ಹರಲಿಂಗಕೆ ಹರಿ ಅಜಾಸುರರು ಸರಿಯೆಂಬ
ಕುರಿಮಾನವ ನೀ ಕೇಳಾ.
ಹರ ನಿತ್ಯ, ಹರಿಯಜಾಸುರರು ಅನಿತ್ಯ.
ಅದೇನು ಕಾರಣವೆಂದರೆ :
ಹರಿಗೆ ಹತ್ತು ಪ್ರಳಯ, ಬ್ರಹ್ಮಂಗೆ ಅನಂತಪ್ರಳಯ,
ಸುರರ ಪ್ರಳಯವೆಂದರೆ ಅಳವಲ್ಲ.
ಪ್ರಳಯಕ್ಕೆ ಗುರಿಯಾಗಿ ಸತ್ತು ಸತ್ತು ಹುಟ್ಟುವ ಅನಿತ್ಯದೈವವ ತಂದು
ನಿತ್ಯವುಳ್ಳ ಶಿವಂಗೆ ಸರಿಯೆಂಬ ವಾಗದ್ವೈತಿಯ ಕಂಡರೆ
ನೆತ್ತಿಯ ಮೇಲೆ ಟೊಂಗನಿಕ್ಕೆಂದಾತ ನಮ್ಮ
ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.