ಅಥವಾ

ಒಟ್ಟು 44 ಕಡೆಗಳಲ್ಲಿ , 20 ವಚನಕಾರರು , 34 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅನುಭಾವಲಿಂಗದ ಮರ್ಮವನರಿವುದರಿದು, ಲಿಂಗಸಂಜ್ಞೆಯನರಿವುದರಿದು, ಲಿಂಗವೆಂದಾದುದೆಂದರಿವುದರಿದು, ಲಿಂಗವಂತಹುದಿಂತಹುದೆಂದರಿವುದರಿದು ನೋಡಾ. ಲಿಂಗದಲ್ಲಿಯೆ ಅಗಮ್ಯವಯ್ಯ. ಭೂಮಿಯೆ ಪೀಠಕೆ, ಆಕಾಶವೆ ಲಿಂಗವೆಂದರಿದಾತನು ಲಿಂಗವನರಿದಾತನಲ್ಲ. ಲಿಂಗದಲ್ಲಿ[ಯೆ] ಅಗಮ್ಯವಯ್ಯ. ಲಿಂಗದ ಆದಿ ಬ್ರಹ್ಮ, ಮಧ್ಯ ವಿಷ್ಣು, ಅಂತ್ಯ ರುದ್ರ. ಇಂತೀ ತ್ರಿಮೂರ್ತಿಲಿಂಗವೆಂದರಿದಾತನು ಲಿಂಗವನರಿದವನಲ್ಲ. ಲಿಂಗದಲ್ಲಿ[ಯೆ] ಅಗಮ್ಯವಯ್ಯ. ಲಿಂಗಮಧ್ಯೇ ಜಗತ್ಸರ್ವಂ ತ್ರೈಲೋಕ್ಯಂ ಸಚರಾಚರಂ ಲಿಂಗಬಾಹ್ಯಾತ್ ಪರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ ಎಂಬ ಭಾವರಹಿತ ಲಿಂಗವು `ಬ್ರಹ್ಮ ವಿಷ್ಣ್ವಾದಿದೇವಾನಾಮಪ್ಯಗೋಚರಂ' ಎಂದು ಇದಂ ಮಾಹೇಶ್ವರಂ ಜ್ಯೋತಿರಾಪಾತಾಲೇ ವ್ಯವಸ್ಥಿತಂ ಅತೀತಂ ಸತ್ಯಲೋಕಾದೀನನಂತಂ ದಿವ್ಯಮೀಶ್ವರಂ ಲಲಾಟಲೋಚನಂ ಚಾಂದ್ರೀ ಕಲಾಪಂ ಚತುರ್ದಶಂ ಅಂತರ್ವತೇಹ ನಿರ್ದೇಹಂ ಗುರುರೂಪಂ ವ್ಯವಸ್ಥಿತಂ ಪಾದಭಿನ್ನಂ ಹಿ ಲೋಕೇನ ಮೌಳಿಬ್ರಹ್ಮಾಂಡಭಿತ್ತಯೇ ಭುಜಪ್ರಾಂತದಿಗಂತಾನಾಂ ಭೂತಾನಾಂ ಪತಯೇ ನಮಃ ನಾದಲಿಂಗಮಿತಿಜ್ಞೇಯಂ ಬಿಂದುಪೀಠಮುದಾಹೃತಂ ನಾದಬಿಂದುಯುತಂ ರೂಪಂ ಲಿಂಗಾಕಾರಮಿಹೋಚ್ಯತೇ ಎಂಬ ಲಿಂಗಮೆಂದು ಲಿಯತೇ ಗಮ್ಯತೇ ಯತ್ರ ಯೇನಸರ್ವಂ ಚರಾಚರಂ ತದೇತಲ್ಲಿಂಗಮಿತ್ಯುಕ್ತಂ ಲಿಂಗತತ್ತ್ವಪರಾಯಣೈಃ ಲಕಾರಂ ಲಯಸಂಪ್ರೋಕ್ತಂ ಗಕಾರಂ ಸೃಷ್ಟಿಮೇವ ಚ ಲಯಾನಾಂ ಗಮನಶ್ಚೈವ ಲಿಂಗಾಕಾರಮಿಹೋಚ್ಯತೇ ಎಂದರಿದಾತನು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನೆಂದರಿದ ಶರಣಂಗೆ ಸುಲಭ, ಮಿಕ್ಕಿನವರಿಗಳಿಗಲಭ್ಯವಯ್ಯಾ.
--------------
ಉರಿಲಿಂಗಪೆದ್ದಿ
ಯತ್ರ ಯತ್ರ ಮಾಹೇಶ್ವರರಿರ್ದ ಗ್ರಾಮ ತತ್ರ ತತ್ರ ಶಿವಲೋಕ ನೋಡಾ, ಎಲೆ ಅಯ್ಯಾ. ಸತ್ಯ! ವಚನ ತಪ್ಪುವುದೆ ಅಯ್ಯಾ! ಕಪಿಲಸಿದ್ಧಮಲ್ಲಿನಾಥಾ, ನಿಮ್ಮ ಶರಣರು ಮೆಟ್ಟಿ ನಿಂದ ಧರೆ ಪಾವನವೆಂಬುದು ಇಂದೆನಗೆ ಅರಿಯಬಂದಿತ್ತಯ್ಯಾ.
--------------
ಸಿದ್ಧರಾಮೇಶ್ವರ
ಗುರುಲಿಂಗಜಂಗಮದ ಭಕ್ತನಾದೆನೆಂದು, ಪಂಚವಿಧ ಪತಾಕಿಯ ಮುಂದೆ ನಿಲಿಸಿ ಮಾತನಾಡುವರಯ್ಯಾ. ಪಂಚಾಂಗವ ಕೇಳಿ ನಡೆದಲ್ಲಿ ಗುರುದ್ರೋಹಿಯೆಂಬೆ. ಅನ್ಯ ಸ್ಥಾವರ ಘನವೆಂದು ನಡೆದಲ್ಲಿ ಲಿಂಗದ್ರೋಹಿಯೆಂಬೆ. ಅಪಾತ್ರ ದ್ರವ್ಯನಿತ್ತಲ್ಲಿ ಜಂಗಮದ್ರೋಹಿಯೆಂಬೆ. ತದ್ದಾದಿ ಕುಷ್ಟರೋಗಕ್ಕೆ ಕಸಮಲೌಷಧ ಹಚ್ಚಿದಲ್ಲಿ ಭಸ್ಮದ್ರೋಹಿ. ಚಿನ್ನ ಬೆಳ್ಳಿ ಮೊದಲಾದ ಸಕಲಾಭರಣವ ಧರಿಸಿದಲ್ಲಿ ರುದ್ರಾಕ್ಷಿದ್ರೋಹಿ. ತೀರ್ಥಯಾತ್ರೆ ಘನವೆಂದುಕೊಂಡಲ್ಲಿ ಪಾದೋದಕದ್ರೋಹಿ. ಸಕಲರಿಂದೆ ಔಷಧವ ಭಕ್ಷಿಸಿದಲ್ಲಿ ಪ್ರಸಾದದ್ರೋಹಿ. ಯಂತ್ರ ಮಂತ್ರ ತಂತ್ರಗಳಿಂದೆ ಚರಿಸಿದಲ್ಲಿ ಪಂಚಾಕ್ಷರಿದ್ರೋಹಿ. ಇಂತು ಅಷ್ಟಾವರಣವ ಹೊತ್ತು ಅಷ್ಟದ್ರೋಹಿಯಾದ ಭ್ರಷ್ಟಭವಿಗಳಿಗೆತ್ತಣ ಮುಕ್ತಿಯಯ್ಯಾ ಗುರುನಿರಂಜನ ಚನ್ನಬಸವಲಿಂಗಾ ?
--------------
ದೇಶಿಕೇಂದ್ರ ಸಂಗನಬಸವಯ್ಯ
ಘುಟಿಕಾಸಿದ್ಧರ ಘುಟಿಕೆಯುರುಳಿತ್ತು ಯಂತ್ರಿಗಳ ಯಂತ್ರ ಎದ್ದು ಹೋಯಿತ್ತು ಮಂತ್ರಿಗಳ ಮಂತ್ರ ಮರೆತುಹೋಯಿತ್ತು ಔಷಧಿಗರ ಔಷಧವನಾರಡಿಗೊಂಡಿತ್ತು ಸರ್ವವಿದ್ಯಾಮುಖದ ಜ್ಯೋತಿ ನಂದಿತ್ತು ಈ ವಿಷಯದ ಲಹರಿಯಲ್ಲಿ ಮೂರುಲೋಕದವರೆಲ್ಲರು ಮೂರ್ಛಿತರಾದರು ಕಾಣಾ ಗುಹೇಶ್ವರ.
--------------
ಅಲ್ಲಮಪ್ರಭುದೇವರು
ಓಂಕಾರ ಬಿಂದು ಸಂಯುಕ್ತಂ ನಿತ್ಯಂ ಧ್ಯಾಯಂತಿ ಯೋಗಿಯಃ ಕಾಮದಂ ಮೋಕ್ಷದಂ ಚೈವ ಓಂಕಾರಾಯ ನಮೋ ನಮಃ ನಮಂತಿ ಋಷಯೋ ದೇವಾ ನಮಂತ್ಯಪ್ಸರಸಾಂಗಣಾಃ ನಮಂತಿ ದೇವಾ ದೇವೇಶಂ `ನ' ಕಾರಾಯ ನಮೋ ನಮಃ ಮಹಾದೇವಂ ಮಹಾತ್ಮಾನಂ ಮಹಾಜ್ಞಾನಪರಾಯಣಂ ಮಹಾಪಾಪ ಹರಂ ನಿತ್ಯಂ `ಮ' ಕಾರಾಯ ನಮೋ ನಮಃ ಶಿವಂ ಶಾಂತಧರಂ ದೇವಂ ಲೋಕಾನುಗ್ರಹ ಕಾರಣಂ ಶಿವಮೇಕಂ ಪರಬ್ರಹ್ಮ `ಶಿ'ಕಾರಾಯ ನಮೋ ನಮಃ ವಾಹನಂ ವೈಷಭೋ ಯಸ್ಯ ವಾಸುಕಿಃ ಕಂಠಭೂಷಣಂ ವಾಮಶಕ್ತಿಧರಂ ದೇವಂ `ವ'ಕಾರಾಯ ನಮೋ ನಮಃ ಯತ್ರ ಯತ್ರ ಸ್ಥಿತೋ ದೇವಃ ಸರ್ವವ್ಯಾಪಿ ಮಹೇಶ್ವರಃ ಯೋ ಗುರುಃ ಸರ್ವದೇವಾನಾಂ `ಯ'ಕಾರಾಯ ನಮೋ ನಮಃ ವೇದ: ನಕಾರಾಯ ಮಕಾರಾಯ ಶಿಕಾರಾಯ ತಥೈವ ಚ ವಕಾರಾಯ ಯಕಾರಾಯ ಓಂಕಾರಾಯ ನಮೋ ನಮಃ ವೇದಮಾತಾ ಚ ಗಾಯಿತ್ರೀ ಮಂತ್ರಮಾತಾ ಷಡಕ್ಷರೀ ಸರ್ವದೇವಪಿತಾ ಶಂಭುಃ ಭರ್ಗೋ ದೇವಸ್ಯ ದ್ಥೀಮಹಿ ಷಡಕ್ಷರಮಿದಂ ಪುಣ್ಯಂ ಯಃ ಪಠೀತ್ ಶಿವಸನ್ನಿಧೌ ಶಿವಲೋಕಮವಾಪ್ನೋತಿ ಶಿವೇನ ಸಹ ಮೋದತೆ ಓಂ ನಮಃ ಶಿವಾಯ ಓಂ ನಮಃ ಶಿವಾಯ ಓಂ ನಮಃ ಶಿವಾಯ ಎನ್ನದಿರ್ದಡೆ ಭವಬಂಧನ ಇಹಪರ ಸಂಸಾರಾದಿ ಪ್ರಪಂಚಬಂಧನ ಬಿಡದು. ಓಂ ನಮಃ ಶಿವಾಯ ಓಂ ನಮಃ ಶಿವಾಯ ಎಂದಡೆ ಮೋಕ್ಷಸಿದ್ಧಿ. ಸಾಕ್ಷಿ: ಷಡಕ್ಷರಜಪಾನ್ನಾಸ್ತಿ ಸರ್ವೇಷಾಂ ಬಂಧನಂ ತಥಾ ತನ್ಮಂತ್ರಂ ಚ ಜಪನ್ ಭಕ್ತ್ಯಾ ಸದ್ಯೋ ಮುಕ್ತೋ ನ ಸಂಶಯಃ ಎಂಬುದಾಗಿ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಯ್ಯ ಬಂದು ಮೋಕ್ಷ ತಾನೇ ಓಂ ನಮಃ ಶಿವಾಯ.
