ಅಥವಾ

ಒಟ್ಟು 20 ಕಡೆಗಳಲ್ಲಿ , 9 ವಚನಕಾರರು , 19 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುದಸ್ಥಾನದಲ್ಲಿ ಆಧಾರಚಕ್ರ, ಅಲ್ಲಿಗೆ ಪೃಥ್ವಿಯೆಂಬ ಮಹಾಭೂತ, ಸದ್ಯೋಜಾತವಕ್ತ್ರ, ಬ್ರಹ್ಮ ಪೂಜಾರಿ, ಸುವರ್ಣದ ತೇಜ, ಬಾಲರವಿಕೋಟಿ ಪ್ರಕಾಶ, ನಾಲ್ಕೆಸಳಿನ ತಾವರೆಯ ಮಧ್ಯದಲ್ಲಿ ಸುವರ್ಣಮಯಲಿಂಗ - ಅದು ಆಚಾರಲಿಂಗ, ಅದಕ್ಕೆ ಬೀಜಾಕ್ಷಾರ ಓಂ ನಾಂ ನಾಂ ನಾಂ ಎಂಬ ನಾದಘೋಷ. ಎಸಳು ನಾಲ್ಕರಲ್ಲಿ ವ, ಶ, ಷ, ಸ ಎಂಬ ನಾಲ್ಕಕ್ಷರ. ಅದು ದೇವರಿಗೂ ತಮಗೂ ಪಶ್ಚಿಮಮುಖ- ಸದ್ಯೋಜಾತ ವಕ್ತ್ರ, ಆಧಾರಚಕ್ರ. ಲಿಂಗಸ್ಥಾನದಲ್ಲಿ ಸ್ವಾದಿಷ್ಠಾನಚಕ್ರ, ಅಲ್ಲಿಗೆ ಅಪ್ಪುವೆಂಬ ಮಹಾಭೂತ, ವಾಮದೇವವಕ್ತ್ರ, ವಿಷ್ಣು ಪೂಜಾರಿ, ನೀಲದ ತೇಜ, ಬಾಲದ್ವಿಕೋಟಿ ಸೂರ್ಯಪ್ರಕಾಶ, ಅರೆಸಳಿನ ತಾವರೆಯ ಮಧ್ಯದಲ್ಲಿ ಗೋಕ್ಷೀರದ ಹಾಗೆ ಧವಳ ವರ್ಣದ ಲಿಂಗ - ಅದು ಗುರುಲಿಂಗ; ಅದಕ್ಕೆ ಬೀಜಾಕ್ಷರ ಓಂ ಮಾಂ ಮಾಂ ಮಾಂ ಎಂಬ ನಾದಘೋಷ. ಎಸಳು ಆರರಲ್ಲಿ ಬ ಭ ಮ ಯ ರ ಲ ಎಂಬ ಷಡಕ್ಷರ ಅದು ದೇವರಿಗೂ ತಮಗೂ ಉತ್ತರಮುಖ-ವಾಮದೇವವಕ್ತ್ರ, ಸ್ವಾದಿಷ್ಠಾನಚಕ್ರ. ನಾಭಿಸ್ಥಾನದಲ್ಲಿ ಮಣಿಪೂರಕಚಕ್ರ, ಅಲ್ಲಿಗೆ ಅಗ್ನಿಯೆಂಬ ಮಹಾಭೂತ, ಅಘೋರವಕ್ತ್ರ ರುದ್ರ ಪೂಜಾರಿ, ಮಾಣಿಕ್ಯತೇಜ, ಬಾಲತ್ರಿಕೋಟಿಸೂರ್ಯಪ್ರಕಾಶ, ಹತ್ತೆಸಳಿನ ತಾವರೆಯ ಮಧ್ಯದಲ್ಲಿ ಮಾಣಿಕ್ಯವರ್ಣದ ಲಿಂಗ-ಅದು ಶಿವಲಿಂಗ, ಅದಕ್ಕೆ ಬೀಜಾಕ್ಷರ ಓಂ ಶಿಂ ಶಿಂ ಶಿಂ ಎಂಬ ನಾದಘೋಷ. ಎಸಳು ಹತ್ತರಲ್ಲಿ ಡ, ಢ, ಣ, ತ, ಥ, ದ, ಧ, ನ, ಪ, ಫ ಎಂಬ ದಶಾಕ್ಷರ. ಅದು ದೇವರಿಗೂ ತಮಗೂ ದಕ್ಷಿಣಮುಖ - ಅಘೋರವಕ್ತ್ರ, ಮಣಿಪೂರಕಚಕ್ರ. ಹೃದಯ ಸ್ಥಾನದಲ್ಲಿ ಅನಾಹತಚಕ್ರ, ಅಲ್ಲಿಗೆ ವಾಯುವೆಂಬ ಮಹಾಭೂತ, ತತ್ಪುರುಷವಕ್ತ್ರ, ಈಶ್ವರ ಪೂಜಾರಿ ಕಪೋತವರ್ಣದ ತೇಜ, ಬಾಲಚತುಷ್ಕೋಟಿ ಸೂರ್ಯಪ್ರಕಾಶ, ಹನ್ನೆರಡೆಸಳಿನ ತಾವರೆಯ ಮಧ್ಯದಲ್ಲಿ ಶುದ್ಧ ಪಚ್ಚವರ್ಣದಲಿಂಗ-ಅದು ಜಂಗಮಲಿಂಗ, ಅದಕ್ಕೆ ಬೀಜಾಕ್ಷರ ಓಂ ವಾಂ ವಾಂ ವಾಂ ಎಂಬ ನಾದಘೋಷ. ಎಸಳು ಹನ್ನೆರಡರಲ್ಲಿ ಕ ಖ ಗ ಘ ಙ ಚ ಛ ಜ ಝ ಞ ಟಂಠ ಎಂಬ ದ್ವಾದಶಾಕ್ಷರ ಅದು ದೇವರಿಗೂ ತಮಗೂ ಪೂರ್ವಮುಖ-ತತ್ಪುರುಷ ವಕ್ತ್ರ, ಅನಾಹತ ಚಕ್ರ. ಕÀಠಸ್ಥಾನದಲ್ಲಿ ವಿಶುದ್ಧಿಚಕ್ರ, ಅಲ್ಲಿಗೆ ಆಕಾಶವೆಂಬ ಮಹಾಭೂತ, ಈಶಾನವಕ್ತ್ರ, ಸದಾಶಿವ ಪೂಜಾರಿ, ವಿದ್ಯುಲ್ಲತೆಯ ತೇಜ, ಬಾಲಪಂಚಕೋಟಿ ಸೂರ್ಯಪ್ರಕಾಶ, ಹದಿನಾರೆಸಳಿನ ತಾವರೆಯ ಮಧ್ಯದಲ್ಲಿ ಅನಂತಕೋಟಿ ಮಿಂಚುಗಳ ವರ್ಣದ ಲಿಂಗ_ ಅದು ಪ್ರಸಾದಲಿಂಗ, [ಓಂ ಯಾಂ ಯಾಂ ಯಾಂ ಎಂಬ ನಾದಘೋಷ]. ಎಸಳು ಹದಿನಾರರಲ್ಲಿ ಅ ಆ ಇ ಈ ಉ ಊ ಋ Iೂ ಏ ಐ ಓ ಔ ಅಂ ಅಃ ಎಂಬ ಷೋಡಶಾಕ್ಷರ. ಅದು ದೇವರಿಗೂ ತಮಗೂ ಊಧ್ರ್ವಮುಖ_ ಈಶಾನವಕ್ತ್ರ, ವಿಶುದ್ಧಿಚಕ್ರ. ಭ್ರೂಮಧ್ಯದಲ್ಲಿ ಆಜ್ಞಾಚಕ್ರ, ಅಲ್ಲಿಗೆ ಮನವೆಂಬ ಮಹಾಭೂತ, ಶ್ರೀಗುರುವೆ ವಕ್ತ್ರ ಮಾಹೇಶ್ವರ ಪೂಜಾರಿ, ಜ್ಯೋತಿರ್ವರ್ಣದ ತೇಜ. ಬಾಲಷಟ್ಕೋಟಿ ಸೂರ್ಯಪ್ರಕಾಶ ಎರಡೆಸಳಿನ ತಾವರೆಯ ಮಧ್ಯದಲ್ಲಿ ಶ್ರೀಗುರುವಿನ ಶ್ರೀಪಾದದ ವರ್ಣದ ಲಿಂಗ ಎಡಗಡೆಯ ಪಾದ ಕೆಂಪು ವರ್ಣ, ಬಲಗಡೆಯ ಪಾದ ಶ್ವೇತವರ್ಣ-ಅದು ಮಹಾಲಿಂಗ. ಅದಕ್ಕೆ ಬೀಜಾಕ್ಷರ `ಓಂಕಾರನಾದ ಘೋಷ. ಎಸಳೆರಡರಲ್ಲಿ ಅಕ್ಷರ ಹಂ ಸಂ ಎಂಬ [ಎರಡಕ್ಷರ] ಅದು ದೇವರಿಗೂ ತನಗೂ ಗಂಭೀರ ಮುಖ-ಶ್ರೀಗುರುವಕ್ತ್ರ, ಆಜ್ಞಾಚಕ್ರ. ಅಲ್ಲಿಂದತ್ತ ಬ್ರಹ್ಮರಂಧ್ರದಲ್ಲಿ ಬ್ರಹ್ಮಚಕ್ರ ಅಲ್ಲಿಗೆ ಚಂದ್ರನೆಂಬ ಮಹಾಭೂತ, ಲಿಂಗವಕ್ತ್ರ ಪರಮೇಶ್ವರ ಪೂಜಾರಿ, ಮಹಾಜ್ಯೋತಿರ್ವರ್ಣದ ತೇಜ, ಬಾಲ ಅನಂತಕೋಟಿಸೂರ್ಯಪ್ರಕಾಶ ಒಂದುನೂರ ಎಂಟು ಸಾವಿರೆಸಳಿನ ತಾವರೆಯ ಮಧ್ಯದಲ್ಲಿ ಮಹಾಜ್ಯೋತಿರ್ವರ್ಣದ ಲಿಂಗ. ಅದು ನಿರಾಮಯ ಲಿಂಗ, ಅದಕ್ಕೆ ಬೀಜಾಕ್ಷರ ಪ್ರಣವ ನಾದ ಘೋಷ, ಎಸಳೊಂದುನೂರ ಎಂಟು ಸಾವಿರದಲ್ಲಿ, ಒಂದನೂರ ಎಂಟು ಸಾವಿರ ಅಕ್ಷರ_ ಪ್ರೇತಾಸನ ವಿಶ್ವತೋಮುಖೋ ಬ್ರಹ್ಮಚಕ್ರ. ವಿಶ್ವತಶ್ಚಕ್ಷುರುತ ವಿಶ್ವತೋ ಮುಖೋ ವಿಶ್ವತೋ ಬಾಹುರುತ ವಿಶ್ವತಃ ಪಾತ್ ಸಂ ಬಾಹ್ಯಭ್ಯಾಂ ಧಮತಿ ಸಂಪತತ್ರೈ ದ್ರ್ಯಾವಾ ಭೂಮೀ ಜನಯನ್ ದೇವ ಏಕಃ ಇಂತೀ ಗುರುವಿನ ಬೆಳಗು ವಿಶ್ವವನ್ನಪಹರಿಸಿ, ತಾನು ತಾನೆ ಸೋಹಂ ಪ್ರಕಾಶ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಪಲ್ಲ :ಬಂಧನ ಸಂಸಾರದಂದುಗದ ದಾಳಿಯಲ್ಲಿ ನೊಂದು ಬೆಂದೆನೊ ಎನ್ನ ಹುಯ್ಲು ತಂಬಿಸು ಗುರುವೆ ಭವಹರ ನಿತ್ಯನಿರ್ಮಳಾತ್ಮಕ ಶಂಭುವೆ. ಪದ :ಹಲವು ಜನ್ಮದಿ ಹುಟ್ಟಿ ಹಲವಾಹಾರವನುಂಡು ಹಲವು ಭೂಮಿಯ ಮೆಟ್ಟಿ ಹಲವು ಕರ್ಮವ ಕಂಡು ಹಲವು ಭವಕೀಡಾಗಿ ಹಲವು ಹಂಬಲಿಸುತಿರುವ ಹೊಲೆಜನ್ಮ ಸಂಸಾರ ಮಾಯಾರಕ್ಕಸಿ ತುಡುರೆ ನಿಲ್ಲಲಾರದಲಿ ನಿಮ್ಮ ಮರೆಹೊಕ್ಕೆ ಎನ್ನ ಕೊಡದೆ ಗೆಲಿದುಕೊ ದುರಿತಹರ ಕರುಣಾಳು ಪರಮಗುರುವೆ. | 1 | ಸಟೆ ಠಕ್ಕು ಠೌಳಿ ಅಟಮಟದ ಬಂಧನದ ಕುಟಿಲಸಂಸಾರಸಾಗರದ ತೊರೆನೆರೆಗಳೊಳು ಪುಟನೆಗೆದು ತಲೆ ಮುಣುಗುತಲಿರುವನ ಕಂಡು ನಿಟಿಲಾಕ್ಷ ಕೃಪೆಯೆಂಬ ಹಡಗವನು ತಂದೊಲಿ ತಟಕೆನ್ನನೆಳೆದು ತಗೆದೀಗ ಇನಿತಾತ್ಮ ಘಟದೊಳಗೆ ಜ್ಞಾನಜ್ಯೋತಿಯ ತೀವು ಪರಮಗುರುವೆ. | 2 | ರಸವಿಷಯ ಮೋಹನದ ಕೂಪಜಲದೊಳು ಮುಳುಗಿ ದೆಸೆದೆಸೆಗೆ ಚಾಲಿವರಿವನ ಕಂಡು ಬೇಗದಲಿ ವಿಷಕಂಠ ದುರಿತಸಂಹರ ಕರುಣಾಕರ ತೊಟ್ಟಿಲಿಗೆ ಎಸೆವ ಹಗ್ಗವ ಕಟ್ಟಿ ಎಳೆದು ತಗೆಯೆನ್ನ ರಂ ಬಿಸುತ ಸಂತೈಸಿ ದುಃಖದಲ್ಲಿ ಭೋರ್ಗರೆದಳುವ ಶಿಶುವ ಬೋಳೈಸುವಂದದಲೆನ್ನ ಬೋಳೈಸು ಅಸಮಾಕ್ಷ ಪರಮಗುರುವೆ.| 3 | ತೆರಣಿಯ ಹುಳು ನೂಲು ಸುತ್ತಿಕೊಂಡು ಎಸೆವ ತೆರದಿ ಈ ಸಂಸಾರ ಸುಖದುಃಖ ಎನ್ನನು ಸುತ್ತಿ ಪರಿಭವಕ್ಕೆ ಗುರಿಯಾಗಿ ಯೋನಿಯಂತ್ರದೆ ತಿರುಗಿಯೆ ಬರುತಲಿರ್ದೆನು ಘೋರ ಅರಣ್ಯದೊಳು ಸುತ್ತಿ ಹರಹರ ನಿಮ್ಮ ಸ್ಮರಣೆಯ ಮರೆದ ಕಾರಣದಿ ದುರಿತನ್ಯಾಯದ ಬಂಧನಕೆ ಗುರಿಯಾಗಿದ್ದೆನಯ್ಯಾ ಶಿವನೆ. | 4 | ಮಾಯಾಸಂಸಾರಸರ್ಪನ ವಿಷವು ತಲೆಗೇರಿ ನೋಯುತಿದ್ದೆನು ಹಲವುವಿಧದಾಸೆಪಾಶದಲಿ ಬೇಯುವವನ ಕಂಡು ನೀ ಬೇಗಲೊಯಿದ್ಯವ ಮಾಡಿಯೆ ಶವವನುಳುವಿಕೋ ಭವರೋಗವೈದ್ಯ ನಿತ್ಯ ಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭು ನೀವಲ್ಲದೆನಗನ್ಯವಿಲ್ಲ ಕಾಯೋ ಕಾಯೋ ದೇವಾ. | 5 |
--------------
ಹೇಮಗಲ್ಲ ಹಂಪ
ಮರಲ್ದುಂ ಬ ವಾಙ್ಮಯೀ ಭ ಜಯೆ ಮ ಸುಮುಖಿ ಯ ಈಶ್ವರಿ ರ ರೇವತಿ ಲ ಮಾಧವಿ ಇಂತೀ ಮಹಾಲಿಂಗದ ಶಕ್ತಿಯಧಃಕಂಜಸಂಜ್ಞಿತವಾದ ಸ್ವಾದ್ಥಿಷ್ಠಾನಚಕ್ರದ ಷಟ್ಕೋಷ್ಠದಳ ನ್ಯಸ್ತ ಷಡ್ರುದ್ರಶಕ್ತಿಯರಂ ನಿರವಿಸಿದೆಯಯ್ಯಾ, ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಹೋಗುವ ಬನ್ನಿರಯ್ಯ ; ಶಕ್ತಿಪಾತವಾದ ಶಿವಯೋಗೀಶ್ವರರು ಶಿವಭಕ್ತರು ಹೋಗುವ ಬನ್ನಿರಯ್ಯ. ಸುಕ್ಷೇತ್ರದಲ್ಲಿರ್ಪ ಮಹಲಿಂಗದರುಶನಕೆ ಹೋಗುವ ಬನ್ನಿರಯ್ಯ. ಜೀವಸಂಚಾರವೆಂಬ ಪ್ರಾಕೃತವೆನಿಸುವ ಅಧೋಕುಂಡಲಿಸ್ವರೂಪಮಾದ ಅಹಂ ಎಂಬ ಹೆಬ್ಬಟ್ಟೆಯಂ ಬಿಟ್ಟು, ಸಜ್ಜೀವವೆಂಬ ವೈಕೃತವೆನಿಸುವ ಮಧ್ಯಕುಂಡಲಿಸ್ವರೂಪಮಾದ ಸೋಹಮೆಂಬ ಸಣ್ಣಬಟ್ಟೆಯ ಹಿಡಿದು ಹೋಗುವ ಬನ್ನಿರಯ್ಯ ಮಹಲಿಂಗದರುಶನಕೆ. ಕೇವಲ ಶಿವಯೋಗವೆಂಬ ಏಕವೆನಿಸುವ ಊಧ್ರ್ವಕುಂಡಲಿಸ್ವರೂಪಮಾದ ಓಂ ಎಂಬ ನುಸುಳುಗಂಡಿಯಂ ನುಸಿದು ಹೋಗುವ ಬನ್ನಿರಯ್ಯ ಮಹಲಿಂಗದರುಶನಕೆ. ದ್ವಯಮಂಡಲವ ಭ್ರೂಮಧ್ಯವೆಂಬ ಮಹಾಮೇರುವ ಮಧ್ಯದಲ್ಲಿ ಏಕಮಂಡಲಾಕಾರ ಮಾಡಿ, ಆ ಕಮಲಮಧ್ಯದಲ್ಲಿ ಮೂರ್ತಿಗೊಂಡಿಪ್ಪ ಮಹಾಲಿಂಗದಲ್ಲಿ ಜೀವಪರಮರಿಬ್ಬರನೇಕಾರ್ಥವಂ ಮಾಡಿ, ಶಾಂಭವೀಮುದ್ರಾನುಸಂಧಾನದಿಂದೆ ಅಧೋಮುಖಕಮಲವೆಲ್ಲ ಊಧ್ರ್ವಮುಖವಾಗಿ, ಆ ಮಹಾಲಿಂಗವ ನೋಡುತಿರಲು ಆ ಕಮಲಸೂತ್ರವಿಡಿದಿಹ ಷಡಾಧಾರಚಕ್ರಂಗಳ ಊಧ್ರ್ವಮುಖವಾಗಿ ಆ ಕಮಲದಲ್ಲಿ ಅಡಗಿ, ಆ ಕಮಲದ ಎಸಳು ಐವತ್ತೆರಡಾಗಿ ಎಸೆವುತಿರ್ಪವು. ಪರಿಪೂರ್ಣ ಜ್ಞಾನದೃಷ್ಟಿಯಿಂ ಆ ಮಹಾಲಿಂಗಮಂ ನಿರೀಕ್ಷಿಸಲು ಆ ಕಮಲದಲ್ಲಿ ಮಹಾಲಿಂಗಸ್ವರೂಪಮಾಗಿ ಸಕಲ ಕರಣೇಂದ್ರಿಯಂಗಳು ಆ ಮಹಾಲಿಂಗದಲ್ಲಿಯೆ ಅಡಗಿ, ಸುನಾದಬ್ರಹ್ಮವೆಂಬ ಇಷ್ಟವೆ ಮಹಾಲಿಂಗವೆಂದರಿದು ನೋಡುತ್ತಿರಲು, ಜ್ಯೋತಿರ್ಮಯವಾಗಿ ಕಾಣಿಸುತಿಪ್ಪುದು. ಅದೇ ಜೀವಪರಮರೈಕ್ಯವು ; ಅದೇ ಲಿಂಗಾಂಗಸಂಬಂಧವು. ಆ ಮಹಾಲಿಂಗದ ಕಿರಣಂಗಳೆ ಕರಣಂಗಳಾಗಿ ಆ ಕಮಲವು ಅಧೋಮುಖವಾಗಿ ಆ ಮಹಾಲಿಂಗವು ತನ್ನ ನಿಜನಿವಾಸವೆನಿಸುವ `ಅಂತರೇಣ ತಾಲುಕೇ' ಎಂಬ ಶ್ರುತಿ ಪ್ರಮಾಣದಿ ತಾಲುಮೂಲದ್ವಾದಶಾಂತವೆಂಬ ಬ್ರಹ್ಮರಂಧ್ರದ ಮಧ್ಯದಲ್ಲಿ ಪ್ರಕಾಶಿಸುತ್ತಿರ್ಪುದೊಂದು ಶಿವಚಕ್ರವು. ಆ ಶಿವಚಕ್ರವೆ ಶಿವಲೋಕವೆನಿಸುವುದು. ಆ ಶಿವಲೋಕವೆ ಶಾಂಭವಲೋಕವೆನಿಸುವುದು. ಶಾಂಭವಲೋಕವೆ ಶಾಂಭವಚಕ್ರವೆನಿಸುವುದು. ಆ ಶಾಂಭವಚಕ್ರದಲ್ಲಿ ಆಧಾರವಾದಿ ಪಶ್ಚಿಮಾಂತ್ಯವಾದ ನವಚಕ್ರಂಗಳು ಸಂಬಂಧವಾಗಿರುತಿರ್ಪವು. ಅದು ಹೇಗೆಂದೊಡೆ ; ಆ ಶಾಂಭವಚಕ್ರಮಧ್ಯದ ಚತುರ್ದಳಾಗ್ರದಲ್ಲಿ ಅಗ್ನಿಮಂಡಲದಲ್ಲಿ ಅಷ್ಟದಳ ಇರ್ಪುವು. ಆ ಅಷ್ಟದಳ ಚತುರ್ದಳದಲ್ಲಿ `ವಶಷಸ' ಎಂಬ ನಾಲ್ಕಕ್ಷರಯುಕ್ತವಾದ ಆಧಾರಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿ `ನ' ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ತಾರಕಾಕೃತಿಯಲ್ಲಿ ಸಂಬಂಧವಾಗಿರ್ಪುದು. ಆ ಅಗ್ನಿಮಂಡಲದ ಚತುರ್ದಳದ ಈಶಾನ್ಯ ದಳದಲ್ಲಿ `ಬ ಭ ಮ ಯ ರ ಲ' ಎಂಬ ಆರಕ್ಷರಯುಕ್ತವಾದ ಸ್ವಾದ್ಥಿಷ್ಠಾನಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ಮ'ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ದಂಡಕಾಕೃತಿಯಲ್ಲಿ ಸಂಬಂಧವಾಗಿರ್ಪುದು. ಆ ಅಷ್ಟದಳಾಗ್ರದಲ್ಲಿ ಸೂರ್ಯಮಂಡಲವಿರ್ಪುದು. ಆ ಸೂರ್ಯಮಂಡಲದಲ್ಲಿ `ಡಢಣ ತಥದಧನ ಪಫ' ಎಂಬ ದಶಾಕ್ಷರಯುಕ್ತವಾದ ಮಣಿಪೂರಕಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ಶಿ'ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ಕುಂಡಲಾಕೃತಿಯಲ್ಲಿ ಸಂಬಂಧವಾಗಿರ್ಪುದು. `ಕಖಗಘಙ ಚಛಜಝಞ ಟಠ' ಎಂಬ ದ್ವಾದಶಾಕ್ಷರಯುಕ್ತವಾದ ಅನಾಹತಚಕ್ರವು ಸೂರ್ಯಮಂಡಲದಲ್ಲಿ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ವ'ಕಾರವು ಆ ಮಹಾಲಿಂಗಸ್ವರೂಪವಾದಪ್ರಣವದ ಅರ್ಧಚಂದ್ರಾಕೃತಿಯಲ್ಲಿ ಸಂಬಂಧವಾಗಿರ್ಪುದು. ಆ ಅಷ್ಟದಳದಮಧ್ಯದಲ್ಲಿ ಚಂದ್ರಮಂಡಲವಿರ್ಪುದು. ಆ ಚಂದ್ರಮಂಡಲದಲ್ಲಿ- `ಅ ಆ ಇ ಈ ಉ ಊ ಋ Iೂ ಲೃ ಲೂೃ ಏ ಐ ಓ ಔ ಅಂ ಅಃ' ಎಂಬ ಷೋಡಶಾಕ್ಷರಯುಕ್ತವಾದ ವಿಶುದ್ಧಿಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ಯ'ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ದರ್ಪಣಾಕೃತಿಯಲ್ಲಿ ಸಂಬಂಧವಾಗಿರ್ಪುದು. ಆ ಮಹಾಲಿಂಗಕ್ಕೆ ಪೀಠಮಾಗಿರ್ದ ಬಿಂದುಯುಕ್ತಮಾದ ಪ್ರಣವವು ಆ ಮಹಾಲಿಂಗದ ಮುಂದಿರ್ದ `ಹಂ ಳಂ ಹಂ ಕ್ಷಂ' ಎಂಬ ಚುತವರ್ಣಾಕ್ಷರಯುಕ್ತವಾದ ಆಜ್ಞಾಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ ಓಂಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ಜ್ಯೋತಿರಾಕೃತಿಯಲ್ಲಿ ಸಂಬಂಧವಾಗಿರ್ಪುದು. ಚತುರ್ದಳವು ತ್ರಿದಳದಲ್ಲಿ ಕ್ಷ ಉ ಸ ಎಂಬ ತ್ರಯಕ್ಷರಯುಕ್ತವಾದ ಶಿಖಾಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿ `ಕ್ಷ' ಕಾರವು ಆ ಮಹಾಲಿಂಗಸ್ವರೂಪವಾದ ಕುಂಡಲಾಕೃತಿ ಅರ್ಧಚಂದ್ರಾಕೃತಿಗಳಲ್ಲಿ ಸಂಬಂಧವಾಗಿರ್ಪುದು. ಆ ಚತುರ್ದಳದ ಮಧ್ಯದಲ್ಲಿ ಬಟುವೆ ಏಕದಳವೆನಿಸಿಕೊಂಬುದು. ಆ ಏಕದಳದಲ್ಲಿ ಪಶ್ಚಿಮಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ಹ್ರಾಂ'ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ದರ್ಪಣಾಕೃತಿ ಜ್ಯೋತಿರಾಕೃತಿಗಳಲ್ಲಿ ಸಂಬಂಧವಾಗಿರ್ಪುದು. ಹೀಂಗೆ ಅಷ್ಟಚಕ್ರಂಗಳ ತನ್ನೊಳಗೆ ಗಬ್ರ್ಥೀಕರಿಸಿಕೊಂಡು ಬೆಳಗುತ್ತಿರ್ಪುದೊಂದು ಬ್ರಹ್ಮರಂಧ್ರಚಕ್ರವು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ ಹ್ರೀಂ ಕಾರಗಳು. ಆ ಹರದನಹಳ್ಳಿಯ ಪ್ರಭುಲಿಂಗಗುರುಸ್ವಾಮಿಯ ಶಿಷ್ಯರು ನಿಜಾನಂದ ಗುರುಚೆನ್ನಯ್ಯನವರು. ಆ ನಿಜಾನಂದ ಗುರುವಿನ [ಶಿಷ್ಯರು] ಗುರುಸಿದ್ಧವೀರೇಶ್ವರದೇವರು. ಆ ಸಿದ್ಧವೀರೇಶ್ವರದೇವರ ಕರಕಮಲದಲ್ಲಿ ಉದಯವಾದ ಬಾಲಸಂಗಯ್ಯನು ನಾನು. ಆ ನಿರಂಜನ ಗುರುವೆ ತಮ್ಮ ಕೃಪೆಯಿಂದ ತಮ್ಮಂತರಂಗದಲ್ಲಿರ್ದ ಅತಿರಹಸ್ಯವಾದ ಶಾಂಭವಶಿವಯೋಗವೆಂಬ ಮಹಾಜ್ಞಾನೋಪದೇಶಮಂ ಹರಗುರು ವಾಕ್ಯಪ್ರಮಾಣಿನಿಂ ಎನ್ನ ಹೃದಯಕಮಲದಲ್ಲಿ ಕರತಳಾಮಳಕದಂತೆ ತೋರಿ, ಆ ಹೃದಯಕಮಲಕರ್ಣಿಕಾಮಧ್ಯದಲ್ಲಿರ್ಪ ನಿರಂಜನಗುರುವೆ ನಿರಂಜನಮಹಾಲಿಂಗವೆಂದರಿದು ಆ ನಿರಂಜನಮಹಾಲಿಂಗವೆ ಕರಸ್ಥಲದಲ್ಲಿರ್ಪ ಸುನಾದಬ್ರಹ್ಮವೆಂಬ ಇಷ್ಟಲಿಂಗವೆಂದರಿದು, ಆ ಕರಸ್ಥಲದಲ್ಲಿರ್ಪ ಇಷ್ಟಲಿಂಗವೆ ತಾನೆಂದರಿದು ``ಮಂತ್ರಮಧ್ಯೇ ಭವೇತ್‍ಲಿಂಗಂ ಲಿಂಗಮಧ್ಯೇ ಭವೇತ್‍ಮಂತ್ರಂ | ಮಂತ್ರಲಿಂಗದ್ವಯಾದೇಕಂ ಇಷ್ಟಲಿಂಗಂತು ಶಾಂಕರಿ ||' ಎಂದುದಾಗಿ, ಎನ್ನ ಹೃತ್ಕಮಲಕರ್ಣಿಕಾಮಧ್ಯದಲ್ಲಿ ಶಾಂಭವೀಮುದ್ರಾನುಸಂಧಾನದಿಂದ ಆ ಲಿಂಗವೆ ಮಂತ್ರ, ಮಂತ್ರವೆ ಲಿಂಗವೆಂದರಿದು ಓಂ ಓಂ ಎಂದು ಶಿವಸಮಾದ್ಥಿಯ ಜಪಮಂ ಜಪಿಸುತ್ತ ಜ್ಯೋತಿರ್ಲಿಂಗಮಂ ಕೇಳುತ, ಜ್ಯೋತಿರ್ಲಿಂಗದೊಳು ಮುಳುಗಾಡುತ್ತಿರ್ದೆನಯ್ಯಾ ಬಸವಣ್ಣಪ್ರಿಯ ಚೆನ್ನಸಂಗಯ್ಯನೆಂಬ ಗುರುವಿನ ಕೃಪೆಯಿಂದ, ನಿಮ್ಮ ಶರಣರ ಪಡುಗ ಪಾದರಕ್ಷೆಯ ಹಿಡಿವುದಕ್ಕೆ ಯೋಗ್ಯನಾದೆನಯ್ಯ ನಿಮ್ಮ ಕೃಪೆಯಿಂದ.
--------------
ಭಿಕ್ಷದ ಸಂಗಯ್ಯ
ಇಂತಷ್ಪಾಕ್ಷರಮಂತ್ರ ನಿರೂಪಣಾನಂತರದಲ್ಲಿ ನವಾಕ್ಷರ ಮಂತ್ರಮಂ ಪೇಳ್ವೆನೆಂತೆನೆ ಭೂತಾಂತ ಸಂಜ್ಞಿತ ಹಕಾರಮನುದ್ಧರಿಸಿ ಸ್ವರ ತ್ರಯೋದಶಾಂತದೊಡನೆ ಕೂಡಲ್ ಹೌ ಎನಿಸಿತ್ತು. ಸಂಜ್ಞಿತವಾದಕಾರದೊಡನೆ ಕೂಡೆ ಹ ಎನಿಸಿತ್ತು. ಹೌ ಹ ಎಂಬಿವೆರಡು ಶಕ್ತಿ ಸಂಜ್ಞಿತವಾದ ಬಿಂದುವಂ ಬೆರಸೆ ಹೌಂ ಹಂ ಎಂದೆನಿಸಿದವು. ಶಕ್ತಿ ಸಂಜ್ಞಿತವಾದ ಸ್ ಎಂಬ ವ್ಯಂಜನಂ ಮಾತ್ರಾಸಂಜ್ಞಿತವಾದ ಕಾರಮನೊಂದೆ ಸ ಎನಿಸಿ- ತೇಳನೆಯ ವರ್ಗಾಂತ್ಯಾಕ್ಷರವಾದ ವ್ ಎಂಬುದಂ ಪಿಂಪೇಳ್ದ ಸಕಾರದ ಪೂರ್ವದೊಳಿಡೆ ಸ್ವ ಎನಿಸಿತ್ತು. ವಾಯುವರ್ಗದ ಕಡೆಯ ಮ್ ಎಂಬುದನಾದಿಭೂತ ಸಂಜ್ಞಿತಮಾದಾಕಾಶ ವರ್ಗಾಂತ್ಯವಾದಕಾರದೊಡನೆ ಕೂಡೆ ಮ ಎನಿಸಿತ್ತು. ಲಯ ವರ್ಗದಾದಿಯ ಕ್ಷಕಾರಮಂ ವರುಣವರ್ಗದಾದಿಯ ತಕಾರಮುಮನುದ್ಧರಿಸಿ ಯವೆರಡರ ನಡುವೆ ಯಾಂತವಾದಾ ರ್ ಎಂಬ ವ್ಯಂಜನಮನಾದಿಬೀಜ ಸಂಜ್ಞಿತವಾದಕಾರದೊಡನೆ ಕೂಡೆ ರ ಎನಿಸಿತಿಂತು ಕ್ಷ ರ ತ ಎನಿಸಿದವು. ಸಪ್ತಮವರ್ಗದಾದಿಯಾದ ಯ್ ಎಂಬಕ್ಕರವನಾದಿಸಂಜ್ಞಿತವಾದ ಕಾರದೊಡನೆ ಕೂಡೆ ಯ ಎನಿಸಿತ್ತಾರನೆಯ ವಾಯುವರ್ಗಾಂತವಾದ ಮ್ ಎಂಬಕ್ಕರ ಮನಾದಿಸಂಜ್ಞಿತವಾದ ಕಾರದೊಡನೆ ಬೆರಸೆ ಮ ಎನಿಸಿ, ಒಂಬತುಮಮಂ ಬಿಂದು ನಾದಸಂಜ್ಞಿತವಾದ ಸೊನ್ನೆಯಂ ಕೂಡಿಸೆ, `ಹೌಂ ಹಂ ಸ್ವಂ ಮಂ ಕ್ಷಂ ರಂ ತಂ ಯಂ ಮಂ' ಎಂಬೀ ನವಾಕ್ಷರ ಮಂತ್ರ ಸರ್ವಸಿದ್ಧಿಪ್ರದ ಶಾಂತಿಕಮಂತ್ರವೆಂದು ನಿರೂಪಿಸಿದೆಯಯ್ಯಾ, ಪರಶಿವಲಿಂಗೇಶ್ವರ ನವಲಿಂಗ ಭಾಸ್ವರಾ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಬಳಿಕ್ಕಮೀ ಚಕ್ರಸ್ಥ ವರ್ನಂಗಳ್ಗೆ ವರ್ಗಭೇದಮುಂಟದೆಂತೆನೆ- ಸ್ಥಿತಿವರ್ಗ ಸೃಷ್ಟಿವರ್ಗ ಸಂಹಾರವರ್ಗಂಗಳೆಂಬೀ ವರ್ಗಂಗಳವರಲ್ಲಿ ಮೊದಲ ಸ್ಥಿತಿವರ್ಗವೊಂದರೊಳಗೆ ಸಾತ್ವಿಕವರ್ಗ ರಾಜಸವರ್ಗ ತಾಮಸವರ್ಗಂಗಳಕ್ಕುಮಿವಕ್ಕೆ ವಿವರಂ. ಪೂರ್ವಾದೀಶಾನಾಂತಮಾಗಿ ಅಗ್ನಿ ಚಂದ್ರ ಸೂರ್ಯಮಂಡಲದಳ ನ್ಯಸ್ತಾಕ್ಷರಗಳೆಲ್ಲಂ ಸ್ಥಿತಿವರ್ಗ- ವಿವರೊಳ್ಸಾತ್ವಿಕವರ್ಗ ರಾಜಸವರ್ಗ ತಾಮಸವರ್ಗಗಳೆಂದು ತ್ರಿವಿಧಮಪ್ಪವರಲ್ಲಿ ಮೊದಲಗ್ನಿಮಂಡಲದೆಂಟು ದಳಂಗಳಲ್ಲಿಯ ಸ ಷ ಶ ವ ಲ ರ ಯ ಮ ಗಳೆಂಬಿವೆಂಟು ಸಾತ್ವಿಕಂಗಳೆನಿಪ- ವದರಾಚೆಯ ಚಂದ್ರಮಂಡಲದ ದಳೋಪದಳಂಗಳಲ್ಲಿ ಪೂರ್ವಾದೀಶಾನಾಂತಮಾಗಿ ನ್ಯಸ್ತವಾದ ಅ ಆ ಇ ಈ ಉ ಊ ಒ ಓ ಏ ಐ ಓ ಔ ಅಂ ಆಃ ಎಂಬೀ ಪದಿನಾರೆ ರಾಜಸಂಜ್ಞೆಂಗಳೆನಿಪ ವದರಾಚೆಯ ಸೂರ್ಯಮಂಡಲದ ಮೂವತ್ತೆರಡು ದಳಂಗಳೊಳಗ- ಣೆಂಟಕ್ಕರಂಗಳಗ್ನಿ ಮಂಡಲದೆಂಟುದಳಂಗಳಲ್ಲಿ ನ್ಯಸ್ತವಾಗಿರ್ದಪವವರ, ಶೂನ್ಯದಳಂಗಳೆಂಟಂ ಬಿಟ್ಟುಳಿದಿರ್ಪತ್ತು ನಾಲ್ಕು ದಳಂಗಳಲಿ ನ್ಯಸ್ತವಾದ ಕಖಗಘಙ ಚಛರುsುಜಞ ಟಠಡಢಣ ತಥದಧನ ಪಫಬಭಂಗಳೆಂಬಿರ್ಪತ್ತನಾಲ್ಕೆ ತಾಮಸಂಗಳೆನಿಪವೀ ವರ್ಗತ್ರಯಂ ಸ್ಥಿತಿವರ್ಗಗತವಾದುದೀ ಮೂರ್ಮೂರ್ವರ್ಗಾಕ್ಷರಂಗಳ ಸಂಜ್ಞೆಯಿಂದೆ ಮಂತ್ರಗಳನುದ್ಧರಿಪು ದಿನ್ನುಂ ಶುದ್ಧಪ್ರಸಾದ ಮೂಲಪ್ರಸಾದ ತತ್ವಪ್ರಸಾದ ಆದಿಪ್ರಸಾದ ಆತ್ಮಪ್ರಸಾದಂಗಳೆಂಬ ಪಂಚಪ್ರಸಾದ ಮಂತ್ರಗಳನೀ ಚಕ್ರಸ್ಥಾಕ್ಷರ ಸ್ಥಿತಿವರ್ಗದಿಂದುದ್ಧರಿಸಿ ಭಾವಿಪುದೆಂದೆಯಯ್ಯಾ, ಪರಮ ಶಿವಲಿಂಗೇಶ್ವರ ಸುಧಾಕರ ಶೇಖರಾ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಕೈವಲ್ಯ ವೈಕುಂಠ ಮೋಕ್ಷಗಾಮಿನಿಗಳಪ್ಪ ತೆರನ ತಿಳಿವುದಕ್ಕೆ ಶೈವ ವೈಷ್ಣವ ಅಧ್ಯಾತ್ಮ ತ್ರಿವಿಧಕರ್ಮಂಗಳಲ್ಲಿ ಷಡ್ದರ್ಶನ ಸಂಪದವಾಯಿತ್ತು. ಈ ಭೇದ ವಿಭೇದವಾದಲ್ಲಿ ಶಕ್ತಿರೂಪು ವೈಷ್ಣವ ಅಸ್ತಿಭೇದ ಶಿವಾಧಿಕ್ಯ, ಉಭಯಚೇತನ ವಸ್ತುವಾಗಿ ಘಟ ಬುಡಂಗಳಲ್ಲಿ ಚರಸ್ಥಾವರಂಗಳಲ್ಲಿ ಖಲ್ವಿದಂ ಬ್ರಹ್ಮ ವಸ್ತುಮೂರ್ತಿ ಅಳಿವು ಉಳುಮೆಗೆ ತೆರಪಿಲ್ಲದ ಸಂಗ ವೀರಶೈವ. ವಿ ಎಂಬ ಯುಕ್ತಿ, ರ ಎಂಬ ರಜಸ್ಸು, ವ ಎಂಬ ಬಿಂದುವಿನ ಶಾಖೆ ನಿಂದಲ್ಲಿ ಲೀಯಲ್ಪಟ್ಟುದು ಕೂಟಸ್ಥ ಗೋಳಕಾಕಾರ. ಅದು ಪಂಚಾಕ್ಷರೀ ಪ್ರಣಮ, ಷಡಕ್ಷರದ ಸದನ. ಏಕಾಕ್ಷರದ ಲೇಖನವಳಿದ ಅಲೇಖ. ಅಯಿವತ್ತೆರಡನೆಯ ಸರಹರಿದ ಸಂಬಂಧ. ಇದು ಸ್ವಯ ಚರ ಪರದ ಸುಮುದ್ರೆ. ಶ್ರುತಿಸ್ಮೃತಿತತ್ವದ ಶೋಧನೆ. ಆ ಗುಣ ಪ್ರಸನ್ನವಪ್ಪ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದ ಲೀಲಾಭಾವ.
--------------
ಪ್ರಸಾದಿ ಭೋಗಣ್ಣ
ಮತ್ತಮಾ ಶಿವಪೂಜಾವಿಧಿಗೆ ದೇಶ ಕಾಲ ಸ್ಥಾನ ದ್ರವ್ಯ ಪ್ರಯೋಜನಾದಿ ಗಳಂ ತಾಂತ್ರಿಕ ವೈದಿಕಮೆಂಬೆರಡೂ ಪೂಜಾಭೇದಂದಳಂ, ಅಂತಃಶೌಚ ಬಾಹ್ಯ ಶೌಚಯೆಂಬೆರಡೂ ಶೌಚಭೇದಂಗಳಂ, ಶೋಷಣ ದಹನ ಪ್ಲಾವನಮೆಂಬ ಕ್ರಿಯೆಗಳಂ, ಆತ್ಮಶುದ್ಧಿ ಸ್ಥಾನಶುದ್ಧಿ ದ್ರವ್ಯ ಶುದ್ಧಿ [ಲಿಂಗಶುದ್ಧಿ] ಮಂತ್ರ ಶುದ್ಧಿಯೆಂಬ ಪಂಚ ಶುದ್ಧಿಗಳ ವಿಸ್ತರಿಸುದವರಲ್ಲಿ ಶೌಚಾಚಮನಸ್ನಾನ ಭಸ್ಮರುದ್ರಾಕ್ಷಧಾರಣ ಕವಚ ಮಂತ್ರ ಕಲಾನ್ಯಾಸ ಧ್ಯಾನಾದಿ ರಚನೆಂಗೆಯ್ದುದೇ ಆತ್ಮಶುದ್ಧಿ ಎನಿಸೂದು. ಸಮ್ಮಾರ್ಜನಾನುಲೇಪನ ವರ್ಣಕ ಗಂಧಪುಷ್ಪಧೂಪ ದೀಪಾದಿ ನಿರ್ಮಲೋಪ ಕರಣಂಗಳಿಂ ಚೌಕಮನಲಂಕರಿಪುದೆ ಸ್ಥಾನ ಶುದ್ಧಿ ಎನಿಸೂದು. ಜಲಗಂಧಾಕ್ಷತಾ ಪುಷ್ಪಾದಿಗಳಂ ನಿರೀಕ್ಷಿಸಿ, ಭಸ್ಮಮಂತ್ರವಾರಿಗಳಿಂ ಸಂಪ್ರೋಕ್ಷಣಂಗೆಯ್ವುದೆ ದ್ರವ್ಯಶುದ್ಧಿ ಎನಿಸೂದು. ಅನಾಮಿಕ ಮಧ್ಯಮೆಗಳ ಮಧ್ಯದಲ್ಲಿ ನವೀನಕುಸುಮವಿಡಿದು ಅಂಗುಷ*ತರ್ಜನಿಗಳಿಂ ಮೊದಲ ನಿರ್ಮಾಲ್ಯಮಂ ತ್ಯಜಿಸಿ, ಲಿಂಗಪೀಠಮಂವಾರಿಯಿಂ ಪ್ರಕ್ಷಾಲನಂ ಗೆಯ್ವುದೆ ಲಿಂಗಶುದ್ಧಿ ಎನಿಸೂದು. ಸಕಲಪೂಜಾತ್ರ್ಥಮಾಗಿ ಒಂ ನಮಃ ಶಿವಾಯ ಸ್ವಾಹಾ ಎಂದುಚ್ಚರಿಪುದೆ ಮಂತ್ರಶುದ್ಧಿಯಹುದೆಂದೊಡಂ ಬಟ್ಟು, ಬಳಿಕ ಅಸ್ತ್ರಮುದ್ರೆ ಚಕ್ರಮುದ್ರೆ ಮಹಾಮುದ್ರೆ ಶೋಧನಿಮುದ್ರೆ ಸಂಹಾರ ಪಂಚಮುಖ ಮುದ್ರೆ ಸುರಭಿಮುದ್ರೆ ದ್ರವ್ಯಮುದ್ರೆ ಮುಕುಳಿಕಾಮುದ್ರೆ ಪದ್ಮಮುದ್ರೆ ಶಶಕರ್ಣವೆÅದ್ರೆ ಶಕ್ತಿಮುದ್ರೆ ಬೀಜಮುದ್ರೆ ಶಾಂತಿಮುದ್ರೆ ಆವಾಹನ ಮುದ್ರೆ ಮನೋರಮಮುದ್ರೆ ಧ್ವಜಮುದ್ರೆ ಲಿಂಗಮುದ್ರೆ ಗಾಯತ್ರಿಮುದ್ರೆ ಕಾಲಕಂಢ ಮುದ್ರೆ ಶೂಲಮುದ್ರೆ ನಮಸ್ಕಾರಮುದ್ರೆ ಯೋನಿಮುದ್ರೆ [ವಿ]ಬ್ದೊಟ..... ಮುದ್ರೆ....