ಅಥವಾ

ಒಟ್ಟು 451 ಕಡೆಗಳಲ್ಲಿ , 68 ವಚನಕಾರರು , 340 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಷ್ಟಲಿಂಗ ಸಂಬಂಧವಾದ ಬಳಿಕ ಕಾಯಗುಣ ಕೆಟ್ಟು ಲಿಂಗವಾಯಿತ್ತು. ಪ್ರಾಣಲಿಂಗ ಸಂಬಂಧವಾದ ಬಳಿಕ ಕರಣಗುಣ ಕೆಟ್ಟು ಲಿಂಗಕರಣಂಗಳಾದುವು. ಭಾವಲಿಂಗ ಸಂಬಂಧವಾದ ಬಳಿಕ ಇಂದ್ರಿಯಗುಣ ಕೆಟ್ಟು ಲಿಂಗೇಂದ್ರಿಯಗಳಾದುವು. ಇದು ಕಾರಣ- ಶರಣಂಗೆ ಬೇರೆ ಲಿಂಗವಿಲ್ಲ, ಬೇರೆ ಅಂಗವಿಲ್ಲ. ಅರ್ಪಿತ ಅನರ್ಪಿತವೆಂಬ ಉಭಯ ಶಂಕೆ ಹಿಂಗಿತ್ತು, ಕೂಡಲಚೆನ್ನಸಂಗಯ್ಯಾ ನಿನ್ನೊಳಡಗಿದ ನಿಜೈಕ್ಯಂಗೆ
--------------
ಚನ್ನಬಸವಣ್ಣ
ಅಪ್ಪಿನಲಾದ ಘಟವು ಅರ್ಪಿ[ತದ]ಲೆ ಲೀಯ, ಇಪ್ಪತ್ತೈದೆಂದು ಕುರುಹಿಡುವೆ ಏಕೆಲೆ ಮನುಜಾ. ತಾ ಹುಟ್ಟಿ ತಮ್ಮವ್ವೆ ಬಂಜೆಯೆಂಬ ನ್ಯಾಯದಲ್ಲಿ ಬೇರೆ ವಿವರಿಸಿ ತೋರಬಲ್ಲಡದು ಯೋಗ. ಅಭ್ಯಾಸಸಮಾದ್ಥಿಯಿಂ ಅನುಭವಿಗಳೆಲ್ಲರಿಗೆ ಬಯಲ ಸಮಾದ್ಥಿಯಾಗದಯ್ಯಾ ಕಪಿಲಸಿದ್ಧಮಲ್ಲಿಕಾರ್ಜುನ
--------------
ಸಿದ್ಧರಾಮೇಶ್ವರ
ನಿನ್ನಾಳಿ ಕುಂಬಾರನ ಕೆಲಸದೋಪಾದಿ; ಉದಕದ ಶೈತ್ಯವನೆ ಕೊಟ್ಟು, ನೂಲೆಳೆಯಲ್ಲಿ ಗೋಣ ಕೊಯ್ದು, ವಾಯುವಿನ ಶೈತ್ಯದಲ್ಲಿ ಆರಿಸಿ, ಅಗ್ನಿಮುಖದಲ್ಲಿ ಬೇರೆ ಭಾಂಡವೆಂದೆನಿಸಿದಂತೆ ಕೂಡಲಸಂಗಮದೇವಾ.
--------------
ಬಸವಣ್ಣ
ಮಾರ್ಜಾಲನ ಹೃದಯದಲ್ಲಿ ಮೂಷಕ ಮನೆಯ ಮಾಡಿ ಇದ್ದಿತ್ತು. ಅದಕ್ಕೆ ಮಣಿಮಾಡಂಗಳಿಂದ ಆಶ್ರಯವೊಂದು ಬಾಗಿಲು ಬೇರೆ. ಅದಕ್ಕೆ ಹೋಗಿ ಆಡುವ ನಾಟಕಸಾಲೆ. ಪವನನೆಂಬ ಸೂಳೆ ಅಘಟದಿಂದ ಆಡುತ್ತಿರಲಾಗಿ, ಕಾಲುಜಾರಿ ನೆಲಕ್ಕೆ ಬಿದ್ದಳು. ಬಿದ್ದ ಘಾತಕ್ಕೆ ಯೋನಿ ಒಡೆಯಿತ್ತು, ಮೊಲೆ ಹರಿದು, ಕಿವಿ ಕಿತ್ತು, ಕಣ್ಣು ಹಿಂಚುಮುಂಚಾಯಿತ್ತು. ನೋಡುವ ಅಣ್ಣಗಳ ಬಯಕೆ ಹರಿಯಿತ್ತು. ಯೋನಿ ಕಿತ್ತಲ್ಲಿ ಕೂಟಕ್ಕೆ ಸುಖವಿಲ್ಲ, ನೋಟಕ್ಕೆ ಬೆಂಬಳಿಯಿಲ್ಲ. ಪವನನ ಅಘಟ ಹೋಯಿತ್ತು, ಕಾಲನ ಕಮಟಕ್ಕೆ. ನೀ ಅಲೇಖನಾದ ಶೂನ್ಯ, ಇವರಾಟದ ಬೆಂಬಳಿಯ ಬಿಡಿಸು, ಕಲ್ಲಿನೊಳಗಿಂದ ಇತ್ತ ಬಾರಯ್ಯಾ.
--------------
ವಚನಭಂಡಾರಿ ಶಾಂತರಸ
ಮೂರೂರ ಮಧ್ಯದಲ್ಲಿ ಆರು ವರ್ಣದ ಪದ್ಮ ಬೇರೆ ಬೇರವಕೆ ಅಕ್ಷರಗಳಾರು. ಏರಿ ಬಂದಪೆವೆಂಬ ಕರ್ಮಯೋಗಿಗಳೆಲ್ಲ ಗಾರಾಗಿ ಹೋದರು. ಮೀರಿದ ಶಿವಯೋಗ ಗಾರಾದವರಿಗೆ ಸೂರೆಯೆ, ಕಪಿಲಸಿದ್ಧಮಲ್ಲಿಕಾರ್ಜುನ?
--------------
ಸಿದ್ಧರಾಮೇಶ್ವರ
ಲಿಂಗ ಬೇರೆ, ಶರಣ ಬೇರೆಂದು ಹಂಗಿಸಿ ನುಡಿಯಲಾಗದು. ಲಿಂಗ ಬೇರೆ, ಶರಣ ಬೇರೆಯೇ? ಶಿವಶಿವ ಒಂದೇ ಕಾಣಿರಣ್ಣ. ಸುವರ್ಣ ಆಭರಣವಾಯಿತ್ತೆಂದಡೆ, ಅದು ನಾಮ ರೂಪಭೇದವಲ್ಲದೆ ವಸ್ತುಭೇದವಲ್ಲ. ಭಕ್ತಿಯ ವೈಭವದಿಂದ ಶರಣ ಸಕಾಯನಾಗಿ ಅವತರಿಸಿದೆನೆಂದಡೆ ಬೇರಾಗಬಲ್ಲನೇ? ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನೆಂಬ ಲಿಂಗವೆಂದಡೂ ಶರಣನೆಂದಡೂ ಒಂದೇ ಕಾಣಿರಣ್ಣಾ.
--------------
ಸ್ವತಂತ್ರ ಸಿದ್ಧಲಿಂಗ
ಮಹಿಯೆಂಬ ಕುಟ್ಟಿಮದ ದಿಗ್ಭಿತ್ತಿಯ ಮೇಲೆ ಮುಚ್ಚಿದ ಅಂಡಕಟಾಹ ? ಅಜನ ತತ್ತಿಯೊಳಗಣ ಪಶುಜೀವರೆಲ್ಲಾ ನೆರೆದು ಕರ್ಮವೆಂಬುದೊಂದೆ ಬಟ್ಟಲೊಳಗೆ ಮೋಹ ಮದ ರಾಗ ವಿಷಾದ ತಾಪ ಶಾಪ ವೈಚಿಂತ್ಯವೆಂಬ ಏಳು ಮಲಂಗಳನೊಂದಾಗಿ ಕಲಸಿ ತಿನ್ನುತ್ತ ಮೂರು ಮಲಂಗಳ ಬೇರೆ ಬೇರೆ ಅರಿಯುತ್ತ ವಿಷಯವೆಂಬ ರಸವ ಕುಡಿದು ಅಜ್ಞಾನವೆಂಬುದೊಂದೆ ಹಾಸಿಕೆಯಲ್ಲಿ ಮಲಗಿ ಮೂರ್ಛೆ ತಿಳಿಯದಿಪ್ಪುದ ಕಂಡು ನಾಚಿತ್ತಯ್ಯಾ ಎನ್ನ ಮನ. ನಿಮ್ಮ ಅಂತರಂಗವೆಂಬ ಚಿದಂಬರದಲ್ಲಿ ನಿಃಶೂನ್ಯವಾಗಿರಿಸೆನ್ನ ಸೌರಾಷ್ಟ್ರ ಸೋಮೇಶ್ವರಾ.
