ಅಥವಾ

ಒಟ್ಟು 196 ಕಡೆಗಳಲ್ಲಿ , 41 ವಚನಕಾರರು , 188 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕ್ರೀವಿಡಿದು ಗುರುಸಂಬಂದ್ಥಿಯಾಗಿ, ಜಾÕನವಿಡಿದು ಲಿಂಗಸಂಬಂದ್ಥಿಯಾಗಿ. ಘನವಿಡಿದು ಮಹಾಜಾÕನಿಯಾಗಿ, ಅರಿವು ಆಚರಣೆಯ ಕಂಡು, ಜಾÕನ ಮುಕುರವೆಂಬ ಮುಂದಣ ಶ್ರೀಸಂಬಂದ್ಥಿಯಾಗಿ, ಆಚಾರದಲ್ಲಿ ಸಂಪನ್ನನಾಗಿ, ಮಹೇಶ್ವರಸ್ಥಲವನರಿದು, ಅದೇ ಜಂಗಮವಾದ ಬಳಿಕ ನಿರಾಕುಳನಾಗಿ ಆಚರಿಸಿದರೆ ಅನಾದಿ ಜಂಗಮವೆಂಬೆ. ಸಾಮವೇದೇ- ವಿವಚಾಸೋವಿಚಾ ಲಿಂಗಾಲಿಂಗಿ ಚ ಫಲಾದಿ ಬ್ರಹ್ಮರಾಕ್ಷಸ ಸೋವಿಸಂಗಶ್ಚ | ಸೂಕರ ಶತಕೋಟಿ ಜನ್ಮ ಚ ಸೋಪಿ ಕ್ರೀಡಾಲಿಂಗ ಮಲಮೂತ್ರ ಮಾಂಸ ಭುಂಜಿತಃ | ಬ್ರಹ್ಮೇನ ಕೋಟಿ ರಾಕ್ಷಸಃ ಸೋಸಂಗೇನ ಶತಕೋಟಿಗಾರ್ದಭ ಜನ್ಮ ಚ | ಅದೇ ದಾಸಿ ದಾಸೇ ಸೂಕರ ಸಂಗಶಃ ಚ ನಾಃ | ಸೋವ ಮಾತ್ರವೆಂದು ತಂದ ಸ್ತ್ರೀಗಳನು ಶಿಷ್ಯಾದಿ ಪುತ್ರರ ಕೈಯ ಗುರು ತಾಯಿ ಎಂಬ ನಾಮಕರಣಂಗಳನುಂಟುಮಾಡಿ, ತನ್ನ ಅಂಗವಿಕಾರಕ್ಕೆ ತಂದ ಸಂತೆಯ ಡೊಂಬಿತಿಯ ತಂದು, ಹಿರಿಯರಲ್ಲಿ ಸರಿಮಾಡುವ ಜಂಗಮವೆ ಗುರುವೆ? ಅಜಾÕನ ಪುರುಷನಲ್ಲ, ಅವ ಹಿರಿಯತನಕ್ಕೆ ಸಲ್ಲ, ಅವಂಗೆ ಗುರುವಿಲ್ಲ ಲಿಂಗವಿಲ್ಲ, ಜಂಗಮ ಮುನ್ನವೆಯಿಲ್ಲ. ಅವ ಘಟಾತ್ಮನು ಸೋವಿಯ ಸಂಗ ಬೇಡ ಬಿಡಿರಣ್ಣಾ, ಸೋವಿಯ ಸಂಗವ ಮಾಡಿದರೆ ಶತಕೋಟಿ ದಾಸಿಯ ಬಸುರಲ್ಲಿ ಬಂದು, ಹೇಸಿಕೆಯಿಲ್ಲದೆ ಮಲಮೂತ್ರವನು ಹೇಗೆ ಸೂಕರ ಭುಂಜಿಸುವುದೊ ಹಾಂಗೆ ಭುಂಜಿಪನು. ನಾನಾ ಯೋನಿಯ ನರಕುವದು. ಸೋವಿ ಮಾತ್ರೇಣ ಆ ಲಿಂಗನಂ ಗುರು ತಾಯ ಅಪಮಾನ ಸಾಮಾನ್ಯವೆಂದು ಸೋವಿಯ ಸಂಗವ ಮಾಡಿದಡೆ ಎಪ್ಪತ್ತೇಳುಕೋಟಿ ಶ್ವಪಚಯೋನಿ ತಪ್ಪದಯ್ಯ. ಹನ್ನೆರಡು ಕಂಬ ಸಾಕ್ಷಿಯಾಗಿ, ಕಳಕನ್ನಡಿ ಸಾಕ್ಷಿಯಾಗಿ, ತೆಳೆಮಲು ಕಟ್ಟಿ ಸಾಕ್ಷಿಯಾಗಿ, ಆಯಿರಣೆಕೋಲು ಸಾಕ್ಷಿಯಾಗಿ, ಮುತ್ತೈದೆತನದಲ್ಲಿ ಶ್ರೇಷ್ಠಯಾಗಿ, ಜಾÕನ ದೃಕ್ಕಿನಿಂ ತಿಳಿದು, ಅನುಭಾವದ ಮುಖವನರಿದಂತೆ, ಆ ಜಾÕನನೇತ್ರವ ಅರಿದು