ಅಥವಾ

ಒಟ್ಟು 637 ಕಡೆಗಳಲ್ಲಿ , 81 ವಚನಕಾರರು , 508 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಒಂದಾದುದು ಎರಡಪ್ಪುದೆ ? ಎರಡಾದುದು ಒಂದಪ್ಪುದೆ_[ಎಂದ]À ಪರಿಣಾಮದ ವೇಳೆಯಲ್ಲಿ ಸಂದೇಹ ಹುಟ್ಟಲುಂಟೆ ? ಬಂದ ಜಂಗಮದ ನಿಲವನರಿಯದೆ, ಹಿಂದನೆಣಿಸಿ ಹಲವ ಹಂಬಲಿಸುವರೆ ? ಈ ಒಂದು ನಿಲವಿಂಗೆ ಪರಿಣಾಮವ ಮಾಡಬಲ್ಲಡೆ ನಿನ್ನ ಲಕ್ಷದ ಮೇಲೆ ತೊಂಬತ್ತಾರುಸಾವಿರ ಜಂಗಮಕ್ಕೆ ಪರಿಣಾಮವಹುದು ನೋಡಾ. ಗುಹೇಶ್ವರನೆಂಬ ಲಿಂಗದ ನಿಲವನರಿಯದೆ ಮರುಳಾದೆಯಲ್ಲಾ ಸಂಗನಬಸವಣ್ಣಾ
--------------
ಅಲ್ಲಮಪ್ರಭುದೇವರು
ಆವ ವ್ರತ ನೇಮವ ಹಿಡಿದಡೂ ಆ ವ್ರತ ನೇಮದ ಭಾವಶುದ್ಧವಾಗಿರಬೇಕು. ಅಸಿ ಕೃಷಿ ಯಾಚಕ ವಾಣಿಜ್ಯತ್ವದಿಂದ ಬಂದ ದ್ರವ್ಯಂಗಳಲ್ಲಿ ಬಾಹ್ಯದ ಬಳಕೆ ಅಂತರಂಗದ ನಿರಿಗೆ ಉಭಯ ಶುದ್ಧವಾಗಿಪ್ಪ ಭಕ್ತನಂಗವೆ ಏಲೇಶ್ವರಲಿಂಗದಂಗ.
--------------
ಏಲೇಶ್ವರ ಕೇತಯ್ಯ
ಸಮಯೋಚಿತದಲ್ಲಿ ಲಿಂಗಾರ್ಚನೆಯ ಮಾಡುತಿಪ್ಪನಾ ಭಕ್ತನು. ಮಾಡಿದಡೆ ಮಾಡಲಿ, ಮಾಡಿದಡೆ ತಪ್ಪೇನು ಆ ಜಂಗಮದ ಶಬ್ದವ ಕೇಳಿ ಪ್ರಸಾದಕ್ಕೆ ಕೈದುಡುಕಿದಡೆ ಅದು ಪ್ರಸಾದವಲ್ಲ, ಕಿಲ್ಬಿಷ. ಆ ಸಮಯೋಚಿತದಲ್ಲಿ ಬಂದ ಜಂಗಮದ ಶಬ್ದವ ಕೇಳಿ ಪ್ರಸಾದಕ್ಕೆ ಕೈದೆಗೆದಡೆ, ಅದು ಲಿಂಗಕ್ಕೆ ಬೋನ. ಇದು ಕಾರಣ, ಕೂಡಲಸಂಗಮದೇವಾ, ಇಂತಪ್ಪ ಸದಾಚಾರಿಗಳನೆನಗೆ ತೋರಾ 400
--------------
ಬಸವಣ್ಣ
ಅಯ್ಯ, ಶ್ರೀಗುರುಲಿಂಗಜಂಗಮ ಕರುಣ ಕಟಾಕ್ಷೆಯಿಂದ ಶ್ರುತಿ ಗುರು ಶ್ವಾನುಭಾವವಿಡಿದು ಹಿಡಿದಂಥ ಸನ್ಮಾರ್ಗಾಚಾರಕ್ರಿಯೆಗಳ ಅಪಮೃತ್ಯು ಬಂದು ತಟ್ಟಿ ಪ್ರಾಣತ್ಯಾಗವ ಮಾಡಿದಡು ಅಂಜಿ ಅಳುಕದೆ, ಪರಮ ಪತಿವ್ರತತ್ವದಿಂದ ಹಿಂದು ಮುಂದಣ ಪುಣ್ಯಪಾಪವನೆಣಿಸದೆ, ಇಂತು ಶ್ರೀಗುರುವಾಕ್ಯವ ನಿಜನೈಷ್ಠಯಿಂದರಿದು, ನಿಜವೀರಶೈವ ಸದ್ಭಕ್ತಾಚಾರಲಿಂಗಮುಖದಿಂದ ಬಂದ ಸ್ವಪಾಕವಾದಡು ಸರಿಯೆ, ಷಣ್ಮತದಿಂದ ಧನ-ಧಾನ್ಯರೂಪಿನಿಂದ ಬಂದ ಪದಾರ್ಥವಾದಡು ಸರಿಯೆ, ಭಕ್ತಾಶ್ರಯದಲ್ಲಿ ಸ್ವಪಾಕವ ಮಾಡಿ, ಸಂಬಂಧಾಚರಣೆಗಳಿಂದ ಪವಿತ್ರಸ್ವರೂಪ ಪಾದೋದಕ ಪ್ರಸಾದವೆನಿಸಿ, ನಿರ್ವಂಚಕತ್ವದಿಂದ ಸಂಚಲಚಿತ್ತವನಳಿದು, ಮಂತ್ರಸ್ಮರಣೆಯಿಂದ ಸರ್ವಾಚಾರ ಸಂಪತ್ತಿನಾಚರಣೆಯನೊಳಕೊಂಡು, ಸಮಸ್ತಲೋಕ ಪಾವನಮೂರ್ತಿ ನಿಷ್ಕಲ ಪರಶಿವಲಿಂಗಜಂಗಮಕ್ಕೆ ಕೊಟ್ಟುಕೊಂಬ ಸದ್ಭಕ್ತ ಜಂಗಮದ ಚರಣಕಮಲಧೂಳನವೆ ದ್ವಿತೀಯ ಕೈಲಾಸ ಶಿವಮಂದಿರವೆಂದು ಹಿಂದು-ಮುಂದಣ ಆಶೆ-ಆಮಿಷದ ಭ್ರಾಂತು-ಭ್ರಮೆಗಳನುಳಿದು, ಧ್ಯಾನ-ಮೌನ-ನೇಮ-ನಿತ್ಯ-ಸತ್ಯ-ಸದ್ಭಾವವೆಂಬ ಷಡ್ಗುಣೈಶ್ವರ ಸಂಪದವ ನಿಷ್ಕಲಪರತತ್ವಲಿಂಗದಿಂ ಪಡದು, ಆ ಲಿಂಗದೊಡನೆ ಭೋಗಿಸಿ, ನಿಷ್ಕಲ ಪರತತ್ವಮೂರ್ತಿ ತಾನಾದ ನಿಜಮೋಕ್ಷದಿರವೆ ಸದ್ಯೋನ್ಮುಕ್ತಿದೀಕ್ಷೆ. ಇಂತುಟೆಂದು ಶ್ರೀಗುರು ನಿಷ್ಕಳಂಕ ಚೆನ್ನಬಸವರಾಜೇಂದ್ರನು ನಿರ್ಲಜ್ಜ ಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಸಮಶೀಲ ನೇಮ ಒಂದಾದಲ್ಲಿ ಉಡುವ ತೊಡುವ ಕೊಡುವ ಕೊಂಬ ಅಡಿಯೆಡೆ ಮುಂತಾಗಿ ಸಕ್ಕರೆಯ ಬುಡಶಾಖೆಯಂತೆ ಮಧುರಕ್ಕೆ ಹೆಚ್ಚು ಕುಂದಿಲ್ಲದೆ ಇಪ್ಪ ನೇಮ ಕಟ್ಟಾಚಾರ ನಿಶ್ಚಯವಾದವಂಗೆ, ಅಂಗ ಹಲವಲ್ಲದೆ ಕುಂದಣ ಒಂದೆ ಭೇದ. ನೇಮ ಹಲವಲ್ಲದೆ ಜ್ಞಾನವೊಂದೆ ಭೇದ. ಭೂಮಿ ಹಲವಲ್ಲದೆ ಅಪ್ಪುವೊಂದೆ ಭೇದ, ಬಂದ ಯೋನಿ ಒಂದೆ. ತಾ ಮುಂದಿಕ್ಕುವ ಯೋನಿ ಒಂದಾದ ಕಾರಣ. ಹಿಟ್ಟು ಹಲವಾದಡೆ ಅಪ್ಪದಕಲ್ಲು ಒಂದೆಯಾದಂತೆ. ಇದು ತಪ್ಪದ ಆಚಾರ, ಇದಕ್ಕೆ ಮಿಥ್ಯತಥ್ಯವಿಲ್ಲ, ತಪ್ಪದು ನಿಮ್ಮಾಣೆ. ಆಚಾರಕ್ಕರ್ಹನಾದ ರಾಮೇಶ್ವರಲಿಂಗವೆ ನೀನೆ ಬಲ್ಲೆ.
--------------
ಅಕ್ಕಮ್ಮ
ನಾನಾವೇಳೆಯಲ್ಲಿ ಸಹಸ್ರವೇಳೆಯಲ್ಲಿ ಬರುವದು ದುರ್ಲಾಭ. ಬಂದ ಬಳಿಕ ಶಿವಭಕ್ತಜನ್ಮ ಸಾಧ್ಯವಾಯಿತು. ಶಿವಭಕ್ತ ಜನ್ಮದಲ್ಲಿ ಬಂದು ಶಿವಲಿಂಗೈಕ್ಯರ ನಿಂದೆಮಾಡಿ ಕೆಡದಿರು ಕೆಡದಿರು. ಎಲೋ ವೇಷಧಾರಿಗಳಿರಾ, ಶಿವಭಕ್ತ ಬ್ರಹ್ಮವೆಂಬುದು, ಶಿವನ ಸಾಕಾರವೆ ಜಂಗಮದೇವ. ಇಂತೆಂಬ ಉಭಯಭೇದ ನಿಮಗೆ ತಿಳಿಯದು. ವೇಷಾಧಾರಿಗಳು ನೀವು ಕೇಳಿರೋ, ಶುನಕ ಬೆಟ್ಟಕ್ಕೆ ಬೊಗಳಿದಂತೆ ಭಕ್ತಂಗೆ ಜಾತಿಸೂತಕವುಂಟೆ ಎಂದ ನಿಮ್ಮ ಶರಣ ಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.