--------------
ಉರಿಲಿಂಗಪೆದ್ದಿ
ಮಾತೇ ಮಂತ್ರ, ಮಾತೇ ತಂತ್ರ, ಮಾತೇ ಯಂತ್ರ, ಮಾತೇ ಮಾತಿನಿಂದಲಿ ಮಥನ ಮರಣವು. ಮಾತು ತಪ್ಪಿ ಆಡುವಂಗೆ ಆತ್ಮಲಿಂಗವೆಲ್ಲಿಯದು ? ಪ್ರೇತ ಲಿಂಗಸಂಸ್ಕಾರಿಯೆಂಬವ ಮಾತಿಗೆ ತಪ್ಪುವನೆ ? ಭೂತಪ್ರಾಣಿ ಲಿಂಗಪ್ರಾಣಿಯಾಪನೆ ? ಬನ್ನಣೆ ಮಾತಿನ ರೀತಿ- ನಿರುತವೆ ಸದಾಚಾರ, ನಿರ್ಣಯವೆ ಲೋಕಾಚಾರ, ನಿಜ ಸ್ವರೂಪವೇ ಸದಾಚಾರ, ಯಾತನ ಶರೀರಕ್ಕೆ ಅಳವಡದು ಕಾಣಾ ಎಲೆ ನಮ್ಮ ಕೂಡಲಚೆನ್ನಸಂಗಮದೇವಯ್ಯ.
--------------
ವೀರಸಂಗಯ್ಯ
ಘಟವ ಮಾಡಿದ ಕುಲಲಾನು ಆ ಘಟದೊಳಿಪ್ಪುದಿಲ್ಲವೆಂತಂತೆ, ಬೆಳಸ ಬಿತ್ತಿದವನು ಆ ಬೆಳೆಯೊಳಿಪ್ಪುದಿಲ್ಲವೆಂತಂತೆ, ರಥವ ಮಾಡಿದ ರಥಿಕ ತಾ ಆ ರಥದೊಳಿಪ್ಪುದಿಲ್ಲವೆಂತಂತೆ, ಸರ್ವವನಾಡಿಸುವ ಶರ್ವನು ಯಂತ್ರ ಯಂತ್ರಿಯಂತಿರ್ಪನಾಗಿ ಸರ್ವರೂ ಶಿವನೆಂಬ ಅಜ್ಞಾನಿಗಳ ಮೆಚ್ಚುವನೆ ನಮ್ಮ ಸೌರಾಷ್ಟ್ರ ಸೋಮೇಶ್ವರ.
--------------
ಆದಯ್ಯ
ಯತ್ರ ಜೀವಸ್ತ್ರ ಶಿವನೆಂಬ ಬಾಲಭಾಷೆಯ ಕೇಳಲಾಗದು ಶಿವಶಿವಾ ಯತ್ರಜೀವಸ್ತತ್ರ ಶಿವನಾದರೆ ಜೀವಂಗೆ ಮರಣವೇಕೋ? ಯತ್ರ ಜೀವಸ್ತತ್ರ ಶಿವನಾದರೆ ಜನನ ಸ್ಥಿತಿ ಮರಣ ರುಜೆ ಸಂಸಾರ ಬಂಧನವೇಕೋ? ಯತ್ರ ಜೀವಸ್ತತ್ರ ಶಿವನಾದರೆ ಪುಣ್ಯಪಾಪ ಪ್ರಳಯಕಾಲ ಕಲ್ಪಿತವೇಕೊ? ಇದು ಕಾರಣ ಯತ್ರ ಜೀವಸ್ತತ್ರ ಶಿವನಲ್ಲ, ಉತ್ಪತ್ತಿ ಸ್ಥಿತಿ ಪ್ರಳಯರಹಿತನು ಸದ್ಭಕ್ತರಲ್ಲಿಪ್ಪನಲ್ಲದೆ ಮತ್ತೆಲ್ಲಿಯೂ ಇಲ್ಲ, ಕೂಡಲಚೆನ್ನಸಂಗಮದೇವ.
--------------
ಚನ್ನಬಸವಣ್ಣ
ಶಿವಭಕ್ತಿ ಶಿವಜ್ಞಾನ ಶಿವನಲ್ಲಿ ವಿಶ್ವಾಸವಮಾಡಿದ ಲಿಂಗಾಂಗಸಂಬಂಧವನುಳ್ಳ ಸದ್ಭಕ್ತಮಹೇಶ್ವರರು ಇದ್ದ ಠಾವೆಲ್ಲ ಶಿವಕ್ಷೇತ್ರ, ಅವರು ಸುಳಿದ ಸುಳಿವೆಲ್ಲ ಜಗತ್ಪಾವನ, ಅವರು ನಿಮಿಷ ನಿಮಿಷಾರ್ಧ ಕುಳಿತ ನೆಲವೆಲ್ಲ ಶಿವನ ಕೈಲಾಸ ನೋಡಾ ! ಅದೆಂತೆಂದೊಡೆ :ಸ್ಕಂದಪುರಾಣೇ- ``ಯತ್ರ ತಿಷ*ತಿ ಲಿಂಗಾಂಗಸಂಬಂಧೀಶಪರಾಯಣಃ | ನಿಮಿಷಂ ನಿಮಿಷಾರ್ಧಂ ವಾ ತತ್ ಶಿವಕ್ಷೇತ್ರಮುಚ್ಯತೇ ||'' ಮತ್ತಂ, ``ಪಾದಾಗ್ರರೇಣವೋ ಯತ್ರ ಪತಂತಿ ಶಿವಯೋಗಿನಾಮ್ | ತದೇವ ಸದನಂ ಪುಣ್ಯಂ ಪಾವನಂ ಶಿವಮಂದಿರಮ್ ||'' ಎಂದುದಾಗಿ, ಇಂತಪ್ಪ ಸದ್ಭಕ್ತ ಮಹೇಶ್ವರರ ಘನವ ನಾನೇನೆಂಬೆನಯ್ಯ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಪರಮಶಾಂತ ಪರಿಪೂರ್ಣ ಪ್ರಾಣಲಿಂಗಿಯು ಮಹಾನುಭಾವ ಜಂಗಮಲಿಂಗ ಸುಖಮಯವಾದ ಬಳಿಕ ಹುಸಿಯೆಂಬ ಮಸಿಯ ಪೂಸದ, ಆಸೆಯೆಂಬ ಮದ್ದು ತಿನ್ನದೆ, ಭಾಷೆ ಬಣ್ಣಿಗನಾಗದೆ, ಕಣ್ಣುಗೆಟ್ಟು ಮಲತ್ರಯ ಮೋಹಿಯಾಗದೆ, ಸಂದುಸಂಶಯ ಮಂದಮರುಳನಾಗದೆ, ಬೆಂದ ಒಡಲಿಗೆ ಸಂದು ಯಂತ್ರ ಮಂತ್ರ ವೈದ್ಯ ವಶ್ಯಾದಿ ಉಪಾಧಿ ಉಲುಹಿನ ಭ್ರಾಂತನಾಗದೆ, ಸದ್ಭಕ್ತಿ ಸುಜ್ಞಾನ ಪರಮವಿರಾಗತೆಯೆಂಬ ರತ್ನವ ಕಳೆಯದೆ ಡಂಭಕ ಜಡಕರ್ಮವ ಸೋಂಕದೆ ಕರಣಾದಿ ಗುಣಗಳ ಜರಿದು ಏಕಾಂತವಾಸನಾಗಿ ಚರಿಸುತಿರ್ದ ಗುರುನಿರಂಜನ ಚನ್ನಬಸವಲಿಂಗದ ಲೀಲೆಯುಳ್ಳನ್ನಕ್ಕರ.