ಧಾರೆಯನೆರೆಸಿಕೊಂಡು, ಅರಿವಿನಲ್ಲಿ ಇರದೆ ಕುರಿಯ ಹೇಲ ತಿಂಬಂತೆ, ಬಾಯಿಗೆ ಬಂದಂತೆ ಸೋವಿಯ ಸಂಗವ ಮಾಡುವವರ ಸರ್ವಾಂಗವೆಲ್ಲ ಗಣಿಕೆಯ ಯೋನಿಯ ಬಸುರ ನೋಡಾ. ಧಾರೆಯನೆರೆಸಿಕೊಂಡು ಕ್ರೀವಿಡಿದು ನಡೆಯದೆ, ತೊತ್ತಿನ ಮಗನಿಗೆ ಪಟ್ಟ ಕಟ್ಟಿದರೆ ಹಾದಿಯ ಎಲುವ ಕಂಡು ಓಡಿಹೋಗಿ ಗಡಗಡನೆ ಕಡಿವಂತೆ, ಸೋವಿಯ ಎಂಜಲ ತಿಂದವಂಗೆ ಗುರುವಿಲ್ಲ. ಅವ ದೇವಲೋಕ ಮತ್ರ್ಯಲೋಕ ಎರಡಕ್ಕೆ ಸಲ್ಲ. ಆವಾಗಮದಲ್ಲಿ ಉಂಟು, ಗಳಹಿ ಹೇಳಿರೊ, ಮಕ್ಕಳಿರಾ. ನೀವು ಬಲ್ಲರೆ ಕಾಳನಾಯ ಹೇಲ ತಿಂಬಂಗೆ ಹಿರಿಯನೆಂದು, ಹೋತನಂತೆ ಗಡ್ಡವ ಬೆಳಸಿಕೊಂಡು ಗುಡರಗುಮ್ಮನಂತೆ ಸುಮ್ಮನಿರುವಿರಿ. ಗರ್ವತನಕ್ಕೆ ಬಂದು ಹಿರಿಯರೆಂದು ಆಚರಣೆ ನ್ಯಾಯವ ಬಗಳುವಿರಿ. ಸೋವಿಸಂಗದಿಂದ ಕನಿಷ್ಠ ನರಕ ಕಾಣಿರಣ್ಣಾ. ಸೋವಿಯ ಸಂಗವ ಬಿಟ್ಟು ಧಾರೆಯ ಸ್ತ್ರೀಯಳ ನೆರದರೆ, ಆಚಾರವಿಡಿದು ನಡೆದು ಆಚರಣೆಯ ನುಡಿದರೆ ಶುದ್ಧವಾಗುವದಲ್ಲದೆ ತೊತ್ತಿನ ಮಗನಾಗಿ ಎಡೆಯ ಸಮಗಡಣವ ಬೇಡುವ ಪಾತಕರ, ಅವರ ಜಂಗಮವೆಂಬೆನೆ? ಸೋವಿಯ ಸಂಗದಿಂದ ಬಂದುದು ಬ್ರಹ್ಮೇತಿ. ಅಥರ್ವಣ ಸಾಮವೇದ ಯಜುರ್ವೇದ ಋಗ್ವೇದ ಇಂತಪ್ಪ ನಾಲ್ಕು ವೇದದಲ್ಲಿ ಶ್ರುತಿ ಸ್ಮøತಿಗಳಲ್ಲಿ ಆಗಮ ಪುರಾಣಂಗಳಲ್ಲಿ ಸೋವಿಯ ವಾಚ್ಯವೆಂಬುದುಂಟೆ ಪರಮಪಾತಕರಿರಾ? ನೂತನವ ಗಂಟಿಕ್ಕಿ ಜಗಲಿಯೆನ್ನದೆ ಪಟ್ಟಶಾಲೆಯೆಂಬಿಂ ತೊಂಡರಿರಾ. ತೊತ್ತನೊಯ್ದು ತೊತ್ತೆದಾಸಿ ಬಾಯೆನ್ನದೆ ಹೋವಿಯೆಂದು ಬಗಳುವಿರಿ. ಕಲಿಯುಗದಲ್ಲಿ ನೂತನದ ಸೂಳೆಯ ಮಕ್ಕಳು ನೀವು. ಸೋವಿಯ ಸಂಗವ ಮಾಡಿದವನು ಅರಿವುಳ್ಳ ಪುರುಷನಾದರೂ ಆಗಲಿ, ಅರಿದು ಮತ್ತೆ ಅರೆಮರುಳಾದ ಹಿರಿಯರನೇನೆಂಬೆನಯ್ಯಾ. ಅವನು ಪಾತಕನಘೋರಿಗಳು. ಅವರು ಇವರುವನರಿಯದ ಅಘೋರಿಗಳೆಂಬ ಇಂತಪ್ಪ ಸೋವಿಯ ಸಂಗವ ಮಾಡುವ ಬ್ರಹ್ಮೇತಿಕಾರ ಪಂಚಮಹಾಪಾತಕರು ಇಹಪರಕ್ಕೆ ಸಲ್ಲರೆಂದುದು. ನಿಮ್ಮಾಣೆ ನಿಮ್ಮ ಪ್ರಮಥರಾಣೆ, ಇಹವಿಲ್ಲ ಪರವಿಲ್ಲ, ಮುಕ್ತಿಯ ಫಲವಿಲ್ಲ, ಅಘೋರವಲ್ಲದೆ ಮತ್ತೇನೂ ಇಲ್ಲ. ನಿಮ್ಮಾಣೆ ಬ್ಥೀಮಬಂಕೇಶ್ವರಾ.
