ಘನಕ್ಕೆ ಘನವೆಂಬವರ ಮನಕ್ಕೆ ತಂದು
ಅನುಗೊಳಿಸಿದೆಯಲ್ಲಾ, ಅಲ್ಲಮದೇವಾ.
`ಸರ್ವಂ ಖಲ್ವಿದಂ ಬ್ರಹ್ಮ' ಎಂದು ವಾಸಿದಲ್ಲಿ,
ಲಿಂಗತ್ರಯದಲ್ಲಿ ಬೋಧಗೊಳಿಸಿದೆಯಲ್ಲಾ, ಅಲ್ಲಮದೇವಾ.
ಮಾಡಿ ನೀಡುವೆನೆಂಬವರ ರೂಹು
ಮೂಡದಂತೆ ಮಾಡಿದೆಯಲ್ಲಾ, ಅಲ್ಲಮದೇವಾ.
ದೃಷ್ಟಿಗೆ ಬಿದ್ದವರ ಮಹದೈಶ್ವರ್ಯಕ್ಕಿಟ್ಟು,
ನೀ ನೆಟ್ಟನೆ ಬೆಟ್ಟದಲ್ಲಿಯ ಬಟ್ಟಬಯಲ
ಕದಳಿಯ ಹೋಗಿ ಬಟ್ಟಬಯಲಾಗಿ,
ಜಗದಂತರ್ಯಾಮಿ ಕಪಿಲಸಿದ್ಧಮಲ್ಲಿಕಾರ್ಜುನನಾಗಿ
ನಿಂದೆಯಲ್ಲಾ ಅಲ್ಲಮದೇವಾ