ಅಥವಾ

ಒಟ್ಟು 21 ಕಡೆಗಳಲ್ಲಿ , 12 ವಚನಕಾರರು , 16 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕ್ರೀವಿಡಿದು ಗುರುಸಂಬಂದ್ಥಿಯಾಗಿ, ಜಾÕನವಿಡಿದು ಲಿಂಗಸಂಬಂದ್ಥಿಯಾಗಿ. ಘನವಿಡಿದು ಮಹಾಜಾÕನಿಯಾಗಿ, ಅರಿವು ಆಚರಣೆಯ ಕಂಡು, ಜಾÕನ ಮುಕುರವೆಂಬ ಮುಂದಣ ಶ್ರೀಸಂಬಂದ್ಥಿಯಾಗಿ, ಆಚಾರದಲ್ಲಿ ಸಂಪನ್ನನಾಗಿ, ಮಹೇಶ್ವರಸ್ಥಲವನರಿದು, ಅದೇ ಜಂಗಮವಾದ ಬಳಿಕ ನಿರಾಕುಳನಾಗಿ ಆಚರಿಸಿದರೆ ಅನಾದಿ ಜಂಗಮವೆಂಬೆ. ಸಾಮವೇದೇ- ವಿವಚಾಸೋವಿಚಾ ಲಿಂಗಾಲಿಂಗಿ ಚ ಫಲಾದಿ ಬ್ರಹ್ಮರಾಕ್ಷಸ ಸೋವಿಸಂಗಶ್ಚ | ಸೂಕರ ಶತಕೋಟಿ ಜನ್ಮ ಚ ಸೋಪಿ ಕ್ರೀಡಾಲಿಂಗ ಮಲಮೂತ್ರ ಮಾಂಸ ಭುಂಜಿತಃ | ಬ್ರಹ್ಮೇನ ಕೋಟಿ ರಾಕ್ಷಸಃ ಸೋಸಂಗೇನ ಶತಕೋಟಿಗಾರ್ದಭ ಜನ್ಮ ಚ | ಅದೇ ದಾಸಿ ದಾಸೇ ಸೂಕರ ಸಂಗಶಃ ಚ ನಾಃ | ಸೋವ ಮಾತ್ರವೆಂದು ತಂದ ಸ್ತ್ರೀಗಳನು ಶಿಷ್ಯಾದಿ ಪುತ್ರರ ಕೈಯ ಗುರು ತಾಯಿ ಎಂಬ ನಾಮಕರಣಂಗಳನುಂಟುಮಾಡಿ, ತನ್ನ ಅಂಗವಿಕಾರಕ್ಕೆ ತಂದ ಸಂತೆಯ ಡೊಂಬಿತಿಯ ತಂದು, ಹಿರಿಯರಲ್ಲಿ ಸರಿಮಾಡುವ ಜಂಗಮವೆ ಗುರುವೆ? ಅಜಾÕನ ಪುರುಷನಲ್ಲ, ಅವ ಹಿರಿಯತನಕ್ಕೆ ಸಲ್ಲ, ಅವಂಗೆ ಗುರುವಿಲ್ಲ ಲಿಂಗವಿಲ್ಲ, ಜಂಗಮ ಮುನ್ನವೆಯಿಲ್ಲ. ಅವ ಘಟಾತ್ಮನು ಸೋವಿಯ ಸಂಗ ಬೇಡ ಬಿಡಿರಣ್ಣಾ, ಸೋವಿಯ ಸಂಗವ ಮಾಡಿದರೆ ಶತಕೋಟಿ ದಾಸಿಯ ಬಸುರಲ್ಲಿ ಬಂದು, ಹೇಸಿಕೆಯಿಲ್ಲದೆ ಮಲಮೂತ್ರವನು ಹೇಗೆ ಸೂಕರ ಭುಂಜಿಸುವುದೊ ಹಾಂಗೆ ಭುಂಜಿಪನು. ನಾನಾ ಯೋನಿಯ ನರಕುವದು. ಸೋವಿ ಮಾತ್ರೇಣ ಆ ಲಿಂಗನಂ ಗುರು ತಾಯ ಅಪಮಾನ ಸಾಮಾನ್ಯವೆಂದು ಸೋವಿಯ ಸಂಗವ ಮಾಡಿದಡೆ ಎಪ್ಪತ್ತೇಳುಕೋಟಿ ಶ್ವಪಚಯೋನಿ ತಪ್ಪದಯ್ಯ. ಹನ್ನೆರಡು ಕಂಬ ಸಾಕ್ಷಿಯಾಗಿ, ಕಳಕನ್ನಡಿ ಸಾಕ್ಷಿಯಾಗಿ, ತೆಳೆಮಲು ಕಟ್ಟಿ ಸಾಕ್ಷಿಯಾಗಿ, ಆಯಿರಣೆಕೋಲು ಸಾಕ್ಷಿಯಾಗಿ, ಮುತ್ತೈದೆತನದಲ್ಲಿ ಶ್ರೇಷ್ಠಯಾಗಿ, ಜಾÕನ ದೃಕ್ಕಿನಿಂ ತಿಳಿದು, ಅನುಭಾವದ ಮುಖವನರಿದಂತೆ, ಆ ಜಾÕನನೇತ್ರವ ಅರಿದು ಧಾರೆಯನೆರೆಸಿಕೊಂಡು, ಅರಿವಿನಲ್ಲಿ ಇರದೆ ಕುರಿಯ ಹೇಲ ತಿಂಬಂತೆ, ಬಾಯಿಗೆ ಬಂದಂತೆ ಸೋವಿಯ ಸಂಗವ ಮಾಡುವವರ ಸರ್ವಾಂಗವೆಲ್ಲ ಗಣಿಕೆಯ ಯೋನಿಯ ಬಸುರ ನೋಡಾ. ಧಾರೆಯನೆರೆಸಿಕೊಂಡು ಕ್ರೀವಿಡಿದು ನಡೆಯದೆ, ತೊತ್ತಿನ ಮಗನಿಗೆ ಪಟ್ಟ ಕಟ್ಟಿದರೆ ಹಾದಿಯ ಎಲುವ ಕಂಡು ಓಡಿಹೋಗಿ ಗಡಗಡನೆ ಕಡಿವಂತೆ, ಸೋವಿಯ ಎಂಜಲ ತಿಂದವಂಗೆ ಗುರುವಿಲ್ಲ. ಅವ ದೇವಲೋಕ ಮತ್ರ್ಯಲೋಕ ಎರಡಕ್ಕೆ ಸಲ್ಲ. ಆವಾಗಮದಲ್ಲಿ ಉಂಟು, ಗಳಹಿ ಹೇಳಿರೊ, ಮಕ್ಕಳಿರಾ. ನೀವು ಬಲ್ಲರೆ ಕಾಳನಾಯ ಹೇಲ ತಿಂಬಂಗೆ ಹಿರಿಯನೆಂದು, ಹೋತನಂತೆ ಗಡ್ಡವ ಬೆಳಸಿಕೊಂಡು ಗುಡರಗುಮ್ಮನಂತೆ ಸುಮ್ಮನಿರುವಿರಿ. ಗರ್ವತನಕ್ಕೆ ಬಂದು ಹಿರಿಯರೆಂದು ಆಚರಣೆ ನ್ಯಾಯವ ಬಗಳುವಿರಿ. ಸೋವಿಸಂಗದಿಂದ ಕನಿಷ್ಠ ನರಕ ಕಾಣಿರಣ್ಣಾ. ಸೋವಿಯ ಸಂಗವ ಬಿಟ್ಟು ಧಾರೆಯ ಸ್ತ್ರೀಯಳ ನೆರದರೆ, ಆಚಾರವಿಡಿದು ನಡೆದು ಆಚರಣೆಯ ನುಡಿದರೆ ಶುದ್ಧವಾಗುವದಲ್ಲದೆ ತೊತ್ತಿನ ಮಗನಾಗಿ ಎಡೆಯ ಸಮಗಡಣವ ಬೇಡುವ ಪಾತಕರ, ಅವರ ಜಂಗಮವೆಂಬೆನೆ? ಸೋವಿಯ ಸಂಗದಿಂದ ಬಂದುದು ಬ್ರಹ್ಮೇತಿ. ಅಥರ್ವಣ ಸಾಮವೇದ ಯಜುರ್ವೇದ ಋಗ್ವೇದ ಇಂತಪ್ಪ ನಾಲ್ಕು ವೇದದಲ್ಲಿ ಶ್ರುತಿ ಸ್ಮøತಿಗಳಲ್ಲಿ ಆಗಮ ಪುರಾಣಂಗಳಲ್ಲಿ ಸೋವಿಯ ವಾಚ್ಯವೆಂಬುದುಂಟೆ ಪರಮಪಾತಕರಿರಾ? ನೂತನವ ಗಂಟಿಕ್ಕಿ ಜಗಲಿಯೆನ್ನದೆ ಪಟ್ಟಶಾಲೆಯೆಂಬಿಂ ತೊಂಡರಿರಾ. ತೊತ್ತನೊಯ್ದು ತೊತ್ತೆದಾಸಿ ಬಾಯೆನ್ನದೆ ಹೋವಿಯೆಂದು ಬಗಳುವಿರಿ. ಕಲಿಯುಗದಲ್ಲಿ ನೂತನದ ಸೂಳೆಯ ಮಕ್ಕಳು ನೀವು. ಸೋವಿಯ ಸಂಗವ ಮಾಡಿದವನು ಅರಿವುಳ್ಳ ಪುರುಷನಾದರೂ ಆಗಲಿ, ಅರಿದು ಮತ್ತೆ ಅರೆಮರುಳಾದ ಹಿರಿಯರನೇನೆಂಬೆನಯ್ಯಾ. ಅವನು ಪಾತಕನಘೋರಿಗಳು. ಅವರು ಇವರುವನರಿಯದ ಅಘೋರಿಗಳೆಂಬ ಇಂತಪ್ಪ ಸೋವಿಯ ಸಂಗವ ಮಾಡುವ ಬ್ರಹ್ಮೇತಿಕಾರ ಪಂಚಮಹಾಪಾತಕರು ಇಹಪರಕ್ಕೆ ಸಲ್ಲರೆಂದುದು. ನಿಮ್ಮಾಣೆ ನಿಮ್ಮ ಪ್ರಮಥರಾಣೆ, ಇಹವಿಲ್ಲ ಪರವಿಲ್ಲ, ಮುಕ್ತಿಯ ಫಲವಿಲ್ಲ, ಅಘೋರವಲ್ಲದೆ ಮತ್ತೇನೂ ಇಲ್ಲ. ನಿಮ್ಮಾಣೆ ಬ್ಥೀಮಬಂಕೇಶ್ವರಾ.
