ಅಥವಾ

ಒಟ್ಟು 30 ಕಡೆಗಳಲ್ಲಿ , 11 ವಚನಕಾರರು , 28 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವ್ಯಾಸನುಸುರ್ದ ಸ್ಕಂದಪುರಾಣದಲ್ಲಿಯ ಶ್ರೀಶೈಲಕಲ್ಪ ನೋಳ್ಪುದಯ್ಯಾ. ಅಲ್ಲಿ ಸಿದ್ಧಸಾಧಕರ ಸನ್ನಿದ್ಥಿಯಿಂದರಿಯಬಹುದಯ್ಯಾ. ಮಾಡಿದನೊಬ್ಬ ಪೂರ್ವದಲ್ಲಿ ಗೋರಕ್ಷ ಮಾಡಿದನೊಬ್ಬ ಮತ್ಸೆ ್ಯೀಂದ್ರನಾಥ, ಮಾಡಿದರೆಮ್ಮ ವಂಶದ ಶ್ರೀಗುರುಶಾಂತದೇವರು. ಇದು ಕಾರಣ, ಯೋಗದ ಭೇದ ಯೋಗಿಗಳಂತರಂಗದಿಂದರಿತಡೆ ಯೋಗಸಿದ್ಧಿ ಸತ್ಯ ಸತ್ಯ, ಶ್ರೀಗುರು ತೋಂಟದಸಿದ್ಧಲಿಂಗೇಶ್ವರ.
--------------
ಸಿದ್ಧವೀರದೇಶಿಕೇಂದ್ರ
ಯೋಗವನರಿದೆನೆಂಬೆ, ಯೋಗವನರಿದೆನೆಂಬೆ ; ಯೋಗದ ನೆಲೆಯನಾರು ಬಲ್ಲರು? ಯೋಗದ ನೆಲೆಯ ಹೇಳಿಹೆ ಕೇಳಾ- ತಾತ್ಪರ್ಯಕರ್ಣಿಕೆಯ ಮಸ್ತಕದಲ್ಲಿದ್ದ ಕುಂಭದೊಳಗೆ ತೋರುತ್ತದ್ಞೆ; ಹಲವು ಬಿಂಬ ಹೋಗುತ್ತಿದೆ, ಹಲವು ರೂಪ ಒಪುತ್ತಿದೆ ; ಏಕ ಏಕವಾಗಿ ಆನಂದಸ್ಥಾನದಲ್ಲಿ ಅನಿಮಿಷವಾಗುತ್ತಿದೆ ; ಪೂರ್ವಾಪರ ಮಧ್ಯ ಶುದ್ಧ ಪಂಚಮವೆಂಬ ಸ್ಥಾನಂಗಳಲ್ಲಿ ಪ್ರವೇಶಿಸುತ್ತಿದೆ ತಾನು ತಾನೆಯಾಗಿ. ಅರಿಯಾ ಭೇದಂಗಳ- ಬಿಂದು ಶ್ವೇತ ಪೂರ್ವಶುದ್ಧ ಆನಂದ ಧವಳ ಅನಿಮಿಷ ಸಂಗಮ ಶುದ್ಧ ಸಿದ್ಧ ಪ್ರಸಿದ್ಧ ತತ್ವವೆಂಬ ಪರಮಸೀಮೆ ಮುಖಂಗಳಾಗಿ, ಅಜಲೋಕದಲ್ಲಿ ಅದ್ವಯ, ನೆನಹಿನ ಕೊನೆಯ ಮೊನೆಯಲ್ಲಿ ಒಪ್ಪಿ ತೋರುವ ಧವಳತೆಯ ಬೆಳಗಿನ ರಂಜನ ಪ್ರವಾಹ ಮಿಗಿಲಾಗಿ, `ತ್ವಂ' ಪದವಾಯಿತ್ತು, ಮೀರಿ `ತ್ವಮಸಿ'ಯಾಯಿತ್ತು ಕಪಿಲಸಿದ್ಧಮಲ್ಲಿಕಾರ್ಜುನನೆಂಬ ನಾಮವ ನುಂಗಿಲೀಯವಾಯಿತ್ತು.
