ಅಥವಾ

ಒಟ್ಟು 92 ಕಡೆಗಳಲ್ಲಿ , 41 ವಚನಕಾರರು , 88 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸತ್ವಹೀನವಾದ ಮತ್ತೆ ಕಾಲೆರಡು ಕೋಲೊಂದಾಯಿತ್ತು. ಕೃತ್ಯದ ಹೊತ್ತು ಹೋದ ಮತ್ತೆ ವ್ಯಾಕುಲದ ಚಿತ್ತವದ ಲಕ್ಷರ, ಬಹುವ್ಯಾಪಾರ ಮೊತ್ತದ ಘಟ, ಪ್ರಕೃತಿ ಆಶ್ರಯಕ್ಕೆ ಬಂಧನ ಪ್ರಾಪ್ತಿ, ಅಡಗುವ ಕರಂಡ. ಇದರಂದವ ತಿಳಿದು, ಹಿಂಜಾವಕೆ ಮುನ್ನವೆ ಶಿವಲಿಂಗದರ್ಶನವಾಗಿ ಶುದ್ಧಸಿದ್ಧಪ್ರಸಿದ್ಧ ಪ್ರಸನ್ನ ಕುರುಂಗೇಶ್ವರಲಿಂಗವ ಕೂಡಬಲ್ಲದೆ
--------------
ಎಚ್ಚರಿಕೆ ಕಾಯಕದ ಮುಕ್ತನಾಥಯ್ಯ
ಅರ್ಪಿತವಲ್ಲದುದ ಕಲಸಿದ ಕೈ, ಉಂಡ ಬಾಯಿ, ತುಂಬಿದ ಘಟ, ಅರಿದು ಕೊಂಡ ಆತ್ಮ ಇವ ಹಿಡಿದಡೆ ಭಂಗ. ಸಡಗರಿಸಿ ತುಂಬಿದ ಗರಳ ಘಟವನೊಡೆದು ಕಿತ್ತು ಆಸೆಯ ನುರಿಚಿ ಹಾಕಿ ಮತ್ತಾ ಅಂಗವನೊಡಗೂಡಿಹೆನೆಂಬ ಚಿತ್ತದ ಹಂಗು ಬೇಡ ಮತ್ತಾ ತಪ್ಪ ಕಂಡು ಎನ್ನಂಗವನೊಡಗೂಡುವ ಮನಕ್ಕೆ ಮನೋಹರ ಶಂಕೇಶ್ವರ ಲಿಂಗವೆ ಬೇಡಾ.
--------------
ಕರುಳ ಕೇತಯ್ಯ
ವಜ್ರದ ಘಟ, ಸೂಜಿಯಲ್ಲಿ ಛಿದ್ರಿಸಿಕೊಂಬುದೆ ? ಭದ್ರಗಜ, ಅಜಕುಲದಲ್ಲಿ ಗರ್ಜಿಸಿಕೊಂಬುದೆ ? ನಿರ್ಧರದ ಭಟ, ಜೀವಗಳ್ಳನಲ್ಲಿ ಅದ್ದಲಿಸಿಕೊಂಬನೆ ? ಇಂತೀ ನಿರ್ಧರವ ತಿಳಿದಲ್ಲಿ, ಸಕಲವಿಷಯ ರೋಗರುಜೆಗಳಲ್ಲಿ ಮಿಕ್ಕಾದ ತಾಪತ್ರಯಂಗಳಲ್ಲಿ ಲಿಂಗಾಂಗಿ ಒಡಲಗೊಡುವನೆ ? ಇಂತಿವ ಕಂಡು ಮುಂಗಯ್ಯಾಭರಣಕ್ಕೆ ಮುಕುರದ ಹಂಗೇಕೆ ? ತಾ ಕಂಡು ನೋಡಿದ ಮತ್ತೆ ಇನ್ನಾರುವ ಕೇಳಲೇತಕ್ಕೆ ? ಇಂತಿವನರಿದು, ಬಸವಣ್ಣಪ್ರಿಯ ವಿಶ್ವಕರ್ಮಟಕ್ಕೆ ಕಾಳಿಕಾವಿಮಲ ರಾಜೇಶ್ವರಲಿಂಗವು ಹುಟ್ಟುಗೆಟ್ಟ.
