ಅಥವಾ

ಒಟ್ಟು 380 ಕಡೆಗಳಲ್ಲಿ , 61 ವಚನಕಾರರು , 318 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಒಡೆಯರಿಲ್ಲದ ಮನೆಯ ತುಡುಗುಣಿ ನಾಯಿ ಹುಗುವಂತೆ, ನೀನಿಲ್ಲದವರ ಮನೆಯ ಹೊಗೆನು, ಸಂಗಯ್ಯಾ, ಶ್ವಪಚೋಪಿಗಳಾಗಲಿ, ಕೂಡಲಸಂಗಯ್ಯಾ ನೀನಿದ್ದವನೆ ಕುಲಜನು.
--------------
ಬಸವಣ್ಣ
ಇಹದಲ್ಲಿ ಸುಖಿ, ಪರದಲ್ಲಿ ಪರಿಣಾಮಿ ಎಂಬರು, ಅದು ಹುಸಿ, ನಿಲ್ಲು. ಇಹದಲ್ಲಿ ದುಃಖಿ, ಪರದಲ್ಲಿ ಪ್ರಕೃತಿಯೆಂದೆ. ಇಂತೀ ಇಹಪರವೆಂಬೆರಡು. ಲಕ್ಷ್ಮಿಯ ಮನೆಯ ತೊತ್ತಿನ ತೊತ್ತಾದವರಿಗೆ ಇನ್ನೆತ್ತಣ ಮುಕ್ತಿ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಮರನನೇರಿ ಹಣ್ಣನರಸಹೋದಡೆ ಮರ ಮುರಿದುಬಿದ್ದ ಮರುಳುಮಾನವನಂತೆ, ಕೆಸರಿನೊಳಗಣ ಹುಲ್ಲ ಮೇಯಹೋದ ಪಶುವಿನಂತೆ, ಕೊಂಬೆ ಕೊಂಬೆಗೆ ಹಾರುವ ಕೋಡಗನಂತೆ, ಉಂಡ ಮನೆಯ ದೂರುವ ಒಡೆಕಾರನಂತೆ, ಹಳ್ಳ ಹಳ್ಳ ತಿಬ್ಬಳಿ ತಿರುಗುವ ಬಳ್ಳುವಿನಂತೆ, ಮಾತಿನಲ್ಲಿ ಬ್ರಹ್ಮವ ನುಡಿವ ವೇಷಧಾರಿಗಳ ಲಿಂಗಾಂಗಿಗಳೆಂದಡೆ ಮಾರಿಗೆತಂದ ಹಂದಿಯ ನಾಯಿ ನರಿ ತಿಂಬಂತೆ ಕಾಣಾ ಅಮುಗೇಶ್ವರಾ.
--------------
ಅಮುಗೆ ರಾಯಮ್ಮ
ಮಾರ್ಜಾಲನ ಹೃದಯದಲ್ಲಿ ಮೂಷಕ ಮನೆಯ ಮಾಡಿ ಇದ್ದಿತ್ತು. ಅದಕ್ಕೆ ಮಣಿಮಾಡಂಗಳಿಂದ ಆಶ್ರಯವೊಂದು ಬಾಗಿಲು ಬೇರೆ. ಅದಕ್ಕೆ ಹೋಗಿ ಆಡುವ ನಾಟಕಸಾಲೆ. ಪವನನೆಂಬ ಸೂಳೆ ಅಘಟದಿಂದ ಆಡುತ್ತಿರಲಾಗಿ, ಕಾಲುಜಾರಿ ನೆಲಕ್ಕೆ ಬಿದ್ದಳು. ಬಿದ್ದ ಘಾತಕ್ಕೆ ಯೋನಿ ಒಡೆಯಿತ್ತು, ಮೊಲೆ ಹರಿದು, ಕಿವಿ ಕಿತ್ತು, ಕಣ್ಣು ಹಿಂಚುಮುಂಚಾಯಿತ್ತು. ನೋಡುವ ಅಣ್ಣಗಳ ಬಯಕೆ ಹರಿಯಿತ್ತು. ಯೋನಿ ಕಿತ್ತಲ್ಲಿ ಕೂಟಕ್ಕೆ ಸುಖವಿಲ್ಲ, ನೋಟಕ್ಕೆ ಬೆಂಬಳಿಯಿಲ್ಲ. ಪವನನ ಅಘಟ ಹೋಯಿತ್ತು, ಕಾಲನ ಕಮಟಕ್ಕೆ. ನೀ ಅಲೇಖನಾದ ಶೂನ್ಯ, ಇವರಾಟದ ಬೆಂಬಳಿಯ ಬಿಡಿಸು, ಕಲ್ಲಿನೊಳಗಿಂದ ಇತ್ತ ಬಾರಯ್ಯಾ.
--------------
ವಚನಭಂಡಾರಿ ಶಾಂತರಸ
ಹಳದಿಯ ಸೀರೆಯನುಟ್ಟು, ಬಳಹದೋಲೆಯ ಕಿವಿಯಲಿಕ್ಕಿ ಮೊಳಡಂಗೆಯ ಪಿಡಿದು, ಗುಲಗಂಜಿ ದಂಡೆಯ ಕಟ್ಟಿ ತುತ್ತುರುತುರು ಎಂಬ ಕೊಳಲ ಬಾರಿಸುತ ಅಪಳ ಚಪಳನೆಂಬ ಉಲಿವ ಗಂಟೆಯ ಕಟ್ಟಿ ತುತ್ತುರು ಜಂಗುಳಿ ದೈವಗಳನೆಲ್ಲವ ಹಿಂಡುಮಾಡಿ ಕಾವ ನಮ್ಮ ಶಂಭು ತೆಲುಗೇಶ್ವರನು ಮನೆಯ ಗೋವಳನೀತ.
--------------
ತೆಲುಗೇಶ ಮಸಣಯ್ಯ
ದೀಕ್ಷೋಪದೇಶವ ಮಾಡಿ ಗುರುವಿನ ಕಣ್ಣ ಕಳೆದು ತಲೆ ಹೊಡೆದು ಮೂರು ಹಣವ ಕೊಂಡೆ. ದೀಕ್ಷೋಪದೇಶವ ಹಡೆದ ಭಕ್ತರ ನಾಲಗೆಯ ಕೊಯ್ದು ಕೈ ಮುರಿದು ಮೂರು ಹಣವ ಕೊಂಡೆ. ಈ ಗುರುಶಿಷ್ಯರುಭಯರ ಸಂಯೋಗಕಾಲದಲ್ಲಿರುವ ಸಾಕ್ಷಿಗಣಂಗಳ ಮನೆಯ ಸುಟ್ಟು ಮೂರು ರತ್ನವ ಕೊಂಡೆ. ಇಂತೀ ಮೂವರ ಹಣವ ತಂದು ಗುರುವಿಗೆ ಕೊಟ್ಟು ಕಾಯಕವ ಮಾಡುತ್ತಿರ್ದೆನಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ರಣವ ನಿಶ್ಚೆ ೈಸಿದ ಭಟಂಗೆ ಮನೆಯ ಮೋಹವುಂಟೆ? ಅರ್ಥ ಪ್ರಾಣ ಅಪಮಾನ ಈ ಮೂರ ಕರ್ತರಿಗೆಂದಿತ್ತು ಮತ್ತೆ ಹೊತ್ತು ಹೋರುವಂಗೆ ಸದ್ಭಕ್ತಿಯುಂಟೆ? ಅದು ಚಂದೇಶ್ವರಲಿಂಗವ ಮುಟ್ಟದ ಮಾಟ.
--------------
ನುಲಿಯ ಚಂದಯ್ಯ
ಮಹಾಮನೆಯ ಮಂಟಪದಲ್ಲಿ ನಾಲ್ಕು ನಡುವಳ ಕಂಬದ ನಡುವಳ ಕಂಬದಲ್ಲಿ ಒಂದು ಒರಲೆ ಮನೆಯ ಮಾಡಿತ್ತು. ಅದಕ್ಕೆ ಎಂಟು ಕಂಬ, ಒಂಬತ್ತು ಬಾಗಿಲು, ಹತ್ತು ಕದ; ಮಿಗಿಲೊಂದು ಮುಚ್ಚುವುದಕ್ಕೆ ಬಾಗಿಲಿಲ್ಲ. ತುಂಬಿ ಅಲ್ಲಿ ಹಾರಿತ್ತು. ಆ ಆತ್ಮನ ನೆಲೆಯನರಿ, ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಮನೆಯೊಳಗಣ ಜ್ಯೋತಿ ಮನೆಯ ಮುಟ್ಟದಂತೆ, ಬಸುರೊಳಗಣ ಶಿಶು ಬಸುರ ಮುಟ್ಟದಂತೆ, ಕಕ್ಷೆ, ಕರಸ್ಥಳ, ಅಂಗಸೋಂಕು ಮುಖಸೆಜ್ಜೆ ಕಂಠ ಉತ್ತಮಾಂಗ, ಇವೆಲ್ಲ ಆಯತಂಗಳಲ್ಲದೆ ಪ್ರಾಣಲಿಂಗಸ್ಥಳ ಬೇರೆ. ಇದು ಕಾರಣ ಕೂಡಲಚೆನ್ನಸಂಗಾ ನಿಮ್ಮ ಶರಣನ ಪರಿ ಬೇರೆ.
