ಅಥವಾ

ಒಟ್ಟು 52 ಕಡೆಗಳಲ್ಲಿ , 24 ವಚನಕಾರರು , 47 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧರೆಯಗಲದ ಹುಲ್ಲೆ ಹರಿದು ಮೇಯಿತ್ತ ಕಂಡೆ. ಬಲೆಯ ಬೀಸುವ ಗಂಡರಾರೂ ಇಲ್ಲ, ಹರಿದು ಹಿಡಿದಹೆನೆಂದಡೆ ತಲೆ ಕಾಣಬರುತ್ತಲಿದೆ. ಶಿರವ ಹಿಡಿದೆಹೆನೆಂಬವರಿನ್ನಾರೂ ಇಲ್ಲ. ಹರಿದಾಡುವ ಹುಲ್ಲೆಯ ಕಂಡು ಹಲವು ಬೇಳಾರ (ಬೆಳ್ಳಾರ?)ವ ಬಿಟ್ಟು, ಬೇಟೆಕಾರ ಬಲೆಯ ಬೀಸಿದಡೆ ಹುಲ್ಲೆಯಂಜಿ ಹೋಯಿತ್ತು. ಮರುಳುದಲೆಯಲ್ಲಿ ಹುಲ್ಲೆಯನೆಸೆದಯಬೇಕೆಂದು ಸರಳ ಬಿಟ್ಟು ಬಾಣವನೊಂದು ಕೈಯಲ್ಲಿ ಹಿಡಿದು (ಹಿಡಿವಡೆ?) ಹಳ್ಳಕೊಳ್ಳವ ದಾಂಟಿ ಗಟ್ಟಬೆಟ್ಟವ ಕಳೆದು ಅತ್ತ ಬಯಲ ಮರನ ತಾ ಮೊರೆಗೊಂಡಿತ್ತು. ಹತ್ತೆ ಸಾರಿದ ಮೃಗವ ತಾನೆಚ್ಚಡೆ ನಾರಿ ಹರಿದು ಬಿಲ್ಲು ಮುರಿದು ಹುಲ್ಲೆ ಸತ್ತಿತ್ತು. ಅದ ಕಿಚ್ಚಿಲ್ಲದ ನಾಡಿಗೊಯ್ದು ಸುಟ್ಟು ಬಾಣಸವ ಮಾಡಲು ಸತ್ತ ಹುಲ್ಲೆ ಕರಗಿ ಶಬ (ಸಬ?) ಉಳಿಯಿತ್ತು. ಗುಹೇಶ್ವರಾ ನಿಮ್ಮ ಶರಣ ಕಟ್ಟಿದಿರ ಬಾಣಸದ ಮನೆಗೆ ಬಂದನು.
--------------
ಅಲ್ಲಮಪ್ರಭುದೇವರು
ಶಿರವ ಸೀರೆಯ ಕರವ ಕಂಗಳ ಶಿಶುವನಿಕ್ಕಿಯೆರದರು. ಭಾಷೆ ಬಳಸಿ ಹಂಗು ಹಳಸಿಹೋಯಿತ್ತು. ಸಿಮ್ಮಲಿಗೆಯ ಚೆನ್ನರಾಮನೆಂಬ ಲಿಂಗಜಂಗಮಕ್ಕೆ ಕೊಟ್ಟಿಹೆನೆಂಬ ಶಬ್ದ ಅಳಿದರುಳಿಯಿತು.
--------------
ಚಂದಿಮರಸ
ಅಯ್ಯಾ ಏನೂ ಏನೂ ಇಲ್ಲದಂದು, ಆದಿಕುಳದುತ್ಪತ್ಯವಾಗದಂದು, ಚಂದ್ರಧರ ವೃಷಭವಾಹನರಿಲ್ಲದಂದು, ಕಾಲಸಂಹರ ತ್ರಿಪುರಸಂಹರರಿಲ್ಲದಂದು, ಕಾಮನ ಭಸ್ಮವ ಪೂಸದಂದು ದೇವಿಯರಿಬ್ಬರಿಲ್ಲದಂದು, ಹರಿಯ ಹತ್ತವತಾರದಲ್ಲಿ ತಾರದಂದು, ಬ್ರಹ್ಮನ ಶಿರವ ಹರಿಯದಂದು, ಇವಾವ ಲೀಲೆಯದೋರದಂದು, ನಿಮಗನಂತನಾಮಂಗಳಿಲ್ಲದಂದು, ಅಂದು ನಿಮ್ಮ ಹೆಸರೇನು? ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ?.
