ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಳನೇರಿ ಇಳಿವುದು ವೀರಂಗೆ ಮತವಲ್ಲ. ಶಿವಶರಣಂಗೆ ಹಿಮ್ಮೆಟ್ಟುವುದು ಪಥವಲ್ಲ. ಮನದೊಡೆಯ ಮನವನಿಂಬುಗೊಂಬನಯ್ಯಾ. ಏರಲಾಗದು ಶ್ರೀಪರ್ವತವ ಇಳಿದಡೆ ವ್ರತಕ್ಕೆ ಭಂಗ. ಕಳನೇರಿ ಕೈದು ಮರೆದಡೆ ಮಾರಂಕ ಚೆನ್ನಮಲ್ಲಿಕಾರ್ಜುನನಿಮ್ಮೈಗಾಣಲಿರಿವನು.
--------------
ಅಕ್ಕಮಹಾದೇವಿ
-->