ರ ಮುದ್ರೆ ಎಂಬ ಸಕಲ ಮುದ್ರಾಲಕ್ಷಣವನರಿದಾಯಾ ಯೋಗ್ಯ ಕ್ರಿಯೆಗಳಿಲ್ಲಿ ಪ್ರಯೋಗಿಸಿ, ಬಳಿಕ ಕೂರ್ಮ ಆನಂತಸಿಂಹ ಪದ್ಮವಿ.......... ಪೀಠಂಗಳಲ್ಲಿ......ಮಾದ ಸಿಂಹಾಸನಕ್ಕೆ ಶ್ವೇತರಕ್ತಪೀತಶ್ಯಾಮವರ್ಣದ ಸಿಂಹಾ ಕಾರಮಾದ ಧರ್ಮಜ್ಞಾನ ವೈರಾಗ್ಯ ಐಶ್ವರ್ಯವೆ,ಬ ನಾಲ್ಕೆ ಕ್ರಮದಿಂದಾಗ್ನ್ಯಾದಿ ದಿಕ್ಕಿನ ಪಾದಚತುಷ್ಟಯಂಗಳು, ರಾಜಾವರ್ತಪ್ರಭೆಯ ರೂಪಮಾದ ಅಧರ್ಮ ಅಜ್ಞಾನ ಅವೈರಾಗ್ಯ ಅನೈಶ್ವರ್ಯವೆಂಬ ನಾಲ್ಕೆ ಕ್ರಮದಿ ಪೂರ್ವಾದಿ ದಿಕ್ಕಿನ ಪಾದಚತುಷ್ಟಯಂಗಳು ಮೇಲೆ ಅಣಿಮಾದಿಗಳೆ ಪೂರ್ವಾದ್ಯಷ್ಟದಿಕ್ಕಿನ ದಳಂಗಳು, ವಾಮಾದಿ ಸರ್ವಭೂತ ದಮನಾಂತಮಾದ ರುದ್ರವೆ ಪೂರ್ವಾ ದ್ಯಷ್ಟದಿಕ್ಕಿನ ಕೇಸರಂಗಳು, ವೈರಾಗ್ಯವೆ ಕರ್ಣಿಕೆ ವಾಮೆ ಮೊದಲು ಮನೋನ್ಮನಿ ಕಡೆಯಾದ ನವಶಕ್ತಿಗಳೆ ಪೂರ್ವಾದಿಮಧ್ಯಾಂತವಾದ ಕರ್ಣಿಕಾಬೀಜಂಗಳು, ಬಳಿಕದರ ಮೇಲೆ ಅಗ್ನಿರವಿಶಶಿ ಮಂಡಲತ್ರಯಂಗಳು, ಬಳಿಕದರ ಮೇಲೆ ತಮೋರಜಸತ್ವಗುಣಂಗಳವರ ಮೇಲೆ ಜೀವಾತ್ಮ ಅಂತರಾತ್ಮ ಪರಮಾತ್ಮರು ಗಳವರ ಮೇಲೆ ಆತ್ಮತತ್ವ ವಿದ್ಯಾತತ್ವ ಶಿವಶತ್ವಂಗಳಿಂತು ಪರಿವಿಡಿದಾಯತ ಮಾದ ಸಿಂಹಾಸನಮಂ ಪರಿಕಲ್ಪಿಸಿ ಲಿಂಗಾರ್ಚನೆಯಂ ಮಾಳ್ಪುದಯ್ಯಾ ಶಾಂತ ವೀರೇಶ್ವರಾ.
--------------
ಶಾಂತವೀರೇಶ್ವರ
ಈ ಪ್ರಕಾರದಲ್ಲಿ ಗುರುವಿನ ಹಸ್ತದಲ್ಲಿ ಹುಟ್ಟಿ ಲಿಂಗದೇಹಿಯೆನಿಸಿಕೊಂಡ ಜ್ಞಾನಿಪುರುಷನು ತನ್ನ ಜ್ಞಾನಸ್ವರೂಪವನರಿಯಬೇಕಯ್ಯ. ಆ ಜ್ಞಾನವೇ ಆರುತೆರನಾಗಿಪ್ಪುದು. ಅವಾವವೆಂದಡೆ: ಆಚಾರಲಿಂಗ, ಗುರುಲಿಂಗ, ಶಿವಲಿಂಗ, ಜಂಗಮಲಿಂಗ, ಪ್ರಸಾದಲಿಂಗ, ಮಹಾಲಿಂಗವೆಂದು ಇಂತೀ ಆರುತೆರನಾಗಿಪ್ಪುದು. ಈ ಷಡ್ವಿಧವ್ರತವನರಿದು ಆಚರಿಸುವ ಕ್ರಮವೆಂತುಟಯ್ಯಯೆಂದಡೆ: ಆಧಾರಚಕ್ರಸ್ಥಾನದಲ್ಲಿ ನಾಲ್ಕೆಸಳಕಮಲದ ವ ಶ ಷ ಸಯೆಂಬ ನಾಲ್ಕು ಬೀಜಾಕ್ಷರದ ಪೃಥ್ವಿತತ್ವದ ಕೆಂಪುವರ್ಣದ ನೆಲೆಯನರಿಯಬೇಕಯ್ಯ. ಸ್ವಾಧಿಷಾ*ನಚಕ್ರದಲ್ಲಿ ಆರೆಸಳಕಮಲದ ಬ ಭ ಮ ಯ ರ ಲಯೆಂಬ ಆರು ಬೀಜಾಕ್ಷರ ಯುಕ್ತವಾದ ಅಪ್ಪುತತ್ವದ ನೀಲವರ್ಣದ ನೆಲೆಯನರಿಯಬೇಕಯ್ಯ. ಮಣಿಪೂರಕಚಕ್ರಸ್ಥಾನದಲ್ಲಿ ಹತ್ತೆಸಳಕಮಲದ ಡ ಢ ಣ ತ ಥ ದ ಧ ನ ಪ ಫ ಯೆಂಬ ಹತ್ತು ಬೀಜಾಕ್ಷರ ಸ್ವಾಯತವಾಗಿಪ್ಪ ಅಗ್ನಿತತ್ವದ ಕುಂಕುಮವರ್ಣದ ನೆಲೆಯನರಿಯಬೇಕಯ್ಯ. ಅನಾಹತಚತ್ರಸ್ಥಾನದಲ್ಲಿ ಹನ್ನೆರಡೆಸಳಕಮಲದ ಕ ಖ ಗ ಘ ಙ ಚ ಛ ಜ ರುsು ಞ ಟ ಠಯೆಂಬ ಹನ್ನೆರಡು ಬೀಜಾಕ್ಷರಯುಕ್ತವಾಗಿರ್ಪ ವಾಯುತತ್ವದ ಶ್ವೇತವರ್ಣದ ನೆಲೆಯನರಿಯಬೇಕಯ್ಯ. ವಿಶುದ್ಧಿಚಕ್ರಸ್ಥಾನದಲ್ಲಿ ಹದಿನಾರೆಸಳಕಮಲದ ಅ ಆ ಇ ಈ ಉ ಊ ಋ ಋೂ ಎ ಏ ಐ ಒ ಓ ಔ ಅಂ ಅಃ ಎಂಬ ಹದಿನಾರು ಬೀಜಾಕ್ಷರ ಸ್ವಾಯತವಾಗಿಪ್ಪ ಆಕಾಶತತ್ವದ ಸ್ಫಟಿಕವರ್ಣದ ನೆಲೆಯನರಿಯಬೇಕಯ್ಯ. ಆಜ್ಞಾಚಕ್ರಸ್ಥಾನದಲ್ಲಿ ಎರಡೆಸಳಕಮಲದ ಹಂ ಸ ಯೆಂಬ ಎರಡು ಬೀಜಾಕ್ಷರಯುಕ್ತವಾಗಿಪ್ಪ ಆತ್ಮತತ್ವದ ಮಾಣಿಕ್ಯವರ್ಣದ ನೆಲೆಯನರಿಯಬೇಕಯ್ಯ. ಇವೆಲ್ಲವಕ್ಕೂ ಮೇಲಣತತ್ವವೆನಿಸುವ ಬ್ರಹ್ಮರಂದ್ರದಲ್ಲಿ ಸಾವಿರೆಸಳಕಮಲದ, ಸಾವಿರ ಬೀಜಾಕ್ಷರ ಸರ್ವತೋಮುಖವಾಗಿಪ್ಪ ಭೇದವನರಿಯಬೇಕಯ್ಯ. ಇನ್ನೀ ಚಕ್ರಂಗಳಿಗೆ ಲಿಂಗಸ್ವಾಯತಯುಕ್ತವಾಗಿಪ್ಪ ಭೇದವ ಹೇಳಿಹೆನು: ಆಧಾರಚಕ್ರದ ನಾಲ್ಕೆಸಳಕಮಲದ ಮಧ್ಯದಲ್ಲಿ ಆಚಾರಲಿಂಗವ ಸ್ವಾಯತವ ಮಾಡಿ ಸ್ವಾಧಿಷಾ*ನಚಕ್ರದ ಆರೆಸಳಕಮಲದ ಮಧ್ಯದಲ್ಲಿ ಗುರುಲಿಂಗವ ಮೂರ್ತಿಗೊಳಿಸಿ ಮಣಿಪೂರಕಚಕ್ರದ ಹತ್ತೆಸಳಕಮಲದ ಮಧ್ಯದಲ್ಲಿ ಶಿವಲಿಂಗವ ಸಂಬಂಧಿಸಿ ಅನಾಹತಚಕ್ರದ ಹನ್ನೆರಡೆಸಳಕಮಲದ ಮಧ್ಯದಲ್ಲಿ ಪ್ರಸಾದಲಿಂಗವ ಮೂರ್ತಿಗೊಳಿಸಿ ಆಜ್ಞಾಚಕ್ರದ ಎರಡೆಸಳಕಮಲದ ಮಧ್ಯದಲ್ಲಿ ಮಹಾಲಿಂಗವ ನೆಲೆಗೊಳಿಸಿ ಪ್ರಾಣದಲ್ಲಿ ಆಚಾರಲಿಂಗವ ಸಂಬಂಧಿಸಿ ಜಿಹ್ವೆಯಲ್ಲಿ ಗುರುಲಿಂಗವ ಸ್ವಾಯತವಮಾಡಿ ನೇತ್ರದಲ್ಲಿ ಶಿವಲಿಂಗವ ಮೂರ್ತಿಗೊಳಿಸಿ ತ್ವಕ್ಕಿನಲ್ಲಿ ಜಂಗಮಲಿಂಗವ ನೆಲೆಗೊಳಿಸಿ ಶ್ರೋತ್ರದಲ್ಲಿ ಪ್ರಸಾದಲಿಂಗವ ಸಂಬಂಧಿಸಿ ಭಾವದಲ್ಲಿ ಮಹಾಲಿಂಗವ ನೆಲೆಗೊಳಿಸಿ ಬ್ರಹ್ಮರಂಧ್ರದಲ್ಲಿರ್ಪ ಪರಿಪೂರ್ಣಲಿಂಗವು ಸರ್ವಾಂಗದಲ್ಲಿಯು ಸ್ವಾಯತವಾಗಲು ಅಂಗಸಂಗಗಳೆಲ್ಲವು ಲಿಂಗಸಂಗಗಳಾಗಿ ಲಿಂಗ ದೃಕ್ಕೇ ನಿರಂತರ ಪ್ರಕಾಶಿಸುತಿಪ್ಪುದಯ್ಯ. ಲಿಂಗಪ್ರಭೆಯೊಳಗೆ ಶಿವಶಿವಾಯೆನುತಿರ್ದೆನಯ್ಯಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಇನ್ನು ಆ ಆದಿ ಮಕಾರಪ್ರಣವ, ಆದಿ ಅಕಾರಪ್ರಣವ, ಆದಿ ಉಕಾರಪ್ರಣವ-ಈ ಮೂರೂ ಪ್ರಣವಂಗಳು ಬೀಜಸಂಯುಕ್ತವಾಗಿ ಅಖಂಡ ಮಹದೋಂಕಾರವಾಯಿತ್ತು. ಅದೆಂತೆಂದಡೆ : ಆ ಆದಿ ಮಕಾರಪ್ರಣವ, ಆದಿ ಅಕಾರಪ್ರಣವ, ಆದಿ ಉಕಾರಪ್ರಣವ-ಈ ಮೂರೂ ಪ್ರಣವಂಗಳು ಬೀಜಾಕ್ಷರ. ಆದಿ ಮಕಾರವೇ ಆದಿ ಕಲಾಪ್ರಣವ, ಆದಿ ಅಕಾರವೆ ಆದಿ ನಾದಪ್ರಣವ. ಆದಿ ಉಕಾರವೆ ಆದಿ ಬಿಂದುಪ್ರಣವ. ಆದಿ ಮಕಾರಪ್ರಣವವೇ ಸರ್ವಾತ್ಮನು. ಆದಿ ಅಕಾರಪ್ರಣವವೇ ಪರಮಾತ್ಮನು. ಆದಿ ಉಕಾರಪ್ರಣವವೇ ಶಿವಾತ್ಮನು. ಇದಕ್ಕೆ ಮಹಾದೇವ ಉವಾಚ: ``ಅಕಾರಂ ಪರಮಾತ್ಮಾ ಚ ಉಕಾರಃ ಶಿವಾತ್ಮಾ ಭವೇತ್ | ಮಕಾರಂ ಸರ್ವಾತ್ಮಾ ಚ ಇತಿ ಭೇದಂ ವರಾನನೇ ||'' ಇಂತೆಂದುದಾಗಿ, ಆದಿ ಮಕಾರಕ್ಕೆ ಆದಿ ಕಲಾಪ್ರಣವವೆ ಆಧಾರ. ಆದಿ ಅಕಾರಕ್ಕೆ ಆದಿ ನಾದಪ್ರಣವವೆ ಆಧಾರ. ಆದಿ ಉಕಾರಕ್ಕೆ ಆದಿ ಬಿಂದುಪ್ರಣವವೆ ಆಧಾರ. ಆದಿ ಪ್ರಾಣಮಾತ್ರೆಯಪ್ರಣವಕ್ಕೆ ಅಖಂಡ ಜ್ಯೋತಿರ್ಮಯಲಿಂಗವೆ ಆಧಾರ. ಆದಿ ಮ ಎಂದರೆ ಆದಿ ಕಲಾಪ್ರಣವ. ಆದಿ ಅ ಎಂದರೆ ಆದಿ ನಾದಪ್ರಣವ. ಆದಿ ಉ ಎಂಬ ಆದಿ ಬಿಂದುಪ್ರಣವದಲ್ಲಿ ಬಿಂದು ಸಂಯುಕ್ತವಾಗಿ, ಆದಿ `ಮ' ಎಂಬ ಆದಿ ಮ ನ ಸ ರ ಪ್ರಣವದಲ್ಲಿ ಬಂದು ಕೂಡಲು ಮಹದೋಂಕಾರವಾಯಿತ್ತು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಮತ್ತೆಯುಮೀ ಶಿವಬೀಜಂ ಸ್ಥೂಲ ಸೂಕ್ಷ ್ಮಪರಂಗಳೆಂದು ಮೂದೆರನಾಗಿರ್ಪುದಿದಕ್ಕೆ ವಿವರಂ- ಸ್ಥೂಲಮೆನೆಯಕ್ಕರಂ. ಸೂಕ್ಷ ್ಮಮೆನೆಯಾಯಕ್ಷರದ ದನಿ. ಪರಮೆನೆ ಆಕಾರಾದಿ ಕ್ಷಕಾರಾಂತವಾದೈವತ್ತಕ್ಕರಂಗಳೊಳಗೆ ಪತ್ತು ಪತ್ತುಗಳು ವಿಭಾಗಿಸಿ, ಭೂಮ್ಯಾದಿ ಪಂಚಭೂತಂಗಳೊಡನೆ ಕಲಸುವುದೆಂತೆನೆ ತರದಿಂ ಅ ಆ ಇ ಈ ಉ ಊ ಋ Iೂ ಒ ಓ ಈ ಹತ್ತು ಪೃಥ್ವಿ. ಏ ಐ ಓ ಔ ಅಂ ಅಃ ಕ ಖ ಗ ಘ ಈ ಹತ್ತು ಅಪ್ಪು. ಙ ಚ ಛ ಜ ರುsು ಞ ಟ ಠ ಡ ಢ ಈ ಹತ್ತು ತೇಜಸ್ಸು. ಣ ತ ಥ ದ ಧ ನ ಪ ಫ ಬ ಭ ಈ ಹತ್ತು ವಾಯು. ಮ ಯ ರ ಲ ವ ಶ ಷ ಸ ಹ ಳ ಯೀ ಹತ್ತು ಆಕಾಶಂ. ಇಂತೈವತ್ತಕ್ಕರಂಗಳೈದು ಪೃತ್ವ ್ಯಪ್ತೇಜೋವಾಯ್ವಾಕಾಶಂಗಳಲ್ಲಿ ನ್ಯಸ್ತಂಗಳಾದವಿನ್ನುಳಿದೈದನೆಯ ಭೂತಸಂಜ್ಞಿತದಿಂ ಪಂಚಮವೆನಿಸಿದ ಪರಿಪೂರ್ಣವಾದ ಸಾಂತವೆ ಪರಮಿಂತು ಸ್ಥೂಲ ಸೂಕ್ಷ ್ಮ ಪರ ಸಂಜ್ಞೆಯ ನಿರೂಪಿಸಿದೆಯಯ್ಯಾ, ಪರಮ ಶಿವಲಿಂಗ ಪಾರ್ವತೀ ಸಮುತ್ಸಂಗ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಇನ್ನು ಸೃಷ್ಟಿವರ್ಗನಿರೂಪಣಾನಂತರದಲ್ಲಿ ಸಂಹಾರವರ್ಗಮಂ ಪೇಳ್ವೆನೆಂತೆನೆ- ಕ್ಷಕಾರಾದ್ಯಕಾರಾಂತಮಾದಕ್ಷರಮಾಲಿಕೆಯೆ ಸಂಹಾರವರ್ಗಮೆನಿಕುಂ. ಅದರಲ್ಲಿ ಕ್ಷ ಳ ಹ ಸ ಷ ಶ ವ ಲ ರ ಯಂ ಗಳೆಂಬೀ ಪತ್ತೆ ಸಂಹಾರವರ್ಗದಲ್ಲಿ ಮೊದಲವರ್ಗಮಿದು ಪೃಥ್ವಿ. ಮ ಭ ಬ ಫ ಪ ನ ಧ ದ ಥ ತಂಗಳೆಂಬೀ ಪತ್ತೆ ಸಂಹಾರಿವರ್ಗದೊಳೆರಡನೆಯ ವರ್ಗಮಿದಪ್ಪು. ಣ ಢ ಡ ಠ ಟ ಞ ರುsು ಜ ಛ ಚಂಗಳೆಂಬೀ ಪತ್ತೆ ಸಂಹಾರವರ್ಗದಲ್ಲಿ ಮೂರನೆಯ ವರ್ಗಮಿದಗ್ನಿ. ಙ ಘ ಗ ಖ ಕಂಗಳೆಂಬೀವೈದುಂ ಸಂಹಾರವರ್ಗದಲ್ಲಿ ನಾಲ್ಕನೆಯ ವರ್ಗಮಿದು ವಾಯು, ಅಃ ಆಂ ಔ ಓ ಐ ಏ ಒ ಓ Iೂ ಋ ಊ ಉ ಈ ಇ ಆ ಅ ಎಂಬೀ ಪದಿನಾರೆ ಸಂಹಾರವರ್ಗದಲ್ಲಿಯೈದನೆಯ ವರ್ಗಮಿದಾಕಾಶ- ಮಿವೈದು ವರ್ಗಂಗಳನೊಳಕೊಂಡು ಸಂಹಾರವರ್ಗ ಮಿರ್ಪುದಿದಲ್ಲಿಯೆ ಸಮಸ್ತವಾದ ರುದ್ರಮಂತ್ರಗಳನುದ್ಧರಿಪುದಿದೀಗ ಸಂಹಾರವರ್ಗಂ. ಇಂತು ಸ್ಥಿತಿ ಸಂಹಾರ ತಾಮಸವರ್ಗ ವರ್ಗತ್ರಯಂಗಳಂ ನಿರವಿಸಿದೆಯಯ್ಯಾ, ನಿರಾಳ ನಿಶ್ಚಿಂತ ಪರಮ ಶಿವಲಿಂಗೇಶ್ವರ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಪೂರ್ವಿವಾದಿಯಾಗಿ ಮಂಡಲತ್ರಯದೊಳ್ಮೊದಲಗ್ನಿ ಮಂಡಲದೀಶಾನಂ ತೊಡಗಿ ಸ ಷ ಶ ವ ಲ ರ ಯ ಮ ಗಳೆಂಬ ವ್ಯಾಪಕಾಕ್ಷರಂಗಳೆಂಟೆ ಸಳಳೊಳಿರ್ಪವಾ ಹಕಾರವೆ ಶಿವಬೀಜವಾದಕಾರಣವಾ ಚಕ್ರದ ಕರ್ಣಿಕಾಕ್ಷಾರವೆನಿಸಿತ್ತು. ಳಕಾರಮೆ `ಲಳಯೋರ್ಭೇದಃ' ಎಂದು ಲಳಂಗಳ್ಗೆ ಭೇದಮಿಲ್ಲಮದರಿಂ ಳಕಾರಂ ಲಕಾರದೊಳಂತರ್ಭಾವಮಾದುದುಮಲ್ಲದೆಯು ಮಾತ್ಮಬೀಜವಾದ ಳಕಾರಂ ಕರ್ಣಿಕಾದಳಂ ನ್ಯಸ್ತಾತ್ಮಬೀಜವಾದ ಕಾರಣದೊಳ್ಪುದಿದಿರ್ಪುದಿಂತು ಕರ್ಣಿಕಾಗ್ನಿಮಂಡಲನ್ಯಸ್ತ ದಶವ್ಯಾಪಕಾಕ್ಷರಂಗಳಂ ಪೇಳ್ದೆಯಯ್ಯಾ, ಪರಮ ಶಿವಲಿಂಗೇಶ್ವರ ಪಟುವೇದಾಂತ ಭಾಸ್ವರ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಬಳಿಕ್ಕಮಾ, ಲಿಂಗದಧಃಕಂಜಮೆ ಸ್ವಾಧಿಷಾ*ನಚಕ್ರವೆನಿಸುಗು- ಮದರ ಷಟ್ಕೋಷ*ಂಗಳೆ ಷಡ್ದಳಂಗಳವರಲ್ಲಿ, ಬ ಭ ಮ ಯ ರ ಲ ಎಂಬಾರಕ್ಕರಂಗಳ್ನ್ಯಸ್ತಮಾಗಿರ್ಕುಮೆಂದು ನಿರವಿಸಿದೆಯಯ್ಯ, ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಗುದದಲ್ಲಿ ಆಧಾರಚಕ್ರ, ಪೃಥ್ವಿಯೆಂಬ ಮಹಾಭೂತ, ಚತುಃಷ್ಕೋಣ, ಚೌದಳಪದ್ಮ, ಅಲ್ಲಿಯ ಅಕ್ಷರ ವಶಷಸವೆಂಬ ನಾಲ್ಕು ಅಕ್ಷರ, ಅದರ ವರ್ಣ[ಪೀತ], ಅದಕ್ಕೆ ಅಧಿದೇವತೆ[ಬ್ರಹ್ಮ], ಭಕ್ತ ಮುಖ, ಕ್ರಿಯಾಶಕ್ತಿ, ಆಚಾರಲಿಂಗ, ನಕಾರ ಸ್ವಾಯತ. ಲಿಂಗಸ್ಥಾನದಲ್ಲಿ ಸ್ವಾಧಿಷಾ*ನಚಕ್ರ, ಅಪ್ಪುವೆಂಬ ಮಹಾಭೂತ, ಧನುರ್ಗತಿ, ಷಡುದಳಪದ್ಮ, ಅಲ್ಲಿಯ ಅಕ್ಷರವಾರು ಬ ಭ ಮ ಯ ರ ಲ ; ಅದರ ವರ್ಣ [ಶ್ವೇತ], ಅಧಿದೇವತೆ [ವಿಷ್ಣು], ಮಹೇಶ ಮುಖ, ಜ್ಞಾನಶಕ್ತಿ, ಗುರುಲಿಂಗ, ಅಲ್ಲಿ ಮಕಾರ ಸ್ವಾಯತ. ನಾಭಿಸ್ಥಾನದಲ್ಲಿ ಮಣಿಪೂರಕಚಕ್ರ, ತೇಜವೆಂಬ ಮಹಾಭೂತ, ತ್ರಿಕೋಣ, ದಶದಳಪದ್ಮ, ಅಲ್ಲಿಯ ಅಕ್ಷರ ಹತ್ತು ; ಡಢಣ ತಥದಧನ ಪಫ, ಅದಕ್ಕೆ [ಹರಿತ]ವರ್ಣ, ಅಧಿದೇವತೆ [ರುದ್ರ], ಪ್ರಸಾದಿ ಮುಖ, ಇಚ್ಚಾಶಕ್ತಿ , ಶಿವಲಿಂಗ, ಶಿಕಾರ ಸ್ವಾಯತ. ಹೃದಯಸ್ಥಾನದಲ್ಲಿ ಅನಾಹತಚಕ್ರ, ವಾಯುವೆಂಬ ಮಹಾಭೂತ, ಷಟ್ಕೋಣ, ದ್ವಿದಶದಳಪದ್ಮ, ಅಲ್ಲಿಯ ಅಕ್ಷರ ಹನ್ನೆರಡು : ಕ ಖ ಗ ಘ ಙ ಚ ಛ ಜ ಝ ಞ ಟ ಠ ಅದರ ವರ್ಣ [ಮಾಂಜಿಷ್ಟ], ಅದಕ್ಕೆ ಅಧಿದೇವತೆ [ಈಶ್ವರ], ಪ್ರಾಣಲಿಂಗಿ ಮುಖ, Wಆದಿಘೆಶಕ್ತಿ, ಜಂಗಮಲಿಂಗ, ಅಲ್ಲಿ ವಕಾರ ಸ್ವಾಯತ. ಕಂಠಸ್ಥಾನದಲ್ಲಿ ವಿಶುದ್ಧಿಚಕ್ರ, ಆಕಾಶವೆಂಬ ಮಹಾಭೂತ, ವರ್ತುಳಾಕಾರ, ಷೋಡಷದಳಪದ್ಮ, ಅಲ್ಲಿಯ ಅಕ್ಷರ ಹದಿನಾರು :ಅ ಆ ಇ ಈ ಉ ಊ ಋ Iೂ ಲೃ ಲೃೂ ಏ ಐ ಓ ಔ ಅಂ ಅಃ, ಅದಕ್ಕೆ ವರ್ಣ [ಕಪೋತ], ಅಧಿದೇವತೆ ಸದಾಶಿವನು, ಶರಣ ಮುಖ, [ಪರಾ]ಶಕ್ತಿ , [ಪ್ರಸಾದಲಿಂಗ, ಯಕಾರ ಸ್ವಾಯತ. ಭ್ರೂಮಧ್ಯದಲ್ಲಿ ಆಜ್ಞಾಚಕ್ರ, ಮನವೆಂಬ ಮಹಾಭೂತ, ದ್ವಿದಳಪದ್ಮ,] ಅಲ್ಲಿಯ ಅಕ್ಷರವೆರಡು :ಹ ಷ ವೆಂಬ [ಅಕ್ಷರ], ಮಾಣಿಕ್ಯ ವರ್ಣ, [ಅದಕ್ಕೆ ಅಧಿದೇವತೆ ಮಹೇಶ್ವರ], ಐಕ್ಯ ಮುಖ, ಕ್ರಿಯಾಶಕ್ತಿ, ಮಹಾಲಿಂಗ, ಓಂಕಾರ ಸ್ವಾಯತ. ಇಂತೀ ಷಡುಚಕ್ರದ, ಷಡುಸ್ಥಳದ, ಷಡುಲಿಂಗದ, ಷಡುಶಕ್ತಿಯರಿಗೆ ಷಡಕ್ಷರವೆ ಪ್ರಾಣವಾಗಿ ವಿರಾಜಿಸುತ್ತಿದ್ದಿತಯ್ಯ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಇನ್ನಷ್ಟು ... -->