ಇಂತು, ಸದಾಶಿವಮಂತ್ರ ನಿರೂಪಣಾನಂತರದಲ್ಲಿ
ಮಹೇಶ್ವರಮಂತ್ರಮಂ ಪೇಳ್ವೆನೆಂತೆನೆ-
ಮಹೇಶ್ವರನೆನೆ ರುದ್ರನಾತನೆ ಸಂಹಾರಕಾರಣನಾತನ
ಮಂತ್ರಮಂ ಸಂಹಾರವರ್ಗಕ್ರಮದಿಂದುದ್ಧರಿಪುದೆನಲದು
ಸೃಷ್ಟಿ ಸ್ಥಿತಿ ಲಯಂಗಳೆಂದು ಮೂದೆರನಾಗಿರ್ಪು-
ವವರ ಮೊದಲ ಸೃಷ್ಟಿವರ್ಗಮದೆಂತೆನೆ,
ಭೂವರ್ಗದ ಮೂರನೆಯಕ್ಕರಮಾದ ಹಕಾರಮನುದ್ಧರಿಸಿ,
ಜಲವರ್ಗದ ಮೊದಲಾದ ಮಕಾರಮನದರೊತ್ತಿನೊಳಿರಿಸಿ,
ಭೂವರ್ಗದೊಂಬತ್ತನೆಯ ದಕಾರಮನವೆರಡರ ಮುಂದಿ
ಟ್ಟಾಕಾಶವರ್ಗದಾರನೆಯದಾದೆಕಾರಮನದರಿದಿರೊಳ್ಮಡಂಗಿ
ಯಾಧಾರಾಧೇಯಸಂಜ್ಞಿತವಾದ ಸೊನ್ನೆಯಿಂ ಕೂಡಿಸೆ
¬ೂ ನಾಲ್ಕಕ್ಕರಂಗಳ್
`ಹಂ ಮಂ ದಂ ಎಂ' ಎಂಬೀ ಚತುರಕ್ಷರಮಂತ್ರವು
ಸೃಷ್ಟಿಮಂತ್ರವೆಂದರುಪಿದೆಯಯ್ಯಾ,
ಪರಮ ಶಿವಲಿಂಗದೇವ ಪರಿಪೂರ್ಣ ಭಾವಾ.