--------------
ಸಿದ್ಧರಾಮೇಶ್ವರ
ಯೋಗದ ನೆಲೆಯನರಿದೆನೆಂಬವರಿಗೆ ಹೇಳಿಹೆವು ಕೇಳಿರೇ. ಪೃಥ್ವಿ, ಅಪ್ಪುಗಳೆರಡ ಆಧಾರಗೊಳಿಸಿ, ಅಗ್ನಿ ವಾಯುಗಳೆರಡ ಅಂಬರಸ್ಥಾನಕ್ಕೊಯ್ದು, ಆತ್ಮ ಆಕಾಶವೆರಡ ಅನುಭಾವ ಮುಖಕ್ಕೆ ತಂದು, ಮನದೆ ಅನುಮಾನವಳಿದು, ನೆನಹು ನಿಶ್ಚಲವಾಗಿ, ಒಳಗೆ ಜ್ಯೋರ್ತಿಲಿಂಗವ ನೋಡುತ್ತ, ಹೊರಗೆ ಎರಡು ಹುಬ್ಬಿನ ನಡುವೆ ಉಭಯ ಲೋಚನವಿರಿಸಿ, ಹಿಂದು ಮುಂದನೆಣಿಸದೆ ಸಂದೇಹವಿಲ್ಲದೆ ಖೇಚರಿಯನಾಚರಿಸಲು, ಲೋಚನ ಮೂರುಳ್ಳ ಶಿವ ತಾನಹನು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನಲ್ಲಿ ಆತನೇ ಶಿವಯೋಗಿ.
--------------
ಸ್ವತಂತ್ರ ಸಿದ್ಧಲಿಂಗ
ತನುಮುಖ ತಾನೆ ಎಂಬ ಯೋಗದ ಹೊಲಬನರಿದವರು ಅತ್ತಲೂ ಚರಿಸುವರು ಇತ್ತಲೂ ಚರಿಸುವರು ಪರಮಾರ್ಥವ ಮಿಂಚಿನ ರವೆ ರವೆಯಂತೆ ಅಪ್ಪುವರಡಗುವರಯ್ಯ ಎನ್ನ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಯೋಗದ ಹೊಲಬ ನಾನೆತ್ತ ಬಲ್ಲೆನಯ್ಯಾ? ಯೋಗ ಶಿವಶಕ್ತಿ ಸಂಪುಟವಾಗಿಪ್ಪುದಲ್ಲದೆ, ಶಿವಶಕ್ತಿವಿಯೋಗವಪ್ಪ ಯೋಗವಿಲ್ಲವಯ್ಯಾ. ಹೃದಯಕಮಲದಲಿ ಇಪ್ಪಾತ ನೀನೆಯಲ್ಲದೆ, ಎನಗೆ ಬೇರೆ ಸ್ವತಂತ್ರವಿಲ್ಲ ಕೇಳಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಎನ್ನ ತನುವೆ ಬಸವಣ್ಣ, ಎನ್ನಾತ್ಮವೆ ಮಡಿವಾಳಯ್ಯ, ಎನ್ನ ಪ್ರಾಣವೆ ಚೆನ್ನಬಸವಣ್ಣ, ಎನ್ನ ಇಂದ್ರಿಯಂಗಳೆ ಪ್ರಭುದೇವರು, ಎನ್ನ ವಿಷಯಂಗಳೆ ಮೋಳಿಗೆ ಮಾರಿತಂದೆ ಎನ್ನ ಪ್ರಕೃತಿಯೆ ಅಜಗಣ್ಣದೇವರು. ಎನ್ನ ಅಂಗಕರಣಂಗಳೆ ಅಸಂಖ್ಯಾತ ಮಹಾಗಣಂಗಳು. ಎನ್ನ ಮನವೆ ಮಹಾದೇವಿಯಕ್ಕ, ಎನ್ನ ಬುದ್ಧಿಯೆ ಮೋಳಿಗಯ್ಯನ ರಾಣಿ, ಎನ್ನ ಚಿತ್ತವೆ ನೀಲಲೋಚನೆಯಮ್ಮ. ಎನ್ನ ಅಹಂಕಾರವೆ ತಂಗಟೂರ ಮಾರಯ್ಯನ ರಾಣಿ. ಎನ್ನ ಅರುಹೆ ಅಕ್ಕನಾಗಾಯಕ್ಕ. ಎನ್ನ ಅರುಹಿನ ವಿಶ್ರಾಂತಿಯೆ ಮುಕ್ತಾಯಕ್ಕ. ಎನ್ನ ನೇತ್ರದ ದೃಕ್ಕೆ ಸೊಡ್ಡಳ ಬಾಚರಸರು. ಎನ್ನ ಪುಣ್ಯದ ಪುಂಜವೆ ಹಡಪದಪ್ಪಣ್ಣ. ಎನ್ನ ಕ್ಷುತ್ತು ಪಿಪಾಸೆಯೆ ಘಟ್ಟಿವಾಳಯ್ಯ. ಎನ್ನ ಶೋಕ ಮೋಹವೆ ಚಂದಿಮರಸರು. ಎನ್ನ ಜನನ ಮರಣವೆ ನಿಜಗುಣದೇವರು. ಎನ್ನ ಯೋಗದ ನಿಲುಕಡೆಯೆ ಸಿದ್ಧರಾಮೇಶ್ವರರು. ಎನ್ನ ಅಂಗಕರಣವೆ ಏಳ್ನೂರೆಪ್ಪತ್ತಮರಗಣಂಗಳು. ಇಂತಿವನರಿದೆನಾಗಿ ಬೋಳಬಸವೇಶ್ವರನ ಕೃಪೆಯಿಂದ ಸಿದ್ಧೇಶ್ವರನೆಂಬ ಪರುಷ ಸಾಧ್ಯವಾಯಿತ್ತಯ್ಯ. ಪರಂಜ್ಯೋತಿ ಮಹಾಲಿಂಗಗುರು ಸಿದ್ಧಲಿಂಗಪ್ರಭುವಿನಲ್ಲಿ ಅಂಗ ಮಿಥ್ಯಭಾವವನರಿಯದೆ ನಿಮ್ಮ ಕೃಪಾನಂದದೊಳಗೆ ಮುಳುಗಿರ್ದೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಗುಮ್ಮಳಾಪುರದ ಸಿದ್ಧಲಿಂಗ
ಅಗ್ನಿಯ ಸುಡುವಲ್ಲಿ ಉದಕವ ತೊಳೆವಲ್ಲಿ ವಾಯುವ ಮೆಟ್ಟಿ ಆಕಾಶವ ಹಿಡಿವಲ್ಲಿ ಯೋಗದ ಹೊಲಬ ನೀನೆತ್ತ ಬಲ್ಲೆ? ಕದಳಿಯ ಬನವ ನಿನ್ನಲ್ಲಿ ನೀನು ತಿಳಿದು ನೋಡು, ಮದ ಮತ್ಸರ ಬೇಡ. ಹೊದಕುಳಿಗೊಳಬೇಡ. ಗುಹೇಶ್ವರನೆಂಬ ಲಿಂಗವು ಕಲ್ಪಿತವಲ್ಲ ನಿಲ್ಲೊ.
--------------
ಅಲ್ಲಮಪ್ರಭುದೇವರು
ಅರಿದಡೆ ಸುಖವಿಲ್ಲ; ಮರದಡೆ ದುಃಖವಿಲ್ಲ ! ಸತ್ತಡೆ ಚೇಗೆಯಿಲ್ಲ; ಬದುಕಿದಡೆ ಆಗಿಲ್ಲವೆಂಬ ! ನಿರ್ಣಯದಲ್ಲಿ ನಿಶ್ಚಯಿಸಿ ನಿಲ್ಲದೆ ! ನಾನು ನೀನೆಂಬ ಉಭಯವಳಿದು ಕೂಡುವ ಯೋಗದ ಹೊಲಬನರಿಯದೆ ! ಬರಿಯ ಮರವೆಯ ಪ್ರೌಡಿsಕೆಯಲ್ಲಿ ಕೆಟ್ಟರಯ್ಯ ಗುಹೇಶ್ವರ.