--------------
ದೇಶಿಕೇಂದ್ರ ಸಂಗನಬಸವಯ್ಯ
ಇನ್ನು ರುದ್ರಾಕ್ಷಿಸ್ಥಲವೆಂತೆಂದಡೆ : ಬ್ರಹ್ಮ ವಿಷ್ಮು ರುದ್ರ ಮೊದಲಾದ ಸಮಸ್ತ ದೇವರ್ಕಳು ತ್ರಿಪುರದ ರಾಕ್ಷಸರ ಉಪದ್ರಕ್ಕೆ ಭೀತರಾಗಿ ರುದ್ರಲೋಕದ ಮಹಾರುದ್ರಂಗೆ ಶಿವಧೋ ಶಿವಧೋ ಎಂದು ಮೊರೆಯಿಡುತ ಚಿಂತಾಕ್ರಾಂತರಾಗಿ ನಿಲಲು, ಆ ರುದ್ರಲೋಕದ ಮಹಾರುದ್ರನು ತ್ರಿಪುರವಧಾರ್ಥ ಸರ್ವದೇವಮಯ ದಿವ್ಯ ಅನಂತತೇಜ ಅನಂತಪ್ರಚಯ ಅನಂತಜ್ವಾಲಾಮಯವಾಗಿಹ ಅಘೋರರೂಪ ತಾಳಿ ಉತ್ತಮವಾದ ಅಘೋರಾಸ್ತ್ರಮಂ ಚಿಂತಿಸಿ, ತ್ರಿಪುರದ ಕೀಲ ದಿವ್ಯಸಹಸ್ರವರ್ಷ ನೋಡಲು ಆ ರುದ್ರನ ಅಕ್ಷಿಯಲ್ಲಿ ರಕ್ತಾಶ್ರುಜಲಬಿಂದುಗಳು ಜನಿಸಿ ಭೂಮಿಯ ಮೇಲೆ ಬೀಳಲು ಮಹಾರುದ್ರಾಕ್ಷ ವೃಕ್ಷವಾಗಿ ತ್ರೈಲೋಕ್ಯಾನುಗ್ರಹ ಕಾರಣವಾಯಿತ್ತು ನೋಡಾ. ಆ ರುದ್ರಾಕ್ಷಿಯ ದರುಶನದ ಫಲ ಲಿಂಗದರುಷನದ ಫಲ, ರುದ್ರಾಕ್ಷಿಯ ದರುಶನ ಸ್ಪರ್ಶನದಿಂದ ಸರ್ವಪಾಪಂಗಳು ಹೋಹವು ನೋಡಾ. ಇದಕ್ಕೆ ಈಶ್ವರೋsವಾಚ : ``ಶ್ರುಣು ಷಣ್ಮುಖ ಯತ್ನೇನ ಕಥಯಾಮಿ ಸಮಾಸತಃ | ತ್ರಿಪುರೋ ನಾಮ ದೈತ್ಯಸ್ತು ಪುರಶ್ಚಿತ್ತು ಸುರರ್ಜಯಃ || ಚಿತ್ತಾಪ್ತೇವ ಸುರಾಸ್ಸರ್ವೇ ಬ್ರಹ್ಮ ವಿಷ್ಣೇಂದ್ರದೇವತಾಃ ಚಿಂತಿತಂ ಚ ಮಯಾ ಪುತ್ರ ಅಘೋರಾಸ್ತ್ರಮನುತ್ತಮಂ|| ಸರ್ವದೇವಮಯಂ ದಿವ್ಯಂ ಜ್ವಲಿತಂ ಘೋರರೂಪಕಂ | ತ್ರಿಪುರಸ್ಯ ವಧಾರ್ಥಾಯ ದೇವಾನಾಂ ಪ್ರಾಣವಾಯು ಚ || ಸರ್ವವಿಘ್ನಪ್ರಶಮನಂ ಅಘೋರಾಸ್ತ್ರಂತು ಚಿಂತಿತಂ | ದಿವ್ಯವರ್ಷಸಹಸ್ರಾಣಿ ಚಕ್ಷುರುನ್ಮೀಲಿತಂ ಮಯಾ || ಘಟೇಭ್ಯಾಂ ಚ ಕುಲಾಕ್ಷಿಭ್ಯಾಂ ಪತಿತಾ ಜಲಬಿಂದವಃ | ರಕ್ತಾಶ್ರುಬಿಂದವೋ ಜಾತಾಃ ಮಹಾರುದ್ರಾಕ್ಷವೃಕ್ಷಕಾಃ || ಸ್ಥಾವರತ್ವಮನುಪ್ರಾಪ್ಯ ಮತ್ರ್ಯಾನುಗ್ರಹಕಾರಣಾತ್ | ರುದ್ರಾಕ್ಷಾಣಾಂ ಫಲಂ ಧೃತ್ವಾ ತ್ರಿಷು ಲೋಕೇಷು ವಿಶ್ರುತಂ || ಲಿಂಗಸ್ಯ ದರ್ಶನೇ ಪುಣ್ಯಂ ಭವೇತ್‍ರುದ್ರಾಕ್ಷದರ್ಶನಾತ್ | ಭಕ್ತ್ಯ ರಾತ್ರೋ ದಿವಾಪಾಪಂ ದಿವಾರಾತ್ರಿ ಕೃತಂ ಹರೇತ್ || ಲಕ್ಷಂತು ದರ್ಶನಾತ್ಪುಣ್ಯಂ ಕೋಟಿ ಸಂಸ್ಪರ್ಶನೇ ಭವೇತ್ | ತತ್ಕೋಟಿ ಶತಂ ಪುಣ್ಯಂ ಲಭತೇ ಧಾರಣಾನ್ನರಃ || ಲಕ್ಷಕೋಟಿ ಸಹಸ್ರಾಣಿ ಲಕ್ಷಕೋಟಿ ಶತಾನಿ ಚ | ತಜ್ಜಪಾಲ್ಲಭತೇ ಪುಣ್ಯಂ ನಾತ್ರ ಕಾರ್ಯಂ ವಿಚಾರಣಾತ್ ||'' ಇಂತೆಂದುದಾಗಿ, ಇದಕ್ಕೆ ಮಹಾದೇವೋoವಾಚ : ``ಶಿರೋಮಾಲಾ ಚ ಷಟ್ತ್ರಿಂಶದ್ವಾತ್ರಿಂಶತ್ಕಂಠಮಾಲಿಕಾ | ಕೂರ್ಪರೇ ಷೋಡಶ ಪ್ರೋಕ್ತಾ ದ್ವಾದಶಂ ಮಣಿಬಂಧಯೋಃ || ಉರೋಮೂಲಾಚ ಪಂಚಾಶತಷ್ಟೋತ್ತರಶತಂ ತಥಾ | ಶಿರಸಾ ಧಾರಯತ್ಕೋಟಿ ಕರ್ಣಾಭ್ಯಾಂ ದಶಕೋಟಿಯಃ || ಗಳೇ ಬಂಧಂ ಶತಂ ಕೋಟಿ ಮೂಧ್ರ್ನಿ ಕೋಟಿಸಹಸ್ರಕಂ | ಆಯುಕಂಠೋಪವಿತ್ತಂ ಚ ಲಕ್ಷಮಾವೇ ಮಣಿಬಂಧಯೋರ್ಣ ವಕ್ತ್ರಾಣಿ | ದ್ವಾದಶಾದಿತ್ಯಾದಿ ಪಾಯು ಶ್ರೀಮಹಾದೇವಾಯ ನಮಃ || ಅಷ್ಟೋತ್ತರಶತಂ ಸೋಪವಿ ತ್ತಂ ಚತುರ್ದಶ ವಕ್ತ್ರಾಣಿ | ಶತರುದ್ರಾತ್ಮಾಕಾಯ ಶ್ರೀ ವಿಶ್ವೇಶ್ವರಾಯ ನಮಃ ಇತಿ ||'' ಇಂತೆಂದುದಾಗಿ, ಇದಕ್ಕೆ ಬೋಧಾಯನಶಾಖಾಯಾಂ : ``ತಾನಿ ಹವಾಏತಾನಿ ರುದ್ರಾಕ್ಷಾಣಿ ಯತ್ರ ಯೋ ಯೇ ಧಾರಯಂತಿ ಕಸ್ಮಾದೇವ ಧಾರಯಂತಿ ಸ್ನಾತ್ತ್ವಾನಿ ಧಾರಯನ್ ಗರ್ಭೇ ತಿಷ್ಟನ್ ಸ್ವಪನ್ ಖಾದನ್ ಉನ್ಮಿಷನ್ ಅಪಿ ಸರ್ವಾಣೈವಾನಿ ಚರತಿ ಮದ್ರಿ ಭೂತ್ವಾ ರುದ್ರೋ ಭವತಿ ಯೋಯೇನ ವಿದ್ವಾನ್ ಬ್ರಹ್ಮಚಾರೀ ಗೃಹಸ್ಥೋ ವಾನಪ್ರಸ್ಥೋಯತಿರ್ವಾ ಧಾರಯೇತ್ ಪದೇ ಪದೇ ಯಶ್ವಮೇಧಫಲಂ ಪ್ರಾಪ್ನೋತಿ ||'' ಇಂತೆಂದುದು ಶ್ರುತಿ. ಇದಕ್ಕೆ ಲೈಂಗ್ಯಪುರಾಣೇ : ``ರುದ್ರಾಕ್ಷಂ ಧಾರಯೇದ್ವಿಪ್ರಃ ಸಂಧ್ಯಾದಿಷು ಚ ಕರ್ಮಸು | ತತ್ಸರ್ವಂ ಸಮವಾಪ್ನೋತಿ ಕೋಟಿ ಕೋಟಿ ಗುಣಂ ಸದಾ || ಸ್ನಾನೇ ದಾನೇ ಜಪೇ ಹೋಮೇ ವೈಶ್ಯದೇವೇಷುರರ್ಚನೆ | ಪ್ರಾಯಶ್ಚಿತ್ತೇ ಕಥಾ ಶ್ರಾದ್ಧೇ ದೀಕ್ಷಾಕಾಲೇ ವಿಶೇಷತಃ || ರುದ್ರಾಕ್ಷಧರೋ ಭೂತ್ವಾ ಯತ್ಕಿಂಚಿತ್ಕರ್ಮವೈದಿಕಂ | ಕುರ್ಯಾದ್ವಿಪ್ರಸ್ತು ಯೋ ಮೋಹ ವಂಶಾವಪ್ನೋತಿ ತತ್ಫಲಂ ||'' ಇಂತೆಂದುದಾಗಿ, ಇದಕ್ಕೆ ಸ್ಕಂದಪುರಾಣೇ : ``ಲಕ್ಷಂತು ದರ್ಶನಾತ್ಪುಣ್ಯಂ ಕೋಟಿ ಸಂಸ್ಪರ್ಶನಾದಪಿ | ದಶಕೋಟಿ ಶತಂ ಪುಣ್ಯಂ ಧಾರಣಾಲ್ಲಭತೇ ವರಂ ||'' ಇಂತೆಂದುದಾಗಿ, ಇದಕ್ಕೆ ಕೂರ್ಮಪುರಾಣೇ : ``ಹಸ್ತೇಚೋರಸಿ ಕಂಠೇ ವಾ ಮಸ್ತಕೇ ವಾsಪಿ ಧಾರಯೇತ್ | ಮುಚ್ಯತೇ ಸರ್ವಪಾಪೇಭ್ಯಃ ಸ ರುದ್ರೋ ನಾತ್ರಸಂಶಯಃ || '' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ಶಿಖಾಯಾಂ ಧಾರಯೇದೇಕಂ ಷಟ್ತ್ರಿಂಶನ್ಮಸ್ತಕೇ ತಥಾ| ದ್ವಾತ್ರಿಂಶತ್ಕಂಠದೇಶೇಚ ಪಂಚಾಷಣ್ಮಾಲಿಕಾ ಹೃದಿ || ಷೋಡಶಂ ಬಾಹುಮೂಲಯೋಃ ದ್ವಾದಶಂ ಮಣಿಬಂಧಕೇ | ಕರ್ಣಯೇಕೀಕಮೇಶುಸ್ಯಾ ದುಪವಿತೇ ಶತಾಷ್ಟಕಂ || ಶತಾಷ್ಟಮಕ್ಷಮಾಲಾಂತು ನಿತ್ಯಂ ಧಾರಯೇತೇ ವರಃ | ಪದೇ ಪದೇsಶ್ವಮೇಧಸ್ಯ ಫಲಂ ಪ್ರಾಪ್ನೋತಿ ನ ಸಂಶಯಃ || ಇಂತೆಂದುದಾಗಿ, ಇದಕ್ಕೆ ಈಶ್ವರೋsವಾಚ : ``ರುದ್ರಾಕ್ಷ ಶತಕಂಠೋ ಯಃ ಗೃಹೇ ತಿಷ*ತಿ ಯೋ ವರಃ | ಕುಲೈಕವಿಂಶಮುಕ್ತಾರ್ಯ ಶಿವಲೋಕೇ ಕೋಟಿಭುಜದ್ವಯಂ | ಅಪ್ರಮೇಯ ಫಲಂ ಹಸ್ತೇ ರುದ್ರಾಕ್ಷಂ ಮೋಕ್ಷಸಾಧನಂ ||'' ಇಂತೆಂದುದಾಗಿ, ಇದಕ್ಕೆ ಈಶ್ವರೋsವಾಚ : ``ಅವದ್ಯಃ ಸರ್ವಭೂತಾನಾಂ ರುದ್ರವದ್ವಿಚರೇತ್ ಭುವಿ | ಸುರಾಣಾಮಸುರಾಣಾಂ ಚ ವಂದನೀಯೋ ಯಥಾ ಶಿವಃ || ರುದ್ರಾಕ್ಷರಧಾರಶೋ ನಿತ್ಯಂ ವಂದನೀಯೋ ನರೈರಿಹ | ಉಚ್ಛಿಷ್ಟೋ ವಾ ವಿಕರ್ಮಸ್ತೋ ಯುಕ್ತೋ ವಾ ಸರ್ವಪಾಪಕೈಃ | ಮುಚ್ಯತೇ ಸರ್ವಪಾಪೇಭ್ಯೋ ನರೋ ರುದ್ರಾಕ್ಷಧಾರಣಾತ್ ||'' ಇಂತೆಂದುದಾಗಿ ಇದಕ್ಕೆ ಕಾತ್ಯಾಯನಶಾಖಾಯಾಂ : ``ಅಥೈವ ಭಗವಂತಂ ರುದ್ರಕುಮಾರಃ ಪಪ್ರಚ್ಛಾರಣೇನ ದಶಶತ ಗೋದಾನಫಲಂ || ದರ್ಶನಸ್ಪರ್ಶನಾಭ್ಯಾಂ ದ್ವಿಗುಣಂ ತ್ರಿಗುಣಂ ಫಲಂ ಭವತಿ, ಅತ ಊಧ್ರ್ವಂ ವಕ್ತುಂ ನ ಶಕ್ನೋಮಿ ತತೋಂ ಜಪ ಸಮಂತ್ರಕಂ ಧಾರಣೇ ವಿಧಿಂ ಕಥಯಾಮಿ || ಸ್ನಾನ ವಿಧಿನಾ ಸ್ನಾತೇಷು ಖೇರಾಜ್ಞೇಯ ಸ್ನಾನಂ ತ್ರಿಪುಂಡ್ರಧಾರಣಂ ಕೃತ್ವಾ ಏಕಾಶ್ಯಾದಿರುದ್ರ ಶಾಂತಾನಾಂ || ಸೃಷ್ಟಿಕ್ರಮೇಣಂ ಮಂತ್ರಾಸ್ಯಂ `ಓಂ ಹೂಂ ಚಂ ಖಂ ಹೂಂ ಕ್ಲಿಂ ಮಾಂ ದ್ರಾಂ ದ್ರಿಂ ಹ್ರುಂ ಕ್ರೂಂ ಕ್ಷಾಂ ಕ್ಷಿಂ ಕ್ಷುಂ' ನವಮಿತೀಷುರುವೋಕ್ತ ಂ ಮಂತ್ರಾನನಂತಾ ಶೋಕ್ತ್ವಾನ್ವಾ ಜಪೇದಿಮಾನ್ ಪಾಣಾನಾಯಮ್ಯ ಸಮಸ್ತಪಾಪಕ್ಷಯಾರ್ಥಂ ಶಿವಜ್ಞಾನಾ ವಸ್ಯಾರ್ಥ ಸಮಸ್ತ ಮಂತ್ರಸ್ಸಹಧಾರಣಂ ಕರಿಷ್ಯಾಮಿತಿ ಸಂಕಲ್ಪ್ಯ ಶಿಖಾಯಾಮೇಕಮೇಕಸ್ಯಂ ಶ್ರೀ ಸದಾಶಿವಾಯ ನಮಃ ಇತಿ ||'' ``ದ್ವಿ ತ್ರಿ ದ್ವಾದಶವಕ್ತ್ರಾಣಿ ಶಿರಸಿ ತ್ರೀಣಿ ಧಾರಯೇತ್ | ವಹ್ನಿ ಸೂರ್ಯಸೋಮಾಧಿಪಾಯ ಶಿವಾಯ ನಮಃ ಇತಿ || ಏಕಾದಶ ವಕ್ತ್ರಂ ಷಟ್ತ್ರಿಂಶನ್ಮೂಧ್ರ್ನಿ ಷಟ್ತ್ರಿಂಶತ್ತತ್ವಾತ್ಮಕಾಯ | ನಮ ಇತಿ ಪಂಚದಶ ವಕ್ತ್ರಾಣಿ ಕರ್ಣಯೋರೇಕಮೇಕಂ || ಸೋಮಾಯ ನಮಃ ಇತಿ, ಯೇದಷ್ಟವಕ್ತ್ರಾಣಿ ಕಂಠೇ ದ್ವಾತ್ರಿಂಶತ್ | ತ್ರ್ಯಂಬಕಕಲಾತ್ಮನೇ ಶ್ರೀಕಂಠಾಯ ನಮಃ ಇತಿ || ಚತುರ್ವಕ್ತ್ರಂ ಪಂಚಷಣ್ಮಾಲಿಕಾಮುರಸಿ ಶ್ರೀಕಂಠಾದಿ | ಮೂತ್ರ್ಯಾಯಸ್ಥಿಕಾಯ ಶ್ರೀ ಸರ್ವಜ್ಞಾಯ ನಮಃ ಇತಿ || ಬಾಹೋ ತ್ರಯೋದಶವಕ್ತ್ರಾಣಿ ಷೋಡಶಸುಖಾಸನಾದಿ | ಷೋಡಶಮೂತ್ರ್ಯಾತ್ಮಕಾಯ ಶ್ರೀಕಂಠಾಯ ನಮಃ ಇತಿ || ದಕ್ಷೇರ್ಣವ ವಕ್ತ್ರಾಣಿ ಶ್ರೀ ವ್ಯೋಮಕಳಾತ್ಮಕಾಯ ಉಪಮಾಪತಯೇ ನಮಃ ಇತಿ ಉಪಾಯತೇ ||'' ಇಂತೆಂದುದಾಗಿ, ಇದಕ್ಕೆ ಮಹಾಲಿಂಗಪುರಾಣೇ : ``ರುದ್ರಾಕ್ಷಮಾಲಯಾ ಶುಭ್ರೋ ಜಟಾಜೂಟವಿರಾಜಿತಃ | ಭಸ್ಮಾವಲಿಪ್ತಸರ್ವಾಂಗಃ ಕಮಂಡಲುಕರಾನ್ವಿತಃ || ಕೃಷ್ಮಾಜಿನೋ ಪವಿತ್ರಾಂಗಃ ಆಶಾಹೆ ಪುಣ್ಯಕೀರ್ತನಃ | ಶಿವಃ ತಸ್ಮೆ ೈಃ ಮಹಾದೇವಂ ಯೋಗಿನಾಂ ಹೃದಯಾಲಯಂ ||'' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ರುದ್ರಕ್ಷಧಾರಣಾಸ್ಸರ್ವೇ ಜಟಾಮಂಡಲಧಾರಣಾತ್ | ಅಕ್ಷಮಾಲಾರ್ಪಿತಕರಂ ತ್ರಿಪುಂಡ್ರಾಪಲಿಯುಕ್ತಾಂಗಂ | ಆಷೇಡೇವ ವಿರಾಜಿತಂ ಋಗ್ಯಜುಃಸಾಮರೂಪೇಣ | ಸೇವತೇಸ್ಮೈ ಮಹೇಶ್ವರಃ ಸಂಸ್ಥಾಯಮನೋದಿಷ್ಟಾಂಗೈ || ದೇವೈರ್ಮುನಿಗಣೈಸ್ತಥಾಮೃತ ತ್ರಿಪುಂಡ್ರಕೋ ದಿವ್ಯೇ | ರುದ್ರಾಕ್ಷೇಶ್ವ ವಿಭಾಷಿತಃ ಶುಭೇ ಸತತಂ ವಿಷ್ಟು| ಭಸ್ಮದಿಗ್ಧತಮೂಲತಃ ತ್ರಿಪುಂಡ್ರಾಂಕಿತ ಸರ್ವಾಂಗೋ | ಜಟಾಮಂಡಲಮಂಡನ ಭೂತಿ ತ್ರಿಪುಂಡ್ರರುದ್ರಾಕ್ಷಂ | ಅಕ್ಷರ ಮಾಲಾರ್ಪಿತಕರಃ ಕುರ್ವಕ್ತ್ರಃ ಪಿತಾಮಹಾ ||'' ಇಂತೆಂದುದಾಗಿ, ಇದಕ್ಕೆ ಮಹಾದೇವೋವಾಚ : ``ಭಾಲೇ ತ್ರಿಪುಂಡ್ರಕಂ ಚೈವ ಗಳೇ ರುದ್ರಾಕ್ಷಮಾಲಿಕಾ | ವಕ್ತ್ರೇ ಷಡಕ್ಷರೀ ಮಂತ್ರೋ ಸ ರುದ್ರೋ ನಾತ್ರ ಸಂಶಯಃ ||'' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ರುದ್ರಕ್ಷಮಾಲಿಕಾ ಕಂಠೇ ಧಾರಸ್ತದ್ಭಕ್ತಿವರ್ಜಿತಃ | ಪಾಪಕರ್ಮಾಪಿ ಯೋ ನಿತ್ಯಂ ರುದ್ರಲೋಕೇ ಮಹೀಯತೇ ||'' ಇಂತೆಂದುದಾಗಿ, ಇದಕ್ಕೆ ಸ್ಕಂದಪುರಾಣೇ : ``ರುದ್ರಾಕ್ಷಂ ಕಂಠಮಾಶ್ರಿತ್ಯ ಶ್ವಾನೋsಪಿ ಮಿೃಯತೇ ಯದಿ | ಸೋsಪಿ ರುದ್ರಂ ಸಮಾಪ್ನೋತಿ ಕಿಂ ಪುನರ್ಮಾನುಷಾದಯಃ || ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ಖಾದನ್ ಮಾಂಸಂ ಪಿಬನ್ ಮದ್ಯಂ ಸಂಗಚ್ಛನ್ನಂತ್ಯಜೇಷ್ವಪಿ | ಸದ್ಯೋ ಭವತಿ ಪೂತಾತ್ಮಾ ರುದ್ರಾಕ್ಷೌ ಶಿರಸಿ ಸ್ಥಿತೇ ||'' ಇಂತೆಂದುದಾಗಿ, ಇದಕ್ಕೆ ಈಶ್ವರ ಉವಾಚ : ``ಶುಚಿರ್ವಾಪ್ಯಶುಚಿರ್ವಾಪಿ ಅಭಕ್ಷಸ್ಯ ಚ ಭಕ್ಷಣಾತ್ | ಅಗಮ್ಯಾಗಮನಂ ಚೈವ ಬ್ರಹ್ಮಹಾ ಗುರುತಲ್ಪಕಃ || ಮ್ಲೇಚ್ಛೋ ವಾಪ್ಯಥ ಚಾಂಡಾಲೋ ಯುಕ್ತೋ ವಾ ಪ್ಯಥ ಪಾತಕೈಃ | ರುದ್ರಾಕ್ಷಧಾರಣಾದ್ಯಸ್ತು ಸ ರುದ್ರೋ ನಾತ್ರ ಸಂಶಯಃ ||'' ಇಂತೆಂದುದಾಗಿ, ಇದಕ್ಕೆ ಮಹಾಲಿಂಗಪುರಾಣೇ : ``ಧ್ಯಾನಧಾರಣಹೀನೋsಪಿ ರುದ್ರಾಕ್ಷಂ ಯೋ ಹಿ ಧಾರಯೇತ್ | ಸರ್ವಪಾಪವಿನಿರ್ಮುಕ್ತಃ ಸಯಾತಿ ಪರಮಾಂ ಗತಿಂ||'' ಇಂತೆಂದುದಾಗಿ, ಇದಕ್ಕೆ ಮಾನವಪುರಾಣೇ : ``ಮೃಣ್ಮಯಂ ವಾಪಿ ರುದ್ರಾಕ್ಷಂ ಕೃತ್ವಾ ಯಸ್ತು ಧಾರಯೇತ್ | ಅಪಿ ದುಃಕೃತಕರ್ಮೋsಪಿ ಸ ಯಾತಿ ಪರಮಾಂ ಗತಿಂ ||'' ಇಂತೆಂದುದಾಗಿ, ಇದಕ್ಕೆ ಶಿವಲಿಂಗಾಗಮೇ : ``ರುದ್ರಾಕ್ಷಮಾಲಂ ಬ್ರಹ್ಮಾ ಚ ತನ್ನಾಳಂ ವಿಷ್ಣುರುಚ್ಯತೇ | ಮುಖಂ ಸದಾಶಿವಂ ಪ್ರೋಕ್ತಂ ಬಿಂದುಃ ಸರ್ವತ್ರ ದೇವತಾ ||'' ಇಂತೆಂದುದಾಗಿ, ``ರುದ್ರಾಕ್ಷಿಯ ಧರಿಸಿಪ್ಪಾತನೆ ರುದ್ರನು. ಆತನ ಭವರೋಗಂಗಳು ಹೊದ್ದಲಮ್ಮವು ನೋಡಾ. `ಏವಂ ರುದ್ರಾಕ್ಷಧಾರಣಾದ್ ರುದ್ರಾ' ಎಂದುದು ಶ್ರುತಿ. ರುದ್ರಾಕ್ಷಿಯ ಧರಿಸಿಪ್ಪ ಶರಣರಿಗೆ ಶರಣೆಂದು ಬದುಕಿದೆನು ಕಾಣಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಕಂದ : ಬಣ್ಣಿಪರಳವೆ ಶ್ರೀ ಪಂಚಾಕ್ಷರಿ ಉನ್ನತ ಮಹಿಮೆಯ ತ್ರಿಜಗದೊಳಗಂ ಎನ್ನಯ ಬಡಮತಿಯುಳ್ಳಷ್ಟಂ ಇನ್ನಂ ಪೊಗಳ್ವೆ ಸಿದ್ಧಮಲ್ಲನ ಕೃಪೆಯಿಂ. ರಗಳೆ :ಗುರು ಮಹಿಮೆಯನೋಪ ಪಂಚಾಕ್ಷರಿಯು ನಾಗಭೂಷಣನರ್ತಿನಾಮ ಪಂಚಾಕ್ಷರಿಯು | 1 | ನಡೆವುತಂ ನುಡಿವುತಂ ಶಿವನೆ ಪಂಚಾಕ್ಷರಿಯು ಕುಡುತಲಿ ಕೊಂಬುತಲಿ ಹರನೆ ಪಂಚಾಕ್ಷರಿಯು ಉಡುತಲಿ ಉಂಬುತಲಿ ಸದ್ಗುರುವೇ ಪಂಚಾಕ್ಷರಿಯು ಬಿಡದೆ ಜಪಿಸಲು ಸದ್ಯೋನ್ಮುಕ್ತಿ ಪಂಚಾಕ್ಷರಿಯು. | 2 | ಸಟೆ ಠಕ್ಕು ಠೌಳಿಯಲ್ಲಿ ಬಿಡದೆ ಪಂಚಾಕ್ಷರಿಯು ದಿಟಪುಟದಲ್ಲಿ ಆವಾ ಪಂಚಾಕ್ಷರಿಯು ಕುಟಿಲ ವಿಷಯಂಗಳೊಲಿದು ಪಂಚಾಕ್ಷರಿಯು ನಟಿಸಿ ಜಪಿಸಲು ಮುಕ್ತಿ ಈವ ಪಂಚಾಕ್ಷರಿಯು. | 3 | ಮಂತ್ರಯೇಳ್ಕೋಟಿಗೆ ತಾಯಿ ಪಂಚಾಕ್ಷರಿಯು ಅಂತ್ಯಜಾಗ್ರಜ ವಿಪ್ರರೆಲ್ಲ ಪಂಚಾಕ್ಷರಿಯು ಸಂತತಂ ಬಿಡದೆ ಜಪಿಸುವದು ಪಂಚಾಕ್ಷರಿಯು ಎಂತು ಬಣ್ಣಿಪರಳವಲ್ಲ ಪಂಚಾಕ್ಷರಿಯು. | 4 | ಆದಿ ಪಂಚಾಕ್ಷರಿಯು ಅನಾದಿ ಪಂಚಾಕ್ಷರಿಯು ಭೇದ್ಯ ಪಂಚಾಕ್ಷರಿಯು [ಅಭೇದ್ಯ ಪಂಚಾಕ್ಷರಿಯು] ಸಾಧಿಸುವಗೆ ಸತ್ಯ ನಿತ್ಯ ಪಂಚಾಕ್ಷರಿಯು ಬೋಧೆ ಶೃತಿತತಿಗಳಿಗೆ ಮಿಗಿಲು ಪಂಚಾಕ್ಷರಿಯು. | 5 | ಪಂಚಾನನದುತ್ಪತ್ಯದಭವ ಪಂಚಾಕ್ಷರಿಯು ಪಂಚಮಯ ಬ್ರಹ್ಮಮಯಂ ಜಗತ್ ಪಂಚಾಕ್ಷರಿಯು ಪಂಚವಿಂಶತಿತತ್ವಕಾದಿ ಪಂಚಾಕ್ಷರಿಯು ಪಂಚಶತಕೋಟಿ ಭುವನೇಶ ಪಂಚಾಕ್ಷರಿಯು. | 6 | ಹರಿಯಜರ ಗರ್ವವ ಮುರಿವ ಪಂಚಾಕ್ಷರಿಯು ಉರಿಲಿಂಗವಾಗಿ ರಾಜಿಸುವ ಪಂಚಾಕ್ಷರಿಯು ಸ್ಮರಣೆಗೆ ಸರಿಯಿಲ್ಲ ಪ್ರಣಮಪಂಚಾಕ್ಷರಿಯು ಸ್ಮರಿಸುವಾತನೆ ನಿತ್ಯಮುಕ್ತ ಪಂಚಾಕ್ಷರಿಯು. | 7 | ಪರಮ ಮುನಿಗಳ ಕರ್ಣಾಭರಣ ಪಂಚಾಕ್ಷರಿಯು ಹರನ ಸಾಲೋಕ್ಯದ ಪದವನೀವ ಪಂಚಾಕ್ಷರಿಯು ಉರಗತೊಡೆಶಿವನನೊಲಿಸುವರೆ ಪಂಚಾಕ್ಷರಿಯು ಕರ್ಮಗಿರಿಗೊಜ್ರ ಸುಧರ್ಮ ಪಂಚಾಕ್ಷರಿಯು. | 8 | ನಾನಾ ಜನ್ಮದಲ್ಲಿ ಹೊಲೆಯ ಕಳೆವ ಪಂಚಾಕ್ಷರಿಯು ಮನಸ್ಮರಣೆಗೆ ಸರಿಯಿಲ್ಲ ಪಂಚಾಕ್ಷರಿಯು ಜ್ಞಾನವೇದಿಕೆ ಮುಖ್ಯ ಪಂಚಾಕ್ಷರಿಯು ಧ್ಯಾನಿಸುವ ನೆರೆವ ತಾನೆ ಪಂಚಾಕ್ಷರಿಯು. | 9 | ಏನ ಬೇಡಿದಡೀವ ದಾನಿ ಪಂಚಾಕ್ಷರಿಯು ಸ್ವಾನುಜ್ಞಾನದಲ್ಲು[ದಿ]ಸಿದಂಥ ಪಂಚಾಕ್ಷರಿಯು ಭಾನು ಅಘತಿಮಿರಕ್ಕೆ ತಾನೆ ಪಂಚಾಕ್ಷರಿಯು ಕ್ಷಿತಿಭುವನಗಳ ಬೇಡಲೀವ ಪಂಚಾಕ್ಷರಿಯು. | 10 | ಕಾನನ ಭವತರು ವಹ್ನಿ ಪಂಚಾಕ್ಷರಿಯು ಯತಿಗೆ ಯತಿತನವೀವ ಗತಿಯು ಪಂಚಾಕ್ಷರಿಯು ಉನ್ನತ ಸಿದ್ಧತ್ವವನೀವ ಸಿದ್ಧಿ ಪಂಚಾಕ್ಷರಿಯು ಭಾನು ಅಘತಿಮಿರಕ್ಕೆ ತಾನೆ ಪಂಚಾಕ್ಷರಿಯು ಗತಿ ಮೋಕ್ಷಗಳ ಬೇಡೆ ಕುಡುವ ಪಂಚಾಕ್ಷರಿಯು. | 11 | ಅವಲಂಬಿಗೆ ಅವಲಂಬ ಪಂಚಾಕ್ಷರಿಯು ನಿರಾವಲಂಬಿಗೆ ನಿರಾವಲಂಬ ಪಂಚಾಕ್ಷರಿಯು ಕಾವ ಸಂಹರ ಭಜಿಪರಿಗೆ ಪಂಚಾಕ್ಷರಿಯು ಮಾವದ್ಯುಮಣಿಧರನನೊಲಿಪ ಪಂಚಾಕ್ಷರಿಯು. | 12 | ಅರಿವರ್ಗಗಳ ಮುರಿವ ಶತೃ ಪಂಚಾಕ್ಷರಿಯು ಕರಿಗಳೆಂಟನು ಹೊಡೆವ ಸಿಂಹ ಪಂಚಾಕ್ಷರಿಯು ಹರಿವ ದಶವಾಯುಗಳನಳಿವ ಪಂಚಾಕ್ಷರಿಯು ನೆರೆ ಸಪ್ತವ್ಯಸನಗಳಿಗೊಹ್ನಿ ಪಂಚಾಕ್ಷರಿಯು. | 13 | ತ್ರಿಗುಣಗಳ ಕೆಡಿಪ ನಿರ್ಗುಣವು ಪಂಚಾಕ್ಷರಿಯು ಅಘವೈದೇಂದ್ರಿಯಕೆ ಲಿಂಗೇಂದ್ರಿಯ ಪಂಚಾಕ್ಷರಿಯು ಮಿಗೆ ಕರ್ಮೇಂದ್ರಿಗಳ ತೆರೆತೆಗೆವ ಪಂಚಾಕ್ಷರಿಯು ಝಗಝಗಿಸಿ ಸರ್ವಾಂಗಪೂರ್ಣ ಪಂಚಾಕ್ಷರಿಯು. | 14 | ಷಡೂರ್ಮಿಗಳ ಗಡವನಳಿವ ಪಂಚಾಕ್ಷರಿಯು ಷಡುಕರ್ಮಗಳ ಮೆಟ್ಟಿನಿಲುವ ಪಂಚಾಕ್ಷರಿಯು ಷಡುವೇಕದಂತಿಗೆ ನಾಥ ಪಂಚಾಕ್ಷರಿಯು ಬಿಡದೆ ಜಪಿಸಿದಡವ ಮುಕ್ತ ಪಂಚಾಕ್ಷರಿಯು. | 15 | ಸಂಸಾರಸಾಗರಕೆ ಹಡಗ ಪಂಚಾಕ್ಷರಿಯು ವಂಶಗಳನಳಿವ ನಿರ್ವಂಶ ಪಂಚಾಕ್ಷರಿಯು ಸಂಶಯವಿಲ್ಲದಲಿ ನಿಸ್ಸಂಶಯ ಪಂಚಾಕ್ಷರಿಯು ವಿಂಶಾರ್ಥ ಬಿಡದೆ ಜಪಿಸುವದು ಪಂಚಾಕ್ಷರಿಯು. | 16 | ಗುರುಕೃಪಕಧಿಕದಿ ಭವದಗ್ಧ ಪಂಚಾಕ್ಷರಿಯು ಕರದ ಲಿಂಗಬೆಳಗು ಪ್ರಣಮಪಂಚಾಕ್ಷರಿಯು ನೆರೆಶ್ರೋತ್ರಬೋಧೆ ನಿರ್ಬೋಧೆ ಪಂಚಾಕ್ಷರಿಯು ನಿರುತ ಜಪಿಸುವನೆ ನಿರಾಪೇಕ್ಷ ಪಂಚಾಕ್ಷರಿಯು. | 17 | ದೀಕ್ಷಾ ಪಂಚಾಕ್ಷರಿಯು ದೀಕ್ಷ ಪಂಚಾಕ್ಷರಿಯು ಮೋಕ್ಷಾ ಪಂಚಾಕ್ಷರಿಯು ಮೋಕ್ಷ ಪಂಚಾಕ್ಷರಿಯು ಶಿಕ್ಷಾ ಪಂಚಾಕ್ಷರಿಯು ಶಿಕ್ಷ ಪಂಚಾಕ್ಷರಿಯು ಭಿಕ್ಷಾ ಪಂಚಾಕ್ಷರಿಯು ಭಿಕ್ಷ ಪಂಚಾಕ್ಷರಿಯು | 18 | ಚಿದ್ಭಸ್ಮದೊಳುವಾಭರಣ ಪಂಚಾಕ್ಷರಿಯು ಚಿದ್ಮಣಿಗಳ ಸ್ಥಾನ ಸ್ಥಾನ ಪಂಚಾಕ್ಷರಿಯು ಚಿದಂಗ ಸರ್ವದೊಳು ಪೂರ್ಣ ಪಂಚಾಕ್ಷರಿಯು ಚಿದಂಗ ಲಿಂಗಸಂಗಸಂಯೋಗ ಪಂಚಾಕ್ಷರಿಯು. | 19 | ಪಾದಸಲಿಲಂ ಪ್ರಸಾದಾದಿ ಪಂಚಾಕ್ಷರಿಯು ಆದಿಕ್ಷೇತ್ರಕ್ಕೆ ವೀರಶೈವ ಪಂಚಾಕ್ಷರಿಯು ಸಾಧಿಸುವ ಸದ್ಭಕ್ತಿಯನೀವ ಪಂಚಾಕ್ಷರಿಯು ಓದುವಾತನ ವೇದವಿತ್ತು ಪಂಚಾಕ್ಷರಿಯು. | 20 | ಅಷ್ಟಾವರಣಕೆ ಮಹಾಶ್ರೇಷ* ಪಂಚಾಕ್ಷರಿಯು ದುಷ್ಟನಿಗ್ರಹ ಶಿಷ್ಟಪಾಲ ಪಂಚಾಕ್ಷರಿಯು ಮುಟ್ಟಿ ನೆನದರೆ ಮುಕ್ತಿಸಾರ ಪಂಚಾಕ್ಷರಿಯು ಇಷ್ಟಪ್ರಾಣಭಾವದೀಶ ಪಂಚಾಕ್ಷರಿಯು. | 21 | ಭಕ್ತಿಯುಕ್ತಿಯು ಮಹಾಬೆಳಗು ಪಂಚಾಕ್ಷರಿಯು ನಿತ್ಯನೆನೆವರಿಗೆ ತವರ್ಮನೆಯು ಪಂಚಾಕ್ಷರಿಯು ಸತ್ಯಸದ್ಗುಣಮಣಿಹಾರ ಪಂಚಾಕ್ಷರಿಯು ವಿತ್ತ ಸ್ತ್ರೀ ನಿರಾಸೆ ಮಹೇಶ ಪಂಚಾಕ್ಷರಿಯು. | 22 | ಪರಧನ ಪರಸ್ತ್ರೀಗೆಳಸ ಪಂಚಾಕ್ಷರಿಯು ನಿರುತ ಮಹೇಶ್ವರಾಚಾರ ಪಂಚಾಕ್ಷರಿಯು ಪರಮ ಪ್ರಸಾದಿಸ್ಥಲ ತಾನೆ ಪಂಚಾಕ್ಷರಿಯು | 23 | ಈ ಪರಿಯ ತೋರೆ ಮಹಾಮೂರುತಿ ಪಂಚಾಕ್ಷರಿಯು ತಾ ಪರಬ್ರಹ್ಮ ನಿನಾದ ಪಂಚಾಕ್ಷರಿಯು | 24 | ತಟ್ಟಿ ಮುಟ್ಟುವ ರುಚಿ ಶಿವಾರ್ಪಣ ಪಂಚಾಕ್ಷರಿಯು ಕೊಟ್ಟುಕೊಂಬುವ ಪ್ರಸಾದಾಂಗ ಪಂಚಾಕ್ಷರಿಯು ನಷ್ಟ ಶರೀರಕೆ ನೈಷೆ*ವೀವ ಪಂಚಾಕ್ಷರಿಯು ಭ್ರಷ್ಟ ಅದ್ವೈತಿಗತೀತ ಪಂಚಾಕ್ಷರಿಯು. | 25 | ಸ್ಥೂಲತನುವಿಗೆ ಇಷ್ಟಲಿಂಗ ಪಂಚಾಕ್ಷರಿಯು ಮೇಲೆ ಸೂಕ್ಷ್ಮಕೆ ಪ್ರಾಣಲಿಂಗ ಪಂಚಾಕ್ಷರಿಯು ಲೀಲೆ ಕಾರಣ ಭಾವಲಿಂಗ ಪಂಚಾಕ್ಷರಿಯು ಬಾಳ್ವ ತ್ರಿತನುವಿಗೆ ತ್ರಿಲಿಂಗ ಪಂಚಾಕ್ಷರಿಯು. | 26 | ಪ್ರಾಣಲಿಂಗದ ಹೊಲಬು ತಾನೆ ಪಂಚಾಕ್ಷರಿಯು ಕಾಣಿಸುವ ಇಷ್ಟರೊಳು ಭಾವ ಪಂಚಾಕ್ಷರಿಯು ಮಾಣದೊಳಹೊರಗೆ ಬೆಳಗು ಪಂಚಾಕ್ಷರಿಯು ಕ್ಷೋಣಿಯೊಳು ಮಿಗಿಲೆನಿಪ ಬಿರಿದು ಪಂಚಾಕ್ಷರಿಯು. | 27 | ಆರು ಚಕ್ರಕೆ ಆಧಾರ ಪಂಚಾಕ್ಷರಿಯು ಆರು ಅಧಿದೈವಗಳ ಮೀರ್ದ ಪಂಚಾಕ್ಷರಿಯು ಆರು ವರ್ಣಗಳ ಬಗೆದೋರ್ವ ಪಂಚಾಕ್ಷರಿಯು ಆರು ಚಾಳ್ವೀಸೈದಕ್ಷರಂಗ ಪಂಚಾಕ್ಷರಿಯು. | 28 | ಆರು ಶಕ್ತಿಗಳ ಆರಂಗ ಪಂಚಾಕ್ಷರಿಯು ಆರು ಭಕ್ತಿಗಳ ಚಿದ್ರೂಪ ಪಂಚಾಕ್ಷರಿಯು ಆರು ಲಿಂಗದ ಮೂಲ ಬೇರು ಪಂಚಾಕ್ಷರಿಯು ಆರು ತತ್ವವಿಚಾರ ಪಂಚಾಕ್ಷರಿಯು. | 29 | ಯೋಗಷ್ಟ ಶಿವಮುಖವ ಮಾಡ್ವ ಪಂಚಾಕ್ಷರಿಯು ನಾಗಕುಂಡಲ ಊಧ್ರ್ವವಕ್ತ್ರ ಪಂಚಾಕ್ಷರಿಯು ಜಾಗ್ರ ಸ್ವಪ್ನ ಸುಷುಪ್ತಿಯಲ್ಲಿ ಪಂಚಾಕ್ಷರಿಯು ಸಾಗಿಸಿ ಸುಜ್ಞಾನವೀವ ಪಂಚಾಕ್ಷರಿಯು. | 30 | ಇಷ್ಟ ಪ್ರಾಣಲಿಂಗ ಹೊಲಿಗೆ ಪಂಚಾಕ್ಷರಿಯು ಅಷ್ಟದಳಕಮಲದ ಪೀಠ ಪಂಚಾಕ್ಷರಿಯು ದೃಷ್ಟಿ ಅನುಮಿಷಭಾವ ಪಂಚಾಕ್ಷರಿಯು ಕೊಟ್ಟು ಸಲಹುವದಷ್ಟ ಪಂಚಾಕ್ಷರಿಯು. | 31 | ತನು ಸೆಜ್ಜೆ ಪ್ರಾಣವೆ ಲಿಂಗ ಪಂಚಾಕ್ಷರಿಯು ಮನ ಪೂಜಾರಿಯು ಭಾವ ಪುಷ್ಪ ಪಂಚಾಕ್ಷರಿಯು ಇನಿತು ಕೂಡುವುದು ಶಿವಶರಣ ಪಂಚಾಕ್ಷರಿಯು ಬಿನುಗಿಗಳವಡದ ಈ ಸತ್ಯ ಪಂಚಾಕ್ಷರಿಯು. | 32 | ಶರಣಸ್ಥಲದಂಗ ವೈರಾಗ್ಯ ಪಂಚಾಕ್ಷರಿಯು ಶರಣಸತಿ ಲಿಂಗಪತಿ ತಾನೆ ಪಂಚಾಕ್ಷರಿಯು ಶರಣುವೊಕ್ಕರ ಕಾವ ಬಿರಿದು ಪಂಚಾಕ್ಷರಿಯು ಶರಣಗಣರಿಗೆ ಮಾತೆಪಿತನು ಪಂಚಾಕ್ಷರಿಯು. | 33 | ಶರಣಂಗೆ ಸುಜ್ಞಾನದಿರವು ಪಂಚಾಕ್ಷರಿಯು ಶರಣಂಗೆ ಮುಕ್ತಿಯಾಗರವು ಪಂಚಾಕ್ಷರಿಯು ಶರಣಂಗೆ ಭಕ್ತಿಯ ಸೋಪಾನ ಪಂಚಾಕ್ಷರಿಯು ಶರಣಂಗೆ ಪರಮಜಲಕೂಪ ಪಂಚಾಕ್ಷರಿಯು. | 34 | ಶರಣಂಗೆ ಶೈವದ ಗೃಹವು ಪಂಚಾಕ್ಷರಿಯು ಶರಣರಿಗೆ ಸುರಧೇನು ಅಮೃತ ಪಂಚಾಕ್ಷರಿಯು ಶರಣರಿಗೆ ಕಲ್ಪತರು ಫಲವು ಪಂಚಾಕ್ಷರಿಯು ಶರಣರಿಗೆ ಚಿಂತಾಮಣಿ ತಾನೆ ಪಂಚಾಕ್ಷರಿಯು. | 35 | ಶರಣಪದ ಬೇಡುವರಿಗೀವ ಪಂಚಾಕ್ಷರಿಯು ಶರಣ ನಡೆನುಡಿ ಪೂರ್ಣಮಯವು ಪಂಚಾಕ್ಷರಿಯು ಶರಣರಿಗೆ ಶಿವನಚ್ಚು ಮೆಚ್ಚು ಪಂಚಾಕ್ಷರಿಯು ಶರಣರ್ದೂಷಣರೆದೆಗಿಚ್ಚು ಪಂಚಾಕ್ಷರಿಯು. | 36 | ಶರಣು ಶಿವಾನಂದ ಜಲಗಡಲು ಪಂಚಾಕ್ಷರಿಯು ಶರಣರ ಶರೀರ ಮೇಲೆ ಹೊದಿಕೆಯು ಪಂಚಾಕ್ಷರಿಯು ಶರಣು ಕೃತ್ಯಕೆ ವೈದ್ಯ ಕಾಣಾ ಪಂಚಾಕ್ಷರಿಯು ಶರಣು ಸುಜ್ಞಾನದರ್ಪಣವು ಪಂಚಾಕ್ಷರಿಯು. | 37 | ಶರಣ ಚಿದ್ರೂಪದ ಬಯಕೆಯಳಿದ ಪಂಚಾಕ್ಷರಿಯು ಶರಣಷ್ಟೈಶ್ವರ್ಯದೊಳಗಿಡದ ಪಂಚಾಕ್ಷರಿಯು ಶರಣಪೂಜಿಸಿ ಫಲವ ಬೇಡು[ವ] ಪಂಚಾಕ್ಷರಿಯು ಶರಣೊಜ್ರಪಂಜರದ ಬಿರಿದು ಪಂಚಾಕ್ಷರಿಯು. | 38 | ಶರಣಾಸೆ ರೋಷವನಳಿವ ಪಂಚಾಕ್ಷರಿಯು ಶರಣಾಸೆಯ ಮೋಹಲತೆ ಚಿವುಟುವ ಪಂಚಾಕ್ಷರಿಯು ಶರಣಜ್ಞಾನದತರು ಕುಠಾರ ಪಂಚಾಕ್ಷರಿಯು ಶರಣರುದಯಾಸ್ತಮಾನ ತಾನೆ ಪಂಚಾಕ್ಷರಿಯು. | 39 | ಶರಣರ ನಡೆನುಡಿ ಒಂದು ಮಾಡಿ[ದ] ಪಂಚಾಕ್ಷರಿಯು ಶರಣ ಸಂಸಾರಕಿಕ್ಕಿಡದ ಪಂಚಾಕ್ಷರಿಯು ಶರಣಗುಣ ಚಿಹ್ನಕೊರೆ ಶಿಲೆಯು ಪಂಚಾಕ್ಷರಿಯು ಶರಣರೊಡಗೂಡಿದಾನಂದ ಪಂಚಾಕ್ಷರಿಯು. | 40 | ಶರಣರ ಕರ್ಣದಾಭರಣ ಪಂಚಾಕ್ಷರಿಯು ಶರಣ ನುಡಿವ ಮಹಾವಸ್ತು ಪಂಚಾಕ್ಷರಿಯು ಶರಣ ಕೇಳುವ ಕೀರ್ತಿವಾರ್ತೆ ಪಂಚಾಕ್ಷರಿಯು ಶರಣಾಸರ ಬೇಸರಗಳ ಕಳೆವ ಪಂಚಾಕ್ಷರಿಯು. | 41 | ಶರಣರ ಚರಿತ್ರೆಯ ಬರೆವ ಲಿಖಿತ ಪಂಚಾಕ್ಷರಿಯು ಶರಣೀಶ ಲಾಂಛನಕಿಡದ ಪಂಚಾಕ್ಷರಿಯು ಶರಣ ತನು ಬಾಳಳಿದ ಬೋಧೆ ಪಂಚಾಕ್ಷರಿಯು ಶರಣನ ಮನ ಬೋಳಮಾಡಿರುವ ಪಂಚಾಕ್ಷರಿಯು. | 42 | ಶರಣಂಗೆ ಪರತತ್ವಬೋಧವೆ ಪಂಚಾಕ್ಷರಿಯು ಶರಣ ಪರವು ಶಾಂತಿ ಭಸ್ಮಧೂಳ ಪಂಚಾಕ್ಷರಿಯು ಶರಣ ಪರಬ್ರಹ್ಮಮಣಿ ಪಂಚಾಕ್ಷರಿಯು ಶರಣ ಪರಾತ್ಪರವು ಪಂಚಾಕ್ಷರಿಯು, | 43 | ಶರಣಂಗೆ ದೃಢವೆಂಬ ದಂಡ ಪಂಚಾಕ್ಷರಿಯು ಶರಣ ಕರ್ಮವ ಸುಟ್ಟಗ್ನಿ ಪಂಚಾಕ್ಷರಿಯು ಶರಣ ತೃಪ್ತಿಗೆ ನಿತ್ಯಾಮೃತ ಪಂಚಾಕ್ಷರಿಯು ಶರಣ ಹಿಡಿದ ವ್ರತವೈಕ್ಯ ಪಂಚಾಕ್ಷರಿಯು. | 44 | ಶರಣ ಪೂಜಿಪ ಪೂಜೆ ಐಕ್ಯ ಪಂಚಾಕ್ಷರಿಯು ಶರಣಂಗೆ ಐಕ್ಯಪದವೀವ ಪಂಚಾಕ್ಷರಿಯು ಶರಣ ಮಾಡುವ ಕ್ರಿಯಾದ್ವೈತ ಪಂಚಾಕ್ಷರಿಯು ಶರಣಂಗೆ ಇವು ನಾಸ್ತಿ ಪಂಚಾಕ್ಷರಿಯು. | 45 | ನೇಮ ನಿತ್ಯಂಗಳು ಲಿಂಗೈಕ್ಯ ಪಂಚಾಕ್ಷರಿಯು ಕಾಮ ಧರ್ಮ ಮೋಕ್ಷತ್ರಯಕ್ಕೆ ಪಂಚಾಕ್ಷರಿಯು ಕಾಮಿಸುವ ಬಾಹ್ಯಕ್ಕಿಲ್ಲದೈಕ್ಯ ಪಂಚಾಕ್ಷರಿಯು ನಾಮರೂಪಿಲ್ಲದ ನಿರ್ನಾಮ ಪಂಚಾಕ್ಷರಿಯು. | 46 | ಮಾನಸ್ವಾಚಕ ತ್ರಿಕರಣೈಕ್ಯ ಪಂಚಾಕ್ಷರಿಯು ಜ್ಞಾನ ಜ್ಞಾತೃಜ್ಞೇಯದೈಕ್ಯ ಪಂಚಾಕ್ಷರಿಯು ಸ್ವಾನುಭಾವವು ಲಿಂಗದೊಳೈಕ್ಯ ಪಂಚಾಕ್ಷರಿಯು ಮೋನಮುಗ್ಧಂ ತಾನಾದೈಕ್ಯ ಪಂಚಾಕ್ಷರಿಯು. | 47 | ನಡೆವ ಕಾಲ್ಗೆಟ್ಟ ಲಿಂಗೈಕ್ಯ ಪಂಚಾಕ್ಷರಿಯು ಷಡುರೂಪುಗೆಟ್ಟ ನೇತ್ರೈಕ್ಯ ಪಂಚಾಕ್ಷರಿಯು ಜಡ ಘ್ರಾಣೇಂದ್ರಿಲ್ಲದ ಲಿಂಗೈಕ್ಯ ಪಂಚಾಕ್ಷರಿಯು ಷಡುಯಿಂದ್ರಿಯಕೆ ಷಡುಲಿಂಗೈಕ್ಯ ಪಂಚಾಕ್ಷರಿಯು ಷಡುಸ್ಥಲವ ಮೀರಿರ್ದ ಲಿಂಗೈಕ್ಯ ಪಂಚಾಕ್ಷರಿಯು. | 48 | ಭಕ್ತಿ ಸ್ಥಲದಾಸೆಳಿದೈಕ್ಯ ಪಂಚಾಕ್ಷರಿಯು ವ್ಯಕ್ತ ಮಹೇಶ್ವರ ಭಜನೈಕ್ಯ ಪಂಚಾಕ್ಷರಿಯು