--------------
ಚೆನ್ನಯ್ಯ
ಮತ್ತೆಯು ಸಮಸ್ತವಾದ ಕರ್ಮಕೃತ ಶರೀರಿಗಳಿಗೆ ಭೋಗವುಳ್ಳುದೆ ತಪ್ಪದೆಂಬೆಯಾದಡೆ, ಶರೀರಗಳಿಗಾಗಲಿ ಪ್ರೇರಕಹರ್ತುದಿಂದಲ್ಲವೆಂಬುದೆ ಪ್ರಮಾಣ. ಶಿವ ಪ್ರೀತ್ಯರ್ಥವಾದಗ......ಳು ಕರ್ತವನೆಯ್ದುವವೆಂಬುದಕ್ಕೆ ಪ್ರಮಾಣವು ಎನಲು, ಪಿತೃವಧೆಯಿಂದ ಚಂಡೇಶ್ವರನು ಅನುಪಮ ಗಣಪದವನೈದಿದನು. ಸಿರಿಯಾಳನು ತನ್ನ ಮಗನನೆ ಹತಿಸಿ ಪುರಜನ ಬಾಂಧವರುಸಹಿತ ಶಿವಲೋಕವನೈದನೆ ? ಕಾಲಾಂತರದಲ್ಲಿ ಮನುಚೋಳನು ಪುತ್ರವಧೆ ಭ್ರೋಣಹತ್ಯವನು ಮಾ ಎಸಗಿ, ತನುವರಸಿ ಶಿವಲೋಕವೆಯ್ದನೆ ? ಅಯ್ಯೋಮ ರಾಜನು ವಿಪ್ರೋತ್ತಮನನೆ ವದ್ಥಿಸಿ ಲಿಂಗ ಗರ್ಭಾಂತರವನೆಯ್ದಿದನೆ ? ಅಂದು ಜಗವರಿಯಲದಂತಿರಲಿ. `ಸ್ವರ್ಗಕಾಮೋ ಯಜೇತ'ಯೆಂಬ ಶ್ರುತಿಪ್ರಮಾಣಿಂ ದಕ್ಷ ಪ್ರಜಾಪತಿ ಕ್ರಿಯೆಗಳಿಗೆ ಅಧ್ವರ ಕರ್ಮದಿಂದ ಶಿರಚ್ಛೇದಿಯಾಗಿ ಕುರಿದಲೆ ಪಡೆಯನೆ ? ಬರೀ ಅಚೇತನ ಕರ್ಮಂಗಳು ಕೊಡಬಲ್ಲವೆ ಸದ್ಗತಿ ದುರ್ಗತಿಗಳನು ? ಕರ್ತು ಪ್ರೇರಕ ಶಿವನಲ್ಲದೆ, `ಮನ್ನಿಮಿತ್ತಕೃತಂ ಪಾಪಮಪೀಡಾವಚಯೈ ಕಲ್ಪ್ಯತೇ' ಎನಲು, ಇಂತೀ ಚಿಟಿಮಿಟಿವಾದವೆಂಬುದು ಕೊಳ್ಳವು ಕೇಳಾ. ಶಿವಭಕ್ತಿಯೆಂಬ ಪ್ರಚಂಡ ರವಿಕಿರಣದ ಮುಂದೆ ಸಾಮಾನ್ಯಕರ್ಮವೆಂಬ ತಮ ನಿಲುವುದೆ ? ಮರುಳೆ ಆ `ವೋರಾಜಾನಮಧ್ವರಸ್ಯ ರುದ್ರಗಂ' ಎನಲು, `ಇಂದ್ರ ಉಪೇಂದ್ರಾಯ ಸ್ವಾಹಾ' ಎನಬಹುದೆ ? ಪ್ರಥಮಾಹುತಿಯಲ್ಲಿಯೆಂದು ಬೆಳಲು ಭಸ್ಮವಹವಾ ಆಹುತಿ ಫಲಂಗಳು. ಆದಡೆ ಕೆಳೆಯಾ ಶಿವಭಕ್ತಿಬಾಹ್ಯವಾದ ಪಾಪಕರ್ಮಕೆ ಬಂದ ವಿಪರೀತ ಪ್ರಾಪ್ತಿಗಳು, ವಿಷ್ಣು ಸುರರಿಗೆ ಹಿತವಾಗಿ ಭೃಗು ಸತಿಯ ಶಿರವನರಿದಡೆ, ಕರ್ಮ ದಶಜನ್ಮಂಗಳಿಗೆ ತಂದು, ಹೀನಪ್ರಾಣಿಗಳ ಯೋನಿಯಲ್ಲಿ ಬರಸಿದುದನರಿಯಿರೆ. ಮತ್ತೆಯೂ ಬಾಲೆಯ ಕೊಂದ ಕರ್ಮ ಕೃಷ್ಣಾವತಾರದಲ್ಲಿ ವ್ಯಾಧನಿಂದ ತನ್ನ ಕೊಲ್ಲಿಸಿತ್ತು. ಮತ್ತೆಯೂ ಬಲಿಯ ಬಂದ್ಥಿಸಿದ ಕರ್ಮ ಮುಂದೆ ನಾಗಾರ್ಜುನನಿಂದ ಕಟ್ಟಿಸಿತ್ತು, ಕೌರವಕುಲದ ಕೊಲಿಸಿದ ಕರ್ಮಫಲ ತನ್ನ ಯಾದವ ಕುಲವ ಕೊಲಿಸಿತ್ತು. ಮತ್ತಾ ಲೀಲೆಯಿಂದ ಮತ್ತೆಯೂ ಪರ್ವತನಾರಂದರ ಸತಿಯ ಬಲುಮೆ, ಇಂತೆ ಕೊಂಡ ಕರ್ಮಫಲ ರಾವಣಗೊಪ್ಪಿಸಿತ್ತು. ತನ್ನ ಪ್ರಿಯತಮೆಯೆನಿಸುವ ಸೀತಾಂಗನೆಯ ಇನ್ನು ಮಿಕ್ಕಿನ ದೇವದಾನವಮಾನವರನೊಕ್ಕಲಿಕ್ಕಿಯಾಡದಿಹುದೆಯಾ ಕರ್ಮವು. ಆದಡಾ ಕರ್ಮವು ಸ್ವತಂತ್ರವೋ, ಪರತಂತ್ರವೋ ಎಂಬೆಯಾದಡೆ, ಆ ಕರ್ಮ ಈಶ್ವರಾಜೆÕಯಲ್ಲದ ಕರ್ಮಿ ತಾನಾದಂತೆ, ಇದಂ ಗುರು ಕನಿಷ್ಠಾಧಮಮಧ್ಯಮ ಕ್ರಿಯೆಗಳಿಂ ವಿದ್ಥಿಸಿದ ವಿದ್ಥಿಗಳಿಂ, ವಿದ್ಥಿನಿಷೇಧ ಕರ್ಮಂಗಳೆಂಬ ಸಮೂಹಕರ್ಮಗಳಿಗೆ ತಾರತಮ್ಯವಿಡಿದು, ಪುಣ್ಯಪಾಪಂಗಳ ನಿರ್ಮಿಸಿ, ಅಜಾÕನಿಪಿತವ ಮಾಡಿದನೀಶ್ವರನು. ನಾಕನರಕಾದಿಗಳೆ ಸಾಧನವಾಗಿ, ಕರ್ಮಕರ್ತನನೆಯ್ದುವರೆ, ಕರ್ಮ ಕರ್ತನು ಈಶ್ವರನಾದಡೆ ಕರ್ಮನಿ ಶ್ವರಾಜೆÕಯಿಂದೈದುವಡೆ, ಆ ಕರ್ಮ ಕರ್ತನಹ ಈಶ್ವರನನು ಬ್ರಹ್ಮನ ಮೇಲ್ದಲೆಯನರಿದುದಲಾ. ಆ ಕರ್ಮ ಆತನನೆಯ್ದುದುಮೆನಲು, ಅಹಂಗಾಗದು. ವಿರಿಂಚನು ರಜೋಗುಣಹಂಕಾರದಿಂ ಸುರ ಕಿನ್ನರ ಗರುಡ ಗಾಂಧರ್ವ ಸಿದ್ಧ ವಿದ್ಯಾಧರರು ತಮ್ಮೊಳು ಬ್ರಹ್ಮವಾದದಿಂ ಸಂಪಾದಿಸಿ ತಿಳಿಯಲರಿಯದೆ, ಬ್ರಹ್ಮನಂ ಬೆಸಗೊಳಲು, ಬೊಮ್ಮವಾನೆನಲು, ಆ ಕ್ಷಣಂ ಗಗನದೊಳು ತೋರ್ಪ ಅತ್ಯನುಪಮ ದೇದೀಪ್ಯಮಾನ ತೇಜಃಪುಂಜ ಜ್ಯೋತಿರ್ಲಿಂಗಾಕಾರಮಂ ತೋರಲಾ ಬ್ರಹ್ಮೇಶ್ವರರು ಆ ವಸ್ತುನಿರ್ದೇಶಮಂ ಮಾಳ್ಪೆನೆಂದು ಪಿತಾಮಹನು ಚತುಸ್ಶಿರ ಮಧ್ಯದಲ್ಲಿ ಮೇಲ್ದಲೆಯಂ ಪುಟ್ಟಿಸಿ, ||ಶ್ರುತಿ|| `ಋತಂ ಸತ್ಯಂ ಪರಂ ಬ್ರಹ್ಮ'ಯೆಂದು ಋಗ್ಯಜುಸ್ಸಿನಲ್ಲಿ ನುತಿಸುತ್ತಂ ಇರಲು, ಬ್ರಹ್ಮಾದ್ಥಿಪತಿ ತತ್ಪರ ಬ್ರಹ್ಮಶಿವ ಇತಿ ಒಂ, ಇತಿ ಬ್ರಹ್ಮಾ ಇತಿ. ಇಂತೀ ಶ್ರುತಿ ಸಮೂಹವೆಲ್ಲವು ಶಿವನನೆ ಪರಬ್ರಹ್ಮವೆಂದು ಲಕ್ಷಿಸಿ, ಮತ್ತತನದಿಂ ಮರದೂ ಅಬ್ರಹ್ಮವೆನಲುಂ ದ್ರುಹಿಣನ ಮೇಲ್ದಲೆಯಂ ಅಪ್ರತಿಮ ತೇಜೋಮಯ ಲೀಲಾಲೋಲಾ ಶೀಲ ದುಷ್ಟನಿಗ್ರಹಿ ಶಿಷ್ಟ ಪ್ರತಿಪಾಲಕನನೆಯಾಕ್ಷಣಂ, ಘನರೌದ್ರ ಕೋಪಾಟೋಪಿಯೆನಿಸುವ ಕಾಲರುದ್ರಂ ಸಮೀಪಸ್ಥನಾಗಿರ್ದು, ಜ್ಯೇಷ್ಠಾ ತರ್ಜನಾಂಗುಲಿ ನಖಮುಖದಿಂ ಛೇದಿಸಲು, ವಿದ್ಥಿ ಭಯಾತುರನಾಗಿ `ಒಂ ನಮೋ ದೇವಾಯ ದೇವ್ಯೈ ನಮಃ, ಸೋಮಾಯ ಉಮಾಯೈ ನಮಃ' ಎಂದು ಸೋಮಾಷ್ಟಕದಿಂ ಸ್ತುತಿಸಿ, ನಮಿಸಿಯಜಿಸಿ ಮೆಚ್ಚಿಸಿ, ಸ್ವಾಮಿ ಸರ್ವೇಶ್ವರ, ಯ್ಯೋಮಕೇಶ, ದೇವದೇವ ಮಹಾಪ್ರಸಾದ. ಈ ಶಿರಮಂ ಬಿಸಾಟದಿರಿ, ಬಿಸಾಟಲು ಪುರತ್ರಯ ಜಗಮಳಿಗುತ್ತಂ ನಿಮಿತ್ತಂ ಪರಮ ಕೃಪಾನಿದ್ಥಿ ಪರಬ್ರಹ್ಮ ಪರಂಜ್ಯೋತಿ ಪರಮೇಶ್ವರ ಪರಮಭಟ್ಟಾರಕ ಪರಾತ್ಪರತರಸದಕ್ಷರ ಚಿನ್ಮೂರ್ತಿ ಸ್ವಯಂಭೋ ಸ್ವಾತಂತ್ರೇಶ್ವರಾಯೆನುತ ಕೀರ್ತಿಸುತ್ತಿರಲು, ಪರಬ್ರಹ್ಮ ನಿರೂಪದಿಂ ಕಾಲರುದ್ರನ ಕಪಾಲಮಂ ಧರಿಸಿದನಂದು. ಇನ್ನೆಮಗಿದೆ ಮತವೆಂದು ಸರ್ವದೆ ತಾ ಗರ್ವ ಕಂಡೂಷಮಂ ಉರ್ವಿಯೊಳೀಗಮೆ ತೀರ್ಚಿಪೆನೆಂದು ಪಿಡಿದು ನಡೆದಂ ಬ್ಥಿP್ಷ್ಞಟನಕಂದು. ಅಹಲ್ಯೆ ಸಾಯಿತ್ತಿದು, ಕರ ಹೊಸತು ಇನಿತರಿಂದ ಕಾಲರುದ್ರಂಗೆ ಬ್ರಹ್ಮೇತಿಯಾಯಿತ್ತೆಂಬ ಕರ್ಮವಾದಿ ಕೇಳಾದಡೆ. ||ಶಾಮಶ್ರುತಿ|| `ತ್ವಂ ದೇವೇಷು ಬ್ರಾಹ್ಮಣಾಹ್ವಯಃದುನುಷ್ಯೋಮನುಷ್ಯೇಮ ಬ್ರಾಹ್ಮಣಾಮುಪದಾವತ್ಯುಪದಾರತ್ಯಾ' ಎನಲು, `ಬ್ರಾಹ್ಮಣೋ ಭಗವಾನ್ ರುದ್ರಃ' ಎನಲು, `ಕ್ಷತ್ರಿಯಃ ಪರಮೋ ಹರಿಃ' ಎನುತಿರಲು, `ಪಿತಾಮಹಸ್ತು ವೈಶ್ಯಸಾತ್' ಎನಲು, ಬ್ರಾಹ್ಮಣೋತ್ತಮ ಬ್ರಾಹ್ಮಣಾದಿ ಪತಿ ಪರಬ್ರಹ್ಮವಿದ್ದಂತೆ. ತಾನೆ ಪರಬ್ರಹ್ಮಮೆನಲಾ ವಿದ್ಥಿಯ ಶಿಕ್ಷಿಪದು ವಿದಿತವಲ್ಲದೆ ನಿಷೇಧವಲ್ಲ. ಅದೆಂತೆನಲು, ಭೂಚಕ್ರವಳಯದೊಳು ಭೂಮೀಶನು ಅನ್ಯಾಯಗಳ ಶಿಕ್ಷಿಸಿದ ಭೂರಕ್ಷಣ್ಯವು, ಲೋಕಹಿತವಲ್ಲದೆ ದೋಷ ಸಾಧನಮೆಯೆಲ್ಲಾ, ಪಾಪಿಗೆ ತಕ್ಕ ಪ್ರಾಯಶ್ಚಿತ್ತಮೆಂದುಂಟಾಗಿ. ಇದು ಕಾರಣ, ಶಿಕ್ಷಯೋಗ್ಯನ ಶಿಕ್ಷಿಸಿದವದ ದೋಷವಿಲ್ಲೆಂದು ಭಾಟ್ಠ(?) ದೊಳೊಂದು ಪಕ್ಷಮಿರೆ, ಮತ್ತಮದಲ್ಲದೆ, ಅದೊಮ್ಮೆ ಹತ್ತುತಲೆಯವನಂ ಅತ್ಯುಗ್ರದಿಂ ವಂದಿಸಿದ ಶ್ರೀರಾಮಂಗೆ ಬ್ರಹ್ಮಹತ್ಯಾ ಬ್ರಹ್ಮಕರ್ಮ ವಿದ್ಯಾಬ್ರಹ್ಮರಿಂದಾವಾವ ಪ್ರಾಯಶ್ಚಿತ್ತದಿಂತೆಮ್ಮನೆ ಕೆಡದಿರಲು, ಆ ರಾಮಂ ಆ ರಾವಣಹತ ದೋಷನಿರುಹರಣಕ್ಕಾವುದು ಕಾಣದಿರಲು, ಶಂಭುಪೌರಾಣಿಕನೆಂಬ ನಾಮವಂ ತಾಳ್ದು, ಶಿವಂ ರಾಮಂಗೆ ಪ್ರತ್ಯಕ್ಷಮಾಗಿ, ಈ ದೋಷಕ್ಕೆ ಲಿಂಗಪ್ರತಿಷ್ಠೆಯ ನಿರೋಹರಣಮೆಂದರುಪಿ, ಅರಿದಾ ರಾಮಂಗಂ ಗಂಧಮಾದ ಪರ್ವತವೇ ಆದಿಯಾಗಿ, ಅದನು ಕೋಟೆಯ ಅವದ್ಥಿಯಾಗಿ ಶಿವಲಿಂಗಪ್ರತಿಷ್ಠೆಯಂ ಮಾಡೆ, ರಾಮೇಶ್ವರಲಿಂಗಮೆನಿಪ್ಪ ನಾಮಾಂಕಿತದಿಂ ತಕವಕ ಮಿಗೆವರಿದು ಸ್ವಾತ್ವಿಕಭಕ್ತಿಭಾವದಿಂದರ್ಚಿಸಿ ಸ್ತುತಿಸಿ, ಭೂವಳಯದೊಳೆಲ್ಲಂ ಪ್ರದಕ್ಷಿಣ ಮುಖದಿಂ ಶಿವಲಿಂಗಾಲಯಮನೆತ್ತಿಸಿ, ಅಂತಾ ಸಹಸ್ರಾವದ್ಥಿಯೆನಿಸುವ ದಶಗ್ರೀವ ವಧೆಯಂ ಪರಿಹರಿಸಿದ ಹಾಗೆ, ಶ್ರೀಮನ್ಮಹಾದೇವನೂ ದೇವಾದಿದೇವನೂ ದೇವಚಕ್ರವರ್ತಿ ದೇವಭಟ್ಟಾರಕನೂ ದೇವವೇಶ್ಯಾಭುಜಂಗನೂ ಸರ್ವದೇವತಾ ನಿಸ್ತಾರಕನೂ ಸರ್ವದೇವತಾ ಯಂತ್ರವಾಹಕನೂ ಒಂದಾನೊಂದೆಡೆಯಲ್ಲಿ ಮಹಾದೇವೇಶ್ವರನು ರುದ್ರೇಶ್ವರನು ಈಶ್ವರೇಶ್ವರನು ಶಂಕರೇಶ್ವರನೆನಿಪ ನಾಮಂಗಳಿಂ, ಭೂವಳಯದೊಳು ಲಿಂಗಪ್ರತಿಷ್ಠೆಯಂ ಬ್ರಹ್ಮಶಿರಚ್ಛೇದನ ನಿಮಿತ್ಯನಂ ಮಾಡಿದುದುಳ್ಳಡೆ, ಹೇಳಿರೆ ಕರ್ಮವಾದಿಗಳು. ಅಂತುಮದಲ್ಲದೆಯುಂ ಆ ಉಗ್ರನಿಂದಂ ಪಿತಾಮಹಂ ಅವದ್ಥಿಗಡಿಗೆ ಮಡಿವುದಂ ಕೇಳರಿಯಿರೆ. ಅದಲ್ಲದೆಯುಂ, ದP್ಷ್ಞಧ್ವರದೊಳಾ ದಕ್ಷ ಪ್ರಜಾಪತಿಯ ಶಿರವನರಿದು, ಕರಿಯದಲೆಯನೆತ್ತಿಸಿದ. ಅದಲ್ಲದೆಯುಂ ಸುತೆಗಳುಪಿದ ವಿರಂಚಿ ಹತಿಸಿದಂದು, ಅದಲ್ಲದೆಯುಂ ಸಮಸ್ತದೇವತೆಗಳ ಆಹಾರ ತೃಪ್ತಿಗೆ ಬೇಹ ಅಮೃತತರನಂ ಚರಣಾಂಗುಷ್ಠದಿಂದೊರಸಿದಂದು, ಅದಲ್ಲದೆಯುಂ ವಿಷ್ಣು ತಾನೆಯೆನಿಪ ವಿಶ್ವಕ್ಸೇನನ ತ್ರಿಶೂಲದಿಂದಿರಿದೆತ್ತಿ ಹೆಗಲೊಳಿಟ್ಟಂದು, ಅದಲ್ಲದೆಯುಂ ಮತ್ಸ್ಯ ಕೂರ್ಮ ವರಾಹ ನಾರಸಿಂಹ ತ್ರಿವಿಕ್ರಮಾದಿಗಳಂ ಮುಂದುವರಿದು ಕೊಂದಂದು ಅದಲ್ಲದೆಯುಂ ದೇವಿದ್ವಿಜರಿಗೆ ಗುರುವೆನಿಸುವ ಪಾವಕನ ಏಳು ನಾರಿಗೆಗಳ ಕೀಳುವಂದು, ಅದಲ್ಲದೆಯುಂ ಯಜÕವಾಟದೊಳು ಪ್ರಾಜÕನೆನಿಸುವ ಪೂಶಾದಿತ್ಯನ ಹಲ್ಲ ಕಳದು, ಭಾಗಾದಿತ್ಯನಂ ಮೀಂಟಿ ವಾಣಿಯ ಮೂಗಂ ಮಾಣದೆ ಕೊಯ, ದೇವಮಾತೃಕೆಯರ ದೊಲೆ ನಾಶಿಕವ ಚಿವುಟಿದಂದು, ಅದಲ್ಲದೆಯುಂ ಬ್ರಹ್ಮಾಂಡಕೋಟಿಗಳನೊಮ್ಮೆ ನಿಟಿಲತಟನಯನಂ ಲಟಲಟಿಸಿ ಶೀಘ್ರದಿಂದ ಸುಡಲು, ಸುರಾಸುರ ಮುನಿನಿವಹ ಹರಿಹಿರಣ್ಯಗರ್ಭರು ಶತಕೋಟಿ ಹತವಾದಂದು, ಪ್ರೊರ್ದದಾ ಬ್ರಹ್ಮಹತ್ಯಂ ನಿರ್ಧರಮಾಗಿ ಬೊಮ್ಮನ ಮೇಲ್ದಲೆಯೊಂದ ಚಿವುಟಿದುದರಿಂದಂ ಒಮ್ಮೆಯ ಶೂಲಪಾಣಿಗೆ ಬ್ರಹ್ಮೇತಿಯಾದುದತಿಚೋದ್ಯ ಚೋದ್ಯ. ಅವಲ್ಲದೆಯೂ ಬ್ರಹ್ಮ ಸಾಯನು. ಅಂಗಹೀನಮಾದುದಲ್ಲದೆ ಹೋಗಲಾ ಸಾಮಾನ್ಯ ಚರ್ಚೆ ಕರ್ಮಗತ ಕರ್ಮಿಯೆನಿಸುವ ನಿನ್ನ ಕರ್ಮವಾದವೆಲ್ಲಿಗೂ ಸಲ್ಲದು. ಬ್ರಹ್ಮಮಸ್ತಧಾರಣ ಲೀಲಾಲೋಲ ಶೀಲಬ್ರಹ್ಮೇಶ್ವರ ಪರಬ್ರಹ್ಮ ಶ್ರೀಮನ್ಮಹಾದೇವನ ನಾಮಕೀರ್ತನ ಮುತ್ರದಿಂದು ಬ್ರಹ್ಮಹತ್ಯಕೋಟಿಗಳುಂ ಮಹಾಪಾತಕವಗಣಿತಂ ನಿರಿಗೆಣೆಯಾದಕೂಲಮಂ ಭರದೊಳನಲ ಗ್ರಹಿಸಿದಂತಾಗುಮೆನೆ. ಬ್ರಹ್ಮ ಪಂಚಬ್ರಹ್ಮಮೆನಲು ಬ್ರಹ್ಮಪಾಪಕಾಶಿಯೆನಲು, ಶಿವಲಿಂಗ ದರ್ಶನ ಮಾತ್ರ ಬ್ರಹ್ಮಹತ್ಯವಳಿವವೆನಲು, ಆ ಶಿವನೆ ಬ್ರಹ್ಮಹತ್ಯವೆ ಇದುಯೆಂಬುದು ಮೊಲನ ಕೋಡಿನಂತೆ. ಇದು ಕಾರಣ, ಕರ್ಮ ಶಿವನಾಜೆÕವಿಡಿದು ಕರ್ಮಿಯ ಗ್ರಹಿಸೂದು. ಕರ್ಮಸಾರಿಯಲಿ ಕರ್ಮ ನಿರ್ಮಲಕರ್ಮ ಕಾರಣ ಕರ್ತೃವೆಂದರಿಯದಡೆ, ಎಲೆ ಕರ್ಮವಾದಿ, ನಿನಗೆ ಗತಿ ಉಂಟೆಂದುದು, ಬಸವಪ್ರಿಯ ಕೂಡಲಚೆನ್ನಸಂಗನ ವಚನ. || 65 ||
--------------
ಸಂಗಮೇಶ್ವರದ ಅಪ್ಪಣ್ಣ
ಪೂರ್ವದಿಂದ ಉತ್ತರಕ್ಕೆ ಬಂದ ಸೂರ್ಯನು ಅಸ್ತಮಯವಾಯಿತ್ತೆಂದು ಜಾಹ್ಯಗೆ ಒಡಲಾಗಿ, ಮತ್ತಾ ವರುಣಪ್ರದಕ್ಷಿಣದಿಂದ ಬಂದು ಪೂರ್ವದಲ್ಲಿ ಹುಟ್ಟಲಿಕ್ಕೆ ನಿನ್ನಿಂಗೆ ಇಂದಿಂಗೆಯೆಂಬುದು ಒಂದೊ ಎರಡೊ ? ಅಂದಿಗೆ ಜಾÕನ, ಇಂದಿಗೆ ಮರವೆ, ಎಂಬುದು ಒಂದೊ ಎರಡೊ ? ಅದು ಘಟದ ಪ್ರವೇಶದಿಂದ. ಪೂರ್ವ ಉತ್ತರಕ್ಕೆ ಬಂದಾತ್ಮನನರಿದು ಉಭಯವ ತಿಳಿದು ಸಂದು ನಾಶನವಾದಲ್ಲಿ ಸದ್ಯೋಜಾತಲಿಂಗವು ವಿನಾಶವಾದ.
