ಅಥವಾ

ಒಟ್ಟು 95 ಕಡೆಗಳಲ್ಲಿ , 21 ವಚನಕಾರರು , 86 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

``ದಂಡಶ್ಚ ತಾರಕಾಕಾರೋ ಭವತಿ | ಓಂ ಸಾರ್ವತ್ಮಾ ದೇವತಾ | ಮಕಾರೇ ಚ ಲಯಂ ಪ್ರಾಪ್ತೇ ಪಂಚದಶಮೇ ಪ್ರಣವಾಂಶಕೇ ||'' ಅಕಾರವೆಂಬ ಪ್ರಣವದಲ್ಲಿ- ``ಕುಂಡಲಶ್ಚ ಅರ್ಧಚಂದ್ರೋ ಭವತಿ | ಓಂ ಪರಮಾತ್ಮಾ ದೇವತಾ | ಅಕಾರೇ ಚ ಲಯಂ ಪ್ರಾಪ್ತೇ ಷೋಡಶೇ ಪ್ರಣವಾಂಶಕೇ ||'' ಉಕಾರವೆಂಬ ಪ್ರಣವದಲ್ಲಿ- ``ಜ್ಯೋತಿಶ್ಚ ದರ್ಪಣಾಕಾರೋ ಭವತಿ | ಓಂ ಶಿವಾತ್ಮಾ ದೇವತಾ | ಉಕಾರೇ ಚ ಲಯಂ ಪ್ರಾಪ್ತೇ ಸಪ್ತದಶ ಪ್ರಣವಾಂಶಕೇ ||'' ``ಮಕಾರೇ ಚ ಅಕಾರೇಚ ಉಕಾರೇಚ ನಿರಾಮಯಂ | ಇದಮೇಕಂ ಸಮುತ್ಪನ್ನಂ ಓಂ ಇತಿ ಜ್ಯೋತಿರೂಪಕಂ || ಪ್ರಥಮಂ ತಾರಕಾರೂಪಂ ದ್ವಿತೀಯಂ ದಂಡ ಉಚ್ಯತೇ | ತೃತೀಯಂ ಕುಂಡಲಾಕಾರಂ ಚತುರ್ಥಂ ಅರ್ಧಚಂದ್ರಕಂ || ಪಂಚಮಂ ದರ್ಪಣಾಕಾರಂ ಷಷ್ಠಂ ಜ್ಯೋತಿರೂಪಕಂ | ಇತಿ ಪ್ರಣವಃ ಜ್ಞೇಯಂ ಏತದ್ಗೋಪ್ಯಂ ವರಾನನೇ || ಓಂಕಾರ ಪ್ರಭವೋ ವೇದಃ ಓಂಕಾರಂ ಪ್ರಭವ ಸ್ವರಃ | ಓಂಕಾರಪ್ರಭವಾ ಭೂಃ ಓಂಕಾರಪ್ರಭವಾ ಭುವಃ || ಓಂಕಾರಪ್ರಭವಾ ಸ್ವಹಃ ಓಂಕಾರ ಪ್ರಭವಾ ಮಹಃ | ಓಂಕಾರಪ್ರಭವೋ ಜನಃ ಓಂಕಾರ ಪ್ರಭವಂ ತಪಃ || ಓಂಕಾರಪ್ರಭವಂ ಸತ್ಯಂ ಓಂಕಾರ ಪ್ರಭವೋ ರವಿ ಃ | ಓಂಕಾರಪ್ರಭವಸ್ಸರ್ವಂ ತ್ರೈಲೋಕ್ಯಂ ಸಚರಾಚರಂ || ಸರ್ವವ್ಯಾಪಕಮೋಂಕಾರಂ ಮಂತ್ರಸ್ಯಾತ್ರ ನ ಸಂಭವೇತ್ | ಪ್ರಣವೋಹಿ ಪರಬ್ರಹ್ಮ ಪ್ರಣವಃ ಪರಮಂ ಪದಂ || ಓಂಕಾರಂ ನಾದರೂಪಂ ಚ ಓಂಕಾರಂ ಬಿಂದುರೂಪಕಂ | ಓಂಕಾರಂ ಚ ಕಲಾರೂಪಂ ಓಂಕಾರಂ ಮಂತ್ರರೂಪಕಂ || ಓಂಕಾರಂ ವ್ಯಾಪಿ ಸರ್ವತ್ರ ಓಂಕಾರಂ ಗೋಪ್ಯಮಾನನಂ | ಇತಿ ಪ್ರಣವಃ ವಿಜ್ಞೇಯಃ ದುರ್ಲಭಂ ಕಮಲಾನನೇ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಸಾಲೋಕ್ಯ ಪದ ಮೀರಿ ಸಾಮೀಪ್ಯ ಪದ ಮೀರಿ ಸಾಯುಜ್ಯ ಪದವೀವ ಆತನನು ವಶಮಾಡಿ ತಂದೆನ್ನ ಕರದೊಳಿತ್ತಾ ಗುರು ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ದ್ರವ್ಯ ನೀನು ದ್ರವ್ಯಾರ್ಥ ನೀನು; ಪದ ನೀನು, ಪದಾರ್ಥ ನೀನು. ಸಕಲ ನೀನು ನಿಷ್ಕಲ ನೀನು. ಸಕಲ ನಿಷ್ಕಲಾತ್ಮಕ ಪರಿಪೂರ್ಣ ಶಿವನಲ್ಲದೆ ಅನ್ಯ ಭಿನ್ನಭಾವ ಉಂಟೆ ? ಸಕಲ ನಿಷ್ಕಲ ತತ್ವಂಗಳು; ನಿಮ್ಮೊಳಗೆ ಸಮಾಸವನೆಯ್ದುವೆವೆಂದು ತಮ್ಮ ತಮ್ಮ ಅಂಗದ ಮೇಲೆ ಸರ್ವಪದಾರ್ಥಂಗಳ ಹೆಸರಿಟ್ಟು ಹೊತ್ತುಕೊಂಡೈದಾವೆ ನೋಡಾ ! ಅದೆಂತೆಂದಡೆ: ``ದ್ರವ್ಯಾರ್ಥಂ ಚ ಮಹಾದೇವೋ ದ್ರವ್ಯರೂಪೋ ಮಹೇಶ್ವರಃ ಇತಿ ಮೇ ಭೇದನಂ ನಾಸ್ತಿ ಸರ್ವರೂಪಸ್ಸದಾಶಿವಃ'' _ ಇಂತೆಂದುದಾಗಿ_ನಾದ ನೀನು, ಬಿಂದು ನೀನು, ಕಳೆ ನೀನು, ಕಳಾತೀತ ನೀನು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಪಾವನವಾದೆನು ಬಸವಣ್ಣಾ, ನಿಮ್ಮ ಪಾವನಮೂರ್ತಿಯ ಕಂಡು. ಪರತತ್ವವನೈದಿದೆ ಬಸವಣ್ಣಾ, ನಿಮ್ಮ ಪರಮಸೀಮೆಯ ಕಂಡು. ಪದ ನಾಲ್ಕು ಮೀರಿದೆ ಬಸವಣ್ಣಾ, ನಿಮ್ಮ ಪರುಷಪಾದವ ಕಂಡು ಕಪಿಲಸಿದ್ಧಮಲ್ಲಿಕಾರ್ಜುನಯ್ಯನ ಕೂಡಿದೆ; ಬಸವಣ್ಣಾ, ಬಸವಣ್ಣಾ, ಬಸವಣ್ಣಾ, ನೀನು ಗುರುವಾದೆಯಾಗಿ.
--------------
ಸಿದ್ಧರಾಮೇಶ್ವರ
ಇದಕ್ಕೆ ಮಹದೋಂಕಾರೋಪನಿಷತ್ತು : ಉಕಾರವೆಂಬ ಪ್ರಣವದಲ್ಲಿ- ``ದಂಡಶ್ಚ ತಾರಾಕಾಕಾರೋ ಭವತಿ ಓಂ ಸ್ವಯಂಭುಲಿಂಗ ದೇವತಾ | ಉಕಾರೇ ಚ ಲಯಂ ಪ್ರಾಪ್ತೇ ಏಕಾದಶಮೇ ಪ್ರಣವಾಂಶಕೇ || '' ಮಕಾರವೆಂಬ ಪ್ರಣವದಲ್ಲಿ- ``ಕುಂಡಲಶ್ಚ ಅರ್ಧಚಂದ್ರೋ ಭವತಿ ಓಂ ಶಿವತತ್ವಂ ದೇವತಾ | ಮಕಾರೇ ಚ ಲಯಂ ಪ್ರಾಪ್ತೇ ದ್ವಾದಶಂ ಪ್ರಣವಾಂಶಕೇ || '' ಅಕಾರವೆಂಬ ಪ್ರಣವದಲ್ಲಿ- ``ದರ್ಪಣಶ್ಚ ಜ್ಯೋತಿರೂಪೋ ಭವತಿ ಓಂ ಗುರುತತ್ವಂ ದೇವತಾ| ಅಕಾರೇ ಚ ಲಯಂ ಪ್ರಾಪ್ತೇ ತ್ರಯೋದಶಮೇ ಪ್ರಣವಾಂಶಕೇ ||'' ``ಉಕಾರೇ ಚ ಮಕಾರೇ ಚ ಅಕಾರಂ ಚಾಕ್ಷರತ್ರಯಂ | ಅಕಾರಂ ನಾದರೂಪೇಣ ಉಕಾರಂ ಬಿಂದುರುಚ್ಯತೇ | ಮಕಾರಂ ಕಲಾ ಚೈವ ನಾದಬಿಂದುಕಲಾತ್ಮನೇ || ನಾದಬಿಂದುಕಲಾಯುಕ್ತೋ ಓಂಕಾರೋ ಪರಮೇಶ್ವರಃ | ಪ್ರಣವೋಹಿ ಪರಬ್ರಹ್ಮ ಪ್ರಣವಂ ಪರಮಂ ಪದಂ || ಓಂಕಾರಂ ನಾದರೂಪಂಚ ಓಂಕಾರಂ ಮಂತ್ರರೂಪಕಂ | ಓಂಕಾರಂ ವ್ಯಾಪಿ ಸರ್ವತ್ರ ಓಂಕಾರಂ ಗೋಪ್ಯಮಾನನಂ ||'' ಇಂತೆಂದುದಾಗಿ, ಅಪ್ರಮಾಣ ಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಜಯಜಯ ಪರಮೇಶ ಪರಬ್ರಹ್ಮ ಜಯಜಯ ನಿತ್ಯಾನಂದ ಪದ : ಹರಿಯಜಸುರರೊಂದ್ಯ ಜಯಜಯ ಗಿರಿಸುತೆಪ್ರಾಣೇಶ ಜಯಜಯ ಪರಮುನಿಗಳಾತ್ಮ ಜಯಜಯ ಪರಂಜ್ಯೋತಿರ್ಲಿಂಗ ಜಯಜಯ ತರಣಿಕೋಟಿತೇಜ ಜಯಜಯ ಉರಗಾಭರಣಭವ ಜಯಜಯ ಕರುಣರಸಸಿಂಧು ಜಯಜಯ ಮುರಹರ ಮೃತರಹಿತ ಜಯಜಯ || 1 || ತ್ರಿಪುರಸಂಹರ ನಿತ್ಯ ಜಯಜಯ ಅಪರಂಪಾರಮೂರ್ತಿ ಜಯಜಯ ಕೃಪತ್ರೈಲೋಕೇಶ ಜಯಜಯ ಉಪಮೆರಹಿತಪುಣ್ಯ ಜಯಜಯ ಜಪತಪಕೊಲಿವಾತ ಜಯಜಯ ಅಪಹರಿ ಶಿಖೆಯೊಳಿಟ್ಟ ಜಯಜಯ ವಿಪಿನಕಾಷ್ಠಾರಿನೇತ್ರ ಜಯಜಯ ನಿಪುಣ ನಿರ್ಗುಣ ಶಂಭು ಜಯಜಯ || 2 || ಮಾರಾರಿ ಮದಚರ್ಮ ಜಯಜಯ ಮೂರುನೇತ್ರದ ಭವ ಜಯಜಯ ಈರೇಳು ಭುವನಾತ್ಮಜ ಜಯಜಯ ವಾರಿಜ ಅರಿಭೂಷ ಜಯಜಯ ಮೇರುವಿಗಣಪೂಜ್ಯ ಜಯಜಯ ಪೂರಿತ ಪುಣ್ಯಾಂಗ ಜಯಜಯ ಧಾರುಣಿ ದಯಪಾಲ ಜಯಜಯ ಕರುಣಿ ಚಿನ್ಮಯ ಜಯಜಯ || 3 || ನಂದಿವಾಹನ ನಿತ್ಯ ಜಯಜಯ ಅಂಧಕಾಸುರವೈರಿ ಜಯಜಯ ಕಂದುಗೊರಳ ಶಿವನೆ ಜಯಜಯ ಸಂದ ಕುಣಪಶೂಲ ಜಯಜಯ ಕಂದಗೆ ವರವಿತ್ತ ಜಯಜಯ ಗಂಧರ್ವರಿಗೊಲಿದೆ ಜಯಜಯ ಇಂದ್ರಪೂಜಿತಲಿಂಗ ಜಯಜಯ ತಂದೆತಾಯಿಲ್ಲದ ಮೋನ ಜಯಜಯ || 4 || ಭವರೋಗಕ್ಕೆ ವೈದ್ಯ ಜಯಜಯ ಶಿವ ವಿಶ್ವಕುಟುಂಬಿ ಜಯಜಯ ಜವನ ಸಂಹರ ಅಮಲ ಜಯಜಯ ಪವಿತ್ರಸ್ವರೂಪಕಾಯ ಜಯಜಯ ಭುವನ ಸರ್ವಕೆ ದೇವ ಜಯಜಯ ಕುವರ ಹಂಪನ ಪ್ರಾಣ ಜಯಜಯ ದೇವ ಗುರುಸಿದ್ಧಮಲ್ಲ ಜಯಜಯ ಕವಿವ ದುರಿತಹರ ಜಯಜಯ
--------------
ಹೇಮಗಲ್ಲ ಹಂಪ
ಒಂದು ಪದದೊಳಗೆ ಎರಡೆಂಬತ್ತೆಂಟುಕೋಟಿ ಪದ ಹುಟ್ಟಿದವು ನೋಡಾ. ಆ ಎರಡೆಂಬತ್ತೆಂಟು ಕೋಟಿ ಪದದೊಳಗೆ ಅನೇಕ ಕಾಲುಗಳು ಹುಟ್ಟಿದವು ನೋಡಾ. ಆ ಅನೇಕ ಕಾಲುಗಳ ಮುರಿದು, ಎರಡೆಂಬತ್ತುಕೋಟಿ ಪದಗಳನಳಿದು, ಒಂದೆ ಪದದಲಿ ನಿಲಬಲ್ಲರೆ ಆತನು ಪರಶಿವ ಪದಸ್ಥನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ!