--------------
ಬಾಚಿಕಾಯಕದ ಬಸವಣ್ಣ
ಗುರುವಾಗಿ ಬಂದು ತನುವ ಕೊರೆದಡೂ ಕೇಳೆ, ಲಿಂಗವಾಗಿ ಬಂದು ಮನದಲ್ಲಿ ಕುಳ್ಳಿರ್ದು ನಿಜಾಂಗವ ತೋರಿದಡೂ ಕೇಳೆ, ಜಂಗಮವಾಗಿ ಬಂದು ಬಯಲ ಬೆಳಗಿನಲ್ಲಿ ಒಳಗಾಗೆಂದಡೂ ಒಲ್ಲೆ. ಅದೆಂತೆಂದಡೆ ; ಕುಟಿಲದಲ್ಲಿ ಬಂದು ವ್ರತವ ಕೆಡಿಸಿಹೆನೆಂದಡೆ, ಕುಟಿಲದ ದೇವರುಂಟೆ ವ್ರತ ಮೊದಲು ಘಟ ಕಡೆಯಾಗಿ ಘಟಿಸುವೆನಲ್ಲದೆ, ಮೂರು ಕಿಸುಕುಳಕಾಗಿ ಘಟವ ಹೊರೆದಡೆ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ದೂರ.
--------------
ಅಕ್ಕಮ್ಮ
ದಿಟದ ಚಂದ್ರನು ಅನೇಕ ಘಟದ ಜಲದೊಳಗೆ ಜನಿಸಿ ಅನೇಕ ವ್ಯವಹಾರವಾದಂತೆ ಜೀವನೆ ಜಗ, ಜಗವೆ ಜೀವನಾದ. ಆದಿ ಅನಾದಿ ವಿಚಿತ್ರತರವಾದ ಮಾಯೆ. ಈ ಮಾಯೆಯಿಂದ ತನಗೆ ತಾನೇ ಪ್ರತಿಬಿಂಬ. ಆ ಮಾಯಾ ಪ್ರತಿಬಿಂಬವೆ ತನಗೆ ಸಂಸಾರ. ಆ ಸಂಸಾರವನು ಆ ಪರಮಾತ್ಮನು ಕೂಡಿಯೂ ಕೂಡದೆ ಆ ಘಟ ಜಲ ಚಂದ್ರಮನ ಹಾಂಗೆ ವರ್ತಿಸುತ್ತಿಹನು. ಅದೆಂತೆಂದಡೆ: ``ಏಕ ಏವ ಹಿ ಭೂತಾತ್ಮಾಭೂತೇ ಭೂತೇ ವ್ಯವಸ್ಥಿತಃ| ಏಕಧಾ ಬಹುಧಾಚೈವ ದೃಶ್ಯತೇ ಜಲಚಂದ್ರವತ್||' ಎಂದುದಾಗಿ, ಸಟೆಯ ಮಾಯೆಯ ಸಟೆಯೆಂದು ಕಳೆದುಳಿದ ದ್ಥೀರ ನೀನೇ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ಅಂಗಲಿಂಗಸಂಬಂಧದಿರವು, ಬೀಜವೊಡೆದು, ಮೊಳೆದೋರುವಂತೆ, ಕುಸುಮ ಬಲಿದು, ದೆಸೆಗೆ ವಾಸನೆ ಪಸರಿಸುವಂತೆ, ಘನಲಿಂಗ ಘಟ, ಕುರುಹಿನಲ್ಲಿ ನಿಜದೋರುತ್ತದೆ. ಐಘಟದೂರ ರಾಮೇಶ್ವರಲಿಂಗ ಮೂರ್ತಿ, ಅಮೂರ್ತಿ ಆಗುತ್ತದೆ.
--------------
ಮೆರೆಮಿಂಡಯ್ಯ
ಕಾಯದ ಸಂಗದಿಂದ ಆತ್ಮನು ಭವಕ್ಕೆ ಬಪ್ಪುದೊ ? ಆತ್ಮನ ಸಂಗದಿಂದ ಕಾಯ ಲಯಕ್ಕೊಳಗಪ್ಪುದೊ ? ಕಾಯ ಜೀವದಿಂದಳಿವೊ ? ಜೀವ ಕಾಯದಿಂದಳಿವೋ ? ಅಲ್ಲ, ಉಭಯವೂ ಏಕಸ್ಥದಿಂದ ಪ್ರಳಯವೋ ? ಎಂಬುದ ಅಂತಸ್ಥದಿಂದ ತಿಳಿದು, ಕಾಯಕ್ಕೂ ಜೀವಕ್ಕೂ ಭೇದವುಂಟೆಂದಡೆ, ಒಂದ ಬಿಟ್ಟೊಂದು ಇರದು. ಇಲ್ಲಾ ಎಂದೆಡೆ ಆತ್ಮ ವಾಯುಸ್ವರೂಪ, ಘಟ ಸಾಕಾರಸ್ವರೂಪ, ಗುಣ-ಗಂಧ, ಕುಸುಮ-ಗಂಧ, ತಿಲ-ಸಾರದ ಸಂಗದಂತೆ. ಇಂತೀ ಉಭಯಭಾವದ ಭೇದವನರಿದ ಪರಮ[ಸುಖ] ಗಾರುಡೇಶ್ವರಲಿಂಗವನರಿದವಂಗಲ್ಲದೆ ಸಾಧ್ಯವಲ್ಲ.
--------------
ಉಪ್ಪರಗುಡಿಯ ಸೋಮಿದೇವಯ್ಯ
ಮನ ಬುದ್ಧಿ ಚಿತ್ತ ಅಹಂಕಾರವೆಂಬೀ ನಾಲ್ಕರಲ್ಲಿ ನಿಂದು ವಿಚಾರಿಸುವುದು ಜೀವನೋ, ಪರಮನೋ ? ಅದು ಮುಕುರದ ಒಳಹೊರಗಿನಂತೆ. ಘಟ ಪ್ರಾಣದ ಯೋಗವನರಿತಲ್ಲಿ, ಮನಸಂದಿತ್ತು ಮಾರೇಶ್ವರಾ.
--------------
ಮನಸಂದ ಮಾರಿತಂದೆ
ಕೆಲ ಜೀವದ ಒಲವು ತಲೆಯ ಕಡಿದು ಬೇರೆ ಮಾಡಿದಲ್ಲಿ ಆಡುತ್ತದೆ ಅಂಗ; ಮತ್ತೆ ನರಜೀವದ ಒಲವು ರುಜೆಯಡಸಿ ಪ್ರಾಣ ಬಿಟ್ಟಾಗ ಅಡಿ ಕರವಾದದ ಪರಿಯ ನೋಡಾ! ಘಟ ಜೀವವೊಂದೆಂಬರು ಅಸು ಬೇರಾಗಿದೆ. ಇದರ ಹುಸಿ ಕವಲ ಹೇಳಾ, ಆತುರವೈರಿ ಮಾರೇಶ್ವರಾ.
--------------
ನಗೆಯ ಮಾರಿತಂದೆ
ಸ್ಥಲವಿವರಂಗಳ ವಿಚಾರಿಸುವಲ್ಲಿ ಘಟಕ್ಕೆ ಕರ ಚರಣ ನಾಸಿಕ ನಯನ ಕರ್ಣ ಮುಂತಾದ ಅವಯವಂಗಳೊಳಗಾದ ಭೇದವ ಘಟ ಗಬ್ರ್ಥೀಕರಿಸಿಕೊಂಬತೆ ಆ ಘನವ ಚೇತನ ವಸ್ತು ಹೊತ್ತಾಡುವಂತೆ, ಇದು ಸ್ಥಲವಿವರ ಸದ್ಯೋಜಾತಲಿಂಗವನರಿವುದಕ್ಕೆ.
