ಅಥವಾ

ಒಟ್ಟು 763 ಕಡೆಗಳಲ್ಲಿ , 36 ವಚನಕಾರರು , 356 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

`ಜ್ಞಾನಗಮ್ಯಂ ಸರಹಸ್ಯಂ ಚ ಕೈವಲ್ಯ ಫಲಕಾರಣಂ | ವೀರಶೈವಮಿತಿ ಜ್ಞೇಯ ಮೇತಲ್ಲಕ್ಷಣಮುಚ್ಯತೇ|| ಇಂತೆಂದುದಾಗಿ ಜ್ಞಾನದಿಂದೆಯಲ್ತಕ್ಕಂಥ ಗೋಪ್ಯ ವಾದಂಥ ಮುಕ್ತಿ ಪದಕ್ಕೆ ಕಾರಣವಾದಂಥ ಆವುದಾನೊಂದು ಶೈವವುಂಟು, ಅದು ವೀರಶೈವವೆಂದು ಹೇಳಲ್ಪಟ್ಟಿತ್ತಯ್ಯಾ, ಶಾಂತವೀರೇಶ್ವರಾ.
--------------
ಶಾಂತವೀರೇಶ್ವರ
ಕ್ರೀವಿಡಿದು ಗುರುಸಂಬಂದ್ಥಿಯಾಗಿ, ಜಾÕನವಿಡಿದು ಲಿಂಗಸಂಬಂದ್ಥಿಯಾಗಿ. ಘನವಿಡಿದು ಮಹಾಜಾÕನಿಯಾಗಿ, ಅರಿವು ಆಚರಣೆಯ ಕಂಡು, ಜಾÕನ ಮುಕುರವೆಂಬ ಮುಂದಣ ಶ್ರೀಸಂಬಂದ್ಥಿಯಾಗಿ, ಆಚಾರದಲ್ಲಿ ಸಂಪನ್ನನಾಗಿ, ಮಹೇಶ್ವರಸ್ಥಲವನರಿದು, ಅದೇ ಜಂಗಮವಾದ ಬಳಿಕ ನಿರಾಕುಳನಾಗಿ ಆಚರಿಸಿದರೆ ಅನಾದಿ ಜಂಗಮವೆಂಬೆ. ಸಾಮವೇದೇ- ವಿವಚಾಸೋವಿಚಾ ಲಿಂಗಾಲಿಂಗಿ ಚ ಫಲಾದಿ ಬ್ರಹ್ಮರಾಕ್ಷಸ ಸೋವಿಸಂಗಶ್ಚ | ಸೂಕರ ಶತಕೋಟಿ ಜನ್ಮ ಚ ಸೋಪಿ ಕ್ರೀಡಾಲಿಂಗ ಮಲಮೂತ್ರ ಮಾಂಸ ಭುಂಜಿತಃ | ಬ್ರಹ್ಮೇನ ಕೋಟಿ ರಾಕ್ಷಸಃ ಸೋಸಂಗೇನ ಶತಕೋಟಿಗಾರ್ದಭ ಜನ್ಮ ಚ | ಅದೇ ದಾಸಿ ದಾಸೇ ಸೂಕರ ಸಂಗಶಃ ಚ ನಾಃ | ಸೋವ ಮಾತ್ರವೆಂದು ತಂದ ಸ್ತ್ರೀಗಳನು ಶಿಷ್ಯಾದಿ ಪುತ್ರರ ಕೈಯ ಗುರು ತಾಯಿ ಎಂಬ ನಾಮಕರಣಂಗಳನುಂಟುಮಾಡಿ, ತನ್ನ ಅಂಗವಿಕಾರಕ್ಕೆ ತಂದ ಸಂತೆಯ ಡೊಂಬಿತಿಯ ತಂದು, ಹಿರಿಯರಲ್ಲಿ ಸರಿಮಾಡುವ ಜಂಗಮವೆ ಗುರುವೆ? ಅಜಾÕನ ಪುರುಷನಲ್ಲ, ಅವ ಹಿರಿಯತನಕ್ಕೆ ಸಲ್ಲ, ಅವಂಗೆ ಗುರುವಿಲ್ಲ ಲಿಂಗವಿಲ್ಲ, ಜಂಗಮ ಮುನ್ನವೆಯಿಲ್ಲ. ಅವ ಘಟಾತ್ಮನು ಸೋವಿಯ ಸಂಗ ಬೇಡ ಬಿಡಿರಣ್ಣಾ, ಸೋವಿಯ ಸಂಗವ ಮಾಡಿದರೆ ಶತಕೋಟಿ ದಾಸಿಯ ಬಸುರಲ್ಲಿ ಬಂದು, ಹೇಸಿಕೆಯಿಲ್ಲದೆ ಮಲಮೂತ್ರವನು ಹೇಗೆ ಸೂಕರ ಭುಂಜಿಸುವುದೊ ಹಾಂಗೆ ಭುಂಜಿಪನು. ನಾನಾ ಯೋನಿಯ ನರಕುವದು. ಸೋವಿ ಮಾತ್ರೇಣ ಆ ಲಿಂಗನಂ ಗುರು ತಾಯ ಅಪಮಾನ ಸಾಮಾನ್ಯವೆಂದು ಸೋವಿಯ ಸಂಗವ ಮಾಡಿದಡೆ ಎಪ್ಪತ್ತೇಳುಕೋಟಿ ಶ್ವಪಚಯೋನಿ ತಪ್ಪದಯ್ಯ. ಹನ್ನೆರಡು ಕಂಬ ಸಾಕ್ಷಿಯಾಗಿ, ಕಳಕನ್ನಡಿ ಸಾಕ್ಷಿಯಾಗಿ, ತೆಳೆಮಲು ಕಟ್ಟಿ ಸಾಕ್ಷಿಯಾಗಿ, ಆಯಿರಣೆಕೋಲು ಸಾಕ್ಷಿಯಾಗಿ, ಮುತ್ತೈದೆತನದಲ್ಲಿ ಶ್ರೇಷ್ಠಯಾಗಿ, ಜಾÕನ ದೃಕ್ಕಿನಿಂ ತಿಳಿದು, ಅನುಭಾವದ ಮುಖವನರಿದಂತೆ, ಆ ಜಾÕನನೇತ್ರವ ಅರಿದು ಧಾರೆಯನೆರೆಸಿಕೊಂಡು, ಅರಿವಿನಲ್ಲಿ ಇರದೆ ಕುರಿಯ ಹೇಲ ತಿಂಬಂತೆ, ಬಾಯಿಗೆ ಬಂದಂತೆ ಸೋವಿಯ ಸಂಗವ ಮಾಡುವವರ ಸರ್ವಾಂಗವೆಲ್ಲ ಗಣಿಕೆಯ ಯೋನಿಯ ಬಸುರ ನೋಡಾ. ಧಾರೆಯನೆರೆಸಿಕೊಂಡು ಕ್ರೀವಿಡಿದು ನಡೆಯದೆ, ತೊತ್ತಿನ ಮಗನಿಗೆ ಪಟ್ಟ ಕಟ್ಟಿದರೆ ಹಾದಿಯ ಎಲುವ ಕಂಡು