ಅಥವಾ

ಒಟ್ಟು 3 ಕಡೆಗಳಲ್ಲಿ , 1 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂದು ಬಸವಣ್ಣ ಬಂದು ಜರಿದು ಹೋದುದ ಮರೆದೆನೆ ಆ ನೋವ! ಜರಿದುದೆ ಎನಗೆ ದೀಕ್ಷೆಯಾಯಿತ್ತು! ಆ ದೀಕ್ಷೆಯ ಗುಣದಿಂದ ಫಲಪದಕ್ಕೆ ದೂರವಾದೆ ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ ಬಸವಣ್ಣನೆನ್ನ ಪರಮಾರಾಧ್ಯ!
--------------
ಸಿದ್ಧರಾಮೇಶ್ವರ
ಶುದ್ಧವೆ ತದ್ರೂಪವಾಗಿ ಬಾರನೆ ಅಂದು ಅನಾಹತನೆಂಬ ಗಣೇಶ್ವರನು ಬಂದೆನ್ನ ಜರಿಯನೆ? ಜರಿದರೆ ನೀನು ಕೊಟ್ಟ ತಲೆಯ ಹುಣ್ಣ ಕಣ್ಣೆಂದು ತೆರೆದು ಲಜ್ಜೆಗೆಡನೆ ಆನಾ ಗಣೇಶ್ವರನ ಕೈಯಲ್ಲಿ? ಶುದ್ಧಕಾತನೊಡೆಯ, ಸಿದ್ಧಕಾತನೊಡೆಯ, ಪ್ರಸಿದ್ಧಕಾತನೊಡೆಯ! ಒಪ್ಪಿಪ್ಪಾರು ಆತನ ಸೀಮೆ. ಮೂವತ್ತಾರರ ಮೇಲಿಂದಾತನ ಸಂಯೋಗ. ಇಂತಪ್ಪಾತನ ನೀನೆನ್ನಲರಿಯದೆ ನೊಂದೆ ಕೆಲವು ದಿನ. ಈ ನೋವ ಮಾಣಿಸಿದಾತನೂ ಆತನೆ, ಎನ್ನ ಭವವ ತಪ್ಪಿಸಿದಾತನೂ ಆತನೆ, ಆತನಿಂದ ಉರುತರ ಕೈವಲ್ಯಕ್ಕೆ ಕಾರಣಿಕನಾದೆ! ಆತನ ಪ್ರಸಾದದಿಂದ ನಿನ್ನವರ ಪಾದೋದಕ ಪ್ರಸಾದಕ್ಕೆ ಯೋಗ್ಯನಾದೆ. ಫಲಪದಕ್ಕೆ ದೂರವಾದೆ ಕಪಿಲಸಿದ್ಧಮಲ್ಲಿಕಾರ್ಜುನ, ಬಸವಣ್ಣನಿಂದ!
--------------
ಸಿದ್ಧರಾಮೇಶ್ವರ
ತನುತ್ರಯದ ಗುಣದಲ್ಲಿ ತಾಮಸಿಯಲ್ಲ ಬಸವಣ್ಣ; ಮನತ್ರಯದಲ್ಲಿ ಮತ್ತನಲ್ಲ ಬಸವಣ್ಣ; ಮಲತ್ರಯದಲ್ಲಿ ಮಗ್ನನಲ್ಲ ಬಸವಣ್ಣ; ಲಿಂಗತ್ರಯದಲ್ಲಿ ನಿಪುಣ ಬಸವಣ್ಣ; ಐದಾರು ಪ್ರಸಾದದಲ್ಲಿ ಪ್ರಸನ್ನ ಬಸವಣ್ಣ; ಈರೈದು ಪಾದೋದಕದಲ್ಲಿ ಪ್ರಭಾವ ಬಸವಣ್ಣ; ಎರಡು ಮೂರು ಭಕ್ತಿಯಲ್ಲಿ ಸಂಪನ್ನ ಬಸವಣ್ಣ; ಮೂವತ್ತಾರು ತತ್ತ್ವದಿಂದತ್ತತ್ತ ಕಪಿಲಸಿದ್ಧಮಲ್ಲಿಕಾರ್ಜುನಯ್ಯನ ಕೂಡಿ, ಫಲಪದಕ್ಕೆ ದೂರವಾದನಯ್ಯಾ ನಮ್ಮ ಬಸವಣ್ಣನು.
--------------
ಸಿದ್ಧರಾಮೇಶ್ವರ
-->