ಮೂಲಾಧಾರ ಮುಂತಾದ ಷಡಾಧಾರಂಗಳಲ್ಲಿ
ಆಶ್ರಯವರ್ಣ ದಳವರ್ಣ ಭಾವವರ್ಣ ಆತ್ಮವರ್ಣ
ಅಕ್ಷರವರ್ಣ ಸ್ಥಲವರ್ಣಂಗಳ ಕಲ್ಪಿಸಿ,
ಭೇದಕ್ರೀಯಿಂದ ಅರಿಯಬೇಕಾಗಿ
ಕ್ರೀ ಮೂರು, ಸ್ಥಲವಾರು, ತತ್ವವಿಪ್ಪತ್ತೈದು,
ಕಥನ ಮೂವತ್ತಾರು, ಪ್ರಸಂಗ ನೂರೊಂದರಲ್ಲಿ ನಿರ್ವಾಹ.
ಈ ಏಕವಸ್ತು ತ್ರಿಗುಣಾತ್ಮಕವಾದ ಸಂಬಂಧ.
ಇಂತಿವನರಿತೆಹೆನೆಂದು ಒಂದಕ್ಕೊಂದು ಸಂದನಿಕ್ಕದೆ
ಗುರುವಿನ ಕಾರುಣ್ಯವನರಿತು, ಲಿಂಗದಲ್ಲಿ ಚಿತ್ತವ ಮೂರ್ತಿಗೊಳಿಸಿ
ಜಂಗಮದಲ್ಲಿ ಸತ್ವಕ್ಕೆ ತಕ್ಕ ಸಾಮಥ್ರ್ಯದಲ್ಲಿ ಭಕ್ತಿಯನೊಪ್ಪಿ
ನಿಶ್ಚಯನಾಗಿಪ್ಪುದೆ ಭಕ್ತಿಯ ಅಂಗಕ್ಕೆ ಇಕ್ಕಿದ ಗೊತ್ತು ವಿಶ್ವಸ್ಥಲ ನಿರ್ವಾಹ.
ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ,
ಮಾತುಳಂಗ ಮಧುಕೇಶ್ವರನು.
|| 77 ||