ಅಥವಾ

ಒಟ್ಟು 102 ಕಡೆಗಳಲ್ಲಿ , 32 ವಚನಕಾರರು , 57 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

``ದಂಡಶ್ಚ ತಾರಕಾಕಾರೋ ಭವತಿ | ಓಂ ಸಾರ್ವತ್ಮಾ ದೇವತಾ | ಮಕಾರೇ ಚ ಲಯಂ ಪ್ರಾಪ್ತೇ ಪಂಚದಶಮೇ ಪ್ರಣವಾಂಶಕೇ ||'' ಅಕಾರವೆಂಬ ಪ್ರಣವದಲ್ಲಿ- ``ಕುಂಡಲಶ್ಚ ಅರ್ಧಚಂದ್ರೋ ಭವತಿ | ಓಂ ಪರಮಾತ್ಮಾ ದೇವತಾ | ಅಕಾರೇ ಚ ಲಯಂ ಪ್ರಾಪ್ತೇ ಷೋಡಶೇ ಪ್ರಣವಾಂಶಕೇ ||'' ಉಕಾರವೆಂಬ ಪ್ರಣವದಲ್ಲಿ- ``ಜ್ಯೋತಿಶ್ಚ ದರ್ಪಣಾಕಾರೋ ಭವತಿ | ಓಂ ಶಿವಾತ್ಮಾ ದೇವತಾ | ಉಕಾರೇ ಚ ಲಯಂ ಪ್ರಾಪ್ತೇ ಸಪ್ತದಶ ಪ್ರಣವಾಂಶಕೇ ||'' ``ಮಕಾರೇ ಚ ಅಕಾರೇಚ ಉಕಾರೇಚ ನಿರಾಮಯಂ | ಇದಮೇಕಂ ಸಮುತ್ಪನ್ನಂ ಓಂ ಇತಿ ಜ್ಯೋತಿರೂಪಕಂ || ಪ್ರಥಮಂ ತಾರಕಾರೂಪಂ ದ್ವಿತೀಯಂ ದಂಡ ಉಚ್ಯತೇ | ತೃತೀಯಂ ಕುಂಡಲಾಕಾರಂ ಚತುರ್ಥಂ ಅರ್ಧಚಂದ್ರಕಂ || ಪಂಚಮಂ ದರ್ಪಣಾಕಾರಂ ಷಷ್ಠಂ ಜ್ಯೋತಿರೂಪಕಂ | ಇತಿ ಪ್ರಣವಃ ಜ್ಞೇಯಂ ಏತದ್ಗೋಪ್ಯಂ ವರಾನನೇ || ಓಂಕಾರ ಪ್ರಭವೋ ವೇದಃ ಓಂಕಾರಂ ಪ್ರಭವ ಸ್ವರಃ | ಓಂಕಾರಪ್ರಭವಾ ಭೂಃ ಓಂಕಾರಪ್ರಭವಾ ಭುವಃ || ಓಂಕಾರಪ್ರಭವಾ ಸ್ವಹಃ ಓಂಕಾರ ಪ್ರಭವಾ ಮಹಃ | ಓಂಕಾರಪ್ರಭವೋ ಜನಃ ಓಂಕಾರ ಪ್ರಭವಂ ತಪಃ || ಓಂಕಾರಪ್ರಭವಂ ಸತ್ಯಂ ಓಂಕಾರ ಪ್ರಭವೋ ರವಿ ಃ | ಓಂಕಾರಪ್ರಭವಸ್ಸರ್ವಂ ತ್ರೈಲೋಕ್ಯಂ ಸಚರಾಚರಂ || ಸರ್ವವ್ಯಾಪಕಮೋಂಕಾರಂ ಮಂತ್ರಸ್ಯಾತ್ರ ನ ಸಂಭವೇತ್ | ಪ್ರಣವೋಹಿ ಪರಬ್ರಹ್ಮ ಪ್ರಣವಃ ಪರಮಂ ಪದಂ || ಓಂಕಾರಂ ನಾದರೂಪಂ ಚ ಓಂಕಾರಂ ಬಿಂದುರೂಪಕಂ | ಓಂಕಾರಂ ಚ ಕಲಾರೂಪಂ ಓಂಕಾರಂ ಮಂತ್ರರೂಪಕಂ || ಓಂಕಾರಂ ವ್ಯಾಪಿ ಸರ್ವತ್ರ ಓಂಕಾರಂ ಗೋಪ್ಯಮಾನನಂ | ಇತಿ ಪ್ರಣವಃ ವಿಜ್ಞೇಯಃ ದುರ್ಲಭಂ ಕಮಲಾನನೇ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ನಿರ್ಬಯಲು ಮಹಾಬಯಲು ಚಿದ್‍ಬಯಲು ಬಯಲಾತ್ಮ ಸೂರ್ಯ ಚಂದ್ರ ತಾರಕ ಕಠೋರ ವಾಯು ಆಕಾಶ ಅಗ್ನಿ ಅಪ್ಪು ಪೃಥ್ವಿ ಬೀಜ ಅನ್ನರಸ ವೀರ್ಯ ಪಿಂಡ ಪ್ರಾಣ ಮನ ಅಸಿ ಉತ್ಪತ್ತಿ ಸ್ಥಿತಿ ಲಯ ಅಕ್ಷರ ಮೊದಲಾದ ಬ್ರಹ್ಮಾಂಡ ನೀನಾದುದಕ್ಕೆ, ನಿನ್ನ ನೀನರಿವುದಕ್ಕೆ ನೀನೇ ನಾನಾದುದೇ ಇದೇ ಆದಿಯಲಾ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಅಖಂಡಜ್ಯೋತಿರ್ಮಯವಾಗಿಹ ಗೋಳಕಾಕಾರ ಪ್ರಣವದ ಜ್ಯೋತಿಸ್ವರೂಪದಲ್ಲಿ- ಹೃದಯಮಂತ್ರೋ ಭವತಿ | ಓಂ ಪರಮಾತ್ಮಾ ದೇವತಾ | ಜ್ಯೋತಿರೂಪೋ ಲಯಂ ಪ್ರಾಪ್ತೆ ೀ ಪ್ರಥಮಂ ಪ್ರಣವಾಂಶಕೇ || ಆ ಪ್ರಣವದ ದರ್ಪಣಾಕಾರದಲ್ಲಿ- ``ಶಿರೋಮಂತ್ರೋ ಭವತಿ | ಓಂ ಯಕಾರಾತ್ಮಾ ದೇವತಾ | ದರ್ಪಣೇ ಚ ಲಯಂ ಪ್ರಾಪ್ತೇ ದ್ವಿತೀಯಂ ಪ್ರಣವಾಂಶಕೇ ||'' ಆ ಪ್ರಣವದ ಅರ್ಧಚಂದ್ರಕದಲ್ಲಿ- ``ಶಿಖಾಮಂತ್ರೋ ಭವತಿ | ಓಂ ಅಕಾರಾತ್ಮಾ ದೇವತಾ | ಅರ್ಧಚಂದ್ರೇ ಲಯಂ ಪ್ರಾಪ್ತೇ ತೃತೀಯಂ ಪ್ರಣವಾಂಶಕೇ ||'' ಆ ಪ್ರಣವದ ಕುಂಡಲಾಕಾರದಲ್ಲಿ- ``ಕವಚಮಂತ್ರೋ ಭವತಿ | ಓಂ ಶಿಕಾರಾತ್ಮಾ ದೇವತಾ | ಕುಂಡಲೇ ಚ ಲಯಂ ಪ್ರಾಪ್ತೇ ಚತುರ್ಥಂ ಪ್ರಣವಾಂಶಕೇ ||'' ಆ ಪ್ರಣವದ ದಂಡಸ್ವರೂಪದಲ್ಲಿ- ``ನೇತ್ರಮಂತ್ರೋ ಭವತಿ | ಓಂ ಮಕಾರಾತ್ಮಾ ದೇವತಾ | ದಂಡರೂಪೇ ಚ ಲಯಂ ಪ್ರಾಪ್ತೇ ಪಂಚಮಂ ಪ್ರಣವಾಂಶಕೇ ||'' ಆ ಪ್ರಣವದ ತಾರಕಸ್ವರೂಪದಲ್ಲಿ- ``ಅಸ್ತ್ರಮಂತ್ರೋ ಭವತಿ | ಓಂ ನಕಾರಾತ್ಮಾ ದೇವತಾ | ತಾರಕೇ ಚ ಲಯಂ ಪ್ರಾಪ್ತೇ ಷಷ್ಠಮಂ ಪ್ರಣವಾಂಶಕೇ ||'' ಇಂತೆಂದುದು ಶ್ರುತಿ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇದಕ್ಕೆ ಮಹದೋಂಕಾರೋಪನಿಷತ್ತು : ಉಕಾರವೆಂಬ ಪ್ರಣವದಲ್ಲಿ- ``ದಂಡಶ್ಚ ತಾರಾಕಾಕಾರೋ ಭವತಿ ಓಂ ಸ್ವಯಂಭುಲಿಂಗ ದೇವತಾ | ಉಕಾರೇ ಚ ಲಯಂ ಪ್ರಾಪ್ತೇ ಏಕಾದಶಮೇ ಪ್ರಣವಾಂಶಕೇ || '' ಮಕಾರವೆಂಬ ಪ್ರಣವದಲ್ಲಿ- ``ಕುಂಡಲಶ್ಚ ಅರ್ಧಚಂದ್ರೋ ಭವತಿ ಓಂ ಶಿವತತ್ವಂ ದೇವತಾ | ಮಕಾರೇ ಚ ಲಯಂ ಪ್ರಾಪ್ತೇ ದ್ವಾದಶಂ ಪ್ರಣವಾಂಶಕೇ || '' ಅಕಾರವೆಂಬ ಪ್ರಣವದಲ್ಲಿ- ``ದರ್ಪಣಶ್ಚ ಜ್ಯೋತಿರೂಪೋ ಭವತಿ ಓಂ ಗುರುತತ್ವಂ ದೇವತಾ| ಅಕಾರೇ ಚ ಲಯಂ ಪ್ರಾಪ್ತೇ ತ್ರಯೋದಶಮೇ ಪ್ರಣವಾಂಶಕೇ ||'' ``ಉಕಾರೇ ಚ ಮಕಾರೇ ಚ ಅಕಾರಂ ಚಾಕ್ಷರತ್ರಯಂ | ಅಕಾರಂ ನಾದರೂಪೇಣ ಉಕಾರಂ ಬಿಂದುರುಚ್ಯತೇ | ಮಕಾರಂ ಕಲಾ ಚೈವ ನಾದಬಿಂದುಕಲಾತ್ಮನೇ || ನಾದಬಿಂದುಕಲಾಯುಕ್ತೋ ಓಂಕಾರೋ ಪರಮೇಶ್ವರಃ | ಪ್ರಣವೋಹಿ ಪರಬ್ರಹ್ಮ ಪ್ರಣವಂ ಪರಮಂ ಪದಂ || ಓಂಕಾರಂ ನಾದರೂಪಂಚ ಓಂಕಾರಂ ಮಂತ್ರರೂಪಕಂ | ಓಂಕಾರಂ ವ್ಯಾಪಿ ಸರ್ವತ್ರ ಓಂಕಾರಂ ಗೋಪ್ಯಮಾನನಂ ||'' ಇಂತೆಂದುದಾಗಿ, ಅಪ್ರಮಾಣ ಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಆದಿ ಮಧ್ಯ ಅವಸಾನ ಉಚಿತದ ಸಾವಧಾನವ ಎಚ್ಚರಿಕೆಯಲ್ಲಿ ಅಸು ಅಡರುವಾಗ ದೆಸೆದಿಕ್ಕಿನಲ್ಲಿ ಕುಚಿತ್ತ ಭಾವವಿಲ್ಲದೆ ಅಂತರಿಕ್ಷ ಸುಮಾನತೆಯಲ್ಲಿ, ದ್ವಾರದಲ್ಲಿ ನೀರೆಯ್ದುವಂತೆ, ಸ್ಫಟಲದಲ್ಲಿ ಪನ್ನಗ ಹೋಹಂತೆ, ಕುಸುಮದಲ್ಲಿ ಗಂಧ ಸಂಚಾರದಲ್ಲಿ ಸಂಗವ ಮಾಡಿದಂತೆ, ಮಿಂಚಿನಲ್ಲಿ ತೋರಿದ ಕುಡಿವೆಳಗಿನ ಗೊಂಚಲ ಸಂಚಲದಂತೆ, ಅಂಚೆ ಸೇವಿಸುವ ಪಯ ಉದಕದ ಹಿಂಚುಮುಂಚನರಿದಂತಿರಬೇಕು. ಸಂಚಿತ ಆಗಾಮಿ ಪ್ರಾರಬ್ಧಕ್ಕೆ ಹೊರಗಾದ ಮಹಂತನ ಐಕ್ಯದಿರವು. ಕಂಚಿನ ನಾದ ಸಂಚಾರ ಮುಂಚಿದಲ್ಲಿಯೆ ಲಯ ನಾರಾಯಣಪ್ರಿಯ ರಾಮನಾಥಾ.
