ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾತಾಪಿತಸಂಯೋಗಸಂಭೂತನಲ್ಲದವನು ಶ್ವೇತ ಪೀತ ಹರಿತ ಕಪೋತ ಮಾಂಜಿಷ* ಗೌರ ಇಂತು ಷಡುವರ್ಣರಹಿತನಯ್ಯಾ. ಆದಿ ಮಧ್ಯ ಅವಸಾನವೆಂಬುದಿಲ್ಲದವನ ವೇದವೆಂತುಂಟೆಂದು ನಿರೂಪಿಸಲುಬಾರದು ಅಯ್ಯಾ. ಇವರೆಲ್ಲರೊಳಹೊರಗೆ ತಾನಿಲ್ಲದಿಲ್ಲದವನ ನಾ ಬಲ್ಲೆನೆಂಬ ಹಿರಿಯರ ಟಿಪ್ಪಣ ಮಿಕ್ಕುವು, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನು ಭಕ್ತಿಗಮ್ಯನು.
--------------
ಉರಿಲಿಂಗಪೆದ್ದಿ
-->