ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮತ್ತಮಾ, ಸಹಸ್ರಕಮಲದ ವಿಭಾಗೆಯಂ ಋಗ್ವೇದದಲ್ಲಿ ತೋರ್ದಪೆನೆಂತೆನೆ- `ಆಪ್ಮಾನಂ ತೀರ್ಥಂ ಕ ಇಹ ಪ್ರಾಚಥ್ಯೇನಪಥಾ ಪ್ರಪಿಬಂತಿಸುತಸ್ಯ ವದ್ಯಾವಾಪೃಥುವೀ ತಾವದಿತ್ತತ್ ಸಹಸ್ರಥಾ ಪಂಚದಶಾನ್ಯುಕ್ಥೌ ಯಾ- ಸಹಸ್ರಥಾ ಮಹಿಮಾನಃ ಸಹಸ್ರಃ ಯಾವದ್ಬ ್ರಹ್ಮಾದ್ಥಿಷ್ಠಿತಂ ತಾವತೀ ವಾಕ್' ಟೀಕೆ|| ಸಹಸ್ರಥಾ- ಸಾವಿರ ಪ್ರಕಾರವಾದ ಮಹಿಮಾನಃ- ಮಹಿಮರೂಪರಾದ ಚಿದಾನಂದಾತ್ಮರುಗಳು ಬ್ರಹ್ಮಾದ್ಥಿಷ್ಠಿತಂ- `ಬ್ರಹ್ಮಾತ್ಮನಾಂ ಬ್ರಹ್ಮಮಹದ್ಯೋನಿರಹಂ ಬೀಜಪ್ರದಃ ಪಿತಾ' ಎಂದುಂಟಾಗಿ, ಬ್ರಹ್ಮವೆಂದು ಪ್ರಕೃತಿ- ಆ ಪ್ರಕೃತಿಯಿಂದೆ ಅದ್ಥಿಷ್ಠಿತಂ- ಅದ್ಥಿಷ್ಠಿಸಲ್ಪಟ್ಟುದಾಗಿ ಸಹಸ್ರಃ- ಸಾವಿರಗಣನೆಯನುಳ್ಳುದಾಗಿ ಇತ್- ಲಯಾದ್ಥಿಷ್ಠಾನ ರೂಪವಾದ ತತ್- ಆ ಬ್ರಹ್ಮವು, ಯಾವತ್- ಎಷ್ಟು ಪ್ರಮಾಣವುಳ್ಳುದು ತಾವತ್- ಅಷ್ಟು ಪ್ರಮಾಣವಾಗಿ ಆಪ್ಮಾನಂ- ಪಾದೋದಕರೂಪವಾದ, ತೀರ್ಥಂ- ತೀರ್ಥವನು ಯೇನ ಪಥಾ- ಆವಮಾರ್ಗದಿಂದೆ, ಸು- ಚೆನ್ನಾಗಿ ಪ್ರ ಪಿಬಂತಿ- ಪಾನವ ಮಾಡುವರು ತಸ್ಯ- ಆ ಮಾರ್ಗದ, ಉಕ್ಥಾ- ನಿಲುಕಡೆಯಾದ ವಾಕ್- ಶಬ್ದಬ್ರಹ್ಮವು ಸಹಸ್ರಥಾ- ಸಾವಿರ ಪ್ರಕಾರವುಳ್ಳದಾಗಿ ದ್ಯಾವಾ ಪೃಥಿವೀ- ದ್ಯಾವಾಪೃಥುಗಳ ವ್ಯಾಪಿಸಿಕೊಂಡುದಾಗಿ ಪಂಚ ದಶಾನಿ- ಐವತ್ತು ವರ್ಣಂಗಳಾಕಾರವುಳ್ಳುದಾಗಿ ತಾವತಿ- ಅಷ್ಟಾಗಿಹುದೆಂದು, ಕಃ- ಚತುರ್ಮುಖದ ಬ್ರಹ್ಮನು ಇಹ- ಈರ್ಣಾಧ್ರ್ವದಲ್ಲಿ ಪ್ರಾವೋಚತ್- ನುಡಿದನೆಂದು- ನಿರವಿಸಿದೆಯಯ್ಯಾ ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
-->