--------------
ಸ್ವತಂತ್ರ ಸಿದ್ಧಲಿಂಗ
ಎನ್ನ ತನು ಕರಗಿ, ಎನ್ನ ಮನ ಕರಗಿ ಕೊರಗಿದ ದುಃಖವಿದಾರದಯ್ಯಾ? `ಅಯ್ಯಾ ಅಯ್ಯಾ' ಎಂದು ಆಳುವ ಅಕ್ಕೆ ಇದಾರದಯ್ಯಾ? ಮರಹೆಂಬ ಕೂರಸಿಗೆ ಗುರಿಮಾಡಿದವರಾರಯ್ಯಾ? ಹಾ! ಹಾ! ಎಂಬ ಧ್ವನಿಯ ಕೇಳಲಾರದೆ, ಕಂಡು ಕರುಣಂದ ಶಿರವ ಹಿಡಿದೆತ್ತಿ, ಎನ್ನ ಕಣ್ಣ ನೀರ ತೊಡೆದನು ಕಪಿಲಸಿದ್ಧಮಲ್ಲಿನಾಥಯ್ಯನು.
--------------
ಸಿದ್ಧರಾಮೇಶ್ವರ
ಕಾಮ ಬಲ್ಲಿದನೆಂದಡೆ ಉರುಹಿ ಭಸ್ಮವ ಮಾಡಿದ. ಕಾಲ ಬಲ್ಲಿದನೆಂದಡೆ ಕೆಡಹಿ ತುಳಿದ. ಎಲೆ ಅವ್ವಾ, ನೀನು ಕೇಳಾ ತಾಯೆ. ಬ್ರಹ್ಮ ಬಲ್ಲಿದನೆಂದಡೆ ಶಿರವ ಚಿವುಟಿಯಾಡಿದ. ಎಲೆ ಅವ್ವಾ ನೀನು ಕೇಳಾ ತಾಯೆ. ವಿಷ್ಣು ಬಲ್ಲಿದನೆಂದಡೆ ಆಕಳ ಕಾಯ್ದಿರಿಸಿದ. ತ್ರಿಪುರದ ಕೋಟೆ ಬಲ್ಲಿತ್ತೆಂದಡೆ ನೊಸಲಕಂಗಳಲುರುಹಿದನವ್ವಾ. ಇದು ಕಾರಣ, ಚೆನ್ನಮಲ್ಲಿಕಾರ್ಜುನ ಗಂಡನೆನಗೆ, ಜನನ ಮರಣಕ್ಕೊಳಗಾಗದ ಬಲುಹನೇನ ಬಣ್ಣಿಪೆನವ್ವಾ.
--------------
ಅಕ್ಕಮಹಾದೇವಿ
ಕರದಲ್ಲಿ ಲಿಂಗವ ಪಿಡಿದುಕೊಂಡು, ಕಣ್ಣುಮುಚ್ಚಿ ಸರಜಪಮಾಲೆಯ ಬೆರಳಿಂದ ಎಳೆದೆಳೆದು ಎಣಿಸುತ್ತ, ಗುರುಮೂರ್ತಿಯ ಧ್ಯಾನಿಸುತ್ತ ಕಂಡೆನೆಂಬುತ್ತ ಇರುವರೆ ಮೂಳರಿರಾ ? ನಿಮಗೆಲ್ಲಿಯದೊ ಗುರುಧ್ಯಾನ ? ವರ ಪರವಸ್ತುವಿಂಗೆ ಸರಿ ಎನಿಸಿಕೊಂಬ ಗುರುಸ್ವಾಮಿ ನಿಮ್ಮ ನೆರೆಹೊರೆಯ ಸರಿಸಮೀಪ ಗ್ರಾಮದಲ್ಲಿರಲು ಅವರನ್ನು ಲೆಕ್ಕಿಸದೆ, ಉದಾಸೀನವ ಮಾಡಿ ಕಂಡು ನಿನ್ನ ಉಂಬ ಉಡುವ ಸಿರಿ ಸಂಪತ್ತಿನೊಳು ಅವರನು ಸತ್ಕರಿಸದೆ, ಕರದಲ್ಲಿ ನೋಡಿ ಕಂಡಿಹೆನೆಂದು ಶಿರವಂ ಬಿಗಿದು, ಕಣ್ಣನೆ ತೆರೆಯದೆ, ಸ್ವರದಲಾಗ ಪಿಟಿಪಿಟಿ ಎನ್ನುತ್ತ ಅರಿದೆವೆಂಬ ಅರಿವಿಂಗೆ ಶಿರದೂಗಿ ಬೆರಗಾಗಿ ನಗುತಿರ್ದ ನಮ್ಮ ಅಂಬಿಗರ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಕಾಯದ ಕಳವಳದಲ್ಲಿ ಹುಟ್ಟಿ ಲಿಂಗವನರಿಯದಂ[ತವರಿ]ರಲಿ, ಷಡು ಮಹಾವೇದ ಶಾಸ್ತ್ರಗಮಪುರಾಣದರ್ಥವನೋದಿ ಲಿಂಗ ಉಂಟು, ಇಲ್ಲೆಂಬ ಅಜ್ಞಾನಿಗಳಂತಿರಲಿ. ಷಡುಶೈವರು ಹಂಚಾಗಿ ಹೋದರು. ಎಂತು ನಿಜಲಿಂಗವಂತಂಗೆ ಸರಿಯೆಂಬೆ ಅದ್ವೈತಿಗಳೆಲ್ಲಾ ಲಿಂಗಾರಾಧನೆ ಹುಸಿಯೆಂದು ಬುದ್ಧಿತಪ್ಪಿಕ್ರಮಗೆಟ್ಟು ಹೋದರು, ಬ್ರಹ್ಮ ನಾನೆಂದು ಶಿರವ ಹೋಗಾಡಿಕೊಂಡನು, ಬ್ರಹ್ಮಾದಿದೇವತೆಗಳು ಮಹಾಲಿಂಗಕ್ಕೆ ದೂರವಾಗಿ ಹೋದರು, ಹಮ್ಮಿಲ್ಲದ ಕಾರಣ ಕೂಡಲಸಂಗನ ಶರಣರು ಜಂಗವಂದ್ಯರಾದರು.
--------------
ಬಸವಣ್ಣ
ಊರ ಮುಂದಳ ದಾರಿಯಲ್ಲಿ ಸರ್ಪನು ಬಾಲವ ಗಗನದಲ್ಲಿಟ್ಟು, ಶಿರವ ನಾಗಲೋಕದಲ್ಲಿಟ್ಟು, ಈರೇಳುಭುವನ ಹದಿನಾಲ್ಕು ಲೋಕಂಗಳ ನುಂಗಿಕೊಂಡಿರ್ಪುದು ನೋಡಾ. ಕಡೆಯ ಬಾಗಿಲಲ್ಲಿ ಗಾರುಡಿಗ ನಿಂದು, ನಾಗಸ್ವರದ ನಾದವ ಮಾಡಲು ಆ ನಾಗಸ್ವರವ ಕೇಳಿ ನಾಗಲೋಕದಿಂದ ಎದ್ದ ಸರ್ಪನು ಆ ಗಾರುಡಿಗನ ನುಂಗಿತ್ತು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಹರಿದ ಶಿರವ ಹಚ್ಚಿ ಮೆರೆದರು ನಮ್ಮ ಶರಣರು, ಭಕ್ತಿಯ ಪ್ರಭಾವದಿಂದ. ಬರಡಾಕಳವ ಕರೆದು ಚರತತಿಗಿತ್ತರು ನಮ್ಮ ಶರಣರು, ಭಕ್ತಿಯ ಪ್ರಭಾವದಿಂದ. ಪೂರ್ವಕುಲಗೋತ್ರವನಳಿದು ಪುನೀತರಾದರು ನಮ್ಮ ಶರಣರು ಭಕ್ತಿಯ ಪ್ರಭಾವದಿಂದ. ``ಭಕ್ತೇರಸಾಧ್ಯಂ ನ ಹಿ ಕಿಂಚಿದಸ್ತಿ ಭಕ್ತ್ಯಾ ಸರ್ವಸಿದ್ಧಯಃ ಸಿದ್ಧ್ಯಂತಿ ' ಎಂಬ ವಚನವುಂಟಾಗಿ_ಭಕ್ತಂಗೆ ಅಸಾಧ್ಯವಾವುದು ? ಅದು ಕಾರಣ, ನಿಮ್ಮಡಿಯ ಭಕ್ತಿಯನೊಂದನೆ ಕರುಣಿಸಿ ಕಾಪಾಡಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಹರಿಯಾಣದೊಳಗಣ ಓಗರವ ಹರಿಯವರು ಹರಿಹರಿದುಂಡರಯ್ಯಾ. ಪರ ವಧು ಬಂದು ಬೆರಸಲು ಆ ಹರಿ ಪರಹರಿಯಾದ. ಉಣಬಂದ ಹರಿಯ ಶಿರವ ಮೆಟ್ಟಿ ನಿಂದಳು ನಿಮ್ಮ ಹೆಣ್ಣು. ಇದ ಕಂಡು ನಾ ಬೆರಗಾದೆನಯ್ಯಾ, ಕಪಿಲಸಿದ್ಧಮಲ್ಲಿನಾಥಯ್ಯಾ
--------------
ಸಿದ್ಧರಾಮೇಶ್ವರ
ರುದ್ರ ದೈವವಾದಡೆ ಕಪಾಲವ ಹೊತ್ತು ತಿರುಗಲೇಕೆ? ವಿಷ್ಣು ದೈವವಾದಡೆ ದಶಾವತಾರಕ್ಕೊಳಗಾಗಲೇಕೆ? ಬ್ರಹ್ಮ ದೈವವಾದಡೆ ಶಿರವ ಹೋಗಾಡಲೇಕೆ? ಇಂತೀ ಮೂರು ಅಳಿವಿಂಗೊಳಗು. ಅನಾದಿ ಚಿಚ್ಛಕ್ತಿಯ ಅಂಶೀಭೂತ ಮಾಯಿಕ ಸಂಬಂಧ ದೇಹಿಕರು; ಅವತಾರಮೂರ್ತಿಗಳಾದ ರಣಜಗದ ದೈವಂಗಳಿವರು. ಇವರ ಭೇದ ದರ್ಪಣದ ಒಳ ಹೊರಗಿನಂತಪ್ಪ ಭೇದ. ನಿಶ್ಚಯವಂತರು ತಿಳಿದು ನೋಡಿರಣ್ಣಾ, ತಿಳಿದಡೆ ಇರವು ಉದಕದೊಳಗಣ ವಿಕಾರದಂತೆ ಬಯಲೊಳಗಣ ಮರೀಚಿಯಂತೆ ಹಿಂಗದ ವಸ್ತು ನಾರಾಯಣಪ್ರಿಯ ರಾಮನಾಥನಲ್ಲಿ ಗುಣವಿರಹಿತ ಶರಣಂಗೆ.
