ಪೃಥ್ವಿಯಲ್ಲಿ ಅಪ್ಪುಸಾರವಿಲ್ಲದಿರೆ ಬೀಜವ ತಳಿಯಲಾಗಿ,
ಪ್ರತ್ಯಕ್ಷ ಅಂಕುರ ದೃಷ್ಟವಪ್ಪುದೆ?
ಶ್ರದ್ಧೆ ಸನ್ಮಾರ್ಗ ಭಕ್ತಿ ವಿಶ್ವಾಸವಿಲ್ಲದಿದ್ದಡೆ ಸದ್ಭಕ್ತನಪ್ಪನೆ ? ಸದ್ಭಕ್ತನಪ್ಪನೆ
?
ಇಂತೀ ದೃಷ್ಟ ಸಿದ್ಧಾಂತದಿಂದ ತಪ್ಪು ಕುಳಿತ ಮತ್ತೆ ,
ದೃಷ್ಟಾಂತರವ ಇದಿರ ಕೈಯಲ್ಲಿ ಕೇಳಲುಂಟೆ ?
ನುಂಗಬಾರದ ಘೃತ, ಉಗುಳಬಾರದ ಪ್ರಿಯ,
ಬಿಡಬಾರದ ಭಕ್ತಿ , ವಿಶ್ವಾಸವಿಲ್ಲದ ಆ ಭಕ್ತಿಪೂಜೆ,
ಘನಸಿಂಧುವಿನಲ್ಲಿ ನಾನಾ ವರ್ಣವ ಕದಡಿದಂತಾಯಿತ್ತು .
ಇದನಿನ್ನಾರಿಗುಸುರುವೆ !
ನಿಃಕಳಂಕ ಕೂಡಲಚೆನ್ನಸಂಗಮದೇವಾ, ನೀನೆ ಬಲ್ಲೆ .