ಉಪಾಧಿಯನಳಿದು, ನಿರುಪಾಧಿಯ ತಿಳಿದು,
ಸಹಜಮಾಟದಲ್ಲಿ ಸುಳಿದು,
ಜಾತಿಸೂತಕ ಪ್ರೇತಸೂತಕ ಜನನಸೂತಕ ಉಚ್ಚಿಷ್ಟಸೂತಕ
ರಜಸ್ಸೂತಕವೆಂಬ ಪಂಚಸೂತಕಂಗಳ ಕಳೆದು,
ಸದಾಚಾರ ಲಿಂಗಾಚಾರ ಶಿವಾಚಾರ ಗಣಾಚಾರ
ಭೃತ್ಯಾಚಾರವೆಂಬ ಪಂಚಾಚಾರಂಗಳಳವಟ್ಟು
ಪಂಚಭೂತಂಗಳ ಪರಿಹರಿಸಿ,
ಪಂಚಪ್ರಾಣವಾಯುಗಳ ಸಂಚಲಗುಣವಳಿದು
ಪಂಚೇಂದ್ರಿಯಂಗಳಲ್ಲಿ ಪಂಚಲಿಂಗಂಗಳ ಪ್ರತಿಷಿ*ಸಿ,
ಪಂಚಬ್ರಹ್ಮದ ಮೂಲವನರಿದು,
ಮೂಲೋಕದೊಡೆಯನಲ್ಲಿ ಮನವಡಗಿರ್ಪ
ಮಹಾಶರಣರ ಶ್ರೀಪಾದಕ್ಕೆ
ನಮೋ ನಮೋ ಎಂಬೆನಯ್ಯ ಅಖಂಡೇಶ್ವರಾ.