--------------
ಭೀಮಬಂಕೇಶ್ವರ
ಅಯ್ಯಗಳು ರುದ್ರಾಕ್ಷಿಯ ಕೊಟ್ಟ್ಲಲ್ಲಿ ಫಲವಲ್ಲದೆ, ಸುಮ್ಮನೆ ಧರಿಸಿದಲ್ಲಿ ಫಲವಿಲ್ಲ ನೋಡಾ, ಭಕ್ತನು ಪದಾರ್ಥ ನೀಡಿದಲ್ಲಿ ಫಲವಲ್ಲದೆ, ಬೇಡಿ ರುಚಿಸಿದಲ್ಲಿ ಫಲವಿಲ್ಲ ನೋಡಾ. ನಿನ್ನರಿವ ನಾನರಿತಲ್ಲಿ ಫಲವಲ್ಲದೆ, ಅರುಹಿಸಿದಲ್ಲಿ ಫಲವಿಲ್ಲ. ಅಹುದೆಂಬುದು ನ್ಕೀ, ಬಲ್ಲೆ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಮಹಾರಾಜನನೆಲ್ಲರೂ ಬಲ್ಲರು ಆ ರಾಜನು ಆರನೂ ಅರಿಯನು. ಅರಿಯನಾಗಿ. ಪದವಿಲ್ಲ ಫಲವಿಲ್ಲ ಭೋಗವಿಲ್ಲ ಪರಿಣಾಮವಿಲ್ಲ. ಮಹಾರಾಜಾದ್ಥಿರಾಜ ಶಿವನನೆಲ್ಲರೂ ಬಲ್ಲರು. ಆ ಶಿವನು ಅರಿಯನು, ಅರಿಯನಾಗಿ ಪದವಿಲ್ಲ ಭೋಗವಿಲ್ಲ ಪರಿಣಾಮವಿಲ್ಲ. ಇದು ಕಾರಣ, ಶಿವನನರಿದ ಸದ್ಭಕ್ತರ ಸಂಗದಿಂದ ಆ ಮಹಾಶಿವನು ತನ್ನನು ಅರಿವಂತೆ ಮಾಡಿಕೊಂಡನಾಗಿ ಪದ ಫಲ ಭೋಗ ಪರಿಣಾಮ ಮತ್ತೆ ಉಂಟೇ ? ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಲಿಂಗವನರಿದು ಲಿಂಗಾರ್ಚನೆಯ ಮಾಡಿ ಗುರು ಲಿಂಗ ಜಂಗಮಕ್ಕೆ, ತನು ಮನ ಧನವ ನಿವೇದಿಸಿ ಲಿಂಗವನಲ್ಲದೆ ಅನ್ಯವನರಿಯದಿಪ್ಪ ಮಹಾಮಹಿಮನು. ಆತನ ನುಡಿಯೇ ವೇದ, ಆತನ ನಡೆಯೇ ಆಗಮ, ಆತ ಮಾಡಿತ್ತೇ ಶಾಸ್ತ್ರ, ಆತ ಹೇಳಿತ್ತೇ ಪುರಾಣ, ಆತನಿದ್ದುದೇ ದೇವಲೋಕ. ಆತನುಪಮಾತೀತನು, ಆತನ ದರ್ಶನ ಸ್ಪರ್ಶನದಿಂದ ಪಾಪಕ್ಷಯ. ಆತನ ಪಾದೋದಕಸೇವನೆಯೊಳೆಲ್ಲರು ಜೀವನ್ಮಕ್ತರು ಕೇಳಿರಣ್ಣ. ಆ ಮಹಾಮಹಿಮನ ಶ್ರುತ ದೃಷ್ಟ ಅನುಮಾನದಿಂದ ವಿಚಾರಿಸಿ ನೋಡಿರಣ್ಣ, ಬಸವರಾಜದೇವರು ಮೊದಲಾದ ಪುರಾತನರ ಚರಿತ್ರವನು. ಅವರು ಲಿಂಗವನರಿದು ಲಿಂಗಾರ್ಚನೆಯ ಮಾಡಿ ಗುರು ಲಿಂಗ ಜಂಗಮಕ್ಕೆ ತನು ಮನ ಧನವನರ್ಪಿಸಿ ಅಹುದೆನಿಸಿಕೊಂಡರಲ್ಲವೆ ? ಇದನರಿತು ಆವನಾನೊಬ್ಬನು ಆಷ್ಟಾದಶವಿದ್ಯೆ ಪುರಾಣವನೋದಿ ಕೇಳಿ ಹೇಳಿದರೇನೋ ಗಿಣಿ ಓದಿದಂತೆ ? ಸರ್ವಸಂಗಪರಿತ್ಯಾಗಿಯಾಗಿ ಅರಣ್ಯದೊಳಗಿದ್ದಡೇನು, ವನಚರವ್ಯಾಧನಂತೆ ? ಭೂಪ್ರದಕ್ಷಿಣೆ ಮಾಡಿ ಬಂದಡೇನು, ಮೃಗದಂತೆ ? ಅಶನವ ಬಿಟ್ಟಡೇನು, ಪರಾಕಿಯಂತೆ ? ವಿಷಯವ ಬಿಟ್ಟಡೇನು, ಅಶಕ್ತನಪುಂಸಕನಂತೆ ? ನಿದ್ರೆಯ ಬಿಟ್ಟಡೇನು, ಜಾರಚೋರರಂತೆ ? ಸಾಮಥ್ರ್ಯಪುರುಷರೆನಿಸಿ ಖೇಚರತ್ವದಲ್ಲಿದ್ದಡೇನು, ಪಕ್ಷಿಗಳಂತೆ ? ಜಲದಲ್ಲಿ ಚರಿಸಿ ಸಮುದ್ರಲಂಘನೆಯ ಮಾಡಿದಡೇನು, ಮತ್ಸ್ಯಾದಿಗಳಂತೆ ? ದಾನಾದಿಗಳ ಮಾಡಿದಡೇನು, ಕ್ಷತ್ರಿಯನಂತೆ ? ಏನ ಮಾಡಿದಡೇನು ? ಏನ ಕೇಳಿದಡೇನು ? ಸಾಮಾಥ್ರ್ಯಪುರುಷರೆನಿಸಿಕೊಂಡರೇನು ? ಫಲವಿಲ್ಲ, ಭಕ್ತಿಗೆ ಸಲ್ಲದು, ಮುಕ್ತಿಗೆ ಸಲ್ಲದು. ಇದರಿದು ಶಿವಲಿಂಗಾರ್ಚನೆಯ ಮಾಡುವುದು ಗುರು ಲಿಂಗ ಜಂಗಮಕ್ಕೆ ತನು ಮನ ಧನವ ನಿವೇದಿಸುವುದು. ನಿವೇದಿಸಿದಡೆ ಸರ್ವಸಿದ್ಧಿಯಹುದು. ಸಕಲಲೋಕಕ್ಕೆ ಪೂಜ್ಯನಹ, ಇದೇ [ಸ]ಲುವ ಯುಕ್ತಿ, ಇದೆ ಸದ್ಭಕ್ತಿ, ಇದೇ ಕೇವಲ ಮುಕ್ತಿ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಅಯ್ಯಾ ಮಹಾರಾಜನನೆಲ್ಲರೂ ಬಲ್ಲರು, ಆ ರಾಜನಾರನೂ ಅರಿಯನು. ಅರಿಯನಾಗಿ ಪದವಿಲ್ಲ, ಫಲವಿಲ್ಲ, ಭೋಗವಿಲ್ಲ, ಪರಿಣಾಮವಿಲ್ಲ. ಶಿವಶಿವಾ ! ಮಹಾರಾಜಾಧಿರಾಜ ಶಿವನನೆಲ್ಲರೂ ಬಲ್ಲರು, ಆ ಶಿವನು ಆರನೂ ಅರಿಯನು, ಅರಿಯನಾಗಿ ನಿಜಸುಖವಿಲ್ಲ. ಇದು ಕಾರಣ ಶಿವನರಿಯದ ಸದ್ಭಕ್ತರ, ಅನುಭವ ಸಂಪನ್ನರ ಸಂಗದಿಂದ ಆ ಶಿವನು ತನ್ನನರಿವಂತೆ ಮಾಡಿಕೊಂಡಡೆ ಪರಮಸುಖವ ಕೊಡುವನಯ್ಯ, ನಮ್ಮ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನು.
