಗಳು ಸರ್ವ ಭಕ್ಷ್ಯಂಗಳು, ಸರ್ವೈಶ್ವರ್ಯಂಗಳು ಸರ್ವ ಪದಂಗಳು ಸರ್ವ ಸಿದ್ಧಿಗಳು ಸರ್ವ ಕ್ರಮಂಗಳು ಸರ್ವ ಕರ್ತೃತ್ವಮುಂಟು. ಪ್ರಕೃತಿಯೋಗವಂ ಮಾಡುವ ನರಸುರಾಸುರರು ಮೂಲಪ್ರಕೃತಿಯೋಗವ ಮಾಡುವ ಮನು ಮಾಂಧಾತರು ತೃಣ ಮಾತ್ರವು. ನಿತ್ಯನಿಜಶಿವಸ್ವರೂಪವಾದ ಶಾಂಭವ ಯೋಗಿಗಳಿಗೆ ಸರ್ವಯೋಗಂಗಳು ತೃಣಮಾತ್ರವು_ಗುಹೇಶ್ವರಲಿಂಗವನರಿದರಾಗಿ.
--------------
ಅಲ್ಲಮಪ್ರಭುದೇವರು
ದೇವಿಯರೊಳಗೆ ದೇವನೆ ಕೂಡಿದ. ಹರಹರ ಮಾಯೆ[ಯ] ಘನವ ಮನವ ತನುವನಾರಿಗೆಯು ತಿಳಿಯಬಾರದು. ತಿಳಿದೆನೆಂಬೊ ಭ್ರಮಿ[ತರಿಗೆ] ಕರ ಸನ್ನಿಹಿತವಳವಡುವಳಲ್ಲ . ತಂದೆ ಅಣ್ಣ ತಮ್ಮ ಬಂಧು ಬಳಗ ಕುಲ ಆವುದೆನ್ನದೆ ಕುಲಗೆಡುವಂಥವಳಲ್ಲ. ನಮ್ಮ ಘನ ಗುರು ಅಲ್ಲಮ ಪ್ರಭುದೇವನು ಶಾಂತಿ ಸೈರಣೆ ಉಳ್ಳಂಥವಂಗೆ ತದ್ರೂಪದ ಮಹಿಮೆಯ ಉಸುರಿ ಹೇಳುವನು ನಮ್ಮ ತನಯ ಶಿವಶಾಂತ ಮೂರುತಿ ಕಾಣಾ ಚೆನ್ನಬಸವೇಶ್ವರಾ.
--------------
ಮಾದಾರ ಚೆನ್ನಯ್ಯ
ಮಾರುತನ ಸಂಗದ ಸ್ಫುಟಿತ ಪಲ್ಲವ ಕಾಷ್ಠ ತೃಣ, ಇವು ಮೊದಲಾದವೆಲ್ಲವು ಗಂಡಾಕಾರವಾಗಿ ತೋರಿ, ಸಂಚಾರ ಹಿಂಗೆ, ಮತ್ತವು ಪುನರಪಿಯಂತಾಗೆ. ಚಿತ್ತ ನಾಲ್ಕರೊಳು ಕೂಡಿದ ಮತ್ತಳಿಯೆ, ಚಿತ್ತದ ಬಂಧವಾವುದು ಹೇಳು, ಅಲೇಖನಾದ ಶೂನ್ಯಕಲ್ಲಿನ ಮನೆಯವನೆ.
--------------
ವಚನಭಂಡಾರಿ ಶಾಂತರಸ
ಪ್ರಕಾಶದ್ವಾರ ಗಂಧದ್ವಾರ ಶಬ್ದದ್ವಾರವೆಂಬ ಅರುದ್ವಾರ ಕೂಡಿದ ಠಾವಿನಲ್ಲಿ, ನಾದ ಬಿಂದು ಕಲೆಯೆಂಬ ಸಿಂಹಾಸನದ ಮೇಲೆ ಮೂರ್ತಿಗೊಂಡು, ಶಬ್ದ ರೂಪು ಗಂಧಂಗಳ ಗ್ರಹಿಸುವಾತ ನೀನಲ್ಲದೆ ಮತ್ತಾರು ಹೇಳಾ? ಗಳದಲ್ಲಿ ನಿಂದು ಷಡುರಸ್ನಾನದ ರುಚಿಯ ಜಿಹ್ವೆಯಲ್ಲಿ ಸ್ವಾದಿಸುವಾತ ನೀನಲ್ಲದೆ ಮತ್ತಾರು ಹೇಳಾ? ಸರ್ವಾಂಗದಲ್ಲಿ ನಿಂದು, ತ್ವಗಿಂದ್ರಿಯ ಮುಖದಲ್ಲಿ ಸ್ಪರ್ಶನವ ತಳೆದುಕೊಂಬಾತ ನೀನಲ್ಲದೆ ಮತ್ತಾರು ಹೇಳಾ? ಮನವೆಂಬ ಮುಖದಲ್ಲಿ ನಿಂದು ಪರಿಣಾಮವನನುಭವಿಸುವಾತ ನೀನಲ್ಲದೆ ಮತ್ತಾರು ಹೇಳಾ? ಸರ್ವಾವಯವಂಗಳಲ್ಲಿ ಸರ್ವಮುಖವಾಗಿ ಭೋಗಿಸಿ ಪ್ರಸಾದವ ಕರುಣಿಸಿದ ಕೃಪಾಮೂರ್ತಿ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರ ನೀನಲ್ಲದೆ ಮತ್ತಾರು ಹೇಳಾ?
--------------
ಸ್ವತಂತ್ರ ಸಿದ್ಧಲಿಂಗ
ಏರಿಯಕೆಳಗೆ ಬಿದ್ದ ನೀರು ಪೂರ್ವದ ತಟಾಕಕ್ಕೆ ಏರಬಲ್ಲುದೆ ? ವ್ರತಾಚಾರವ ಮೀರಿ ಕೆಟ್ಟ ಅನಾಚಾರಿ ಸದ್ಭಕ್ತರ ಕೂಡಬಲ್ಲನೆ ? ದೇವಾಲಯದಲ್ಲಿ ಸತ್ತಡೆ ಸಂಪ್ರೋಕ್ಷಣವಲ್ಲದೆ ದೇವರು ಸತ್ತಲ್ಲಿ ಉಂಟೆ ಸಂಪ್ರೋಕ್ಷಣ ? ಅಂಗದಲ್ಲಿ ಮರವೆಗೆ ಹಿಂಗುವ ಠಾವಲ್ಲದೆ, ಮನವರಿದು ತಾಕು ಸೋಂಕಿಗೆ ಹೆದರದೆ ಕೂಡಿದ ದುರ್ಗಣಕ್ಕುಂಟೆ ಪ್ರಾಯಶ್ಚಿತ್ತ ? ಇಂತಿವ ಕಂಡಲ್ಲಿ ಗುರುವಾದಡೂ ಬಿಡಬೇಕು, ಲಿಂಗವಾದಡೂ ಬಿಡಬೇಕು, ಜಂಗಮವಾದಡೂ ಬಿಡಬೇಕು ; ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವಾದಡೂ ಬಿಡಬೇಕು.
--------------
ಅಕ್ಕಮ್ಮ
ಪ್ರಮಾಣಿಸಿ ಅವಧರಿಸಿ ಮಾಡುವಂಗೆ, ಮಾಡುವ ದ್ರವ್ಯಕ್ಕೆ ಹೇಗೆಂದು ಮನಗುಂದದಿರಬೇಕು. ನೀಡಿದ ಮತ್ತೆ, ನಿಜವಸ್ತುವಿನಲ್ಲಿರಬೇಕು. ಕೂಡಿದ ಮತ್ತೆ, ಹಿಂದಣ ಹಂಗ ಹರಿದು, ಸಂದಳಿದು ಅಂದಂದಿಗೆ ಬಂದುದ ಕಂಡು, ಬಾರದುದಕ್ಕೆ ಭ್ರಮೆಯಿಲ್ಲದಿರಬೇಕು. ಇಂತೀ ಸ್ಥಲ, ಭಕ್ತಂಗೆ. ಮುಕ್ತಿಯನರಸಿ ಇಪ್ಪವಂಗೆ ಇದೇ ಸತ್ಯಸಮರ್ಪಣ. ನಿಃಕಳಂಕ ಮಲ್ಲಿಕಾರ್ಜುನನಲ್ಲಿ ಸದ್ಭಕ್ತಿ ನಿರ್ಲೇಪ.
--------------
ಮೋಳಿಗೆ ಮಾರಯ್ಯ
ಸ್ಥಾವರವೆಂತಂತೆ ಮನದಲ್ಲಿ ಭಾವಿಸಿ, ಸಕಲಜೀವದ ನಿಂದೆಯ ಮಾಬುದು. ಲಿಂಗಜಂಗಮವೊಂದೆಯೆಂದು ನಂಬೂದು. ಬಂದುದು ಲಿಂಗಾದ್ಥೀನವೆಂದು ಕಾಬುದು. ಸತ್ಯವ ನುಡಿವುದು, ಶುಚಿಯಾಗಿಪ್ಪುದು. ಎರಡುವಿಡಿಯದೆ, ಎರಡು ನಡೆಯದೆ, ಮುನ್ನಾದಿಯ ಪುರಾತರು ಕೂಡಿದ ಪಥವಿದು, ಸಕಳೇಶ್ವರದೇವರನೊಲಿಸಿಹೆನೆಂಬವಂಗೆ.
--------------
ಸಕಳೇಶ ಮಾದರಸ
ಇನ್ನಷ್ಟು ... -->