ಅಥವಾ

ಒಟ್ಟು 18 ಕಡೆಗಳಲ್ಲಿ , 10 ವಚನಕಾರರು , 16 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗಾಳಿ ಬೀಸುವ ವೇಳೆಯಲ್ಲಿ ತೂರಿಕೊಳ್ಳಿರೋ ಬೇಗ ಬೇಗ ! ಗಾಳಿ ನಿಮ್ಮಿಚ್ಛೆಯಲ್ಲ ಕೇಳಿರೋ ಜಾಳಮನುಜರಿರಾ. ಅಂಗಕ್ಕೆ ಅಳಿವು ಬರುವುದು ದೂರವಿಲ್ಲ ನೋಡಿರೋ. ``ತ್ವರಿತಂ ಜೀವಿತಂ ಯಾತಿ ತ್ವರಿತಂ ಯಾತಿ ಯೌವನಮ್ | ತ್ವರಿತಂ ಯಾತಿ ಪ್ರಖ್ಯಾತಿಃ ತಸ್ಮಾತ್ಪೂಜಯ ಶಂಕರಮ್ ||'' ಇದನರಿದು ಬೇಗ ಬೇಗ ಲಿಂಗವ ಪೂಜಿಸಿರೊ ! ಬೇಗ ಬೇಗ ಜಂಗಮವನೊಲಿಸಿರೋ ! ಅರುವುಳ್ಳ ಕಾಲಕ್ಕೆ ಬೇಗ ಬೇಗ ನಮ್ಮ ಅಖಂಡೇಶ್ವರಲಿಂಗವ ಕೂಡಿರೋ.
--------------
ಷಣ್ಮುಖಸ್ವಾಮಿ
ಅಂಗದ ಮೇಲೆ ಲಿಂಗಸಾಹಿತ್ಯವನುಳ್ಳ ಭಕ್ತಾಂಗನೆಯರು ತಮ್ಮ ಲಿಂಗಶರೀರಂಗ? ಮಧ್ಯದಲ್ಲಿ ಹರಭಕ್ತಿಗೆ ಹೊರಗಾದ ಅಸು[ರಾಂಶಿ] ಕವಪ್ಪ ಹಸುರು ಹಚ್ಚೆಗಳೆಂಬ ಪತಿತ ಲೇಖನ ಇವಾದಿಯಾದ ಅನ್ಯ ಚಿಹ್ನೆಗಳನು ಅಂಕಿತಧಾರಣ ಲೇಖನಂಗ? ಮಾಡಿಕೊಂಡು ಮತ್ತೆ ತಾವು ಲಿಂಗವನರ್ಚಿಸಿ ಭಕ್ತರಾದೆವೆಂಬ ಈ ಭಂಗಮಾರಿ ಹೊಲೆಜಂಗುಳಿಗಳಿಗೆ ಉಪದೇಶವ ಕೊಟ್ಟ ಗುರು, ಪ್ರಸಾದ ನೀಡುವ ಜಂಗಮ, ಅವರಗೊಡಗೂಡಿಕೊಂಡು ನಡೆವ ಭಕ್ತತತಿ ಈ ಚತುರ್ವಿಧರು ಶ್ವಪಚಗೃಹದ ಶ್ವಾನಯೋನಿಗಳಲ್ಲಿ ಶತಸಹಸ್ರ ವೇಳೆ ಬಂದು ನರಕವಿಪ್ಪತ್ತೆಂಟುಕೋಟಿಯನೈದುವರು, ಅದೆಂತೆಂದೊಡೆ: ``ಭಕ್ತನಾರೀ ಸ್ವಯಾಂಗೇಷು ಪತಿತಾದ್ಯನ್ಯ ಚಿಹ್ನೆಯೇತ್ ಲೇಖನಾಂಕಂ ಯದಿ ಕೃತ್ವಾ ತೇ[s]ಪಿ ಸ್ತ್ರೀ ಪತಿತ ಸ್ತ್ರೀಣಾಂ ತಸ್ಯೋಪದೇಶಶೇಷಂಚ ದತ್ವಾಶ್ಚೈ ಗುರುಃ ಚರಾನ್ ತಪತ್ಸಂಗ ಸಯೋದ್ಭಕ್ತಾ ತದಾದಿ ಚತುರಾನ್ವಯಂ ಶ್ವಾನಯೋನಿ ಶತಂ ಗತ್ವಾ ಚಾಂಡಾಲಗೃಹಮಾಚರೇತ್ ಅಷ್ಟವಿಂಶತಿಕೋಟ್ಯಸ್ತು ನರಕಂ ಯಾತಿ ಸಧ್ರುವಂ ಇಂತೆಂದುದಾಗಿ ಇದು ಕಾರಣ ಇಂತಪ್ಪ ಅನಾಚಾರಿಗಳನು ಕೂಡಲಚೆನ್ನಸಂಗಯ್ಯ ಅಘೋರ ನರಕದಲ್ಲಿಕ್ಕುವ.
--------------
ಚನ್ನಬಸವಣ್ಣ
ಕೇಳಾ ಹೇಳುವೆನು: ಮಹಾಘನಲಿಂಗಭಕ್ತನು ಆಚರಿಸುವ ಸದ್ವರ್ತನನಿರ್ಣಯವ, ಅದು ಪರಶಿವಲಿಂಗದ ನಿತ್ಯಪದದ ಮಾರ್ಗ: ಗೌರವಂ ಲೈಂಗಿಕಂ ಚಾರಂ ಪ್ರಸಾದಂ ಚರಣಾಂಬುಕಂ ಭೌಕ್ತಿಕಂ ಚ ಮಯಾ ಪ್ರೋಕ್ತಂ ಷಡ್ವಿಧಂ ವ್ರತಮಾಚರೇತ್ ಗುರುದೇವಃ ಶಿವಃ ಸಾಕ್ಷಾತ್ ತಚ್ಚಿಷ್ಯೋ ಜ್ಞಾನಸಾರವಿತ್ ತ್ರಿವಿಧಂ ಹೃದಿ ಸಂಭಾವ್ಯ, ಕೀರ್ತಿತಂ ಗೌರವಂ ವ್ರತಂ ಗುರುಣಾ ಚಾರ್ಪಿತಂ ಲಿಂಗಂ ಪ್ರಾಣಲಿಂಗಂ ಪ್ರಕಥ್ಯತೇ ತಥೈವ ಭಾವನಾದ್ವೈತಂ ತದ್ವ್ರತಂ ಲೈಂಗಿಕಂ ಸ್ಮøತಂ ಗುರುಲಿಂಗಚರಾಧೀನಂ ನಿರ್ಮಾಲ್ಯಂ ಭೋಜನಾದಿಕಂ ತಸ್ಯಾನುಭಾವನಂ ದೇವಿ ತತ್ಪರಂ ವ್ರತಮುತ್ತಮಂ ಗುರುಪಾದಾಬ್ಜಸಂಭೂತಂ ಉಜ್ಜಲಂ ಲೋಕಪಾವನಂ ತಜ್ಜಲಸ್ನಾನಪಾನಾದಿ ತದ್ವ್ರತಂ Z್ಪರಣಾಂಬುಕಂ|| ಗುರುಲಿಂಗಚರಾಣಾಂ ಚ ಪ್ರಸಾದಂ ಪಾದವಾರುಣಂ| ಪರ್ಯಾಯಭಜನಂ ಭಕ್ತ್ಯಾ ತದ್ವ್ರತಂ ಸ್ಮøತಂ|| ಕ್ರಿಯಾದ್ವೈತಂ ನ ಕರ್ತವ್ಯಂ ಭಾವಾದ್ವೈತಂ ಸಮಾಚರೇತ್| ಕ್ರಿಯಾಂ ನಿರ್ವಹತೇ ಯಸ್ತು ಭಾವಶುದ್ದಂ ತು ಶಾಂಕರಿ|| ಎಚಿದುದಾಗಿ, ಪೂಜಿತೈಃ ಶಿವಭಕ್ತೈಶ್ಚ ಪರಕರ್ಮ ಪ್ರಪಚಿಚಿತಂ| ಪುಣ್ಯಸ್ಸಶಿವಧರ್ಮಃ ಸ್ಯಾತ್ ವಜ್ರಸ್ರಚಿಸ್ಸಮಬ್ರವೀತ್|| ಪಾತ್ರಶಾಸನಯೋರ್ಮಧ್ಯೇ ಶಾಸನಂ ತು ವಿಶಿಷ್ಯತೇ| ತಸ್ಮಾತ್ ಶಾಸನಮೇವಾದೌ ಪೂಜ್ಯತೇ ಚ ಶವೋ ಯಥಾ|| ಗುಣವತ್ಪಾತ್ರಪ್ರಜಾಯಾಂ ವರಂ ಶಾಸನಪೂಜನಂ| ಶಾಸನಂ ಪೂಜಾಯೇತ್ತಸ್ಮಾಸವಿZ್ಫರಂ ಶಿವಾಜÐಯಾ|| ಸ ನರೋ ಭೃತ್ಯಸದ್ಭಕ್ತಃ ಪತಿಕರ್ಮಾ ಚ ಜಂಗಮಃ| ರೂಪಂ ಚ ಗುಣಶೀಲಂ ಚ ಅವಿZ್ಫರಂ ಶುಭಂ ಭವೇತ್|| ಗುಣೋಗುಣಶ್ಚ ರೂಪಂ ಚ ಅರೂಪಂ ಚ ನ ವಿದ್ಯತೇ ಪಶ್ಶತ್ಯಮೋಹಭಾವೇನ ಸ ನರಃ ಸುಖಮೇಧತೇ ದುಶ್ಶೀಲಃ ಶೀಲಸರ್ವಜ್ಞಂ ಮೂರ್ಖಭಾವೇನ ಪಶ್ಯತಿ ಪಶ್ಯಂತಿ ಲಿಂಗಭಾವೇನ ಸದ್ಭಕ್ತಾ ಮೋಕ್ಷಭಾವನಾಃ ಯಥಾ ಲಿಂಗಂ ತಥಾ ಭಾವಃ ಸತ್ಯಂ ಸತ್ಯಂ ನ ಸಂಶಯಃ ಯಥಾ ಭಕ್ತಿಸ್ತಥಾ ಸಿದ್ಧಿಃ ಸತ್ಯಂ ಸತ್ಯಂ ನ ಸಂಶಯಃ ಸತ್ಯಭಾವಿ ಮಹಾಸತ್ಯಂ ಸತ್ಯಂ ಸ್ಯಾಚ್ಚಿವಲಕ್ಷಣಂ ಮಿಥ್ಯಭಾವೀತ್ವಹಂ ಮಿಥ್ಯಾ ಸತ್ಯಂ ಸ್ಯಾಚ್ಚಿವಲಕ್ಷಣಂ ದಕ್ಷಿಣೇ ತು ಮಹಾದೇವೇ ಪದಾರ್ಥೇ ಕಿಂ ಪ್ರಯೋಜನಂ ಅದಕ್ಷೇ ತು ಮಹಾದೇವೇ ಪದಾರ್ಥೇ ಕಿಂ ಪ್ರಯೋಜನಂ ಅರಿರ್ಮಿತ್ರಂ ವಿಷಂ ಪಥ್ಯಂ ಅಧರ್ಮೋ ಧರ್ಮವದ್ಭವೇತ್ ಪ್ರಸನ್ನ ಏವ ದೇವೇ ತು ವಿಪರೀತಂ ಭವೇದ್ಧೃವಂ ಸ್ಥಾವರಂ ಜಂಗಮಶ್ಚೈವ ದ್ವಿವಿಧಂ ಲಿಂಗಮುಚ್ಚ್ಯತೆ ಜಂಗಮಸ್ಯಾವಮಾನೇನ ಸ್ಥಾವರಂ ನಿಷ್ಪಲಂ ಭವೇತ್ ನ ಮೇ ಪ್ರಿಯಶ್ಚತುರ್ವೇದೀ ಮದ್ಭಕ್ತಃ ಶ್ವಪಚೋ[s]ಪಿ ವಾ ತಸ್ಮೈ ದೇಯಂ ತತೋ ಗ್ರಾಹ್ಯಂ ಸಃ ಪೂಜ್ಯಶ್ಚ ಯಥಾ ಹ್ಯಹಂ ಸದ್ಗುರುರ್ಭಾವಲಿಂಗಂ ಚ ತಲ್ಲಿಂಗಂ ಚಿತ್ಸ್ವರೂಪಕಂ ತದ್ಭಾವಶುದ್ಧಿಸಿದ್ಧಸ್ಯ ಸದ್ಯೋನ್ಮುಕ್ತಿಃ ಸುಖಂ ಭವೇತ್ ಗುರುಃ ಪರಶಿವಶ್ಚೈವ ಜಂಗಮೋ ಲಿಂಗಮೇವ ಚ ತದ್ಭಾವಶುದ್ಧಿಸಿದ್ಧಸ್ಯ ಸದ್ಯೋನ್ಮುಕ್ತಿಃ ಸುಖಂ ಭವೇತ್ ಲಿಂಗಾಂಗೀ ಗುರುರ್ಲಿಂಗಂ ತ್ರಿವಿಧಂ ಲಿಂಗಮುಚ್ಯತೇ .................................................................. ತತ್ತ್ವದೀಪಿಕಾಯಾಂ ಪ್ರಸಾದೋ ಮುಕ್ತಿಮೂಲಂ ಚ ತತ್ಪ್ರಸಾದಸ್ತ್ರಿಧಾ ಮತಃ ಶಿವಃ ಸರ್ವಾಧಿದೇವಃ ಸ್ಯಾತ್ ಸರ್ವಕರ್ಮ ಶಿವಾಜ್ಞಯಾ ತತ್ತ್ವದೀಪಿಕಾಯಾಂ ಮಾಹೇಶ್ವರಸ್ಯ ಸಂಗಾದ್ಧಿ ಶಿವಯೋಗಂ ಲಭೇನ್ನರಃ ಪ್ರಸಾದಂ ತ್ರಿವಿಧಂ ಗ್ರಾಹ್ಯಂ ಮಹಾಪಾಪವಿನಾಶಕಂ ತತ್ತ್ವದೀಪಿಕಾಯಾಂ ಧನಪುತ್ರಕಲತ್ರಾದಿಮೋಹಂ ಸಂತ್ಯಜ್ಯ ಯೋ ನರಃ ಶಿವಭಾವೇನ ವರ್ತೇತ ಸದ್ಯೋನ್ಮುಕ್ತಸ್ಸುಖೀ ಭವೇತ್ ಪ್ರಾಣಲಿಂಗೇತ್ವವಿಶ್ವಾಸಾತ್ ಭಕ್ತಿಮುಕ್ತಿದ್ವಯಂ ನ ಚ ಪ್ರಾಣಲಿಂಗಸ್ಯ ವಿಶ್ವಾಸಾತ್ ಸಿದ್ದಿಃ ಸ್ಯಾತ್ ಭಕ್ತಿಮುಕ್ತಿದಾ ಪ್ರಾಣಲಿಂಗಮವಿಶ್ವಸ್ಯ ತೀರ್ಥಲಿಂಗಮುಪಾಸತೇ ಸ ನರಃ ಸ್ವರ್ಗಮಾಪ್ನೋತಿ ಗಣತ್ವಂ ನ ಪ್ರಯುಜ್ಯತೇ ಪ್ರಾಣಲಿಂಗಸಮಾಯುಕ್ತಃ ಪರಹಸ್ತಸಮರ್ಚನಾತ್ ತತ್ಪೂಜಾ ನಿಷ್ಫಲಾ ದೇವಿ ರೌರವಂ ನರಕಂ ವ್ರಜೇತ್ ಪ್ರಾಣಲಿಂಗಸಮಾಯುಕ್ತಃ ಪರಹಸ್ತೇ ದದಾತಿ ಚೇತ್ ನಿಮಿಷಾರ್ಧವಿಯೋಗೇನ ವಿಶೇಷಂ ಪಾತಕಂ ಭವೇತ್ ಪ್ರಾಣಲಿಂಗಸಮಾಯುಕ್ತ ಏಕಭುಕ್ತೋಪವಾಸತಃ ಗುರುಲಂಘನಮಾತ್ರೇಣ ಪೂಜಾ ಯಾ ನಿಷ್ಪಲಾ ಭವೇತ್ ಇಷ್ಟಲಿಂಗಂ ಸಮುತ್ಸೃಜ್ಯ ಅನ್ಯಲಿಂಗಸ್ಯ ಪೂಜನಾತ್ ಸ್ವೇಷ್ಟಂ ನ ಲಭತೇ ಮತ್ರ್ಯಃ ಪರಂ ತತ್ತ್ವಂ ನಿಹತ್ಯಸೌ ಅತ್ಯಂತಮಹಿಮಾರೂಢಂ ಶಿವಮಾಹಾತ್ಮ್ಯವಿಸ್ತರಂ ಯೋ[s]ಪಿ ದೃಷ್ಟ್ವಾಪ್ಯವಿಶ್ವಾಸೀ ಸ ಭಕ್ತೋ ನರಕಂ ವ್ರಜೇತ್ ಅಥ ಯೋ ಯಾದವ ಶ್ಚೈವ ರಾಜಾನಶ್ಯವೋ ಗ್ರಹಾ ನೈವ ಪೀಡ್ಯಸ್ತು ಯತ್ಕೃತ್ವಾ ನರಂ ಹಾರಪರಾಯಣಂ ಹಿರಣ್ಯರೂಪದೇಹಸ್ತಂ ಹಿರಣ್ಯಪತಿಪ್ರಾಣಿನಾಂ ಆಶಾದನ್ಯಂ ಹಿರಣ್ಯಂ ಚ ತದ್ದೇಹಂ ಲಿಂಗವರ್ಜಯೇತ್ ಘೃಣಾಮೂರ್ತಿರ್ಮಹಾದೇವೋ ಹಿರಣ್ಯೋದ್ಭಾಹು ಶಂಕರಃ ವರದಾಭಯ ಮತ್ಸ್ವಾಮಿನ್ ಯೇ ಆಶಾದನ್ಯಂ ವಿವರ್ಜಯೇತ್ ಆಶಾ ಚ ನರಕಂ ಚೈವ ನಿರಾಶಾ ಮುಕ್ತಿರೇವ ಹಿ ಆಶಾನಿರಾಶಯೋರ್ನಾಸ್ತಿ ತತ್ಸುಖಸ್ಯ ಸಮಂ ಪರಂ ಶಿವರಹಸ್ಯೇ ಜಪಶ್ರಾಂತಃ ಪುನಧ್ರ್ಯಾಯೇತ್ ಧ್ಯಾನಶ್ರಾಂತಃ ಪುನರ್ಜಪೇತ್ ಜಪಧ್ಯಾನಾದಿಯೋಗೇನ ಶಿವಃ ಕ್ಷಿಪ್ರಂ ಪ್ರಸೀದತಿ ಗಚ್ಚನ್ ತಿಷ*ನ್ ಸ್ವಪನ್ ಜಾಗ್ರನ್ ಉನ್ಮಿಷನ್ ನಿಮಿಷನ್ನಪಿ ಶುಚಿರ್ವಾಪ್ಯಶುಚಿರ್ವಾಪಿ ಶಿವಂ ಸರ್ವತ್ರ ಚಿಂತಯೇತ್ ಅಪವಿತ್ರಃ ಪವಿತ್ರೋ ವಾ ಸರ್ವಾವಸ್ಥಾಂ ಗತೋ[s]ಪಿ ವಾ ಯಸ್ಸ್ಮರೇತ್ ಸತತಂ ರುದ್ರಂ ಸ ಬಾಹ್ಯಾಭ್ಯಂತರಃ ಶುಚಿಃ ದುರ್ಲಭಂ ಮಾನುಷಂ ಜನ್ಮ ವಿವೇಕಸ್ತ್ವತಿದುರ್ಲಭಃ ದುರ್ಲಭಾ ಚ ಶಿವೇ ಭಕ್ತಿಃ ಶಿವಜ್ಞಾನಂ ತು ದುರ್ಲಭಂ ಇಂ್ರಯಪ್ರೀತಿದಾತಾರಃ ಪುಮಾಂಸೋ ಬಹವಃ ಕಿಲ ಶಿವಜ್ಞಾನಾರ್ಥದಾತಾರಃ ಪುಮಾಂಸೋ ಲೋಕದುರ್ಲಭಾಃ ಲಿಂಗಭಕ್ತ್ಯಾ ಮನಃ ಪೂತಂ ಅಂಗಂ ಪೂತಂ ತು ದೇಶಿಕಾತ್ ಭಾವಸ್ತು ಜಂಗಮಾತ್ ಪೂತಸ್ತ್ರಿವಿಧಾ ಭಕ್ತಿರುತ್ತಮಾ ಅಷ್ಟವಿಧಾರ್ಚನಂ ಲಿಂಗೇ ಅಷ್ಟಭೋಗಸ್ತು ಜಂಗಮೇ ಲಿಂಗೇ ಷೋಡಶೋಪಚಾರಾಃ ಸರ್ವೇ ತಾತ್ಪರ್ಯಜಂಗಮೇ ಮನೋ ಲೀನಂ ಮಹಾಲಿಂಗೇ ದ್ರವ್ಯಂ ಲೀನಂ ತು ಜಂಗಮೇ ತನುರ್ಲೀನೋ ಗುರೌ ಲಿಂಗೇ ಇತಿ ಭಕ್ತಸ್ಯ ವೈ ಧೃವಂ ಸಕಲಂ ಭಕ್ತರೂಪಂ ಚ ನಿಷ್ಕಲಂ ಶಿವರೂಪಕಂ ಸಕಲಂ ನಿಷ್ಕಲಂ ಮಿಶ್ರಂ ಚರರೂಪಂ ವಿಧೀಯತೇ ಸತ್ಕ್ರಿಯಾಂ ಪೂಜಯೇತ್ಪ್ರಾತರ್ಮಧ್ಯಾಹ್ನೇ ಭೋಜನಾವಧಿಂ ಸಾಯಂಕಾಲೇ ಮಹಾಪೂಜಾಂ ತತ್ಕ್ರಮಸ್ತು ವಿಶಿಷ್ಯತೇ ಮನಃಪೂತಾರ್ಚನಂ ಭಕ್ತ್ಯಾ ಪ್ರಾತಃಕಾಲವಿಧಿಕ್ರಮಃ ಸುಜಲಂ ಸುರಸಂ ಚೈವ ಯಥಾಸಂಭವದ್ರವ್ಯಕಂ ಅರ್ಪಯೇಚ್ಚರಲಿಂಗಾಯ ಮಧ್ಯಾಹ್ನೇ ಪೂಜನಕ್ರಮಃ ಗಂಧಂ ಪುಷ್ಪಂ ಚ ಕರ್ಪೂರಂ ಚಂದನಂ ಲೇಪನಂ ತಥಾ ಅರ್ಪಯೇತ್ ಫಲತಾಂಬೂಲಂ ಸಂಧ್ಯಾಪೂಜಾರ್ಚನಾವಿಧಿಕ್ರಮಃ ಧೂಪಮುಷ್ಣಾಧಿಕಂ ಸರ್ವಂ ಪ್ರಾತಃಕಾಲಾರ್ಚನಾವಿಧಿಃ ಪೂಜೋಪಚಾರಸ್ಸರ್ವೇಷಾಂ ಶೈತ್ಯಂ ಮಧ್ಯಾಹ್ನಸಂಧಿಷು ತ್ರಿಸಂಧ್ಯಾ ತ್ರಿಷು ಕಾಲೇಷು ಉಷ್ಣಂ ನೈವೇದ್ಯಮುತ್ತಮಂ ಯಥಾಸಂಭವಂ ಸಂಧ್ಯಾಯಾಂ ನಾದಾದೀನಿ ವಿಧಿಕ್ರಮಾತ್ ಶರಸಂಯುಕ್ತಪೂಜಾಯಾಂ ಕೇವಲಂ ನರಕಂ ಭವೇತ್ ನಿಶ್ಶಠಃ ಪೂಜಕಶ್ಚೈವ ಕೇವಲಂ ಮುಕ್ತಿಕಾರಣಂ ಅಷ್ಟಾದಶಾನಾಂ ಜಾತೀನಾಂ ಶಠಕರ್ಮಸ್ವಭಾವತಃ ನಿಶ್ಯಠಾಃ ಕುಲಮರ್ಯಾದಾಃ ಸದ್ಭಕ್ತಾಶ್ಚ ಶಿವಪ್ರಿಯಾಃ ಲಿಂಗಧಾರೀ ಮಹಾಲಿಂಗಂ ನ ಭೇದೋ ತತ್ರ ದೃಶ್ಯತೇ ಸದ್ವೈತ್ತೋ ಭೃತ್ಯರೂಪಶ್ಚ ಸತ್ಯಂ ಸತ್ಯಂ ಸಮೋ ನ ಚ ಕರ್ತೃಭೃತ್ಯಸ್ಯ ಸನ್ಮಾರ್ಗದುರ್ಮಾರ್ಗಸಮಭಾವತಃ ಅಹಂಕಾರೋ ಮಹಾಪಾಪಂ..... ಜನ್ಮಾಂತರಸಹಸ್ರೇಷು ತಪೋಧ್ಯಾನಪರಾಯಣೈಃ ನರಾಣಾಂ ಕ್ಷೀಣಪಾಪಾನಾಂ ಶಿವೇ ಭಕ್ತಿಃ ಪ್ರಜಾಯತೇ ತತೋ ವಿಷಯವೈರಾಗ್ಯಂ ವೈರಾಗ್ಯಾತ್ ಜ್ಞಾನಸಂಭವಃ ಜ್ಞಾನೇನ ತು ಪರಾ ಭಕ್ತಿಃ ಪ್ರಸಾದಸ್ತದನಂತರಂ ಪ್ರಸಾದಾನ್ಮುಚ್ಯತೇ ಜಂತುರ್ಮುಕ್ತಃ ಶಿವಸಮೋ ಭವೇತ್ ಅಸಾರೇ ದಗ್ಧಸಂಸಾರೇ ಸಾರಂ ದೇವಿ ಶಿವಾರ್ಚನಂ ಸತ್ಯಂ ವಚ್ಮಿ ಹಿತಂ ವಚ್ಮಿ ವಚ್ಮಿ ಪಥ್ಯಂ ಪುನಃ ಪುನಃ ಉಪಾಧಿಃ ಸ್ಯಾನ್ಮಹಾಭಕ್ತಿರುಪಾಧಿಸ್ಯಾತ್ಪ್ರಸಾದಕಃ ಉಪಾಧಿಃ ಸ್ಯಾತ್ಕ್ರಿಯಾಸ್ಸರ್ವಾಶ್ಯಿವಸ್ಯಾಸ್ಯಾ[s] ಪ್ರಸಾದತಃ ನಿುಪಾಧಿಕಮದ್ಭಕ್ತಿರ್ನಿರುಪಾಧಿಕಪ್ರಸಾದತಃ ನಿರೂಪಾಧಿಕ್ರಿಯಾಸ್ಸರ್ವಾಃ ಶಿವಃ ಶೀಘ್ರಂ ಪ್ರಸೀದತಿ ದಿನೇ ದಿನೇ ವಿಶೇಷಂ ಚ ಮಾಸೇ ಮಾಸೇ ಮಹಾದ್ಭುತಂ ವತ್ಸರೇ ವತ್ಸರೇ ಚೋದ್ಯಂ ಸದ್ಭಕ್ತಸ್ಯಾಭಿವರ್ಧನಂ ದಿನೇ ದಿನೇ ವಿಶೇಷಂ ಚ ಮಾಸೇ ಮಾಸೇ ಹಿ ದೃಶ್ಯತಾಂ ವತ್ಸರೇ ವತ್ಸರೇ ನಷ್ಟಾ ಮಹಾವಾಸಕ್ರಿಯಾಸ್ತಥಾ ದಾಸೋ[s]ಹಂ ಚ ಮಹಾಖ್ಯಾತಿರ್ದಾಸೋ[s]ಹಂ ಲಾಭ ಏವ ಚ ದಾಸೋ[s]ಹಂ ಚ ಮಹತ್ಪೂಜ್ಯಂ ದಾಸೋ[s]ಹಂ ಸತ್ಯಮುಕ್ತಿದಂ ಸದ್ಭಕ್ತಸಂಗಸಿದ್ಧಿಃ ಸ್ಯಾತ್ ಸರ್ವಸಿದ್ಧಿರ್ನ ಸಂಶಯಃ ಭಕ್ತಿಜ್ರ್ಞಾನಂ ಚ ವೈರಾಗ್ಯಂ ವರ್ಧತಾಂ ಚ ದಿನೇ ದಿನೇ ಮಹತ್ಸುಖಂ ಮಹಾತೋಷೋ ಲಿಂಗಭಕ್ತ್ಯಾ ಯಥಾ ಶಿವೇ ಪ್ರಾಣಲಿಂಗಪ್ರತೀಕಾರಂ ಕುರ್ವಂತೀಹ ದುರಾತ್ಮನಃ ಅತ್ಯುಗ್ರನರಕಂ ಯಾಂತಿ ಯುಗಾನಾಂ ಸಪ್ತವಿಂಶತಿ ಹುತಭುಗ್ಪತಿತಾಂಭೋಜಗತಿಃ ಪಾತಕಿನಾಂ ಭವೇತ್ ಸುಜ್ಞಾನ ಸದ್ಭಕ್ತಿ ಪರಮವೈರಾಗ್ಯಕ್ಕೆ ಶಿವನೊಲಿವನಲ್ಲದೆ ಸಾಮಾನ್ಯ ತಟ್ಟು ಮುಟ್ಟು ತಾಗು ನಿರೋಧದಲ್ಲಿ ಅನುಸರಿಸಿದಡೆ ಶಿವ ಮೆಚ್ಚುವನೆ ? ಸತ್ಯಶುದ್ಧ ನಿತ್ಯಮುಕ್ತ ಶರಣರು ಮೆಚ್ಚುವರೆ? ಶಿವನೊಲವು ಶರಣರೊಲವು ಸೂರೆಯೇ? ದೇವದಾನವ ಮಾನವರಂತೆ ಶಿವನಲ್ಲಿ ಭಕ್ತಿಯನು ಅನುಸರಿಸಿ ನಡೆವುದು ಭಕ್ತಿಯೇ ಅಲ್ಲ. ತಾಮಸ ರಾಜಸ ಉಳ್ಳುದು ಭಕ್ತಿಯ ಕುಳವಲ್ಲ, ಸದ್ಭಕ್ತಿಗೆ ಸಲ್ಲದು. ಗುರು ಲಿಂಗ ಜಂಗಮಕ್ಕೆ ಮರುಗಿ ತ್ರಿವಿಧಪದಾರ್ಥವ ಮನೋವಾಕ್ಕಾಯದಲ್ಲಿ ವಂಚನೆಯಿಲ್ಲದೆ ಮನ ಧನವನರ್ಪಿಸಿ ಮನ ಮುಟ್ಟಿದಡೆ ಗುರು ಲಿಂಗ ಜಂಗಮದ ಘನಮಹಿಮೆಯ ವೇದಪುರಾಣಾಗಮಂಗಳಿಂ ಗುರುವಾಕ್ಯದಿಂ ಪುರಾತನರ ಮತದಿಂದರಿದು ಮರೆವುದು ಜ್ಞಾನವಲ್ಲ. ಅರಿದು ಮರೆವುದು ಶ್ವಾನಜ್ಞಾನವಲ್ಲದೆ ಇಂತಪ್ಪ ಅಜ್ಞಾನಕ್ಕೆ ಒಲಿವನೇ ಶಿವನು? ಮೆಚ್ಚುವರೇ ಶರಣರು? ಶ್ರೀಗುರುಲಿಂಗಜಂಗಮವೊಂದೆಂಬರಿವು ಕರಿಗೊಂಡು ಸದ್ಭಾವದಿಂ ಭಾವಿಸಿ ಭಾವಶುದ್ಧಿಯಾದುದು ಸುಜ್ಞಾನ. ಗುರುಲಿಂಗಜಂಗಮದ ಅರ್ಚನೆ ಪೂಜನೆ ಅರ್ಪಿತ ದಾಸೋಹಕ್ರೀವಿಡಿದು ಸಂಸಾರಕ್ರೀ ಪರಧನ ಪರಸ್ತ್ರೀ ಅನ್ಯದೈವ ಭವಿಯನು ಅನುಸರಿಸಿ ಹಿಡಿದುದು ವೈರಾಗ್ಯವೇ ? ಅಲ್ಲ, ಅದು ಮರ್ಕಟ ವೈರಾಗ್ಯ. ಇವ ಬಿಟ್ಟು ಸದ್ಭಕ್ತಿ ಸಮ್ಯಗ್‍ಜ್ಞಾನ ಪರಮವೈರಾಗ್ಯಯುತನಾಗಿ ಗುರುಲಿಂಗಜಂಗಮಕ್ಕೊಲಿದು ಒಲಿಸುವುದು, ಸದ್ಭಕ್ತಿಪ್ರಸಾದಮುಕ್ತಿಯ ಹಡೆವುದು. ಈ ಸತ್ಕ್ರಿಯಾಭಕ್ತಿಯುಳ್ಳಡೆ ಲೇಸು, ಅಲ್ಲದಿದ್ದಡೆ ಸಾವುದೇ ಲೇಸಯ್ಯ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಗುರುವರಿಯದವನೆಂದುದಾಸೀನವ ಮಾಡಿ ನೆರೆ ಬಲ್ಲವರನರಸಿ, ಭಕ್ತಿಯ ಮಾಡುವ ಪಾಪಿ ಮಾನವ ನೀ ಕೇಳು. ಸಾಕ್ಷಿ :``ಗುರೌ ಸನ್ನಿಹಿತೇ ಯಸ್ತು ಪೂಜಾಯಾಮನ್ಯಮಾನಸಃ | ಸ ಪಾಪೀ ನರಕಂ ಯಾತಿ ಕಾಲಸೂತ್ರಮಿವೋತ್ಸರೇತ್ ||'' ಎಂದುದಾಗಿ, ಗುರುವರಿಯದವನೂ ಅಲ್ಲ, ಬಲ್ಲವನೂ ಅಲ್ಲ. ಗುರು ನಿರಂಜನ, ಗುರು ಪರಶಿವ, ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಧರೆ ರಸಾತಳಕ್ಕಿಳಿವಂದು, ಹರಿಬ್ರಹ್ಮಾದಿಗಳಳಿವಂದು, ಮಹಾದೇವ ಮಹಾದೇವ ಎನುತ್ತಿರ್ದೆನು ಅದೆಂತೆಂದಡೆ; ಬ್ರಹ್ಮಾಂಡಾನಾಮಸಂಖ್ಯಾನಾಂ ಬ್ರಹ್ಮವಿಷ್ಣುಮಹಾತ್ಮನಃ± ಯತ್ರೋದಯಂ ಲಯಂ ಯಾಂತಿ ಮಹಾದೇವ ಇತಿ ಸ್ಮೈತಃ ಎಂದುದಾಗಿ ಅಗ್ರದ ಕೊನೆಯ ತುದಿಯಿಂದತ್ತತ್ತ ತತ್ತ್ವಮಸಿಯ ಮೀರಿದ ನಮ್ಮ ಕೂಡಲಸಂಗಮದೇವ.
