ಭಕ್ತಿ ಎಂತಹದಯ್ಯಾ ದಾಸಯ್ಯ ಮಾಡಿದಂತಹದಯ್ಯಾ. ಭಕ್ತಿ ಎಂತಹದಯ್ಯಾ ಸಿರಿಯಾಳ ಮಾಡಿದಂತಹದಯ್ಯಾ. ಭಕ್ತಿ ಎಂತಹದಯ್ಯಾ ನಮ್ಮ ಬಲ್ಲಾಳ ಮಾಡಿದಂತಹದಯ್ಯಾ. ಭಕ್ತಿ ಎಂತಹದಯ್ಯಾ ಕೂಡಲಸಂಗಮದೇವಾ, ನೀ ಬಾಣನ ಬಾಗಿಲ ಕಾದಂತಹದಯ್ಯಾ. |146
ಭಕ್ತಿಯೆಂಬ ಪೃಥ್ವಿಯ ಮೇಲೆ, ಗುರುವೆಂಬಬೀಜವಂಕುರಿಸಿ, ಲಿಂಗವೆಂಬ ಎಲೆಯಾುತ್ತು. ಲಿಂಗವೆಂಬ ಎಲೆಯ ಮೇಲೆ ವಿಚಾರವೆಂಬ ಹೂವಾುತ್ತು, ಆಚಾರವೆಂಬ ಕಾಯಾುತ್ತು. ನಿಷ್ಪತ್ತಿಯೆಂಬ ಹಣ್ಣು ತೊಟ್ಟು ಬಿಟ್ಟು ಕಳಚಿ ಬೀಳುವಲ್ಲಿ ಕೂಡಲಸಂಗಮದೇವ ತನಗೆ ಬೇಕೆಂದು ಎತ್ತಿಕೊಂಡ. 526
ಭೇರುಂಡನ ಪಕ್ಷಿಗೆ ದೇಹ ಒಂದೆ, ತಲೆಯೆರಡರ ನಡುವೆ ಕನ್ನಡವ ಕಟ್ಟಿ ಒಂದು ತಲೆಯಲ್ಲಿ ಹಾಲನೆರೆದು ಒಂದು ತಲೆಯಲ್ಲಿ ವಿಷವನೆರೆದಡೆ ದೇಹವೊಂದೇ, ವಿಷ ಬಿಡುವುದೇ ಅಯ್ಯಾ ಲಿಂಗದಲ್ಲಿ ಪೂಜೆಯ ಮಾಡಿ ಜಂಗಮದಲ್ಲಿ ನಿಂದೆಯ ಮಾಡಿದಡೆ ನಾನು ಬೆಂದೆ ಕಾಣಾ, ಕೂಡಲಸಂಗಮದೇವಾ.