ಅಥವಾ

ಒಟ್ಟು 9 ಕಡೆಗಳಲ್ಲಿ , 6 ವಚನಕಾರರು , 9 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಳಿಕಾ ಧ್ಯಾನಕ್ರಮದಲ್ಲಿ ಮಂತ್ರಾದ್ಥಿದೇವತೆಗೆ ಅಘೋರಾದಿ ಘೋರ ಮೂರ್ತಿ ಎಂದು, ಸದಾಶಿವಾದಿ ಮಿಶ್ರಮೂರ್ತಿ ಎಂದು, ಸಾಂಬಶಿವಾದಿ ಶಾಂತ ಮೂರ್ತಿ ಎಂದು ತ್ರಿವಿಧಮೂರ್ತಿಗಳುಂಟವರಲ್ಲಿ ಘೋರಮೂರ್ತಿಧ್ಯಾನದಿಂ ಚಿರಕಾಲಕ್ಕೆ ಸಕಲ ಸಿದ್ಧ್ಯಾದಿಗಳಹವು. ಶಾಂತಮೂರ್ತಿ ಧಾನ್ಯನದಿಂದ ಶೀಘ್ರ ಚಿರಕಾವವಲ್ಲದೆ ಪ್ರಚಾದಿಗಳ ಹವೆಂದರಿದು ಧ್ಯಾನಿಸೂದಾ ಧ್ಯಾನರಹಿತವಾಗಿ ಮಾಳ್ಪುದೆ ಅಗರ್ಭಜಪವಾ ಧ್ಯಾನ ಯುಕ್ತಮಾಗಿ ಮಾಳ್ಪುದೆ ಸಗರ್ಭಜಪವವ ರೊಳಗೆ ಅಗರ್ಭಕ್ಕೆ ಸಗರ್ಭವೆ ಕೋಟಿ ಮಡಿ ಮಿಗಿಲೆಂದು ಸಂಧ್ಯಾನಿಸೂದಯ್ಯ ಶಾಂತವೀರೇಶ್ವರಾ.
--------------
ಶಾಂತವೀರೇಶ್ವರ
ನೀರೊಳಗಣ ಜ್ಯೋತಿ ಮೇರುವ ನುಂಗಿತ್ತು. ದೂರ[ದ] ಧಾತು ಸಾರಾಯದೊಳಡಗಿತ್ತು. ಪುರದೊಳಗೈವರ ಶಿರವರಿದು, ಪರಿಮಳದೋಕುಳಿಯನಾಡಿತ್ತ ಕಂಡೆ. ಸಾರಿರ್ದ ಬ್ರಹ್ಮನ ಓಲಗ ಹರೆಯಿತ್ತು, ಘೋರ ರುದ್ರನ ದಳ ಮುರಿಯಿತ್ತು_ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಪಲ್ಲ :ಬಂಧನ ಸಂಸಾರದಂದುಗದ ದಾಳಿಯಲ್ಲಿ ನೊಂದು ಬೆಂದೆನೊ ಎನ್ನ ಹುಯ್ಲು ತಂಬಿಸು ಗುರುವೆ ಭವಹರ ನಿತ್ಯನಿರ್ಮಳಾತ್ಮಕ ಶಂಭುವೆ. ಪದ :ಹಲವು ಜನ್ಮದಿ ಹುಟ್ಟಿ ಹಲವಾಹಾರವನುಂಡು ಹಲವು ಭೂಮಿಯ ಮೆಟ್ಟಿ ಹಲವು ಕರ್ಮವ ಕಂಡು ಹಲವು ಭವಕೀಡಾಗಿ ಹಲವು ಹಂಬಲಿಸುತಿರುವ ಹೊಲೆಜನ್ಮ ಸಂಸಾರ ಮಾಯಾರಕ್ಕಸಿ ತುಡುರೆ ನಿಲ್ಲಲಾರದಲಿ ನಿಮ್ಮ ಮರೆಹೊಕ್ಕೆ ಎನ್ನ ಕೊಡದೆ ಗೆಲಿದುಕೊ ದುರಿತಹರ ಕರುಣಾಳು ಪರಮಗುರುವೆ. | 1 | ಸಟೆ ಠಕ್ಕು ಠೌಳಿ ಅಟಮಟದ ಬಂಧನದ ಕುಟಿಲಸಂಸಾರಸಾಗರದ ತೊರೆನೆರೆಗಳೊಳು ಪುಟನೆಗೆದು ತಲೆ ಮುಣುಗುತಲಿರುವನ ಕಂಡು ನಿಟಿಲಾಕ್ಷ ಕೃಪೆಯೆಂಬ ಹಡಗವನು ತಂದೊಲಿ ತಟಕೆನ್ನನೆಳೆದು ತಗೆದೀಗ ಇನಿತಾತ್ಮ ಘಟದೊಳಗೆ ಜ್ಞಾನಜ್ಯೋತಿಯ ತೀವು ಪರಮಗುರುವೆ. | 2 | ರಸವಿಷಯ ಮೋಹನದ ಕೂಪಜಲದೊಳು ಮುಳುಗಿ ದೆಸೆದೆಸೆಗೆ ಚಾಲಿವರಿವನ ಕಂಡು ಬೇಗದಲಿ ವಿಷಕಂಠ ದುರಿತಸಂಹರ ಕರುಣಾಕರ ತೊಟ್ಟಿಲಿಗೆ ಎಸೆವ ಹಗ್ಗವ ಕಟ್ಟಿ ಎಳೆದು ತಗೆಯೆನ್ನ ರಂ ಬಿಸುತ ಸಂತೈಸಿ ದುಃಖದಲ್ಲಿ ಭೋರ್ಗರೆದಳುವ ಶಿಶುವ ಬೋಳೈಸುವಂದದಲೆನ್ನ ಬೋಳೈಸು ಅಸಮಾಕ್ಷ ಪರಮಗುರುವೆ.| 3 | ತೆರಣಿಯ ಹುಳು ನೂಲು ಸುತ್ತಿಕೊಂಡು ಎಸೆವ ತೆರದಿ ಈ ಸಂಸಾರ ಸುಖದುಃಖ ಎನ್ನನು ಸುತ್ತಿ ಪರಿಭವಕ್ಕೆ ಗುರಿಯಾಗಿ ಯೋನಿಯಂತ್ರದೆ ತಿರುಗಿಯೆ ಬರುತಲಿರ್ದೆನು ಘೋರ ಅರಣ್ಯದೊಳು ಸುತ್ತಿ ಹರಹರ ನಿಮ್ಮ ಸ್ಮರಣೆಯ ಮರೆದ ಕಾರಣದಿ ದುರಿತನ್ಯಾಯದ ಬಂಧನಕೆ ಗುರಿಯಾಗಿದ್ದೆನಯ್ಯಾ ಶಿವನೆ. | 4 | ಮಾಯಾಸಂಸಾರಸರ್ಪನ ವಿಷವು ತಲೆಗೇರಿ ನೋಯುತಿದ್ದೆನು ಹಲವುವಿಧದಾಸೆಪಾಶದಲಿ ಬೇಯುವವನ ಕಂಡು ನೀ ಬೇಗಲೊಯಿದ್ಯವ ಮಾಡಿಯೆ ಶವವನುಳುವಿಕೋ ಭವರೋಗವೈದ್ಯ ನಿತ್ಯ ಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭು ನೀವಲ್ಲದೆನಗನ್ಯವಿಲ್ಲ ಕಾಯೋ ಕಾಯೋ ದೇವಾ. | 5 |
--------------
ಹೇಮಗಲ್ಲ ಹಂಪ
ವೀರನಾದಡೆ ವೈರಿಗಳ ಕಾಟ ಬಹಳವಯ್ಯಾ, ದಾನಶೂರನಾದಡೆ ಯಾಚಕರ ಗೋಳು ಬಹಳವಯ್ಯಾ. ಅತಿರೂಪನಾದಡೆ ಅಂಗನೆಯರ ಕಾಟ ವಿಶೇಷವಯ್ಯಾ. ಮೂರರಲ್ಲಿ ನಿಂತಡೆ ಮಲತ್ರಯಂಗಳ ಘೋರ ಹೆಚ್ಚಾಯಿತಯ್ಯಾ. ಅಂಗದಲ್ಲಿ ಲಿಂಗಸಂಬಂಧವಾಗಬಾರದು; ಆದ ಬಳಿಕ ವೀರನಾಗಿ ವಿಷಯಂಗಳನಳಿವುದು, ಬಹುಘೋರವು ಬಹುಘೋರವು ನೋಡಯ್ಯಾ, ಎಲೆ ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಊರೊಳಗಣ ಘನಹೇರಡವಿಯೊಳೊಂದು ಬೇರು ಮೇಲು, ಕೊನೆ ಕೆಳಗಾಗಿ ಸಸಿ [ಹುಟ್ಟಿತ್ತು] ಆರೈದು ನೀರನೆರೆದು ಸಲುಹಲಿಕ್ಕೆ, ಅದು ಸಾರಾಯದ ಫಲವಾಯಿತ್ತಲ್ಲಾ ! ಬಾರುಗೊಂಬಿನಲುದುರಿದ ಹಣ್ಣ ಮೆಲಿದವ ಘೋರ ಸಂಸಾರಭವಕ್ಕೆ ಸಿಕ್ಕಿದ. ಬೇರಿಂದಲಾದ ಫಲವ ದಣಿದುಂಡವ, ಊರಿಂದ ಹೊರಗಾದ ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ತೋಹಿನ ಶಬರನಂತೆ, ಲಾಗಿನ ವ್ಯಾಘ್ರನಂತೆ, ಆಡುವ ವಿಧಾಂತನಂತೆ, ಇಂತೀ ವೇಷ ಸಹಜವೆ ? ದೊರೆವನ್ನಬರ ಭಕ್ತ, ದೊರೆವನ್ನಬರ ವಿರಕ್ತ. ಇಂತೀ ಇವರಿರವ ಕಂಡು ಬೆರಸಿದೆನಾದಡೆ, ಎನಗೆ ಘೋರ ನರಕ, ನಿಮಗೆ ಎಕ್ಕಲ ತಪ್ಪದು. ಇದಕ್ಕೆ ಮುಂಡಿಗೆಯ ಹಾಕಿದೆ, ಎತ್ತಿ ಶುದ್ಧರಾಗಿ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಸಂಸಾರವೆಂಬ ಘೋರ ಕಾಂತಾರದೊಳಗೆನ್ನನಾಸುರ ಬಿಡದಿರಾ ಬೊಪ್ಪ. ಎನ್ನ ಬೆಂಬಳಿಯೊಳಿರ್ದು ಸಾಕಾ ಬೊಪ್ಪ. ಎನ್ನ ಹೊರೆಯೊಳಿರ್ದು ಸಾಕಾ ಬೊಪ್ಪ. ಈ ಪ್ರಿಯ ನಾಯಿ ತೋಡಿ ತಿನ್ನುತ್ತಿದೆ, ಕಾಮನೆಂಬ ವೈರಿಗೊಪ್ಪಿಸರೆನ್ನ ಬೊಪ್ಪ. ಅವ್ವೆಯ ಮನೋನಾಥಾ, ನಿರಂಜನ ನಿರ್ಮಾಯ ನಿರವಯ, ನಿಶ್ಶೂನ್ಯ ನಿರಾಲಂಬ ನಿರಾಭಾರಿ ನಿವ್ರ್ಯಸನಿ. ಮುಕ್ತಿಸಾಮ್ರಾಜ್ಯಕ್ಕೊಡೆಯ ನೀನೆಯಯ್ಯಾ. ನಿನ್ನನಗಲದಂತೆ ನಿನ್ನ ಶ್ರೀಪಾದದೊಳಿಂಬಿಡಯ್ಯಾ, ಕಪಿಲಸಿದ್ಧಮಲ್ಲಿನಾಥಯ್ಯಾ.