--------------
ಅಲ್ಲಮಪ್ರಭುದೇವರು
ಯೋಗ ಶಿವಯೋಗವೆಂಬರು, ಯೋಗದ ಹೊಲಬನಾರು ಬಲ್ಲರಯ್ಯಾ ? ಹೃದಯಕಮಲ ಮಧ್ಯದಲ್ಲಿ ಭ್ರಮಿಸುವನ ಕಳೆದಲ್ಲದೆ ಯೋಗವೆಂತಪ್ಪುದೊ ? ಐವತ್ತೆರಡಕ್ಷರದ ಲಿಪಿಯ ಓದಿ ನೋಡಿ ತಿಳಿದಲ್ಲದೆ ಯೋಗವೆಂತಪ್ಪುದೊ ? ಆರುನೆಲೆಯ ಮೇಲಿಪ್ಪ ಮಣಿಮಾಡದೊಳಗೆ ಇರಬಲ್ಲಡೆ ಅದು ಯೋಗ ! `ಸ್ಯೋಹಂ' ಎಂಬಲ್ಲಿ ಸುಳುಹಡಗಿ ಮನ ನಷ್ಟವಾಗಿರಬಲ್ಲ ಕಾರಣ, ಗುಹೇಶ್ವರಲಿಂಗದಲ್ಲಿ ನೀನು ಸ್ವತಂತ್ರಧೀರನೆಂಬುದು ಕಾಣಬಂದಿತ್ತು ನೋಡಾ ಸಿದ್ಧರಾಮಯ್ಯಾ.
--------------
ಅಲ್ಲಮಪ್ರಭುದೇವರು
ಆಗಮದ ಅನು ನಿಯಮದ ಸಂದೇಹ ಯೋಗದ ಭ್ರಾಂತು ಕ್ರೀಯ ಸಂಕಲ್ಪ ನಷ್ಟದ ಚಿಂತೆ ಈ ಪಂಚಮಹಾಪಾತಕವುಳ್ಳಾತ ಭಕ್ತಿಯ ನಿಯಮಿಗನಲ್ಲ. ಚಿಂತೆ, ಸಂಕಲ್ಪ, ಭ್ರಾಂತು, ಸಂದೇಹ, ಅನುವಿನ ಗುಣವಳಿದು ತಾನಾದಡೆ, ತಾನೆ ನಿತ್ಯ ಕಾಣಾ, ಕಪಿಲಸಿದ್ಧಮಲ್ಲಿನಾಥಾ.
--------------
ಸಿದ್ಧರಾಮೇಶ್ವರ
ಯೋಗದ ಹೊಲಬ ಸಾಧಿಸಬಾರದು. ಯೋಗವೆಂಟರ ಹೊಲಬಲ್ಲ. ಯೋಗ ಒಂಬತ್ತರ ನಿಲವಲ್ಲ. ಯೋಗವಾರರ ಪರಿಯಲ್ಲ. ಧರೆಯ ಮೇಲಣ ಅಗ್ನಿ ಮುಗಿಲ ಮುಟ್ಟದಿಪ್ಪಡೆ ಯೋಗ. ಮನದ ಕಂಗಳ ಬೆಳಗು ಸಸಿಯ ಮುಟ್ಟಿದೆನೆನ್ನದೆ ಘನವ ಮನವನೊಳಕೊಂಡಡದು ಯೋಗ. ವನಿತೆಯರರಿವರನು ಪತಿಯೊಮ್ಮೆ ಕೂಡಿ ತಳುವಳಿದಿರಬಲ್ಲಡದು ಯೋಗ. ಘನಮಹಿಮ ಪ್ರಭುವಿನ ಸಮರಸ ಯೋಗವ ಕಂಡು ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ಎಂದನು.
