ಉತ್ತರ, ದಕ್ಷಿಣ , ಪೂರ್ವ, ಪಶ್ಚಿಮ
ನಾಲ್ಕು ಪಥವನು ಏಕವ ಮಾಡಿ, ಊಧ್ರ್ವಮುಖವ ಮಾಡಿ,
ಈಡಾ ಪಿಂಗಳ ನಾಳಮಂ ಕಟ್ಟಿ, ಸುಷಮ್ನನಾಳವಂ ಎತ್ತಿ ,
ಮನ ಪವನ ಬಿಂದು ಒಡಗೂಡಿ,
ಚಂದ್ರ ಸೂರ್ಯ ಶಿಖಿಯರಂ ಮುಪ್ಪುರಿಯ ಮಾಡಿ,
ಒಡಗೂಡಿ ಏಕವಾಗಿ ಹುರಿಗೂಡಿ,
ಮತ್ರ್ಯಲೋಕವ ಬಿಟ್ಟು, ದೇವಲೋಕವ ಮೆಟ್ಟಿನಿಂದು,
ಭಾವ ಬಯಲಾಗಿ, ಬಯಕೆ ಸವೆದು,
ಇನ್ನು ಈ ಲೋಕದೊಳಗೆ ಬಂದು ಬದುಕಿದೆನೆಂಬುದನಕ್ಕೆ ಹೇಯ ಹುಟ್ಟಿ,
ಇದಾವುದನೂ ಒಲ್ಲದಿರ್ಪರು, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.