--------------
ಚನ್ನಬಸವಣ್ಣ
ಆನೆ ಕುದುರೆ ಒಂಟೆ ನಾಯಿ ಕೋತಿಗಳು ಮೊದಲಾದ ಪಂಚವಾಹನಾರೂಢರಾಗಿ ಚರಿಸುವವರಿಗೆ ಸುಂಕ. ಮನೆಯ ಕೆಡಿಸಿ ಮನೆಯ ಕಟ್ಟುವವರಿಗೆ ಸುಂಕ. ಹಾದರನಾಡುವವರಿಗೆ ಸುಂಕ. ತಳಮೇಲು ನಡುಮಧ್ಯ ಚತುದರ್ಶದಲ್ಲಿರುವವರಿಗೆ ಸುಂಕ. ಕಾಮಧೇನುವಿನ ಹಾಲ ಕರದು ಕುಡಿದವರಿಗೆ ಸುಂಕಿಲ್ಲ, ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಅತೀಂದ್ರಿಯರೆಲ್ಲರೂ ಮದನನ ಮನೆಯ ಬೆಸಕುಡಿಕೆಯ ನೀರೆರೆವುದಕ್ಕೊಳಗಾದರು. ವ್ರತಿಗಳೆಲ್ಲರೂ ಹೊರಗೆ ಆಚಾರವನಿರಿಸಿ, ಒಳಗೆ ಭವಿಸಂಗದಲ್ಲಿ ಬಳಲುತ್ತೈದಾರೆ. ನಿರಾಶೆವಂತರು ಕೊಡುವರ ಬಾಗಿಲಲ್ಲಿ, ಇಕ್ಕುವರ ಮಂದಿರದಲ್ಲಿ ಸಿಕ್ಕಿ ಅಯಿದಾರೆ. ಇವಕ್ಕೆ ಹೊರಗಾಗು, ಐಘಟದೂರ ರಾಮೇಶ್ವರಲಿಂಗಕ್ಕೆ.
--------------
ಮೆರೆಮಿಂಡಯ್ಯ
ಬರಿಹುಂಡನ ಗಡಿವಾಡದಲ್ಲಿರಿಸಿದಂತೆ, ಒಡೆಯರಿಲ್ಲದ ಮನೆಯ ತುಡುಗುಣಿ ಹೊಕ್ಕು, ಗಡಬಡಿಯ ಮಾಡಿದಂತೆ, ಅಂಗಕ್ಕೆ ಕುರುಹಿಲ್ಲದೆ, ಮನಕ್ಕರಿವಿಲ್ಲದೆ ತ್ರಿಭಂಗಿಯಲ್ಲಿ ನೊಂದವಂಗೆ, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವಿಲ್ಲಾ ಎಂದೆ.
--------------
ಶಿವಲೆಂಕ ಮಂಚಣ್ಣ
ಬಲ್ಲಂದಟ್ಟು ಅದೆಲ್ಲಿದ್ದರೂ ತನ್ನ ವೇದನೆಯ ಬಿಡದು. ಭಾವಜ್ಞರ ಮನೆಯ ಬಾಗಿಲಲ್ಲಿದ್ದರೂ, ಸ್ವಜಾತಿಯ ಗುಣವಲ್ಲದೆ ನೀತಿಯ ಗುಣವಿಲ್ಲ. ಇಂತಿವರುಗಳ ಮಾತೇಕೆ, ನಿಃಕಳಂಕ ಮಲ್ಲಿಕಾರ್ಜುನಾ ?
--------------
ಮೋಳಿಗೆ ಮಾರಯ್ಯ
ಬಸವಣ್ಣನ ಮನೆಯ ಸ್ವಾನಂದ ನೋಡಿದಡೆ, ಎನ್ನ ಮನ ಬೇಸರವಾಗದೆ ಶಿವದಾಸನೆಂದು ಜೀವನ್ಮುಕ್ತನೆಂದು ಹೊಗಳುವೆನಯ್ಯಾ, ಎಲೆ ಕಪಿಲಸಿದ್ಧಮಲ್ಲಿಕಾರ್ಜುನ ಪ್ರಭುವೆ
--------------
ಸಿದ್ಧರಾಮೇಶ್ವರ
ಒಕ್ಕುದ ಮಿಕ್ಕುದನುಂಡು ಕಿವಿಕಿವಿದಾಡುವೆ. ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು, ಕೂಡಲಸಂಗನ ಶರಣರ ಮನೆಯ ಭಕ್ತಿಯ ಮರುಳ ನಾನು. 461
--------------
ಬಸವಣ್ಣ
ಇನ್ನಷ್ಟು ... -->