--------------
ಗುಪ್ತ ಮಂಚಣ್ಣ
ನಿರ್ವಿಕಾರಿಯ ಭಾವದಲ್ಲಿ ತೋರಿದ ಗರ್ವ ಬಿಳಿಯ ಮದಗಜವ ಕಳೆವರೆ ಅರಳವಲ್ಲ ನೋಡಾ. ಬಿಳಿಯ ಮದಗಜದ ಶಿರವ ಉರಿಯ ಚರಣದಲ್ಲಿ ಮೆಟ್ಟಿ, ನಿರವನಯನನೆರೆದು ನಿಜಲಿಂಗೈಕ್ಯನಾದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅಮೃತಮಥನದಲ್ಲಿ ಅಜ ಹರಿ ಸುರಪ ವಾಲಿ ಸುಗ್ರೀವರಳಿದರು. ಕಾಶಿಯಲ್ಲಿ ಬ್ರಹ್ಮ ವಿಷ್ಣುಗಳಳಿದರು. ಕೇದಾರದಲ್ಲಿ ಪಾಂಡವರಳಿದರು, ಕಲ್ಯಾಣದಲ್ಲಿ ವ್ಯಾಳನಳಿದನು. ಶ್ರೀಶೈಲದಲ್ಲಿ ಹಿರಣ್ಯ ಧನುಜ ನಾಗಾರ್ಜುನರಳಿದರು. ಪಾತಾಳ ಲಂಕೆಯಲ್ಲಿ ಮಹಿರಾವಣನಳಿದನು. ಲವಣ ಲಂಕೆಯಲ್ಲಿ ಲಕ್ಷ್ಮಿಗಳುಪಿದವನಳಿದನು. ದಶರಥನ ತೋಹಿನಲ್ಲಿ ಮಂಡುಬಲಚೌಡನಳಿದನು. ಬ್ಥೀಮನ ಕೈಯಲ್ಲಿ ಕೀಚಕನಳಿದನು. ಮುನಿ ಕರ್ಣಿಕೆಯ ಶಿರವ ಹರಿದು, ಸುರಪನಜಹರಿಗಳು ಶಾಪಹತರಾದರು. ಋಷಿಯ ಸತಿಗಳುಪಿ ಸುರಪ ಮೈಯನಳಿದ. ಬ್ಥೀಷ್ಮರು ಕುಂಭಕರ್ಣ ದ್ರೋಣ ಜಾಂಬರು ನಿದ್ರೆಯಲ್ಲಿ ಅಳಿದರು. ವ್ಯಾಧರ ಬಾಣದಲ್ಲಿ ಬಿದ್ದರು ವಿಷ್ಣು ಪಾಂಡ್ಯರಾಯರು. ವಿಷದ ಪಣ್ಣಿಂದಳಿದ ಪರೀಕ್ಷಿತರಾಯನು. ಪರಶುರಾಮನ ಕೈಯಲಿ ಜಮದಗ್ನಿ ಮುನಿಯ ವಧೆಯಿಂದ ಕಾರ್ತಿಕರಳಿದರು. ವೃಷಭನ ವಧೆಯಿಂದ ವೀತರಾಜನಳಿದ. ಕುರುಕ್ಷೇತ್ರದಲ್ಲಿ ಕೌರವರಳಿದರು. ಮಾಸನೂರಲ್ಲಿ ಸಿದ್ಧರಳಿದರು. ಕೊಲ್ಲಾಪುರದಲ್ಲಿ ಹರಿ ಅಜ ಇಂದ್ರ ದಿಕ್ಪಾಲಕರು ತೃಣಕೆ ಲಫುವಾದರು. ಹೋಮ ಕಾಮ ತ್ರಿಣೇತ್ರ ಪಂಚಮುಖರೆಲ್ಲ ಮಹಾಪ್ರಳಯದಲ್ಲಿ ಅಳಿದರು. ಇನ್ನು ಬಿಜ್ಜಳರಾಯನ ಅಳಿವಿನುಳಿವಿನ ಹವಣವೇನು ಕಲಿದೇವರದೇವಾ.
--------------
ಮಡಿವಾಳ ಮಾಚಿದೇವ