--------------
ಗುಪ್ತ ಮಂಚಣ್ಣ
ಬಚ್ಚಬರಿಯ ಬಯಲೊಳಗೊಂದು ಅಚ್ಚ ಅಂಕುರ ಹುಟ್ಟಿ ಅಣುಚಕ್ರವೆನಿಸಿತ್ತು. ಆ ಅಣುಚಕ್ರದಿಂದಾಯಿತ್ತು ಪಶ್ಚಿಮಚಕ್ರ. ಆ ಪಶ್ಚಿಮಚಕ್ರದಿಂದಾಯಿತ್ತು ಶಿಖಾಚಕ್ರ. ಆ ಶಿಖಾಚಕ್ರದಿಂದಾಯಿತ್ತು ಬ್ರಹ್ಮಚಕ್ರ. ಆ ಬ್ರಹ್ಮಚಕ್ರದಿಂದಾಯಿತ್ತು ಆಜ್ಞಾಚಕ್ರ. ಆ ಆಜ್ಞಾಚಕ್ರದಿಂದಾಯಿತ್ತು ವಿಶುದ್ಧಿಚಕ್ರ. ಆ ವಿಶುದ್ಧಿಚಕ್ರದಿಂದಾಯಿತ್ತು ಅನಾಹತಚಕ್ರ. ಆ ಅನಾಹತಚಕ್ರದಿಂದಾಯಿತ್ತು ಮಣಿಪೂರಕಚಕ್ರ. ಆ ಮಣಿಪೂರಕಚಕ್ರದಿಂದಾಯಿತ್ತು ಸ್ವಾದ್ಥಿಷ್ಠಾನಚಕ್ರ. ಆ ಸ್ವಾದ್ಥಿಷ್ಠಾನಚಕ್ರದಿಂದಾಯಿತ್ತು ಆಧಾರಚಕ್ರ. ಆ ಆಧಾರಚಕ್ರಕ್ಕೆ ಚತುರ್ದಳ. ಆ ಚತುರ್ದಳದಲ್ಲಿ ಚತುರಕ್ಷರಂಗಳು. ಆ ಚತುರಕ್ಷರಂಗಳ ಮಧ್ಯ ಬೀಜಾಕ್ಷರವೇ ನಕಾರಪ್ರಣವ. ಆ ನಕಾರಪ್ರಣವಪೀಠದ ಮೇಲೆ ಬೆಳಗುತಿರ್ಪುದು ಆಚಾರಲಿಂಗ. ಅದರಿಂದ ಮೇಲೆ ಸ್ವಾದ್ಥಿಷ್ಠಾನಚಕ್ರವಿರ್ಪುದು. ಆ ಚಕ್ರಕ್ಕೆ ಷಡುದಳ. ಆ ಷಡುದಳಂಗಳಲ್ಲಿ ಷಡಕ್ಷರಂಗಳು. ಆ ಷಡಕ್ಷರಂಗಳ ಮಧ್ಯ ಬೀಜಾಕ್ಷರವೇ ಮಕಾರಪ್ರಣವ. ಆ ಮಕಾರಪ್ರಣವಪೀಠದ ಮೇಲೆ ಬೆಳಗುತಿರ್ಪುದು ಗುರುಲಿಂಗ. ಅದರಿಂದ ಮೇಲೆ ಮಣಿಪೂರಕಚಕ್ರವಿರ್ಪುದು. ಆ ಚಕ್ರಕ್ಕೆ ದಶದಳ. ಆ ದಶದಳಂಗಳಲ್ಲಿ ದಶಾಕ್ಷರಂಗಳು. ಆ ದಶಾಕ್ಷರಂಗಳ ಮಧ್ಯ ಬೀಜಾಕ್ಷರವೇ ಶಿಕಾರಪ್ರಣವ. ಆ ಶಿಕಾರ ಪ್ರಣವ ಪೀಠದ ಮೇಲೆ ಬೆಳಗುತಿರ್ಪುದು ಶಿವಲಿಂಗ. ಅದರಿಂದ ಮೇಲೆ ಅನಾಹತಚಕ್ರವಿರ್ಪುದು. ಆ ಚಕ್ರಕ್ಕೆ ದ್ವಾದಶದಳ. ಆ ದ್ವಾದಶದಳಂಗಳಲ್ಲಿ ದ್ವಾದಶಾಕ್ಷರಂಗಳು. ಆ ದ್ವಾದಶಾಕ್ಷರಂಗಳ ಮಧ್ಯ ಬೀಜಾಕ್ಷರವೇ ವಕಾರಪ್ರಣವ. ಆ ವಕಾರಪ್ರಣವಪೀಠದ ಮೇಲೆ ಬೆಳಗುತಿರ್ಪುದು ಜಂಗಮಲಿಂಗ. ಅದರಿಂದ ಮೇಲೆ ವಿಶುದ್ಧಿಚಕ್ರವಿರ್ಪುದು. ಆ ಚಕ್ರಕ್ಕೆ ಷೋಡಶದಳ. ಆ ಷೋಡಶದಳಂಗಳಲ್ಲಿ ಷೋಡಶಾಕ್ಷರಂಗಳು. ಆ ಷೋಡಶಾಕ್ಷರಂಗಳ ಮಧ್ಯ ಬೀಜಾಕ್ಷರವೇ ಯಕಾರಪ್ರಣವ. ಆ ಯಕಾರಪ್ರಣವಪೀಠದ ಮೇಲೆ ಬೆಳಗುತಿರ್ಪುದು ಪ್ರಸಾದಲಿಂಗ. ಅದರಿಂದ ಮೇಲೆ ಆಜ್ಞಾಚಕ್ರವಿರ್ಪುದು. ಆ ಚಕ್ರಕ್ಕೆ ದ್ವಿದಳ. ಆ ದ್ವಿದಳಂಗಳಲ್ಲಿ ದ್ವಯಾಕ್ಷರಂಗಳು. ಆ ದ್ವಯಾಕ್ಷರಂಗಳ ಮಧ್ಯ ಬೀಜಾಕ್ಷರವೇ ಒಂಕಾರಪ್ರಣವ. ಆ ಓಂಕಾರಪ್ರಣವಪೀಠದ ಮೇಲೆ ಬೆಳಗುತಿರ್ಪುದು ಮಹಾಲಿಂಗ. ಅದರಿಂದ ಮೇಲೆ ಬ್ರಹ್ಮಚಕ್ರವಿರ್ಪುದು. ಆ ಚಕ್ರಕ್ಕೆ ಸಹಸ್ರದಳ. ಆ ಸಹಸ್ರದಳಂಗಳಲ್ಲಿ ಸಹಸ್ರಾಕ್ಷರಂಗಳು. ಆ ಸಹಸ್ರಾಕ್ಷರಂಗಳ ಮಧ್ಯ ಬೀಜಾಕ್ಷರವೇ ನಿಷ್ಕಲಪ್ರಣವ. ಆ ನಿಷ್ಕಲಪ್ರಣವಪೀಠದ ಮೇಲೆ ಬೆಳಗುತಿರ್ಪುದು ನಿಷ್ಕಲಲಿಂಗ. ಅದರಿಂದ ಮೇಲೆ ಶಿಖಾಚಕ್ರವಿರ್ಪುದು. ಆ ಚಕ್ರಕ್ಕೆ ತ್ರಿದಳ. ಆ ತ್ರಿದಳಂಗಳಲ್ಲಿ ತ್ರಯಾಕ್ಷರಂಗಳು. ಆ ತ್ರಯಾಕ್ಷರಂಗಳ ಮಧ್ಯ ಬೀಜಾಕ್ಷರವೇ ಶೂನ್ಯಪ್ರಣವ. ಆ ಶೂನ್ಯಪ್ರಣವಪೀಠದ ಮೇಲೆ ಬೆಳಗುತಿರ್ಪುದು ಶೂನ್ಯಲಿಂಗ. ಅದರಿಂದ ಮೇಲೆ ಪಶ್ಚಿಮಚಕ್ರವಿರ್ಪುದು. ಆ ಚಕ್ರಕ್ಕೆ ಏಕದಳ. ಆ ಏಕದಳದಲ್ಲಿ ಸರ್ವರಂಜನೆಯನೊಳಕೊಂಡು ವಾಚಾತೀತವೆನಿಸುವ ನಿರಂಜನಪ್ರಣವ. ಆ ನಿರಂಜನ ಪ್ರಣವಪೀಠದ ಮೇಲೆ ಬೆಳಗುತಿರ್ಪುದು ನಿರಂಜನಲಿಂಗ. ಇಂತೀ ತರುವಾಯದಿಂದೆ ಆಧಾರ ಸ್ವಾದ್ಥಿಷ್ಠಾನದಲ್ಲಿ ಲಯ, ಆ ಸ್ವಾದ್ಥಿಷ್ಠಾನ ಮಣಿಪೂರಕದಲ್ಲಿ ಲಯ. ಆ ಮಣಿಪೂರಕ ಅನಾಹತದಲ್ಲಿ ಲಯ. ಆ ಅನಾಹತ ವಿಶುದ್ಧಿಯಲ್ಲಿ ಲಯ. ಆ ವಿಶುದ್ಧಿ ಆಜ್ಞೆಯಲ್ಲಿ ಲಯ. ಆ ಆಜ್ಞೆ ಬ್ರಹ್ಮಚಕ್ರದಲ್ಲಿ ಲಯ. ಆ ಬ್ರಹ್ಮಚಕ್ರ ಶಿಖಾಚಕ್ರದಲ್ಲಿ ಲಯ. ಆ ಶಿಖಾಚಕ್ರ ಪಶ್ಚಿಮಚಕ್ರದಲ್ಲಿ ಲಯ. ಆ ಪಶ್ಚಿಮಚಕ್ರ ಅಣುಚಕ್ರದಲ್ಲಿ ಲಯ. ಆ ಅಣುಚಕ್ರ ನಿರವಯಲಲ್ಲಿ ಲಯ. ಆ ನಿರವಯಲು ನಿಜವ ಕೂಡಿ ಸಹಜವಾದಲ್ಲಿ ಅಖಂಡೇಶ್ವರನೆಂಬ ಶಬ್ದ ಮುಗ್ಧವಾಯಿತ್ತು.
--------------
ಷಣ್ಮುಖಸ್ವಾಮಿ
ಎನ್ನ ಈ ಸಂಸಾರದ ಬಾಳುವೆ ನೆಲೆಯಿಲ್ಲ ಕಂಡಾ ! ಆದಡೆ, ಶಿವನೆ ನೀನು ಕಾಡುವ ಕಾಟ ನೆಲೆಯಿಲ್ಲ. ಸಂಸಾರದ ಕೂಡೆ ಕಾಡುವುದು ಲಯ. ಇಂತೀ ಎರಡೂ ಲಯವಾದಡೆ ನಾನು ನೀನೂ ಕೂಡಿ ನಿತ್ಯರಾಗಿ ಸುಖಿಯಿಸುವ, ಸಕಳೇಶ್ವರದೇವಾ.
--------------
ಸಕಳೇಶ ಮಾದರಸ
ಶ್ರೀಗುರುಲಿಂಗಜಂಗಮದ ಧೂಳಪಾದೋದಕದಿಂದ ಸಮಸ್ತಲೋಕದ ಪ್ರಾಣಿಗಳನೆಲ್ಲವ ಭವತ್ವವಳಿದು ಭೃತ್ಯಭಕ್ತಿಮಾರ್ಗವ ತೋರುವುದಯ್ಯ, ಶ್ರೀಗುರುಲಿಂಗಜಂಗಮದ ದೀಕ್ಷಾಪಾದೋದಕದಿಂದ ಸಮಸ್ತ ಪದಾರ್ಥಂಗಳೆಲ್ಲವ ಶಿವಗಣಪದಕ್ಕೆ ಯೋಗ್ಯವಾಗುವಂತೆ ಮಾಡುವುದಯ್ಯ. ಶ್ರೀಗುರುಲಿಂಗಜಂಗಮದ ಶಿಕ್ಷಾಪಾದೋದಕದಿಂದ ಬ್ರಹ್ಮನ ಉತ್ಪತ್ಯ, ವಿಷ್ಣುವಿನ ಸ್ಥಿತಿ, ರುದ್ರನ ಲಯ, ಈಶ್ವರನ ತಿರೋಧಾನ, ಸದಾಶಿವನ ಅನುಗ್ರಹ ತೊಡದು ಶಿವಶರಣಗಣಂಗಳ ನಿಜನಿವಾಸವ ತೋರುವುದಯ್ಯ. ಶ್ರೀಗುರುಲಿಂಗಜಂಗಮದ ಮಹಾಜ್ಞಾನ ಪಾದೋದಕದಿಂದ ಷಡ್ವಿಧ ದೀಕ್ಷಾತ್ರಯವ ಕರುಣಿಸಿ, ಷಟ್ಸ್ಥಲಮಾರ್ಗವ ತೋರುವುದಯ್ಯ. ಶ್ರೀಗುರುಲಿಂಗಜಂಗಮದ ಸ್ಪರ್ಶನೋದಕ, ಅವಧಾನೋದಕ, ಆಪ್ಯಾಯನೋದಕದಿಂದ ತ್ರಿವಿಧಲಿಂಗಾಂಗ ಸಮರಸದ ಸನ್ಮಾರ್ಗಾಚಾರಕ್ರಿಯಾಜ್ಞಾನವ ತೋರುವುದಯ್ಯ. ಶ್ರಿಗುರುಲಿಂಗಜಂಗಮದ ಹಸ್ತೋದಕ-ಪರಿಣಾಮೋದಕ-ನಿರ್ನಾಮೋದಕದಿಂದ ಷಡ್ವಿಧಲಿಂಗಾಂಗ ಸಮರಸಾಚರಣೆಯ ಮಾರ್ಗದ, ಮೀರಿದ ಕ್ರಿಯಾಜ್ಞಾನವ ತೋರುವುದಯ್ಯ. ಶ್ರೀಗುರುಲಿಂಗಜಂಗಮದ ಸತ್ಯೋದಕ-ಕರುಣಜಲ- ವಿನಯಜಲ-ಸಮತಾಜಲದಿಂದ ಸಮಸ್ತಪ್ರಮಥಗಣಂಗಳೆಲ್ಲ ಜ್ಯೋತಿರ್ಮಯವಾದರು ನೋಡ. ಶ್ರೀಗುರುಲಿಂಗಜಂಗಮದ ಪಾದೋದಕವೆ ಪರಮಾರಾಧ್ಯ ಶರಣಗಣಂಗಳಾಚಾರಸಂಪದಕ್ಕೆ ಪರಬ್ರಹ್ಮ ಜ್ಯೋತಿರ್ಮಯವಸ್ತು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಒಂದು ಎರಡಹುದೆ ? ಎರಡು ಒಂದಹುದೆ ? ಒಂದು ಒಂದೇ, ಎರಡು ಎರಡೇ. ಅದು ಕಾರಣ, ಶಿವನು ತನ್ನ ಲೀಲಾಕಾರಣವಾಗಿ ಮಾಯಾ ನಿರ್ಮಿತವಂ ಮಾಡಿ, ಆ ಮಾಯಾರಚನೆಯಿಂದಾದ ಬ್ರಹ್ಮಾಂಡ ಸಂದೋಹ, ಹರಿ ವಿರಿಂಚಿ ಸುರಪತಿ ಸುರಾಸುರರು ನರನಿಕರ, ಖಗಮೃಗ ಜೀವರಾಶಿಗಳೆಲ್ಲವೂ ಶಿವನಿಂದಲಾಗಿ, ಶಿವನಿಂದ ಹೊರೆಯಿಸಿಕೊಂಡು, ಶಿವನಿಂದವೆ ಹೋದವೆಂದಡೆ, ಅವರ ಆಗು ಹೋಗು ಇರವು ಹೋಗಿನೊಳಗೆ ಲಯ ಗಮನ ಸ್ಥಿತಿ ಶಿವಂಗುಂಟೆ, ಎಲೆ ಮರುಳಗಳಿರಾ ? ಗಗನದಲ್ಲಿ ತೋರಿದ ಮೇಘವು ಗಗನದಲ್ಲಿ ಅಡಗಿದವೆಂದಡೆ, ಆ ಗಗನ ತಾ ಮೇಘವೆ ? ತನ್ನಾದ್ಥೀನಶಕ್ತಿದಂಡದಿಂ ಕುಂಬಾರ ಚಕ್ರವ ತಿರುಗಿಸಲು, ಆ ಚಕ್ರಭ್ರಮಣ ಚೈತನ್ಯವು ಆ ಕುಂಬಾರನೆ, ಮರುಳುಗಳಿರಾ ? ಆ ಚೈತನ್ಯ ಅಡಗುವುದೆ ? ನಿಲ್ಲು ಮಾಣು. ಬಿಲ್ಲ ನಾರಿಗೆ ಅಂಬಂ ಸಂಧಾನಿಸಿ ಎಸೆಯಲಾ, ಅಂಬು ಹರಿದ ಚೈತನ್ಯ ಬಿಲ್ಲು ಕಾರಣವೆ ? ಅಲ್ಲ , ನಿಲ್ಲು , ಮಾಣು. ಇವೆಲ್ಲವು ಚೈತನ್ಯಂಗಳು. ಅಂತು ಸರ್ವವೆಲ್ಲವು ತೋರಿಯಡಗುವುದು. ಸರ್ವೇಶ್ವರನು, ಸರ್ವಕರ್ತೃ, ಸರ್ವಚೈತನ್ಯ, ಸೂತ್ರಯಂತ್ರವಾಹಕ ಶಿವನು. ಸರ್ವಲಯ ಗಮನ ಸ್ಥಿತಿ ತನಗುಂಟೆ ? ನಿಲ್ಲು , ಮಾಣಿರೆ, ಎಲೆ ಜಡಜೀವಿಗಳಿರಾ. ಗಗನದ ರವಿ ಕಿರಣದಿಂದ ಸಕಲರೂಪಿತ ದ್ರವ್ಯಪದಾರ್ಥಂಗಳಲ್ಲಿ ಪ್ರತಿಪ್ರಭೆ ತೋರಲು, ಆ ಪ್ರತಿಪ್ರಭೆಯ ಆಗುಹೋಗಿನ ಸ್ಥಿತಿಗತಿ ಆ ಗಗನದ ಸೂರ್ಯಂಗುಂಟೆ, ಎಲೆ ಜಡಜೀವಿಗಳಿರಾ ? ಈ ಪರಿಯಲೆ ವಿಶ್ವವೆಲ್ಲವಕ್ಕೂ ತಾನಲ್ಲದ ತಾನಿಲ್ಲದ ಪ್ರೇರಣ ಚೈತನ್ಯವೇ ವಿಶ್ವದ ನಯನ, ವಿಶ್ವದ ಮುಖ, ವಿಶ್ವದ ಬಾಹು, ವಿಶ್ವದ[ಚ]ರಣ, ಸ್ವರ್ಗಮತ್ರ್ಯ ಭುವನಾದ್ಯಂಗಳ ಮೂಲಚೈತನ್ಯಸೂತ್ರ ತಾನಲ್ಲದೆ, ತಾನಿಲ್ಲದೆ ಆಡಿಸುವ ಸೂತ್ರಾತ್ಮಕನಲ್ಲದೆ ಅವರಾಗು ತನಗುಂಟೆ, ಎಲೆ ಭ್ರಮಿತರಿರಾ ? `ವಿಶ್ವತಶ್ಚಕ್ಷುರುತ ವಿಶ್ವತೋಮುಖೋ ವಿಶ್ವತೋ ಬಾಹುರುತ ವಿಶ್ವತಸ್ಪಾ ಪಾತ್ | ಸಂ ಬಾಹುಭ್ಯಾಂಧಮತಿ ಸಂಪತತ್ರೈದ್ರ್ಯಾವಾ ಭೂಮೀ ಜನಯನ್ ದೇವ ಏಕಃ ಎನಲು, `ಈಶಾನಃ ಶಿವ ಏಕೋದೇವಃ ಶಿವಂ ಕರಃ ತತ್ಸರ್ವಮನ್ಯತ್ ಪರಿತ್ಯಜೇತ್' ಎನಲು, `ಏಕ ಏವ ರುದ್ರೋ ನ ದ್ವಿತೀಯಾಯ ತಸ್ಥು' ಎನಲು, ಶಿವನೊಬ್ಬನೇ, ಇಬ್ಬರಿಲ್ಲ . `ನ ಯಥಾಸ್ತಿ ಕೂರ್ಮರೋಮಾಣಿ, ಶೃಂಗಂ ನ ನರಮಸ್ತಕೇ ನ ಯಥಾಸ್ತಿ ವಿಯತ್ಪುಷ್ಪಂ ನ ತಥಾಸ್ತಿ ಪರಾತ್ಪರಃ |' ನಾಲ್ಕು ವೇದಂಗಳು ಬಿನ್ನವಿಸಿದವು ಕೇಳಿರೇ ಎಲೆ ವಿಪ್ರರಿರಾ. ಇದನರಿದು, ಬಸವಪ್ರಿಯ ಕೂಡಲಚೆನ್ನಸಂಗಯ್ಯನನೆ ಧ್ಯಾನಿಸಿ, ನಿರೀಕ್ಷಿಸಿ, ಸ್ತುತಿಸಿ, ಯಜಿಸಿ ಕೃತಾರ್ಥರಾಗಿರೆ ಎಲೆ ಮರುಳು ವಿಪ್ರರಿರಾ.
