ಉ ಪದದಿಂದ ಪ್ರಾರಂಭವಾಗುವ ವಚನಗಳು:
ಉಂಬಾಗಳಿಲ್ಲೆನ್ನ, ಉಡುವಾಗಳಿಲ್ಲೆನ್ನ,ಬಂಧುಗಳು ಬಂದಾಗಳಿಲ್ಲೆನ್ನ.ಲಿಂಗಕ್ಕೆ ಇಲ್ಲೆಂಬ, ಜಂಗಮಕ್ಕೆ ಇಲ್ಲೆಂಬ,ಬಂದ ಪುರಾತರಿಗೆ ಇಲ್ಲೆಂಬ,ಸಾವಾಗ ದೇಹವ ದೇಗುಲಕ್ಕೆ ಒಯ್ಯೆಂಬ,ದೇವರಿಗೆ ಹೆಣ ಬಿಟ್ಟಿ ಹೇಳಿತ್ತೆ ಕೂಡಲಸಂಗಮದೇವಾ 222
ಉಪ್ಪರಗುಡಿ ನಂದಿವಾಹನ ಸದ್ಯೋಜಾತನ ಬಾಗಿಲ ಮುಂದೆಸಾರುತ್ತೈದಾವೆ, ನೋಡಾ, ಶ್ರುತಿಗಳೂ ನಾಲ್ಕು ವೇದವೂ ಹುಸಿಯಿದೆ`ಭರ್ಗೋ ದೇವಸ್ಯ ದ್ಥೀಮಹಿ' ಎಂದುದಾಗಿ,ಕೂಡಲಸಂಗನಲ್ಲದಿಲ್ಲೆಂದುದು ವೇದ.
ಉಂಬಲ್ಲಿ [ಊ]ಡುವಲ್ಲಿ ಕ್ರೀಯಳಿಯಿತ್ತೆಂಬರು,ಕೊಂಬಲ್ಲಿ ಕೊಡುವಲ್ಲಿ ಕುಲವನರಸುವರು,ಎಂತಯ್ಯಾ ಅವರ ಭಕ್ತರೆಂತೆಂಬೆಎಂತಯ್ಯಾ ಅವರ ಯುಕ್ತರೆಂತೆಂಬೆಕೂಡಲಸಂಗಮದೇವಾ ಕೇಳಯ್ಯಾ,ಹೊಲತಿ ಶುದ್ಧ ನೀರ ಮಿಂದಂತಾಯಿತ್ತಯ್ಯಾ.
ಉರೆ ತಾಗಿದ ಮೃಗವು ಒಂದಡಿಯನಿಡುವುದೆತನುವ ತಾಗಿದ ಸುಖವು ಅಗಲುವುದೆಕೂಡಲಸಂಗನ ಶರಣರ ಅನುಭಾವವರಿದವರಮರಳಿ ಮತ್ರ್ಯರೆಂದೆನಬಹುದೆ
ಉರಿವ ಕೊಳ್ಳಿಯ ಮಂಡೆಯಲಿಕ್ಕಿದಡುರಿವುದು ಮಾಬುದೆಕಲ್ಲು ಗುಗ್ಗರಿಯ ಮೆಲಿದಡೆ ಹಲ್ಲು ಹೋಹುದು ಮಾಬುದೆಶರಣರೊಡನೆ ಸರಸವಾಡಿದಡೆ ನರಕ ತಪ್ಪದು ಕಾಣಾಕೂಡಲಸಂಗಮದೇವಾ.
ಉತ್ತಮ ಮಧ್ಯಮ ಕನಿಷ್ಟವೆಂದು, ಬಂದ ಜಂಗಮವನೆಂದೆನಾದಡೆನೊಂದೆನಯ್ಯಾ, ಬೆಂದೆಯಯ್ಯಾ, ಎನ್ನ ಕಿಚ್ಚು ಎನ್ನ ಸುಟ್ಟಿತ್ತು.ಸುಖಿಜಂಗಮ, ಸಾಮಾನ್ಯಜಂಗಮ ಉಂಟೆ,ಕೂಡಲಸಂಗಮದೇವಾ 401
ಉದಯದ ಮಾಗಿಯ ಬಿಸಿಲು ಅಂಗಕ್ಕೆ ಹಿತವಾುತ್ತು,ಮಧ್ಯಾಹ್ನದ ಬಿಸಿಲು ಅಂಗಕ್ಕೆ ಕರ ಕಠಿಣವಾುತ್ತುಮೊದಲಲ್ಲಿ ಲಿಂಗಭಕ್ತಿ ಹಿತವಾುತ್ತು,ಕಡೆಯಲ್ಲಿ ಜಂಗಮಭಕ್ತಿ ಕಠಿಣವಾುತ್ತುಇದು ಕಾರಣ ಕೂಡಲಸಂಗಮದೇವನವರ ಬಲ್ಲನಾಗಿ ಒಲ್ಲನಯ್ಯಾ. 219
ಉಪಮಿಸಬಾರದ ಉಪಮಾತೀತರು,ಕಾಲಕರ್ಮರಹಿತರು, ಭವವಿರಹಿತರು,ಕೂಡಲಸಂಗಮದೇವಾ, ನಿಮ್ಮ ಶರಣರು.
