ಅಥವಾ

ಒಟ್ಟು 76 ಕಡೆಗಳಲ್ಲಿ , 19 ವಚನಕಾರರು , 59 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿರಾಳದಿಂದ ಸಹಜವಾಯಿತ್ತು. ಸಹಜದಿಂದ ಸೃಷ್ಟಿಯಾಯಿತ್ತು. ಸೃಷ್ಟಿಯಿಂದ ಸಂಸಾರವಾಯಿತ್ತು. ಸಂಸಾರದಿಂದ ಅಜಾÕನವಾಯಿತ್ತು. ಆಜಾÕನದಿಂದ ಬಳಲುವ ಜೀವರ, ಬಳಲಿಕೆಯ ತೊಲಗಿಸಲು ಜಾÕನವಾಯಿತ್ತು. ಜಾÕನದಿಂದಲಾಯಿತ್ತು ಗುರುಕರುಣ. ಗುರುಕರುಣದಿಂದಲಾಯಿತ್ತು ಸುಮನ. ಸುಮನದಿಂದಲಾಯಿತ್ತು ಶಿವಧ್ಯಾನ. ಶಿವಧ್ಯಾನದಿಂದಲಾಯಿತ್ತು ನಿರ್ದೇಹ ನಿರ್ದೇಹದಿಂದಲಾಯಿತ್ತು ಸಾಯುಜ್ಯ. ಸಾಯುಜ್ಯದಿಂದಲಾಯಿತ್ತು ಸರ್ವಶೂನ್ಯ. ಆ ಸರ್ವಶೂನ್ಯದಲ್ಲೊಡಗೂಡಿ ನಿಂದಾತಂಗೆ, ಮರಳಿ ಜನ್ಮ ಉಂಟೆ ಹೇಳಾ?, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಕ್ರೋಧ ಬಂದಲ್ಲಿ ಕೊಲ್ಲೆಂಬುದು, ದಯೆ ಬಂದಲ್ಲಿ ಬೇಡಾ ಎಂಬುದು, ಅದು ಅರಿವೊ? ಅಜ್ಞಾನವೊ? ಬೇರೊಂದು ಹೊಲಬೊ? ಮಾಡುವ ಕ್ರೀ ಜಡನೆಂಬುದು, ಕ್ರೀ ಹೊರಗಾದುದು ಅರಿವೆಂಬುದು, ಅದನರಿವುದು ಅದೇನು ಹೇಳಾ? ಆತ್ಮನರಿವೊ ಅದೇನು ಮರವೆಯೊ? ತೊಳೆದಡೆ ಮಡಿಯಾಗಿ ಮಾಸಿದಡೆ ಮೈಲಿಗೆಯಾಗಿ ಪುಸಿಯಹುದೊಂದೊ ಎರಡೊ? ಅರಿದಡೆ ತಾನೆಂಬ ಮರೆದಡೆ ಜಗವೆಂಬ ಉಭಯಕ್ಕೊಳಗಾಗದ ಮುನ್ನವೆ ಅರಿ, ಕಾಮಭೀಮ ಜೀವಧನದೊಡೆಯನ.
--------------
ಒಕ್ಕಲಿಗ ಮುದ್ದಣ್ಣ
ತಮತಮಗೆ ಸಮತೆಯನು ಹೇಳಬಹುದಲ್ಲದೆ, ತಮತಮಗೆ ಸಮತೆಯನು ಆಡಬಹುದಲ್ಲದೆ, ಕನಲಿಕೆಯ ಕಳೆದಿಪ್ಪವರಾರು ಹೇಳಾ? ಒಬ್ಬರೊಬ್ಬರ ಹಳಿಯದಿಯಪ್ಪವರಾರು ಹೇಳಾ ? ಮುನಿಸ ಮುಂದಿಟ್ಟಿಪ್ಪರು. ಇದು ಯೋಗಿ, ಮಹಾಯೋಗಿಗಳಿದಪ್ಪುದು ನೋಡಾ. ಸಕಳೇಶ್ವರದೇವಾ, ನೀನು ಕರುಣಿಸಿದವರಿಗಲ್ಲದೆಯಿಲ್ಲಾ.