ಸದ್ಭಕ್ತಿಯೆ ಆರು ಸ್ಥಲಕ್ಕೆ ಮುಖ್ಯ ಸದ್ಭಕ್ತಿಯ ಕೂಡಿಕೊಂಡು ಷಟ್‍ಸ್ಥಲವಿಪ್ಪುದು. ಇದು ಕಾರಣ: ಸದ್ಭಕ್ತಿಯಿಂ ಲಿಂಗದ-ಲಿಂಗವಂತರ ಸುಖವನು, ಮಹಿಮೆಯ ಪೂಜೆಯನು ಅರಿದು ಮರೆದು ವಿಷ್ಣು ಕಷ್ಟಜನ್ಮದಲ್ಲಿ ಬಂದನು. ಅರಿದು ಮರೆದು ಬ್ರಹ್ಮನು ಘನವೆಂದು ಶಿರವ ಹೋಗಾಡಿಕೊಂಡನು. ಅರಿದು ಮರೆದು ಇಂದ್ರನು ಭಂಗಿತನಾಗಿ ಐಶ್ವರ್ಯಮಂ ಹೋಗಾಡಿಕೊಂಡನು. ಅರಿದು ಮರೆದು ದಕ್ಷನು ಭಂಗಿತನಾಗಿ ಶಿರವ ಹೋಗಾಡಿಕೊಂಡನು. ಅರಿದು ಮರೆದು ವ್ಯಾಸನು ಹಸ್ತವ ಹೋಗಾಡಿಕೊಂಡನು. ಈ ದೃಷ್ಟವ ಹಲವು ಪುರಾತನರು ಕೇಳಿರಣ್ಣಾ: ಅರಿದು ಮರೆಯದೆ ನಂಬಲು ಸಿರಿಯಾಳನಿಗೆ ಶಿವಪದವಾಯಿತ್ತು. ಅರಿದು ಮರೆಯದೆ ನಂಬಲು ಸಿಂಧುಬಲ್ಲಾಳಂಗೆ ಶಿವಪದವಾಯಿತ್ತು. ಅರಿದು ಮರೆಯದೆ ನಂಬಲು ನಂಬಿಯಣ್ಣನ ಬೆನ್ನಿಲಿ ಶಿವ ಬಂದನು. ಅರಿದು ಮರೆಯದೆ ನಂಬಲು ನಿಂಬವ್ವೆಗೆ ಶಿವಪದವಾಯಿತ್ತು. ಅರಿದು ಮರೆಯದೆ ನಂಬಲು ಕೆಂಭಾವಿಯ ಭೋಗಣ್ಣನ ಬೆನ್ನಿಲಿ ಶಿವ ಬಂದನು. ಅರಿದು ಮರೆಯದೆ ನಂಬಲು ಪುರಾತನರೆಲ್ಲರು ಶಿವಪದಂಗಳ ಪಡೆದರು. ಇದನು ಶ್ರುತ ದೃಷ್ಟ ಅನುಮಾನದಿಂ ಕೇಳಿ, ನಿಶ್ಚೈಸಿ, ನಂಬಿ. ಅರಿವಿನ ಹದವಿದು, ಮರವೆಯ ಪರಿಯಿದು ಇಷ್ಟವಾದುದ ಹಿಡಿದು ಅನಿಷ್ಟವಾದುದ ಬಿಟ್ಟು ಅರಿವು ಸಯವಾಗಲು ಶಿವಪದವಪ್ಪುದು ತಪ್ಪದು, ಶಿವನಾಣೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ನವಸಾಸಾ ಅತಿಬಳನೆಂದಡೆ, ಒಂದು ಕೇಶವ ಕಿತ್ತನೆ ? ಶಿವನಿತ್ತ ಪಿಂಡವ, ಶ್ರೀರಾಮನು ಸೀತೆಗೆ ದಿಬ್ಯವನಿಕ್ಕಿಹೆನೆಂದು, ಹೋಮಕುಂಡಲದೊಳಗುರುಹಿದಡೆ, ಬ್ರಹ್ಮಾಂಡವನೊಡೆದು ಮರುಳುತಿದ್ದಲಿ ್ಲ, ಉರಿನಾಲಗೆಯ ಕೀಳನೆ ? ಪರಮನೊಲಿದ, ಪಶುಪತಿ ನಿರೂಪನೊಲಿದ, ಋಷಿಯನೊಂದು ವಾಕ್ಯದಿಂದ ಜಲ ಸಾಗರಂಗಳು ಬಂಧನಕ್ಕೆ ಬಾರವೆ, ನಳನೀಲರ ಕೈಯಲ್ಲಿ ? ಈಶ್ವರನ ಶರಣರ ಘಾಸಿಮಾಡನೆನೆಂದಡೆ, ನೊಸಲಕ್ಕರವ ತೊಡೆಯರೆ ? ಅಸುರನ ಪ್ರಹಾರವಿಡಿದು, ಹಿರಣ್ಯಾಕ್ಷನ ಕೊಂದು, ಶಿರವ ಹೋಗಾಡನೆ ನರಸಿಂಹನು? ಸ್ವತಂತ್ರನಯ್ಯಾ, ಸಕಳೇಶ್ವರದೇವ ನಿಮ್ಮ ಶರಣನು. ಸಿಡಿಲ ಸ್ವೀಕರಿಸನೆ ಶಿವಯೋಗಿ ಸಿದ್ಧರಾಮಯ್ಯನು?
--------------
ಸಕಳೇಶ ಮಾದರಸ
ಇನ್ನಷ್ಟು ... -->