ಉಣಲುಡಲು ಮಾರಿಯಲ್ಲದೆ, ಕೊಲಲು ಕಾಯಲು ಮಾರಿಯೆತನ್ನ ಮಗನ ಜವನೊಯ್ದಲ್ಲಿ ಅಂದೆತ್ತ ಹೋದಳು ಮಾರಿಕವ್ವೆಈವಡೆ ಕಾವಡೆ ನಮ್ಮ ಕೂಡಲಸಂಗಯ್ಯನಲ್ಲದೆಮತ್ತೊಂದು ದೈವವಿಲ್ಲ.
ಉದಯ ಮಧ್ಯಾಹ್ನ ಸಂಧ್ಯಾಕಾಲವ ನೋಡಿಮಾಡುವ ಕರ್ಮಿ ನೀ ಕೇಳಾ;ಉದಯವೆಂದೇನೊ ಶರಣಂಗೆಮಧ್ಯಾಹ್ನವೆಂದೇನೊ ಶರಣಂಗೆಅಸ್ತಮಾನವೆಂದೇನೊ ಶರಣಂಗೆಮಹಾಮೇರುವಿನ ಮರೆಯಲ್ಲಿರ್ದುತಮ್ಮ ನೆಳಲನರಸುವ ಭಾವಭ್ರಮಿತರ ಮೆಚ್ಚ,ನಮ್ಮ ಕೂಡಲಸಂಗಮದೇವರು.
ಉಳ್ಳವರು ಶಿವಾಲಯ ಮಾಡಿಹರು,ನಾನೇನ ಮಾಡುವೆ ಬಡವನಯ್ಯಾ.ಎನ್ನ ಕಾಲೇ ಕಂಬ, ದೇಹವೇ ದೇಗುಲ,ಶಿರ ಹೊನ್ನ ಕಲಶವಯ್ಯಾ.ಕೂಡಲಸಂಗಮದೇವಾ, ಕೇಳಯ್ಯಾಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲ.
ಉಂಡುದು ಬಂದಿತ್ತೆಂಬ ಸಂದೇಹಿ ಮಾನವ ನೀ ಕೇಳಾ:ಉಂಡುದೇನಾುತ್ತೆಂಬುದ ನಿನ್ನ ನೀ ತಿಳಿದು ನೋಡಾ,ಉಂಡುದು ಆಗಳೆ ಅಪೇಯವಾುತ್ತು.ಆ ಉಂಡುದನುಣಬಂದ ಹಂದಿಯ ಬಾಳುವೆಯವರ ಕಂಡುಆನು ಮರುಗುವೆನಯ್ಯಾ, ಕೂಡಲಸಂಗಮದೇವಯ್ಯಾ. 200
ಉದಯಾಸ್ತಮಾನವೆನ್ನ ಬೆಂದ ಬಸುರಿಂಗೆ ಕುದಿಯಲಲ್ಲದೆ, ನಿಮ್ಮ ನೆನೆಯಲುತೆರಹಿಲ್ಲಯ್ಯಾ. ಎಂತೋ ಲಿಂಗ ತಂದೆ, ಎಂತಯ್ಯಾ ಎನ್ನ ಪೂರ್ವಲಿಖಿತಬೆರಣಿಯನಾಯಲಲ್ಲದೆ ಅಟ್ಟುಣ್ಣ ತೆರಹಿಲ್ಲೆನಗೆ, ನೀ ಕರುಣಿಸು,ಕೂಡಲಸಂಗಮದೇವಾ. 271
ಉಡುವಿನ ಭಾವದಲ್ಲಿ ಹಡೆದರೆಮ್ಮವರು, ಊಸರವಳ್ಳಿಯಂತೆ ಎನ್ನ ಇರವು,ಬಾವುಲ ಬಾಳುವೆಯ ತರನಂತೆ ! ಹೊತ್ತಾರೆ ಎದ್ದ ಕುರುಡಂಗೆ ಆಗುಸೆಯಲ್ಲಿಅಸ್ತಮಾನದಂತೆ- ಆನು ಭಕ್ತಿಯ ಬಯಸಿದಡಹುದೆ ಕೂಡಲಸಂಗಮದೇವಾ293