--------------
ಸಕಳೇಶ ಮಾದರಸ
ಪ್ರಕಾಶದ್ವಾರ ಗಂಧದ್ವಾರ ಶಬ್ದದ್ವಾರವೆಂಬ ಅರುದ್ವಾರ ಕೂಡಿದ ಠಾವಿನಲ್ಲಿ, ನಾದ ಬಿಂದು ಕಲೆಯೆಂಬ ಸಿಂಹಾಸನದ ಮೇಲೆ ಮೂರ್ತಿಗೊಂಡು, ಶಬ್ದ ರೂಪು ಗಂಧಂಗಳ ಗ್ರಹಿಸುವಾತ ನೀನಲ್ಲದೆ ಮತ್ತಾರು ಹೇಳಾ? ಗಳದಲ್ಲಿ ನಿಂದು ಷಡುರಸ್ನಾನದ ರುಚಿಯ ಜಿಹ್ವೆಯಲ್ಲಿ ಸ್ವಾದಿಸುವಾತ ನೀನಲ್ಲದೆ ಮತ್ತಾರು ಹೇಳಾ? ಸರ್ವಾಂಗದಲ್ಲಿ ನಿಂದು, ತ್ವಗಿಂದ್ರಿಯ ಮುಖದಲ್ಲಿ ಸ್ಪರ್ಶನವ ತಳೆದುಕೊಂಬಾತ ನೀನಲ್ಲದೆ ಮತ್ತಾರು ಹೇಳಾ? ಮನವೆಂಬ ಮುಖದಲ್ಲಿ ನಿಂದು ಪರಿಣಾಮವನನುಭವಿಸುವಾತ ನೀನಲ್ಲದೆ ಮತ್ತಾರು ಹೇಳಾ? ಸರ್ವಾವಯವಂಗಳಲ್ಲಿ ಸರ್ವಮುಖವಾಗಿ ಭೋಗಿಸಿ ಪ್ರಸಾದವ ಕರುಣಿಸಿದ ಕೃಪಾಮೂರ್ತಿ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರ ನೀನಲ್ಲದೆ ಮತ್ತಾರು ಹೇಳಾ?
--------------
ಸ್ವತಂತ್ರ ಸಿದ್ಧಲಿಂಗ
ಅಯ್ಯಾ ಜಡೆಯೆಡೆಯಲ್ಲಿ ಗಂಗೆಯನೇಕೆ ಧರಿಸಿದೆ? ಕೆಲದಲ್ಲಿ ಚಂದ್ರಕಲೆಯನೇಕೆ ಸೂಡಿದೆ? ತ್ರಿಶೂಲ ಡಮರುಗವನೇಕೆ ಹಿಡಿದೆ? ವೃಷಭವಾಹನವೇಕೆ ಹೇಳಾ? ಉಮೆಯ ತೊಡೆಯ ಮೇಲೇಕೇರಿಸಿದೆ? ನಡು ನೊಸಲಲ್ಲಿ ಕಿಡಿಗಣ್ಣನೇಕೆ ತಾಳಿದೆ? ವರದಾಭಯ ಹಸ್ತದಿಂದ ಮೃಡನೆಂಬ ಹೆಸರು ಬಂದಿತೆಂದು, ನಿನ್ನ ಬೆಡಗಿನ ಲೀಲೆಯ ಕಂಡು, ಭಕ್ತಿ ಕಂಪಿತನೆಂದರಿದೆನು ಕಾಣಾ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಅಪರಸ್ಥಾನದಲ್ಲಿ ಆನಂದಬ್ರಹ್ಮವ ಭೇದ್ಥಿಸುವ ಪರಿಯೆಂತೋ? ಪೂರ್ವದಕ್ಷಿಣವೆಂಬ ದಿಕ್ಕುಗಳಲ್ಲಿ ಸಮನಿಸುವ ಆತ್ಮ ಅಂತರ್ಯಾತ್ಮ ಭೂತಾತ್ಮ ಸರ್ವಾತ್ಮ ಪರಮಾತ್ಮವೆಂಬ ಆತ್ಮ ಪಂಚಕಗಳೆಂಬವನು ಹಿಂದು ಮುಂದರಿಯದೆ, ಮುಂದು ಹಿಂದೆಂದರಿಯದೆ ಸಂಯೋಗದಲಿಕ್ಕಿ ಪ್ರಯೋಗಿಸಿಹೆನೆಂಬ ಯೋಗಿ ಕೇಳಾ; ಪೂರ್ವವಾವುದು? ದಕ್ಷಿಣವಾವುದು? ಪೂರ್ವದಲ್ಲಿ ದಿವಾಕರರು ಹನ್ನೆರಡರ ಆನಂದ ಪ್ರಭೆಯಲ್ಲಿ ಭವಿಸಲ್ಪಟ್ಟ ನಯನದ ಕಿರಣದ ಕೊನೆಯ ಮೊನೆಯ ಮೇಲೆ ದಿವ್ಯಾಂಗಯೋಗ ಸಮನಿಸುವ ಪರಿಯೆಂತು ಹೇಳಾ? ದಕ್ಷಿಣದಲ್ಲಿ ದಿಗ್ವಳಯ ಹದಿನಾಲ್ಕರ ವ್ಯಾಪ್ತಿಯ ಸಂಚರಿಸದೆ ಸಮನಿಸುವ ಕೋಹಂ ತತ್ವಾರ್ಥದಿಂದತ್ತ ನಾಹಂ ಪರಮಾರ್ಥದಿಂದತ್ತ ಸೋಹಂ ಸದ್ಭಕ್ತಿಯ ಮುಟ್ಟಿದ ದಾಸೋಹ ನಿನ್ನಲ್ಲಿ ಸಂಯೋಗವ ಎಂತು ಮಾಡುವೆ ಹೇಳಾ? ಯೋಗಿ ನೀನು ಯೋಗಕ್ಕೆ ಹರಿವಾವುದು? ಯೋಗಕ್ಕೆ ನೆಲೆ ಯಾವುದು? ಮತ್ತೆ ಪೆರತನರಿಯದೆ ಶಾಶ್ವತವು ನೀನೆ ನೀನೆ ಎಂದೆನ್ನು, ಸಕಲನಿಷ್ಕಲದೊಳಗೆ ನೀನೆ ನೀನೆಯೆನ್ನಾ ತಾತ್ಪರ್ಯವರ್ಮ ಕಳೆಗಳೊಳಗೆ ನೀನೆ ನೀನೆಯೆಂದೆನ್ನಾ. ಓಂ ಗ್ರಾಂ ಘ್ರೀಂ ಘ್ರೂಂ ಎಂಬಕ್ಷರ ಚತುಷ್ಟಯದ ಮೇಲೆ ಶುದ್ಧ ಸಂಯೋಗವೆಂಬ ಗದ್ದುಗೆಯಿಕ್ಕಿ ಅಕ್ಷರದ್ವಯದ ಆನಂದರಾಜ ಕುಳ್ಳಿದ್ದೆ ೈದಾನೆ ಜಪಿಸುತ. ಆ ಜಪವು ನಿತ್ಯ, ಅದು ಮುಕ್ತಿ, ಅದು ಸತ್ಯ. ಅದು ಪದಕ್ಕೆ ಫಲಕ್ಕೆ ಭವಕ್ಕೆ ದೂರ, ವರ್ಣಾಶ್ರಯವ ಮೀರಿತ್ತು ತತ್ವ ಪ್ರಾಪಂಚಿಕವ ಜರಿಯಿತ್ತು. ಮಂತ್ರಂಗಳ ಕೈಯಿಂದ ವಂದಿಸಿಕೊಂಡಿತ್ತು. ಮೂರರಲ್ಲಿ ಭವಿಸಿತ್ತು, ಆರರಲ್ಲಿ ಫಲವಾಯಿತ್ತು. ಮೂವತ್ತಾರರಲ್ಲಿ ಹಣಿತಿತ್ತು ಯೋಗಿಗಳ ನಡೆಸಿತ್ತು ತತ್ವಮಸಿ ಸಂಗಮವಾಯಿತ್ತು. ಕಪಿಲಸಿದ್ಧಮಲ್ಲಿಕಾರ್ಜುನಯ್ಯನೆಂಬ ನಿತ್ಯದಲ್ಲಿ ನಿತ್ಯವಾಯಿತ್ತು.
