ಶೈವವಾರು, ವೀರಶೈವ ಮೂರು, ಗುರುಸ್ಥಲವೈದು,
ಆಚಾರ್ಯನಂಗ ನಾಲ್ಕು, ಆಚಾರಕ್ಕೆ ಅಂಗವಾರು.
ಆತ್ಮಂಗೆ ಅರಿವು ಮೂರು.
ಮತ್ತಿವರೊಳಗಾದ ಷಡ್ದರುಶನಭೇದ.
ಆಚರಣೆ ಆಶ್ರಯಂಗಳು ವಿಶ್ವತೋಮುಖವಾಗಿಹವು.
ಚೀರದ ಬಾಯಿದಾರದಂತೆ ಕಟ್ಟುವುದು ಒಂದೆ ಭೇದ,
ಬಿಡುವುದು ಒಂದೆ ಭೇದ.
ಇಂತೀ ಸ್ಥಳಕುಳಂಗಳಲ್ಲಿ ಭೇದಂಗಳನರಿವುದು ಆಚಾರ್ಯನಿರವು.
ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗ ವಿಭೇದವಾದಭೇದ.