ಓಡಿಹೋಗಿ ಗಡಗಡನೆ ಕಡಿವಂತೆ, ಸೋವಿಯ ಎಂಜಲ ತಿಂದವಂಗೆ ಗುರುವಿಲ್ಲ. ಅವ ದೇವಲೋಕ ಮತ್ರ್ಯಲೋಕ ಎರಡಕ್ಕೆ ಸಲ್ಲ. ಆವಾಗಮದಲ್ಲಿ ಉಂಟು, ಗಳಹಿ ಹೇಳಿರೊ, ಮಕ್ಕಳಿರಾ. ನೀವು ಬಲ್ಲರೆ ಕಾಳನಾಯ ಹೇಲ ತಿಂಬಂಗೆ ಹಿರಿಯನೆಂದು, ಹೋತನಂತೆ ಗಡ್ಡವ ಬೆಳಸಿಕೊಂಡು ಗುಡರಗುಮ್ಮನಂತೆ ಸುಮ್ಮನಿರುವಿರಿ. ಗರ್ವತನಕ್ಕೆ ಬಂದು ಹಿರಿಯರೆಂದು ಆಚರಣೆ ನ್ಯಾಯವ ಬಗಳುವಿರಿ. ಸೋವಿಸಂಗದಿಂದ ಕನಿಷ್ಠ ನರಕ ಕಾಣಿರಣ್ಣಾ. ಸೋವಿಯ ಸಂಗವ ಬಿಟ್ಟು ಧಾರೆಯ ಸ್ತ್ರೀಯಳ ನೆರದರೆ, ಆಚಾರವಿಡಿದು ನಡೆದು ಆಚರಣೆಯ ನುಡಿದರೆ ಶುದ್ಧವಾಗುವದಲ್ಲದೆ ತೊತ್ತಿನ ಮಗನಾಗಿ ಎಡೆಯ ಸಮಗಡಣವ ಬೇಡುವ ಪಾತಕರ, ಅವರ ಜಂಗಮವೆಂಬೆನೆ? ಸೋವಿಯ ಸಂಗದಿಂದ ಬಂದುದು ಬ್ರಹ್ಮೇತಿ. ಅಥರ್ವಣ ಸಾಮವೇದ ಯಜುರ್ವೇದ ಋಗ್ವೇದ ಇಂತಪ್ಪ ನಾಲ್ಕು ವೇದದಲ್ಲಿ ಶ್ರುತಿ ಸ್ಮøತಿಗಳಲ್ಲಿ ಆಗಮ ಪುರಾಣಂಗಳಲ್ಲಿ ಸೋವಿಯ ವಾಚ್ಯವೆಂಬುದುಂಟೆ ಪರಮಪಾತಕರಿರಾ? ನೂತನವ ಗಂಟಿಕ್ಕಿ ಜಗಲಿಯೆನ್ನದೆ ಪಟ್ಟಶಾಲೆಯೆಂಬಿಂ ತೊಂಡರಿರಾ. ತೊತ್ತನೊಯ್ದು ತೊತ್ತೆದಾಸಿ ಬಾಯೆನ್ನದೆ ಹೋವಿಯೆಂದು ಬಗಳುವಿರಿ. ಕಲಿಯುಗದಲ್ಲಿ ನೂತನದ ಸೂಳೆಯ ಮಕ್ಕಳು ನೀವು. ಸೋವಿಯ ಸಂಗವ ಮಾಡಿದವನು ಅರಿವುಳ್ಳ ಪುರುಷನಾದರೂ ಆಗಲಿ, ಅರಿದು ಮತ್ತೆ ಅರೆಮರುಳಾದ ಹಿರಿಯರನೇನೆಂಬೆನಯ್ಯಾ. ಅವನು ಪಾತಕನಘೋರಿಗಳು. ಅವರು ಇವರುವನರಿಯದ ಅಘೋರಿಗಳೆಂಬ ಇಂತಪ್ಪ ಸೋವಿಯ ಸಂಗವ ಮಾಡುವ ಬ್ರಹ್ಮೇತಿಕಾರ ಪಂಚಮಹಾಪಾತಕರು ಇಹಪರಕ್ಕೆ ಸಲ್ಲರೆಂದುದು. ನಿಮ್ಮಾಣೆ ನಿಮ್ಮ ಪ್ರಮಥರಾಣೆ, ಇಹವಿಲ್ಲ ಪರವಿಲ್ಲ, ಮುಕ್ತಿಯ ಫಲವಿಲ್ಲ, ಅಘೋರವಲ್ಲದೆ ಮತ್ತೇನೂ ಇಲ್ಲ. ನಿಮ್ಮಾಣೆ ಬ್ಥೀಮಬಂಕೇಶ್ವರಾ.
--------------
ಭೀಮಬಂಕೇಶ್ವರ
``ದಂಡಶ್ಚ ತಾರಕಾಕಾರೋ ಭವತಿ | ಓಂ ಸಾರ್ವತ್ಮಾ ದೇವತಾ | ಮಕಾರೇ ಚ ಲಯಂ ಪ್ರಾಪ್ತೇ ಪಂಚದಶಮೇ ಪ್ರಣವಾಂಶಕೇ ||'' ಅಕಾರವೆಂಬ ಪ್ರಣವದಲ್ಲಿ- ``ಕುಂಡಲಶ್ಚ ಅರ್ಧಚಂದ್ರೋ ಭವತಿ | ಓಂ ಪರಮಾತ್ಮಾ ದೇವತಾ | ಅಕಾರೇ ಚ ಲಯಂ ಪ್ರಾಪ್ತೇ ಷೋಡಶೇ ಪ್ರಣವಾಂಶಕೇ ||'' ಉಕಾರವೆಂಬ ಪ್ರಣವದಲ್ಲಿ- ``ಜ್ಯೋತಿಶ್ಚ ದರ್ಪಣಾಕಾರೋ ಭವತಿ | ಓಂ ಶಿವಾತ್ಮಾ ದೇವತಾ | ಉಕಾರೇ ಚ ಲಯಂ ಪ್ರಾಪ್ತೇ ಸಪ್ತದಶ ಪ್ರಣವಾಂಶಕೇ ||'' ``ಮಕಾರೇ ಚ ಅಕಾರೇಚ ಉಕಾರೇಚ ನಿರಾಮಯಂ | ಇದಮೇಕಂ ಸಮುತ್ಪನ್ನಂ ಓಂ ಇತಿ ಜ್ಯೋತಿರೂಪಕಂ || ಪ್ರಥಮಂ ತಾರಕಾರೂಪಂ ದ್ವಿತೀಯಂ ದಂಡ ಉಚ್ಯತೇ | ತೃತೀಯಂ ಕುಂಡಲಾಕಾರಂ ಚತುರ್ಥಂ ಅರ್ಧಚಂದ್ರಕಂ || ಪಂಚಮಂ ದರ್ಪಣಾಕಾರಂ ಷಷ್ಠಂ ಜ್ಯೋತಿರೂಪಕಂ | ಇತಿ ಪ್ರಣವಃ ಜ್ಞೇಯಂ ಏತದ್ಗೋಪ್ಯಂ ವರಾನನೇ || ಓಂಕಾರ ಪ್ರಭವೋ ವೇದಃ ಓಂಕಾರಂ ಪ್ರಭವ ಸ್ವರಃ | ಓಂಕಾರಪ್ರಭವಾ ಭೂಃ ಓಂಕಾರಪ್ರಭವಾ ಭುವಃ || ಓಂಕಾರಪ್ರಭವಾ ಸ್ವಹಃ ಓಂಕಾರ ಪ್ರಭವಾ ಮಹಃ | ಓಂಕಾರಪ್ರಭವೋ ಜನಃ ಓಂಕಾರ ಪ್ರಭವಂ ತಪಃ || ಓಂಕಾರಪ್ರಭವಂ ಸತ್ಯಂ ಓಂಕಾರ ಪ್ರಭವೋ ರವಿ ಃ | ಓಂಕಾರಪ್ರಭವಸ್ಸರ್ವಂ ತ್ರೈಲೋಕ್ಯಂ ಸಚರಾಚರಂ || ಸರ್ವವ್ಯಾಪಕಮೋಂಕಾರಂ ಮಂತ್ರಸ್ಯಾತ್ರ ನ ಸಂಭವೇತ್ | ಪ್ರಣವೋಹಿ ಪರಬ್ರಹ್ಮ ಪ್ರಣವಃ ಪರಮಂ ಪದಂ || ಓಂಕಾರಂ ನಾದರೂಪಂ ಚ ಓಂಕಾರಂ ಬಿಂದುರೂಪಕಂ | ಓಂಕಾರಂ ಚ ಕಲಾರೂಪಂ ಓಂಕಾರಂ ಮಂತ್ರರೂಪಕಂ || ಓಂಕಾರಂ ವ್ಯಾಪಿ ಸರ್ವತ್ರ ಓಂಕಾರಂ ಗೋಪ್ಯಮಾನನಂ | ಇತಿ ಪ್ರಣವಃ ವಿಜ್ಞೇಯಃ ದುರ್ಲಭಂ ಕಮಲಾನನೇ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಜಾತಿವಿಡಿದು ಜಂಗಮವ ಮಾಡಬೇಕೆಂಬ ಪಾತಕರು ನೀವು ಕೇಳಿರೊ: ಜಾತಿ ಘನವೊ ಗುರುದೀಕ್ಷೆ ಘನವೊ ? ಜಾತಿ ಘನವಾದ ಬಳಿಕ, ಆ ಜಾತಿಯೆ ಗುರುವಾಗಿರಬೇಕಲ್ಲದೆ ಗುರುದೀಕ್ಷೆ ಪಡೆದು, ಗುರುಕರಜಾತರಾಗಿ ಜಾತಕವ ಕಳೆದು ಪುನರ್ಜಾತರಾದೆವೆಂಬುದ ಏತಕ್ಕೆ ಬೊಗಳುವಿರೊ ? ಜಾತಿವಿಡಿದು ಕಳೆಯಿತ್ತೆ ಜಾತಿತಮವು ? ಅಜಾತಂಗೆ ಆವುದು ಕುಲಳ ಆವ ಕುಲವಾದಡೇನು ದೇವನೊಲಿದಾತನೆ ಕುಲಜ. ಅದೆಂತೆಂದಡೆ; ದೀಯತೇ ಜಾÕನಸಂಬಂಧಃ ಕ್ಷೀಯತೇ ಚ ಮಲತ್ರಯಂ ದೀಯತೇ ಕ್ಷೀಯತೇ ಯೇನ ಸಾ ದೀಕ್ಷೇತಿ ನಿಗದ್ಯತೇ ಎಂಬುದನರಿದು, ಜಾತಿ ನಾಲ್ಕುವಿಡಿದು ಬಂದ ಜಂಗಮವೇ ಶ್ರೇಷ್ಠವೆಂದು ಅವನೊಡಗೂಡಿಕೊಂಡು ನಡೆದು ಜಾತಿ ಎಂಜಲುಗಳ್ಳರಾಗಿ ಉಳಿದ ಜಂಗಮವ ಕುಲವನೆತ್ತಿ ನುಡಿದು, ಅವನ ಅತಿಗಳೆದು ಕುಲವೆಂಬ ಸರ್ಪಕಚ್ಚಿ, ಎಂಜಲೆಂಬ ಅಮೇಧ್ಯವ ಭುಂಜಿಸಿ ಹಂದಿ-ನಾಯಂತೆ ಒಡಲ ಹೊರೆವ ದರುಶನಜಂಗುಳಿಗಳು ಜಂಗಮಪಥಕ್ಕೆ ಸಲ್ಲರಾಗಿ. ಅವರಿಗೆ ಗುರುವಿಲ್ಲ ಗುರುಪ್ರಸಾದವಿಲ್ಲ, ಲಿಂಗವಿಲ್ಲ ಲಿಂಗಪ್ರಸಾದವಿಲ್ಲ, ಜಂಗಮವಿಲ್ಲ ಜಂಗಮಪ್ರಸಾದವಿಲ್ಲ. ಇಂತೀ ತ್ರಿವಿಧಪ್ರಸಾದಕ್ಕೆ ಹೊರಗಾದ ನರಜೀವಿಗ? ಸ್ವಯ-ಚರ-ಪರವೆಂದಾರಾಧಿಸಿ ಪ್ರಸಾದವ ಕೊಳಸಲ್ಲದು ಕಾಣಾ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಸಚ್ಚಿದಾನಂದ ಬ್ರಹ್ಮೋಪದೇಶ ಭಕ್ತಮಹೇಶ್ವರರು ಪರಮಪಾತಕಸೂತಕಂಗಳ ಬಾಹ್ಯಾಂತರಂಗದಲ್ಲಿ ಹೊದ್ದದೆ, ಸತ್ಯಶರಣರು ಮಾಡುಂಡುದೊಂದು ಕಾಯಕ, ಬೇಡುಂಡುದೊಂದು ಕಾಯಕದಿಂದ ಗಳಿಸಿದಂಥ ಪದಾರ್ಥಗಳ, ಗುರುಚರಪರಸ್ಥಿರಕ್ಕೆ ಷಟ್‍ಸ್ಥಲಸಂಬಂಧಗಳಿಂದ, ಷಡ್ವಿಧಮಂತ್ರಗಳ ಸೊಮ್ಮಿನಿಂ ಸಂತೃಪ್ತರಾಗಿರ್ಪುದು. ಆ ನಿಲುಕಡೆಯೆಂತೆಂದಡೆ : ಶ್ರುತಿಗುರುಸ್ವಾನುಭವ ಸಾಕ್ಷಿಯಾಗಿ, ಶ್ರೀಗುರುಲಿಂಗಜಂಗಮವೆ ಪರಾತ್ಪರವೆಂದು ಕಂಡು, ಷಡುಸ್ಥಲಮಾರ್ಗವಿಡಿದು, ತನ್ನ ನಿಜವ ತಾನರಿಯದೆ, ಭವಿಶೈವ ಬ್ಥಿನ್ನ ಕರ್ಮಿಗಳಂತೆ ಭಾವಭ್ರಮೆಗೆಟ್ಟು, ಹೊಲಬುದಪ್ಪಿ, ಭೋಗಾಪೇಕ್ಷಿತರಾಗಿ, ಹಲವು ಶಾಸ್ತ್ರೋಪದೇಶವಿಡಿದು, ಕಾಶಿ ರಾಮೇಶ್ವರ ಕಂಚಿ ಕಾಳಹಸ್ತಿ ಪಂಪಾಕ್ಷೇತ್ರ ಗೋಕರ್ಣ ಶ್ರೀಶೈಲಾದಿಯಾದ ತೀರ್ಥಯಾತ್ರೆ, ವೀರಣ್ಣ ಬಸವಣ್ಣ ಮಲ್ಲಣ್ಣ ಹಾವಿಗೆ ದಂಡಾಗ್ರ ಗಿಳಿಲು ಶಂಖ ಭಸ್ಮಗುಂಟಿಕೆ ತೀರ್ಥದಗುಂಬ ಹಾದಿಬೆನವ ಹಳ್ಳದ ಬೆನವ ವಾಸರದಯ್ಯ ವಿನಾಯಕ ಶಕ್ತಿ ಗಣೇಶ ಚಂಡಿ ಚಾಮುಂಡಿಯಲ್ಲಿ ಏಕನಾತಿ ಹಿರಿಹೊಳೆ ಜಟ್ಟಿಂಗ ತೆಪ್ಪದಾರತಿ ಪಂಚಪಾಂಡವರು ಬನ್ನಿಮಹಾಂಕಾಳಿ ತುಳಸಿ ಬಿಲ್ವವೃಕ್ಷ ಸಮಾದ್ಥಿ ಗದ್ದುಗೆ ಪುರಾಣ ವಚನಾರ್ಥಪುಸ್ತಕ ಲೆಕ್ಕದ ಓಹಿ ಕತ್ತಿ ಕಂಡೇಪೂಜೆ, ಊರಬೀರ ಪೀರ ಗೋರಿ ಸತ್ತವರ ತಿಥಿ ಚಿತ್ತಹೊಲೆ ಕರ್ಮದ ಗಂಗೆ ಗುಗ್ಗುಳ ಗೌರೀನೋಂಪಿ ದೀಪಹರಕೆ ಪೂಜೆ ಕರಿಯಸೀರೆ ಊರ ಮಾರಿದೇವತೆ ಅಂಬಲಿ ಮಜ್ಜಿಗೆ ಕುಂಭ ಹೊಸ್ತಲ ಮದುವೆಯಕಂಭ ಕುಂಭ ಸರಕಿನಗಂಟು ಮಹತ್ವ ಮೆರೆದವರ ಪಾದಮುದ್ರೆ ಕಡೆಯಾದವಕ್ಕೆ, ತನ್ನ ಕಾಯ ವಾಚ ಮನದಲ್ಲಿ ಹೊಳೆದು, ಪಿತ-ಮಾತೆ ಸತಿ-ಸುತ ಒಡಹುಟ್ಟಿದವರು ಸೇವಕ ಕಡೆಯಾದವರಿಂದೆ ತನ್ನ ಮನೆಯಲ್ಲಿ ಮಾಡಿದ ಎಡೆ ವಾರಮೃತ್ಯೋದಕ, ಪಾದೋದಕಸಂಬಂಧವಾದ, ವಿಭೂತಿ-ಗಂಧಾಕ್ಷತೆ-ಪುಷ್ಪ-ಪತ್ರಿ ಧೂಪ-ದೀಪ ಹಣ್ಣು-ಕಾಯಿ ವಸ್ತ್ರಾಭರಣ-ಪಂಚಕಳಸ ಕಾಣಿಕೆ ಮೊದಲಾದ ಬ್ಥಿನ್ನವ ಕರ್ಮಕ್ರಿಯಾಚಾರಲಿಂಗಬಾಹ್ಯರಾದ ಬ್ರಹ್ಮ ಕ್ಷತ್ರಿಯ ವೈಶ್ಯ ಶೂದ್ರ ಪಾಶುಪತ ಕಾಳಾಮುಖಿ ಯೋಗಿ-ಜೋಗಿ ಶ್ರವಣ-ಸನ್ಯಾಸಿ ಯತಿ-ವ್ರತಿ ಮನು-ಮುನಿ ಗರುಡ-ಗಂಧರ್ವ ಯಕ್ಷ-ರಾಕ್ಷಸ ಸಿದ್ಧ-ಸಾಧ್ಯರುಪದೇಶವಿಡಿದು ಚರಲಿಂಗೋದಯಘನಪಾದತೀರ್ಥವರ್ಪಿಸಿ, ನೈವೇದ್ಯ ಮಾಡಿಸುವಂಥಾದ್ದೆ ಅನಾಚಾರ. ಇದೇ ಭವಿಮಾಟಕೂಟ ಅಸತ್ಯದ ನಡೆನುಡಿಯ ವಿಚಾರದ ಪ್ರಥಮಪಾತಕ. ಇದಕ್ಕೆ ಹರನಿರೂಪ ಸಾಕ್ಷಿ : ``ಶಿವಾಚಾರಸುಸಂಪನ್ನಃ ಕೃತ್ವ್ದಾನ್ಯದೈವಸ್ಯ ಪೂಜನಂ | ಶ್ವಾನಯೋನಿಶತಂ ಗತ್ವಾ ಚಾಂಡಾಲಗೃಹಮಾಚರೇತ್ || ಅನಾಚಾರಿಕೃತಂ ಪಾಕಂ ಲಿಂಗನೈವೇದ್ಯಕಿಲ್ಬಿಷಂ | ಲಿಂಗಾಚಾರಿಕೃತಂ ಪಾಕಂ ಲಿಂಗನೈವೇದ್ಯಮುತ್ತಮಂ || ತದ್ದಿನಂ ದಿನದೋಷೇಣ ಶೋಣಿತಂ ಸುರಾಮಾಂಸಯೋಃ | ಏಕಭುಕ್ತೋಪವಾಸೇನ ನರಕೇ ಕಾಲಮಕ್ಷಯಂ || ಸೌಮೇ ಭೌಮೇ ವ್ಯತಿಪಾತೇ ಸಂಕ್ರಾಂತಿಶಿವರಾತ್ರಿಯೋ | ಶೈವಕರ್ಮೋಪವಾಸಿನಾಂ ನರಕೇ ಕಾಲಮಕ್ಷಯಂ || ಕಾರ್ತೀಕಮಾಘಶ್ರಾವಣ ಶೈವಪೂಜಾವಿಶೇಷತಃ | ವೀರಶೈವಸ್ತಥಾ ಕೃತ್ವಾ ಸನ್ತಶ್ಟ ಪ್ರಾಕೃತೈಃ ಸಮಾಃ || ಸ್ಥಾವರಾರ್ಪಿತನೈವೇದ್ಯಾತ್ ನ ತೃಪ್ತಿರ್ಮಮ ಪಾರ್ವತಿ | ಜಂಗಮಾರ್ಪಿತನೈವೇದ್ಯಾತ್ ಮಮ ತೃಪ್ತಿಶ್ಚ ಸರ್ವದಾ || ಸತ್ಪಾತ್ರದತ್ತವಿತ್ತಸ್ಯ ತದ್ಧನಂ ಸ್ವಧನಂ ಸುಖಂ | ಅಪಾತ್ರದತ್ತ ವಿತ್ತಸ್ಯ ತದ್ಧನಂ ಸ್ವಸುಖಂ ಭವೇತ್ || ಚರಸ್ಯ ಗಮನೋ ನಾಸ್ತಿ ಭಕ್ತಸ್ಯ ಗೃಹಮಾಚರೇತ್ | ಅನ್ಯಗೃಹಂ ಗಮಿಷ್ಯಂತಿ ಸದ್ಯೋ ಗೋಮಾಂಸಭಕ್ಷಣಮ್ || ಇಷ್ಟಲಿಂಗಮವಿಶ್ವಸ್ಯ ಅನ್ಯದೈವಮುಪಾಸತೇ | ಶ್ವಾನಯೋನಿ ಶತಂ ಗತ್ವಾ ಚಾಂಡಾಲಗೃಹಮಾಚರೇತ್ || ಬಹುಲಿಂಗಪೂಜಕಸ್ಯ ಬಹುಭಾವಗುರುಸ್ತಥಾ | ಬಹುಪ್ರಸಾದಂ ಭುಂಜಂತಿ ವೇಶ್ಯಾಪುತ್ರಸ್ತಥೈವ ಚ || ಅಭಕ್ತಜನಸಂಗಶ್ಚ ಮಂತ್ರಸ್ಯ ಚ ಆಗಮಃ | ಅನ್ಯದೈವಪರಿತ್ಯಾಗಃ ಲಿಂಗಭಕ್ತಸ್ಯ ಲಕ್ಷಣಂ || ಲಿಂಗಧಾರಕಭಕ್ತಾನಾಂ ಲಿಂಗಬಾಹ್ಯಸತೀಸುತಾಃ | ಆಲಿಂಗಿತಾ ಚುಂಬಿತಾಶ್ಚ ರೌರವಂ ನರಕಂ ವ್ರಜೇತ್ ||'' ಇಂತೆಂಬ ಹರಗುರುವಾಕ್ಯಪ್ರಮಾಣವದಾಗಿ, ಸದ್ಭಕ್ತಶರಣಗಣಾರಾಧ್ಯರು ಭೂಪ್ರತಿಷ್ಠಾದಿಗಳ ಹೊದ್ದಿದಡೆ, ಭವಬಂಧನವಪ್ಪದು ತಪ್ಪದು. ಅದು ಕಾರಣವಾಗಿ ಗುರುಮಾರ್ಗಿಕರು ಹೊದ್ದದೆ, ಭವಸಾಗರವ ದಾಂಟಿ, ನಿರ್ಧರದಿಂದಿಪ್ಪುದೊಂದು ನರಗುರಿಗಳ ಪ್ರಥಮಪಾತಕನಿರಸನ ಕಾಣಾ ನಿರವಯಪ್ರಭು ಮಹಾಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಅನುಭಾವಲಿಂಗದ ಮರ್ಮವನರಿವುದರಿದು, ಲಿಂಗಸಂಜ್ಞೆಯನರಿವುದರಿದು, ಲಿಂಗವೆಂದಾದುದೆಂದರಿವುದರಿದು, ಲಿಂಗವಂತಹುದಿಂತಹುದೆಂದರಿವುದರಿದು ನೋಡಾ. ಲಿಂಗದಲ್ಲಿಯೆ ಅಗಮ್ಯವಯ್ಯ. ಭೂಮಿಯೆ ಪೀಠಕೆ, ಆಕಾಶವೆ ಲಿಂಗವೆಂದರಿದಾತನು ಲಿಂಗವನರಿದಾತನಲ್ಲ. ಲಿಂಗದಲ್ಲಿ[ಯೆ] ಅಗಮ್ಯವಯ್ಯ. ಲಿಂಗದ ಆದಿ ಬ್ರಹ್ಮ, ಮಧ್ಯ ವಿಷ್ಣು, ಅಂತ್ಯ ರುದ್ರ. ಇಂತೀ ತ್ರಿಮೂರ್ತಿಲಿಂಗವೆಂದರಿದಾತನು ಲಿಂಗವನರಿದವನಲ್ಲ. ಲಿಂಗದಲ್ಲಿ[ಯೆ] ಅಗಮ್ಯವಯ್ಯ. ಲಿಂಗಮಧ್ಯೇ ಜಗತ್ಸರ್ವಂ ತ್ರೈಲೋಕ್ಯಂ ಸಚರಾಚರಂ ಲಿಂಗಬಾಹ್ಯಾತ್ ಪರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ ಎಂಬ ಭಾವರಹಿತ ಲಿಂಗವು `ಬ್ರಹ್ಮ ವಿಷ್ಣ್ವಾದಿದೇವಾನಾಮಪ್ಯಗೋಚರಂ' ಎಂದು ಇದಂ ಮಾಹೇಶ್ವರಂ ಜ್ಯೋತಿರಾಪಾತಾಲೇ ವ್ಯವಸ್ಥಿತಂ ಅತೀತಂ ಸತ್ಯಲೋಕಾದೀನನಂತಂ ದಿವ್ಯಮೀಶ್ವರಂ ಲಲಾಟಲೋಚನಂ ಚಾಂದ್ರೀ ಕಲಾಪಂ ಚತುರ್ದಶಂ ಅಂತರ್ವತೇಹ ನಿರ್ದೇಹಂ ಗುರುರೂಪಂ ವ್ಯವಸ್ಥಿತಂ ಪಾದಭಿನ್ನಂ ಹಿ ಲೋಕೇನ ಮೌಳಿಬ್ರಹ್ಮಾಂಡಭಿತ್ತಯೇ ಭುಜಪ್ರಾಂತದಿಗಂತಾನಾಂ ಭೂತಾನಾಂ ಪತಯೇ ನಮಃ ನಾದಲಿಂಗಮಿತಿಜ್ಞೇಯಂ ಬಿಂದುಪೀಠಮುದಾಹೃತಂ ನಾದಬಿಂದುಯುತಂ ರೂಪಂ ಲಿಂಗಾಕಾರಮಿಹೋಚ್ಯತೇ ಎಂಬ ಲಿಂಗಮೆಂದು ಲಿಯತೇ ಗಮ್ಯತೇ ಯತ್ರ ಯೇನಸರ್ವಂ ಚರಾಚರಂ ತದೇತಲ್ಲಿಂಗಮಿತ್ಯುಕ್ತಂ ಲಿಂಗತತ್ತ್ವಪರಾಯಣೈಃ ಲಕಾರಂ ಲಯಸಂಪ್ರೋಕ್ತಂ ಗಕಾರಂ ಸೃಷ್ಟಿಮೇವ ಚ ಲಯಾನಾಂ ಗಮನಶ್ಚೈವ ಲಿಂಗಾಕಾರಮಿಹೋಚ್ಯತೇ ಎಂದರಿದಾತನು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನೆಂದರಿದ ಶರಣಂಗೆ ಸುಲಭ, ಮಿಕ್ಕಿನವರಿಗಳಿಗಲಭ್ಯವಯ್ಯಾ.
