ಅಥವಾ

ಒಟ್ಟು 502 ಕಡೆಗಳಲ್ಲಿ , 73 ವಚನಕಾರರು , 397 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರು ತನ್ನ ವಿನೋದಕ್ಕೆ ಗುರುವಾದ ಗುರು ತನ್ನ ವಿನೋದಕ್ಕೆ ಲಿಂಗವಾದ ಗುರು ತನ್ನ ವಿನೋದಕ್ಕೆ ಜಂಗಮವಾದ ಗುರು ತನ್ನ ವಿನೋದಕ್ಕೆ ಪಾದೋದಕವಾದ ಗುರು ತನ್ನ ವಿನೋದಕ್ಕೆ ಪ್ರಸಾದವಾದ ಗುರು ತನ್ನ ವಿನೋದಕ್ಕೆ ವಿಭೂತಿಯಾದ ಗುರು ತನ್ನ ವಿನೋದಕ್ಕೆ ರುದ್ರಾಕ್ಷಿಯಾದ ಗುರು ತನ್ನ ವಿನೋದಕ್ಕೆ ಮಹಾಮಂತ್ರವಾದ. ಇಂತೀ ಭೇದವನರಿಯದೆ, ಗುರು ಲಿಂಗ ಜಂಗಮ ಪಾದತೀರ್ಥ ಪ್ರಸಾದ ವಿಭೂತಿ ರುದ್ರಾಕ್ಷಿ ಓಂ ನಮಃ ಶಿವಾಯಯೆಂಬ ಮಂತ್ರವ ಬೇರಿಟ್ಟು ಅರಿಯಬಾರದು. ಅದಲ್ಲದೆ ಒಂದರಲ್ಲಿಯೂ ವಿಶ್ವಾಸ ಬೇರಾದಡೆ ಅಂಗೈಯಲ್ಲಿರ್ದ ಲಿಂಗವು ಜಾರಿತ್ತು. ಮಾಡಿದ ಪೂಜೆಗೆ ಕಿಂಚಿತ್ತು ಫಲಪದವಿಯ ಕೊಟ್ಟು ಭವಹೇತುಗಳ ಮಾಡುವನಯ್ಯಾ. ಇಷ್ಟಲಿಂಗದಲ್ಲಿ ನೈಷ್ಠೆ ನಟ್ಟು ಬಿಟ್ಟು ತ್ರಿವಿಧವ ಮರಳಿ ಹಿಡಿಯದೆ ವಿರಕ್ತನಾದನಯ್ಯಾ ಗುರು ಚೆನ್ನಮಲ್ಲಿಕಾರ್ಜುನಾ
--------------
ಅಕ್ಕಮಹಾದೇವಿ
ಮತ್ತಂ, ಆ ಶಿಷ್ಯನ ಪ್ರಳಾಪವೆಂತೆಂದಡೆ : ಅಯ್ಯಾ, ಅನಂತ ಜನ್ಮದಲ್ಲಿ ಮಾಡಿದ ಪಾಪಂಗಳೆಂಬ ಪಂಕವ ನಿಮ್ಮ ಚಿದ್ವಾಕ್ಯಪ್ರಭೆಯಲ್ಲಿ ಮುಳುಗಿಸುವುದಯ್ಯ. ಎನ್ನ ಭವಾರಣ್ಯವ ನಿಮ್ಮ ಮಹಾಜಾÕನ ಶಸ್ತ್ರದಲ್ಲಿರಿದು ಖಂಡಿಸುವುದಯ್ಯ. ಎನ್ನ ಭವರೋಗಂಗಳೆಂಬ ಕಾಷ್ಠಂಗಳ ನಿಮ್ಮ ಮಹಾಜಾÕನಾಗ್ನಿಯಲ್ಲಿ ದಹಿಸುವುದಯ್ಯ. ಅಪ್ರಮಾಣಕೂಡಲಸಂಗಮದೇವಾ ಶಿವಧೋ ಶಿವಧೋ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಮುನ್ನ ಮಾಡಿದ ದೇಹ ನಿರ್ವಯಲಾದಡೆ, ಧರಿಸುವುದೇಕೋ ಕಲ್ಲು ಲಿಂಗವ, ಎಲೆ ಅಯ್ಯಾ? ಅಂಗಗುಣ ಲಿಂಗಕ್ಕಾಯಿತ್ತು ; ಲಿಂಗಗುಣ ಅಂಗಕ್ಕಾಯಿತ್ತು. ಇವೆಲ್ಲ ಭಾವಸಂಕಲ್ಪವಿಕಲ್ಪವು. ಅಂಗ ಲಿಂಗವೆಂಬುದು ಪಳಮಾತು. `ಲಿಂಗಮಧ್ಯೇ ಜಗತ್ಸರ್ವಂ' ಎಂಬುದು ಅಖಂಡಲಿಂಗ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ
--------------
ಸಿದ್ಧರಾಮೇಶ್ವರ
ತನಗನ್ಯವಾದುದ ನೋಡಿದಡೆ ಭವಿಸಂಗ. ಸತ್ಯರು ಒಪ್ಪಿದುದನೊಪ್ಪದಿರ್ದಡೆ ಭವಿಸಂಗ. ಮಾಡಿಕೊಂಡ ವ್ರತವ ಮೀರಿದಡೆ ಭವಿಸಂಗ. ತಾ ಮಾಡಿದ ಭಕ್ತಿಯನಾಡಿಕೊಂಡಲ್ಲಿ ಭವಿಸಂಗ. ಇಂತಿವನರಿದಡೆ ಸದ್ಭಕ್ತಿ, ಕಲಿದೇವರದೇವಾ.
--------------
ಮಡಿವಾಳ ಮಾಚಿದೇವ
ಅಂಗದ ಮೇಲೆ ಲಿಂಗವಿಲ್ಲದವರು ಲಿಂಗಕ್ಕೆ ಬೋನವ ಮಾಡಲಾಗದು. ಮಾಡಿದರೆ [ಮಾಡಲಿ] ಅವರು ಮಾಡಿದ ಬೋನವ ಲಿಂಗಕ್ಕೆ ಕೊಟ್ಟು ಪ್ರಸಾದವೆಂದು ಕೊಂಡರೆ, ಕುಂಭೀಪಾಕ ನಾಯಕನರಕ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಸಚ್ಚಿದಾನಂದ ಬ್ರಹ್ಮೋಪದೇಶ ಭಕ್ತಮಹೇಶ್ವರರು ಪರಮಪಾತಕಸೂತಕಂಗಳ ಬಾಹ್ಯಾಂತರಂಗದಲ್ಲಿ ಹೊದ್ದದೆ, ಸತ್ಯಶರಣರು ಮಾಡುಂಡುದೊಂದು ಕಾಯಕ, ಬೇಡುಂಡುದೊಂದು ಕಾಯಕದಿಂದ ಗಳಿಸಿದಂಥ ಪದಾರ್ಥಗಳ, ಗುರುಚರಪರಸ್ಥಿರಕ್ಕೆ ಷಟ್‍ಸ್ಥಲಸಂಬಂಧಗಳಿಂದ, ಷಡ್ವಿಧಮಂತ್ರಗಳ ಸೊಮ್ಮಿನಿಂ ಸಂತೃಪ್ತರಾಗಿರ್ಪುದು. ಆ ನಿಲುಕಡೆಯೆಂತೆಂದಡೆ : ಶ್ರುತಿಗುರುಸ್ವಾನುಭವ ಸಾಕ್ಷಿಯಾಗಿ, ಶ್ರೀಗುರುಲಿಂಗಜಂಗಮವೆ ಪರಾತ್ಪರವೆಂದು ಕಂಡು, ಷಡುಸ್ಥಲಮಾರ್ಗವಿಡಿದು, ತನ್ನ ನಿಜವ ತಾನರಿಯದೆ, ಭವಿಶೈವ ಬ್ಥಿನ್ನ ಕರ್ಮಿಗಳಂತೆ ಭಾವಭ್ರಮೆಗೆಟ್ಟು, ಹೊಲಬುದಪ್ಪಿ, ಭೋಗಾಪೇಕ್ಷಿತರಾಗಿ, ಹಲವು ಶಾಸ್ತ್ರೋಪದೇಶವಿಡಿದು, ಕಾಶಿ ರಾಮೇಶ್ವರ ಕಂಚಿ ಕಾಳಹಸ್ತಿ ಪಂಪಾಕ್ಷೇತ್ರ ಗೋಕರ್ಣ ಶ್ರೀಶೈಲಾದಿಯಾದ ತೀರ್ಥಯಾತ್ರೆ, ವೀರಣ್ಣ ಬಸವಣ್ಣ ಮಲ್ಲಣ್ಣ ಹಾವಿಗೆ ದಂಡಾಗ್ರ ಗಿಳಿಲು ಶಂಖ ಭಸ್ಮಗುಂಟಿಕೆ ತೀರ್ಥದಗುಂಬ ಹಾದಿಬೆನವ ಹಳ್ಳದ ಬೆನವ ವಾಸರದಯ್ಯ ವಿನಾಯಕ ಶಕ್ತಿ ಗಣೇಶ ಚಂಡಿ ಚಾಮುಂಡಿಯಲ್ಲಿ ಏಕನಾತಿ ಹಿರಿಹೊಳೆ ಜಟ್ಟಿಂಗ ತೆಪ್ಪದಾರತಿ ಪಂಚಪಾಂಡವರು ಬನ್ನಿಮಹಾಂಕಾಳಿ ತುಳಸಿ ಬಿಲ್ವವೃಕ್ಷ ಸಮಾದ್ಥಿ ಗದ್ದುಗೆ ಪುರಾಣ ವಚನಾರ್ಥಪುಸ್ತಕ ಲೆಕ್ಕದ ಓಹಿ ಕತ್ತಿ ಕಂಡೇಪೂಜೆ, ಊರಬೀರ ಪೀರ ಗೋರಿ ಸತ್ತವರ ತಿಥಿ ಚಿತ್ತಹೊಲೆ ಕರ್ಮದ ಗಂಗೆ ಗುಗ್ಗುಳ ಗೌರೀನೋಂಪಿ ದೀಪಹರಕೆ ಪೂಜೆ ಕರಿಯಸೀರೆ ಊರ ಮಾರಿದೇವತೆ ಅಂಬಲಿ ಮಜ್ಜಿಗೆ ಕುಂಭ ಹೊಸ್ತಲ ಮದುವೆಯಕಂಭ ಕುಂಭ ಸರಕಿನಗಂಟು ಮಹತ್ವ ಮೆರೆದವರ ಪಾದಮುದ್ರೆ ಕಡೆಯಾದವಕ್ಕೆ, ತನ್ನ ಕಾಯ ವಾಚ ಮನದಲ್ಲಿ ಹೊಳೆದು, ಪಿತ-ಮಾತೆ ಸತಿ-ಸುತ ಒಡಹುಟ್ಟಿದವರು ಸೇವಕ ಕಡೆಯಾದವರಿಂದೆ ತನ್ನ ಮನೆಯಲ್ಲಿ ಮಾಡಿದ ಎಡೆ ವಾರಮೃತ್ಯೋದಕ, ಪಾದೋದಕಸಂಬಂಧವಾದ, ವಿಭೂತಿ-ಗಂಧಾಕ್ಷತೆ-ಪುಷ್ಪ-ಪತ್ರಿ ಧೂಪ-ದೀಪ ಹಣ್ಣು-ಕಾಯಿ ವಸ್ತ್ರಾಭರಣ-ಪಂಚಕಳಸ ಕಾಣಿಕೆ ಮೊದಲಾದ ಬ್ಥಿನ್ನವ ಕರ್ಮಕ್ರಿಯಾಚಾರಲಿಂಗಬಾಹ್ಯರಾದ ಬ್ರಹ್ಮ ಕ್ಷತ್ರಿಯ ವೈಶ್ಯ ಶೂದ್ರ ಪಾಶುಪತ ಕಾಳಾಮುಖಿ ಯೋಗಿ-ಜೋಗಿ ಶ್ರವಣ-ಸನ್ಯಾಸಿ ಯತಿ-ವ್ರತಿ ಮನು-ಮುನಿ ಗರುಡ-ಗಂಧರ್ವ ಯಕ್ಷ-ರಾಕ್ಷಸ ಸಿದ್ಧ-ಸಾಧ್ಯರುಪದೇಶವಿಡಿದು ಚರಲಿಂಗೋದಯಘನಪಾದತೀರ್ಥವರ್ಪಿಸಿ, ನೈವೇದ್ಯ ಮಾಡಿಸುವಂಥಾದ್ದೆ ಅನಾಚಾರ. ಇದೇ ಭವಿಮಾಟಕೂಟ ಅಸತ್ಯದ ನಡೆನುಡಿಯ ವಿಚಾರದ ಪ್ರಥಮಪಾತಕ. ಇದಕ್ಕೆ ಹರನಿರೂಪ ಸಾಕ್ಷಿ : ``ಶಿವಾಚಾರಸುಸಂಪನ್ನಃ ಕೃತ್ವ್ದಾನ್ಯದೈವಸ್ಯ ಪೂಜನಂ | ಶ್ವಾನಯೋನಿಶತಂ ಗತ್ವಾ ಚಾಂಡಾಲಗೃಹಮಾಚರೇತ್ || ಅನಾಚಾರಿಕೃತಂ ಪಾಕಂ ಲಿಂಗನೈವೇದ್ಯಕಿಲ್ಬಿಷಂ | ಲಿಂಗಾಚಾರಿಕೃತಂ ಪಾಕಂ ಲಿಂಗನೈವೇದ್ಯಮುತ್ತಮಂ || ತದ್ದಿನಂ ದಿನದೋಷೇಣ ಶೋಣಿತಂ ಸುರಾಮಾಂಸಯೋಃ | ಏಕಭುಕ್ತೋಪವಾಸೇನ ನರಕೇ ಕಾಲಮಕ್ಷಯಂ || ಸೌಮೇ ಭೌಮೇ ವ್ಯತಿಪಾತೇ ಸಂಕ್ರಾಂತಿಶಿವರಾತ್ರಿಯೋ | ಶೈವಕರ್ಮೋಪವಾಸಿನಾಂ ನರಕೇ ಕಾಲಮಕ್ಷಯಂ || ಕಾರ್ತೀಕಮಾಘಶ್ರಾವಣ ಶೈವಪೂಜಾವಿಶೇಷತಃ | ವೀರಶೈವಸ್ತಥಾ ಕೃತ್ವಾ ಸನ್ತಶ್ಟ ಪ್ರಾಕೃತೈಃ ಸಮಾಃ || ಸ್ಥಾವರಾರ್ಪಿತನೈವೇದ್ಯಾತ್ ನ ತೃಪ್ತಿರ್ಮಮ ಪಾರ್ವತಿ | ಜಂಗಮಾರ್ಪಿತನೈವೇದ್ಯಾತ್ ಮಮ ತೃಪ್ತಿಶ್ಚ ಸರ್ವದಾ || ಸತ್ಪಾತ್ರದತ್ತವಿತ್ತಸ್ಯ ತದ್ಧನಂ ಸ್ವಧನಂ ಸುಖಂ | ಅಪಾತ್ರದತ್ತ ವಿತ್ತಸ್ಯ ತದ್ಧನಂ ಸ್ವಸುಖಂ ಭವೇತ್ || ಚರಸ್ಯ ಗಮನೋ ನಾಸ್ತಿ ಭಕ್ತಸ್ಯ ಗೃಹಮಾಚರೇತ್ | ಅನ್ಯಗೃಹಂ ಗಮಿಷ್ಯಂತಿ ಸದ್ಯೋ ಗೋಮಾಂಸಭಕ್ಷಣಮ್ || ಇಷ್ಟಲಿಂಗಮವಿಶ್ವಸ್ಯ ಅನ್ಯದೈವಮುಪಾಸತೇ | ಶ್ವಾನಯೋನಿ ಶತಂ ಗತ್ವಾ ಚಾಂಡಾಲಗೃಹಮಾಚರೇತ್ || ಬಹುಲಿಂಗಪೂಜಕಸ್ಯ ಬಹುಭಾವಗುರುಸ್ತಥಾ | ಬಹುಪ್ರಸಾದಂ ಭುಂಜಂತಿ ವೇಶ್ಯಾಪುತ್ರಸ್ತಥೈವ ಚ || ಅಭಕ್ತಜನಸಂಗಶ್ಚ ಮಂತ್ರಸ್ಯ ಚ ಆಗಮಃ | ಅನ್ಯದೈವಪರಿತ್ಯಾಗಃ ಲಿಂಗಭಕ್ತಸ್ಯ ಲಕ್ಷಣಂ || ಲಿಂಗಧಾರಕಭಕ್ತಾನಾಂ ಲಿಂಗಬಾಹ್ಯಸತೀಸುತಾಃ | ಆಲಿಂಗಿತಾ ಚುಂಬಿತಾಶ್ಚ ರೌರವಂ ನರಕಂ ವ್ರಜೇತ್ ||'' ಇಂತೆಂಬ ಹರಗುರುವಾಕ್ಯಪ್ರಮಾಣವದಾಗಿ, ಸದ್ಭಕ್ತಶರಣಗಣಾರಾಧ್ಯರು ಭೂಪ್ರತಿಷ್ಠಾದಿಗಳ ಹೊದ್ದಿದಡೆ, ಭವಬಂಧನವಪ್ಪದು ತಪ್ಪದು. ಅದು ಕಾರಣವಾಗಿ ಗುರುಮಾರ್ಗಿಕರು ಹೊದ್ದದೆ, ಭವಸಾಗರವ ದಾಂಟಿ, ನಿರ್ಧರದಿಂದಿಪ್ಪುದೊಂದು ನರಗುರಿಗಳ ಪ್ರಥಮಪಾತಕನಿರಸನ ಕಾಣಾ ನಿರವಯಪ್ರಭು ಮಹಾಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಹುಸಿಯಿಂದ ಶಿವನ ಮುಕುಟವ ಕಂಡೆನೆಂದು ಹುಸಿಯಂ ನುಡಿದು ಬ್ರಹ್ಮ ಭ್ರಷ್ಟನಾದ. ಮುಳ್ಳಿನಲ್ಲಿ ತೊನಚಿಯನಿದು ಜೀವಹಿಂಸೆಯ ಮಾಡಿದ ಮಾಂಡವ್ಯ ಶೂಲಕ್ಕೆ ಗುರಿಯಾದ. ಸೋಮಸುತನ ಮಗ ಶೂದ್ರಕವೀರಂಗೆ ಕಳವು ಹೊದ್ದಿ, ಶಿರಹರಿದು ಕಾಂಚಿಯಾಲದಲ್ಲಿ ಮೆರಯಿತ್ತು. ಅಕ್ಷಿಪಾದನಸ್ತ್ರೀ ಅಹಲ್ಯಾದೇವಿಗೆ ಅಳುಪಿದ ಶಕ್ರನ ಅಂಗ ಅನಂಗಮುದ್ರೆಯಾಯಿತ್ತು. ಕಾಂಕ್ಷೆ ಮಾಡಿದ ನಾಗಾರ್ಜುನ ಚಕ್ರದಲ್ಲಿ ಹತವಾದ. ಇಂತಿವರನಂತರು ಕೆಟ್ಟರು ನೋಡಯ್ಯಾ. ಸೌರಾಷ್ಟ್ರ ಸೋಮೇಶ್ವರನ ಶರಣರು ದೋಷವಿರಹಿತರಾಗಿ ಸ್ವರ್ಗ ಅಪವರ್ಗವ ಮೀರಿ ಲಿಂಗದಲ್ಲಿ ಐಕ್ಯರಾದರು.
--------------
ಆದಯ್ಯ
ಮಾಡಿದ ಮಾಟವನರಿಯದ ಭಕ್ತ. ಕೂಡಿದ ಕೂಟವನರಿಯದ ಭಕ್ತ. ಮಾಟ ಕೂಟವೆಂಬ ಕೋಟಲೆಯನುಳಿದ ನಿಸ್ಸಂಗತ್ವ ನಿರಾಭಾರಿ ನಿಸ್ಸೀಮ ನಿರ್ದೇಹಿ ನಿಜದಲ್ಲಿ ಅಡಗಿದ ನಿತ್ಯ ಮುಕ್ತನಯ್ಯಾ ಭಕ್ತನು, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಎಡೆಯ ಮಾಡಿದ ಎಡೆ ಏಕವಾರಕ್ಕೆ ಮುನ್ನವೇ (ತೀ)ರಿತ್ತು. ತೀರಿದ ಪ್ರಸಾದವನುಣಹೋದರೆ ಉಂಡವರೆಲ್ಲಾ ನನ್ನ ಗಂಡರಾದರು. ಅವರ ಕಂಡು ನಾನು ಮರುಳುಗೊಂಡರೆ ಮಹದನುಭವದಲ್ಲಿ ಕೂಟವಾಯಿತ್ತಯ್ಯ ಸಂಗಯ್ಯ.
--------------
ನೀಲಮ್ಮ
ಜ್ಞಾನ ಸದ್ಭಕ್ತಿ ಸನ್ನಹಿತವಾಗಿ, ಲಿಂಗ ಮುಂತಾಗಿ ಮಾಡಿದ ಕ್ರೀ ಲಿಂಗಕ್ರೀ. ಧ್ಯಾನ ಪೂಜೆ ಭಕ್ತಿಯರ್ಪಿತ ಪ್ರಸಾದ ಮುಕ್ತಿ- ಇವೆಲ್ಲವು ತನ್ನೊಳಗೆ, ಅಜ್ಞಾನ ಅಭಕ್ತಿ ಮರವೆ ಮುಂತಾದ ಕ್ರೀ ಅಂಗಕ್ರೀ, ಅದು ಹೊರಗು. ಇದು ಕಾರಣ, ಜ್ಞಾನ ಸದ್ಭಕ್ತಿ ಸನ್ನಹಿತವಾದುದೆ ಮುಕ್ತಿ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಅನುವನರಿದು ಅನುಭಾವಿಯಾದ ಕಾರಣ ಸಮ್ಯಗ್‍ಜ್ಞಾನದಿಂದ ತನ್ನನರಿದು, ತನ್ನನೆ ಶಿವಭಾವವಾಗಿ ಕಂಡು ಆ ಶಿವಭಾವದಲ್ಲಿ ತನ್ನಹೃದಯವ ಸಮ್ಮೇಳವ ಮಾಡಿದ ಶರಣನು. ತಾನೆ ಶಿವನ ಪರಮೈಶ್ವರ್ಯಕ್ಕೆ ಭಾಜನವಾಗಿ ಸರ್ವಲೋಕವನು ಶಿವನೊಳಗಡಗಿಸಿದನಾಗಿ, ಆ ಶಿವನ ತನ್ನೊಳಗಡಗಿಸಿ, ಆ ಶಿವನಲ್ಲಿ ಮನವ ನಿಲಿಸಿ ನೆನೆವುತ್ತಿರಲು ಆ ನೆನೆವ ಮನಸಿನ ಲಯಕ್ಕೆ ಭಾಜನವಾದಾತ ಶಿವನೆಂದರಿದನು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನ ಶರಣನು.
--------------
ಸ್ವತಂತ್ರ ಸಿದ್ಧಲಿಂಗ
ಕರು(ರ?)ಣ ಲಿಂಗಾರ್ಚನೆಯ ಮಾಡಲೆಂದು ಪುಷ್ಪಕ್ಕೆ ಕೈಯ ನೀಡಿದಡೆ ಆ ಪುಷ್ಪ ಕರಣದೊಳಗಡಗಿತ್ತಯ್ಯ. ಷೋಡಶ ಕಳೆ ಹದಿನಾರರೆಸಳು ವಿಕಸಿತವಾಯ್ತು. ಪುರುಷ ಪುಷ್ಪದ ಮರನು, ಅದು ಓಗರದ ಗೊಬ್ಬರವನುಣ್ಣದು, ಕಾಮದ ಕಣ್ಣಿರಿಯದು. ನಿದ್ರೆಯ ಕಪ್ಪೊತ್ತದು. ಅರುಣ ಚಂದ್ರಾದಿಗಳಿಬ್ಬರ ತೆರೆಯುಂಡು ಬೆಳೆಯದ ಪುಷ್ಪ ಲಿಂಗವೆ ಧರೆಯಾಗಿ ಬೆಳೆಯಿತ್ತು, ಆ ಪುಷ್ಪ ನೋಡಾ ! ಆ ಪುಷ್ಪವೆಂದಿಗೂ ನಿರ್ಮಾಲ್ಯವಲ್ಲೆಂದು ಗುಹೇಶ್ವರ, ನಿಮ್ಮ ಶರಣ ಪ್ರಾಣಲಿಂಗಕ್ಕೆ ಪ್ರಾಣಪೂಜೆಯ ಮಾಡಿದ.
