ಮರದಲ್ಲಿ ಉರಿ ಹುಟ್ಟಿ, ಅಡಗಿ ಸುಡದ ಭೇದವ ಬಲ್ಲಡೆ,
ಕಾಯದ ಲಿಂಗದ ಸೂತಕವಿಲ್ಲ.
ಕಲ್ಲಿನಲ್ಲಿ ಕಿಡಿ ಹುಟ್ಟಿ, ಅಲ್ಲಿ ಉರಿಯದೆ,
ಆಚೆಯಲ್ಲಿ ಸಾಕಾರವ ಮುಟ್ಟಿ ಉರಿವಂತೆ,
ಆ ನಿಹಿತವನರಿದಲ್ಲಿ ಪ್ರಾಣಲಿಂಗವೆಂಬ ಮನಸೂತಕವಿಲ್ಲ.
ಸೂತಕ ಪ್ರಸೂತಕವಾಗಿ, ಏತಕ್ಕೂ ಒಡಲಿಲ್ಲದಿಪ್ಪುದು,
ಅದೇ ಅಜಾತತ್ವ, ಕಾಮಧೂಮ ಧೂಳೇಶ್ವರಾ.