--------------
ಅವಸರದ ರೇಕಣ್ಣ
ಮಹದಾಕಾಶ ಘಟ ಭೇದದಿಂದ ಘಟಾಕಾಶ ಮಹದಾಕಾಶವಾಗಿ ತೋರಿದರೆ ಆಕಾಶವೊಂದಲ್ಲದೆರಡುಂಟೇ ಮರುಳೆ? ಪರಶಿವ ತಾನೆ ತನ್ನ ಶಕ್ತಿಭೇದದಿಂದ ಶರಣ ಲಿಂಗವೆಂದಡೆ ಶರಣ ಲಿಂಗಕ್ಕೆ ಬ್ಥಿನ್ನವೆಲ್ಲಿಯದೋ? ಈ ಶರಣಮತವು ಪ್ರಕೃತಿಯಿಂದಾದ ದೈ ್ವತಾದ್ವೆ ೈತ ಮತವಲ್ಲ ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಭಕ್ತಸ್ಥಲ ಘಟರೂಪು, ಮಾಹೇಶ್ವರಸ್ಥಲ ಆತ್ಮರೂಪು, ಪ್ರಸಾದಿಸ್ಥಲ ಜ್ಞಾನರೂಪು, ಇಂತೀ ತ್ರಿವಿಧಸ್ಥಲ ಭಕ್ತಿರೂಪು. ಪ್ರಾಣಲಿಂಗಿಸ್ಥಲ ಜ್ಞಾತೃರೂಪು, ಶರಣಸ್ಥಲ ಜ್ಞೇಯರೂಪು, ಐಕ್ಯಸ್ಥಲ ಸರ್ವಮಯಜ್ಞಾನರೂಪು. ಇಂತೀ ತ್ರಿವಿಧಸ್ಥಲ ಏಕವಾಗಿ ನಿಂದುದು ಕರ್ತೃಸ್ವರೂಪು. ಇಂತೀ ಷಟ್ಸ್ಥಲ ಉಭಯವಾಗಿ ಕಾಯದಲ್ಲಿ ಆತ್ಮ ಘಟಿಸಿಪ್ಪಂತೆ, ಆತ್ಮನ ಚೇತನದಿಂದ ಘಟ ಅನುಭವಿಸುವಂತೆ, ಇಂತೀ ದ್ವಂದ್ವವೊಂದಾಗಿ ನಿಂದರಿದಲ್ಲಿ ಷಟ್ಸ್ಥಲ ಆರೋಪ ಸದ್ಯೋಜಾತಲಿಂಗಕ್ಕೆ.
--------------
ಅವಸರದ ರೇಕಣ್ಣ
ತನಗಲ್ಲದುದ ಘಟ ಸೋಂಕಿದಲ್ಲಿ ಅಲ್ಲಿಯೇ ಕಡಿವೆನು. ತನಗಲ್ಲದುದ ಕೈ ಮುಟ್ಟಿದಲ್ಲಿ ಅಲ್ಲಿಯೇ ತೆಗೆವೆನು. ತನಗಲ್ಲದುದ ಕಿವಿ ಕೇಳಿದಲ್ಲಿ ಅಲ್ಲಿಯೇ ಗುಂಟಿ ಬಲಿವೆನು. ತನಗಲ್ಲದುದ ನಾಸಿಕ ವಾಸಿಸಿದಲ್ಲಿ ಅಲ್ಲಿಯೇ ದಸಿಯ ದಕ್ಕನೇರಿಸುವೆನು. ದೃಷ್ಟಿ ಅನುತಪ್ಪಿ ನೋಡಿದಲ್ಲಿ ಅಲ್ಲಿಯೇ ಕಿತ್ತಿಡುವೆನು. ಚಿತ್ತ ಅನುತಪ್ಪಿ ಮತ್ತೊಂದ ನೆನೆದಡೆ, ಆತ್ಮನನಲ್ಲಿಯೆ ಕಿತ್ತು ಹಾಕುವೆನು. ಇದಕ್ಕೆ ನೀವೇ ಸಾಕ್ಷಿ, ಮನಕ್ಕೆ ಮನೋಹರ ಶಂಕೇಶ್ವರ ಲಿಂಗವು.
--------------
ಕರುಳ ಕೇತಯ್ಯ
ಕಾಯವ ಬಿಟ್ಟು ಜೀವವಸ್ತುವಿನಲ್ಲಿ ಕೂಡಬೇಕೆಂಬರು. ಕಾಯ ಅರಿವಿಂಗೆ ಹೊರಗೆ. ಕಾಯ ಜೀವವೆರಡೂ ಕೂಡಿ ಕಂಡ ಜ್ಞಾನರತ್ನದ ರತಿ ಬೇರೆ. ಆ ಘಟವ ಬೇರೆ ಬ್ಥಿನ್ನವ ಮಾಡಿ, ರತ್ನ ಮಾರುವ ಪರಿ ಇನ್ನೆಂತೊ ? ಇಷ್ಟದ ರೂಪ ಹಾಕಿ, ಮತ್ತೆ ಲಿಂಗಪೂಜಕನೆಂತಪ್ಪನೊ ? ಅಂಗದ ಕೂಟ, ಮನದ ವಿಶ್ರಾಂತಿ ಉಭಯವ ಬೇರೆ ಮಾಡದಿರಯ್ಯಾ. ಪತಿ ಹೋಹಲ್ಲಿ ಸತಿ ಉಳಿದಡೆ, ಅದು ಅಪಮಾನದ ಕೇಡೆಂಬರು. ನಿನ್ನಯ ನೆನಹ ಹೊತ್ತಿದ್ದ ಘಟ ಮಣ್ಣಿಗೀಡಾಗಲೇಕೆ ? ಚೆನ್ನಬಂಕೇಶ್ವರಲಿಂಗಾ, ನಿನ್ನಲ್ಲಿಯೆ ಗ್ರಹಿಸಿಕೊಳ್ಳಯ್ಯಾ, ನಿನ್ನ ಧರ್ಮ.
--------------
ಸುಂಕದ ಬಂಕಣ್ಣ
ರೇಚಕ ಪೂರಕ ಕುಂಭಕವೆಂಬ ಗರುಡವಾಯುವ ಸೋಂಕ ತೆಗೆದು, ಬ್ರಹ್ಮಾಂಡದಲ್ಲಿ ಕೀಲಿಟ್ಟು, ದ್ವಾರಕವಾಟವನೆ ತೆರೆದು ಆಂದೋಳಿಸುತ್ತಿದ್ದಿತ್ತು, ಪರಶಿವಯೋಗ. ಬಾಲ ಕುಮಾರ ಪ್ರೌಢ ಭಾಗದಲ್ಲಿ ಕಾಳಂ ಪೊಕ್ಕಿತ್ತು. ಕಾಳಾಂದರದಿಂದತ್ತತ್ತಲಾರು ಬಲ್ಲರೋ ? ಅಪ್ಪಿನ ಘಟ ಹೊತ್ತುಕೊಂಡು ಸುಳಿದ ಜಗದೊಳಗೆ, ಅದು ಬಿರಿಬಿರಿದು ನಿರಾಳದಲ್ಲಿ ನೆರೆವ ಭೇದವ, ಕೂಡಲಚೆನ್ನಸಂಗನಲ್ಲಿ ಲಿಂಗೈಕ್ಯರನುವ ಆ ಲಿಂಗೈಕ್ಯರೆ ಬಲ್ಲರು
--------------
ಚನ್ನಬಸವಣ್ಣ
ಇನ್ನಷ್ಟು ... -->