--------------
ಉರಿಲಿಂಗಪೆದ್ದಿ
ಲಿಂಗವನರಿಯದೆ ಏನನರಿದಡೆಯೂ ಫಲವಿಲ್ಲ, ಲಿಂಗವನರಿದ ಬಳಿಕ ಮತ್ತೇನನರಿದಡೆಯೂ ಫಲವಿಲ್ಲ. ಸರ್ವಕಾರಣ ಲಿಂಗವಾಗಿ, ಲಿಂಗವನೆ ಅರಿದರಿದು ಲಿಂಗಸಂಗವನೆ ಮಾಡುವೆ. ಸಂಗಸುಖದೊಳು ಓಲಾಡುವೆ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಅವಳ ಕಂದ ಬಾಲಸಂಗ, ನಿನ್ನ ಕಂದ ಚೆನ್ನಲಿಂಗ ಎಂದು ಹೇಳಿದರಮ್ಮಾ ಎನ್ನ ಒಡೆಯರು. ಫಲವಿಲ್ಲದ ಕಂದನಿರ್ಪನವಳಿಗೆ, ಎನಗೆ ಫಲವಿಲ್ಲ, ಕಂದನಿಲ್ಲ. ಇದೇನೋ ದುಃಖದಂದುಗ ಗಂಗಾಪ್ರಿಯ ಕೂಡಲಸಂಗಮದೇವಾ ?
--------------
ಗಂಗಾಂಬಿಕೆ
ಮೃಗಾದಿಗಳಂತೆ [ಆಚರಿಸಿದಡೇನುರಿ] ದಾನಾದಿಗಳ ಕೊಟ್ಟಡೇನು ? ಕ್ಷತ್ರಿಯರಂತೆ. ಅದೆಂತೆಂದಡೆ, ಶಿವನ ವಾಕ್ಯ: ಪಯೋಹಾರೀ ತು ಮಾರ್ಜಾಲೋ ನಗ್ನೋ ಮುಗ್ಧಃ ಪಿಶಾಚವತ್ ನಿತ್ಯಸ್ನಾನಶ್ಚ ಕಾಕಶ್ಚ ವಾಲ್ಮೀಕಾಃ ಸರ್ಪಜಾತಯಃ ತೃಣಂ ಭಕ್ಷಂತಿ ಪಶವಃ ವನವಾಸಿಮೃಗಾಸ್ತಥಾ [ಮಾ]ಸ್ತು ಚೈತಾನಿ ಕಾರ್ಯಾಣಿ ನ ಕರೋತಿ ಹಿ ಪಾರ್ವತಿ ಎಂದುದಾಗಿ, ಆವ ಸಿದ್ಧಿಗಳಿಂದಲೂ ಫಲವಿಲ್ಲ, ಏನನೋದಿ ಏನ ಕೇಳಿ ಏನ ಹೇಳಿಯೂ ಫಲವಿಲ್ಲ, ಇವು ಭಕ್ತಿಯೊಳಗಲ್ಲ, ಮುಕ್ತಿಗೆ ಸಲ್ಲವು. ಇದನರಿದು ಆವನಾನೊಬ್ಬನು ಲಿಂಗವರಿತು ಲಿಂಗಾರ್ಚನೆಯಂ ಮಾಡಿ, ಗುರುಲಿಂಗಜಂಗಮಕ್ಕೆ ತನುಮನಧನವ ಸವೆಸಿದಡೆ ಅದೇ ಚಲ್ವ ಭಕ್ತಿ, ಅದೇ ಚಲ್ವ ಮುಕ್ತಿ, ಅದೇ ಸರ್ವಸಿದ್ಧಿ. ಅದೇ ಸರ್ವಕಾರಣವಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಜಂಗಮಕ್ಕೆ ಮಾಡಿ ಗತಿಯ ಪಡೆದೆಹೆನೆಂಬ ಬೆವಹಾರದ ಭಕ್ತರು ನೀವು ಕೇಳಿರಯ್ಯಾ. ಜಂಗಮಕ್ಕೆ ಮಾಡಿ, ಗತಿಯ ಪಡೆದೆಹೆನೆಂಬ, ಭಕ್ತಿವ್ಯರ್ಥರು ನೀವು ಕೇಳಿರಯ್ಯಾ. ಅಗ್ನಿಮುಖದಲ್ಲಿ ಪಾಕವಾದ ಸಸಿ ತೆನೆಯಪ್ಪುದೆ ಶಶಿಧರಂಗೆ ಮಾಡಿದಡೆ ಫಲವಪ್ಪುದು, ಆ ಫಲದಾಯಕನೆ ಮರಳಿ ಭವಕ್ಕೆ ಬಹನು. ಜಂಗಮಕ್ಕೆ ಮಾಡಿದಡೆ ಫಲವಿಲ್ಲ, ಮರಳಿ ಭವವಿಲ್ಲ. ಕಿಚ್ಚಿನ ಕಣಜದಲ್ಲಿ ಬೀಜವ ತುಂಬಿ ಬಿತ್ತುವ ದಿನಕ್ಕರೆಸಿದಡುಂಟೆ, ಕೂಡಲಸಂಗಮದೇವಾ
--------------
ಬಸವಣ್ಣ
ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ ರಾಗ ದ್ವೇಷವೆನಿಪ ಒಡಲಿರೆ, ರಾಗ ದ್ವೇಷ ಗಮಾನಾಗಮನಂಗಳಿರುತ್ತಿರೆ, ಬ್ರಹ್ಮವಾನೆಂಬ ಬರಿಯ ವಾಗದ್ವೈತದಲ್ಲಿ ಫಲವಿಲ್ಲ. ನಂಬು, ಸುಖಸಾಗರವನ?, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನ.