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಕರಸ್ಥಲದ ಲಿಂಗ ಕೈಸೇರಿ ಇರು ತಿರಲನ್ಯ ಭಯಗಳುಂಟೆ ಗುರುವೆ ? ಪದ :ಕಂಠೀರ[ವ]ನಿಹ ವನದೊಳು ಕರಿಯಭಯ ವುಂಟೇ ಇನ್ನಾ ತೆರದೊಳು ಬಂಟಾಯುಧವಿರೆ ಕರದೊಳು ಸೂಜಿಯ ಮೊನೆಯ ತುಂಟಕದ ಭಯಗಳುಂಟೆ ಗುರವೆ ? | 1 | ಕರಿಯನೇರಿ ಪೋಗುತಿರಲು ಶುನಿ ಬಗುಳುತ ಬರುತಿರುವ ಭಯಗಳುಂಟೆ ನೋಡಾ. ಹರನೆನ್ನ ಕರದೊಳಿರಲು ಪಂಚೇಂದ್ರಿ ದುರಿತ ಭಯದಂಜಿಕೆಯುಂಟೆ ಗುರುವೆ ? | 2 | ದ್ಯುಮಣಿಗುರಿಯ ಭಯಗಳುಂಟೆ ? ಅಷ್ಟದಳ ಕಮಲದೊಳು ಸುಳಿವ ಹಂಸ ತಾನೆ ಭ್ರಮರನಂತೆ ಕರಕಮಲದ ಲಿಂಗವ ತಾ ಭ್ರಮಿಸೆರಗೆ ಭಯಗಳುಂಟೆ ಗುರುವೆ ? | 3 | ಉರಿಯುತಿರೆ ಜ್ಯೋತಿ ಗೃಹದಿ ತಮ ನಡೆದು ಬರುವ ಬ್ಥೀತಿಯುಂಟೆ ನೋಡಾ. ಪರಂಜ್ಯೋತಿರ್ಲಿಂಗಯೆನ್ನ ಅಂಗಾಕಾರದೆ ಇರೆ ಮಾಯದ ಬ್ಥೀತಿಯುಂಟೆ ಗುರುವೆ ? | 4 | ಉರಗ ಮುಟ್ಟಲು ಓರ್ವನ ತನು ವಿಷದಿ ಭರಿತವಾದಂತೆ ಶರಣ ಶರೀರವನು ಸೊಮ್ಮು ಸೋಂಕಿ ಸರ್ವಾಂಗ ಕಾರಣಲಿಂಗವಾಗೆ ಭಯವೆ ಗುರುವೆ ? | 5 | ಅಗಲದೆ ಸರ್ವಾಂಗದಿ ಭರಿತವಾದಂತೆ ಶರಣ ಶಿವಲಿಂಗ ಝಗಝಗಿಸುತಿದೆ ಕೋಯೆಂದು ನುಡಿದು ಪೊಗಳ್ದ ಹೇಮಗಲ್ಲ ಹಂಪ ಪಡುವಿಡಿಯ ಬಗೆಯ ಗುರು ರಾಚನಿರವು ತಾನೆ | 6
--------------
ಹೇಮಗಲ್ಲ ಹಂಪ
ಪಲ್ಲ :ಬಂಧನ ಸಂಸಾರದಂದುಗದ ದಾಳಿಯಲ್ಲಿ ನೊಂದು ಬೆಂದೆನೊ ಎನ್ನ ಹುಯ್ಲು ತಂಬಿಸು ಗುರುವೆ ಭವಹರ ನಿತ್ಯನಿರ್ಮಳಾತ್ಮಕ ಶಂಭುವೆ. ಪದ :ಹಲವು ಜನ್ಮದಿ ಹುಟ್ಟಿ ಹಲವಾಹಾರವನುಂಡು ಹಲವು ಭೂಮಿಯ ಮೆಟ್ಟಿ ಹಲವು ಕರ್ಮವ ಕಂಡು ಹಲವು ಭವಕೀಡಾಗಿ ಹಲವು ಹಂಬಲಿಸುತಿರುವ ಹೊಲೆಜನ್ಮ ಸಂಸಾರ ಮಾಯಾರಕ್ಕಸಿ ತುಡುರೆ ನಿಲ್ಲಲಾರದಲಿ ನಿಮ್ಮ ಮರೆಹೊಕ್ಕೆ ಎನ್ನ ಕೊಡದೆ ಗೆಲಿದುಕೊ ದುರಿತಹರ ಕರುಣಾಳು ಪರಮಗುರುವೆ. | 1 | ಸಟೆ ಠಕ್ಕು ಠೌಳಿ ಅಟಮಟದ ಬಂಧನದ ಕುಟಿಲಸಂಸಾರಸಾಗರದ ತೊರೆನೆರೆಗಳೊಳು ಪುಟನೆಗೆದು ತಲೆ ಮುಣುಗುತಲಿರುವನ ಕಂಡು ನಿಟಿಲಾಕ್ಷ ಕೃಪೆಯೆಂಬ ಹಡಗವನು ತಂದೊಲಿ ತಟಕೆನ್ನನೆಳೆದು ತಗೆದೀಗ ಇನಿತಾತ್ಮ ಘಟದೊಳಗೆ ಜ್ಞಾನಜ್ಯೋತಿಯ ತೀವು ಪರಮಗುರುವೆ. | 2 | ರಸವಿಷಯ ಮೋಹನದ ಕೂಪಜಲದೊಳು ಮುಳುಗಿ ದೆಸೆದೆಸೆಗೆ ಚಾಲಿವರಿವನ ಕಂಡು ಬೇಗದಲಿ ವಿಷಕಂಠ ದುರಿತಸಂಹರ ಕರುಣಾಕರ ತೊಟ್ಟಿಲಿಗೆ ಎಸೆವ ಹಗ್ಗವ ಕಟ್ಟಿ ಎಳೆದು ತಗೆಯೆನ್ನ ರಂ ಬಿಸುತ ಸಂತೈಸಿ ದುಃಖದಲ್ಲಿ ಭೋರ್ಗರೆದಳುವ ಶಿಶುವ ಬೋಳೈಸುವಂದದಲೆನ್ನ ಬೋಳೈಸು ಅಸಮಾಕ್ಷ ಪರಮಗುರುವೆ.| 3 | ತೆರಣಿಯ ಹುಳು ನೂಲು ಸುತ್ತಿಕೊಂಡು ಎಸೆವ ತೆರದಿ ಈ ಸಂಸಾರ ಸುಖದುಃಖ ಎನ್ನನು ಸುತ್ತಿ ಪರಿಭವಕ್ಕೆ ಗುರಿಯಾಗಿ ಯೋನಿಯಂತ್ರದೆ ತಿರುಗಿಯೆ ಬರುತಲಿರ್ದೆನು ಘೋರ ಅರಣ್ಯದೊಳು ಸುತ್ತಿ ಹರಹರ ನಿಮ್ಮ ಸ್ಮರಣೆಯ ಮರೆದ ಕಾರಣದಿ ದುರಿತನ್ಯಾಯದ ಬಂಧನಕೆ ಗುರಿಯಾಗಿದ್ದೆನಯ್ಯಾ ಶಿವನೆ. | 4 | ಮಾಯಾಸಂಸಾರಸರ್ಪನ ವಿಷವು ತಲೆಗೇರಿ ನೋಯುತಿದ್ದೆನು ಹಲವುವಿಧದಾಸೆಪಾಶದಲಿ ಬೇಯುವವನ ಕಂಡು ನೀ ಬೇಗಲೊಯಿದ್ಯವ ಮಾಡಿಯೆ ಶವವನುಳುವಿಕೋ ಭವರೋಗವೈದ್ಯ ನಿತ್ಯ ಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭು ನೀವಲ್ಲದೆನಗನ್ಯವಿಲ್ಲ ಕಾಯೋ ಕಾಯೋ ದೇವಾ. | 5 |
--------------
ಹೇಮಗಲ್ಲ ಹಂಪ