--------------
ಸಿದ್ಧರಾಮೇಶ್ವರ
ಸಂಕಲ್ಪ ವಿಕಲ್ಪವೆಂಬ ಉದಯಾಸ್ತಮಾನಗಳಿಗೆ ದೂರವಾದ ಶಿವಶರಣರ ಅಕುಲಜರೆಂದು ಗಳಹುತಿಪ್ಪರು ನೋಡಾ ಈ ಮರುಳ ವಿಪ್ರರು ತಾವು ಮಾತಂಗಿಯ ಗರ್ಭಸಂಭವ ಜೇಷ*ಪುತ್ರರೆಂಬುದನರಿಯದೆ. ನಮ್ಮ ಶಿವಭಕ್ತರು ಅಂತಹ ಕುಲ ಇಂತಹ ಕುಲದವರೆಂದು ನಿಂದಿಸಿ ನುಡಿವ ವಿಪ್ರಹೊಲೆಯರು ನೀವು ಕೇಳಿ ಭೋ ಅದೆಂತೆಂದಡೆ_ ಸ್ತ್ರೀವಾದಪುರುಷಃ ಷಂಡಶ್ಚಂಡಾಲೋ ದ್ವಿಜವಂಶಜಃ ನಜಾತಿಭೇದೋ ಲಿಂಗಾರ್ಚೇ ರುದ್ರಗಣಾಃ ಸ್ಮೃತಾಃ ಇಂತೆಂಬ ಪುರಾಣವಾಕ್ಯವನರಿದು ನಮ್ಮ ಶಿವಭಕ್ತನು ಹೊಲೆಯ ಮಾದಿಗ ಕಬ್ಬಿಲ ಕಮ್ಮಾರ ಕಂಚುಗಾರ ಅಕ್ಕಸಾಲೆ ಕುಂಬಾರ ಅಗಸ ನಾವಿಂದ ಜೇಡ ಬೇಡನೆಂದು ನುಡಿಯುತಿಪ್ಪರು. ನಿಮ್ಮ ಉತ್ತಮ ಸತ್ಕುಲಂಗಳ ನಾವು ಎತ್ತಿ ನುಡಿಯಬಹುದೇ ಮಾರ್ಕಂಡೇಯ ಮಾದಿಗನೆಂದು ಸಾಂಖ್ಯ ಶ್ವಪಚನೆಂದು ಕಾಶ್ಯಪ ಕಮ್ಮಾರನೆಂದು ರೋಮಜ ಕಂಚುಗಾರನೆಂದು ಅಗಸ್ತ್ಯ ಕಬ್ಬಿಲನೆಂದು ನಾರದ ಅಗಸನೆಂದು ವ್ಯಾಸ ಬೇಡನೆಂದು ವಶಿಷ* ಡೊಂಬನೆಂದು ದುರ್ವಾಸ ಮಚ್ಚಿಗನೆಂದು ಕೌಂಡಿಲ್ಯ ನಾವಿಂದನೆಂದು ಅದೆಂತೆಂದಡೆ ವಾಸಿಷ*ದಲ್ಲಿ_ ವಾಲ್ಮಿಕೀ ಚ ವಶಿಷ*ಶ್ಚ ಗಾಗ್ರ್ಯಮಾಂಡವ್ಯಗೌತಮಾಃ ಪೂರ್ವಾಶ್ರಯೇ ಕನಿಷಾ*ಸ್ಯುರ್ದೀಕ್ಷಯಾ ಸ್ವರ್ಗಗಾಮಿನಃ ಎಂದುದಾಗಿ ಇದನರಿದು ಮರೆದಿರಿ ನಿಮ್ಮ ಕುಲವನು ಇನ್ನು ನಿಮ್ಮ ಕುಲದಲ್ಲಿ ಹಿರಿಯರುಳ್ಳರೆ ನೀವು ಹೇಳಿ ಭೋ ನಿಮ್ಮ ಗೋತ್ರವ ನೋಡಿ ನಿಮ್ಮ ಹಮ್ಮು ಬಿಡಿ ಭೋ ಎಮ್ಮ ಸದ್ಭಕ್ತರೇ ಕುಲಜರು. ಇದ ನಂಬಿದಿರ್ದಡೆ ಓದಿ ನೋಡಿರಣ್ಣಾ ನಿಮ್ಮ ವೇದವರ್ಗಂಗಳೊಳಗೆ ಅದೆಂತೆಂದಡೆ ಅಥರ್ವವೇದದಲ್ಲಿ_ ಮಾತಂಗೀ ರೇಣುಕಾ ಗರ್ಭಸಂಭವಾತ್ ಇತಿ ಕಾರುಣ್ಯಂ ಮೇಧಾವೀ ರುದ್ರಾಕ್ಷಿಣಾ ಲಿಂಗಧಾರಣಸ್ಯ ಪ್ರಸಾದಂ ಸ್ವೀಕುರ್ವನ್ ಋಷೀಣಾಂ ವರ್ಣಶ್ರೇಷೊ*ೀs ಘೋರ ಋಷಿಃ ಸಂಕರ್ಷಣಾತ್ ಇತ್ಯಾದಿ ವೇದ ವಚನ ಶ್ರುತಿಮಾರ್ಗೇಷು ಎಂದುದಾಗಿ ಮತ್ತಂ ವಾಯವೀಯಸಂಹಿತಾಯಾವಮ್_ ಬಾಹ್ಮಣೋ ವಾಪಿ ಚಾಂಡಾಲೋ ದುರ್ಗುಣಃ ಸುಗುಣೋsಪಿ ವಾ ಭಸ್ಮ ರುದ್ರಾಕ್ಷಕಕಂಠೂೀ ವಾ ದೇಹಾಂತೇ ಸ ಶಿವಂ ವ್ರಜೇತ್ ಎಂದುದಾಗಿ ಮತ್ತಂ ಶಿವರಹಸ್ಯದಲ್ಲಿ_ ಗ್ರಾಮೇಣ ಮಲಿನಂ ತೋಯಂ ಯಥಾ ಸಾಗರಸಂಗತವರಿï ಶಿವಸಂಸ್ಕಾರಸಂಪನ್ನೆ ಜಾತಿಭೇದಂ ನ ಕಾರಯೇತ್ ಎಂದುದಾಗಿ ಇವರೆಲ್ಲರ ವರ್ಣಂಗಳು ಲಿಂಗಧಾರಣೆಯಿಂದ ಮರೆಸಿಹೋದವು ಕೇಳಿರಣ್ಣಾ. ಇಂತಪ್ಪ ಋಷಿ ಜನಂಗಳೆಲ್ಲ ಶ್ರೀಗುರುವಿನ ಕಾರುಣ್ಯವಂ ಪಡೆದು ವಿಭೂತಿ ರುದ್ರಾಕ್ಷಿಯಂ ಧರಿಸಿ ಶಿವಲಿಂಗಾರ್ಚನೆಯಂ ಮಾಡಿ ಪಾದತೀರ್ಥ ಪ್ರಸಾದವಂ ಕೊಂಡು ಉತ್ತಮ ವರ್ಣಶ್ರೇಷ*ರಾದರು ಕಾಣಿರೇ ಇದು ಕಾರಣ ನಮ್ಮ ಕೂಡಲಚೆನ್ನಸಂಗಯ್ಯನ ಅರಿದು ಪೂಜಿಸುವಾತನೇ ಉತ್ತಮ ಸದ್ಭಕ್ತ ಬ್ರಾಹ್ಮಣನು. ಅರಿಯದವನೀಗಲೇ ಕೆಟ್ಟ ಹೊಲೆಯ ಕಾಣಿರಣ್ಣಾ.
--------------
ಚನ್ನಬಸವಣ್ಣ
.......................ನುಂಗಿತ್ತು. ದೂರ ಧಾತು ಸಾರಾಯದೊಳಡಗಿತ್ತು. ಪುರದೊಳಗೈವರ ಶಿರ ಹರಿದು............ಮಳದೋಕುಳಿಯಾಗಿತ್ತ ಕಂಡೆ. ಸಾರಿದ್ದ ಬ್ರಹ್ಮನ ಓಲಗ ಸೂರೆಯಾಯಿತ್ತು. ಘೋರ ರುದ್ರನ ದಳ ಮುರಿಯಿತ್ತು ಗುಹೇಶ್ವರಾ
--------------
ಅಲ್ಲಮಪ್ರಭುದೇವರು
-->