--------------
ಸಿದ್ಧರಾಮೇಶ್ವರ
ನೀ ನಾನೆಂಬ ಭಾವವಾರಿಂದಾಯಿತ್ತು ಹೇಳಾ? ನೀನೆಂಬುದು ಅಜ್ಞಾನ, ನಾನೆಂಬುದು ಮಾಯಾಧೀನ. ನೀನೆನ್ನದೆ ನಾನೆನ್ನದೆ ಇಪ್ಪ ಸುಖವ ಭಿನ್ನವಿಲ್ಲದೆ ಅರಿಯಬಲ್ಲಡೆ; ಆ ಸುಖ ನಿಮಗರ್ಪಿತ ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಕುರುಹಿಲ್ಲದಠಾವಿನಲ್ಲಿ ತೆರಹಿಲ್ಲದಾತ್ಮಂಗೆ ಬರಿಯ ನಾಮವ ಸೈತಿಟ್ಟು ಕುರುಹದೇನು ಹೇಳಾ? ನಾಮವುಳ್ಳೆಡೆಯಲ್ಲಿ ಸೀಮೆ, ಸೀಮೆಯುಳ್ಳೆಡೆಯಲ್ಲಿ ನಾಮ ಹೋಹೋ, ತಿಳಿದು ನೋಡಿರೇ. ಹಮ್ಮು ಜಡನರಿವು ಮರವೆಯನೆಯ್ದಿಪ್ಪುದು ಮನ. ತನು, ಮನ, ಕರಣ, ಭಾವಕ್ಕಾಧಾರವಾಗಿಪ್ಪುದಾತ್ಮ. ಇನಕಿರಣ ಇನನಪ್ಪುದೆ? ವಾಯು ತಾನೇ ಆಕಾಶವೇ? ಧೂಮ್ರ ತಾನೇ ಅಗ್ನಿಯೆ? ನೆನೆವ ಮನವು ತಾನೇ ಜೀವನೆ? ಇಂತಲ್ಲ ನೋಡಾ, ಸೌರಾಷ್ಟ್ರ ಸೋಮೇಶ್ವರಲಿಂಗದಲ್ಲಿ ಮನವೇ ಆತ್ಮನಲ್ಲವಯ್ಯಾ ಮಲ್ಲಿಕಾರ್ಜುನ.
