ವೇದವನೋದಿದಡೇನು ? ಶಾಸ್ತ್ರಪುರಾಣಾಗಮಂಗಳ ಕೇಳಿದಡೇನು ?
ಗುರುಕಾರುಣ್ಯವಿಲ್ಲದವನು ಲಿಂಗವ ಮುಟ್ಟಿ ಪೂಜಿಸಲಾಗದು.
ಜಪತಪಧ್ಯಾನ ವಿಭೂತಿ ರುದ್ರಾಕ್ಷಿಯ ಧರಿಸಿದಡೇನು ?
ಅವನು ಪಂಚಮಹಾಪಾತಕನು, ಅವನ ಮುಖವ ನೋಡಲಾಗದು.
ಇದನರಿದು ಗುರುಕರುಣವಿಡಿದು ಮಾಡುವ ಪೂಜೆಯೇ ಶಿವಂಗೆ ಪ್ರೀತಿ.
ಇದನರಿಯದೆ ಗುರುಕರುಣವಿಲ್ಲದವ ಶಿವಲಿಂಗಪೂಜೆಯ ಮಾಡಿದನಾದಡೆ,
ಅಘೋರನರಕ ತಪ್ಪದು, ಮಹಾಲಿಂಗ ಕಲ್ಲೇಶ್ವರಾ.