ಒಟ್ಟು 2 ಕಡೆಗಳಲ್ಲಿ , 1 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅರಿವರತ ಅರುವೆಯ ಅಂಗದಲ್ಲಿ ಕಟ್ಟಿ, ಬಯಕೆಯರತ ಕೈಯಲ್ಲಿ ತಂಡುಲವನಾಯ್ದುಕೊಂಡು ಸಂದ ಪ್ರಮಥರ ಅಂಗಳಕ್ಕೆ ಬೇಗ ಹೋಗಿ, ಕೊಂಡುಬಾರಯ್ಯಾ, ಮಾರಯ್ಯಪ್ರಿಯ ಅಮಲೇಶ್ವರಲಿಂಗಕ್ಕೆ ಮಾರಯ್ಯಾ.
ಪೂಜೆಯುಳ್ಳನ್ನಕ್ಕ ಪುಣ್ಯದ ಗೊತ್ತು ಕಾಣಬಂದಿತ್ತು. ಮಾಟವುಳ್ಳನ್ನಕ್ಕ ಮಹಾಪ್ರಮಥರ ಭಾಷೆ ಭಾಗ್ಯ ದೊರೆಕೊಂಡಿತ್ತು. ಮಾಟವಿಲ್ಲದವನ ಭಕ್ತಿ ಹಾಳೂರ ವಂಕಕ್ಕೆ ಕೋಲ ಹಿಡಿದಂತಾಯಿತ್ತು. ಮಾಡುವಲ್ಲಿ ಉಭಯವಳಿದು ಮಾಡಬಲ್ಲಡೆ, ಮಾರಯ್ಯಪ್ರಿಯ ಅಮಲೇಶ್ವರಲಿಂಗವ ಕೂಡುವ ಕೂಟ.