--------------
ಘಟ್ಟಿವಾಳಯ್ಯ
ವೀರಧಾರುಣಿಯೊಳಗೆ ನಾರಿ ಶೃಂಗಾರವ ಮಾಡಿ ಈರೇಳು ಭುವನವ ಅಮಳೋಕ್ಯವ ಮಾಡಿ ಬಿಂದು ಶಕ್ತಿಯ ಭೇದ ಸಂದ ಯೋಗದ ಸುಖವ ತಂದು ಮೂರ್ತಿಗೊಳಿಸಿದವರಾರು ? ಒಂದೆರಡರ ನುಡಿಯ ಮತ್ತೊಂದು ಗ್ರಹಿಸಿತ್ತ ಕಂಡೆ. ಬಿಂದುವಿನ ರಸದ ಪರೀಕ್ಷೆಯ ಭೇದವ ಚಂದ್ರಕಾಂತದ ಗಿರಿಗೆ(ಯ?) ಅರುಣ ಚಂದ್ರರೊಡನೆ ಇಂಬಿನಲ್ಲಿಪ್ಪ ಪರಿಯ ನೋಡಾ ! ಅಂಗೈಯ ತಳದೊಳು ಮೊಲೆ ಕಂಗಳಲ್ಲಿ ಕರಸನ್ನೆ ಇಂಬಿನಲ್ಲಿ ನೆರೆವ ಸುಖ ಒಂದೆ ! ಆದಿ ಅನಾದಿಯ ಪ್ರತಿಬಿಂಬ ಇಂದೆನಗೆ ತೋರಿತ್ತು. ಗುಹೇಶ್ವರನ ಶರಣ ಚೆನ್ನಬಸವಣ್ಣಂಗೆ ಶರಣೆನುತಿರ್ದೆನು.
--------------
ಅಲ್ಲಮಪ್ರಭುದೇವರು
ಅಂತರಾತ್ಮ ಪರಮಾತ್ಮ ಭೂತಾತ್ಮವೊಳಗಾದ ಆಧ್ಯಾತ್ಮಿಕೇಳಾ: ನೀನು ಯೋಗದ ಪ್ರಮಾಣ ಬಲ್ಲ ಅಯ್ಯನು ಶ್ರೋತ್ರೇಯ ಮನೆಯಲ್ಲಿ, ನೇತ್ರೆಯ ಜಿಹ್ವೆಯಲ್ಲಿ ಆನಂದ ಪಾತ್ರೆಯಲ್ಲಿ ಸಂಗತಿ ಸದಾಚಾರ ನಿಷ್ಕಳ ಪರಮಸೀಮೆ ಎಂಬ ಪಾತ್ರೆಯಲ್ಲಿ ಪಂಚಬ್ರಹ್ಮವನೊಡಗೂಡಿದ ಪಂಚಸ್ತ್ರೀಯರಿಗೆ ಪ್ರಸಾದವನಿಕ್ಕುವಾಗ ಪ್ರಸನ್ನತೆಯೆಂಬ ಪ್ರಸಾದವನನುಗ್ರಹಿಸಲರಿಯದೆ ಇದ್ದ ಕಾರಣ ಅಂತರಿಸಿದೆಯಯ್ಯಾ ಆದ್ಯಂತಪ್ರಸಾದವ ಕೊಂಡ ಕಾರಣದಲ್ಲಿ ಆನು ನೀನಾದೆ; ಕಪಿಲಸಿದ್ಧಮಲ್ಲಿಕಾರ್ಜುನನ ಕೂಡಿ ಸಂದಳಿದೆ.
--------------
ಸಿದ್ಧರಾಮೇಶ್ವರ
ಭಕ್ತಿಯ ಬೆಳಸಿ ಹೇಳಿದೆನಲ್ಲದೆ, ಭಕ್ತಿಯ ಮಾಡಿ ಬೆಳೆಯಲಿಲ್ಲ ನಾನು. ಭಕ್ತಿಯ ಶಕ್ತಿ ಬಸವಣ್ಣಂಗಾಯಿತ್ತು. ಜÐಶನದ ಶಕ್ತಿ ಚೆನ್ನಬಸವಣ್ಣಂಗಾಯಿತ್ತು. ಯೋಗದ ಶಕ್ತಿ ಚೆನ್ನಬಸವಣ್ಣಂಗಾಯಿತ್ತು, ನಿಮ್ಮರಮನೆಯಲ್ಲಿ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಮುಕುರ ಬಿಂಬದಂತೆ, ಉರಿ ದ್ರವ್ಯದಂತೆ ಧರೆ ಸಲಿಲದಂತೆ, ಕುರುಹು ಸಂಬಂಧ ಯೋಗದ ತೆರದಂತೆ ಅಂಗಲಿಂಗಸಂಬಂಧವಾಗಬೇಕು, ಏಣಾಂಕಧರ ಸೋಮೇಶ್ವರಲಿಂಗದಲ್ಲಿ.
--------------
ಬಿಬ್ಬಿ ಬಾಚಯ್ಯ
ಇನ್ನಷ್ಟು ... -->