ಅಥವಾ
(2) (5) (1) (2) (4) (0) (0) (0) (5) (0) (1) (0) (0) (0) ಅಂ (0) ಅಃ (0) (25) (0) (4) (0) (0) (1) (0) (2) (0) (0) (0) (0) (1) (0) (0) (4) (0) (0) (0) (7) (2) (0) (9) (2) (5) (1) (1) (0) (4) (4) (0) (0) (4) (3) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಈಶ್ವರಮೂರ್ತಿಯ ಕರಕಮಲಕ್ಕೆ ತಂದಲ್ಲಿ, ಕಣ್ಮನ ಮೂರ್ತಿಧ್ಯಾನ ಹೆರೆಹಿಂಗದಕ್ಕರಿಂದ ಭಾವ ಭ್ರಮಿಸದೆ, ಚಿತ್ತ ಸಂಚರಿಸದೆ ಮನ ವಚನ ಕಾಯದಲ್ಲಿ ಬ್ಥಿನ್ನ ಭಾವವಿಲ್ಲದೆ ಪೂಜಿಸುವ ಕೈಯೂ ತಾನಾಗಿ, ಅರಿದ ಮನವೂ ತಾನಾಗಿ, ಹೊತ್ತಿಪ್ಪ ಅಂಗದ ನೆಲೆಯೂ ತಾನಾಗಿ ಹೆರೆಹಿಂಗದೆ ಪೂಜೆಯ ಮಾಡುತಿರ್ಪ ಆತನ ಅಂಗವೆ ಲಿಂಗ, ಆತನಿದ್ದುದೆ ಅವಿಮುಕ್ತಿ ಕ್ಷೇತ್ರ. ಇಂತಪ್ಪ ಮಹಾಮಹಿಮ ನಾರಾಯಣಪ್ರಿಯ ರಾಮನಾಥ ತಾನು ತಾನೆ.
--------------
ಗುಪ್ತ ಮಂಚಣ್ಣ
ಈಶ್ವರ ಲೀಲಾಮೂತಿಯಾಗಿ ಏಕಾದಶ ರುದ್ರಮೂರ್ತಿಯ ಭಾವಿಸುವಲ್ಲಿ ವಾದರುದ್ರನ ಕಳುಹಿದ ಬಿಜ್ಜಳನೆಂಬ ನಾಮವ ಕೊಟ್ಟು, ಕಾಲರುದ್ರನ ಕಳುಹಿದ ಭಕ್ತಿನಾಮವ ಕೊಟ್ಟು ಬಸವೇಶ್ವರನ, ಮಾಯಾಕೋಳಾಹಳನೆಂಬ ರುದ್ರನ ಕಳುಹಿದ ಪ್ರಭುನಾಮವ ಕೊಟ್ಟು, ಮತ್ಸರವೆಂಬ ನಾಮ ಗುಪ್ತಗಣೇಶ್ವರನೆಂಬ ನಾಮವ ತಾಳ್ದು ಬಪ್ಪುದಕ್ಕೆ ಮುನ್ನವೇ ಐಕ್ಯ. ಪ್ರಮಥರುಗಳು ಪ್ರಕಟವ ಮಾಡಲಿಕ್ಕೆ ಬಂದಿತ್ತು. ಎನಗೆ ಮತ್ರ್ಯದ ಭವ. ಭವ ಬಸವನಿಂದ ಹರಿವುದು. ನಾ ಬಿತ್ತಿದ ಬೆಳೆಯೆನಗೆ ಫಲಭೋಗವನಿತ್ತು ಎನ್ನ ಅವತಾರಭಕ್ತಿ ಇನ್ನೆಂದು ಮೀರವಪ್ಪುದು, ಅಚ್ಚುತಪ್ರಿಯ ರಾಮನಾಥಾ.
--------------
ಗುಪ್ತ ಮಂಚಣ್ಣ