--------------
ಸಂಗಮೇಶ್ವರದ ಅಪ್ಪಣ್ಣ
ಪರಾತ್ಪರ ಚಿದ್ಬ್ರಹ್ಮಪರಶಿವಮೂರ್ತಿಯು ಮನು-ಮುನಿ, ಸಿದ್ಧ-ಸಾಧಕ, ಯಕ್ಷ-ರಾಕ್ಷಸ, ಯತಿ-ವ್ರತಿ, ಶೀಲ-ನೇಮಗಳ ಭಾವಾಭಾವಕ್ಕೆ ಮೆಚ್ಚಿ, ಅವರವರ ಕಾಂಕ್ಷೆಗಳಂತೆ ಫಲಪದದಾಯುಷ್ಯಕ್ಕೆ ಯೋಗ್ಯರಾಗಿ, ಅಷ್ಟಮಹದೈಶ್ವರ್ಯದಿಂದ ಬ್ರಹ್ಮನ ಉತ್ಪತ್ತಿ, ವಿಷ್ಣುವಿನ ಸ್ಥಿತಿ, ರುದ್ರನ ಲಯ, ಈಶ್ವರನ ತಿರೋಧಾನ, ಸದಾಶಿವನ ಅನುಗ್ರಹಕ್ಕೆ ಕಾರಣರಾಗಿ, ಶೈವಮಾರ್ಗದಿಂದೆ ನಿಜಮೋಕ್ಷವ ಕಾಣದೆ, ಅಷ್ಟಾವರಣದ ಚಿದ್ಬೆಳಗ ಸೇರಿದ ಸದ್ಭಕ್ತಿ-ಜ್ಞಾನ-ವೈರಾಗ್ಯ, ಸತ್ಯ-ಸದಾಚಾರವನರಿಯದೆ, ಇಹಲೋಕದ ಭೋಗವ ಪರಲೋಕದ ಮೋಕ್ಷಾಪೇಕ್ಷೆಯಿಂದ ಎಡೆಯಾಡುತ್ತ, ಪುಣ್ಯ-ಪಾಪ, ಸುಖ-ದುಃಖ, ಸ್ತುತಿ-ನಿಂದೆ, ಸಿರಿ-ದರಿದ್ರ. ಆಶೆ-ಆಮಿಷ, ರೋಗ-ರುಜಿನಗಳಿಂದ, ಶಿವನೆ ಹರನೆ ಭವನೆಯೆಂದು ಗೋಳಿಡುವವರಿಗೆ, ನಿರಾಕಾರಪರಿಪೂರ್ಣ ಪರಶಿವನು ಆಗಳು ಹಿಂದಾಗಿ, ಶಿವಗಣವ ಸೇರುವಂತೆ ಯೋಗಾಭ್ಯಾಸವ ತೋರಿ, ಅನಂತಮಣಿಮಾಲೆ ಜಪಕ್ರಿಯಾನುಷ್ಠಾನ ಮಂತ್ರ-ತಂತ್ರ-ಯಂತ್ರ-ಯಜ್ಞಾದಿಗಳ ಹೇಳಿ, ಪರಮಾರಾಧ್ಯ ನಿರವಯಪ್ರಭು ಮಹಾಂತನ ಗಣಾಚಾರಕ್ಕೆ ಅಯೋಗ್ಯರೆನಿಸಿರ್ಪರು ಕಾಣಾ ಸಿದ್ಧಮಲ್ಲಿಕಾರ್ಜುಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಅತಕ್ರ್ಯ ಅಪ್ರಮಾಣ ಅನಾಮಯ ಅನುಪಮ ಸರ್ವಗತ ಸರ್ವಜ್ಞ ಸರ್ವೇಶ್ವರನಪ್ಪ ಪರಶಿವನು ಜಗತ್‍ಸೃಷ್ಟ್ಯರ್ಥವಾಗಿ ಸಮಸ್ತತತ್ವಂಗಳುತ್ಪತ್ತಿಗೆ ಮೂಲಿಗನಾಗಿ ತನ್ನಿಚ್ಛೆಯ ನೆನಹೆಂಬ ಚಿಂತಾಶಕ್ತಿಯ ಸಹಸ್ರದೊಳೊಂದಂಶದಲ್ಲಿ ಕುಂಡಲಿನಿಯಪ್ಪ ಪರೆ ಜನಿಸಿತ್ತು. ಆ ಪರಶಿವನಪ್ಪ ನಿಷ್ಕಲಬ್ರಹ್ಮವು ಈ ಕುಂಡಲಿನಿಯು [ತಾದಾತ್ಯ]ದಿಂ ಬ್ಥಿನ್ನವಿಲ್ಲದಿಹುದೆ ಸಕಲ ನಿಷ್ಕಲವಪ್ಪ ಸದಾಶಿವನು. ಆ ಸದಾಶಿವನು ತಾನೆ ಸಾದಾಖ್ಯದಿಂ ಪಂಚಬ್ರಹ್ಮಮೂರ್ತಿಯಾದುದು. ಎಂತೆಂದೊಡೆ: ಆ ಕುಂಡಲಿನಿಯಪ್ಪ ಪರೆಯ ಸಹಸ್ರದೊಳೊಂದಂಶಂದಲ್ಲಿ ಆದಿಶಕ್ತಿ ಜನಿಸಿತ್ತು. ಆದಿಶಕ್ತಿಯ ಸಹಸ್ರದೊಳೊಂದಂಶದಲ್ಲಿ ಇಚ್ಛಾಶಕ್ತಿ ಜನಿಸಿತ್ತು. ಇಚ್ಛಾಶಕ್ತಿಯ ಸಹಸ್ರದೊಳೊಂದಂಶದಲ್ಲಿ ಜ್ಞಾನಶಕ್ತಿ ಜನಿಸಿತ್ತು. ಜ್ಞಾನಶಕ್ತಿಯ ಸಹಸ್ರದೊಳೊಂದಂಶದಲ್ಲಿ ಕ್ರಿಯಾಶಕ್ತಿ ಜನಿಸಿತ್ತು. ಆ ನಿಷ್ಕಲವಪ್ಪ ಶಿವನ ನಿಷ್ಕಲೆಯಪ್ಪ ಕುಂಡಲಿನಿಯಪ್ಪ ಪರೆಯ ಹತ್ತರೊಳೊಂದಂಶದಲ್ಲಿ ಶಿವಸಾದಾಖ್ಯ ಜನಿಸಿತ್ತು. ಆದಿಶಕ್ತಿಯ ಹತ್ತರೊಳೊಂದಂಶದಲ್ಲಿ ಅಮೂರ್ತಿಸಾದಾಖ್ಯ ಜನಿಸಿತ್ತು. ಇಚ್ಛಾಶಕ್ತಿಯ ಹತ್ತರೊಳೊಂದಂಶದಲ್ಲಿ ಮೂರ್ತಿಸಾದಾಖ್ಯ ಜನಿಸಿತ್ತು. ಜ್ಞಾನಶಕ್ತಿಯ ಹತ್ತರೊಳೊಂದಂಶದಲ್ಲಿ ಕರ್ತೃಸಾದಾಖ್ಯ ಜನಿಸಿತ್ತು. ಕ್ರಿಯಾಶಕ್ತಿಯ ಹತ್ತರೊಳೊಂದಂಶದಲ್ಲಿ ಕರ್ಮಸಾದಾಖ್ಯ ಜನಿಸಿತ್ತು. ಆ ಕರ್ಮಸಾದಾಖ್ಯವಪ್ಪ ಮಾಹೇಶ್ವರನು ಸಕಲಸ್ವರೂಪದಿಂ ಸೋಮಧರ ಮೊದಲಾದ ಲಿಂಗೋದ್ಭವ ಕಡೆಯಾದ ಪಂಚವಿಂಶತಿಲೀಲೆಯ ತಾಳ್ದ ಸಕಲವಪ್ಪ ಮಾಹೇಶ್ವರನು ಸಕಲನಿಷ್ಕಲವಪ್ಪ ಸದಾಶಿವನು ನಿಷ್ಕಲವಪ್ಪ ಶಿವನೊಬ್ಬನಲ್ಲದೆ ಬೇರಲ್ಲವೆಂಬುದಕ್ಕೆ `ತತ್ಪರಂ ಬ್ರಹ್ಮೇತಿ, ಸ ಏಕೋ ರುದ್ರಸ ಈಶಾನಸ್ಸ ಭಗವಾನ್ ಶ್ರುತಿ: ಸ ಮಹೇಶ್ವರಸ್ಸ ಮಹಾದೇವ ಇತಿ ಇಂತೆಂದುದಾಗಿ, ಏಕಮೇವ ಅದ್ವಿತೀಯನಪ್ಪ ಸೋಮಧರನು, ಉಮಾಸಹವಾದ ಸೋಮನಿಂದ ವಾಯು, ಅಗ್ನಿ, ಪೃಥ್ವಿ, ರವಿ ಮೊದಲಾದ ಅಷ್ಟಮೂರ್ತಿಗಳು ದೇವರ್ಕಳು ಸುರಪ ಹರಿವಿರಿಂಚಿಗಳು ಜನಿಸಿದುದಕ್ಕೆ ಶ್ರುತಿ:ಸೋಮಃ ಪವತೇ ಜನಿತಾ ಮತೀನಾಂ ಜನಿತಾ ದಿವೋ ಜನಿತಾ ಪೃಥಿವ್ಯಾರ್ಜನಿತಾಗ್ನಿ ಸೂರ್ಯಸ್ಯ ಜನಿತೇಂದ್ರಸ್ಯ ಜನಿತಾಥ ವಿಷ್ಣೋಃ ಎಂದುದಾಗಿ, ತನ್ಮಹೇಶ್ವರಕೋಟ್ಯಂಶ ಬ್ರಹ್ಮವಿಷ್ಣುಸಮುದ್ಭವಂ ಋಷಯಃ ಕೃತವೋ ಕೋಟಿರ್ನಿಮಿಷೇಣ ಸಮುದ್ಭವಂ ಎಂದುದಾಗಿ, ಅಷ್ಟತನುವಿನೊಳಗಾದ ಜಗದ ರಚನೆ ಆರಿಂದ ರಚಿಸಿತ್ತು? ಅದ್ಥಿಕಾರ ಲಯ ಭೋಗಕ್ಕೆ ಅವನೊರ್ವ ಕರ್ತನು ಸೃಷ್ಟಿ, ಸ್ಥಿತಿ, ಸಂಹೃತಿ ತಿರೋಧಾನಾನುಗ್ರಹವಾವನಿಂದಹುದು; ಸರ್ವಜ್ಞತ್ವ ಕರ್ತೃತ್ವ ಅನಾದಿಬೋಧತ್ವ ಸ್ವತಂತ್ರತ್ವ ನಿತ್ಯತ್ವ ಅಲುಪ್ತಶಕ್ತಿತ್ವವಾವಗುಂಟು, ಆ ಶಿವನೆ ಘೃತಕಾಠಿಣ್ಯದಂತೆ, ನೀರಾಲಿಕಲ್ಲಂತೆ, ಸಕಲ ಸಕಲನಿಷ್ಕಲ ನಿಷ್ಕಲವಾದವನು, ಸೌರಾಷ್ಟ್ರ ಸೋಮೇಶ್ವರಲಿಂಗನೊಬ್ಬನೆ ಕಾಣಿರೆ.