--------------
ಭೀಮಬಂಕೇಶ್ವರ
ನಾನಾ ಭೇದಂಗಳಲ್ಲಿ ಷಡ್ದರುಶನವ ಹೊಕ್ಕು ತಿಳಿದಡೂ ಶ್ರುತಿ ವೇದ ಶಾಸ್ತ್ರ ಪುರಾಣ ಆಗಮಂಗಳ ಕಲಿತಡೂ ಮೂರುಮಲದ ಭೇದವನರಿತು ಬಿಡುಮುಡಿಯಲ್ಲಿ ಕಳೆದುಳಿಯಬೇಕು. ಇದು ಪ್ರಸಿದ್ಧವಪ್ಪ ತೆರ. ಇದು ಸಂಗನಬಸವಣ್ಣನ ಸಾಕ್ಷಿಯಾಗಿ ಬ್ರಹ್ಮೇಶ್ವರಲಿಂಗವ ಕೂಡಬೇಕು.
--------------
ಬಾಹೂರ ಬೊಮ್ಮಣ್ಣ
ನಾನಾ ರೋಗಂಗಳು ಬಂದು ದೇಹವ ಹಿಡಿದಲ್ಲಿ ಶಿವಾರ್ಚನೆಯ ಬೆರಕೊಳ್ಳಿ, ಸಕಲಪುಷ್ಪಂಗಳಿಂದ ಪೂಜೆಯ ಮಾಡಿಕೊಳ್ಳಿ, ಪಂಚಾಕ್ಷರಿ ಪ್ರಣಮವ ತಪ್ಪದೆ ತ್ರಿಸಂದ್ಥಿಯಲ್ಲಿ ನೆನಹುಗೊಳ್ಳಿ, ಇವರಿಂದ ರುಜೆದರ್ಪಂಗಡಗು, ಮರುಳಶಂಕರಪ್ರಿಯ ಸಿದ್ಧರಾಮೇಶ್ವರ ಲಿಂಗ ಸಾಕ್ಷಿಯಾಗಿ.