--------------
ಅವಸರದ ರೇಕಣ್ಣ
ಆಳುದ್ದಿಯದೊಂದು ಬಾವಿ ಆಕಾಶದ ಮೇಲೆ ಹುಟ್ಟಿತ್ತು ನೋಡಾ ! ಆ ಬಾವಿಯ ನೀರನೊಂದು ಮೃಗ ಬಂದು ಕುಡಿಯಿತ್ತು. ಕುಡಿಯ ಬಂದ ಮೃಗವು ಆ ನೀರೊಳಗೆ ಮುಳಿಗಿದಡೆ ಉರಿಯ ಬಾಣದಲೆಚ್ಚು ತೆಗೆದೆ ನೋಡಾ ! ಒಂದೆ ಬಾಣದಲ್ಲಿ ಸತ್ತ ಮೃಗವು, ಮುಂದಣ ಹೆಜ್ಜೆಯನಿಕ್ಕಿತ್ತ ಕಂಡೆ ! ಅಂಗೈಯೊಳಗೊಂದು ಕಂಗಳು ಮೂಡಿ, ಸಂಗದ ಸುಖವು ದಿಟವಾಯಿತ್ತು ! ಲಿಂಗಪ್ರಾಣವೆಂಬುದರ ನಿರ್ಣಯವನು ಇಂದು ಕಂಡೆನು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಬಂದ ಬಟ್ಟೆಯ ನಿಂದು ನೋಡಲೊಲ್ಲೆ ಕಂದಾ, ಅದೇನು ಸೋಜಿಗವೊ ? ಬಿಂದು ಛಂದವಲ್ಲ ಬಂದ ಪರಿಯನು ಗುಹೇಶ್ವರ ಬಲ್ಲ ಕಂದಾ.
--------------
ಅಲ್ಲಮಪ್ರಭುದೇವರು
ಜಾತಿವಿಡಿದು ಜಂಗಮವ ಮಾಡಬೇಕೆಂಬ ಪಾತಕರು ನೀವು ಕೇಳಿರೊ: ಜಾತಿ ಘನವೊ ಗುರುದೀಕ್ಷೆ ಘನವೊ ? ಜಾತಿ ಘನವಾದ ಬಳಿಕ, ಆ ಜಾತಿಯೆ ಗುರುವಾಗಿರಬೇಕಲ್ಲದೆ ಗುರುದೀಕ್ಷೆ ಪಡೆದು, ಗುರುಕರಜಾತರಾಗಿ ಜಾತಕವ ಕಳೆದು ಪುನರ್ಜಾತರಾದೆವೆಂಬುದ ಏತಕ್ಕೆ ಬೊಗಳುವಿರೊ ? ಜಾತಿವಿಡಿದು ಕಳೆಯಿತ್ತೆ ಜಾತಿತಮವು ? ಅಜಾತಂಗೆ ಆವುದು ಕುಲಳ ಆವ ಕುಲವಾದಡೇನು ದೇವನೊಲಿದಾತನೆ ಕುಲಜ. ಅದೆಂತೆಂದಡೆ; ದೀಯತೇ ಜಾÕನಸಂಬಂಧಃ ಕ್ಷೀಯತೇ ಚ ಮಲತ್ರಯಂ ದೀಯತೇ ಕ್ಷೀಯತೇ ಯೇನ ಸಾ ದೀಕ್ಷೇತಿ ನಿಗದ್ಯತೇ ಎಂಬುದನರಿದು, ಜಾತಿ ನಾಲ್ಕುವಿಡಿದು ಬಂದ ಜಂಗಮವೇ ಶ್ರೇಷ್ಠವೆಂದು ಅವನೊಡಗೂಡಿಕೊಂಡು ನಡೆದು ಜಾತಿ ಎಂಜಲುಗಳ್ಳರಾಗಿ ಉಳಿದ ಜಂಗಮವ ಕುಲವನೆತ್ತಿ ನುಡಿದು, ಅವನ ಅತಿಗಳೆದು ಕುಲವೆಂಬ ಸರ್ಪಕಚ್ಚಿ, ಎಂಜಲೆಂಬ ಅಮೇಧ್ಯವ ಭುಂಜಿಸಿ ಹಂದಿ-ನಾಯಂತೆ ಒಡಲ ಹೊರೆವ ದರುಶನಜಂಗುಳಿಗಳು ಜಂಗಮಪಥಕ್ಕೆ ಸಲ್ಲರಾಗಿ. ಅವರಿಗೆ ಗುರುವಿಲ್ಲ ಗುರುಪ್ರಸಾದವಿಲ್ಲ, ಲಿಂಗವಿಲ್ಲ ಲಿಂಗಪ್ರಸಾದವಿಲ್ಲ, ಜಂಗಮವಿಲ್ಲ ಜಂಗಮಪ್ರಸಾದವಿಲ್ಲ. ಇಂತೀ ತ್ರಿವಿಧಪ್ರಸಾದಕ್ಕೆ ಹೊರಗಾದ ನರಜೀವಿಗ? ಸ್ವಯ-ಚರ-ಪರವೆಂದಾರಾಧಿಸಿ ಪ್ರಸಾದವ ಕೊಳಸಲ್ಲದು ಕಾಣಾ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ ಮುಂತಾಗಿರ್ದ ದೃಷ್ಟ ಅರ್ಪಿತಂಗಳ ಅರ್ಪಿಸುವಲ್ಲಿ ಗಂಧದಿಂದ ಸುಳಿವ ನಾನಾ ಸುಗಂಧವ ರಸದಿಂದ ಬಂದ ನಾನಾ ರಸಂಗಳ ರೂಪಿನಲ್ಲಿ ಕಾಣಿಸಿಕೊಂಬ ನಾನಾ ಚಿತ್ರ ವಿಚಿತ್ರ ಖಂಡಿತ ಅಖಂಡಿತಮಪ್ಪ ದೃಷ್ಟಾಂತಂಗಳಲ್ಲಿ ಸ್ಪರ್ಶನದಲ್ಲಿ ಮೃದುಕಠಿಣದೊಳಗಾದ ಮುಟ್ಟುತಟ್ಟಿನ ಭೇದವ ಲಕ್ಷಿಸುವಲ್ಲಿ ಶಬ್ದದಿಂದ ಸಪ್ತಸ್ವರದೊಳಗಾದ ನಾನಾ ಘೋಷ ವಾಸನಂಗಳ ಅಳಿದುಳಿದು ತೋರುವ ಸುನಾದ ಸಂಚುಗಳಲ್ಲಿ -ಇಂತೀ ಪಂಚೇಂದ್ರಿಯಂಗಳಲ್ಲಿ ಪ್ರಸಾದ ಮುಂತಾಗಿ ಅರ್ಪಿಸಿಕೊಂಡೆಹೆವೆಂಬಲ್ಲಿ ಗುರುಪ್ರಸಾದಿಗೆ ಲಿಂಗಪ್ರಸಾದವಿಲ್ಲ. ಲಿಂಗಪ್ರಸಾದಿಗೆ ಜಂಗಮಪ್ರಸಾದವಿಲ್ಲ. ಜಂಗಮಪ್ರಸಾದಿಗೆ ಮಹಾಪ್ರಸಾದವಿಲ್ಲ. ಮಹಾಪ್ರಸಾದಿಗೆ ಪರಿಪೂರ್ಣ ಪ್ರಸಾದವಿಲ್ಲ. ಪರಿಪೂರ್ಣಪ್ರಸಾದಿಗೆ ಪಂಚೇಂದ್ರಿಯದೊಳಗಾದ ಮುಟ್ಟಿನ ಪ್ರಸಾದ, ಕಟ್ಟಿನ ಸೂತಕವಿಲ್ಲ. ಅದೆಂತೆಂದಡೆ: ಕರ್ಪೂರದ ಚಿತ್ರಸಾಲೆಯ ಕಿಚ್ಚು ಮುಟ್ಟಿದ ಮತ್ತೆ ಚಿತ್ರವಲ್ಲಿಯೆ ನಿರ್ಲಕ್ಷ್ಯವಾದಂತೆ ಪತ್ರಂಗಳಲ್ಲಿ ನಾನಾ ಅಕ್ಷರಂಗಳ ಲಕ್ಷಿಸಿ ಬರೆದು ಅವು ಕಿಚ್ಚು ಮುಟ್ಟಿ ಸುಟ್ಟಲ್ಲಿ ಎತ್ತಿ ಪ್ರತಿಯ ಲಕ್ಷಿಸಬಹುದೆ ? ಇಂತೀ ಅರಿದರುಹಿನಲ್ಲಿ ಎಡೆದೆರಪಿಲ್ಲದ ಪ್ರಸಾದಿಗೆ ಆ ಗುಣ ಪ್ರಸನ್ನಪ್ರಸಾದಿಯ ಇರವು ದಹನ ಚಂಡಿಕೇಶ್ವರಲಿಂಗದಿರವು.
--------------
ಪ್ರಸಾದಿ ಲೆಂಕಬಂಕಣ್ಣ
ಅಯ್ಯಾ, ಕಾಲತೊಳೆದುಕೊಂಡು ಬಂದರೆ ಕಣ್ಣಮುಂದೆ ನಿಂದೆ. ಕೈಯ ತೊಳೆದುಕೊಂಡು ಬಂದರೆ ಮನದ ಮುಂದೆ ನಿಂದೆ. ತಲೆಯ ತೊಳೆದುಕೊಂಡು ಬಂದರೆ ಭಾವದ ಮುಂದೆ ನಿಂದೆ. ಸಂದು ಸಂಶಯ ಕುಂದು ಕಲೆಯ ಕಳೆದುಳಿದು ಬಂದರೆ ಸರ್ವಾಂಗಸನ್ನಿಹಿತನಾಗಿ ನಿಂದೆ. ಬಂದ ಬರವು ಚಂದವಾಗಿ ನಿಂದರೆ ಅಂದಂದಿಗೆ ಅವಧರಿಸು ಮುಂದುವರಿವೆನು ಮುದದಿಂದೆ ಗುರುನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಭರಿತಾರ್ಪಣ ಸಹಭೋಜನ ನೈವೇದ್ಯ ಸಹ ಇಂತೀ ತ್ರಿವಿಧಭೇದಂಗಳ ಅಂಗೀಕರಿಸಿದ ಮತ್ತೆ ಕರುಳಿಲ್ಲದ ಕಲಿಯಂತೆ, ಒಡಲಿಲ್ಲದ ಅಂಗದಂತೆ, ಸಂಗವಿಲ್ಲದ ನಿರಂಗದಂತೆ, ದಗ್ಧಪಟದಂತೆ, ಒಂದನೂ ಹೊದ್ದದ ಬಹುವರ್ಣದಂತೆ, ಅಂಗವಿದ್ದೂ ಅಳಿದು ತೋರುವ ನಿರಂಗಿಗಲ್ಲದೆ ಈ ತ್ರಿವಿಧ ವ್ರತ ಪ್ರಸಾದವಿಲ್ಲ. ನಾನು ಎನಗೆ ಬಂದ ಕುತ್ತಕ್ಕೆ ಹಾಡಿ ಹರಸಿ ಮದ್ದನರೆವುತ್ತಿದ್ದೇನೆ, ಎನ್ನ ಕಾಡಬೇಡ. ಕ್ರೀ ತಪ್ಪದೆ ಎನ್ನ ಕೂಡಿಕೊ, ಚೆನ್ನ ಚೆನ್ನ ಕೂಡಲ ರಾಮೇಶ್ವರಲಿಂಗ ಸಂಗ.
--------------
ಭರಿತಾರ್ಪಣದ ಚೆನ್ನಬಸವಣ್ಣ
ಉಂಬಾಗಳಿಲ್ಲೆನ್ನ, ಉಡುವಾಗಳಿಲ್ಲೆನ್ನ, ಬಂಧುಗಳು ಬಂದಾಗಳಿಲ್ಲೆನ್ನ. ಲಿಂಗಕ್ಕೆ ಇಲ್ಲೆಂಬ, ಜಂಗಮಕ್ಕೆ ಇಲ್ಲೆಂಬ, ಬಂದ ಪುರಾತರಿಗೆ ಇಲ್ಲೆಂಬ, ಸಾವಾಗ ದೇಹವ ದೇಗುಲಕ್ಕೆ ಒಯ್ಯೆಂಬ, ದೇವರಿಗೆ ಹೆಣ ಬಿಟ್ಟಿ ಹೇಳಿತ್ತೆ ಕೂಡಲಸಂಗಮದೇವಾ 222
--------------
ಬಸವಣ್ಣ
ಇನ್ನಷ್ಟು ... -->