--------------
ಆದಯ್ಯ
ಇಂತಷ್ಪಾಕ್ಷರಮಂತ್ರ ನಿರೂಪಣಾನಂತರದಲ್ಲಿ ನವಾಕ್ಷರ ಮಂತ್ರಮಂ ಪೇಳ್ವೆನೆಂತೆನೆ ಭೂತಾಂತ ಸಂಜ್ಞಿತ ಹಕಾರಮನುದ್ಧರಿಸಿ ಸ್ವರ ತ್ರಯೋದಶಾಂತದೊಡನೆ ಕೂಡಲ್ ಹೌ ಎನಿಸಿತ್ತು. ಸಂಜ್ಞಿತವಾದಕಾರದೊಡನೆ ಕೂಡೆ ಹ ಎನಿಸಿತ್ತು. ಹೌ ಹ ಎಂಬಿವೆರಡು ಶಕ್ತಿ ಸಂಜ್ಞಿತವಾದ ಬಿಂದುವಂ ಬೆರಸೆ ಹೌಂ ಹಂ ಎಂದೆನಿಸಿದವು. ಶಕ್ತಿ ಸಂಜ್ಞಿತವಾದ ಸ್ ಎಂಬ ವ್ಯಂಜನಂ ಮಾತ್ರಾಸಂಜ್ಞಿತವಾದ ಕಾರಮನೊಂದೆ ಸ ಎನಿಸಿ- ತೇಳನೆಯ ವರ್ಗಾಂತ್ಯಾಕ್ಷರವಾದ ವ್ ಎಂಬುದಂ ಪಿಂಪೇಳ್ದ ಸಕಾರದ ಪೂರ್ವದೊಳಿಡೆ ಸ್ವ ಎನಿಸಿತ್ತು. ವಾಯುವರ್ಗದ ಕಡೆಯ ಮ್ ಎಂಬುದನಾದಿಭೂತ ಸಂಜ್ಞಿತಮಾದಾಕಾಶ ವರ್ಗಾಂತ್ಯವಾದಕಾರದೊಡನೆ ಕೂಡೆ ಮ ಎನಿಸಿತ್ತು. ಲಯ ವರ್ಗದಾದಿಯ ಕ್ಷಕಾರಮಂ ವರುಣವರ್ಗದಾದಿಯ ತಕಾರಮುಮನುದ್ಧರಿಸಿ ಯವೆರಡರ ನಡುವೆ ಯಾಂತವಾದಾ ರ್ ಎಂಬ ವ್ಯಂಜನಮನಾದಿಬೀಜ ಸಂಜ್ಞಿತವಾದಕಾರದೊಡನೆ ಕೂಡೆ ರ ಎನಿಸಿತಿಂತು ಕ್ಷ ರ ತ ಎನಿಸಿದವು. ಸಪ್ತಮವರ್ಗದಾದಿಯಾದ ಯ್ ಎಂಬಕ್ಕರವನಾದಿಸಂಜ್ಞಿತವಾದ ಕಾರದೊಡನೆ ಕೂಡೆ ಯ ಎನಿಸಿತ್ತಾರನೆಯ ವಾಯುವರ್ಗಾಂತವಾದ ಮ್ ಎಂಬಕ್ಕರ ಮನಾದಿಸಂಜ್ಞಿತವಾದ ಕಾರದೊಡನೆ ಬೆರಸೆ ಮ ಎನಿಸಿ, ಒಂಬತುಮಮಂ ಬಿಂದು ನಾದಸಂಜ್ಞಿತವಾದ ಸೊನ್ನೆಯಂ ಕೂಡಿಸೆ, `ಹೌಂ ಹಂ ಸ್ವಂ ಮಂ ಕ್ಷಂ ರಂ ತಂ ಯಂ ಮಂ' ಎಂಬೀ ನವಾಕ್ಷರ ಮಂತ್ರ ಸರ್ವಸಿದ್ಧಿಪ್ರದ ಶಾಂತಿಕಮಂತ್ರವೆಂದು ನಿರೂಪಿಸಿದೆಯಯ್ಯಾ, ಪರಶಿವಲಿಂಗೇಶ್ವರ ನವಲಿಂಗ ಭಾಸ್ವರಾ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಆ ಪರಶಿವನ ಅಷ್ಟಾಂಗದಿಂದಾದ ಬ್ರಹ್ಮಾಂಡದ ಸ್ಥಿರ ಚರ ಪ್ರಾಣಿಗಳ ಲಯವ ನೋಡಿ ಚಿಂತೆಯೊಳಗಾಗಿ, ಕಂತುಹರನ ಧ್ಯಾನವ ಮಾಡಲು, ಆ ಹರ ಗುರುರೂಪವ ತಾಳ್ದು ಬಂದು, ತನ್ನ ಚಿಂತಿಸಿದ ಸುಜ್ಞಾನಿಗಳಿಗೆ, ಮನವನೊಬ್ಬುಳಿಗೊಳಿಸುವುದಕ್ಕೆ ಕಾರಣವೆಂದು ಹೇಳಿದ ಷಣ್ಮುಖ, ಶಾಂಭವಿ, ಖೇಚರಿ, ಭೂಚರಿ, ಸಾಚರಿ, ಕುರಂಗ, ಪಾಲೋತಕ, ಹಠ, ಲಯ, ಲಂಬಿಕ, ಮೊದಲಾದ ಅನಂತ ಮುದ್ರೆಗಳ ಸಾಧಿಸಿ, ಆ ಮುದ್ರೆ ಸಾಧನದಲ್ಲಿ ಕಂಡ, ಮಾಯ, ಛಾಯ, ಅಭ್ರಛಾಯ, ಪುರುಷಛಾಯ, ಮಿಂಚಿನ ಛಾಯ, ಬಳ್ಳಿಮಿರುಪಿನ ಛಾಯ, ಆರು ವರ್ಣದ ಛಾಯ, ಮೃತ್ಯುವಿನ ಛಾಯ, ಜೀವ ಜಪ ಮರಣ ಚಿನ್ನ ಕನಸಸಂಭ್ರಮ, ಕುಂಡಲಿನೋಟ, ಘೋಷಲಂಪಟ, ಮಾನಸಪೂಜೆ, ಬೈಲವಾಣಿ, ಪಶ್ಚಿಮಕೋಣೆ, ಆತ್ಮಭೆಟ್ಟಿ, ಮಂತ್ರಪಾಠ, ಒಳಬೆಳಗು, ಹೊರಬೆಳಗು ಪರಿಪರಿಯ ಬೆರಗುಗಳ ತಿಳಿದು, ಇದೇ ನಿಜಬ್ರಹ್ಮವೆಂದು ಹೆಮ್ಮೆ ೈಸಿ, ಆಸೆವೊಡಿಯದೆ, ಕ್ಲೇಶ ಕಡಿಯದೆ, ಘಾಶಿಯಾಗಿ ಹೇಸಕಿಯೊಳಗೆ ಮುಳಿಗಿ ಮುಂದುಗಾಣದೇ ಹೋದರು ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಆರು ಅಂಕಣದೊಳಗಾರು ದರುಶನ ಪೂಜೆ, ಆರೂಢರೂಢಾದಿಯೋಗಿಗಳಿರುತ್ತಿರಲು, ಆರಾರಿಂದತ್ತತ್ತ ವಿೂರಿ ತೋರುವ ಸ್ವಯಂಜ್ಯೋತಿ ಇರಲು, ಬೇರೆಯರಸಲುಂಟೆ ಶಿವಯೋಗವು ? ಆರು ಅಂಕಣದೊಳಗೆ ಆರು ಮಂದಿಯ ಸಂದಣಿಯ ಓಲಗದ ಸಡಗರವೆಂದು ಆರೂಢ ಯೋಗಿಗಳದನೆಣಿಕೆಗೊಳರು. ಮೂರು ಮನೆಯ ಮತ್ತೆ ದಾಳಿಗೊಳುವ ಕಾರಣಿಕರವಲ್ಲವಾಗಿ ವಿೂರಿ ಒಂಬತ್ತು ಗೊಪೆಯೊಳು ಲಯ ಗಮನ ಸ್ಥಿತ್ಯರ್ಥಂಗಳ ಹಂಗಿಲ್ಲದ ಹಂಗಿನಲ್ಲಿ ನೀನು ನಿನ್ನಲ್ಲಿ ಪತಂಗನ್ಯಾಯದಂತೆ ಗುಹೇಶ್ವರನೊಳೊಂದು ಕಂಡಾ.
--------------
ಅಲ್ಲಮಪ್ರಭುದೇವರು
ಪಶು ಪಾಶ ಮಲ ಮಾಯಾಕರ್ಮಂಗಳು ನಿತ್ಯವೆಂಬೆ. ನಿತ್ಯವಾದಡೆ, `ಪಶುಪಾಶವಿನಿರ್ಮುಕ್ತಃ ಪರಮಾತ್ಮಾ ಸದಾಶಿವಃ ಎಂದುದಾಗಿ ಇದಂ ಮಲತ್ರಯದೋಷಂ ಗುರುಣೈವ ವಿಮೋಚನಂ' ಎಂದುದಾಗಿ, ಪಶು ಪಾಶ ಮಲ ಮಾಯಾಕರ್ಮಂಗಳು ಗುರೂಪದೇಶದಿಂದಲೂ ಶಿವಪ್ರಸಾದತ್ವದಿಂದಲೂ ಕೆಡುತ್ತಿರ್ದಾವು. ಪಶು ಪಾಶ ಮಲ ಮಾಯಾ ಕರ್ಮಂಗಳು ಶಿವಯೋಗಿಗಳ ಮಧ್ಯದಲ್ಲಿಯೂ ಕೆಡುತ್ತಿರ್ದಾವು; ಕೆಡುತ್ತಿರ್ದಂಥ ಅನಿತ್ಯವಾದ ವಸ್ತುವ, ಅಭ್ರಚ್ಛಾಯವ ನಿತ್ಯವೆನ್ನಬಹುದೇ? ನಿತ್ಯವೆಂಬೆಯಾದಡೆ, ಮಲಮಾಯಾಕರ್ಮಂಗಳು ಎಂದೂ ತೊಲಗುವುದಿಲ್ಲ ಎನ್ನು. ಮಲಮಾಯಾಕರ್ಮಂಗಳು ಎಂದೂ ತೊಲಗುವುದಿಲ್ಲ ಎಂಬಾಗವೇ ಮುಕ್ತಿಯಿಲ್ಲಯೆನ್ನು. ಮುಕ್ತಿಯುಂಟಾದಡೆ, ಮಲಮಾಯಾಕರ್ಮಂಗಳು ನಿತ್ಯವೆಂಬುದು ಅಬದ್ಧ. ಅವು ನಿತ್ಯವಾದಾಗವೆ, ಉತ್ಪತ್ತಿ ಸ್ಥಿತಿ ಪ್ರಳಯಂಗಳಿಲ್ಲಾಯೆನ್ನು. ಉತ್ಪತ್ತಿ ಸ್ಥಿತಿ ಪ್ರಳಯಂಗಳುಂಟಾದಲ್ಲಿ, ನಿತ್ಯವೆನಲಿಲ್ಲ. ಪೃಥ್ವಿಯ ಲಯ ಅಪ್ಪುವಿನಲ್ಲಿ, ಅಪ್ಪುವಿನ ಲಯ ಅಗ್ನಿಯಲ್ಲಿ, ಅಗ್ನಿಯ ಲಯ ವಾಯುವಿನಲ್ಲಿ, ವಾಯುವಿನ ಲಯ ಆಕಾಶದಲ್ಲಿ, ಆಕಾಶದ ಲಯ ಆತ್ಮನಲ್ಲಿ, ಆತ್ಮನ ಲಯ ಮಹಾಲಿಂಗದಲ್ಲಿ. ಇಂತಿವೆಲ್ಲವೂ ಮಹಾಲಿಂಗದಲ್ಲಿಯೇ ಹುಟ್ಟಿ, ಮಹಾಲಿಂಗದಲ್ಲಿಯೇ ಲಯವಾಗುವಲ್ಲಿಯೆ ಪಿಂಡಾಂಡವೆಲ್ಲವೂ ಲಯ. ಸಮಸ್ತ ತತ್ವಂಗಳೆಲ್ಲವೂ ಲಯ. ಈ ಲಯ ಗಮಂಗಳಿಗೆ ಆಸ್ಪದವಾದ ಶಿವತತ್ವವೊಂದೇ ನಿತ್ಯವಲ್ಲದೆ, ಉಳಿದವೆಲ್ಲವೊ ನಿತ್ಯವೆಂಬುದು ಹುಸಿ ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಇನ್ನಷ್ಟು ... -->