ಮಲೆಯ ಮಂದಿರದ ಕಾಳವ್ವೆಯ ಉದರದಲ್ಲಿ
ಮೂವರು ಪುರೋಹಿತರು ಬಂದರು.
ಒಬ್ಬ ಇಹದಲ್ಲಿ ಗುಣವ ಬಲ್ಲವ;
ಒಬ್ಬ ಪರದಲ್ಲಿ ಗುಣವ ಬಲ್ಲವ;
ಮತ್ತೊಬ್ಬ ಇಹಪರ ಉಭಯ ತಾ ಸಹಿತಾಗಿ
ಮೂರ ನೆನೆದು ಅರಿಯ.
ಅರಿಯದವನ ತೋಳಿನ ಕೊಡಗೂಸು,
ಕಾಳವ್ವೆಯ ಕತ್ತಲೆಯಲ್ಲಿ ತಳ್ಳಿ, ಮಲೆಗೆ ಕಿಚ್ಚ ಹಚ್ಚಿ,
ಮಂದಿರವ ಹಿರಿದುಹಾಕಿ, ಪುರೋಹಿತರ ಕಣ್ಣ ಕಳೆದು
ಕೊಡಗೂಸು ಕೊಡನೊಳಗಾದಳು.
ಇಂತಿವರಡಿಯ ಭೇದವನರಿ
ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.