ವಿಶ್ವಾಸದಿಂದ ಭಕ್ತ, ವಿಶ್ವಾಸದಿಂದ ಮಾಹೇಶ್ವರ,
ವಿಶ್ವಾಸದಿಂದ ಪ್ರಸಾದಿ, ವಿಶ್ವಾಸದಿಂದ ಪ್ರಾಣಲಿಂಗಿ,
ವಿಶ್ವಾಸದಿಂದ ಶರಣ, ವಿಶ್ವಾಸದಿಂದ ಐಕ್ಯ.
ಇಂತೀ ವಿಶ್ವಾಸವಿಲ್ಲದವಂಗೆ ವಿರಕ್ತಿಯೆಂಬ ಗೊತ್ತಿನ ಠಾವ ತೋರಾ.
ಪ್ರಭುವಿನ ಕೈಯಲ್ಲಿ, ನಿಜಗುಣನ ನೆನಹಿನಲ್ಲಿ, ಅಜಗಣ್ಣನ ಐಕ್ಯದಲ್ಲಿ
ಕುರುಹಿಲ್ಲದೆ ವಸ್ತುವ ಬೆರೆದ ಠಾವಾವುದಯ್ಯಾ ?
ಎತ್ತ ಸುತ್ತಿ ಬಂದಡೂ ಅಸ್ತಮಕ್ಕೆ ಒಂದು ಗೊತ್ತಿನಲ್ಲಿ ನಿಲ್ಲಬೇಕು.
ಇಂತೀ ವಿಶ್ವಾಸದಿಂದಲ್ಲದೆ ವಸ್ತುವ ಕೂಡುವುದಕ್ಕೆ ನಿಶ್ಚಯವಿಲ್ಲ.
ಈ ಗುಣ ಸಂಗನಬಸವಣ್ಣ ತೊಟ್ಟತೊಡಿಗೆ,
ಬ್ರಹ್ಮೇಶ್ವರಲಿಂಗವ ಮುಟ್ಟುವ ಭೇದ.