ಅಥವಾ

ಒಟ್ಟು 78 ಕಡೆಗಳಲ್ಲಿ , 34 ವಚನಕಾರರು , 73 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅರ್ಪಿತವಲ್ಲದುದ ಕಲಸಿದ ಕೈ, ಉಂಡ ಬಾಯಿ, ತುಂಬಿದ ಘಟ, ಅರಿದು ಕೊಂಡ ಆತ್ಮ ಇವ ಹಿಡಿದಡೆ ಭಂಗ. ಸಡಗರಿಸಿ ತುಂಬಿದ ಗರಳ ಘಟವನೊಡೆದು ಕಿತ್ತು ಆಸೆಯ ನುರಿಚಿ ಹಾಕಿ ಮತ್ತಾ ಅಂಗವನೊಡಗೂಡಿಹೆನೆಂಬ ಚಿತ್ತದ ಹಂಗು ಬೇಡ ಮತ್ತಾ ತಪ್ಪ ಕಂಡು ಎನ್ನಂಗವನೊಡಗೂಡುವ ಮನಕ್ಕೆ ಮನೋಹರ ಶಂಕೇಶ್ವರ ಲಿಂಗವೆ ಬೇಡಾ.
--------------
ಕರುಳ ಕೇತಯ್ಯ
ಭಂಡವ ತುಂಬಿದ ಬಳಿಕ ಸುಂಕವ ತೆತ್ತಲ್ಲದೆ ವಿರಹಿತ ಹೋಗಬಾರದು. ಲಿಂಗಸಂಬಂದ್ಥಿಯಾದಡೆ ಜಂಗಮಪ್ರೇಮಿ ನೀನಾಗು, ಅಲ್ಲದಿದ್ದಡೆ ಪರುಷ ದೊರೆಕೊಳ್ಳದಯ್ಯಾ, ಜಂಗಮದಲ್ಲಿ ನಿರುತ ಭರಿತ, ಕೂಡಲಸಂಗಮದೇವ.
--------------
ಬಸವಣ್ಣ
ಒಳಗೊಂದು ಗಾಲಿ, ಹೊರಗೊಂದು ಗಾಲಿ ಎರಡಕ್ಕೆ ಹೂಡಿದುದೊಂದು ಹರಿಯಚ್ಚು, ಮೇಲೆ ಹಾಸಿದ ನೀಳ Zõ್ಞಕದ ಕುರುಗುಣಿಯ ಕೊಂಬಿಂಗೆ ಈಚೆರಡು. ಏಳು ಹುರಿಯ ಬಲುಮಿಣಿಯಿಂ ಆಳವನಿಕ್ಕಿದ ಕಾಮನ ನೊಗ. ಅರೆತ್ತು ಹೂಡಿ, ಹಾಸು ದಡಿಕೆ ಒಂದು, ಮೇಲು ದಡಿಕೆ ಎರಡು, ಒಂದು ದೊಡ್ಡದು, ಒಂದು ಚಿಕ್ಕದು, ಒಂದುರೆ ಚಿಕ್ಕದು, ಬಂಡಿಯ ಮೇಲೊಬ್ಬ ಮೊದಲೆತ್ತ ಹೊಡೆವ, ತಲೆಯಾರು ನಡುವಣಾರು ಹೊಡೆವರಿಬ್ಬರು. ಬಂಡಿ ನಡೆವ ಬಟ್ಟೆಯಯ್ದು, ತುಂಬಿದ ಭಂಡವೈದು, ಐದು ಬಟ್ಟೆಯಂ ತಪ್ಪಿಸಿ ಆರು ಬಟ್ಟೆಯಲಿ ನಡೆಸಿ, ಹೇರಿದ ಭಂಡವನೊಡೆಯಂಗೊಪ್ಪಿಸಲರಿಯದೆ, ಎಡೆಯ ಕಡಿದು ಭುಂಜಿಸಿ ಒಡೆಯಂಗೆ ದೂರಾಗಿ, ಬಹುಮುಖದ ದಂಡಣೆಗೊಳಗಾಗಿ ಬಹಳ ಮುಖದಲ್ಲಿ ಬಂದು, ಹೇರಡವಿಯ ಕಗ್ಗತ್ತಲಲ್ಲಿ ತೊಳಲಿ ಭ್ರಮಿಸುವ ಹೊಲಬರಿಯದೆ ಹೊಲಬುಗೆಟ್ಟ ಮಲಮಾಯಾದ್ಥಿಕರು ನಿಮ್ಮನೆತ್ತ ಬಲ್ಲರಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾರಿ
--------------
ಉರಿಲಿಂಗಪೆದ್ದಿ
ಸಿಂಗದ ನಡು ಮುರಿಯಲಾ ಸಿಂಗವೇನು ಬಾತೆ ಸುಂಡಿಲು ಮುರಿಯಲು ಗಜವೇನು ಬಾತೆ ಸಂಗ್ರಾಮದಲ್ಲಿ ವೀರನುಳಿಯಲದೇನು ಬಾತೆ ಶೃಂಗಾರದ ಮೂಗು ಹೋದಡೆ ಶೃಂಗಾರವೇನು ಬಾತೆ ನಿಜ ತುಂಬಿದ ಭಕ್ತಿ ತುಳುಕಾಡದವರ ಸಂಗವೇನು ಬಾತೆ ಕೂಡಲಸಂಗಮದೇವಾ.
--------------
ಬಸವಣ್ಣ
ತುಂಬಿದ ತೊರೆಯ ಹಾಯ್ದಹೆವೆಂದು ಹರುಗೋಲನೇರುವ ಅಣ್ಣಗಳು ನೀವು ಕೇಳಿರೆ. ತೊರೆಯೊಳಗಣ ನೆಗಳು ಹರುಗೋಲ ನುಂಗಿದಡೆ, ಗತಿಯಿಲ್ಲ. ಎಚ್ಚತ್ತು ನಡಿಸಿರೆ. ನಡುದೊರೆಯಲ್ಲಿ ಹುಟ್ಟು ಹಾಯ್ಕಿದಡೆ, ಹರುಗೋಲು ಮುಳುಗದೆ, ಏರಿದವರು ಸತ್ತರು. ಇದರೊಳಹೊರಗನರಿದಾತನಲ್ಲದೆ ಗುಹೇಶ್ವರಲಿಂಗದಲ್ಲಿ ಅಚ್ಚ ಶರಣನಲ್ಲ.
--------------
ಅಲ್ಲಮಪ್ರಭುದೇವರು
ಲಿಂಗಕ್ಕೆ ಗಿಣ್ಣಿಲ ಓಗರ, ಭಕ್ತಂಗೆ ತಳಿಗೆ ತುಂಬಿದ ಓಗರ, ಆನಿನ್ನೇವೆನಯ್ಯಾ! ಲಿಂಗವ ಕಿರಿದು ಮಾಡಿ, ಅಂಗವ ಹಿರಿದು ಮಾಡಿ, ನಾನಿನ್ನೇವೆನಯ್ಯಾ! ಲಿಂಗಕ್ಕೆ ಬಾರದ ರುಚಿ ಕೃತಕಿಲ್ಬಿಷ, ಆನಿನ್ನೇವೆನಯ್ಯಾ! ಲಿಂಗಕ್ಕೆ ಬಾರದ ಭೋಗವ ಭೋಗಿಪರ ತೋರದಿರಯ್ಯಾ, ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಕಂಗಳು ತುಂಬಿದ ಬಳಿಕ ನೋಡಲಿಲ್ಲ, ಕಿವಿಗಳು ತುಂಬಿದ ಬಳಿಕ ಕೇಳಲಿಲ್ಲ, ಕೈಗಳು ತುಂಬಿದ ಬಳಿಕ ಪೂಜಿಸಲಿಲ್ಲ, ಮನ ತುಂಬಿದ ಬಳಿಕ ನೆನೆಯಲಿಲ್ಲ, ಮಹಂತ ಕೂಡಲಸಂಗಮದೇವನ.
--------------
ಬಸವಣ್ಣ
ಹಿರಿದು ಲಿಂಗವ ಮರೆದ ಕೈಯಲ್ಲಿ ಹಿಡಿದು ಪರಿಪರಿಯಿಂದಾಡುವ ಮಡದಿ ಇವಳಾರಯ್ಯ ! ಸಿರಿವುಳ್ಳ ಹಿರಿಯರ ಬ್ಥಿನ್ನಭಾವದಲ್ಲಿ ಹರಿದು ಹರಿದು ನೆರೆವ ಉರವಣಿಯವಳು ಇವಳಾರಯ್ಯಾ ! ತುಂಬಿದ ಪುರದೊಳಗೆ ಸಂಭ್ರಮಸುಖಿ ಗುರುನಿರಂಜನ ಚನ್ನಬಸವಲಿಂಗಕ್ಕೊಂದಿಟ್ಟು ತಾನೊಂದಾಡುವ ಸಗುಣಶೌರಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ತುಂಬಿದ ನಾಳಿ ಬಾಯ ಹಂಗಾದಂತೆ, ಬಾಯ ಬೆಣ್ಣೆಯ ಹಂಗಿಗನಾಗಿ, ನಳಿಗೆ ಬಾಯಿ ಬೆಣ್ಣೆಯೆರೆವಳ ಹಂಗು. ಮಂಡೆಯ ಶೂಲೆ ಇನ್ನೆಂದಿಗೆ ಹರಿಗು ? ಈ ಅಬ್ಥಿಸಂದ್ಥಿಯ ಹೇಳು, ಅಲೇಖನಾದ ಶೂನ್ಯ ಕಲ್ಲಿನ ಮರೆ ಬೇಡ
--------------
ವಚನಭಂಡಾರಿ ಶಾಂತರಸ
ಕುಂಭ ಘಟದಂತೆ ಕುರುಹಾಗಿ, ತುಂಬಿದ ಜಲದಂತೆ ಮನವಾಗಿ, ತಂಡುಲದಂತೆ ಚಿತ್ತಶುದ್ಧವಾಗಿ, ಮಾಡುವ ಕ್ರೀ ಅಗ್ನಿಯಂತಾಗಿ. ಇಂತಿವು ಕೂಡಿ ಘಟಿಸಿ, ಕ್ರೀಜ್ಞಾನ ಶುದ್ಧವಾಗಿ ಅರಿಯಬೇಕು, ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
--------------
ಮೆರೆಮಿಂಡಯ್ಯ
ಅಂಬರದೇಶದ ಕುಂಭ ಕೋಣೆಯೊಳಗೆ ಜಂಬುಲಿಂಗಪೂಜೆಯ ಸಂಭ್ರಮವ ನೋಡಾ ! ಅಂಬುಜಮುಖಿಯರು ಆರತಿಯನೆತ್ತಿ ಶಂಭು ಶಿವಶಿವ ಹರಹರ ಎನುತಿರ್ಪರು ನೋಡಾ ! ತುಂಬಿದ ಹುಣ್ಣಿಮೆಯ ಬೆಳದಿಂಗಳು ಒಂಬತ್ತು ಬಾಗಿಲಲ್ಲಿ ತುಂಬಿ ಹೊರಸೂಸುತಿರ್ಪುದು ನೋಡಾ ! ಈ ಸಂಭ್ರಮವನೇನ ಹೇಳುವೆನಯ್ಯಾ ಅಖಂಡೇಶ್ವರಾ !
