ಮತ್ತಮಾ, ಸಹಸ್ರಕಮಲದ ವಿಭಾಗೆಯಂ
ಋಗ್ವೇದದಲ್ಲಿ ತೋರ್ದಪೆನೆಂತೆನೆ-
`ಆಪ್ಮಾನಂ ತೀರ್ಥಂ ಕ ಇಹ ಪ್ರಾಚಥ್ಯೇನಪಥಾ ಪ್ರಪಿಬಂತಿಸುತಸ್ಯ
ವದ್ಯಾವಾಪೃಥುವೀ ತಾವದಿತ್ತತ್
ಸಹಸ್ರಥಾ ಪಂಚದಶಾನ್ಯುಕ್ಥೌ ಯಾ-
ಸಹಸ್ರಥಾ ಮಹಿಮಾನಃ ಸಹಸ್ರಃ ಯಾವದ್ಬ ್ರಹ್ಮಾದ್ಥಿಷ್ಠಿತಂ
ತಾವತೀ ವಾಕ್'
ಟೀಕೆ||
ಸಹಸ್ರಥಾ- ಸಾವಿರ ಪ್ರಕಾರವಾದ
ಮಹಿಮಾನಃ- ಮಹಿಮರೂಪರಾದ ಚಿದಾನಂದಾತ್ಮರುಗಳು
ಬ್ರಹ್ಮಾದ್ಥಿಷ್ಠಿತಂ- `ಬ್ರಹ್ಮಾತ್ಮನಾಂ ಬ್ರಹ್ಮಮಹದ್ಯೋನಿರಹಂ
ಬೀಜಪ್ರದಃ ಪಿತಾ' ಎಂದುಂಟಾಗಿ,
ಬ್ರಹ್ಮವೆಂದು ಪ್ರಕೃತಿ- ಆ ಪ್ರಕೃತಿಯಿಂದೆ
ಅದ್ಥಿಷ್ಠಿತಂ- ಅದ್ಥಿಷ್ಠಿಸಲ್ಪಟ್ಟುದಾಗಿ
ಸಹಸ್ರಃ- ಸಾವಿರಗಣನೆಯನುಳ್ಳುದಾಗಿ
ಇತ್- ಲಯಾದ್ಥಿಷ್ಠಾನ ರೂಪವಾದ
ತತ್- ಆ ಬ್ರಹ್ಮವು, ಯಾವತ್- ಎಷ್ಟು ಪ್ರಮಾಣವುಳ್ಳುದು
ತಾವತ್- ಅಷ್ಟು ಪ್ರಮಾಣವಾಗಿ
ಆಪ್ಮಾನಂ- ಪಾದೋದಕರೂಪವಾದ, ತೀರ್ಥಂ- ತೀರ್ಥವನು
ಯೇನ ಪಥಾ- ಆವಮಾರ್ಗದಿಂದೆ, ಸು- ಚೆನ್ನಾಗಿ
ಪ್ರ ಪಿಬಂತಿ- ಪಾನವ ಮಾಡುವರು
ತಸ್ಯ- ಆ ಮಾರ್ಗದ, ಉಕ್ಥಾ- ನಿಲುಕಡೆಯಾದ
ವಾಕ್- ಶಬ್ದಬ್ರಹ್ಮವು
ಸಹಸ್ರಥಾ- ಸಾವಿರ ಪ್ರಕಾರವುಳ್ಳದಾಗಿ
ದ್ಯಾವಾ ಪೃಥಿವೀ- ದ್ಯಾವಾಪೃಥುಗಳ ವ್ಯಾಪಿಸಿಕೊಂಡುದಾಗಿ
ಪಂಚ ದಶಾನಿ- ಐವತ್ತು ವರ್ಣಂಗಳಾಕಾರವುಳ್ಳುದಾಗಿ
ತಾವತಿ- ಅಷ್ಟಾಗಿಹುದೆಂದು, ಕಃ- ಚತುರ್ಮುಖದ ಬ್ರಹ್ಮನು
ಇಹ- ಈರ್ಣಾಧ್ರ್ವದಲ್ಲಿ
ಪ್ರಾವೋಚತ್- ನುಡಿದನೆಂದು-
ನಿರವಿಸಿದೆಯಯ್ಯಾ ಪರಶಿವಲಿಂಗಯ್ಯ.