--------------
ಆದಯ್ಯ
ವಂದಿಸಿ ನಿಂದಿಸಿ ಮತ್ತೆ ಅದಾರಿಂಗೆ ಕೇಡೆಂಬುದನರಿತು ತಾ ನೋಯಲೇತಕೆ? ಕಟ್ಟಿದ ತಟಾಕವನೊಡೆಯ ಕುಕ್ಕಿದ ಮತ್ತೆ ಆರನುಭವದ ನಷ್ಟ ಅದಾರಿಗೆ ಹೇಳಾ? ಭೂಮಿಯ ಬಡತನಕ್ಕೆ ಬೀಜವಿಲ್ಲ ಪತ್ರಭಾಜನ ಹಸಿಯಿತ್ತೆಂದು ಓಗರವಿಲ್ಲ. ಮಾಟಕೂಟದಲ್ಲಿ ಇಕ್ಕಿ ಎರೆದು ಕೊಟ್ಟು ಕೊಂಡು ಚಿತ್ತ ಶುದ್ಧವಿಲ್ಲಾಯೆಂದು ನುಡಿಯಲೇತಕ್ಕೆ? ಬೆಳೆದ ಬೆಳಸ ಕಳದಲ್ಲಿ ಕಡೆಗಾಣಿಸಿದ ಮತ್ತೆ ಹೋದ ಹೊಲಬ ಬಳಸಲೇತಕ್ಕೆ ತನ್ನ ತಾನರಿದು? ಜಗ ತನಗನ್ಯವಿಲ್ಲೆಂದು ಅರಿದ ಮತ್ತೆ ಪ್ರತಿಮೂದಲೆಗೊಡಲಿಲ್ಲ. ಆತ ಉಭಯ ಶುದ್ಧಾತ್ಮನು. ತ್ರಿಗುಣರಹಿತನು, ತ್ರಿಗುಣಾತ್ಮಭರಿತನು. ಆತ ಕೂಗಿನ ದನಿಗೆ ಹೊರಗು ಮಹಾಮಹಿಮ ಮಾರೇಶ್ವರಾ.
--------------
ಕೂಗಿನ ಮಾರಯ್ಯ
ಚಿನ್ನದಿಂದಾದ ಬಂಗಾರ ಚಿನ್ನದ ರೂಪಲ್ಲದೆ ಮತ್ತೊಂದು ರೂಪಾಗಬಲ್ಲುದೆ ಹೇಳಾ? ಲಿಂಗಮುಖದಿಂದ ಉದಯವಾದ ಶರಣರು ಲಿಂಗದ ರೂಪಲ್ಲದೆ, ಮತ್ತೊಂದು ರೂಪೆಂದೆನಬಹುದೇ? ಎನಲಾಗದು ನೋಡ. ಶಿವನ ಅಂಶವಾದ ಶರಣರಿಗೆ ಮಲಿನಭಾವ ಕಲ್ಪಿಸುವ ಮಹಾಪಾತಕರಿಗೆ ನಾಯಕನರಕ ತಪ್ಪದು ಕಾಣಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಆಧಾರ ಸ್ವಾದ್ಥಿಷ್ಠಾನ ಮಣಿಪೂರಕಸ್ಥಾನವರಿಯರು. ಅಷ್ಟದಳ ಕಮಲದಲ್ಲಿ ಸೂಕ್ಮ ನಾಳವೈದುವದೆ? ಇನ್ನೇನನರಿವರಾರೊ? ಬೇರೆ ಮತ್ತೆ ಅರಿಯಲುಂಟೆ ಹೇಳಾ? ಸಹಸ್ರದಳಕಮಲದ ಬ್ರಹ್ಮರಂಧ್ರದಲ್ಲಿಪ್ಪ ಅಮೃತಸ್ವರವನರಿದು, ಹಿಡಿದುಕೊಂಬುದು, ಅರಿದು!_ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಹೊತ್ತಾರೆ ಎದ್ದು ಹೂ ಪತ್ರೆಯ ಕುಯಿ[ದು] ತಂದು ಹೊರ ಉಪಚಾರವ ಮಾಡುವುದೆಲ್ಲ ಬರಿಯ ಭಾವದ ಬಳಲಿಕೆ ನೋಡಾ. ಅಳಲದೆ ಬಳಲದೆ ಆಯಾಸಂಬಡದೆ ಒಳಗಣ ಜ್ಯೋತಿಯ ಬೆಳಗಿನ ಕಳೆಯ ಕಮಲವ ಪೂಜಿಸಬಲ್ಲ ಶರಣಂಗೆ ಬೆಳಗಾಗೆದ್ದು ಪೂಜಿಸಿಹೆನೆಂಬ ಕಳವಳವೆಂದೇನು ಹೇಳಾ? ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಕಾಷ್ಠದಲ್ಲಿ ಹುಟ್ಟಿದ ಅಗ್ನಿ, ಕಾಷ್ಠವ ದಹಿಸಿ, ತಾನೊಡನೆ ಲೀಯವಾದಂತೆ, ಭಾವದಲ್ಲಿ ಶಿವಾನಂದಭಾವ ಹುಟ್ಟಿ ಭಾವ ನಿಃಪತಿಯಾಯಿತ್ತು. ಭಾವ ನಿಃಪತಿಯಾಗಲು, ಭಾವ್ಯ ಭಾವ ಭಾವಕವೆಂಬುದಿಲ್ಲದೆ ತಮ್ಮಲ್ಲಿ ತಾವೆ ಲೀಯವಾದವು. ಇಂತಾದ ಬಳಿಕ ಭಾವಿಸಲೇನುಂಟು ಹೇಳಾ? ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನ, ಭಾವಾತೀತನೆಂದು ಶ್ರುತಿ ಸಾರುತ್ತಿರಲಿನ್ನು ಭಾವಿಸಲೇನುಂಟು ಹೇಳಾ?.
--------------
ಸ್ವತಂತ್ರ ಸಿದ್ಧಲಿಂಗ
ಕನಸಿನ ಸಹಸ್ರಾಕ್ಷನೆಚ್ಚತ್ತು ನೋಡಿ ತನ್ನ ನಿಜವನರಿವಾಗ ಕೇಳೆಲೆ ಮರುಳೆ ದ್ವ ್ಯಕ್ಷನಾಗಿ ಅರಿಯದೆ ಮೇಣು ಸಹಸ್ರಾಕ್ಷದಲ್ಲಿ ಅರಿದನೆ ಹೇಳಯ್ಯಾ? ನಿರವಯ ನಿರವದ್ಯ ನಿರ್ವಿಕಾರ ನಿರಂಜನ ಘನಾನಂದಾದ್ವಯ ಪರಿಪೂರ್ಣನಾಗಿ ತನ್ನನರಿವವನಲ್ಲದೆ ಮತ್ತೊಂದು ಪರಿಯಲ್ಲಿ ಅರಿಯಬಲ್ಲನೆ ಹೇಳಾ? ಮುನ್ನಿನ ಪರಿಯಲ್ಲಲ್ಲದೆ, ಕೋಹಮ್ಮಿನೆಚ್ಚರಿಂದ ಸೋಹಂ ಭಾವಾದಿಯಲ್ಲದೆ ಜ್ಞಾತೃ ಜ್ಞಾನ ಜ್ಞೇಯ ವಿಹೀನನಾಗಿ ತನ್ನನರಿದಡೆ ಅರಿದ, ಅಲ್ಲದಿದ್ದಡೆ ಅರಿಯದಾತನು. ಇದು ತಪ್ಪದು ಸಿಮ್ಮಲಿಗೆಯ ಚೆನ್ನರಾಮನ ವಚನ.
--------------
ಚಂದಿಮರಸ
ಕುರುಡ ಕಾಣನೆಂದು, ಕಿವುಡ ಕೇಳನೆಂದು ಹೆಳವ ಹರಿಯನೆಂದು, ಮರುಳ ಬಯ್ದನೆಂದು, ಪಿಶಾಚಿ ಹೊಯ್ದನೆಂದು ಮನಕತಬಡುವರೆ ಹೇಳಾ? ತಾನರಿವುಳ್ಳಾತ ತತ್ವವನರಿಯದವರಲ್ಲಿ ಗುಣದೋಷವನರಿಸುವರೆ ಹೇಳಾ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ಇನ್ನಷ್ಟು ... -->