--------------
ವೈದ್ಯ ಸಂಗಣ್ಣ
ಸಚ್ಚಿದಾನಂದ ಬ್ರಹ್ಮೋಪದೇಶ ಭಕ್ತಮಹೇಶ್ವರರು ಪರಮಪಾತಕಸೂತಕಂಗಳ ಬಾಹ್ಯಾಂತರಂಗದಲ್ಲಿ ಹೊದ್ದದೆ, ಸತ್ಯಶರಣರು ಮಾಡುಂಡುದೊಂದು ಕಾಯಕ, ಬೇಡುಂಡುದೊಂದು ಕಾಯಕದಿಂದ ಗಳಿಸಿದಂಥ ಪದಾರ್ಥಗಳ, ಗುರುಚರಪರಸ್ಥಿರಕ್ಕೆ ಷಟ್‍ಸ್ಥಲಸಂಬಂಧಗಳಿಂದ, ಷಡ್ವಿಧಮಂತ್ರಗಳ ಸೊಮ್ಮಿನಿಂ ಸಂತೃಪ್ತರಾಗಿರ್ಪುದು. ಆ ನಿಲುಕಡೆಯೆಂತೆಂದಡೆ : ಶ್ರುತಿಗುರುಸ್ವಾನುಭವ ಸಾಕ್ಷಿಯಾಗಿ, ಶ್ರೀಗುರುಲಿಂಗಜಂಗಮವೆ ಪರಾತ್ಪರವೆಂದು ಕಂಡು, ಷಡುಸ್ಥಲಮಾರ್ಗವಿಡಿದು, ತನ್ನ ನಿಜವ ತಾನರಿಯದೆ, ಭವಿಶೈವ ಬ್ಥಿನ್ನ ಕರ್ಮಿಗಳಂತೆ ಭಾವಭ್ರಮೆಗೆಟ್ಟು, ಹೊಲಬುದಪ್ಪಿ, ಭೋಗಾಪೇಕ್ಷಿತರಾಗಿ, ಹಲವು ಶಾಸ್ತ್ರೋಪದೇಶವಿಡಿದು, ಕಾಶಿ ರಾಮೇಶ್ವರ ಕಂಚಿ ಕಾಳಹಸ್ತಿ ಪಂಪಾಕ್ಷೇತ್ರ ಗೋಕರ್ಣ ಶ್ರೀಶೈಲಾದಿಯಾದ ತೀರ್ಥಯಾತ್ರೆ, ವೀರಣ್ಣ ಬಸವಣ್ಣ ಮಲ್ಲಣ್ಣ ಹಾವಿಗೆ ದಂಡಾಗ್ರ ಗಿಳಿಲು ಶಂಖ ಭಸ್ಮಗುಂಟಿಕೆ ತೀರ್ಥದಗುಂಬ ಹಾದಿಬೆನವ ಹಳ್ಳದ ಬೆನವ ವಾಸರದಯ್ಯ ವಿನಾಯಕ ಶಕ್ತಿ ಗಣೇಶ ಚಂಡಿ ಚಾಮುಂಡಿಯಲ್ಲಿ ಏಕನಾತಿ ಹಿರಿಹೊಳೆ ಜಟ್ಟಿಂಗ ತೆಪ್ಪದಾರತಿ ಪಂಚಪಾಂಡವರು ಬನ್ನಿಮಹಾಂಕಾಳಿ ತುಳಸಿ ಬಿಲ್ವವೃಕ್ಷ ಸಮಾದ್ಥಿ ಗದ್ದುಗೆ ಪುರಾಣ ವಚನಾರ್ಥಪುಸ್ತಕ ಲೆಕ್ಕದ ಓಹಿ ಕತ್ತಿ ಕಂಡೇಪೂಜೆ, ಊರಬೀರ ಪೀರ ಗೋರಿ ಸತ್ತವರ ತಿಥಿ ಚಿತ್ತಹೊಲೆ ಕರ್ಮದ ಗಂಗೆ ಗುಗ್ಗುಳ ಗೌರೀನೋಂಪಿ ದೀಪಹರಕೆ ಪೂಜೆ ಕರಿಯಸೀರೆ ಊರ ಮಾರಿದೇವತೆ ಅಂಬಲಿ ಮಜ್ಜಿಗೆ ಕುಂಭ ಹೊಸ್ತಲ ಮದುವೆಯಕಂಭ ಕುಂಭ ಸರಕಿನಗಂಟು ಮಹತ್ವ ಮೆರೆದವರ ಪಾದಮುದ್ರೆ ಕಡೆಯಾದವಕ್ಕೆ, ತನ್ನ ಕಾಯ ವಾಚ ಮನದಲ್ಲಿ ಹೊಳೆದು, ಪಿತ-ಮಾತೆ ಸತಿ-ಸುತ ಒಡಹುಟ್ಟಿದವರು ಸೇವಕ ಕಡೆಯಾದವರಿಂದೆ ತನ್ನ ಮನೆಯಲ್ಲಿ ಮಾಡಿದ ಎಡೆ ವಾರಮೃತ್ಯೋದಕ, ಪಾದೋದಕಸಂಬಂಧವಾದ, ವಿಭೂತಿ-ಗಂಧಾಕ್ಷತೆ-ಪುಷ್ಪ-ಪತ್ರಿ ಧೂಪ-ದೀಪ ಹಣ್ಣು-ಕಾಯಿ ವಸ್ತ್ರಾಭರಣ-ಪಂಚಕಳಸ ಕಾಣಿಕೆ ಮೊದಲಾದ ಬ್ಥಿನ್ನವ ಕರ್ಮಕ್ರಿಯಾಚಾರಲಿಂಗಬಾಹ್ಯರಾದ ಬ್ರಹ್ಮ ಕ್ಷತ್ರಿಯ ವೈಶ್ಯ ಶೂದ್ರ ಪಾಶುಪತ ಕಾಳಾಮುಖಿ ಯೋಗಿ-ಜೋಗಿ ಶ್ರವಣ-ಸನ್ಯಾಸಿ ಯತಿ-ವ್ರತಿ ಮನು-ಮುನಿ ಗರುಡ-ಗಂಧರ್ವ ಯಕ್ಷ-ರಾಕ್ಷಸ ಸಿದ್ಧ-ಸಾಧ್ಯರುಪದೇಶವಿಡಿದು ಚರಲಿಂಗೋದಯಘನಪಾದತೀರ್ಥವರ್ಪಿಸಿ, ನೈವೇದ್ಯ ಮಾಡಿಸುವಂಥಾದ್ದೆ ಅನಾಚಾರ. ಇದೇ ಭವಿಮಾಟಕೂಟ ಅಸತ್ಯದ ನಡೆನುಡಿಯ ವಿಚಾರದ ಪ್ರಥಮಪಾತಕ. ಇದಕ್ಕೆ ಹರನಿರೂಪ ಸಾಕ್ಷಿ : ``ಶಿವಾಚಾರಸುಸಂಪನ್ನಃ ಕೃತ್ವ್ದಾನ್ಯದೈವಸ್ಯ ಪೂಜನಂ | ಶ್ವಾನಯೋನಿಶತಂ ಗತ್ವಾ ಚಾಂಡಾಲಗೃಹಮಾಚರೇತ್ || ಅನಾಚಾರಿಕೃತಂ ಪಾಕಂ ಲಿಂಗನೈವೇದ್ಯಕಿಲ್ಬಿಷಂ | ಲಿಂಗಾಚಾರಿಕೃತಂ ಪಾಕಂ ಲಿಂಗನೈವೇದ್ಯಮುತ್ತಮಂ || ತದ್ದಿನಂ ದಿನದೋಷೇಣ ಶೋಣಿತಂ ಸುರಾಮಾಂಸಯೋಃ | ಏಕಭುಕ್ತೋಪವಾಸೇನ ನರಕೇ ಕಾಲಮಕ್ಷಯಂ || ಸೌಮೇ ಭೌಮೇ ವ್ಯತಿಪಾತೇ ಸಂಕ್ರಾಂತಿಶಿವರಾತ್ರಿಯೋ | ಶೈವಕರ್ಮೋಪವಾಸಿನಾಂ ನರಕೇ ಕಾಲಮಕ್ಷಯಂ || ಕಾರ್ತೀಕಮಾಘಶ್ರಾವಣ ಶೈವಪೂಜಾವಿಶೇಷತಃ | ವೀರಶೈವಸ್ತಥಾ ಕೃತ್ವಾ ಸನ್ತಶ್ಟ ಪ್ರಾಕೃತೈಃ ಸಮಾಃ || ಸ್ಥಾವರಾರ್ಪಿತನೈವೇದ್ಯಾತ್ ನ ತೃಪ್ತಿರ್ಮಮ ಪಾರ್ವತಿ | ಜಂಗಮಾರ್ಪಿತನೈವೇದ್ಯಾತ್ ಮಮ ತೃಪ್ತಿಶ್ಚ ಸರ್ವದಾ || ಸತ್ಪಾತ್ರದತ್ತವಿತ್ತಸ್ಯ ತದ್ಧನಂ ಸ್ವಧನಂ ಸುಖಂ | ಅಪಾತ್ರದತ್ತ ವಿತ್ತಸ್ಯ ತದ್ಧನಂ ಸ್ವಸುಖಂ ಭವೇತ್ || ಚರಸ್ಯ ಗಮನೋ ನಾಸ್ತಿ ಭಕ್ತಸ್ಯ ಗೃಹಮಾಚರೇತ್ | ಅನ್ಯಗೃಹಂ ಗಮಿಷ್ಯಂತಿ ಸದ್ಯೋ ಗೋಮಾಂಸಭಕ್ಷಣಮ್ || ಇಷ್ಟಲಿಂಗಮವಿಶ್ವಸ್ಯ ಅನ್ಯದೈವಮುಪಾಸತೇ | ಶ್ವಾನಯೋನಿ ಶತಂ ಗತ್ವಾ ಚಾಂಡಾಲಗೃಹಮಾಚರೇತ್ || ಬಹುಲಿಂಗಪೂಜಕಸ್ಯ ಬಹುಭಾವಗುರುಸ್ತಥಾ | ಬಹುಪ್ರಸಾದಂ ಭುಂಜಂತಿ ವೇಶ್ಯಾಪುತ್ರಸ್ತಥೈವ ಚ || ಅಭಕ್ತಜನಸಂಗಶ್ಚ ಮಂತ್ರಸ್ಯ ಚ ಆಗಮಃ | ಅನ್ಯದೈವಪರಿತ್ಯಾಗಃ ಲಿಂಗಭಕ್ತಸ್ಯ ಲಕ್ಷಣಂ || ಲಿಂಗಧಾರಕಭಕ್ತಾನಾಂ ಲಿಂಗಬಾಹ್ಯಸತೀಸುತಾಃ | ಆಲಿಂಗಿತಾ ಚುಂಬಿತಾಶ್ಚ ರೌರವಂ ನರಕಂ ವ್ರಜೇತ್ ||'' ಇಂತೆಂಬ ಹರಗುರುವಾಕ್ಯಪ್ರಮಾಣವದಾಗಿ, ಸದ್ಭಕ್ತಶರಣಗಣಾರಾಧ್ಯರು ಭೂಪ್ರತಿಷ್ಠಾದಿಗಳ ಹೊದ್ದಿದಡೆ, ಭವಬಂಧನವಪ್ಪದು ತಪ್ಪದು. ಅದು ಕಾರಣವಾಗಿ ಗುರುಮಾರ್ಗಿಕರು ಹೊದ್ದದೆ, ಭವಸಾಗರವ ದಾಂಟಿ, ನಿರ್ಧರದಿಂದಿಪ್ಪುದೊಂದು ನರಗುರಿಗಳ ಪ್ರಥಮಪಾತಕನಿರಸನ ಕಾಣಾ ನಿರವಯಪ್ರಭು ಮಹಾಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಬ್ರಹ್ಮೋಪದೇಶವಾಯಿತ್ತೆಂದು ಬ್ರಹ್ಮದೊಡನೆ ಧಿಕ್ಕಾರ ಬೇಡ. ಶಿವಜ್ಞಾನದೀಪ್ತಿ ತೋರಿತ್ತೆಂದು ಶಿವಶರಣರೊಡನೆ ಧಿಕ್ಕರಿಸಬೇಡ. ಕಾಲಜ್ಞಾನವಾಯಿತ್ತೆಂದು ಕರ್ಮವ ಹಳಿಯಬೇಡ. ಈ ತ್ರಿವಿಧೋತ್ಪಾತ ಸಲ್ಲದು. ಕೂಡಲಚೆನ್ನಸಂಗಮದೇವ ಸಾಕ್ಷಿಯಾಗಿ ಇವರೆಲ್ಲರೂ ಸಜ್ಜನ ಶುದ್ಧ ಶಿವಾಚಾರಕ್ಕೆಸಲ್ಲರು.
--------------
ಚನ್ನಬಸವಣ್ಣ
ಮಾಡುವ ಸದಾಚಾರಕ್ಕೆ ಮೊದಲನೆಯ ಲಿಂಗಪೂಜೆಯೆ ಗುರುಪೂಜೆ. ಮಾಡುವ ಸದಾಚಾರಕ್ಕೆ ಎರಡನೆಯ ಲಿಂಗಪೂಜೆಯೆ ಲಿಂಗಪೂಜೆ. ಮಾಡುವ ಸದಾಚಾರಕ್ಕೆ ಮೂರನೆಯ ಲಿಂಗಪೂಜೆಯೆ ಜಂಗಮಪೂಜೆ. ಮಾಡುವ ಸದಾಚಾರಕ್ಕೆ ಮೂರು ಪೂಜೆ. ಈ ಪೂಜೆ ಅನಂತಜನ್ಮದುರಿತಧ್ವಂಸಿ ನೋಡಾ, ಕೂಡಲಚೆನ್ನಸಂಗಮದೇವ ಸಾಕ್ಷಿಯಾಗಿ
--------------
ಚನ್ನಬಸವಣ್ಣ
ಅರಸುವಂಗೆ ಅರಸುವಂಗೆ ಅರಕೆ ತಾನಹುದು, ದೇವಾ ! ಬಯಸುವಂಗೆ ಬಯಸುವಂಗೆ ಬಯಕೆ ತಾನಹುದು, ದೇವಾ ! ನೀವು ಭಾವಿಸಿದಂತಲ್ಲದೆ ಬೇರೊಂದಾಗಬಲ್ಲುದೆ ? ಈರೇಳು ಭುವನಸ್ಥಾಪ್ಯ ಪ್ರಾಣಿಗಳೆಲ್ಲ ನಿಮ್ಮಿಂದಲಾದವಾಗಿ. ನಿಮ್ಮಿಂದಲಹುದಾಗದೆಂಬ ಸಂದೇಹವುಂಟೆ ಬಸವಣ್ಣ ? ನಿಮ್ಮಡಿಗಳೆಂದಂತೆ, ನೆನೆದಂತೆ, ನೋಡಿದಂತೆ, ತಪ್ಪದು. ಕೂಡಲಚೆನ್ನಸಂಗಮದೇವರು ಸಾಕ್ಷಿಯಾಗಿ ಪ್ರಭುವಿನಾಣೆ ಕಟ್ಟು ಗುಡಿಯನು.
--------------
ಚನ್ನಬಸವಣ್ಣ
ಹುಟ್ಟು ಹೊಂದುಗಳರಿಯದೆ ನೆಟ್ಟನೆ ಹುಟ್ಟಿ ಬಂದವನೆಂದು ಕಾರ್ಯದಲ್ಲಿ ಕರಿದು ಬಿಳಿದು ಕೂಡಿ ಮಾಡಿಕೊಂಡೆನೆಂದರೆ ನಿಜವಾಗಲರಿಯದು. ಭೂಪ ಧನಿಕರು ಕೊಲ್ಲಿಸಿ ಹಾಕುವರು ಗುರುನಿರಂಜನ ಚನ್ನಬಸವಲಿಂಗಾ ನೀ ಸಾಕ್ಷಿಯಾಗಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಸಜ್ಜನಸನ್ನಹಿತವಾದ ಭಕ್ತಿ, ಹೊತ್ತಿಗೊಂದು ಪರಿಯುಂಟೆ ಹೇಳಾ ? ಒಮ್ಮೆ ಅಹಂಕಾರ ಒಮ್ಮೆ ಕಿಂಕಿಲವೆ ? ಮನಕ್ಕೆ ಮನ ಸಾಕ್ಷಿಯಾಗಿ ಮಾಡುವ ಭಕ್ತನಲ್ಲಿ ಗುಹೇಶ್ವರನಿಪ್ಪನಲ್ಲದೆ, ಪ್ರಪಂಚಿನೊಳಗಿಲ್ಲ ಕಾಣಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ಸರ್ವಾಂಗಲಿಂಗಿಯಾದ ಶರಣನ ಲಿಂಗ ಬ್ಥಿನ್ನವಾಗಿ ಹೋಗಲು ಆ ಲಿಂಗದೊಡನೆ ತನ್ನ ಪ್ರಾಣವ ಬಿಡುವದು. ಇದಲ್ಲದೆ ಜೀವಕಾಸೆ ಮಾಡಿ ಪುನಃ ಲಿಂಗವ ಧರಿಸಿದನಾದಡೆ ಶುನಿಯ ಬಸುರಲ್ಲಿ ಬಂದು ಅನೇಕಕಾಲ ನಾಯಕನರಕದಲ್ಲಿರ್ಪನಯ್ಯಾ ನೀ ಸಾಕ್ಷಿಯಾಗಿ ಅಮರಗುಂಡದ ಮಲ್ಲಿಕಾರ್ಜುನಾ.
--------------
ಪುರದ ನಾಗಣ್ಣ
ಮೂರುಕಾಲ ಮಣಿಯನೇರಿ ಹತ್ತಿಯನರೆವ ಹೆಂಗಳೆಯ ಚಿತ್ತ ಕಾಲವಿಡಿದು, ಕಾಳವಿಸರ್ಜಿಸಿ ಅರಳೆಯ ತನ್ನತ್ತಲೆಳಹುವದು. ಕ್ರಿಯಾಪಾದ ಜ್ಞಾನಪಾದ ಚರ್ಯಾಪಾದವೆಂಬ ಪಾದತ್ರಯದಮೇಲಿರ್ದ ಶರಣನ ಚಿತ್ತ, ಸೂಕ್ಷ್ಮಸುವಿಚಾರವಿಡಿದು ಕರಣೇಂದ್ರಿಯ ವಿಷಯಕಾಠಿಣ್ಯ ಪ್ರಕೃತಿಯ ದೂಡುತ್ತ ಸ್ವಚ್ಫ ಸೂಕ್ಷ್ಮತರಭಾವವೇದಿ ಮಹಾಘನ ಪ್ರಕಾಶವ ನೆರೆಯಲೆಳಹುವುದು ಗುರುನಿರಂಜನ ಚನ್ನಬಸವಲಿಂಗ ಸಾಕ್ಷಿಯಾಗಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ವಚನದ ರಚನೆಯೆಂಬ ಮಾತಿನ ಬಣ್ಣದ ಪರಿಯಲ್ಲ ನೋಡಾ. ಹೊಲಳಿ ಕಂಡವರೆಲ್ಲರು ಮೂರ್ತಿಗೊಳಗಾದರು. ವೇದ ಶಾಸ್ತ್ರ ಮಾರ್ಗವೆಲ್ಲವೂ ಹೊಗಳಿ ಕಾಣವೆಂಬುದ, ಗುಹೇಶ್ವರ ಸಾಕ್ಷಿಯಾಗಿ ಮೂರುಲೋಕ ಬಲ್ಲುದು ಕಾಣಾ ಸಿದ್ಧರಾಮಯ್ಯಾ.
--------------
ಅಲ್ಲಮಪ್ರಭುದೇವರು
ಲಿಂಗವಲ್ಲದನ್ಯವರಿನಯೆ, ಶಿವಲಿಂಗವಲ್ಲದನ್ಯವ ನೆನೆಯೆ, ಜಂಗಮವಲ್ಲದನ್ಯಕ್ಕೆರಗೆ, ಪ್ರಸಾದವಲ್ಲದನ್ಯವ ಕೊಳ್ಳೆ, ಶಿವಗಣಂಗಳಲ್ಲದನ್ಯರ ಬೆರೆಯೆ. ಕೂಡಲಸಂಗಮದೇವರು ಸಾಕ್ಷಿಯಾಗಿ ನಾನಾವ ತೀರ್ಥಯಾತ್ರೆಗಳನರಿಯೆ.
--------------
ಬಸವಣ್ಣ
ಅಂಗವನರಿಯದೆ ಗುರುಭಕ್ತಿಯ ಮಾಡಲೊಪ್ಪಿದೆನು. ಮನವನರಿಯದೆ ಲಿಂಗಪೂಜೆಯ ಮಾಡಲೆಸವುತಿರ್ದೆನು. ಪ್ರಾಣವನರಿಯದೆ ಜಂಗಮದಾಸೋಹವ ಮಾಡಲು ಪ್ರಕಾಶವಾದೆನು. ಸತ್ತುಚಿತ್ತಾನಂದಕೆ ನಿತ್ಯ ಅಂಗ ಮನ ಪ್ರಾಣ ನಿರಂತರ ಶೋಭನ ಗುರುನಿರಂಜನ ಚನ್ನಬಸವಲಿಂಗ ಸಾಕ್ಷಿಯಾಗಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಭಕ್ತಂಗೆ ತ್ರಿವಿಧಮಲ ನಾಸ್ತಿಯಾಗಿರಬೇಕು. ಮಾಹೇಶ್ವರಂಗೆ ಬಂಧ ಜಪ ನೇಮ ಕರ್ಮಂಗಳು ಹಿಂಗಿರಬೇಕು. ಪ್ರಸಾದಿಗೆ ಆಯತ ಸ್ವಾಯತ ಸನ್ನಹಿತವೆಂಬುದ ಸಂದೇಹಕ್ಕಿಕ್ಕದೆ ಸ್ವಯಸನ್ನದ್ಧವಾಗಿರಬೇಕು. ಪ್ರಾಣಲಿಂಗಿಯಾದಡೆ ಬಂದು ಸೋಂಕುವ ಸುಗುಣ ನಿಂದು ಸೋಂಕುವ ದುರ್ಗುಣ ಉಭಯ ಸೋಂಕುವುದಕ್ಕೆ ಮುನ್ನವೆ ಹಿಡಿವುದ ಹಿಡಿದು, ಬಿಡುವುದ ಬಿಟ್ಟು ಅರ್ಪಿಸಬೇಕು. ಶರಣನಾದಲ್ಲಿ ಆಗುಚೇಗೆಯೆಂಬುದನರಿಯದೆ ಸ್ತುತಿನಿಂದ್ಯಾದಿಗಳಿಗೆ ಮೈಗೊಡದೆ ರಾಗವಿರಾಗವೆಂಬುದಕ್ಕೆ ಮನವಿಕ್ಕದೆ ಜಿಹ್ವೆ ಗುಹ್ಯೇಂದ್ರಿಯಕ್ಕೆ ನಿಲುಕದೆ ಮದಗಜದಂತೆ ಇದಿರನರಿಯದಿಪ್ಪುದು. ಐಕ್ಯನಾದಲ್ಲಿ ಸುಗಂಧದ ಸುಳುಹಿನಂತೆ ಪಳುಕಿನ ರಾಜತೆಯಂತೆ, ಶುಕ್ತಿಯ ಅಪ್ಪುವಿನಂತೆ ಅಣೋರಣಿಯಲ್ಲಿ ಆವರಿಸಿ ತಿರುಗುವ ನಿಶ್ಚಯತನದಂತೆ ಬಿಂಬದೊಳಗಣ ತರಂಗದ ವಿಸ್ತರದಂಗದಂತೆ ಇಂತೀ ಷಟ್‍ಸ್ಥಲಕ್ಕೆ ನಿರ್ವಾಹಕವಾಗಿ ವಿಶ್ವಾಸದಿಂದ ಸಂಗನಬಸವಣ್ಣನ ಸಾಕ್ಷಿಯಾಗಿ ಬ್ರಹ್ಮೇಶ್ವರಲಿಂಗವನರಿದವರಿಗಲ್ಲದೆ ಸಾಧ್ಯವಲ್ಲ.
--------------
ಬಾಹೂರ ಬೊಮ್ಮಣ್ಣ
ಇನ್ನಷ್ಟು ... -->