ಅಥವಾ

ಒಟ್ಟು 47 ಕಡೆಗಳಲ್ಲಿ , 1 ವಚನಕಾರರು , 47 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಗ ಪ್ರಾಣ ಸಂಗವುಳ್ಳನ್ನಕ್ಕ, ಲಿಂಗಪೂಜೆಯೆಂಬ ದಂದುಗ ಬಿಡದು. ಈ ಹೊರಗು ಒಳಗಾಗಿಯಲ್ಲದೆ, ಪ್ರಾಣಲಿಂಗಿಯೆಂಬ ಸಂಬಂದ್ಥಿಯಲ್ಲ. ಲಿಂಗಕ್ಕೆ ಪ್ರಾಣ, ಪ್ರಾಣಕ್ಕೆ ಲಿಂಗ ಉಭಯಸಂಬಂಧವಾದಲ್ಲಿ, ಉರಿ ಕೊಂಡ ಕರ್ಪುರಕ್ಕೆ ತೊಡರುವುದಕ್ಕೆ ಠಾವಿಲ್ಲ, ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ
ಬಣ್ಣವನರಿಯದ ಬಯಲಿನಂತೆ, ಬ್ಥಿನ್ನ ಅಬ್ಥಿನ್ನವನರಿಯದ ಬೆಳಗಿನಂತೆ, ಛಿನ್ನ ವಿಚ್ಫಿನ್ನವನರಿಯದ ಪರಿಪೂರ್ಣದಂತೆ, ಅವದ್ಥಿಗೊಡಲಿಲ್ಲದ ಭಾವವಿರಹಿತನಾದೆಯಲ್ಲಾ. ಸುಳುಹುಗೆಟ್ಟು ಸೂಕ್ಷ್ಮವರತು, ಬೆಳಗೆಂಬ ಕಳೆನಾಮ ನಷ್ಟವಾಗಿ, ಅದೆಂತೆಯಿದ್ದಿತ್ತು, ಅಂತೆ ಆದೆಯಲ್ಲಾ ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ
ಅಂಗದಲ್ಲಿ ಲೀಯವಾಗಿ ತೋರುವುದೆಲ್ಲ ರೂಪೋ, ವಿರೂಪೋ ? ಎಂಬುದ ತಾನರಿತಲ್ಲಿ, ಅಂಗ ಅರಿಯಿತ್ತೋ, ಆತ್ಮ ಅರಿಯಿತ್ತೋ ? ಇಂತೀ ಉಭಯದ ಸಂದಣಿಯಲ್ಲಿ ಗೊಂದಳಗೊಳಲಾರದೆ, ಆರಾರೆಂದಂತೆ ಆರೈಕೆಯಲ್ಲಿದ್ದು ; ತಾನು ತಾನಾದವಂಗೆ ಮತ್ತೇನೂ ಎನಲಿಲ್ಲ, ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ
ಬಸವಣ್ಣನ ಡಿಂಗರಿಗನಯ್ಯಾ, ಚನ್ನಬಸವಣ್ಣನ ಹಳೆಯನಯ್ಯಾ, ಪ್ರಭುದೇವರ ಬಂಟನಯ್ಯಾ, ಮಡಿವಾಳಯ್ಯನ ಲೆಂಕನಯ್ಯಾ, ಸಿದ್ಭರಾಮಯ್ಯನ ಭೃತ್ಯನಯ್ಯಾ. ಇಂತೀ ಐವರ ಒಕ್ಕು ಮಿಕ್ಕ ಶೇಷಪ್ರಸಾದವನುಂಡು, ಬದುಕಿದೆನಯ್ಯಾ. ಕಾಮಧೂಮ ಧೂಳೇಶ್ವರಾ. ನಿಮ್ಮ ಶರಣರೆನ್ನ ಪಾವನವ ಮಾಡಿದ ಪರಿಣಾಮವ, ಅಂತಿಂತೆನಲಮ್ಮದೆ ನಮೋ ನಮೋ ಎನುತಿರ್ದೆನು.
