ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಹಭೋಜನವ ಮಾಡುವನ ಇರವು ಹೇಗೆಂದಡೆ: ದಗ್ಧಪಟದಂತೆ, ಮಂಜಿನ ರಂಜನೆಯ ವಾರಿಯ ಧೂಮದಂತೆ, ಒಡಲಿನ ಆತ್ಮನ ಭೇದದಂತಿರಬೇಕು. ಆಕಾಶದ ಸಾಕಾರದಲ್ಲಿ ತೋರುವ ನಾನಾ ಛಾಯದಂತೆ, ಒಂದು ವರ್ಣದಲ್ಲಿ ನಿಲ್ಲದೆ ತೋರುವ ತೋರಿಕೆಯಂತೆ, ಕಾಯದ ಛಾಯವ ತೊಟ್ಟಿದ್ದಲ್ಲಿ ಲಿಂಗಕ್ಕೂ ತನಗೂ ಸಹಭೋಜನ ಸಲವುದೆಂದೆ. ಅದು ಉರಿಯೊಳಗಳ ಕರ್ಪುರದಂತೆ, ಕರ್ಪುರದೊಳಗಳ ಉರಿಯಂತೆ. ಅನ್ಯಬ್ಥಿನ್ನವಿಲ್ಲದಿರಬೇಕು, ಸದಾಶಿವಮೂರ್ತಿಲಿಂಗದಲ್ಲಿ.
--------------
ಅರಿವಿನ ಮಾರಿತಂದೆ
ಕಣ್ಣು ನೀರ ನುಂಗಿದಂತೆ, ಬಣ್ಣ ಛಾಯವ ನುಂಗಿದಂತೆ, ಉರಿ ಸಾರವ ಕೊಂಡಂತೆ, ನಿರುತ ನಿರ್ವಾಣವಾದಂತೆ, ಸರಶಂಕೆಯ ಬಿಟ್ಟು, ಶರಧಿಯ ಒಡಗೂಡಿದಂತೆ, ತನುವಿನ ಸುಂಕವ ಮನೆದೆರಿಗೆಯ ಕರ್ತಂಗೆ ಒಪ್ಪಿಸಿದೆ. ಸಂದಿತ್ತು , ನೀವು ಕೊಟ್ಟ ಮಣಿಹವೆಂಬುದಕ್ಕೆ ಮುನ್ನವೆ ಬಯಲಾಯಿತ್ತು , ಬಂಕೇಶ್ವರಲಿಂಗದಲ್ಲಿ.
--------------
ಸುಂಕದ ಬಂಕಣ್ಣ
-->