ಅಥವಾ

ಒಟ್ಟು 118 ಕಡೆಗಳಲ್ಲಿ , 2 ವಚನಕಾರರು , 118 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನವಿಕಾರದಲ್ಲಿ ತೋರುವ ಸುಳುಹು ತನುವಿಕಾರದಲ್ಲಿ ಕಾಣಿಸಿಕೊಂಡ ಮತ್ತೆ ಅರಿವಿನ ಭೇದ ಎಲ್ಲಿ ಅಡಗಿತ್ತು ? ಅರಿದು ತೋರದ ಮತ್ತೆ ನೆರೆ ಮುಟ್ಟಬಲ್ಲುದೆ ತ್ರಿವಿಧದ ಗೊತ್ತ ? ಇಂತೀ ಭಗಧ್ಯಾನರನೊಪ್ಪ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವು.
--------------
ಪ್ರಸಾದಿ ಭೋಗಣ್ಣ
ವೇದಶ್ರುತಿಯಿಂದ ವಸ್ತುವನರಿತೆಹೆನೆಂದಡೆ ಆ ವೇದವೆ ಹಾದಿಯೆ ವಸ್ತುವ ಕಾಬುದಕ್ಕೆ ? ಆ ವೇದ ಸರ್ವವು ಬ್ರಹ್ಮವೆಂದಲ್ಲಿ ವಸ್ತು ಎಲ್ಲಿ ಉಳಿಯಿತ್ತು ? ಆ ತೆರನ ತಿಳಿದು ವೇದವಾರನರಸಿತ್ತು ? ಶ್ರುತಿ ಯಾರ ಭೇದಿಸಿತ್ತು ? ಆ ಗುಣ ನಾದಬಿಂದುಕಳೆಯೊಳಗಾದಲ್ಲಿ ವಸ್ತುತತ್ವರೂಪಾಯಿತ್ತು. ಆ ಸ್ವರೂಪದ ಭೇದದಿಂದ ಪಂಚಭೌತಿಕದ ಗುಣದಿಂದ ಪಂಚವಿಂಶತಿತತ್ವಂಗಳೆಲ್ಲವೂ ಗೊತ್ತಾದವು. ನಾಲ್ಕು ವೇದ, ಹದಿನಾರು ಶಾಸ್ತ್ರ, ಇಪ್ಪತ್ತೆಂಟು ದಿವ್ಯಪುರಾಣಂಗಳಲ್ಲಿ ವೇದ್ಥಿಸಿ ಭೇದಿಸಿ ಕಂಡೆನೆಂಬಲ್ಲಿ ನಿಂದಿತ್ತು ನಿಜ ಸಂದೇಹಕ್ಕೆ ಒಳಗಾದುದಾಗಿ. ತರ್ಕಂಗಳಿಂದ ತರ್ಕಿಸಿ ನೋಡಿ ಮಿಕ್ಕಾದ ತತ್ವಂಗಳಲ್ಲಿ ಲಕ್ಷಿಸಿ ಪ್ರಮಾಣಿಸಿದಲ್ಲಿ ವಸ್ತು ಹಲವು ಕುಲವೆಂದು ಕಲ್ಪಿಸಿ ನುಡಿವಲ್ಲಿ ವಿಭೇದ ಪಕ್ಷವಲ್ಲದೆ ವಸ್ತು ಏಕರೂಪು. ಜಲ ಬಹುನೆಲಂಗಳಲ್ಲಿ ನಿಂದು ಒಲವರವಿಲ್ಲದೆ ಸಸಿ ವೃಕ್ಷಂಗಳ ಸಲಹುವಂತೆ ಸರ್ವಗುಣಸಂಪನ್ನನಾದೆಯಲ್ಲಾ ಪರಮಪ್ರಕಾಶ ಪರಂಜ್ಯೋತಿ ಪಂಚಬ್ರಹ್ಮಸ್ವರೂಪನಾದೆಯಲ್ಲಾ ಎನಗೆ ನೀನಾದೆಹೆನೆಂದು ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗಾ.
