ಒಟ್ಟು 3 ಕಡೆಗಳಲ್ಲಿ , 3 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ವಾರಿದ್ಥಿಯ ಹೊಯ್ದು ಬೇರ್ಪಡಿಸಬಹುದೆ ?ಫಲದೊಳಗಣ ಬೀಜ ಬಲಿವುದಕ್ಕೆ ಮೊದಲೆ ತೆಗೆಯಬಹುದೆ ?ಮಹಾಘನವನರಿವುದಕ್ಕೆ ಮೊದಲೆ,ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯನಹ ಪರಿ ಇನ್ನೆಂತೊ ?ಇಕ್ಷುದಂಡ ಬಲಿವುದಕ್ಕೆ ಮೊದಲೆ ತನಿರಸ ಬಹುದೆ ?ನಾನೆಂಬುದಕ್ಕೆ ಸ್ಥಾಣು, ಅಹುದಕ್ಕೆ ಭಾವದ ಬಲಿಕೆ ಇನ್ನಾವುದು,ನಿಃಕಳಂಕ ಮಲ್ಲಿಕಾರ್ಜುನಾ ?
ತಿಲದೊಳಗಣ ತೈಲ, ಫಲದೊಳಗಣ ರಸ,ಹೇಮದೊಳಗಣ ಬಣ್ಣ, ಮಾಂಸದೊಳಗಣ ಕ್ಷೀರ,ಇಕ್ಷುದಂಡದ ಸಾರದ ಸವಿ,ಒಳಗು ಹೊರಗಾಗಿಯಲ್ಲದೆ ಕುಲದ ಸೂತಕ ಬಿಡದು.ಇಷ್ಟದಲ್ಲಿ ತೋರುವ ವಿಶ್ವಾಸ ದೃಷ್ಟವಾಗಿಯಲ್ಲದೆ,ಶಿಲೆಕುಲದ ಸೂತಕ ಬಿಡದು.ಬಿಡುವನ್ನಕ್ಕ ಜ್ಞಾನಶೂನ್ಯವಿಲ್ಲ, ಕಾಮಧೂಮ ಧೂಳೇಶ್ವರಾ.
ಫಲದೊಳಗಣ ಮಧುರಗೋಪ್ಯದಂತಿದ್ದಿತ್ತು,ಚಂದ್ರಕಾಂತದ ಉದಕದ ತೆರನಂತಿದ್ದಿತ್ತು,ಮಯೂರನ ತತ್ತಿಯ ಚಿತ್ರದಂತಿದ್ದಿತ್ತು,ಶಿಶುಕಂಡ ಕನಸಿನ ಪರಿಯಂತಿದ್ದಿತ್ತು,ಕೂಡಲಚೆನ್ನಸಂಗಯ್ಯಾ [ನಿಮ್ಮ ನಿಲವು] ಫಸದ್ಗುರುಚಿತ್ತದ ಪದದಂತಿದ್ದಿತ್ತು.