ಅ
(46)
ಆ
(22)
ಇ
(24)
ಈ
(4)
ಉ
(3)
ಊ
(0)
ಋ
(0)
ೠ
(0)
ಎ
(54)
ಏ
(2)
ಐ
(0)
ಒ
(10)
ಓ
(1)
ಔ
(0)
ಅಂ
(15)
ಅಃ
(15)
ಕ
(42)
ಖ
(1)
ಗ
(33)
ಘ
(7)
ಙ
(0)
ಚ
(8)
ಛ
(1)
ಜ
(17)
ಝ
(0)
ಞ
(0)
ಟ
(0)
ಠ
(0)
ಡ
(0)
ಢ
(0)
ಣ
(0)
ತ
(33)
ಥ
(0)
ದ
(7)
ಧ
(2)
ನ
(46)
ಪ
(34)
ಫ
(1)
ಬ
(25)
ಭ
(14)
ಮ
(29)
ಯ
(1)
ರ
(3)
ಱ
(0)
ಲ
(13)
ವ
(13)
ಶ
(41)
ಷ
(1)
ಸ
(55)
ಹ
(26)
ಳ
(0)
ವಚನಕಾರ: ಷಣ್ಮುಖಸ್ವಾಮಿ
ಅಂಕಿತ ನಾಮ: ಅಖಂಡೇಶ್ವರ
ಕಾಲ:
ದೊರಕಿರುವ ವಚನಗಳು: 717 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ: ಮಲ್ಲಪ್ಪ ಶೆಟ್ಟಿ ಮತ್ತು ದೊಡ್ಡರೊಂಬೆ
ಹುಟ್ಟಿದ ಸ್ಥಳ: ಜೇವರಗಿ, ಕಲಬುರ್ಗಿ ಜಿಲ್ಲೆ
ಪರಿಚಯ: ವಚನ ವಾಗ್ಮಯದ ಮೂರನೆ ಘಟ್ಟದ ಪ್ರಮುಖರಿವರು, ಸಂಸ್ಕøತ-ಕನ್ನಡಗಳೆರಡರಲ್ಲೂ ಸಮಾನ ಪಾಂಡಿತ್ಯವಿದ್ದವರು, ನಿಶ್ಚಿತ ಶಾಸ್ತ್ರಜ್ಞಾನ ಯೋಗಸಿದ್ಧಿ, ಅನುಭಾವದ ದಿವ್ಯ ತೇಜಸ್ಸನ್ನು ಹೊಂದಿದ್ದಿಇವರು ಜೇವರಗಿ ವಿರಕ್ತಮಠದ ಅಧಿಪತಿಗಳಾಗಿ ವಚನಗಳನ್ನು ಸ್ಥಲಾನುಸರಿಯಾಗಿ ಬರೆದಿರುವರು, ಇವರ ವಚನಗಳು ಮುಖ್ಯವಾಗಿ ಷಟ್ಸ್ಥಲ ತತ್ತ್ವವನ್ನು ನಿರೂಪಿಸುತ್ತದೆ. ಈ ತತ್ತ್ವಗಳು ಪರಂಪರೆಯ ಜಾಡಿನಲ್ಲಿ ಹೆಚ್ಚು ವ್ಯವಸ್ಥಿತವಾಗಿ ಬಂದಿದೆ. ಒಟ್ಟು 14 ಸ್ಥಲಗಳಲ್ಲಿ ವಚನಗಳು ವಿಂಗಡಣೆಗೊಂಡಿವೆ. ಅವರ ವಚನಗಳಲ್ಲಿ ಅನುಭಾವ ತತ್ತ್ವ- ಸಾಹಿತ್ಯ ಮುಪ್ಪರಿಗೊಂಡಿದೆ.
ಆತನ ದಿವ್ಯರೂಪು ನೋಡಿ ಎನ್ನ ಕಂಗಳು ದಣಿಯವು. ಆತನ ಲಲ್ಲೆವಾತ ಕೇಳಿ ಎನ್ನ ಕಿವಿಗಳು ದಣಿಯವು. ಆತನ ಜಿಹ್ವೆಯ ಚುಂಬಿಸಿ ಎನ್ನ ಬಾಯಿ ದಣಿಯದು. ಆತನ ಸರ್ವಾಂಗವನಪ್ಪಿ ಎನ್ನ ತನು ದಣಿಯದು. ಆ ಅಖಂಡೇಶ್ವರ ಕೂಡಿ ಒಳಪೊಕ್ಕು ಪರಿಣಾಮ ಸೂರೆಗೊಂಡು ಎನ್ನ ಮನ ದಣಿಯದು ನೋಡಿರವ್ವಾ.