--------------
ಪ್ರಸಾದಿ ಭೋಗಣ್ಣ
ಸ್ಥಲಂಗಳ ಭೇದ ವಿವರ: ವೇಣು ವೀಣೆ ಮೌರಿ ವಾದ್ಯಂಗಳಲ್ಲಿ ವಾಯು ಅಂಗುಲಿಯ ಭೇದದಿಂದ ರಚನೆಗಳ ತೋರುವಂತೆ ಘಟದ ಸ್ಥೂಲ ಸೂಕ್ಷ್ಮಂಗಳಲ್ಲಿ ತ್ರಾಣ ತತ್ರಾಣವಾದಂತೆ ಅದು ಭಾವಜ್ಞಾನ ಷಟ್‍ಸ್ಥಲ ಕ್ರಿಯಾಭೇದದ ವಾಸ. ಇಂತೀ ಉಭಯದೃಷ್ಟ ನಾಶವಹನ್ನಕ್ಕ ಐಕ್ಯಲೇಪನಲ್ಲಿ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ಲಿಂಗವೇ ಪ್ರಾಣವಾದ ಮತ್ತೆ ಬೇರೆ ನೆನೆಯಿಸಿಕೊಂಬುದು ಇನ್ನಾವುದಯ್ಯಾ ? ಇದಿರಿಟ್ಟು ಬಂದುದ ಮುನ್ನವೆ ಮುಟ್ಟಿ ಅರ್ಪಿತ ಅವಧಾನಂಗಳಲ್ಲಿ ಸೋಂಕಿದ ಮತ್ತೆ ಪುನರಪಿಯಾಗಿ ಸೋಂಕಿದಡೆ ನಿರ್ಮಾಲ್ಯ ಕಂಡಯ್ಯಾ. ಮೊನೆಗೂಡಿ ಹಾಯ್ವ ಕಣೆಯಂತೆ ಅರ್ಪಿತಾಂಗ ಸಂಗಭೇದ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವನರಿದಲ್ಲಿ.
--------------
ಪ್ರಸಾದಿ ಭೋಗಣ್ಣ
ರಸ ಗಂಧ ರೂಪು ಶಬ್ದ ಸ್ಪರ್ಶ ಪಂಚೇಂದ್ರಿಯಂಗಳಲ್ಲಿ ಅರ್ಪಿಸುವನ್ನಕ್ಕ ಭಕ್ತ. ರೂಪು ರುಚಿಯ ಕಂಡರ್ಪಿಸುವನ್ನಕ್ಕ ಮಾಹೇಶ್ವರ. ಇಚ್ಫೆಯನರಿತು ಸಾಕು ಬೇಕೆಂಬನ್ನಕ್ಕ ಪ್ರಸಾದಿ. ಕಂಡಲ್ಲಿ ಮುಟ್ಟದೆ ಕಾಣಿಸಿಕೊಂಡು ಮುಟ್ಟಿಹೆನೆಂಬಲ್ಲಿ ಪ್ರಾಣಲಿಂಗಿ. ವಂದನೆ ನಿಂದೆಗೆ ಒಳಗಹನ್ನಕ್ಕ ಶರಣ. ಮುಟ್ಟುವ ತಟ್ಟುವ ತಾಗುವ ಸೋಂಕುವ ಸುಖವನರಿದು ಕೂಡಬೇಕೆಂಬನ್ನಕ್ಕ ಐಕ್ಯ. ಆ ಗುಣ ಪರುಷವ ಸೋಂಕಿದ ಲೋಹದಂತಾದುದು ಷಟ್‍ಸ್ಥಲ. ಇಂತೀ ಆರನವಗವಿಸಿ ಬೇರೊಂದು ತೋರದಿಪ್ಪುದು ಐಕ್ಯಸ್ಥಲಲೇಪಭೇದ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ಪ್ರಥಮಾಂಗುಲದಲ್ಲಿ ಉಪದೃಷ್ಟ. ಉಭಯಾಂಗುಲದಲ್ಲಿ ಕರ್ಮಕ್ರೀ. [ತ್ರಿವಿ]ಧಾಂಗುಲದಲ್ಲಿ ಸಂ[ಶ]ಯಸಿದ್ಧಿ. ಚತುರ್ವಿಧ ಅಂಗುಲದಲ್ಲಿ ಚತುರ್ವಿಧ ಫಲಪದ. ಪಂಚಮಪಕ್ಷದಲ್ಲಿ ಸಂಚಿತ ಪ್ರಾರಬ್ಧ ಆಗಾಮಿಗಳೆಂಬ ಭವದ ಗೊಂಚಲ ಸಂಚಂಗಳಿಲ್ಲ. ಇದು ಪಂಚಾಕ್ಷರಿಯ ಪ್ರಣಮಮಂತ್ರದ ಕ್ರೀ ಆಚಾರ್ಯನಂಗ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ರತ್ನದ ಪುಂಜವ ಬೆಗಡವನಿಕ್ಕುವಲ್ಲಿ ಮೊನೆ ಮುಂದೆ ಸವೆದ ಮತ್ತೆ ಪೂರ್ವಕ್ಕೆ ಉತ್ತರವಿಲ್ಲ. ನಿಶ್ಚೈಸಿ ಉತ್ತರ ಕಡೆಗಾಣಿಸಿದಲ್ಲಿ ಮುಟ್ಟಿ ಮುಂಚುವ ಅರ್ಪಿತ ಅಲ್ಲಿಯೆ ಉಪದೃಷ್ಟ ನಷ್ಟ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ಭಕ್ತಂಗೆ ಸ್ಪರ್ಶನ ವಿಷಯವಳಿದು ಮಾಹೇಶ್ವರಂಗೆ ಅಪ್ಪು ವಿಷಯವಳಿದು ಪ್ರಸಾದಿಗೆ ರುಚಿ ವಿಷಯವಳಿದು ಪ್ರಾಣಲಿಂಗಿಗೆ ಉಭಯದ ಭೇದ ವಿಷಯವಳಿದು ಶರಣಂಗೆ ಸುಖದುಃಖ ವಂದನೆ ನಿಂದೆ ಅಹಂಕಾರ ಭ್ರಮೆ ವಿಷಯವಳಿದು ಐಕ್ಯಂಗೆ ಇಂತೀ ಐದರ ಭೇದದಲ್ಲಿ ಹಿಂದಣ ಮುಟ್ಟು ಮುಂದಕ್ಕೆ ತಲೆದೋರದೆ ಮುಂದಣ ಹಿಂದಣ ಸಂದೇಹದ ವಿಷಯ ನಿಂದು ಕರ್ಪುರವುಳ್ಳನ್ನಕ್ಕ ಉರಿಯ ಭೇದ ಉರಿವುಳ್ಳನ್ನಕ್ಕ ಕರ್ಪುರದಂಗ. ಉಭಯ ನಿರಿಯಾಣವಾದಲ್ಲಿ ಐಕ್ಯಸ್ಥಲ ನಾಮನಿರ್ಲೇಪ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ವೇದದ ಉತ್ತರವ ವಿಚಾರಿಸಿ, ಶಾಸ್ತ್ರದ ಸಂದೇಹವ ನಿಬದ್ಧಿಸಿ ಪುರಾಣದ ಅಬ್ಥಿಸಂದ್ಥಿಯ ತಿಳಿದು ಇಂತಿವು ಮೊದಲಾದ ಆಗಮಂಗಳಲ್ಲಿ ಚಿಂತಿಸಿಯೆ ನೋಡಿ ಸಕಲಯುಕ್ತಿ ಶಬ್ದಸೂತ್ರಂಗಳಲ್ಲಿ ಪ್ರಮಾಣಿಸಿಯೆ ಕಂಡು ಮಾತುಗಂಟಿತನದಲ್ಲಿ ತರ್ಕಶಾಸ್ತ್ರಂಗಳಿಗೆ ಹೋಗದೆ ಪಂಚವಿಂಶತಿತತ್ವದೊಳಗಾದ ಆಧ್ಯಾತ್ಮ ಆದಿಭೌತಿಕವ ತಿಳಿದು ಪಂಚಭೂತಿಕದ ಸಂಚಿತ ಪ್ರಾರಬ್ಧ ಆಗಾಮಿಗಳ ಸಂಚಿನ ಸಂಕಲ್ಪವ ತಿಳಿದು ಪೃಥ್ವಿತತ್ವದ ಮಲ, ಅಪ್ಪುತತ್ವದ ಸಂಗ, ತೇಜತತ್ವದ ದಗ್ಧ, ವಾಯುತತ್ವದ ಸಂಚಲ, ಆಕಾಶತತ್ವದ ಬಹುವರ್ಣಕೃತಿ. ಇಂತೀ ಪಂಚಭೂತಿಕಂಗಳಲ್ಲಿ ತಿಳುವಳವಂ ಕಂಡು ಕರಂಡದಲ್ಲಿ ನಿಂದ ಗಂಧದಂತೆ ತನ್ನಂಗವಿಲ್ಲದೆ ಗಂಧ ತಲೆದೋರುವಂತೆ ವಸ್ತುಘಟಭೇದವಾದ ಸಂಬಂಧ. ಇಂತೀ ತೆರನ ತಿಳಿದು ವಾಗ್ವಾದಂಗಳಲ್ಲಿ ಹೋರಿಹೆನೆಂದಡೆ ಮಹಾನದಿಯ ವಾಳುಕದ ಮರೆಯ ನೀರಿನಂತೆ ಚೆಲ್ಲಿ ಕಂಡೆಹೆನೆಂದಡೆ ಆ ನದಿವುಳ್ಳನ್ನಕ್ಕ ಕಡೆಗಣಿಸಬಾರದು. ನಿಂದಲ್ಲಿ ಪ್ರಮಾಣುವಿಂದಲ್ಲದೆ ಮೀರಿ ತುಂಬದಾಗಿ ಇಂತೀ ಶ್ರುತ್ಯರ್ಥವಿಚಾರದಿಂದ ಹಾಕಿದ ಮುಂಡಿಗೆ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವಲ್ಲದಿಲ್ಲಾಯೆಂದು.
--------------
ಪ್ರಸಾದಿ ಭೋಗಣ್ಣ
ಅಂಗ ಮನ ಪ್ರಾಣಂಗಳೆಂಬಲ್ಲಿ ಘನಲಿಂಗವಿಪ್ಪೆಡೆ ಯಾವುದು ? ಪಂಕಕ್ಕೆ ಜಲ ಒಳಗೋ, ಹೊರಗೋ ? ಅಂಗಕ್ಕೂ ಮನಸ್ಸಿಂಗೂ ಆತ್ಮಂಗೂ ಲಿಂಗವ ಹಿಂಗಿ ಅರಿವ ಠಾವಿನ್ನಾವುದು ? ಬೀಜದೊಳಗಾದ ವೃಕ್ಷ, ವೃಕ್ಷದೊಳಗಾದ ಬೀಜ ಈ ಉಭಯವ ಮೀರಿ ಬೆಳೆವ ಠಾವಿನ್ನಾವುದೊ ? ಮೊನೆಗೂಡಿಯೆ ಗ್ರಹಿಸುವ ಅಲಗಿನ ತೆರದಂತೆ ಅದು ಲಿಂಗಾಂಗಸಂಯೋಗಸಂಬಂಧ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ಧ್ಯಾನದಿಂದ ಮನದ ಕೊನೆಯಲ್ಲಿ ವಸ್ತುವ ಕಟ್ಟಿತಂದು ಇಷ್ಟಲಿಂಗದ ಗೊತ್ತಿನಲ್ಲಿ ಬೈಚಿಟ್ಟಿರಬೇಕೆಂಬುದು ಇದಾರ ದೃಷ್ಟವಯ್ಯಾ ? ಆ ದೃಷ್ಟಕ್ಕೆ ಆ ಮೂರ್ತಿ ಒಂದೆಂಬುದನರಿಯದೆ ನೆನೆವುದು ನೆನೆಹಿಸಿಕೊಂಬುದು ಉಭಯವಾದಲ್ಲಿ ಸಂದೇಹದ ಸಂದು. ಆ ಸಂದನಳಿದಲ್ಲಿ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವು ತಾನು ತಾನೆ.
--------------
ಪ್ರಸಾದಿ ಭೋಗಣ್ಣ
ಗುರುವೆಂದು ಇದಿರಿಟ್ಟಲ್ಲಿ ಗುರುದ್ರೋಹ. ಲಿಂಗವೆಂದು ಸಂದೇಹಿಸಿದಲ್ಲಿ ಲಿಂಗದ್ರೋಹ. ಜಂಗಮವೆಂದು ಉಭಯದಲ್ಲಿಕಂಡಡೆ ಜಂಗಮದ್ರೋಹ. ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವೆಂದು ಇದಿರೆಡೆಯಾಡಿದಡೆ ಮಹಾದ್ರೋಹ.
--------------
ಪ್ರಸಾದಿ ಭೋಗಣ್ಣ
ಘಟಾಕಾಶ ಮಠಾಕಾಶದಲ್ಲಿ ತೋರುವ ಬೆಳಗು ಘಟಮಠವೆಂಬ ಉಭಯ ಇರುತಿರಲಿಕ್ಕೆ ರೂಪುಗೊಂಡಿತ್ತು. ಬಯಲು ಘಟಮಠವೆಂಬ ಭೇದಂಗಳಳಿಯಲಾಗಿ ಆಕಾಶತತ್ವದಲ್ಲಿ ನಿಶ್ಚಿಂತವನೆಯ್ದಿ ಮಹದಾಕಾಶದಲ್ಲಿ ಲೀಯವಾದುದು ವ್ಯತಿರಿಕ್ತವೆಂಬುದು ನಾಮಶೂನ್ಯ, ಐಕ್ಯನ ಅರ್ಪಿತಸ್ಥಲ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ಸುಖ ದುಃಖ ಭೋಗಾದಿ ಭೋಗಂಗಳೆಲ್ಲವೂ ಗುರು ಲಿಂಗ ಜಂಗಮದ ಒಡಲಾಗಿ ಬೆಳೆವುತ್ತಿಹವು. ತಾನವ ಒಡಲುಗೊಂಡು ಮಾಡುವ ಕಾರಣ ತನ್ನ ಬೆಂಬಳಿಯ ಮಾಯೆ. ಅವ ಹಿಂಗಿ ತನ್ನ ತಾನರಿತಲ್ಲಿ ಚನ್ನಬಸವಣ್ಣಪ್ರಿಯ ಚಂದೇಶ್ವರಲಿಂಗವ ಕಾಣಬಂದಿತ್ತು.
--------------
ನುಲಿಯ ಚಂದಯ್ಯ
ಜಂಗಮ ನಮಸ್ಕಾರವೆ ಗುರುಪೂಜೆ, ಜಂಗಮ ಪೂಜೆಯ ಲಿಂಗಪೂಜೆ, ಜಂಗಮ ತೃಪ್ತಿಯೆ ತನಗೆ ಪ್ರಸನ್ನ. ತನಗೆ ಪ್ರಸನ್ನವಾದುದೆ ನಿತ್ಯಪ್ರಸಾದದಾಗು, ಚನ್ನಬಸವಣ್ಣಪ್ರಿಯ ಚಂದೇಶ್ವರಲಿಂಗಕ್ಕೆ ಕಟ್ಟುಗೊತ್ತು ಕಾಣಾ! ಸಂಗನ ಬಸವಣ್ಣ ಪ್ರಭುವೆ.
--------------
ನುಲಿಯ ಚಂದಯ್ಯ
ಇನ್ನಷ್ಟು ... -->