--------------
ಆದಯ್ಯ
ತನು ನಿಮ್ಮದೆಂದ ಬಳಿಕ ಎನಗೆ ಬೇರೆ ತನುವಿಲ್ಲ, ಮನ ನಿಮ್ಮದೆಂದ ಬಳಿಕ ಎನಗೆ ಬೇರೆ ಮನವಿಲ್ಲ, ಧನ ನಿಮ್ಮದೆಂದ ಬಳಿಕ ಎನಗೆ ಬೇರೆ ಧನವಿಲ್ಲ, ಇಂತೀ ತ್ರಿವಿಧವು ನಿಮ್ಮದೆಂದರಿದ ಬಳಿಕ ಎನಗೆ ಬೇರೆ ವಿಚಾರವುಂಟೆ, ಕೂಡಲಸಂಗಮದೇವಾ
--------------
ಬಸವಣ್ಣ
ಅಂಗವು ಲಿಂಗವೇಧೆಯಾದ ಬಳಿಕ ಅಂಗವೆಲ್ಲವೂ ನಷ್ಟವಾಗಿ ಲಿಂಗತನ್ಮಯವಾಗಿಪ್ಪುದಾಗಿ ದಿಟದಿಂದಿಪ್ಪ ಸಜ್ಜನಕ್ಕೆ ಬೇರೆ ಅಂಗವುಂಟೆ ಲಿಂಗವಲ್ಲದೆ? ಇದು ಕಾರಣ ಸೌರಾಷ್ಟ್ರ ಸೋಮೇಶ್ವರನ ಶರಣರು ನಿರ್ದೇಹಿಗಳು.
--------------
ಆದಯ್ಯ
ಮನೆಯೊಳಗಣ ಜ್ಯೋತಿ ಮನೆಯ ಮುಟ್ಟದಂತೆ, ಬಸುರೊಳಗಣ ಶಿಶು ಬಸುರ ಮುಟ್ಟದಂತೆ, ಕಕ್ಷೆ, ಕರಸ್ಥಳ, ಅಂಗಸೋಂಕು ಮುಖಸೆಜ್ಜೆ ಕಂಠ ಉತ್ತಮಾಂಗ, ಇವೆಲ್ಲ ಆಯತಂಗಳಲ್ಲದೆ ಪ್ರಾಣಲಿಂಗಸ್ಥಳ ಬೇರೆ. ಇದು ಕಾರಣ ಕೂಡಲಚೆನ್ನಸಂಗಾ ನಿಮ್ಮ ಶರಣನ ಪರಿ ಬೇರೆ.
--------------
ಚನ್ನಬಸವಣ್ಣ
ಸೇವ್ಯಗುರುವಿನ ಮಹಾಪ್ರಸಾದವನನುಭವಿಸಿ, ತಾನೇ ಗುರುತತ್ತ್ವವಾದ ಮಹಾಪ್ರಸಾದಿಗೆ, ಬೇರೆ ಜ್ಞಾನವುಂಟೇ? ಅಪರಿಚ್ಛಿನ್ನ ವಾಙ್ಮನಕ್ಕಗೋಚರ ಪರಾನಂದರೂಪ ನಿತ್ಯ ತೃಪ್ತ ನಿಜಮುಕ್ತನು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ, ನಿಮ್ಮ ಶರಣನು.
--------------
ಸ್ವತಂತ್ರ ಸಿದ್ಧಲಿಂಗ
ಶ್ರೀಗುರುವೇ ತಂದೆ ತಾಯಿಗಳಲ್ಲದೆ, ಬೇರೆ ಮತ್ತೆ ತಂದೆತಾಯಿಗಳಿಲ್ಲವಯ್ಯ ಎನಗೆ. ಶಿವಶರಣರೇ ಬಂಧುಬಳಗವಲ್ಲದೆ, ಬೇರೆ ಮತ್ತೆ ಬಂಧುಬಳಗವಿಲ್ಲವಯ್ಯ ಎನಗೆ. ಶಿವಕುಲವೆ ಮಹಾಕುಲವಲ್ಲದೆ, ಬೇರೆ ಮತ್ತೆ ಕುಲವಿಲ್ಲವಯ್ಯ ಎನಗೆ. ಅಖಂಡೇಶ್ವರಾ, ನೀವೆನ್ನ ಕುಲದೈವ ಮನೆ ದೈವವಲ್ಲದೆ ಬೇರೆ ಮತ್ತೆ ಕುಲದೈವ ಮನೆದೈವ ಇಲ್ಲವಯ್ಯ ಎನಗೆ.
--------------
ಷಣ್ಮುಖಸ್ವಾಮಿ
ನರಕುಲ ಹಲವಾದಲ್ಲಿ, ಯೋನಿಯ ಉತ್ಪತ್ಯ ಒಂದೇ ಭೇದ. ಮಾತಿನ ರಚನೆ ಎಷ್ಟಾದಡೇನು ? ನಿಹಿತವರಿವುದು ಒಂದು ಭೇದ. ವಸ್ತು ಜಾತಿ ಗೋತ್ರ ವಿಶೇಷವೆಂಬಲ್ಲಿ, ದಿನರಾತ್ರಿಯೆಂಬ ಉಭಯವನಳಿವುದಕ್ಕೆ ತಮ ಬೆಳಗೆರಡೆಂಬವಲ್ಲದಿಲ್ಲ. ಕುಲ ಉಭಯಶಕ್ತಿ ಪುರುಷತ್ವವಲ್ಲದಿಲ್ಲ. ಬೇರೆ ಹಲವು ತೆರನುಂಟೆಂದಡೆ, ಮೀರಿ ಕಾಬ ಶ್ರುತ ದೃಷ್ಟ ಇನ್ನಾವುದು ? ಎಲ್ಲಕ್ಕೂ ನೀರು ನೆಲ ಸೂರ್ಯ ಸೋಮ ಆರೈದು ನೋಡುವ ದೃಷ್ಟಿಯೊಂದೆ ಬೊಂಬೆ. ಬೊಂಬೆ ಹಲವ ನೋಡಿಹೆ, ಬೊಂಬೆ ಹಲವಂದ ಕಾಣ್ಬಂತೆ, ಅದರಂಗವ ತಿಳಿದು ನಿಂದಲ್ಲಿ, ಹಲವು ಕುಲದ ಹೊಲೆಯೆಂದೂ ಇಲ್ಲವೆಂದೆ. ಕೈಯುಳಿ ಕತ್ತಿ ಅಡಿಗೂಂಟಕ್ಕಡಿಯಾಗಬೇಡ, ಅರಿ ನಿಜಾ[ತ್ಮಾ] ರಾಮ ರಾಮನಾ
--------------
ವೀರ ಗೊಲ್ಲಾಳ/ಕಾಟಕೋಟ
ಲಿಂಗವೇ ಪ್ರಾಣವಾದ ಮತ್ತೆ ಬೇರೆ ನೆನೆಯಿಸಿಕೊಂಬುದು ಇನ್ನಾವುದಯ್ಯಾ ? ಇದಿರಿಟ್ಟು ಬಂದುದ ಮುನ್ನವೆ ಮುಟ್ಟಿ ಅರ್ಪಿತ ಅವಧಾನಂಗಳಲ್ಲಿ ಸೋಂಕಿದ ಮತ್ತೆ ಪುನರಪಿಯಾಗಿ ಸೋಂಕಿದಡೆ ನಿರ್ಮಾಲ್ಯ ಕಂಡಯ್ಯಾ. ಮೊನೆಗೂಡಿ ಹಾಯ್ವ ಕಣೆಯಂತೆ ಅರ್ಪಿತಾಂಗ ಸಂಗಭೇದ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವನರಿದಲ್ಲಿ.
--------------
ಪ್ರಸಾದಿ ಭೋಗಣ್ಣ
ತನು ತನ್ನದಾದಡೆ, ದಾಸೋಹಕ್ಕೆ ಕೊರತೆಯಿಲ್ಲ, ದಾಸೋಹ ಸಂಪೂರ್ಣ, ದಾಸೋಹವೇ ಮುಕ್ತಿ. ಮನ ತನ್ನದಾದಡೆ, ಜ್ಞಾನಕ್ಕೆ ಕೊರತೆಯಿಲ್ಲ ಜ್ಞಾನ ಸಂಪೂರ್ಣ, ಆ ಜ್ಞಾನವೇ ಮುಕ್ತಿ. ಧನ ತನ್ನದಾದಡೆ, ಭಕ್ತಿಗೆ ಕೊರತೆಯಿಲ್ಲ. ಭಕ್ತಿ ಸಂಪೂರ್ಣ, ಭಕ್ತಿಯಲ್ಲಿ ಮುಕ್ತಿ. ತನುಮನಧನವೊಂದಾಗಿ ತನ್ನದಾದಡೆ ಗುರುಲಿಂಗಜಂಗಮವೊಂದೆಯಾಗಿ ತಾನಿಪ್ಪನು ಬೇರೆ ಮುಕ್ತಿ ಎಂತಪ್ಪುದಯ್ಯಾ? ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಇನ್ನಷ್ಟು ... -->