--------------
ಬಸವಣ್ಣ
ಸಮುದ್ರದಿಂದಾದ ತೆರೆಗಳು ಸಮುದ್ರದೊಳಗಡಗುತ್ತ ಆ ಸಮುದ್ರದೊಳಗೇ ಇಹವು. ತೆರೆಗಳು ಬೇರೊಂದುದಕವೆ? ನಿಮ್ಮಿಂದಲಾದ ಜಗವು ನಿಮ್ಮಲ್ಲಿಯೆ ಇದ್ದು ನಿಮ್ಮಲ್ಲಿಯೆ ಅಡಗುವುದು. ಬೇರೆ ಬೇರೆ ಕುಲವುಂಟೆ ಈ ಜಗಕ್ಕೆ? ಅದೆಂತೆಂದಡೆ: ಬ್ರಹ್ಮಬೀಜಂ ಜಗತ್‍ಸರ್ವಂ ಬ್ರಹ್ಮಣೈವ ವಿವರ್ಧತೇ| ಬ್ರಹ್ಮಣ್ಯೇವ ಲಯಂ ಯಾತಿ ಜಾತಿಭೇದಃ ಕಥಂ ಭವೇತ್|| ಇಂತೆಂದುದಾಗಿ, ಕುಲವೂ ಇಲ್ಲ ಛಲವೂ ಇಲ್ಲ. ಮರೆಯ ನುಡಿಯನೊಪ್ಪುವನೆ? ಸಿಮ್ಮಲಿಗೆಯ ಚೆನ್ನರಾಮ, ಬಿಡು ಜಡನೇ.
--------------
ಚಂದಿಮರಸ
ಇನ್ನು ರುದ್ರಾಕ್ಷಿಸ್ಥಲವೆಂತೆಂದಡೆ : ಬ್ರಹ್ಮ ವಿಷ್ಮು ರುದ್ರ ಮೊದಲಾದ ಸಮಸ್ತ ದೇವರ್ಕಳು ತ್ರಿಪುರದ ರಾಕ್ಷಸರ ಉಪದ್ರಕ್ಕೆ ಭೀತರಾಗಿ ರುದ್ರಲೋಕದ ಮಹಾರುದ್ರಂಗೆ ಶಿವಧೋ ಶಿವಧೋ ಎಂದು ಮೊರೆಯಿಡುತ ಚಿಂತಾಕ್ರಾಂತರಾಗಿ ನಿಲಲು, ಆ ರುದ್ರಲೋಕದ ಮಹಾರುದ್ರನು ತ್ರಿಪುರವಧಾರ್ಥ ಸರ್ವದೇವಮಯ ದಿವ್ಯ ಅನಂತತೇಜ ಅನಂತಪ್ರಚಯ ಅನಂತಜ್ವಾಲಾಮಯವಾಗಿಹ ಅಘೋರರೂಪ ತಾಳಿ ಉತ್ತಮವಾದ ಅಘೋರಾಸ್ತ್ರಮಂ ಚಿಂತಿಸಿ, ತ್ರಿಪುರದ ಕೀಲ ದಿವ್ಯಸಹಸ್ರವರ್ಷ ನೋಡಲು ಆ ರುದ್ರನ ಅಕ್ಷಿಯಲ್ಲಿ ರಕ್ತಾಶ್ರುಜಲಬಿಂದುಗಳು ಜನಿಸಿ ಭೂಮಿಯ ಮೇಲೆ ಬೀಳಲು ಮಹಾರುದ್ರಾಕ್ಷ ವೃಕ್ಷವಾಗಿ ತ್ರೈಲೋಕ್ಯಾನುಗ್ರಹ ಕಾರಣವಾಯಿತ್ತು ನೋಡಾ. ಆ ರುದ್ರಾಕ್ಷಿಯ ದರುಶನದ ಫಲ ಲಿಂಗದರುಷನದ ಫಲ, ರುದ್ರಾಕ್ಷಿಯ ದರುಶನ ಸ್ಪರ್ಶನದಿಂದ ಸರ್ವಪಾಪಂಗಳು ಹೋಹವು ನೋಡಾ. ಇದಕ್ಕೆ ಈಶ್ವರೋsವಾಚ : ``ಶ್ರುಣು ಷಣ್ಮುಖ ಯತ್ನೇನ ಕಥಯಾಮಿ ಸಮಾಸತಃ | ತ್ರಿಪುರೋ ನಾಮ ದೈತ್ಯಸ್ತು ಪುರಶ್ಚಿತ್ತು ಸುರರ್ಜಯಃ || ಚಿತ್ತಾಪ್ತೇವ ಸುರಾಸ್ಸರ್ವೇ ಬ್ರಹ್ಮ ವಿಷ್ಣೇಂದ್ರದೇವತಾಃ ಚಿಂತಿತಂ ಚ ಮಯಾ ಪುತ್ರ ಅಘೋರಾಸ್ತ್ರಮನುತ್ತಮಂ|| ಸರ್ವದೇವಮಯಂ ದಿವ್ಯಂ ಜ್ವಲಿತಂ ಘೋರರೂಪಕಂ | ತ್ರಿಪುರಸ್ಯ ವಧಾರ್ಥಾಯ ದೇವಾನಾಂ ಪ್ರಾಣವಾಯು ಚ || ಸರ್ವವಿಘ್ನಪ್ರಶಮನಂ ಅಘೋರಾಸ್ತ್ರಂತು ಚಿಂತಿತಂ | ದಿವ್ಯವರ್ಷಸಹಸ್ರಾಣಿ ಚಕ್ಷುರುನ್ಮೀಲಿತಂ ಮಯಾ || ಘಟೇಭ್ಯಾಂ ಚ ಕುಲಾಕ್ಷಿಭ್ಯಾಂ ಪತಿತಾ ಜಲಬಿಂದವಃ | ರಕ್ತಾಶ್ರುಬಿಂದವೋ ಜಾತಾಃ ಮಹಾರುದ್ರಾಕ್ಷವೃಕ್ಷಕಾಃ || ಸ್ಥಾವರತ್ವಮನುಪ್ರಾಪ್ಯ ಮತ್ರ್ಯಾನುಗ್ರಹಕಾರಣಾತ್ | ರುದ್ರಾಕ್ಷಾಣಾಂ ಫಲಂ ಧೃತ್ವಾ ತ್ರಿಷು ಲೋಕೇಷು ವಿಶ್ರುತಂ || ಲಿಂಗಸ್ಯ ದರ್ಶನೇ ಪುಣ್ಯಂ ಭವೇತ್‍ರುದ್ರಾಕ್ಷದರ್ಶನಾತ್ | ಭಕ್ತ್ಯ ರಾತ್ರೋ ದಿವಾಪಾಪಂ ದಿವಾರಾತ್ರಿ ಕೃತಂ ಹರೇತ್ || ಲಕ್ಷಂತು ದರ್ಶನಾತ್ಪುಣ್ಯಂ ಕೋಟಿ ಸಂಸ್ಪರ್ಶನೇ ಭವೇತ್ | ತತ್ಕೋಟಿ ಶತಂ ಪುಣ್ಯಂ ಲಭತೇ ಧಾರಣಾನ್ನರಃ || ಲಕ್ಷಕೋಟಿ ಸಹಸ್ರಾಣಿ ಲಕ್ಷಕೋಟಿ ಶತಾನಿ ಚ | ತಜ್ಜಪಾಲ್ಲಭತೇ ಪುಣ್ಯಂ ನಾತ್ರ ಕಾರ್ಯಂ ವಿಚಾರಣಾತ್ ||'' ಇಂತೆಂದುದಾಗಿ, ಇದಕ್ಕೆ ಮಹಾದೇವೋoವಾಚ : ``ಶಿರೋಮಾಲಾ ಚ ಷಟ್ತ್ರಿಂಶದ್ವಾತ್ರಿಂಶತ್ಕಂಠಮಾಲಿಕಾ | ಕೂರ್ಪರೇ ಷೋಡಶ ಪ್ರೋಕ್ತಾ ದ್ವಾದಶಂ ಮಣಿಬಂಧಯೋಃ || ಉರೋಮೂಲಾಚ ಪಂಚಾಶತಷ್ಟೋತ್ತರಶತಂ ತಥಾ | ಶಿರಸಾ ಧಾರಯತ್ಕೋಟಿ ಕರ್ಣಾಭ್ಯಾಂ ದಶಕೋಟಿಯಃ || ಗಳೇ ಬಂಧಂ ಶತಂ ಕೋಟಿ ಮೂಧ್ರ್ನಿ ಕೋಟಿಸಹಸ್ರಕಂ | ಆಯುಕಂಠೋಪವಿತ್ತಂ ಚ ಲಕ್ಷಮಾವೇ ಮಣಿಬಂಧಯೋರ್ಣ ವಕ್ತ್ರಾಣಿ | ದ್ವಾದಶಾದಿತ್ಯಾದಿ ಪಾಯು ಶ್ರೀಮಹಾದೇವಾಯ ನಮಃ || ಅಷ್ಟೋತ್ತರಶತಂ ಸೋಪವಿ ತ್ತಂ ಚತುರ್ದಶ ವಕ್ತ್ರಾಣಿ | ಶತರುದ್ರಾತ್ಮಾಕಾಯ ಶ್ರೀ ವಿಶ್ವೇಶ್ವರಾಯ ನಮಃ ಇತಿ ||'' ಇಂತೆಂದುದಾಗಿ, ಇದಕ್ಕೆ ಬೋಧಾಯನಶಾಖಾಯಾಂ : ``ತಾನಿ ಹವಾಏತಾನಿ ರುದ್ರಾಕ್ಷಾಣಿ ಯತ್ರ ಯೋ ಯೇ ಧಾರಯಂತಿ ಕಸ್ಮಾದೇವ ಧಾರಯಂತಿ ಸ್ನಾತ್ತ್ವಾನಿ ಧಾರಯನ್ ಗರ್ಭೇ ತಿಷ್ಟನ್ ಸ್ವಪನ್ ಖಾದನ್ ಉನ್ಮಿಷನ್ ಅಪಿ ಸರ್ವಾಣೈವಾನಿ ಚರತಿ ಮದ್ರಿ ಭೂತ್ವಾ ರುದ್ರೋ ಭವತಿ ಯೋಯೇನ ವಿದ್ವಾನ್ ಬ್ರಹ್ಮಚಾರೀ ಗೃಹಸ್ಥೋ ವಾನಪ್ರಸ್ಥೋಯತಿರ್ವಾ ಧಾರಯೇತ್ ಪದೇ ಪದೇ ಯಶ್ವಮೇಧಫಲಂ ಪ್ರಾಪ್ನೋತಿ ||'' ಇಂತೆಂದುದು ಶ್ರುತಿ. ಇದಕ್ಕೆ ಲೈಂಗ್ಯಪುರಾಣೇ : ``ರುದ್ರಾಕ್ಷಂ ಧಾರಯೇದ್ವಿಪ್ರಃ ಸಂಧ್ಯಾದಿಷು ಚ ಕರ್ಮಸು | ತತ್ಸರ್ವಂ ಸಮವಾಪ್ನೋತಿ ಕೋಟಿ ಕೋಟಿ ಗುಣಂ ಸದಾ || ಸ್ನಾನೇ ದಾನೇ ಜಪೇ ಹೋಮೇ ವೈಶ್ಯದೇವೇಷುರರ್ಚನೆ | ಪ್ರಾಯಶ್ಚಿತ್ತೇ ಕಥಾ ಶ್ರಾದ್ಧೇ ದೀಕ್ಷಾಕಾಲೇ ವಿಶೇಷತಃ || ರುದ್ರಾಕ್ಷಧರೋ ಭೂತ್ವಾ ಯತ್ಕಿಂಚಿತ್ಕರ್ಮವೈದಿಕಂ | ಕುರ್ಯಾದ್ವಿಪ್ರಸ್ತು ಯೋ ಮೋಹ ವಂಶಾವಪ್ನೋತಿ ತತ್ಫಲಂ ||'' ಇಂತೆಂದುದಾಗಿ, ಇದಕ್ಕೆ ಸ್ಕಂದಪುರಾಣೇ : ``ಲಕ್ಷಂತು ದರ್ಶನಾತ್ಪುಣ್ಯಂ ಕೋಟಿ ಸಂಸ್ಪರ್ಶನಾದಪಿ | ದಶಕೋಟಿ ಶತಂ ಪುಣ್ಯಂ ಧಾರಣಾಲ್ಲಭತೇ ವರಂ ||'' ಇಂತೆಂದುದಾಗಿ, ಇದಕ್ಕೆ ಕೂರ್ಮಪುರಾಣೇ : ``ಹಸ್ತೇಚೋರಸಿ ಕಂಠೇ ವಾ ಮಸ್ತಕೇ ವಾsಪಿ ಧಾರಯೇತ್ | ಮುಚ್ಯತೇ ಸರ್ವಪಾಪೇಭ್ಯಃ ಸ ರುದ್ರೋ ನಾತ್ರಸಂಶಯಃ || '' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ಶಿಖಾಯಾಂ ಧಾರಯೇದೇಕಂ ಷಟ್ತ್ರಿಂಶನ್ಮಸ್ತಕೇ ತಥಾ| ದ್ವಾತ್ರಿಂಶತ್ಕಂಠದೇಶೇಚ ಪಂಚಾಷಣ್ಮಾಲಿಕಾ ಹೃದಿ || ಷೋಡಶಂ ಬಾಹುಮೂಲಯೋಃ ದ್ವಾದಶಂ ಮಣಿಬಂಧಕೇ | ಕರ್ಣಯೇಕೀಕಮೇಶುಸ್ಯಾ ದುಪವಿತೇ ಶತಾಷ್ಟಕಂ || ಶತಾಷ್ಟಮಕ್ಷಮಾಲಾಂತು ನಿತ್ಯಂ ಧಾರಯೇತೇ ವರಃ | ಪದೇ ಪದೇsಶ್ವಮೇಧಸ್ಯ ಫಲಂ ಪ್ರಾಪ್ನೋತಿ ನ ಸಂಶಯಃ || ಇಂತೆಂದುದಾಗಿ, ಇದಕ್ಕೆ ಈಶ್ವರೋsವಾಚ : ``ರುದ್ರಾಕ್ಷ ಶತಕಂಠೋ ಯಃ ಗೃಹೇ ತಿಷ*ತಿ ಯೋ ವರಃ | ಕುಲೈಕವಿಂಶಮುಕ್ತಾರ್ಯ ಶಿವಲೋಕೇ ಕೋಟಿಭುಜದ್ವಯಂ | ಅಪ್ರಮೇಯ ಫಲಂ ಹಸ್ತೇ ರುದ್ರಾಕ್ಷಂ ಮೋಕ್ಷಸಾಧನಂ ||'' ಇಂತೆಂದುದಾಗಿ, ಇದಕ್ಕೆ ಈಶ್ವರೋsವಾಚ : ``ಅವದ್ಯಃ ಸರ್ವಭೂತಾನಾಂ ರುದ್ರವದ್ವಿಚರೇತ್ ಭುವಿ | ಸುರಾಣಾಮಸುರಾಣಾಂ ಚ ವಂದನೀಯೋ ಯಥಾ ಶಿವಃ || ರುದ್ರಾಕ್ಷರಧಾರಶೋ ನಿತ್ಯಂ ವಂದನೀಯೋ ನರೈರಿಹ | ಉಚ್ಛಿಷ್ಟೋ ವಾ ವಿಕರ್ಮಸ್ತೋ ಯುಕ್ತೋ ವಾ ಸರ್ವಪಾಪಕೈಃ | ಮುಚ್ಯತೇ ಸರ್ವಪಾಪೇಭ್ಯೋ ನರೋ ರುದ್ರಾಕ್ಷಧಾರಣಾತ್ ||'' ಇಂತೆಂದುದಾಗಿ ಇದಕ್ಕೆ ಕಾತ್ಯಾಯನಶಾಖಾಯಾಂ : ``ಅಥೈವ ಭಗವಂತಂ ರುದ್ರಕುಮಾರಃ ಪಪ್ರಚ್ಛಾರಣೇನ ದಶಶತ ಗೋದಾನಫಲಂ || ದರ್ಶನಸ್ಪರ್ಶನಾಭ್ಯಾಂ ದ್ವಿಗುಣಂ ತ್ರಿಗುಣಂ ಫಲಂ ಭವತಿ, ಅತ ಊಧ್ರ್ವಂ ವಕ್ತುಂ ನ ಶಕ್ನೋಮಿ ತತೋಂ ಜಪ ಸಮಂತ್ರಕಂ ಧಾರಣೇ ವಿಧಿಂ ಕಥಯಾಮಿ || ಸ್ನಾನ ವಿಧಿನಾ ಸ್ನಾತೇಷು ಖೇರಾಜ್ಞೇಯ ಸ್ನಾನಂ ತ್ರಿಪುಂಡ್ರಧಾರಣಂ ಕೃತ್ವಾ ಏಕಾಶ್ಯಾದಿರುದ್ರ ಶಾಂತಾನಾಂ || ಸೃಷ್ಟಿಕ್ರಮೇಣಂ ಮಂತ್ರಾಸ್ಯಂ `ಓಂ ಹೂಂ ಚಂ ಖಂ ಹೂಂ ಕ್ಲಿಂ ಮಾಂ ದ್ರಾಂ ದ್ರಿಂ ಹ್ರುಂ ಕ್ರೂಂ ಕ್ಷಾಂ ಕ್ಷಿಂ ಕ್ಷುಂ' ನವಮಿತೀಷುರುವೋಕ್ತ ಂ ಮಂತ್ರಾನನಂತಾ ಶೋಕ್ತ್ವಾನ್ವಾ ಜಪೇದಿಮಾನ್ ಪಾಣಾನಾಯಮ್ಯ ಸಮಸ್ತಪಾಪಕ್ಷಯಾರ್ಥಂ ಶಿವಜ್ಞಾನಾ ವಸ್ಯಾರ್ಥ ಸಮಸ್ತ ಮಂತ್ರಸ್ಸಹಧಾರಣಂ ಕರಿಷ್ಯಾಮಿತಿ ಸಂಕಲ್ಪ್ಯ ಶಿಖಾಯಾಮೇಕಮೇಕಸ್ಯಂ ಶ್ರೀ ಸದಾಶಿವಾಯ ನಮಃ ಇತಿ ||'' ``ದ್ವಿ ತ್ರಿ ದ್ವಾದಶವಕ್ತ್ರಾಣಿ ಶಿರಸಿ ತ್ರೀಣಿ ಧಾರಯೇತ್ | ವಹ್ನಿ ಸೂರ್ಯಸೋಮಾಧಿಪಾಯ ಶಿವಾಯ ನಮಃ ಇತಿ || ಏಕಾದಶ ವಕ್ತ್ರಂ ಷಟ್ತ್ರಿಂಶನ್ಮೂಧ್ರ್ನಿ ಷಟ್ತ್ರಿಂಶತ್ತತ್ವಾತ್ಮಕಾಯ | ನಮ ಇತಿ ಪಂಚದಶ ವಕ್ತ್ರಾಣಿ ಕರ್ಣಯೋರೇಕಮೇಕಂ || ಸೋಮಾಯ ನಮಃ ಇತಿ, ಯೇದಷ್ಟವಕ್ತ್ರಾಣಿ ಕಂಠೇ ದ್ವಾತ್ರಿಂಶತ್ | ತ್ರ್ಯಂಬಕಕಲಾತ್ಮನೇ ಶ್ರೀಕಂಠಾಯ ನಮಃ ಇತಿ || ಚತುರ್ವಕ್ತ್ರಂ ಪಂಚಷಣ್ಮಾಲಿಕಾಮುರಸಿ ಶ್ರೀಕಂಠಾದಿ | ಮೂತ್ರ್ಯಾಯಸ್ಥಿಕಾಯ ಶ್ರೀ ಸರ್ವಜ್ಞಾಯ ನಮಃ ಇತಿ || ಬಾಹೋ ತ್ರಯೋದಶವಕ್ತ್ರಾಣಿ ಷೋಡಶಸುಖಾಸನಾದಿ | ಷೋಡಶಮೂತ್ರ್ಯಾತ್ಮಕಾಯ ಶ್ರೀಕಂಠಾಯ ನಮಃ ಇತಿ || ದಕ್ಷೇರ್ಣವ ವಕ್ತ್ರಾಣಿ ಶ್ರೀ ವ್ಯೋಮಕಳಾತ್ಮಕಾಯ ಉಪಮಾಪತಯೇ ನಮಃ ಇತಿ ಉಪಾಯತೇ ||'' ಇಂತೆಂದುದಾಗಿ, ಇದಕ್ಕೆ ಮಹಾಲಿಂಗಪುರಾಣೇ : ``ರುದ್ರಾಕ್ಷಮಾಲಯಾ ಶುಭ್ರೋ ಜಟಾಜೂಟವಿರಾಜಿತಃ | ಭಸ್ಮಾವಲಿಪ್ತಸರ್ವಾಂಗಃ ಕಮಂಡಲುಕರಾನ್ವಿತಃ || ಕೃಷ್ಮಾಜಿನೋ ಪವಿತ್ರಾಂಗಃ ಆಶಾಹೆ ಪುಣ್ಯಕೀರ್ತನಃ | ಶಿವಃ ತಸ್ಮೆ ೈಃ ಮಹಾದೇವಂ ಯೋಗಿನಾಂ ಹೃದಯಾಲಯಂ ||'' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ರುದ್ರಕ್ಷಧಾರಣಾಸ್ಸರ್ವೇ ಜಟಾಮಂಡಲಧಾರಣಾತ್ | ಅಕ್ಷಮಾಲಾರ್ಪಿತಕರಂ ತ್ರಿಪುಂಡ್ರಾಪಲಿಯುಕ್ತಾಂಗಂ | ಆಷೇಡೇವ ವಿರಾಜಿತಂ ಋಗ್ಯಜುಃಸಾಮರೂಪೇಣ | ಸೇವತೇಸ್ಮೈ ಮಹೇಶ್ವರಃ ಸಂಸ್ಥಾಯಮನೋದಿಷ್ಟಾಂಗೈ || ದೇವೈರ್ಮುನಿಗಣೈಸ್ತಥಾಮೃತ ತ್ರಿಪುಂಡ್ರಕೋ ದಿವ್ಯೇ | ರುದ್ರಾಕ್ಷೇಶ್ವ ವಿಭಾಷಿತಃ ಶುಭೇ ಸತತಂ ವಿಷ್ಟು| ಭಸ್ಮದಿಗ್ಧತಮೂಲತಃ ತ್ರಿಪುಂಡ್ರಾಂಕಿತ ಸರ್ವಾಂಗೋ | ಜಟಾಮಂಡಲಮಂಡನ ಭೂತಿ ತ್ರಿಪುಂಡ್ರರುದ್ರಾಕ್ಷಂ | ಅಕ್ಷರ ಮಾಲಾರ್ಪಿತಕರಃ ಕುರ್ವಕ್ತ್ರಃ ಪಿತಾಮಹಾ ||'' ಇಂತೆಂದುದಾಗಿ, ಇದಕ್ಕೆ ಮಹಾದೇವೋವಾಚ : ``ಭಾಲೇ ತ್ರಿಪುಂಡ್ರಕಂ ಚೈವ ಗಳೇ ರುದ್ರಾಕ್ಷಮಾಲಿಕಾ | ವಕ್ತ್ರೇ ಷಡಕ್ಷರೀ ಮಂತ್ರೋ ಸ ರುದ್ರೋ ನಾತ್ರ ಸಂಶಯಃ ||'' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ರುದ್ರಕ್ಷಮಾಲಿಕಾ ಕಂಠೇ ಧಾರಸ್ತದ್ಭಕ್ತಿವರ್ಜಿತಃ | ಪಾಪಕರ್ಮಾಪಿ ಯೋ ನಿತ್ಯಂ ರುದ್ರಲೋಕೇ ಮಹೀಯತೇ ||'' ಇಂತೆಂದುದಾಗಿ, ಇದಕ್ಕೆ ಸ್ಕಂದಪುರಾಣೇ : ``ರುದ್ರಾಕ್ಷಂ ಕಂಠಮಾಶ್ರಿತ್ಯ ಶ್ವಾನೋsಪಿ ಮಿೃಯತೇ ಯದಿ | ಸೋsಪಿ ರುದ್ರಂ ಸಮಾಪ್ನೋತಿ ಕಿಂ ಪುನರ್ಮಾನುಷಾದಯಃ || ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ಖಾದನ್ ಮಾಂಸಂ ಪಿಬನ್ ಮದ್ಯಂ ಸಂಗಚ್ಛನ್ನಂತ್ಯಜೇಷ್ವಪಿ | ಸದ್ಯೋ ಭವತಿ ಪೂತಾತ್ಮಾ ರುದ್ರಾಕ್ಷೌ ಶಿರಸಿ ಸ್ಥಿತೇ ||'' ಇಂತೆಂದುದಾಗಿ, ಇದಕ್ಕೆ ಈಶ್ವರ ಉವಾಚ : ``ಶುಚಿರ್ವಾಪ್ಯಶುಚಿರ್ವಾಪಿ ಅಭಕ್ಷಸ್ಯ ಚ ಭಕ್ಷಣಾತ್ | ಅಗಮ್ಯಾಗಮನಂ ಚೈವ ಬ್ರಹ್ಮಹಾ ಗುರುತಲ್ಪಕಃ || ಮ್ಲೇಚ್ಛೋ ವಾಪ್ಯಥ ಚಾಂಡಾಲೋ ಯುಕ್ತೋ ವಾ ಪ್ಯಥ ಪಾತಕೈಃ | ರುದ್ರಾಕ್ಷಧಾರಣಾದ್ಯಸ್ತು ಸ ರುದ್ರೋ ನಾತ್ರ ಸಂಶಯಃ ||'' ಇಂತೆಂದುದಾಗಿ, ಇದಕ್ಕೆ ಮಹಾಲಿಂಗಪುರಾಣೇ : ``ಧ್ಯಾನಧಾರಣಹೀನೋsಪಿ ರುದ್ರಾಕ್ಷಂ ಯೋ ಹಿ ಧಾರಯೇತ್ | ಸರ್ವಪಾಪವಿನಿರ್ಮುಕ್ತಃ ಸಯಾತಿ ಪರಮಾಂ ಗತಿಂ||'' ಇಂತೆಂದುದಾಗಿ, ಇದಕ್ಕೆ ಮಾನವಪುರಾಣೇ : ``ಮೃಣ್ಮಯಂ ವಾಪಿ ರುದ್ರಾಕ್ಷಂ ಕೃತ್ವಾ ಯಸ್ತು ಧಾರಯೇತ್ | ಅಪಿ ದುಃಕೃತಕರ್ಮೋsಪಿ ಸ ಯಾತಿ ಪರಮಾಂ ಗತಿಂ ||'' ಇಂತೆಂದುದಾಗಿ, ಇದಕ್ಕೆ ಶಿವಲಿಂಗಾಗಮೇ : ``ರುದ್ರಾಕ್ಷಮಾಲಂ ಬ್ರಹ್ಮಾ ಚ ತನ್ನಾಳಂ ವಿಷ್ಣುರುಚ್ಯತೇ | ಮುಖಂ ಸದಾಶಿವಂ ಪ್ರೋಕ್ತಂ ಬಿಂದುಃ ಸರ್ವತ್ರ ದೇವತಾ ||'' ಇಂತೆಂದುದಾಗಿ, ``ರುದ್ರಾಕ್ಷಿಯ ಧರಿಸಿಪ್ಪಾತನೆ ರುದ್ರನು. ಆತನ ಭವರೋಗಂಗಳು ಹೊದ್ದಲಮ್ಮವು ನೋಡಾ. `ಏವಂ ರುದ್ರಾಕ್ಷಧಾರಣಾದ್ ರುದ್ರಾ' ಎಂದುದು ಶ್ರುತಿ. ರುದ್ರಾಕ್ಷಿಯ ಧರಿಸಿಪ್ಪ ಶರಣರಿಗೆ ಶರಣೆಂದು ಬದುಕಿದೆನು ಕಾಣಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಸ್ವಸ್ತಿ ಸಮಸ್ತವಿದ್ಯಾದಿ ಮೂಲವಹ ಋಕ್‍ಯಜುಸ್ಸಾಮಾಥರ್ವಣದಲ್ಲಿ ಅಂತರ್ಗತವಾಗಿಹ ಶ್ರೀರುದ್ರ, ಪಂಚಬ್ರಹ್ಮ, ಶ್ವೇತಾಶ್ವತರ, ಬ್ರಹದಾರಣ್ಯಕ, ಕೇನ, ಈಶ, ಜಾಬಾಲ, ಗರ್ಭ, ಕಾಲಾಗ್ನಿರುದ್ರ, ವಾಜಸನೇಯ, ಶಿವಸಂಕಲ್ಪ, ಬ್ರಹ್ಮಬಿಂದು, ಕಾತ್ಯಾಯನ, ಕಣ್ವ ಇತ್ಯಾದಿ ನಿಖಿಲೋಪನಿಷತ್ತುಗಳನ್ನು ಪ್ರತಿಪಾದಿಸಿ ನೋಡಲು, ನಿತ್ಯಶುದ್ಧ ನಿರ್ಮಲಪರಶಿವನನ್ನು ಸತ್ಯಶುದ್ಧ ಶಿವಾಚಾರಸಂಪನ್ನಭಕ್ತರನಲ್ಲದೆ ವಿಸ್ತರಿಸಿ ಸ್ತುತಿಗೈದುದಿಲ್ಲ. ಅದಕ್ಕೆ ಶಪಥ, ಆ ವೇದಪುರಷರ ಚಿತ್ತವೇ ಸಾಕ್ಷಿ. ಶಿವನ ಶರಣರು ವಾಙõïಮಾನಸಾಗೋಚರರು ಎಂದು ಹೇಳುತ್ತಲಿದೆ ಶ್ರುತಿ. ಅಖಿಲಬ್ರಹ್ಮಾಂಡಂಗಳಿಗೆ ಪಿತಮಾತೆಯಹ ಶಿವನಲ್ಲಿ ಶಿವನ ಶರಣನು ಅವಿರಳನೆಂಬುದಕ್ಕೆ `ಯಥಾ ಶಿವಸ್ತಥಾ ಭಕ್ತಃ' ಎಂಬ ವೇದವಾಕ್ಯವೇ ಪ್ರಮಾಣ. `ನಾಭ್ಯಾ ಅಸೀದಂತರಿಕ್ಷಂ ಶೀಷ್ರ್ಣೋzõ್ಞ್ಯಃ ಸಮವರ್ತತ' ಎಂಬ ಶ್ರುತಿ, ಸಕಲ ಬ್ರಹ್ಮಾಂಡಕೋಟಿಗಳು ಶಿವನ ನಾಭಿಕೂಪದಲ್ಲಿ ಅಡಗಿಹವೆಂದು ಹೇಳಿತ್ತು. `ಭಕ್ತಸ್ಯ ಹೃತ್ಕಮಲಕರ್ಣಿಕಾಮಧ್ಯಸ್ಥಿತೋ[s]ಹಂ ನ ಸಂಶಯಃ ಎಂಬ ಶ್ರುತಿ, ಅಂತಹ ಶಿವನು ಸದ್ಭಕ್ತನೊಳಗಡಗಿಹನೆಂದು ಹೇಳಿತ್ತು. `ಅಘೋರೇಭ್ಯೋ[s]ಥ ಘೋರೇಭ್ಯೋ ಘೋರಘೋರತರೇಭ್ಯಃ ಸರ್ವೇಭ್ಯಃ ಸರ್ವಶರ್ವೆರಭ್ಯೋ ನಮಸ್ತೆ ಅಸ್ತು ರುದ್ರರೂಪೇಭ್ಯಃ ಎಂಬ ಶ್ರುತಿ, ಶಿವನ ಅಘೋರಮೂರ್ತಿಯ ನಿತ್ಯತೇಜೋಮೂರ್ತಿಯೆಂದು ಹೇಳಿತ್ತು. ಜ್ಯೋತಿರ್ಲಿಂಗತ್ವಮೇವಾರ್ಯೇ ಲಿಂಗೀ ಚಾಹಂ ಮಹೇಶ್ವರಿ ತದೇತದವಿಮುಕ್ತಾಖ್ಯಂ ಜ್ಯೋತಿರಾಲೋಕ್ಯತಾಂ ಪ್ರಿಯೇ ಎಂಬ ವಾಕ್ಯ, ಶರಣಸತಿ ಲಿಂಗಪತಿಯಹ ಶಿವನ ಶರಣನೇ ಜ್ಯೋತಿರ್ಲಿಂಗವೆಂದು ಹೇಳಿತ್ತು. ತ್ರ್ಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿವರ್ಧನಂ ಉರ್ವಾರುಕಮಿವ ಬಂಧನಾನ್ಮೃತ್ಯೋರ್ಮುಕ್ಷೀಯ ಮಾಮೃತಾತ್ ಎಂಬ ಶ್ರುತಿ, ಶಿವಧ್ಯಾನ ಸ್ತುತಿ ನಿರೀಕ್ಷಣೆ ಪೂಜೆಯಿಂದಲ್ಲದೆ ಜನ್ಮ ಮೃತ್ಯು ಜರಾ ವ್ಯಾಧಿ ಹಿಂಗಿ ಪರಮಸುಖ ಪರಮನಿರ್ವಾಣವಾಗದೆಂದು ಹೇಳಿತ್ತು. `ಅಪವರ್ಗಪದಂ ಯಾತಿ ಶಿವಭಕ್ತೋ ನ ಚಾಪರಃ' ಎಂಬ ವಾಕ್ಯ, ಮುಕ್ತಿ ಶಿವಭಕ್ತಂಗಲ್ಲದೆ ಮತ್ತೊಬ್ಬರಿಗಿಲ್ಲವೆಂದು ಹೇಳಿತ್ತು. `ಋತಂ ಸತ್ಯಂ ಪರಂ ಬ್ರಹ್ಮ ಪುರುಷಂ ಕೃಷ್ಣಪಿಂಗಲಂ ಊಧ್ರ್ವರೇತಂ ವಿರೂಪಾಕ್ಷಂ ವಿಶ್ವರೂಪಾಯ ತೇ ನಮಃ' ಎಂಬ ಶ್ರುತಿ, ಪರಬ್ರಹ್ಮವೆಂಬುದು ಶಿವನಲ್ಲದೆ ಬೇರೆ ಬೇರೆ ಮತ್ತೊಂದು ವಸ್ತುವಿಲ್ಲವೆಂದು ಹೇಳಿತ್ತು. `ಬ್ರಹ್ಮಣಿ ಚರತಿ ಬ್ರಾಹ್ಮಣಃ' ಎಂಬ ವಾಕ್ಯ, ಅಂತಹ ಬ್ರಹ್ಮವ ಚಿಂತಿಸಿ ನಿರೀಕ್ಷಿಸಿ ಸ್ತುತಿಸಿ ಪೂಜಿಸಿ ಪ್ರಸನ್ನಪ್ರಸಾದವ ಪಡೆವ ಸದ್ಭಕ್ತನೇ ಮಹಾಬ್ರಾಹ್ಮಣನೆಂದು ಹೇಳಿತ್ತು. `ವಿಶ್ವತಶ್ಚಕ್ಷುರುತ ವಿಶ್ವತೋ ಮುಖೋ ವಿಶ್ವತಃ ಪಾತ್ ವಿಶ್ವಾಧಿಕೋ ರುದ್ರೋ ಮಹಾಋಷಿಸ್ಸರ್ವೋ ಹಿ ರುದ್ರಃ' ಎಂಬ ಶ್ರುತಿ, ಸಕಲ ಜೀವರ ಶಿವನೆಂದು ಹೇಳಿತ್ತು. `ಭಕ್ತಸ್ಯ ಚೇತನೋ ಹ್ಯಹಂ' ಎಂಬ ವಾಕ್ಯ, ಶಿವಭಕ್ತಂಗೆ ನಾನೇ ಚೈತನ್ಯನೆಂದು ಹೇಳಿತ್ತು. ಇಂತಪ್ಪ ಶಿವಲಿಂಗಾರ್ಚನೆಯ ಮಾಡುವ ಶಿವಭಕ್ತನ ಶ್ರೀಮೂರ್ತಿಗಿನ್ನು ಸರಿಯುಂಟೆರಿ `ವಾಚೋತೀತಂ ಮನೋತೀತಂ ಭಾವಾತೀತಂ ಪರಂ ಶಿವಂ ಸರ್ವಶೂನ್ಯಂ ನಿರಾಕಾರಂ ನಿತ್ಯತ್ವಂ ಪರಮಂ ಪದಂ' ಇಂತಪ್ಪ ಶಿವನಲ್ಲಿ ಅವಿನಾಭಾವರಪ್ಪ ಶರಣರ ಕಂಡಡೆ ಕರ್ಮಕ್ಷಯ, ನೋಡಿದಡೆ ಕಣ್ಗೆ ಮಂಗಳತರ ನಿರುಪಮಸುಖ, ನುಡಿಸಿದಡೆ ಶಿವರಾತ್ರಿ, ಸಂಭಾಷಣೆ ಮಾಡಿದಡೆ ಜನ್ಮಕರ್ಮಬಂಧನನಿವೃತ್ತಿ, ಜೀವನ್ಮುಕ್ತನಹ, ಇದು ನಿತ್ಯ ಕೇಳಿರಣ್ಣಾ. ದರ್ಶನಾತ್ ಶಿವಭಕ್ತನಾಂ ಸಕೃತ್ಸಂಭಾಷಣಾದಪಿ ಅತಿರಾತ್ರಸ್ಯ ಯಜ್ಞಸ್ಯ ಫಲಂ ಭವತಿ ನಾರದ ಎಂದು ನಾರದಬೋಧೆಯಲ್ಲಿ ಈಶ್ವರ ಹೇಳಿದನು. ಇಂತಪ್ಪ ಈಶ್ವರನ ಕಾಣವು ವೇದಂಗಳು. `ಯಜ್ಞೇನ ಯಜ್ಞಮಯಜಂತ ದೇವಾಸ್ತಾನಿ ಧರ್ಮಾಣಿ ಪ್ರಥಮಾನ್ಯಾಸನ್' ಎಂದುದಾಗಿ, ಇಂತು ವೇದಕ್ಕತೀತನಹಂತಹ ಶಿವನ ಶರಣರ ಮಾಹಾತ್ಮೆಯ ಹೊಗಳಲ್ಕೆ ವೇದಕ್ಕೆ ವಶವಲ್ಲ, ಮಂದಮತಿಮಾನವರ ಮಾತಂತಿರಲಿ. ಶಿವಶರಣರ ಮಹಾಮಹಿಮೆಗೆ ನಮೋ ನಮೋ ಎಂಬೆ ಕಾಣಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ದೇಹಾಭಿಮಾನವಳಿದು, ಪರಶಿವಜ್ಞಾನವು ಸ್ವಾನುಭಾವಜ್ಞಾನವು ಒಂದೆಯಾಗಿ, ಭಿನ್ನಜ್ಞಾನದ ಬನ್ನವಳಿದು ಅವಿರಳಜ್ಞಾನವಳವಟ್ಟಲ್ಲಿ ಮನವೆಲ್ಲೆಲ್ಲಿಗೆಯ್ದಿದರಲ್ಲಲ್ಲಿಯೇ ಶಿವನು ಸ್ವಯವದೆಂತೆಂದಡೆ, ಇದಕ್ಕೆ ಶ್ರುತಿ: ದೇಹಾಭಿಮಾನೇ ಗಲಿತೇ ವಿಜ್ಞಾತೇಚ ಪದೇ ಶಿವೇ ಯತ್ರ ಯತ್ರ ಮನೋ ಯಾತಿ ತತ್ರ ತತ್ರ ಶಿವಃ ಸ್ವಯಂ ಎಂದುದಾಗಿ ಇದು ಕಾರಣ ಸೌರಾಷ್ಟ್ರ ಸೋಮೇಶ್ವರನ ಶರಣರು ಸಚ್ಚಿದಾನಂದಭರಿತರು.