--------------
ಮಾದಾರ ಧೂಳಯ್ಯ
ತಿಲದೊಳಗಣ ತೈಲ, ಫಲದೊಳಗಣ ರಸ, ಹೇಮದೊಳಗಣ ಬಣ್ಣ, ಮಾಂಸದೊಳಗಣ ಕ್ಷೀರ, ಇಕ್ಷುದಂಡದ ಸಾರದ ಸವಿ, ಒಳಗು ಹೊರಗಾಗಿಯಲ್ಲದೆ ಕುಲದ ಸೂತಕ ಬಿಡದು. ಇಷ್ಟದಲ್ಲಿ ತೋರುವ ವಿಶ್ವಾಸ ದೃಷ್ಟವಾಗಿಯಲ್ಲದೆ, ಶಿಲೆಕುಲದ ಸೂತಕ ಬಿಡದು. ಬಿಡುವನ್ನಕ್ಕ ಜ್ಞಾನಶೂನ್ಯವಿಲ್ಲ, ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ
ಮರದಲ್ಲಿ ಉರಿ ಹುಟ್ಟಿ, ಅಡಗಿ ಸುಡದ ಭೇದವ ಬಲ್ಲಡೆ, ಕಾಯದ ಲಿಂಗದ ಸೂತಕವಿಲ್ಲ. ಕಲ್ಲಿನಲ್ಲಿ ಕಿಡಿ ಹುಟ್ಟಿ, ಅಲ್ಲಿ ಉರಿಯದೆ, ಆಚೆಯಲ್ಲಿ ಸಾಕಾರವ ಮುಟ್ಟಿ ಉರಿವಂತೆ, ಆ ನಿಹಿತವನರಿದಲ್ಲಿ ಪ್ರಾಣಲಿಂಗವೆಂಬ ಮನಸೂತಕವಿಲ್ಲ. ಸೂತಕ ಪ್ರಸೂತಕವಾಗಿ, ಏತಕ್ಕೂ ಒಡಲಿಲ್ಲದಿಪ್ಪುದು, ಅದೇ ಅಜಾತತ್ವ, ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ
ಆಕಾಶದ ನೀರಿಂಗೆ, ಮತ್ತೇತರಲ್ಲಿಯೂ ತಿಳಿದಿಹೆನೆಂಬ ಸೂತಕವುಂಟೆ ? ಪೃಥ್ವಿಯ ಸಂಗವ ಕೂಡಿದ ಅಪ್ಪುವಿಂಗಲ್ಲದೆ ನಿಶ್ಚಯದ ಸುಜಲಕ್ಕುಂಟೆ ? ಕರ್ಮದ ಕಪಟ, ನಿಶ್ಚಯವಾದ ನಿಜತತ್ವಭಾವಿಗೆ ಮೇಲೊಂದು ಹತ್ತುವ ಹಾವಸೆ ಒಂದೂ ಇಲ್ಲ, ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ
ಎನ್ನ ತನುವ ನಿರ್ಮಲ ಮಾಡಿದನಯ್ಯಾ, ಬಸವಣ್ಣನು. ಎನ್ನ ಮನವ ನಿರ್ಮಲ ಮಾಡಿದನಯ್ಯಾ, ಚೆನ್ನಬಸವಣ್ಣನು. ಎನ್ನ ಪ್ರಾಣವ ನಿರ್ಮಲ ಮಾಡಿದನಯ್ಯಾ, ಪ್ರಭುದೇವರು. ಇಂತೆನ್ನ ತನುಮನಪ್ರಾಣವ ನಿರ್ಮಲ ಮಾಡಿ, ತಮ್ಮೊಳಿಂಬಿಟ್ಟುಕೊಂಡ ಕಾರಣ, ಕಾಮಧೂಮ ಧೂಳೇಶ್ವರಾ ನಿಮ್ಮ ಶರಣರ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು.
