ಕೈಯಲ್ಲಿ ಕನ್ನಡಿಯಿರಲು ತನ್ನ ತಾ ನೋಡಬಾರದೆ ?
ಲಿಂಗಜಂಗಮದ ಪ್ರಸಾದಕ್ಕೆ ತಪ್ಪಿದಲ್ಲಿ ಕೊಲ್ಲಬಾರದೆ ?
ಕೊಂದಡೆ ಮುಕ್ತಿಯಿಲ್ಲವೆಂಬವರ ಬಾಯಲ್ಲಿ
ಪಡಿಹಾರನ ಪಾದರಕ್ಷೆಯನಿಕ್ಕುವೆ.
ಮುಂಡಿಗೆಯನೆತ್ತಿರೊ ಭ್ರಷ್ಟ ಭವಿಗಳಿರಾ!
ಎತ್ತಲಾರದಡೆ ಸತ್ತ ಕುನ್ನಿನಾಯ ಬಾಲವ
ನಾಲಗೆ ಮುರುಟಿರೋ ಸದ್ಗುರುಸಂಗ ನಿರಂಗಲಿಂಗದಲ್ಲಿ.