--------------
ಉರಿಲಿಂಗಪೆದ್ದಿ
ಸದ್ಗುರುಕಾರುಣ್ಯವ ಪಡೆದು ಲಿಂಗಾಂಗಸಮರಸವುಳ್ಳ ವೀರಶೈವ ಭಕ್ತ ಮಹೇಶ್ವರರೆನಿಸಿಕೊಂಡ ಬಳಿಕ ತಮ್ಮಂಗದ ಮೇಲಣ ಲಿಂಗವು ಷಟ್‍ಸ್ಥಾನಂಗಳಲ್ಲಿ ಬ್ಥಿನ್ನವಾದಡೆ ಆ ಲಿಂಗದಲ್ಲಿ ತಮ್ಮ ಪ್ರಾಣವ ಬಿಡಬೇಕಲ್ಲದೆ, ಮರಳಿ ಆ ಬ್ಥಿನ್ನವಾದ ಲಿಂಗವ ಧರಿಸಲಾಗದು. ಅದೇನು ಕಾರಣವೆಂದಡೆ : ತಾನು ಸಾಯಲಾರದೆ ಜೀವದಾಸೆಯಿಂದೆ ಆ ಬ್ಥಿನ್ನವಾದ ಲಿಂಗವ ಧರಿಸಿದಡೆ ಮುಂದೆ ಸೂರ್ಯಚಂದ್ರರುಳ್ಳನ್ನಕ್ಕರ ನರಕಸಮುದ್ರದಲ್ಲಿ ಬಿದ್ದು ಮುಳುಗಾಡುವ ಪ್ರಾಪ್ತಿಯುಂಟಾದ ಕಾರಣ, ಇದಕ್ಕೆ ಸಾಕ್ಷಿ : ``ಶಿರೋ ಯೋನಿರ್ಗೋಮುಖಂ ಚ ಮಧ್ಯಂ ವೃತ್ತಂ ಚ ಪೀಠಕಂ | ಷಟ್‍ಸ್ಥಾನೇ ಛಿದ್ರಯೋಗೇ ತು ತಲ್ಲಿಂಗಂ ನೈವ ಧಾರಯೇತ್ | ತಥಾಪಿ ಧಾರಣಾತ್ ಯೋಗೀ ರೌರವಂ ನರಕಂ ವ್ರಜೇತ್ ||'' -ಸೂP್ಷ್ಞ್ಮ ಗಮ. ಇಂತಪ್ಪ ನರಕಜೀವಿಗಳ ಎನ್ನತ್ತ ತೋರದಿರಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ದ್ರವ್ಯ ನೀನು ದ್ರವ್ಯಾರ್ಥ ನೀನು; ಪದ ನೀನು, ಪದಾರ್ಥ ನೀನು. ಸಕಲ ನೀನು ನಿಷ್ಕಲ ನೀನು. ಸಕಲ ನಿಷ್ಕಲಾತ್ಮಕ ಪರಿಪೂರ್ಣ ಶಿವನಲ್ಲದೆ ಅನ್ಯ ಭಿನ್ನಭಾವ ಉಂಟೆ ? ಸಕಲ ನಿಷ್ಕಲ ತತ್ವಂಗಳು; ನಿಮ್ಮೊಳಗೆ ಸಮಾಸವನೆಯ್ದುವೆವೆಂದು ತಮ್ಮ ತಮ್ಮ ಅಂಗದ ಮೇಲೆ ಸರ್ವಪದಾರ್ಥಂಗಳ ಹೆಸರಿಟ್ಟು ಹೊತ್ತುಕೊಂಡೈದಾವೆ ನೋಡಾ ! ಅದೆಂತೆಂದಡೆ: ``ದ್ರವ್ಯಾರ್ಥಂ ಚ ಮಹಾದೇವೋ ದ್ರವ್ಯರೂಪೋ ಮಹೇಶ್ವರಃ ಇತಿ ಮೇ ಭೇದನಂ ನಾಸ್ತಿ ಸರ್ವರೂಪಸ್ಸದಾಶಿವಃ'' _ ಇಂತೆಂದುದಾಗಿ_ನಾದ ನೀನು, ಬಿಂದು ನೀನು, ಕಳೆ ನೀನು, ಕಳಾತೀತ ನೀನು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಪೃಥ್ವಿಯಲ್ಲಿ ಗಂಧವಿಹುದು, ಅಪ್ಪುವಿನಲ್ಲಿ ರಸವಿಹುದು, ತೇಜದಲ್ಲಿ ರೂಪವಿಹುದು, ವಾಯುವಿನಲ್ಲಿ ಸ್ಪರ್ಶವಿಹುದು, ಆಕಾಶದಲ್ಲಿ ಶಬ್ದವಿಹುದು, ತೃಪ್ತಿಯಲ್ಲಿ ಆತ್ಮನೆಂಬ ಮಹಾಭೂತಾಶ್ರಯವಾಗಿಹುದು ನೋಡಾ. ಇದಕ್ಕೆ ಶಿವಪ್ರಕಾಶಾಗಮೇ : ``ಸುಗಂಧಃ ಪೃಥ್ವೀಮಾಶ್ರಿತ್ಯ ಸುರಸೋ ಜಲಮಾಶ್ರಿತಾಃ | ರೂಪ ತೇಜ ಆಶ್ರಿತ್ಯ ಸ್ಪರ್ಶನಂ ವಾಯುಮಾಶ್ರಿತಂ || ಶಬ್ದಮಾಕಾಶಮಾಶ್ರಿತ್ಯ ಆತ್ಮಾ ಚ ತೃಪ್ತಿ ಆಶ್ರಯಾಃ | ಇತಿ ಷಡಿಂದ್ರಿಯಂ ದೇವಿ ಸ್ಥಾನೇ ಸ್ಥಾನೇ ಸಮಾಚರೇತ್ || '' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನು ಅಖಂಡಪರಿಪೂರ್ಣ ಅಪ್ರಮಾಣ ಅಗೋಚರ ಅಪ್ರಮೇಯ ಅವ್ಯಕ್ತ ಅನಂತತೇಜ ಅನಂತಪ್ರಚಯ ಅನಂತಕೋಟಿ ಸೂರ್ಯಚಂದ್ರಾಗ್ನಿಪ್ರಕಾಶವಾಗಿಹ ಮಹಾಘನಲಿಂಗದಲ್ಲಿ ವಿಶ್ವತೋ ಮುಖ, ವಿಶ್ವತೋ ಚಕ್ಷು, ವಿಶ್ವತೋ ಹಸ್ತ, ವಿಶ್ವತೋ ಪಾದ, ವಿಶ್ವತೋ ಬಾಹುವನುಳ್ಳ ಅನಾದಿ ಸದಾಶಿವತತ್ವ ಉತ್ಪತ್ಯವಾಯಿತ್ತು. ಆ ಸದಾಶಿವನ ಈಶಾನಮುಖದಲ್ಲಿ ಆಕಾಶ ಉತ್ಪತ್ಯವಾಯಿತ್ತು. ಆ ಅನಾದಿ ಶಿವತತ್ವದಿಂದ ಅನೇಕ ಮುಖ, ಅನೇಕ ಚಕ್ಷು, ಅನೇಕ ಬಾಹು, ಅನೇಕ ಪಾದವನುಳ್ಳ ಅನಾದಿ ಈಶ್ವರತತ್ವ ಉತ್ಪತ್ಯವಾಯಿತ್ತು. ಆ ಅನಾದಿ ಈಶ್ವರತತ್ವದಲ್ಲಿ ಸಹಸ್ರ ಶಿರ, ಸಹಸ್ರ ಅಕ್ಷ, ಸಹಸ್ರ ಬಾಹು, ಸಹಸ್ರ ಪಾದವನುಳ್ಳ ಅನಾದಿ ಮಹೇಶ್ವರತತ್ವ ಉತ್ಪತ್ಯವಾಯಿತ್ತು. ಆ ಅನಾದಿ ಮಹೇಶ್ವರತತ್ವದಲ್ಲಿ ತ್ರಿಪಂಚಮುಖ, ತ್ರಿದಶಭುಜ, ತ್ರಿದಶಪಾದವನುಳ್ಳ ಆದಿ ಸದಾಶಿವ ಉತ್ಪತ್ಯವಾಯಿತ್ತು. ಆ ಆದಿ ಸದಾಶಿವತತ್ವದಲ್ಲಿ ಷಷ್ಠ ವಕ್ತ್ರ, ದ್ವಾದಶಭುಜ, ತ್ರಿಪಾದವನುಳ್ಳ ಆದಿ ಈಶ್ವರತತ್ವ ಉತ್ಪತ್ಯವಾಯಿತ್ತು. ಆ ಆದಿ ಈಶ್ವರತತ್ವದಲ್ಲಿ ಪಂಚವಿಂಶತಿ ಮುಖ, ಪಂಚದಶಭುಜವನುಳ್ಳ ಸದಾಶಿವತತ್ವ ಉತ್ಪತ್ಯವಾಯಿತ್ತು. ಇದಕ್ಕೆ ಅತಿ ಮಹಾಗಮೇ : ``ಅಖಂಡಲಿಂಗ ಸಂಭೂತಾ ಅನಾದಿ ಸಾದಾಖ್ಯಸ್ತಥಾ | ಅನಾದಿ ವಿಶ್ವತೋಮುಖತತ್ವೇ ಚ ಅನಾದಿ ಈಶ್ವರೋದ್ಭವಃ || ಅನಾದಿ ಈಶ್ವರತತ್ವೇ ಚ ಅನಾದಿ ಮಾಹೇಶ್ವರೋ ಭವೇತ್ | ಅನಾದಿ ಮಾಹೇಶ್ವರ ಶಂಭುತೊ ಆದಿ ಸದಾಖ್ಯ ಸ್ತಥಾ || ಆದಿ ಸಾದಾಖ್ಯತತ್ವೇ ಚ ಆದಿ ಈಶ್ವರೋದ್ಭವಂ | ಆದಿ ಈಶ್ವರತತ್ವೇ ಚ ಆದಿ ಮಾಹೇಶ್ವರೋ ಭವೇತ್ || ಆದಿ ಮಾಹೇಶ್ವರ ಶಂಭುತೊ ಶಿವಸದಾಶಿವಾಯುವೋ | ಇತಿ ತತ್ವೋದ್ಭವಜ್ಞಾನಂ ದುರ್ಲಭಂ ಕಮಲಾನನೇ|| '' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಮಿಂಚುಬುಳು ಒಮ್ಮೆ ಪ್ರಚಂಡ ತೇಜೋಮಯ ಸೂರ್ಯಂಗೆ ಸರಿಯಾದಂದು, ಹರಿ ಹರಂಗೆ ಸರಿಯಹನು. ಕಹಿಬೇವಿನ ಕೊರಡು ಬಾವನ್ನ ಶ್ರೀಗಂಧಕ್ಕೆ ಸರಿಯಾದಂದು, ವಿರಿಂಚಿ ಗಿರೀಶಂಗೆ ಸರಿಯಹನು. ಅಜ್ಞಾನ ಸುಜ್ಞಾನಕ್ಕೆ ಸರಿಯಾದಂದು, ವಜ್ರಪಾಣಿ ಮೊದಲಾದ ದೇವ ದಾನವ ಮಾನವರು ಶೂಲಪಾಣಿಗೆ ಸರಿಯಹರು. ಏನ ಹೇಳುವೆ, ಅಜ್ಞಾನಿ ಜನರ ಅಜ್ಞಾನಪ್ರಬಲ ಚೇಷ್ಟೆಯನು ? ಅದೆಂತೆಂದಡೆ: ಖದ್ಯೋತೋಯದಿ ಚಂಡಭಾನು ಸದೃಶಸ್ತುತ್ಯೋ ಹರಿಃ ಶಂಭುನಾ ಕಿಂ ಕಾಷ್ಠಂ ಹರಿಚಂದನೇನ ಸದೃಶಂ ತುಲ್ಯೋಹಮೀಶೇನ ಚ | ಅಜ್ಞಾನಂ ಯದಿ ವೇದನೇನ ಸದೃಶಂ ದೇವೇನ ತುಲ್ಯೋ ಜನಾ ಕಿಂ ವಕ್ಷ್ಯೇ ಸುರಪುಂಗವಾ ಅಹಮಹೋಮೋಹಸ್ಯದುಶ್ಚೇಷ್ಟಿತಂ ನಿಮಗೆ ಸರಿಯೆಂಬವರಿಗೆ ನರಕವೆ ಗತಿಯಯ್ಯಾ, ಬಸವಪ್ರಿಯ ಕೂಡಲಸಂಗಮದೇವಾ.