ಆತ್ಮವೆ ಅಂಗವಾದ ಐಕ್ಯಂಗೆ ಸದ್ಭಾವನೆ ಹಸ್ತ. ಆ ಹಸ್ತಕ್ಕೆ ಚಿಚ್ಛಕ್ತಿ , ಆ ಶಕ್ತಿಗೆ ಮಹಾಲಿಂಗ, ಆ ಲಿಂಗಕ್ಕೆ ಹೃದಯೇಂದ್ರಿಯವೆ ಮುಖ, ಆ ಮುಖಕ್ಕೆ ಸುತೃಪ್ತಿ ಪದಾರ್ಥ; ಆ ಪದಾರ್ಥವನು ಹೃದಯದಲ್ಲಿಹ ಮಹಾಲಿಂಗಕ್ಕೆ ಸಮರಸಭಕ್ತಿಯಿಂದರ್ಪಿಸಿ, ಆ ಪದಾರ್ಥವನು ಹೃದಯಲ್ಲಿಹ ಮಹಾಲಿಂಗಕ್ಕೆ ಸಮರಸ ಭಕ್ತಿಯಿಂದರ್ಪಿಸಿ ಆ ಸುತೃಪ್ತಿಪ್ರಸಾದವನು ಪಡೆದು ಸುಖಿಸುವಾತನೆ ಐಕ್ಯನು ನೋಡಾ ಅಖಂಡೇಶ್ವರಾ.
ಆದಿಯಲ್ಲಿ ಶ್ರೀ ವಿಭೂತಿಯ ಸ್ನಾನವ ಮಾಡಿದ ಬ್ರಹ್ಮಂಗೆ ಬ್ರಹ್ಮಪದವಾಯಿತ್ತು. ಆದಿಯಲ್ಲಿ ಶ್ರೀ ವಿಭೂತಿಯ ಸ್ನಾನವ ಮಾಡಿದ ವಿಷ್ಣುವಿಂಗೆ ವಿಷ್ಣುಪದವಾಯಿತ್ತು. ಆದಿಯಲ್ಲಿ ಶ್ರೀ ವಿಭೂತಿಯ ಸ್ನಾನವ ಮಾಡಿದ ದೇವತೆಗಳಿಗೆ ದೇವಪದವಾಯಿತ್ತು. ಆದಿಯಲ್ಲಿ ಶ್ರೀ ವಿಭೂತಿ ಸ್ನಾನವ ಮಾಡಿದ ಋಷಿಗಳಿಗೆ ಋಷಿಪದವಾಯಿತ್ತು. ಆದಿಯಲ್ಲಿ ಶ್ರೀ ವಿಭೂತಿಯ ಸ್ನಾನವ ಮಾಡಿದ ಗಂಧರ್ವರುಗಳಿಗೆ ಗಂಧರ್ವಪದವಾಯಿತ್ತು. ಆದಿಯಲ್ಲಿ ಶ್ರೀ ವಿಭೂತಿಯ ಸ್ನಾನವ ಮಾಡಿದ ರುದ್ರಗಣರಿಗೆ ರುದ್ರಗಣಪದವಾಯಿತ್ತು. ಆದಿಯಲ್ಲಿ ಶ್ರೀ ವಿಭೂತಿಯ ಸ್ನಾನವ ಮಾಡಿದ ಯಕ್ಷರಿಗೆ ಯಕ್ಷಪದವಾಯಿತ್ತು. ಆದಿಯಲ್ಲಿ ಶ್ರೀ ವಿಭೂತಿಯ ಸ್ನಾನವ ಮಾಡಿದ ಕಿನ್ನರರಿಗೆ ಕಿನ್ನರಪದವಾಯಿತ್ತು. ಆದಿಯಲ್ಲಿ ಶ್ರೀ ವಿಭೂತಿಯ ಸ್ನಾನವ ಮಾಡಿದ ಅಮರಗಣರಿಗೆ ಅಮರಗಣಪದವಾಯಿತ್ತು. ಆದಿಯಲ್ಲಿ ಶ್ರೀ ವಿಭೂತಿಯ ಸ್ನಾನವ ಮಾಡಿದ ಪಿತೃಗಣರಿಗೆ ಪಿತೃಗಣಪದವಾಯಿತ್ತು. ಆದಿಯಲ್ಲಿ ಶ್ರೀ ವಿಭೂತಿಯ ಸ್ನಾನವ ಮಾಡಿದ ಭೂತಗಣರಿಗೆ ಭೂತಗಣಪದವಾಯಿತ್ತು. ಅದೆಂತೆಂದೊಡೆ : ``ಬ್ರಹ್ಮವಿಷ್ಣ್ವಾದಿದೇವಾ ಋಷಯೋ ಗಂಧರ್ವಾ ಯಕ್ಷಕಿನ್ನರಾಃ | ಮರುದ್ಗಣಾಃ ಪಿತೃಗಣಾಃ ಸರ್ವೇ ಭೂತಗಣಾ ಅಪಿ | ನಿತ್ಯಂ ಚ ಸರ್ವಯತ್ನೇನ ಭಸ್ಮಸ್ನಾನಂ ಪ್ರವರ್ತತೇ ||'' ಎಂದುದಾಗಿ, ಇಂತಪ್ಪ ಶ್ರೀ ವಿಭೂತಿಯ ಮಹತ್ವವ ಕಂಡು ಕೇಳಿ ನಂಬಲರಿಯದೆ ಗರ್ವದಿಂದೆ ಮುಂದುಗೆಟ್ಟ ಮರುಳಮಾನವರಿಗೆ ಭವರಾಟಾಳದಲ್ಲಿ ಸತ್ತು ಸತ್ತು ಹುಟ್ಟಿ ಹುಟ್ಟಿ ಬಪ್ಪುದು ತಪ್ಪದು ನೋಡಾ ಅಖಂಡೇಶ್ವರಾ.
ಆಕಾಶದಲ್ಲಿ ತೋರಿದ ಇಂದ್ರಧನು ಅಡಗುವುದಕ್ಕೆ ಆಕಾಶವೆ ಆಶ್ರಯವಲ್ಲದೆ ಬೇರೆ ಆಶ್ರಯವುಂಟೆ ಅಯ್ಯಾ ? ಗಾಳಿಯಲ್ಲಿ ತೋರಿದ ಸುಳಿಗಾಳಿ ಅಡಗುವುದಕ್ಕೆ ಆ ಗಾಳಿಯೆ ಆಶ್ರಯವಲ್ಲದೆ ಬೇರೆ ಆಶ್ರಯವುಂಟೆ ಅಯ್ಯಾ ? ಅಗ್ನಿಯಿಂದ ತೋರಿದ ಕಿಡಿಗಳು ಅಡಗುವುದಕ್ಕೆ ಆ ಅಗ್ನಿಯೆ ಆಶ್ರಯವಲ್ಲದೆ ಬೇರೆ ಆಶ್ರಯವುಂಟೆ ಅಯ್ಯಾ ? ಸಮುದ್ರದಲ್ಲಿ ತೋರಿದ ನೊರೆತೆರೆ ತುಂತುರ್ವನಿ ಅಡಗುವುದಕ್ಕೆ ಆ ಸಮುದ್ರವೆ ಆಶ್ರಯವಲ್ಲದೆ ಬೇರೆ ಆಶ್ರಯವುಂಟೆ ಅಯ್ಯಾ ? ಆದಿ ಅನಾದಿಯಿಂದತ್ತತ್ತಲಾದ ಮಹಾಘನವಸ್ತುವಿನಲ್ಲಿ ರೂಪಿಸಿ ತೋರಿದ ನಿಜೈಕ್ಯನಡಗುವುದಕ್ಕೆ ಆ ಪರವಸ್ತುವೆ ಆಶ್ರಯವಲ್ಲದೆ, ಬೇರೆ ಆಶ್ರಯವುಂಟೆ ಅಯ್ಯಾ ಅಖಂಡೇಶ್ವರಾ.
ಆಕಾಶಮಂಡಲದೊಳಗೆ ಲೋಕೇಶನ ಪಟ್ಟಣವಿರ್ಪುದು ನೋಡಾ. ಆ ಪಟ್ಟಣಕ್ಕೆ ನಾಲ್ಕು ಬಾಗಿಲು, ಎಂಟು ಬೀದಿ, ಹದಿನಾರು ಚದುರಂಗದ ಚಾವಡಿ, ಮೂವತ್ತೆರಡು ಕೇರಿ. ಕೇರಿಗಳೊಳಗೆ ಪರಿಕಾರರ ಕಟ್ಟಳೆ ನೋಡಾ ! ಆಕಾಶಮಂಡಲವನಡರಿ, ಲೋಕೇಶನ ಕಂಡಾತಂಗಲ್ಲದೆ ಆ ಪಟ್ಟಣವು ಆರಿಗೂ ಸಾಧ್ಯವಿಲ್ಲ ನೋಡಾ ಅಖಂಡೇಶ್ವರಾ.