--------------
ಅಲ್ಲಮಪ್ರಭುದೇವರು
ಶಶಿಮುಖಿಯರ ಸಂಗಕ್ಕೆ ಎಣಿಸುವ ಪಶುಪ್ರಾಣಿಗಳು ಪಶುಪತಿಯ ಸಂಗಸುಖಕ್ಕೆ ಯಾಕೆ ಎಣಿಸಲೊಲ್ಲರಯ್ಯ? ಶಿವ ಶಿವಾ! ನೀ ಮಾಡಿದ ವಿಷಯದ ವಿದ್ಥಿ, ಈರೇಳುಲೋಕವನಂಡಲೆವುತ್ತಿದೆ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಏನು ಏನೂ ಎನಲಿಲ್ಲದ ಮಹಾಘನ ನಿರಂಜನಾತೀತದ ನೆನಹುಮಾತ್ರದಲ್ಲಿಯೆ ನವಪದ್ಮ ನವಶಕ್ತಿಗಳುತ್ಪತ್ಯ ಲಯವು. ನಿಶ್ಶಬ್ದವೆಂಬ ಪರಬ್ರಹ್ಮದ ನೆನಹುಮಾತ್ರದಲ್ಲಿಯೆ ಏಕಾಕ್ಷರ ತ್ರಯಾಕ್ಷರ ಸಹಸ್ರಾಕ್ಷರ ಅಷ್ಟನಾದ ಉತ್ಪತ್ಯ ಲಯವು. ದಶಚಕ್ರ ಮೊದಲಾಗಿ, ಚತುರ್ವೇದ ಗಾಯತ್ರಿ ಅಜಪೆ ಕಡೆಯಾಗಿ, ಸಮಸ್ತವು ಅಖಂಡಜ್ಯೋತಿರ್ಮಯವಾಗಿಹ ಗೋಳಕಾಕಾರಪ್ರಣವದಲ್ಲಿ ಉತ್ಪತ್ಯ ಲಯವೆಂದು ಬೋದ್ಥಿಸಿ ಕೃತಾರ್ಥನ ಮಾಡಿದ ಮಹಾಗುರುವಿನ ಶ್ರೀಪಾದಕ್ಕೆ ನಮೋ ನಮೋ ಎಂದು ಬದುಕಿದೆನು ಕಾಣಾ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಪುರುಷನಿಂದ ಸತಿ ಹಿರಿಯಳಾದರೂ ಆಗಲಿ, ಹಸೆಹಂದರವನಿಕ್ಕಿ ಮದುವೆಯ ಮಾಡಿದ ಮೇಲೆ ಪುರುಷನಿಂದ ಕಿರಿಯಳು ನೋಡಾ. ಗುರುವಿಗಿಂದ ಶಿಷ್ಯ ಅರುಹುಳ್ಳಾತನಾದರೂ ಆಗಲಿ, ಶಿಷ್ಯನ ಭಾವಕ್ಕೆ ಗುರು ಅದ್ಥಿಕ ನೋಡಾ. ನಾನರುಹುಳ್ಳಾತ, ಗುರುವಿಗರುಹುವಿಲ್ಲೆಂದು ಜರೆದು ನುಡಿವ ನುಡಿ ಅಂಗದೊಳು ಹೊಳೆದರೆ ಕುಂಬ್ಥಿನಿಯ ಪಾಪದೊಳಿಕ್ಕುವ ನಮ್ಮ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಇನ್ನಷ್ಟು ... -->