ಧರಿಸಿರೊ ಶ್ರೀ ರುದ್ರಾಕ್ಷಿಯ ಬಾಹು ಉರ ಕಂಠ ಕರ್ಣ ಮಸ್ತಕದಲ್ಲಿ ಒಲಿದು. ಪದ : ಹರನಕ್ಷಿ ಜಲದಲ್ಲುದಯವಾಗಿ ಮುನಿ ವರ ವಿಶ್ವಾಮಿತ್ರ ಗೌತಮ ವಶಿಷ್ಠರ ನೆರೆ ಮುಕ್ತರ ಮಾಡಿ ಕೈಲಾಸಪದದೊಳ ಗಿರಿಸುವ ಭಸಿತ ರುದ್ರಾಕ್ಷಿಯನೊಲಿದು. | 1 | ನೆತ್ತಿಯೊಳಗೆ ತ್ರಯ ಶಿಖಿಗೇಕ ಮೇಣ್ ಚಿತ್ತಸಮಸ್ತಕೆ ಧಾರಣಗಳು ಅದ ರೊತ್ತಿಲಿ ಕರ್ಣಕುಂಡಲಕೆ ಏಕೈ ಕೆಂದು ವಿಸ್ತರಿಸಿ ರುದ್ರಾಕ್ಷಿಯನೊಲಿದು. | 2 | ಕೊರಳೊಳು ಬತ್ತೀಸ ಉರದೊಳು ಮಹಾ ಸರ ಅಷ್ಟಶತಮಾಲೆಯನುವೆ ನೀವು ಕರಕಂಕಣಕೆ ದಶಬಾಹುಪೂರಕೆ ನೆರೆ ಷೋಡಶ ರುದ್ರಕ್ಷಿಯನೊಲಿದು. | 3 | ಕರದಂಘ್ರಿಮಾಲೆಗೆ ದಶವೇಕ ಮಹಾಜಪ ಸರ [ಕೂಡಿಕೊಂಡು ಲೇಸೆಂದು] ಮೇಣ್ ವಿರಚಿಸಿ ಶಿವಪೂಜೆಯನು ಮಾಡೆ ಕರ್ಮ ಗಿರಿಗೊಜ್ರವೆನಿಪ ರುದ್ರಾಕ್ಷಿಯನೊಲಿದು. | 4 | ಇನಿತು ತೆರದ ರುದ್ರಾಕ್ಷಿಯ ಮಹಾ ಘನವೆಂಬಲ್ಲಿ ಮುಕ್ತಿಯ ಸಾರ ತ್ರಿಣಯ ಸದ್ಗುರು ಪಡುವಿಡಿ ಸಿದ್ಧಮಲ್ಲನಾ ನೆನವ ತೋರುವ ತತ್ವಚಿಂತಾಮಣಿಯನೊಲಿದು. | 5 |
--------------
ಹೇಮಗಲ್ಲ ಹಂಪ
ನಿಶ್ಚಿಂತ ನಿರಾಕಾರ ಪರಂಜ್ಯೋತಿ ಪರಮಪ್ರಕಾಶ ಆನಂದ ಸ್ವರೂಪನೆ ಜಂಗಮಲಿಂಗ. ಚೈತ್ಯರೂಪವೆ ಲಿಂಗಜಂಗಮ, ಸತ್ವರೂಪವೆ ಗುರುಲಿಂಗ. ಸತ್ತು ಚಿತ್ತಾನಂದವೆ ಸದ್ಭಕ್ತನಲ್ಲಿ ಉದಯ ಇಂತಿವರ ನೆಲೆಯ ವೇದಾಗಮ ಶಾಸ್ತ್ರ ಪುರಾಣಗಳು ಕಾಯದೆ ವಾಗತೀತಃ ಮನೋತೀತಃ ಭಾವಾತೀತಃ ಪರಃ ಶಿವಃ ಸರ್ವಶೂನ್ಯ ನಿರಾಕಾರಂ ನಿತ್ಯತ್ವಂ ಪರಮಂ ಪದಂ || ಎಂದುದಾಗಿ, ಇಂತಪ್ಪ ಶ್ರುತಿ ಒಳ ಹೊರಗಿಪ್ಪ ಜಂಗಮಲಿಂಗವೆ ಜಗತ್ಪಾವನ ಜಂತು ಜಯ ಶರಣಾಗು. ಬಸವಪ್ರಿಯ ಕೂಡಲಸಂಗಮದೇವಾ ಮಾಂ ತ್ರಾಹಿ ತ್ರಾಹಿ ಕರುಣಾಕರನೆ.