--------------
ಷಣ್ಮುಖಸ್ವಾಮಿ
ಹರಿದ ಗೋಣಿಯಲ್ಲೊಬ್ಬ ಕಳವೆಯ ತುಂಬಿದ. ಇರುಳೆಲ್ಲಾ ನಡೆದನಾ ಸುಂಕಕಂಜಿ. ಕಳವೆಯೆಲ್ಲಾ ಹೋಗಿ ಬರಿಗೋಣಿ ಉಳಿಯಿತ್ತು! ಅಳಿಮನದವನ ಭಕ್ತಿ ಇಂತಾಯಿತ್ತು! ರಾಮನಾಥ.
--------------
ಜೇಡರ ದಾಸಿಮಯ್ಯ
ಇಂಬಾದ ಬ್ರಹ್ಮದಲ್ಲಿ ತುಂಬಿದ ಜಗವೆಲ್ಲಾ ಸಂಭ್ರಮಿಸುತ್ತದೆ ಸಂಸಾರದಲ್ಲಿ. ಕುಂಭದೊಳಗಣ ಸುಧೆಯನುಂಬ ಭೇದವನರಿಯದೆ ಸುಂಬಳಗುರಿಯಂತಾದವು ಜಗವೆಲ್ಲವು. ಒಂಭತ್ತುನಾಳದೊಳಗಣ ಮಧ್ಯನಾಳದ ಬೆಂಬಳಿಯಲ್ಲಿ ಎಯ್ದಿದಾತಗೆ ಸುಧೆ ಸಾಧ್ಯವು. ತೊಂಬತ್ತಾರು ಅಂಗುಲ ದೇಹವೆಲ್ಲವನೂ ತುಂಬುವುದು. ಮತ್ತಂತು ಆ ಸುಧೆಯನು ಹಂಬಲಿಸಲೇಕೆ? ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನ, ಹಂಬಲವನು ಬಿಡದಿರ್ದಡಾತ ಯೋಗಿ.
--------------
ಸ್ವತಂತ್ರ ಸಿದ್ಧಲಿಂಗ
ಅಪ್ಪು ತುಂಬಿದ ಕುಂಭದಲ್ಲಿ ಕಿಚ್ಚು ಹಾಕಿ ಕಟ್ಟಿಗೆಯನಿಕ್ಕಿ ಉರುಹಲಿಕ್ಕೆ ಆ ಅಪ್ಪುವ ಸುಟ್ಟುದುಂಟೆ ಕಿಚ್ಚು ? ಆ ಕುಂಭದ ತಪ್ಪಲಿನಲ್ಲಿ ಕಟ್ಟಿಗೆಯನಿಕ್ಕಿ ಉರುಹಲಿಕ್ಕೆ ಕುಂಭದ ಲೆಪ್ಪದ ಮರೆಯಲ್ಲಿ ಅಪ್ಪುವ ಸುಡಬಲ್ಲುದೆ ? ಇದು ಕಾರಣ ಕ್ರೀಯ ಮರೆಯಲ್ಲಿರ್ದ ನಿಃಕ್ರೀ ಶಿಲೆಯ ಮರೆಯಲ್ಲಿರ್ದ ನೆಲೆ ವಸ್ತುವ ಚಿತ್ತದ ಒಲವರದಿಂದ ಅರಿಯಬೇಕು ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವನರಿವಲ್ಲಿ.
--------------
ಪ್ರಸಾದಿ ಭೋಗಣ್ಣ
ಇದು ಲೇಸಾಯಿತ್ತು: ತುಂಬಿದ ಲೆಕ್ಕಕ್ಕೆ ಮತ್ತೊಂದೆಂದು ಕಡೆಗಾಣಿಸುವಂತೆ, ಸ್ಥಾಣುವಿನ ಮರೆಯ ಚೋರನಂತೆ, ಅಂಬುಧಿಯ ಕೊಂಬಿನಲ್ಲಿದ್ದ ವಿಹಂಗನಂತೆ, ಎಲ್ಲಿ ಬಂದಡೂ ಗುಹೇಶ್ವರನೆಂಬ ಭಾವ ಒಂದಾಯಿತ್ತು !
--------------
ಅಲ್ಲಮಪ್ರಭುದೇವರು
ಇನ್ನಷ್ಟು ... -->