ಕಾಣಬಾರದ ಕದಳಿಯಲೊಂದು ಮಾಣಿಕ ಹುಟ್ಟಿತ್ತು.
ಇದಾರಿಗೂ ಕಾಣಬಾರದು.
ಮಾರಿಹೆನೆಂದಡೆ ಮಾನವರಿಗೆ ಸಾಧ್ಯವಾಗದು.
ಸಾವಿರಕ್ಕೆ ಬೆಲೆಯಾಯಿತ್ತು.
ಆ ಬೆಲೆಯಾದ ಮಾಣಿಕ ನಮ್ಮ ಶಿವಶರಣರಿಗೆ ಸಾಧ್ಯವಾಯಿತ್ತು.
ಅವರು ಆ ಮಾಣಿಕವ ಹೇಗೆ ಬೆಲೆಮಾಡಿದರೆಂದಡೆ
ಕಾಣಬಾರದ ಕದಳಿಯ ಹೊಕ್ಕು, ನೂನ ಕದಳಿಯ ದಾಂಟಿ,
ಜಲವ ಶೋಧಿಸಿ, ಮನವ ನಿಲಿಸಿ,
ತನುವಿನೊಳಗಣ ಅನುವ ನೋಡುವನ್ನಕ್ಕ, ಮಾಣಿಕ ಸಿಕ್ಕಿತ್ತು.
ಆ ಮಾಣಿಕವ ನೋಡಿದೆನೆಂದು ಜಗದ ಮನುಜರನೆ ಮರೆದು,
ತಾನುತಾನಾಗಿ ಜ್ಞಾನಜ್ಯೋತಿಯ ಬೆಳಗಿನೊಳಗೋಲಾಡಿ
ಸುಖಿಯಾದೆನಯ್ಯಾ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ. !