--------------
ಆದಯ್ಯ
ವೇದಮಾರ್ಗವ ಮೀರಿದರು ಮಹಾವೇದಿಗಳು ಲಿಂಗವಂತರು, ಆ ಲಿಂಗವಂತರ ಮಹಾವೇದಮಾರ್ಗವ ಲಿಂಗವೇ ಬಲ್ಲನಯ್ಯಾ. ಶಾಸ್ತ್ರಮಾರ್ಗವ ಮೀರಿದರು ಮಹಾಶಾಸ್ತ್ರಜ್ಞರು ಲಿಂಗವಂತರು. ಆ ಲಿಂಗವಂತರ ಮಹಾಶಾಸ್ತ್ರಮಾರ್ಗವ ಲಿಂಗವೇ ಬಲ್ಲನಯ್ಯಾ. ಆಗಮಕ್ರೀಯ ಮೀರಿದರು ಮಹಾ ಆಗಮಿಕರು ಲಿಂಗವಂತರು, ಲಿಂಗವಂತರ ಮಹಾ ಆಗಮಕ್ರೀಯ ಲಿಂಗವೇ ಬಲ್ಲನಯ್ಯಾ. ಪುರಾಣದ ಪರಿಯ ಮೀರಿದರು ಮಹಾಪುರಾಣಿಕರು ಲಿಂಗವಂತರು, ಆ ಲಿಂಗವಂತರ ಪುರಾಣದ ಪರಿಯ ಆ ಲಿಂಗವೇ ಬಲ್ಲನಯ್ಯಾ. ದೇವ ದಾನವಮಾನವರಿಗೆಯೂ ಅರಿಯಬಾರದು. ವೇದಶಾಸ್ತ್ರಪುರಾಣಾನಿ ಸ್ಪಷ್ಟಂ ವೇಶ್ಯಾಂಗನಾ ಇವ ಯಾ ಪುನಶ್ಶಾಂಕರೀ ವಿದ್ಯಾ ಗುಪ್ತಾ ಕುಲವಧೂರಿವ ಎಂದುದಾಗಿ, ಆರಿಗೆಯೂ ಅರಿಯಬಾರದು. ಲಿಂಗವಂತರು ಉಪಮಾತೀತರು, ವಾಙ್ಮನೋತೀತರು, ಆರ ಪರಿಯೂ ಇಲ್ಲ. ಸ್ವೇಚ್ಛಾವಿಗ್ರಹೇಣೈವ ಸ್ವೇಚ್ಛಾಚಾರಗಣೇಶ್ವರಾಃ ಶಿವೇನ ಸಹ ತೇ ಭುಙõïತ್ವಾ ಭಕ್ತಾ ಯಾಂತಿ ಶಿವಂ ಪದಂ ಲೋಕಾಚಾರನಿಬಂಧೇನ ಲೋಕಾಲೋಕವಿವರ್ಜಿತಾಃ ಲೋಕಾಚಾರಂ ಪರಿತ್ಯಜ್ಯ ಪ್ರಾಣಲಿಂಗಪ್ರಸಾದಿನಃ ಎಂದುದಾಗಿ, ಈ ಲೋಕದ ಮಾರ್ಗವ ನಡೆಯರು, ಲೋಕದ ಮಾರ್ಗವ ನುಡಿಯರು. ಲಿಂಗವಂತರ ನಡೆ ನುಡಿ ಆಚಾರ ಅನುಭವ ಆಯತ ಬೇರೆ ಕಾಣಿರಣ್ಣಾ. ಶ್ರೀಗುರುಲಿಂಗದಿಂದಲುದಯಿಸಿ ಪ್ರಾಣಲಿಂಗಸಂಬಂಧಿಗಳಾದ ಮಹಾಲಿಂಗವಂತರಿಗೆ ಪ್ರಾಣಲಿಂಗ, ಕಾಯಲಿಂಗ ಭಕ್ತಕಾಯ ಮಮಕಾಯವಾಗಿ ದೇಹಾದಿ ತತ್ತ್ವವೆಲ್ಲಾ ಶಿವತತ್ತ್ವ. ಇದು ಕಾರಣ, ಸರ್ವಾಂಗಲಿಂಗಮಹಾಮಹಿಮ ಲಿಂಗವಂತರ ಕ್ರೀಯೆಲ್ಲವೂ ಲಿಂಗಕ್ರೀ. ಮುಟ್ಟಿದುದೆಲ್ಲಾ ಅರ್ಪಿತ, ಕೊಂಡುದೆಲ್ಲಾ ಪ್ರಸಾದ. ಸದ್ಯೋನ್ಮುಕ್ತರು, ಸರ್ವಾಂಗಲಿಂಗವಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಗುರುವಿಂದನ್ಯ ದೈವವಿಲ್ಲೆಂಬುದಕ್ಕೆ ಆಗಮವಾಣಿಯೆ ಸಾಕ್ಷಿ. ಅದೆಂತೆಂದಡೆ: ``ಗುರುದೇವೋ ಮಹಾದೇವೋಗುರುದೇವಸ್ಸದಾಶಿವಃ| ಗುರುದೇವಾತ್ಪರಂ ನಾಸ್ತಿ ತಸ್ಮೆ ೈ ಶ್ರೀಗುರುವೆ ನಮಃ|| ಗುರುಃ ಶಂಭುರ್ಗುರುಜ್ರ್ಞಾನಂ ಗುರುರ್ಮಾತಾ ಗುರುಃ ಪಿತಾ| ಗುರುರ್ಬಂಧುರ್ಗುರುಃ ಸಾಕ್ಷಾದ್ದೇವತಾಗಣಪುಂಗವಃ|| ಅನುಷಾ*ನಾಕಾಂ ಪೂಜಾಂ ಯಃ ಕರೋತಿ ಗುರುಂ ವಿನಾ| ಯಾತಿ ನೀಚಾನಿ ಜನ್ಮಾನಿ ತಸ್ಮಾದ್ಗುರುವರಂ ಭಜೇತ್|| ಷಣ್ಮಾಸೇ ವ್ಯಾಪಿ ವರ್ಷೇ ವಾ ವರ್ಷೇ ವಾ ದ್ವಾದಶಾತ್ಮಕೇ| ಗುರೋರಾಲೋಕನಂ ಯಸ್ತು ನ ಕರೋತಿ ಸ ಪಾಪವಾನ್||' ಎಂಬುದೆ ಪ್ರಮಾಣವಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ.
--------------
ಸಿದ್ಧರಾಮೇಶ್ವರ
ಸುಳಿವ ಜಂಗಮ ಕಾಲಿಲ್ಲದೆ ಸುಳಿಯಬೇಕು, ಮಾಡುವ ಭಕ್ತ ಕೈಯಿಲ್ಲದೆ ಮಾಡಬೇಕು. ಸುಳಿವ ಜಂಗಮಕ್ಕೆ ಕಾಲಿದ್ದರೇನು ? ಅನ್ಯರ ಮನೆಯ ಹೊಗದಿದ್ದರೆ ಸಾಕು. ಮಾಡುವ ಭಕ್ತಂಗೆ ಕೈಯಿದ್ದರೇನು ? ಲಿಂಗಜಂಗಮಕ್ಕಲ್ಲದೆ ಮಾಡದಿದ್ದರೆ ಸಾಕು. ಜಂಗಮಸ್ಯಾಗಮೋ ನಾಸ್ತಿ ಭಕ್ತಸ್ಯ ಗೃಹಮಾಚರೇತ್ ಅನ್ಯಸ್ಯ ಚೇದ್ಗೃಹಂ ಯಾತಿ ಸದ್ಯೋ ಗೋಮಾಂಸಭಕ್ಷಣಂ ಇದು ಕಾರಣ, ಕೂಡಲಚೆನ್ನಸಂಗಯ್ಯನಲ್ಲಿ ಶರಣಸಂಬಂಧವಪೂರ್ವ.
--------------
ಚನ್ನಬಸವಣ್ಣ
ಗುರುಮುಖದಿಂದ ಕೊಂಬುದು ಶುದ್ಧಪ್ರಸಾದ. ಲಿಂಗಮುಖದಿಂದ ಕೊಂಬುದು ಸಿದ್ಧಪ್ರಸಾದ. ಜಂಗಮಮುಖದಿಂದ ಕೊಂಬುದು ಪ್ರಸಿದ್ಧಪ್ರಸಾದ. ಜ್ಞಾನಮುಖದಿಂದ ಕೊಂಬುದು ಮಹಾಪ್ರಸಾದ. ಈ ನಾಲ್ಕು ತೆರದಲ್ಲಿ ಕೊಂಬುವುದು ಪ್ರಸಾದವಲ್ಲದೆ ರಣದ ಬೀರರ ಹಾಂಗೆ ಬಾಚಿಸಿಕೊಂಡು ಕೊಂಬಷ್ಟ ಕೊಂಡು, ಬಿಡುವಷ್ಟ ಬಿಟ್ಟು ಸೂರೆಗೂಳಾಗಿ ಚೆಲ್ಲಿಯಾಡುವುದು ಇದಾವ ಪ್ರಸಾದ ಹೇಳ? ಅದೆಂತೆಂದೊಡೆ: ಅಣುಮಾತ್ರ ಪ್ರಸಾದಾನ್ನಂ ತ್ಯಕ್ತ್ವಾ ಭುಕ್ತಾನ್ನ ಕಿಲ್ಬಿಷಂ| ಸ ಪಾಪೀ ನರಕಂ ಯಾತಿ ತದ್ಗ ೃಹಂ ನರಕಾಲಯಂ|| ಎಂದುದಾಗಿ ಬಹು ಜನಂಗಳು ಕಾರಿದ ಕೂಳ ಶ್ವಾನ ಭುಂಜಿಸಿ ತನ್ನೊಡಲ ಹೊರೆದಂತಾಯಿತ್ತು ಕಾಣಾ ವಿಶ್ವಾಸವಿಲ್ಲದ ಪ್ರಸಾದ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ನೇಮಸ್ತನಿಂದ ಮಹಾಪಾಪಿ ಲೇಸು, ಅವನಿಂದ ಭೂಮಿಯ ಮೇಲೆ ಹುಟ್ಟಿದ ಸಮಸ್ತಪ್ರಾಣಿಯ ಕೊಲುವ ವ್ಯಾಧ ಲೇಸು. ಅವನಿಂದ ಅನಂತಕೋಟಿ ನರಕವನೈದುವರು, ಆ ನೇಮಸ್ತನೆಂಬ ಮಹಾಪಾಪಿಯ ಮುಖವ ನೋಡಿ ಅವನ ಒಡಗೂಡಿಕೊಂಡು ನಡೆದವರು; ಅದೆಂತೆಂದಡೆ: ನೇಮಸ್ತಯೋ ಮಹಾಪಾಪೀ ತೇನ ದರ್ಶಂತೇ [ಪಶ್ಯತಿರಿ]ಯೋನರಃ ¨sõ್ಞಕ್ತಿಕಂ ತತ್ವಪರ್ಯಂತಂ ನರಕಂ ಯಾತಿ ಸ ಧ್ರುವಂ ಇಂತೆಂದುದಾಗಿ_ಇದು ಕಾರಣ ಕೂಡಲಚೆನ್ನಸಂಗಯ್ಯಾ ನೇಮಸ್ತರಾದ ಪಾಪಿಗಳನೆನಗೆ ತೋರದಿರಯ್ಯಾ.
--------------
ಚನ್ನಬಸವಣ್ಣ
ಸೀಮೆ ನೇಮಂಗಳ ಹೊದ್ದದ ನಿಜವೀರಶೈವದೀಕ್ಷೆಯನು ಗುರು ತನ್ನ ಶಿಷ್ಯಂಗಿತ್ತು, ಮತ್ತೆ ಆ ಶಿಷ್ಯನ ನೇಮಸ್ಥನ ಮಾಡಿದಲ್ಲಿ, ಆ ನಿಜದೀಕ್ಷೆಗೆಟ್ಟು ಆ ಗುರುಶಿಷ್ಯರಿರ್ವರೂ ಪತಿತರಾಗಿ ಶ್ವಾನಯೋನಿಯಲ್ಲಿ ಶತಸಹಸ್ರವೇಳೆ ಬಂದು, ನರಕವಿಪ್ಪತ್ತೆಂಟುಕೋಟಿಯನೈದುವರು. ಅದೆಂತೆಂದಡೆ: ನೇಮಸ್ಥಂ ಚನ ದೀಕ್ಷಯಾದೀ ಶ್ವಾನಜನ್ಮಸು ಜಾಯತೇ ಅಷ್ಟವಿಂಶತಿಕೋಟ್ಯಸ್ತು ನರಕಂ ಯಾಂತಿ ಧ್ರುವಂ ಎಂದುದಾಗಿ, ನಿಜಗೆಟ್ಟು ಪತಿತರಾಗಿ ನರಕಕ್ಕಿಳಿವ ಪಾತಕರನೆನಗೆ ತೋರದಿರಾ ಕೂಡಲಚೆನ್ನಸಂಗಯ್ಯಾ.
--------------
ಚನ್ನಬಸವಣ್ಣ
ಇನ್ನಷ್ಟು ... -->