ಉತುಪತಿ ಶುಕ್ಲ-ಶೋಣಿತದಿಂದಾದ ಲಜ್ಜೆ ಸಾಲದೆಮತ್ತೆ ದುರಿತಂಗಳ ಹೆರುವ ಹೇಗತನವೇಕಯ್ಯಾಮೃತ್ಯುವಿನ ಬಾುಗೆ ಒಳಗಾಗಲೇಕೆಒತ್ತೊತ್ತೆಯ ಜನನವ ಗೆಲುವಡೆ ಕರ್ತನ ಪೂಜಿಸುನಮ್ಮ ಕೂಡಲಸಂಗಮದೇವನ. 159
ಉಮಾಧಿನಾಥರು ಕೋಟಿ, ಪಂಚವಕ್ತ್ರರು ಕೋಟಿ,ನಂದಿವಾಹನರೊಂದು ಕೋಟಿ ನೋಡಯ್ಯಾ.ಸದಾಶಿವರು ಕೋಟಿ, ಗಂಗೆವಾಳುಕ ಸಮರುದ್ರರಿವರೆಲ್ಲರುಕೂಡಲಸಂಗನ ಸಾನ್ನಿಧ್ಯರಲ್ಲದೆಸಮರಸವೇದ್ಯರೊಬ್ಬರೂ ಇಲ್ಲ.
ಉಟ್ಟು-ತೊಟ್ಟು ಪೂಜ್ಯವಾಗಿ ಬಂದ ಜಂಗಮ ವಿಶೇಷವೆಂದು,ಕಂತೆ-ಬೊಂತೆಯ ಜಂಗಮ ಬಂದಡೆ ಹೀನವೆಂದುಕಂಡೆನಾದಡೆ ಪಂಚಮಹಾಪಾತಕ.ಇದು ಕಾರಣ, ಅನ್ನ-ವಸ್ತ್ರ-ಧನ ಮಾಟದಲ್ಲಿಎರಡಾಗಿ ಕಂಡೆನಾದಡೆ ನರಕದಲ್ಲಿಕ್ಕುವ,ಕೂಡಲಸಂಗಮದೇವ. 412
ಉದಕದೊಳಗೆ ಬಯ್ಚಿಟ್ಟ ಬಯ್ಕೆಯ ಕಿಚ್ಚಿನಂತಿದ್ದಿತ್ತು,ಸಸಿಯೊಳಗಣ ರಸದ ರುಚಿಯಂತಿದ್ದಿತ್ತು,ನನೆಯೊಳಗಣ ಪರಿಮಳದಂತಿದ್ದಿತ್ತು,ಕೂಡಲಸಂಗಮದೇವ ಕನ್ನೆಯ ಸ್ನೇಹದಂತಿದ್ದಿತ್ತು.
ಉಂಬ ಬಟ್ಟಲು ಬೇರೆ ಕಂಚಲ್ಲ, ನೋಡುವ ದರ್ಪಣ ಬೇರೆ ಕಂಚಲ್ಲ,ಭಾಂಡ ಒಂದೆ ಭಾಜನ ಒಂದೆ, ಬೆಳಗೆ ಕನ್ನಡಿಯೆನಿಸಿತ್ತಯ್ಯಾ.ಅರಿದಡೆ ಶರಣ, ಮರೆದಡೆ ಮಾನವ,ಮರೆಯದೆ ಪೂಜಿಸು ಕೂಡಲಸಂಗನ.
ಉತ್ತಮಕುಲದಲ್ಲಿ ಹುಟ್ಟಿದೆನೆಂಬಕಷ್ಟತನದ ಹೊರೆಯ ಹೊರಿಸದಿರಯ್ಯಾ,ಕಕ್ಕಯ್ಯನೊಕ್ಕುದನಿಕ್ಕ ನೋಡಯ್ಯಾ,ದಾಸಯ್ಯಾ ಶಿವದಾನವನೆರೆಯ ನೋಡಯ್ಯಾ,ಮನ್ನಣೆಯ ಚೆನ್ನಯ್ಯನೆನ್ನುವ ಮನ್ನಿಸ.ಉನ್ನತ ಮಹಿಮ,ಕೂಡಲಸಂಗಮದೇವಾ, ಶಿವಧೋ ಶಿವಧೋ ! 344