ಮುಕ್ತಪ್ರಸಾದಿ ಸ್ಥಲದೈಕ್ಯ ಪಂಚಾಕ್ಷರಿಯು ಸತ್ಯ ಪ್ರಾಣಲಿಂಗವೆನ್ನದೈಕ್ಯ ಪಂಚಾಕ್ಷರಿಯು. | 49 | ಶರಣಸ್ಥಲದಾಸೆಳಿದೈಕ್ಯ ಪಂಚಾಕ್ಷರಿಯು ನಿರವಯಲ ಬೆರದ ಮಹಾಐಕ್ಯ ಪಂಚಾಕ್ಷರಿಯು ಉರಿವುಂಡ ಕರ್ಪುರದ ತೆರನು ಪಂಚಾಕ್ಷರಿಯು ಸರ[ವು] ಸರವು ಬೆರದಂತೆ ಮಾಡ್ವ ಪಂಚಾಕ್ಷರಿಯು. | 50 | ಪರಿಮಳ ವಾಯು ಸಂಗದಂತೆ ಪಂಚಾಕ್ಷರಿಯು ನಿರವಯಲಪ್ಪಿದಂತೆ ಪಂಚಾಕ್ಷರಿಯು ನೆರೆ ಮಾಡಿತೋರುವ ನಿತ್ಯ ಪಂಚಾಕ್ಷರಿಯು ಪರಮ ಬೋಧೆಯನೇನ ಹೇಳ್ವೆ ಪಂಚಾಕ್ಷರಿಯು. | 51 | ನಕಾರ ಮಕಾರ ಭಕ್ತ ಮಹೇಶ ಪಂಚಾಕ್ಷರಿಯು ಶಿಕಾರವೆ ಪ್ರಸಾದಿಸ್ಥಲದಂಗ ಪಂಚಾಕ್ಷರಿಯು ವಕಾರವೆ ಪ್ರಾಣಲಿಂಗಿ ತಾನೆ ಪಂಚಾಕ್ಷರಿಯು ಯಕಾರಂ ಓಂಕಾರಂ ಶರಣೈಕ್ಯ ಪಂಚಾಕ್ಷರಿಯು. | 52 | ಷಡಕ್ಷರ ಷಡುಸ್ಥಲದ ಬೀಜ ಪಂಚಾಕ್ಷರಿಯು ಷಡುಭಕ್ತಿಗಳ ಮುಖವು ಪಂಚಾಕ್ಷರಿಯು ಬಿಡದೆ ಸರ್ವತೋಮುಖವಾದ ಪಂಚಾಕ್ಷರಿಯು ಷಡುದರುಶನಕೆ ಮುಖ್ಯವಾದ ಪಂಚಾಕ್ಷರಿಯು. | 53 | ಪರಮ ಪಂಚಾಕ್ಷರಿಯು ಪ್ರಣಮ ಪಂಚಾಕ್ಷರಿಯು ಅರಿವು ಪಂಚಾಕ್ಷರಿಯು ಚರವು ಪಂಚಾಕ್ಷರಿಯು ಸಿರಿಯು ಪಂಚಾಕ್ಷರಿಯು ಕರುಣ ಪಂಚಾಕ್ಷರಿಯು ಹರುಷ ಪಂಚಾಕ್ಷರಿಯು ನಿಧಿಯು ಪಂಚಾಕ್ಷರಿಯು. | 54 | ನಿತ್ಯ ಪಂಚಾಕ್ಷರಿಯು ಮುಕ್ತ ಪಂಚಾಕ್ಷರಿಯು ಸತ್ಯ ಪಂಚಾಕ್ಷರಿಯು ವ್ಯಕ್ತ ಪಂಚಾಕ್ಷರಿಯು ಭಕ್ತ ಪಂಚಾಕ್ಷರಿಯು ಯುಕ್ತ ಪಂಚಾಕ್ಷರಿಯು ಮೌಕ್ತಿಕ ಮಾಣಿಕಹಾರ ಪಂಚಾಕ್ಷರಿಯು. | 55 | ಹರನೆ ಪಂಚಾಕ್ಷರಿಯು ಗುರುವೆ ಪಂಚಾಕ್ಷರಿಯು ಇರವೆ ಪಂಚಾಕ್ಷರಿಯು ಪರವೆ ಪಂಚಾಕ್ಷರಿಯು ಸರ್ವ ಪಂಚಾಕ್ಷರಿಯು ಹೊರೆವ ಪಂಚಾಕ್ಷರಿಯು ಸ್ಥಿರವೇ ಪಂಚಾಕ್ಷರಿಯು ಅರಿವು ಪಂಚಾಕ್ಷರಿಯು. | 56 | ಸ್ಥೂಲ ಪಂಚಾಕ್ಷರಿಯು ಸೂಕ್ಷ್ಮ ಪಂಚಾಕ್ಷರಿಯು ಲೀಲೆ ಪಂಚಾಕ್ಷರಿಯು ಕಾರಣ ಪಂಚಾಕ್ಷರಿಯು ಶೂಲಿ ಪಂಚಾಕ್ಷರಿಯು ಪೀಠ ಪಂಚಾಕ್ಷರಿಯು ಲೋಲ ಪಂಚಾಕ್ಷರಿಯು ಚರ್ಯ ಪಂಚಾಕ್ಷರಿಯು. | 57 | ಯಂತ್ರ ಪಂಚಾಕ್ಷರಿಯು ಮಂತ್ರ ಪಂಚಾಕ್ಷರಿಯು ಸಂತು ಪಂಚಾಕ್ಷರಿಯು ನಿಸ್ಸಂತು ಪಂಚಾಕ್ಷರಿಯು ಚಿಂತ ಪಂಚಾಕ್ಷರಿಯು ನಿಶ್ಚಿಂತ ಪಂಚಾಕ್ಷರಿಯು ಇಂತು ಪಂಚಾಕ್ಷರಿಯು ಜಪಿಸಿ ಪಂಚಾಕ್ಷರಿಯು. | 58 | ಕಂದ :ನಮಃ ಶಿವಾಯಯೆಂಬೀ ಅಮಲ ತೆರದ ನಾಮವ ನೋಡಿ ಜಪಿಸಲಿರುತಂ ಉಮೆಯರಸನನ್ನೊಲಿಸುವ ಕ್ರಮವಿದೆಂದು ಪೊಗಳ್ವೆ ಸಿದ್ಧಮಲ್ಲನ ಕೃಪೆಯಿಂ. | 1 | ಷಡುಸ್ಥಲ ಪಂಚಾಕ್ಷರಿಯನು ಬಿಡದೆ ಜಪಿಸಲು ಮುಕ್ತಿಯೆಂದು ಪೊಗಳ್ದ ಹೇಮಗಲ್ಲಂ ತನ್ನ ದೃಢಮೂರ್ತಿ ಶಂಭು ಗುರುರಾಯ ಪಡುವಿಡಿ ಸಿದ್ಧಮಲ್ಲಿನಾಥ ಕೃಪೆಯಿಂ. | 2 | ಷಡುಸ್ಥಲ ಪಂಚಾಕ್ಷರಿಯ ರಗಳೆ ಸಂಪೂರ್ಣಂ
--------------
ಹೇಮಗಲ್ಲ ಹಂಪ
ದೇಹಾಭಿಮಾನವಳಿದು, ಪರಶಿವಜ್ಞಾನವು ಸ್ವಾನುಭಾವಜ್ಞಾನವು ಒಂದೆಯಾಗಿ, ಭಿನ್ನಜ್ಞಾನದ ಬನ್ನವಳಿದು ಅವಿರಳಜ್ಞಾನವಳವಟ್ಟಲ್ಲಿ ಮನವೆಲ್ಲೆಲ್ಲಿಗೆಯ್ದಿದರಲ್ಲಲ್ಲಿಯೇ ಶಿವನು ಸ್ವಯವದೆಂತೆಂದಡೆ, ಇದಕ್ಕೆ ಶ್ರುತಿ: ದೇಹಾಭಿಮಾನೇ ಗಲಿತೇ ವಿಜ್ಞಾತೇಚ ಪದೇ ಶಿವೇ ಯತ್ರ ಯತ್ರ ಮನೋ ಯಾತಿ ತತ್ರ ತತ್ರ ಶಿವಃ ಸ್ವಯಂ ಎಂದುದಾಗಿ ಇದು ಕಾರಣ ಸೌರಾಷ್ಟ್ರ ಸೋಮೇಶ್ವರನ ಶರಣರು ಸಚ್ಚಿದಾನಂದಭರಿತರು.
--------------
ಆದಯ್ಯ
ಪರಮಜ್ಞಾನ ಪರತತ್ವ ಆ ಪರಶಿವಮೂರ್ತಿ ನೀನಾಗಿ, ಸಕಲತಂತ್ರ ಸೂತ್ರ ಯಂತ್ರ ನೀನಾಗಿ, ಶ್ರವದ ಬೊಂಬೆ ಸಾಕಾರ ನಾನಾಗಿ, ನೀನಾಡಿಸಿದಂತೆ ನಾನಾಡುತ್ತಿದೆ. ಸಂಜ್ಞೆಯನರಿದ ತಂಡಿನಂತೆ, ನಿವೇದಿಸಿದುದ ನಾ ಸಾಗಿಸಿದೆ. ನೀ ಬೈಚಿಟ್ಟ ಬಯಕೆಯ ನಿನಗಿತ್ತೆ. ನೀ ಕಳುಹಿದ ಮಣಿಹ ನಿನಗೆ ಸಂದಿತ್ತು. ಸಗರ ಸಾಕಾರದೊಡೆಯ ತನುಮನಘನದಲ್ಲಿ, ಸುಸಂಗ ಸಂಗನಿರಂಗ ಸಂಗಮೇಶ್ವರಲಿಂಗಾ, ಸಮರ್ಪಣ.
--------------
ಸಗರದ ಬೊಮ್ಮಣ್ಣ
ವಾದ ವಶ್ಯ ಯಂತ್ರ ಮಂತ್ರ ಇಂದ್ರಜಾಲ ಮಹೇಂದ್ರಜಾಲ ಅದೃಶ್ಯಾಕರಣ ಪರಕಾಯಪ್ರವೇಶ ತೀರ್ಥಯಾತ್ರೆ ದಿಗ್ವಳಯದಲ್ಲಿ ಜನಜನಿತದ ಆಗುಚೇಗೆಯಲ್ಲದೆ ಎಲ್ಲಿಯೂ ಕಾಬುದಿಲ್ಲ. ಕಾಬುದಕ್ಕೆ ತೆರಪು ಮೂರನರಿದು ಮೂರ ಮರೆದು ಆರನರಿದು ಹದಿನಾರ ಹರಿದು, ಐದ ಬಿಟ್ಟು ಇಪ್ಪತ್ತೈದ ಕಟ್ಟಿ ಬಟ್ಟ ಬಯಲು ತುಟ್ಟತುದಿಯ ಮೆಟ್ಟಿ ನೋಡಿ ಕಂಡ ನಾರಾಯಣಪ್ರಿಯ ರಾಮನಾಥನಲ್ಲಿ ಕೂಟದ ಶರಣ.
--------------
ಗುಪ್ತ ಮಂಚಣ್ಣ
ಇನ್ನಷ್ಟು ... -->