--------------
ಹಡಪದ ಅಪ್ಪಣ್ಣ
ಶ್ರೀಗುರುಸೋಂಕಿದ ಶಿಷ್ಯ ತಾನಾ ಗುರುವಾಗದೆ ಮಾಣನು. ಅದೆಂತೆಂದಡೆ: ಜ್ಯೋತಿಯಿಂದಾದ ಜ್ಯೋತಿಯಂತೆ ಭ್ರಮರನಿಂದ ಕೀಟ ಭ್ರಮರನಾದಂತೆ ಶಿಷ್ಯನು ಗುರುವಿ[ಗೆ] ಭೇದವಾಗಿರನು. ಇಂತಪ್ಪ ಶಿಷ್ಯನು ಸದ್ಗುರುವಿನ ಮೂರ್ತಿಯ ಧ್ಯಾನಿಸಿ, ಗುರುಪದವ ಪೂಜಿಸಿ, ಗುರುವಾಕ್ಯವೇ ಮಂತ್ರವೆಂದು ನಂಬಿ, ಗುರುವಿನ ಕೃಪೆಯೇ ಮುಕ್ತಿಯೆಂದು ಅರಿದಿಪ್ಪನು. ಅದೆಂತೆಂದಡೆ: ಧ್ಯಾನಮೂಲಂ ಗುರೋರ್ಮೂರ್ತಿಃ ಪೂಜಾಮೂಲಂ ಗುರೋಃ ಪದಂ ಮಂತ್ರಮೂಲಂ ಗುರೋರ್ವಾಕ್ಯಂ ಮುಕ್ತಿಮೂಲಂ ಗುರೋಃ ಕೃಪಾ ಇಂತೆಂದುದಾಗಿ, ಗುರುವಿನ ಕರುಣದಿಂದ ಷಟ್‍ತ್ರಿಂಶತ್ತತ್ವಂಗಳ ಸ್ವರೂಪವನರಿತು ತತ್ವಾತೀತವಾದ ಪರವಸ್ತು ವಾಙ್ಮನಾತೀತವಾಗಿ ತನ್ನ ಭಾವಾಬ್ಥೀಷ್ಟಲಿಂಗದ ನೆನಹು ಸೋಂಕುಗಳಿಂದಭ ಸೌರಾಷ್ಟ್ರ ಸೋಮೇಶ್ವರಲಿಂಗವಪ್ಪುದು ತಪ್ಪದಯ್ಯಾ.
--------------
ಆದಯ್ಯ
ಹಿಂದೆ ಬಯಸಿದೆ ಕಾಳುತನದಲ್ಲಿ, ಎನ್ನ ಮಂದಮತಿಯ ನೋಡದಿರಯ್ಯಾ! ಕೆರೆ ಬಾವಿ ಹೂದೋ ಚೌಕ ಛತ್ರಂಗಳ ಮಾಡಿ, ಜೀವಂಗಳ ಮೇಲೆ ಕೃಪೆಯುಂಟೆಂದು ಎನ್ನ ದಾನಿಯೆಂಬರು, ಆನು ದಾನಿಯಲ್ಲವಯ್ಯಾ, ನೀ ಹೇಳಿದಂತೆ ನಾ ಮಾಡಿದೆನು. ನೀ ಬರಹೇಳಿದಲ್ಲಿ ಬಂದೆನು; ನೀ ಇರಿಸಿದಂತೆ ಇದ್ದೆನು. ನಿನ್ನ ಇಚ್ಛಾಮತ್ರವ ಮೀರಿದೆನಾಯಿತ್ತಾದಡೆ ಫಲ ಪದ ಜನನವ ಬಯಸಿದೆನಾದಡೆ ನಿಮ್ಮಾಣೆ! ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ, ಭವಕ್ಕೆ ಬರಿಸದಿರಯ್ಯಾ ನಿಮ್ಮ ಧರ್ಮ!