--------------
ಉರಿಲಿಂಗಪೆದ್ದಿ
ಆದ್ಯರ ವಚನವ ಕೇಳಿ, ವೇದಾಗಮಂಗಳ ತಿಳಿದು, ಶ್ರೀವಿಭೂತಿಯ ಧಾರಣವೆ ಮುಖ್ಯವೆಂದರಿದು ಧರಿಸಿರಣ್ಣ. ಇಂತಿದನರಿಯದೆ, ಶಿವದೀಕ್ಷೆಯ ಮಾಡಿದರೂ ದೀಕ್ಷೆಯ ಪಡೆದರೂ ಫಲವಿಲ್ಲ. ಶಿವಮಂತ್ರಸ್ಮರಣೆ ತಪಯಜ್ಞಂಗಳ ಮಾಡಿದಲ್ಲಿಯೂ ಫಲವಿಲ್ಲ. ಆತಂಗೆ ವಿದ್ಯೆಯು ದೇವತೆಗಳು ಆಗಮಜ್ಞಾನವು ಇಲ್ಲ. `ನ ದೀಕ್ಷಾ ನ ತಪೋ ಮಂತ್ರಂ ನ ಯಜ್ಞೋ ದೇವತಾ ನ ಚ ವಿದ್ಯಾ ನೈವಾಗಮಜ್ಞಾನಂ ಭಸ್ಮಮಾಹಾತ್ಮವರ್ಜಿತೇ' ಎಂದುದಾಗಿ: ಇದು ಕಾರಣ, ಶ್ರೀವಿಭೂತಿಯ ಮಹಾತ್ಮೆಯನರಿದು ಧರಿಸಲು, ಸರ್ವಸಿದ್ಧಿಯಪ್ಪುದು. ಬಳಿಕ ನಮ್ಮ ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನೊಳಗಿಪ್ಪನು.
--------------
ಸ್ವತಂತ್ರ ಸಿದ್ಧಲಿಂಗ
ಜಂಗಮ ಬರಬೇಕೆಂದು ಲಿಂಗಾರ್ಚನೆಯ ಮಾಡೂದು. ಆ ಜಂಗಮ ಬಂದರೆ ತನ್ನ ಲಿಂಗಾರ್ಚನೆಯ ಮಾಣಬೇಕು, ಮಾದು ಜಂಗಮಾರ್ಚನೆಯ ಮಾಡಬೇಕು. ಲಿಂಗದಲೇನುಂಟು, ಜಂಗಮದಲೇನುಂಟೆಂದರೆ: ಲಿಂಗದಲ್ಲಿ ಫಲವುಂಟು ಪದವುಂಟು ಛಲವುಂಟು ಭವವುಂಟು. ಜಂಗಮದಲ್ಲಿ ಫಲವಿಲ್ಲ ಪದವಿಲ್ಲ ಕುಲವಿಲ್ಲ ಛಲವಿಲ್ಲ ಭವವಿಲ್ಲ. ಇದು ಕಾರಣ ಕೂಡಲಚೆನ್ನಸಂಗಮದೇವಾ ಜಂಗಮವೇ ಲಿಂಗವೆಂದು ನಂಬಿದನಾಗಿ ಬಸವಣ್ಣ ಸ್ವಯಲಿಂಗವಾದ.
--------------
ಚನ್ನಬಸವಣ್ಣ
ಅನ್ಯದೇಹಿಯೆಂದು ಎನ್ನ ಕಳೆಯದಿರು, ಕರ್ಮದೇಹಿಯೆಂದು ಕೈಯ ಬಿಡದಿರು, ಮತ್ರ್ಯನೆಂದು ಮಾಯಕ್ಕೆ ಗುರಿಮಾಡದಿರು, ಮದಡನೆಂದು ಮನವಿಕಾರಕ್ಕೆ ಗುರಿಮಾಡದಿರು, ಅಜ್ಞಾನಿಯೆಂದು ಅಹಂಕಾರಕ್ಕೆ ಗುರಿಮಾಡದಿರು, ಮದದೇಹಿಯೆಂದು ಮಾಯಾತಮಂಧಕ್ಕೆ ಗುರಿಮಾಡದಿರು, ಜಲ ಅಗ್ನಿಯ ಗುಣವಿರಲೊ ಎನ್ನಯ್ಯ. ಅದು ಎಂತೆಂದೊಡೆ : ಜಲ ಹರಿವೆಡೆಯಲ್ಲಿ ಹೊಲಗೇರಿ ಉತ್ತಮಗೇರಿ ಅಮೇಧ್ಯದಗೇರಿಯೆಂದು ನೋಡಿ ಹರಿವುದೆ ? ಹರಿಯದು ; ಅದಕ್ಕೆಲ್ಲ ಸಮ. ಅಗ್ನಿ ಶ್ವಪಚರ ಮನೆ, ಗೃಹಸ್ಥರ ಮನೆ, ಬೇಡ ಮಾದಿಗ ಹದಿನೆಂಟು ಜಾತಿ ಎಂದು ಅಡಿಯಿಡಲು ಮುನಿವುದೆ ? ಮುನಿಯದು. ಎನ್ನ ಅನ್ಯದೇಹಿಯೆಂದು, ಕರ್ಮದೇಹಿಯೆಂದು, ಮತ್ರ್ಯದೇಹಿಯೆಂದು, ಮದಡದೇಹಿಯೆಂದು, ಅಜ್ಞಾನಿಯೆಂದು ಕಳೆದಡೆ ಹುರುಳಿಲ್ಲ. ಅತ್ತಿಯಹಣ್ಣು ಬಿಚ್ಚಿದರೆ ಬಲು ಹುಳು. ಎನ್ನ ಚಿತ್ತದೊಳವಗುಣವ ವಿಸ್ತರಿಸಿದರೇನು ? ಫಲವಿಲ್ಲ. ನೋಡದೆ ಕಾಡದೆ ಮಾಯಾತಮವಕಳೆದು ಜ್ಞಾನಜ್ಯೋತಿಯ ತೀವು. ಎನ್ನ ನಿಮ್ಮಯ ಶರಣರು ಚೆನ್ನಬಸವಣ್ಣ ಅಕ್ಕನಾಗಮ್ಮ ನೀಲಲೋಚನೆ ನಿಂಬವ್ವೆ ಮಹಾದೇವಿ ಮುಕ್ತಾಯಕ್ಕ ಅಜಗಣ್ಣ ಅಂಬಿಗರ ಚೌಡಯ್ಯ ಕಲಿಕೇತಯ್ಯ ಬ್ರಹ್ಮಯ್ಯ ನಿರ್ಲಜ್ಜಶಾಂತಯ್ಯ ನಿಜಗುಣದೇವರು ಸಿದ್ಧರಾಮಿತಂದೆ ಮರುಳಶಂಕರದೇವರು ಕಿನ್ನರಿಬ್ರಹ್ಮಯ್ಯ ವೀರಗಂಟೆಯ ಮಡಿವಾಳಯ್ಯ ಮೇದರ ಕೇತಯ್ಯಗಳು ಅರವತ್ತುಮೂವರು ಪುರಾತನರು ತೇರಸರು ಷೋಡಶರು ದಶಗಣರು ಮುಖ್ಯವಾದೈನೂರಾ ಎಪ್ಪತ್ತು ಅಮರಗಣಂಗಳ ಆಳಿನಾಳಿನಾ ಮನೆಯ ಕೀಳಾಳ ಮಾಡಿ ಅವರ ಲೆಂಕನಾಗಿ, ಅವರುಟ್ಟ ಮೈಲಿಗೆ, ಉಗುಳ್ದ ತಾಂಬೂಲ ಪಾದೋದಕ, ಅವರೊಕ್ಕ ಪ್ರಸಾದಕೆನ್ನ ಯೋಗ್ಯನಮಾಡೆ ಏಳೇಳು ಜನ್ಮದಲ್ಲಿ ಬರುವೆ ಕಂಡಾ, ಭವವಿರಹಿತ ತಂದೆ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಶ್ರವವೆತ್ತಿ ನಡೆವಾಗ ಸ್ಮಶಾನವೈರಾಗ್ಯವಹುದು. ಪುರಾಣಂಗಳ ಕೇಳುವಲ್ಲಿ ಪುಸ್ತಕವೈರಾಗ್ಯವಹುದು. ನೆಟ್ಟನೆ ಶರಣಚಾರಿತ್ರವ ಕೇಳುವಲ್ಲಿ ಮರ್ಕಟವೈರಾಗ್ಯವಹುದು. ಏನನೋದಿಯೂ ಏನ ಕೇಳಿಯೂ ಏನೂ ಫಲವಿಲ್ಲ. ಹಿಂದೆ ಸತ್ತುದ ಕೇಳುತ್ತಿದೇನೆ. ಮತ್ತೆಯೂ ಎನ್ನ ಅನ್ವಯದವರು ಅಲಿವುದ ಕಾಣುತ್ತಿದೇನೆ. ಶುನಕ ಬೂದಿಯೊಳು ಮಲಗಿರ್ದಲ್ಲಿ ತನ್ನಾದಿಯ ನೆನೆದು, ದೇಹದಿಚ್ಛೆಯ ಹಳಿದು, ಜನನ ಜಾಡ್ಯವ ಪರಿವೆನೆಂದು ಯೋಚಿಸುತ್ತಿರಲು, ಮೆಲ್ಲನೆ ನಿದ್ರೆ ತಿಳಿಯಲು, ಆಗ ತನ್ನಾದಿಯ ಮರೆದು, ಭ್ರಾಂತೆಡೆಗೊಂಡು, ಕಿವಿಯ ಕೊಡಹುತ್ತ ಹಡಿಕೆಗೆ ಹರಿವಂತೆ ಎನ್ನ ಮುಕ್ತಿ. ಇಂತಪ್ಪ ಅನುಕ್ತಿಯನಳಿದು, ದೇಹದಿಚ್ಛೆಯ ಹಳಿದು, ಪರಮವಿರಕ್ತಿಯನಿತ್ತು ರಕ್ಷಿಸಯ್ಯಾ, ಬಸವಪ್ರಿಯ ಕೂಡಲಚೆನ್ನಸಂಗಮದೇವಾ.