--------------
ಸಂಗಮೇಶ್ವರದ ಅಪ್ಪಣ್ಣ
ಅಖಂಡಜ್ಯೋತಿರ್ಮಯವಾಗಿಹ ಗೋಳಕಾಕಾರ ಪ್ರಣವದ ಜ್ಯೋತಿಸ್ವರೂಪದಲ್ಲಿ- ಹೃದಯಮಂತ್ರೋ ಭವತಿ | ಓಂ ಪರಮಾತ್ಮಾ ದೇವತಾ | ಜ್ಯೋತಿರೂಪೋ ಲಯಂ ಪ್ರಾಪ್ತೆ ೀ ಪ್ರಥಮಂ ಪ್ರಣವಾಂಶಕೇ || ಆ ಪ್ರಣವದ ದರ್ಪಣಾಕಾರದಲ್ಲಿ- ``ಶಿರೋಮಂತ್ರೋ ಭವತಿ | ಓಂ ಯಕಾರಾತ್ಮಾ ದೇವತಾ | ದರ್ಪಣೇ ಚ ಲಯಂ ಪ್ರಾಪ್ತೇ ದ್ವಿತೀಯಂ ಪ್ರಣವಾಂಶಕೇ ||'' ಆ ಪ್ರಣವದ ಅರ್ಧಚಂದ್ರಕದಲ್ಲಿ- ``ಶಿಖಾಮಂತ್ರೋ ಭವತಿ | ಓಂ ಅಕಾರಾತ್ಮಾ ದೇವತಾ | ಅರ್ಧಚಂದ್ರೇ ಲಯಂ ಪ್ರಾಪ್ತೇ ತೃತೀಯಂ ಪ್ರಣವಾಂಶಕೇ ||'' ಆ ಪ್ರಣವದ ಕುಂಡಲಾಕಾರದಲ್ಲಿ- ``ಕವಚಮಂತ್ರೋ ಭವತಿ | ಓಂ ಶಿಕಾರಾತ್ಮಾ ದೇವತಾ | ಕುಂಡಲೇ ಚ ಲಯಂ ಪ್ರಾಪ್ತೇ ಚತುರ್ಥಂ ಪ್ರಣವಾಂಶಕೇ ||'' ಆ ಪ್ರಣವದ ದಂಡಸ್ವರೂಪದಲ್ಲಿ- ``ನೇತ್ರಮಂತ್ರೋ ಭವತಿ | ಓಂ ಮಕಾರಾತ್ಮಾ ದೇವತಾ | ದಂಡರೂಪೇ ಚ ಲಯಂ ಪ್ರಾಪ್ತೇ ಪಂಚಮಂ ಪ್ರಣವಾಂಶಕೇ ||'' ಆ ಪ್ರಣವದ ತಾರಕಸ್ವರೂಪದಲ್ಲಿ- ``ಅಸ್ತ್ರಮಂತ್ರೋ ಭವತಿ | ಓಂ ನಕಾರಾತ್ಮಾ ದೇವತಾ | ತಾರಕೇ ಚ ಲಯಂ ಪ್ರಾಪ್ತೇ ಷಷ್ಠಮಂ ಪ್ರಣವಾಂಶಕೇ ||'' ಇಂತೆಂದುದು ಶ್ರುತಿ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಬ್ರಹ್ಮವೆಂಬ ವೃಕ್ಷದಲ್ಲಿ ಫಲಪತ್ರಕುಸುಮಂಗಳೆಂಬ ಸಚರಾಚರಂಗಳಷ್ಟಮೂರ್ತಿಗಳಾಗಿ ಆಗಿ ಆಗಿ ಅಳಿವುತ್ತಿಪ್ಪವಯ್ಯಾ. ಇದಕ್ಕೆ ಶ್ರುತಿ: ಬ್ರಹ್ಮಣೋ ವೃಕ್ಷಾನ್ಮಹತೋ ಪತ್ರಂ ಕುಸುಮಿತಂ ಫಲಂ ಚರಾಚರಾಷ್ಟಮೂರ್ತಿಂ ಚ ಫಲಿತಂ ಫಲಶೂನ್ಯವತ್ ಇಂತೆಂದುದಾಗಿ, ಅಷ್ಟಮೂರ್ತಿಗಳು ನಷ್ಟವಾದಲ್ಲಿ ಸೌರಾಷ್ಟ್ರ ಸೋಮೇಶ್ವರಲಿಂಗ ನಷ್ಟವಾಯಿತ್ತೆಂಬ ಮಿಟ್ಟಿಯ ಭಂಡರನೇನೆಂಬೆನಯ್ಯಾ.
--------------
ಆದಯ್ಯ
ವೇದ ವೇದಂಗಳೆಲ್ಲ ಶಿವನ ಹೊಗಳಿ ನಿರ್ಮಲವಾದವು ನೋಡಾ `ಓಂ ನಮಃ ಸೋಮಾಯ ಚ ರುದ್ರಾಯ ಚ' ಎಂದು ವೇದವಾಕ್ಯ ನೋಡಾ. `ನಮಸ್ತಾಮ್ರಾಯ ಚಾರುಣಾಯ ಚ' ಎಂದು ಪಂಡಿತಮುಖಪ್ರಸಿದ್ಧ ನೋಡಾ. `ನಮಃ ಶೃಂಗಾಯ ಚ ಪಶುಪತಯೇ ಚ' ಎಂದು ವೇದಾಧ್ಯಾಯಿಗಳರಿಕೆ ನೋಡಾ. `ನಮಃ ಶಿವಾಯ ಚ ಶಿವತರಾಯ ಚ' ಎಂದು ಕಪಿಲಸಿದ್ಧಮಲ್ಲಿಕಾರ್ಜುನನ ಪಂಚಮುಖದಲ್ಲಿ ನಿತ್ಯ ನಿತ್ಯ ಘೋಷ ನೋಡಾ, ಕೇದಾರಯ್ಯಾ.
--------------
ಸಿದ್ಧರಾಮೇಶ್ವರ
ಅರ್ಪಿತದಲ್ಲಿ ಅವಧಾನವರತು, ಅನರ್ಪಿತದಲ್ಲಿ (ಅರ್ಪಿತದಲ್ಲಿ?) ಸುಯಿಧಾನವರತು. ಬಂದುದು ಬಾರದುದೆಂದರಿಯದೆ, ನಿಂದ ನಿಲವಿನ ಪರಿಣಾಮತೆಯಾಯಿತ್ತು. ರುಚಿ ರೂಪಂ ನ ಚ ಜ್ಞಾನಂ ಅರ್ಪಿತಾನರ್ಪಿತಂ ತಥಾ ಆದೌ ಪ್ರವರ್ತತೇ ಯಸ್ಯ ಶಿವೇನ ಸಹಮೋದತೇ ಎಂಬುದಾಗಿ, ಕೂಡಲಚೆನ್ನಸಂಗಯ್ಯಾ. ನಿಮ್ಮವರು ಶಿವಸುಖಸಂಪನ್ನರಾದರಯ್ಯಾ.
--------------
ಚನ್ನಬಸವಣ್ಣ
ಇನ್ನಷ್ಟು ... -->