ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತುಷರಸವಿದ್ದುದಕ್ಕಲ್ಲದೆ ಫಲ ಫಲಿಸಲಿಲ್ಲ. ಕ್ರಿಯಾಸದ್ಭಾವವಿದ್ದಲ್ಲದೆ ಸತ್ಪಥಭಾವಿಯಲ್ಲ. ತ್ರಿಸಂಧ್ಯಾಕಾಲಂಗಳಲ್ಲಿ ಉಚಿತ ವೇಳೆಯನರಿತು ರಾಜಸ ತಾಮಸಂಗಳಿಲ್ಲದೆ ಪರಸೇವೆ ನಿಶ್ಚಯವಂತನಾಗಿ, ಅನಲ ಅಹಿ ವ್ಯಾಘ್ರ ಚೋರ ರಾಜಭಯ ಮುಂತಾದುವೆಲ್ಲವ ಲಿಂಗ ಕರಸ್ಥಲಕ್ಕೆ ಬಂದಿರಲಿಕ್ಕಾಗಿ, ಆ ಲಿಂಗದ ಮೂರ್ತಿ ಮನಸ್ಥಲದಲ್ಲಿ ನಿರತಿಶಯದಿಂದ ನಿಂದಿರಲಿಕ್ಕಾಗಿ, ಇಂತೀ ಭಾವಂಗಳೆಲ್ಲವು ಮೂರ್ಛೆಯಲ್ಲಿ ಮೂರ್ತಿಗೊಂಡು ಅಮೂರ್ತಿಯಪ್ಪ ವಸ್ತು ಭಿನ್ನಭೇದವಿಲ್ಲದೆ ಸ್ವಯ ಕ್ರಿಯಾಪೂಜೆ ಸರ್ವಜ್ಞಾನ ಸಂತೋಷ. ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನನಲ್ಲಿ ಕ್ರಿಯಾಸಂಭವಕೂಟ.
--------------
ಮೋಳಿಗೆ ಮಹಾದೇವಿ
-->