--------------
ಸಂಗಮೇಶ್ವರದ ಅಪ್ಪಣ್ಣ
ಸಕಲ ಗಣಂಗಳು ಸಾಕ್ಷಿಯಾಗಿ ಶ್ರೀಗುರುದೇವನು ಕರಸ್ಥಲಕ್ಕೆ ಕರುಣಿಸಿಕೊಟ್ಟ ಇಷ್ಟಲಿಂಗದಲ್ಲಿ ನಿಷೆ*ನಿಬ್ಬೆರಗಾಗಿ, ಶರಣಸತಿ ಲಿಂಗಪತಿ ಭಾವಬಿಡದೆ ಆಚರಿಸುವ ಲಿಂಗವು ಓಸರಿಸಿ ಹೋದಡೆ, ಆ ಲಿಂಗದಲ್ಲಿ ತನ್ನ ಪ್ರಾಣತ್ಯಾಗವ ಮಾಡಬೇಕಲ್ಲದೆ ಜೀವನ ಕಕ್ಕುಲಾತಿಯಿಂದುಳಿಯಲಾಗದು. ಮರಳಿ ಮತ್ತೊಂದು ಲಿಂಗವ ಧರಿಸಲಾಗದು. ಅದೇನು ಕಾರಣವೆಂದಡೆ : ಕಾಷ*ದಲ್ಲಿ ಅಗ್ನಿಯಿರ್ಪುದಲ್ಲದೆ ಕರಿಗೊಂಡ ಇದ್ದಲಿಯಲ್ಲಿ ಅಗ್ನಿಯಿರ್ಪುದೇ ? ಇಂತೀ ದೃಷ್ಟದಂತೆ, ಮುನ್ನ ಗುರೂಪದೇಶವಿದ್ದ ದೇಹದಲ್ಲಿ ಶಿವಕಳೆಯಿರ್ಪುದಲ್ಲದೆ, ಗುರೂಪದೇಶವಾಗಿ ಲಿಂಗವ್ರತವನಾಚರಿಸಿ ಮರಳಿ ಲಿಂಗಬಾಹ್ಯ ವ್ರತಗೇಡಿಯಾದ ದೇಹದಲ್ಲಿ ಪರಮಶಿವಕಳೆಯೆಲ್ಲಿಯದೊ ? ಆ ಶಿವಕಳೆಯಿಲ್ಲದ ದೇಹಕ್ಕೆ ಮರಳಿ ಲಿಂಗಧಾರಣವಾದಡೆಯು ಆ ಲಿಂಗ ಪ್ರೇತಲಿಂಗವು ; ಅವ ಭೂತಪ್ರಾಣಿ. ಆ ಲಿಂಗದ ಪೂಜೆಯ ಎಷ್ಟು ದಿನ ಮಾಡಿದಡೆಯು ಫಲವಿಲ್ಲ; ಮುಂದೆ ಮುಕ್ತಿಯಿಲ್ಲ. ಅವಗೆ ರಾಜನರಕ ಪ್ರಾಪ್ತಿಯಾಗಿರ್ಪುದು ನೋಡಾ. ಇದಕ್ಕೆ ಸಾಕ್ಷಿ: ``ಲಿಂಗಬಾಹ್ಯಾತ್ ವ್ರತಭ್ರಷ್ಟಃ ಪುನರ್ಲಿಂಗಂ ನ ಧಾರಯೇತ್ | ತತ್‍ಪೂಜಾ ನಿಷ್ಫಲಾ ಚೈವ ರೌರವಂ ನರಕಂ ವ್ರಜೇತ್ || ಮತ್ತಂ, ``ಪ್ರೇತಲಿಂಗೇನ ಸಂಸ್ಕಾರೇ ಭೂತಪ್ರಾಣೇ ನ ಜಾಯತೇ | ಪ್ರಭಾತೇ ತನ್ಮುಖಂ ದೃಷ್ಟ್ವಾ ಕೋಟಿ ಜನ್ಮಸು ಸೂಕರಃ ||'' ಎಂದುದಾಗಿ, ಇಂತಪ್ಪ ಲಿಂಗಬಾಹ್ಯ ವ್ರತಭ್ರಷ್ಟನ ಮುಖವ ಪ್ರಾತಃಕಾಲದಲ್ಲಿ ನೊಡಿದಾತಂಗೆ ಕೋಟಿವೇಳೆ ಶುನಿ ಸೂಕರನ ಬಸುರಲ್ಲಿ ಬಪ್ಪುದು ತಪ್ಪದು ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಇನ್ನಷ್ಟು ... -->