ಲಿಂಗವಂತರ ಲಿಂಗಾಚಾರಿಗಳ ಅಂಗಳಕ್ಕೆ ಹೋಗಿ
ಲಿಂಗಾರ್ಪಿತವ ಮಾಡುವಲ್ಲಿ ಸಂದೇಹವಿಲ್ಲದಿರಬೇಕು.
ಅದೆಂತೆಂದಡೆ:
'ಭಿಕ್ಷಲಿಂಗಾರ್ಪಿತಂ ಗತ್ವಾ | ಭಕ್ತಸ್ಯ ಮಂದಿರಂ ತಥಾ |
ಜಾತಿ ಜನ್ಮ ರಜೋಚ್ಫಿಷ್ಟಂ | ಪ್ರೇತಸ್ಯ ವಿವರ್ಜಿತಃ || '
ಇಂತೆಂದುದಾಗಿ, ಕಾಣದುದನೆ ಚರಿಸದೆ, ಕಂಡುದನು ನುಡಿಯದೆ.
ಕಾಣದುದನು ಕಂಡುದನು ಒಂದೆಸಮವೆಂದು ಅರಿಯಬಲ್ಲರೆ
ಕುಂಭೇಶ್ವರಲಿಂಗವೆಂಬೆನು.