--------------
ಮಾದಾರ ಧೂಳಯ್ಯ
ತನ್ನ ಗುಣವ ತಾನರಿತೆನೆಂಬಲ್ಲಿ, ಇದಿರಿನಲ್ಲಿ, ಬ್ಥಿನ್ನಗುಣವ ಸಂಪಾದಿಸಲುಂಟೆ ? ಕರಿ ಮುಕುರದ ಇರವು, ಆ ಗುಣವ ಪರಿಹರಿಸಿ ನಿಂದಲ್ಲಿ, ಉಭಯಭಾವಕ್ಕೆ ಹೊರಗು, ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ
ಕೆಂಡ ಕೆಟ್ಟು ಕೆಂಡವಾಗಬಲ್ಲುದಲ್ಲದೆ, ಬೂದಿಯಾಗಿ ಬೂದಿ ಹೊತ್ತಬಲ್ಲುದೆ ? ಸೂತಕ ಸೂತಕಕ್ಕೊಳಗಪ್ಪುದಲ್ಲದೆ, ಭಸ್ಮ ಮೇಲೆ, ಕೆಂಡ ಒಳಗಡಗಿದುದುಂಟೆ ? ಅರಿದ ಅರಿವು ಮರವಿಂಗಪ್ಪುದೆ ? ಅರಿವೆ ಶೂನ್ಯವಾಗಿ ಸುಖದುಃಖಕ್ಕೆ ಹೊರಗಾಗಬೇಕು, ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ
ವ್ಯೋಮದಲ್ಲಿ ತೋರುವ ತೋರಿಕೆ, ಸಾಮವ ಮುಟ್ಟಿ ಬೆರಸಬಲ್ಲುದೆ ? ಸಾಗರ ಸಂಬಂಧಕ್ಕೆ ಕಟ್ಟು ಒಡೆವುದೆ ? ಮಹದಲ್ಲಿ ಬೆರಸಿದ ಮಹಾಯೋಗಿ, ಸಂಸಾರಸಾಗರದ ಸಂಬಂಧಕ್ಕೆ ಒಳಗಪ್ಪನೆ ? ಇಂತೀ ಸೂತಕವಳಿದ ಅಜಾತಂಗೆ ಏತರಲ್ಲಿ ನಿಂದು ನೋಡಿದಡೂ ನಿರ್ಜಾತ ಶೂನ್ಯ ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ
ನೋಡುವುದಕ್ಕೆ ಮುನ್ನವೆ ಕಂಡು, ಕಾಬುದಕ್ಕೆ ಮೊದಲೆ ಕೂಡಿ, ಕೂಡುವುದಕ್ಕೆ ಮೊದಲೆ ಶೂನ್ಯವೆಂಬ ಭಾವವೇನೂ ಕಲೆದೋರದೆ, ನಿರಾಳ ಸುರಾಳವಾಯಿತ್ತು, ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ
ಸಕಲದ್ರವ್ಯಂಗಳೆಂದು ಕಲ್ಪಿಸಿ, ಇದಿರಿಟ್ಟು ಅರ್ಪಿಸಿಕೊಂಬುದು, ಅರ್ಪಿಸಿಹೆನೆಂಬುದು, ಅದಾವ ಚಿತ್ತ ? ಅದು ಉದಕ ವರ್ಣದ ಭೇದ, ವರ್ಣಕೂಟದ ಭಾವ. ಲೆಪ್ಪವ ಲಕ್ಷಿಸಿದಂತೆ, ಅದೆಂತೆಯಿದ್ದಿತ್ತು ಚಿತ್ತವಂತೆ ಇದ್ದಿತ್ತು, ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ
ಸತ್ತು ಸಾಯದುದ ಕಂಡು, ಸಾಯದುದ ಸತ್ತಿತ್ತೆಂಬುದನರಿದು, ಈ ಉಭಯದ ಗೊತ್ತಿನಲ್ಲಿ ಲಕ್ಷ್ಯದ ಭಾವ ನಷ್ಟವಾಗಿ, ಉರಿ ಸಾರವ ಕೊಂಡು ಉರಿದಂತೆ, ಆ ಉರಿ ನಂದಿದಲ್ಲಿ, ಉಭಯ ನಿರವಯವಾಯಿತ್ತು, ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ
ಇಂತಿವನೆಲ್ಲವನರಿತು, ಕ್ರೀಯೊಳಗೆ ನೀನಿದ್ದಿಹೆಯೆಂಬ ತೊಳಲಿಕೆಯೇಕೆ ಬಿಡದು ? ನಾ ನೀನೆಂಬ ಸಂದೇಹ ಅದೇನು ಹೇಳಾ ? ಹಾಂಗೆಂಬ ಕುರುಹು ಅರಿತು, ಅರಿವು ನಷ್ಟವಾಗಿ, ಕುರುಹೆಂಬ ನಾಮ ನಿರ್ನಾಮವಾಯಿತ್ತು, ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ
ಇನ್ನಷ್ಟು ... -->