--------------
ಸಿದ್ಧರಾಮೇಶ್ವರ
ಪರಶಕ್ತಿ ಅದಿಯೈಯ್ದ ಬೆರೆಸಿ ಬೆರೆಯದೆ ಬ್ರಹ್ಮವನರಿದೆನೆಂಬ ಯೋಗಿ ಕೇಳಾ. ಅದು ಸಗುಣದಲ್ಲಿ ತಾತ್ಪರ್ಯ ಅದು ನಿಷ್ಕಳದಲ್ಲಿ ನಿತ್ಯ ಅರಿದೆನೆಂಬ ಯೋಗಿ ಕೇಳಾ. ಅದು ಅನಾಹತದಲ್ಲಿ ಆನಂದ, ಅದು ಭಕ್ತಿಜ್ಞಾನವೈರಾಗ್ಯವಂ ಕೂಡಿದ ಏಕಮತ ಅದು ಪದ ನಾಲ್ಕು ಮೀರಿದ ಮಹಾಮತ. ಅದು ಉಂಡುದನುಣ್ಣದು, ಅದು ಬಂದಲ್ಲಿ ಬಾರದು, ಅದು ಸಕಳದಲ್ಲಿಯೂ ತಾನೆ ನಿಷ್ಕಳದಲ್ಲಿಯೂ ತಾನೆ, ಅದು ಪ್ರಾಪಂಚಿಕದಲ್ಲಿಯೂ ತಾನೆ, ಅದು ತಾತ್ಪರ್ಯದಲ್ಲಿಯೂ ತಾನೆ. ಅದು ಸಕಲ ಸರ್ವದ ನಿಷ್ಕಳದ ನಿರ್ಮಳದ ಮದದ ಮಾತ್ಸರ್ಯದ ಬಣ್ಣ ಹಲವರಿದ ಅತಿಗಳೆದ ಪರಮಸೀಮೆಯ ಅರಿದೆನೆಂಬ ಯೋಗಿ. ಅದು ಒಂದರಲ್ಲಿ ನಿತ್ಯ, ಎರಡರಲ್ಲಿ ತಾತ್ಪರ್ಯ, ಮೂರರಲ್ಲಿ ಮುಕ್ತ, ನಾಲ್ಕರಲ್ಲಿ ಕ್ರೋದ್ಥಿ, ಐದರಲ್ಲಿ ಆನಂದ, ಆರರಲ್ಲಿ ತಾನೆ, ಇಪ್ಪತ್ತೈದು ಪಟ್ಟಣದ ತಾತ್ಪರ್ಯಂಗಳನ್ನರಿತು ಮೂವತ್ತಾರು ವೃಕ್ಷಂಗಳ ಮೇಲೆ ಹಣ್ಣೊಂದೆ ಆಯಿತ್ತು ಕಾಣಾ. ಆ ಹಣ್ಣು ಹಣಿತು, ತೊಟ್ಟುಬಿಟ್ಟು ನಿರ್ಮಳ ಜ್ಞಾನಾಮೃತಂ ತುಂಬಿ ಭೂಮಿಯ ಮೇಲೆ ಬಿದ್ದಿತು. ಆ ಬಿದ್ದ ಭೂಮಿ ಪರಲೋಕ. ಆ ಹಣ್ಣ ಗುರು ಕರುಣವುಳ್ಳವಂಗಲ್ಲದೆ ಮೆಲಲಿಲ್ಲ. ದೀಕ್ಷತ್ರಯದಲ್ಲಿ ಅನುಮಿಷನಾದಂಗಲ್ಲದೆ ಆ ಲೋಕದಲ್ಲಿರಲಿಲ್ಲ. ಆ ಲೋಕದಲ್ಲಿದ್ದವಂಗೆ ಅಜಲೋಕದ ಅಮೃತವನು ನಿತ್ಯವು ಸೇವಿಸಿ ಸತ್ಯಮುಕ್ತನಾಗಿ ಬೇಡಿದವಕ್ಕೆ ಬೇಡಿದ ಪರಿಯ ಕೇವಲವನಿತ್ತು ತಾನು ಕಾಂಕ್ಷೆಗೆ ಹೊರಗಾಗಿ ಕಾಲನ ಕಮ್ಮಟಕ್ಕೆ ಕಳವಣ್ಣವಾಗಿ ನಿತ್ಯಸಂಗಮಕ್ಕೆ ಸಂಯೋಗವಾಗಿ ಕಪಿಲಸಿದ್ಧ ಮ್ಲಕಾರ್ಜುನಯ್ಯನೆಂಬ ಅನಾಹತ ಮೂಲಗುರುವಾಗಿ, ಎನ್ನನಿಷ್ಟಕ್ಕೆ ಪ್ರಾಪ್ತಿಸಿದನಯ್ಯಾ.
--------------
ಸಿದ್ಧರಾಮೇಶ್ವರ
ಮಹಾರಾಜನನೆಲ್ಲರೂ ಬಲ್ಲರು ಆ ರಾಜನು ಆರನೂ ಅರಿಯನು. ಅರಿಯನಾಗಿ. ಪದವಿಲ್ಲ ಫಲವಿಲ್ಲ ಭೋಗವಿಲ್ಲ ಪರಿಣಾಮವಿಲ್ಲ. ಮಹಾರಾಜಾದ್ಥಿರಾಜ ಶಿವನನೆಲ್ಲರೂ ಬಲ್ಲರು. ಆ ಶಿವನು ಅರಿಯನು, ಅರಿಯನಾಗಿ ಪದವಿಲ್ಲ ಭೋಗವಿಲ್ಲ ಪರಿಣಾಮವಿಲ್ಲ. ಇದು ಕಾರಣ, ಶಿವನನರಿದ ಸದ್ಭಕ್ತರ ಸಂಗದಿಂದ ಆ ಮಹಾಶಿವನು ತನ್ನನು ಅರಿವಂತೆ ಮಾಡಿಕೊಂಡನಾಗಿ ಪದ ಫಲ ಭೋಗ ಪರಿಣಾಮ ಮತ್ತೆ ಉಂಟೇ ? ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಇನ್ನಷ್ಟು ... -->